Author: kannadanewsnow09

ಬೆಳಗಾವಿ: ಜಿಲ್ಲೆಯಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಆರೋಗ್ಯ ಇಲಾಖೆಯ ನಿಯಂತ್ರಣದ ಕ್ರಮದ ನಡುವೆಯೂ ಡೆಂಗ್ಯೂವಿನಿಂದಾಗಿ ಇಂದು 14 ವರ್ಷದ ಬಾಲಕಿಯೊಬ್ಬಳು ಬಲಿಯಾಗಿರುವುದಾಗಿ ತಿಳಿದು ಬಂದಿದೆ. ಧಾರವಾಡ ಕುಂದಗೋಳದಲ್ಲಿ ಡೆಂಗ್ಯೂವಿನಿಂದ ಬಳಲುತ್ತಿದ್ದಂತ 5 ವರ್ಷದ ಬಾಲಕಿನ್ನು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಳು. ಈ ಬೆನ್ನಲ್ಲೇ ತೀವ್ರ ಜ್ವರದಿಂದ ಬಳಲುತ್ತಿದ್ದಂತ 14 ವರ್ಷದ ಬಾಲಕಿ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಈ ಮೂಲಕ ಮಹಾಮಾರಿ ಡೆಂಗ್ಯೂಗೆ ರಾಜ್ಯದಲ್ಲಿ ಮತ್ತೊಂದು ಬಲಿಯಾದಂತೆ ಆಗಿದೆ. ಮೃತ 14 ವರ್ಷದ ಬಾಲಕಿಯನ್ನು ಪ್ರಣಾಲಿ ಎಂಬುದಾಗಿ ತಿಳಿದು ಬಂದಿದೆ. ಈ ಬಾಲಕಿ ಬೆಳಗಾವಿ ತಾಲ್ಲೂಕಿನ ಹೊನಗಾ ಗ್ರಾಮದವಳಾಗಿದ್ದಾಳೆ. ಬಾಲಕಿಗೆ ಮೊದಲು ವಾಂತಿ-ಬೇಧಿ ಕಾಣಿಸಿಕೊಂಡಿತ್ತು. ಆ ಬಳಿಕ ಜ್ವರ ಬಂದಿತ್ತು. ಕೂಡಲೇ ಆಕೆಯನ್ನು ಚಿಕಿತ್ಸೆಗಾಗಿ ಬೆಳಗಾವಿಯ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಬೆಳಗಾವಿಯ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ 14 ವರ್ಷದ ಬಾಲಕಿ ಪ್ರಣಾಲಿ ಇಂದು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಆಕೆ ಡೆಂಗ್ಯೂವಿನಿಂದ ಸಾವನ್ನಪ್ಪಿರೋ ಶಂಕೆ ವ್ಯಕ್ತವಾಗಿದ್ದು, ಆರೋಗ್ಯ ಇಲಾಖೆಯಿಂದ ಖಚಿತ ಮಾಹಿತಿ ತಿಳಿದು…

Read More

ಶಿವಮೊಗ್ಗ: ಇವತ್ತಿನ ಪತ್ರಕರ್ತರೆಲ್ಲರೂ ಬಹುತೇಕ ರೈತ-ಕಾರ್ಮಿಕ-ಶ್ರಮಿಕ ಕುಟುಂಬದಿಂದ ಬಂದವರು. ಆದರೆ ಇವರೆಲ್ಲಾ ತಮ್ಮ ಶ್ರಮಿಕ‌ ಸಮುದಾಯಗಳನ್ನು ಮರೆತು ಕಾರ್ಪೊರೇಟ್ ಕಷ್ಟಗಳಿಗೆ ಮಿಡಿಯುವಂತಾಗಿರುವುದು ಬೇಸರದ ಸಂಗತಿ. ಶೀಘ್ರವೇ ಪತ್ರಕರ್ತರಿಗೂ ಆರೋಗ್ಯ ವಿಮೆ ಜಾರಿಗೊಳಿಸುವುದಾಗಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರ ಕೆ.ವಿ.ಪ್ರಭಾಕರ್ ಭರವಸೆ ನೀಡಿದರು. ವಾರ್ತಾ ಇಲಾಖೆ, ಕಾರ್ಯನಿರತ ಪತ್ರಕರ್ತರ ಸಂಘ ಮತ್ತು ಶಿವಮೊಗ್ಗ ಪ್ರೆಸ್ ಟ್ರಸ್ಟ್ ಜಂಟಿಯಾಗಿ ಆಯೋಜಿಸಿದ್ದ ಪತ್ರಿಕಾ ದಿನಾಚರಣೆಯನ್ನು ಉದ್ಘಾಟಿಸಿ‌ ಮಾತನಾಡಿದರು. ಇವತ್ತಿನ ಪತ್ರಕರ್ತರಿಗೆ, ಮಾಧ್ಯಮಗಳಿಗೆ ಕಾರ್ಪೋರೇಟ್ ಜಗತ್ತಿನ ಸಮಸ್ಯೆಗಳೇ ದೊಡ್ಡದಾಗಿ ಕಾಣುತ್ತಿವೆ. ನಾವೆಲ್ಲಾ ರೈತರ, ಕಾರ್ಮಿಕರ ಮತ್ತು ಶ್ರಮಿಕರ ಮಕ್ಕಳು. ನಮ್ಮ ಸಮುದಾಯಗಳು ಏನೆಲ್ಲಾ ಸಂಕಷ್ಟಗಳನ್ನು ಎದುರಿಸುತ್ತಿವೆ ಎನ್ನುವುದು ನಮಗೆ ಮುಖ್ಯವಾಗುತ್ತಿಲ್ಲ. ನಮ್ಮ ಬೇರುಗಳನ್ನು, ನಮ್ಮ ಹಿನ್ನೆಲೆಯನ್ನು ಮರೆತಿರುವುದೇ ಇದಕ್ಕೆ ಕಾರಣ ಎಂದರು. ಶಿವಮೊಗ್ಗ ಚಳವಳಿಗಳ ತವರೂರು. ಸಮಾಜವಾದಿ, ಗೇಣಿ ಹೋರಾಟ, ರೈತ-ದಲಿತ ಹೋರಾಟಗಳ ಜೊತೆಗೆ ಪತ್ರಿಕಾ ಚಳವಳಿಗೂ ಹೆಸರಾದ ಜಿಲ್ಲೆ ಎನ್ನುತ್ತಾ ಪತ್ರಿಕೋದ್ಯಮಕ್ಕೆ ಲಂಕೇಶ್ ಅವರ ಕೊಡುಗೆಗಳನ್ನು ಉಲ್ಲೇಖಿಸಿದರು. ಸರ್ಕಾರ ಪತ್ರಕರ್ತ ಸಮುದಾಯದ ಸಮಸ್ಯೆಗಳಿಗೆ ಗರಿಷ್ಠ ಮಟ್ಟದಲ್ಲಿ ಸ್ಪಂದಿಸುತ್ತಿದೆ…

Read More

ನವದೆಹಲಿ: ಒಲಿಂಪಿಕ್ಸ್ ನಲ್ಲಿ ಪೋಡಿಯಂನಲ್ಲಿ ಅಗ್ರಸ್ಥಾನದಲ್ಲಿ ನಿಂತು ಚಿನ್ನದ ಪದಕ ಗೆಲ್ಲಲು ಸಾಕಷ್ಟು ಸಮಯ ಬೇಕಾಗುತ್ತದೆ. ವಿಶ್ವದಾದ್ಯಂತದ ಅತ್ಯುತ್ತಮ ಕ್ರೀಡಾಪಟುಗಳು ತಮ್ಮ ರಾಷ್ಟ್ರಕ್ಕೆ ಕೀರ್ತಿ ತರುವ ಏಕೈಕ ಉದ್ದೇಶದಿಂದ ಕ್ರೀಡಾ ವೈಭವದಲ್ಲಿ ಸ್ಪರ್ಧಿಸುತ್ತಾರೆ. ಹಾಗಾದ್ರೆ ಒಲಿಂಪಿಕ್ ಚಿನ್ನದ ಪದಕವನ್ನು ತಯಾರಿಸಲು ಎಷ್ಟು ಚಿನ್ನವನ್ನು ಬಳಸುತ್ತಾರೆ? ಅದರ ಮೌಲ್ಯವೇನು ಅನ್ನುವ ಬಗ್ಗೆ ಮುಂದೆ ಓದಿ. ಒಲಿಂಪಿಕ್ಸ್ ನಲ್ಲಿ ಚಿನ್ನದ ಪದಕವನ್ನು ಗೆಲ್ಲುವುದು ಕ್ರೀಡೆಯ ಉತ್ತುಂಗವೆಂದು ಪರಿಗಣಿಸಲಾಗುತ್ತದೆ ಮತ್ತು ಉನ್ನತ ಸ್ಥಾನವನ್ನು ತಲುಪಲು ವರ್ಷಗಳ ಕಠಿಣ ಪರಿಶ್ರಮ, ಸಮರ್ಪಣೆ, ರಕ್ತ, ಬೆವರು ಮತ್ತು ತರಬೇತಿ ಬೇಕಾಗುತ್ತದೆ. ಒಲಿಂಪಿಕ್ ಚಿನ್ನದ ಪದಕವನ್ನು ಗೆಲ್ಲುವ ಕ್ರೀಡಾಪಟುವಿಗೆ ಅಮೂಲ್ಯವಾಗಿ ಉಳಿದರೂ, ಪದಕವನ್ನು ತಯಾರಿಸಲು ಖಂಡಿತವಾಗಿಯೂ ವೆಚ್ಚವಾಗುತ್ತದೆ. ಪದಕದ ಮೌಲ್ಯವನ್ನು ಅದನ್ನು ತಯಾರಿಸಲು ಬಳಸುವ ಲೋಹಗಳಿಂದ ಅಥವಾ ಒಂದನ್ನು ಗೆಲ್ಲಲು ತೆಗೆದುಕೊಳ್ಳುವ ವರ್ಷಗಳ ತ್ಯಾಗವನ್ನು ಪರಿಗಣಿಸಿ ಅದಕ್ಕೆ ತಗಲುವ ವೆಚ್ಚದಿಂದ ನಿರ್ಧರಿಸಲಾಗುವುದಿಲ್ಲ. ಆದರೆ ಒಲಿಂಪಿಕ್ ಚಿನ್ನದ ಪದಕದಲ್ಲಿ ಎಷ್ಟು ಚಿನ್ನವಿದೆ ಎಂದು ಇನ್ನೂ ಆಶ್ಚರ್ಯವಾಗುತ್ತದೆ. ಇದು ಸಂಪೂರ್ಣವಾಗಿ ಚಿನ್ನದಿಂದ ಮಾಡಲ್ಪಟ್ಟಿದೆಯೇ…

Read More

ಮಂಡ್ಯ: ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮುತ್ತತ್ತಿ ಪ್ರವಾಸಿ ತಾಣ ಹಾಗೂ ಸುತ್ತಮುತ್ತಲಿನ ಅರಣ್ಯ ಪ್ರದೇಶ ವ್ಯಾಪ್ತಿಗೆ ಪ್ರವಾಹ ಕಡಿಮೆಯಾಗುವವರೆಗೂ ನಿಷೇಧಾಜ್ಞೆ ಜಾರಿಗೊಳಿಸಿ ತಾಲ್ಲೂಕು ಆಡಳಿತ ಆದೇಶಿಸಿದೆ. ಈ ಕುರಿತಂತೆ ಮಂಡ್ಯ ಜಿಲ್ಲೆಯ ಮಳವಳ್ಳಿಯ ತಾಲ್ಲೂಕು ದಂಡಾಧಿಕಾರಿ ಕೆಎನ್ ಲೋಕೇಶ್ ಆದೇಶ ಹೊರಡಿಸಿದ್ದಾರೆ. ಅದರಲ್ಲಿ ಮಂಡ್ಯ ಜಿಲ್ಲೆ,ಮಳವಳ್ಳಿ ತಾಲ್ಲೂಕು ಹಲಗೂರು ಹೋಬಳಿ ಯಲ್ಲಿರುವ ಮುತ್ತತ್ತಿ ಗ್ರಾಮವು ಪುಸಿದ್ಧ ಯಾತ್ರಾ ಹಾಗೂ ಪ್ರೇಕ್ಷಣೀಯ ಸ್ಥಳವಾಗಿದ್ದು, ಗ್ರಾಮದ ಪಕ್ಕದಲ್ಲಿ ಕಾವೇರಿ ನದಿ ಹರಿಯುತ್ತಿದ್ದು,ದೇವಸ್ಥಾನಕ್ಕೆ ಬರುವ ಪುವಾಸಿಗರು ನದಿಯೊಳಗೆ ಇಳಿದು ಈಜಾಡುವುದು, ಮೋಜು, ಮಸ್ತಿ ಮಾಡುವುದು ಮಾಡುತ್ತಿರುತ್ತಾರೆ ಎಂದಿದ್ದಾರೆ. ಇತ್ತೀಚಿನ ದಿನಗಳಲ್ಲಿ ನೈಸರ್ಗಿಕವಾಗಿ ಹೆಚ್ಚು ಮಳೆಯಾಗಿರುವುದರಿಂದ ನದಿಯಲ್ಲಿ ಕಾವೇರಿ ನೀರಿನ ಪ್ರವಾಹ ಹೆಚ್ಚಾಗಿರುತ್ತದೆ. ಅದಲ್ಲದ ಕಾವೇರಿ ಜಲಾಶಯದಿಂದ ಹೆಚ್ಚುವರಿಯಾಗಿ 115000 ಕ್ಯೂಸೆಕ್ಸ್ ನೀರನ್ನು ಬಿಡುಗಡೆ ಮಾಡಿದ್ದು, ಮುತ್ತತ್ತಿಯಲ್ಲಿ ಕಾವೇರಿ ನೀರಿನ ಪ್ರಮಾಣ ಹೆಚ್ಚಾಗಿದ್ದು ಈ ಸಮಯದಲ್ಲಿ ಸಾರ್ವಜನಿಕರು ನದಿಯೊಳಗೆ ಇಳಿಯುವುದರಿಂದ ನದಿ ನೀರಿನ ಪ್ರವಾಹಕ್ಕೆ ಸಿಲುಕಿ ಅಪಘಾತ ಉಂಟಾಗುವ ಸಾಧ್ಯತೆ ಇರುತ್ತದೆ ಎಂದು ಹೇಳಿದ್ದಾರೆ. ಆದ್ದರಿಂದ ಮುಂಜಾಗೃತ…

Read More

ಮಂಡ್ಯ: ಜಿಲ್ಲೆಯ ರೈತ ಜೀವನಾಡಿಯಾಗಿರುವಂತ ಕೃಷ್ಣರಾಜ ಸಾಗರ ಜಲಾಶಯ( KRS Dam) ಹಾಗೂ ಕಬಿನಿ ಜಲಾಶಯವು ಸಂಪೂರ್ಣ ಭರ್ತಿಯಾಗಿದೆ. ಈ ಹಿನ್ನಲೆಯಲ್ಲಿ ಜುಲೈ.29ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಡ್ಯಾಂಗೆ ತೆರಳಿ ಭಾಗೀನವನ್ನು ಅರ್ಪಿಸಲಿದ್ದಾರೆ. ರಾಜ್ಯದಲ್ಲಿ ಉತ್ತಮ ಮಳೆಯಾಗುತ್ತಿದ್ದು, ಜಲಮೂಲಗಳು ತುಂಬಿ ಹರಿಯುತ್ತಿವೆ. ಕೃಷ್ಣರಾಜಸಾಗರ ಮತ್ತು ಕಬಿನಿ ಜಲಾಶಯಗಳು ಭರ್ತಿಯಾಗಿರುವ ಸಮೃದ್ಧಿಯ ಸಂಕೇತದ ಶುಭ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್‌ ಅವರು ಕಾವೇರಿ ಮಾತೆಗೆ ಪೂಜೆ ಹಾಗೂ ಬಾಗಿನ ಅರ್ಪಿಸಲಿದ್ದಾರೆ. ಕೃಷ್ಣರಾಜಸಾಗರ ಜಲಾಶಯಕ್ಕೆ ಬಾಗಿನ ಸಮರ್ಪಣೆ ಕಾರ್ಯಕ್ರಮವು ಜುಲೈ 29, ಸೋಮವಾರದಂದು ಬೆಳಗ್ಗೆ 11 ಗಂಟೆಗೆ ಕೃಷ್ಣರಾಜಸಾಗರದ ಶ್ರೀ ಕಾವೇರಿ ಮಾತೆ ಪ್ರತಿಮೆಯ ಬಳಿ ನಡೆಯಲಿದೆ. ಕಬಿನಿ ಜಲಾಶಯಕ್ಕೆ ಬಾಗಿನ ಸಮರ್ಪಣೆ ಕಾರ್ಯಕ್ರಮವು ಜುಲೈ 29, ಸೋಮವಾರದಂದು ಮಧ್ಯಾಹ್ನ 3 ಗಂಟೆಗೆ ಬೀಚನಹಳ್ಳಿಯ ಕಬಿನಿ ಜಲಾಶಯದ ಬಳಿ ನಡೆಯಲಿದೆ. https://kannadanewsnow.com/kannada/karnataka-has-the-second-highest-number-of-start-ups-registered-in-the-country/ https://kannadanewsnow.com/kannada/fire-breaks-out-over-178000-acres-in-northern-california-destroys-134-buildings/

Read More

ನವದೆಹಲಿ: ಭಾರತದಲ್ಲಿ ಸ್ಟಾರ್ಟ್ಅಪ್ಗಳ ಸಂಖ್ಯೆ 1.4 ಲಕ್ಷಕ್ಕೂ ಹೆಚ್ಚಾಗಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ರಾಜ್ಯ ಸಚಿವ ಜಿತಿನ್ ಪ್ರಸಾದ ರಾಜ್ಯಸಭೆಯಲ್ಲಿ ಒತ್ತಿ ಹೇಳಿದರು. ಈ ಅಂಕಿ ಅಂಶಗಳ ಮಾಹಿತಿಯಂತೆ ದೇಶದಲ್ಲೇ ಅತಿ ಹೆಚ್ಚು ಸ್ಟಾರ್ಟ್ ಅಪ್ ನೋಂದಣಿಯಾಗಿರುವಂತ ರಾಜ್ಯಗಳಲ್ಲಿ ಕರ್ನಾಟಕ 2ನೇ ಸ್ಥಾನದಲ್ಲಿದೆ. ಶುಕ್ರವಾರ ಸದನದಲ್ಲಿ ಸಚಿವರು ನೀಡಿದ ಲಿಖಿತ ಉತ್ತರದ ಪ್ರಕಾರ, ಕೈಗಾರಿಕೆ ಮತ್ತು ಆಂತರಿಕ ವ್ಯಾಪಾರ ಉತ್ತೇಜನ ಇಲಾಖೆ ( Department for Promotion of Industry and Internal Trade -DPIIT) ಮಾನ್ಯತೆ ಪಡೆದ ಸ್ಟಾರ್ಟ್ಅಪ್ಗಳ ಸಂಖ್ಯೆ ರಾಜ್ಯ / ಕೇಂದ್ರಾಡಳಿತ ಪ್ರದೇಶವಾರು ಮಹಾರಾಷ್ಟ್ರವು 25,044 ನೋಂದಾಯಿತ ಸ್ಟಾರ್ಟ್ಅಪ್ಗಳೊಂದಿಗೆ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿದೆ ಎಂದು ತೋರಿಸಿದೆ. 15,019 ನೋಂದಾಯಿತ ಸ್ಟಾರ್ಟ್ಅಪ್ಗಳೊಂದಿಗೆ ಕರ್ನಾಟಕ ಎರಡನೇ ಸ್ಥಾನದಲ್ಲಿದ್ದರೆ, ದೆಹಲಿ 14,734 ಸ್ಟಾರ್ಟ್ಅಪ್ಗಳೊಂದಿಗೆ ಮೂರನೇ ಸ್ಥಾನದಲ್ಲಿದೆ. ಉತ್ತರ ಪ್ರದೇಶ 13,299 ಸ್ಟಾರ್ಟ್ ಅಪ್ ಗಳೊಂದಿಗೆ ನಾಲ್ಕನೇ ಸ್ಥಾನದಲ್ಲಿದ್ದರೆ, ಗುಜರಾತ್ 11,436 ಸ್ಟಾರ್ಟ್ ಅಪ್ ಗಳೊಂದಿಗೆ ಐದನೇ ಸ್ಥಾನದಲ್ಲಿದೆ. ದೇಶದಲ್ಲಿ ಸ್ಟಾರ್ಟ್ಅಪ್ಗಳನ್ನು…

Read More

ಬೆಂಗಳೂರು: ನಗರದಲ್ಲಿ ಭಾರೀ ಮಳೆ ಗಾಳಿಯಿಂದಾಗಿ ಬೃಹತ್ ಮರವೊಂದು ಆಟೋ ಮೇಲೆ ಉರುಳಿ ಬಿದ್ದಿದೆ. ಈ ಪರಿಣಾಮ ಆಟೋ ಜಖಂ ಆಗಿದ್ದರೇ, ಚಾಲಕ ಸೇರಿ ಇಬ್ಬರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಬೆಂಗಳೂರಿನ ರಿಚ್ಮಂಡ್ ಸರ್ಕಲ್ ಬಳಿಯಲ್ಲಿ ಆಟೋ ಮೇಲೆ ಬೃಹತ್ ಮರವೊಂದು ಉರುಳಿ ಬಿದ್ದಿದೆ. ಇದರಿಂದಾಗಿ ಆಟೋ ಚಾಲಕ ದಿವಾಕರ್ ಎಂಬುವರ ಕಾಲು ಮುರಿದಿದೆ. ಅಲ್ಲದೇ ಮತ್ತೋರ್ವ ಪ್ರಯಾಣಿಕನಿಗೆ ಗಾಯವಾಗಿದೆ. ಬಿಬಿಎಂಪಿಯ ನಿರ್ಲಕ್ಷ್ಯವೇ ಆಟೋ ಮರದ ಮೇಲೆ ಉರುಳಿ ಬೀಳುವುದಕ್ಕೆ ಕಾರಣ ಎನ್ನಲಾಗುತ್ತಿದೆ. ಮರ ಒಣಗಿದ್ದ ಸ್ಥಿತಿಯಲ್ಲಿ ಇದ್ದರೂ ತೆರವುಗೊಳಿಸದೇ ಇರುವುದೇ ಆಟೋ ಮೇಲೆ ಮುರಿದು ಬೀಳರು ಕಾರಣ ಎನ್ನಲಾಗುತ್ತಿದೆ. ಈ ದುರ್ಘಟನೆಯಲ್ಲಿ ಗಾಯಗೊಂಡಿರುವಂತ ಆಟೋ ಚಾಲಕ ದಿವಾಕರ್ ಗೆ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಅವರ ತಂದೆ ಕ್ಯಾನ್ಸರ್ ಪೀಡಿತರಾಗಿದ್ದರು, ಇವರೇ ಮನೆಯ ಹೊಣೆಗಾರಿಕೆಯನ್ನು ಆಟೋ ಚಲಾನೆ ಮಾಡಿ ನಡೆಸುತ್ತಿದ್ದರು ಎಂದು ತಿಳಿದು ಬಂದಿದೆ. https://kannadanewsnow.com/kannada/kumaraswamys-daily-thought-is-to-destroy-us-dk-shivakumar-shivakumars-spark/ https://kannadanewsnow.com/kannada/fire-breaks-out-over-178000-acres-in-northern-california-destroys-134-buildings/

Read More

ಬೆಂಗಳೂರು: “ನಮ್ಮನ್ನು ಸರ್ವನಾಶ ಮಾಡುವುದು ಕುಮಾರಸ್ವಾಮಿ ಅವರ ನಿತ್ಯದ ಆಲೋಚನೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು ನೀಡಿದರು. ವಿಧಾನಸೌಧದ ಆವರಣದಲ್ಲಿ ಮಾಧ್ಯಮಗಳು, ರಾಮನಗರ ಹೆಸರು ಬದಲಾವಣೆ ಮಾಡಲು ಹೊರಟಿರುವವರು ಸರ್ವನಾಶವಾಗುತ್ತಾರೆ ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಗಮನ ಸೆಳೆದಾಗ ಪ್ರತಿಕ್ರಿಯೆ ನೀಡಿದ ಶಿವಕುಮಾರ್ ಅವರು, “ಕುಮಾರಸ್ವಾಮಿ ಅವರು ನಮ್ಮನ್ನು ಸರ್ವನಾಶ ಮಾಡಲು ಪ್ರತಿನಿತ್ಯ ರಾಜಕಾರಣ ಮಾಡುತ್ತಿದ್ದಾರೆ. ಅವರ ನಡೆ, ಹೆಜ್ಜೆ, ಭಾವನೆ, ಚಿಂತನೆ, ಅವರ ಆಚಾರ, ವಿಚಾರ ಎಲ್ಲವೂ ನಮಗೆ ಗೊತ್ತಿದೆ. ನಾವು ರಾಮನಗರದ ಹೆಸರನ್ನು ಬದಲಿಸುತ್ತಿಲ್ಲ. ಇದು ನಮ್ಮ ಜಿಲ್ಲೆ. ಇವರು ಬಂದು ಅಕ್ರಮವಾಗಿ ಜಿಲ್ಲೆಯ ಗುರುತನ್ನು ಬದಲಿಸಿದ್ದಾರೆ. ರಾಜಕೀಯವಾಗಿ ಇದಕ್ಕೆ ಅವಕಾಶವಿದೆ ಮಾಡಿದ್ದಾರೆ. ರಾಮನಗರ, ಚನ್ನಪಟ್ಟಣ, ಕನಕಪುರ, ಮಾಗಡಿ ತಾಲೂಕಿನ ಜನ ನಮ್ಮವರು, ಬೆಂಗಳೂರಿನವರು” ಎಂದು ವಾಗ್ದಾಳಿ ನಡೆಸಿದರು. “ನಾನು ಬೆಂಗಳೂರು ಜಿಲ್ಲಾ ಪಂಚಾಯ್ತಿ ಸದಸ್ಯನಾಗಿದ್ದೆ. ಕುಮಾರಸ್ವಾಮಿ ಹಾಗೂ ದೇವೇಗೌಡರು ಹಾಸನದಿಂದ ಬಂದಿದ್ದಾರೆ. ದೇವೇಗೌಡರು, ಕುಮಾರಸ್ವಾಮಿ ಅವರು ಇಲ್ಲಿಗೆ ಬಂದಾಗ ಇದು ಬೆಂಗಳೂರಾಗಿಯೇ ಇತ್ತು. ಅವರು ಪ್ರಧಾನಮಂತ್ರಿ,…

Read More

ಬೆಂಗಳೂರು: “ರಾಜಕೀಯವನ್ನು ಬೂತ್ ಮಟ್ಟದಲ್ಲಿ ಮಾಡೋಣ, ಈಗ ಎಲ್ಲಾ ಪಕ್ಷದ ನಾಯಕರು ಸೇರಿ ಬೆಂಗಳೂರನ್ನು ಕಟ್ಟೋಣ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಕರೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ “ನಾಗರೀಕರ ಧ್ವನಿ- ಅದೇ ಸರ್ಕಾರದ ಧ್ವನಿ” ಎಂಬ ಪರಿಕಲ್ಪನೆಯಡಿ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ನೇತೃತ್ವದಲ್ಲಿ ಬೆಂಗಳೂರಿನ ವಿವಿಧ ಯೋಜನೆಗಳ ಬಗ್ಗೆ ಬೆಂಗಳೂರಿನ ಸರ್ವ ಪಕ್ಷ ಶಾಸಕರುಗಳು ಹಾಗೂ ಜನಪ್ರತಿನಿಧಿಗಳ ಸಭೆಯನ್ನು ಶನಿವಾರ ನಡೆಸಲಾಯಿತು. ಈ ಸಭೆಯನ್ನು ಉದ್ದೇಶಿಸಿ ಪ್ರಾಸ್ತಾವಿಕವಾಗಿ ಮಾತನಾಡಿದ ಶಿವಕುಮಾರ್ ಅವರು, “ಗ್ರೇಟರ್ ಬೆಂಗಳೂರು ವಿಚಾರವಾಗಿ ಅಶ್ವಥ್ ನಾರಾಯಣ ಅವರು ಗಾಬರಿಯಾಗುವುದು ಬೇಡ, ವಿಧೇಯಕದ ಸಂಪೂರ್ಣ ಮಾಹಿತಿ ನಿಮ್ಮ ಕೈಯಲ್ಲಿದೆ. ಪ್ರತಿ ಪದವನ್ನೂ ಪರಿಶೀಲಿಸಿ. ಬೆಂಗಳೂರಿನ ಭವಿಷ್ಯದ ಹಿತ ಕಾಯಲು ಅಗತ್ಯವಾದ ಎಲ್ಲಾ ಕ್ರಮಗಳನ್ನು ಗ್ರೇಟರ್ ಬೆಂಗಳೂರಿನಲ್ಲಿ ಕೈಗೊಂಡಿದ್ದೇವೆ. ನೀವು ಚರ್ಚೆ ಮಾಡಿ, ನಿಮ್ಮ ಸಲಹೆ ಸೂಚನೆ ಪರಿಗಣಿಸುತ್ತೇವೆ. ನಿಮ್ಮೆಲ್ಲರ ಒತ್ತಾಯದಂತೆ ಗ್ರೇಟರ್ ಬೆಂಗಳೂರು ವಿಚಾರವಾಗಿ ಸದನ ಸಮಿತಿ ರಚಿಸಲು ತೀರ್ಮಾನಿಸಿದ್ದೇವೆ” ಎಂದರು.…

Read More

ಬೆಂಗಳೂರು: ಸಿಲಿಕಾನ್ ಸಿಟಿಗೆ ರೈಲಿನ ಮೂಲಕ ನಾಯಿಯ ಮಾಂಸ ಸರಬರಾಜು ಮಾಡಲಾಗುತ್ತಿದೆ. ಇದನ್ನೇ ಬಿರಿಯಾನಿ ಮಾಡಿ ಗ್ರಾಹಕರಿಗೆ ತಿನ್ನಿಸಲಾಗುತ್ತಿದೆ ಅನ್ನೋ ಆರೋಪ ಕೇಳಿ ಬಂದಿತ್ತು. ಈ ಬಗ್ಗೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಸ್ಪಷ್ಟನೆ ನೀಡಲಾಗಿದೆ. ಆ ಬಗ್ಗೆ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವ ಆರೋಗ್ಯ ಇಲಾಖೆಯು, ದಿನಾಂಕ:26.07.2024 ರಂದು ಸಂಜೆಯ ವೇಳೆಗೆ ಮಾಧ್ಯಮಗಳಲ್ಲಿ ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಸುದ್ದಿಗಳು ಭಿತ್ತರವಾಗಿರುತ್ತದೆ ಎಂದಿದೆ. ಈ ಕುರಿತಂತೆ, ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆ ವತಿಯಿಂದ ಈ ಕೆಳಕಂಡಂತೆ ಕ್ರಮಗಳನ್ನು ವಹಿಸಲಾಗಿರುತ್ತದೆ ಎಂಬುದಾಗಿ ಹೇಳಿದೆ. ಬೆಂಗಳೂರು ನಗರಕ್ಕೆ ರೈಲುಗಳ ಮುಖಾಂತರ ಕುರಿ ಮತ್ತು ಇತರೆ ಪ್ರಾಣಿಗಳ ಮಾಂಸವು ಸರಬರಾಜು ಆಗುತ್ತಿರುವ ಕುರಿತಂತೆ ಪರಿಶೀಲಿಸಲು ಪೋಲಿಸ್ ಇಲಾಖೆ ಹಾಗೂ ಆಹಾರ ಸುರಕ್ಷತ ಮತ್ತು ಗುಣಮಟ್ಟ ಇಲಾಖೆಯ ಅಧಿಕಾರಿಗಳು ತಪಾಸಣೆ ಮಾಡಿರುತ್ತಾರೆ ಅಂತ ಹೇಳಿದೆ.…

Read More