Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಕೋಲಾರ ತಾಲ್ಲೂಕಿನ ಅಬ್ಬಣಿ ಗ್ರಾಮದ ಅ.ನಾ.ಪ್ರಹ್ಲಾದರಾವ್ ಭಾರತದಲ್ಲೇ ಅತಿ ಹೆಚ್ಚು ಪದಬಂಧ ರಚಿಸಿದ ದಾಖಲೆಗೆ ಒಳಗಾಗಿದ್ದು, 2024ನೇ ಸಾಲಿನ ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿಗೆ ಭಾಜನರಾದರು. ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಗೃಹ ಸಚಿವ ಡಾ. ಜಿ.ಪರಮೇಶ್ವರ್, ಕನ್ನಡ ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ, ವಿಧಾನಪರಿಷತ್ತಿನ ಸಭಾಪತಿ ಬಸವರಾಜ ಹೊರಟ್ಟಿ ಶುಕ್ರವಾರ ವಿಧಾನಸೌಧದ ಮುಂಭಾಗದಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು. 1975ರಲ್ಲಿ ಕೋಲಾರದ ಮೊದಲನ ದೈನಿಕ ಕೋಲಾರಪತ್ರಿಕೆ ಆರಂಭಗೊಂಡಾಗ ಪತ್ರಿಕೆಯ ವರದಿಗಾರನಾಗಿ ಪತ್ರಿಕಾರಂಗ ಪ್ರವೇಶಿಸಿದ ಇವರು 1979ರಲ್ಲಿ ಕೋಲಾರದಲ್ಲಿ ಕೆಲವು ಮಿತ್ರರ ಜೊತೆಯಾಗಿ ‘ಹೊನ್ನುಡಿ’ ದಿನಪತ್ರಿಕೆ ಆರಂಭಿಸಿ ಸ್ಥಾಪಕ ಸಂಪಾದಕರಾದರು. ಇದರ ಜೊತೆ ಹಿಂದೂಸ್ಥಾನ್ ಸಮಾಚಾರ್ ವಾರ್ತಾ ಸಂಸ್ಥೆಯ ಜಿಲ್ಲಾ ಬಾತ್ಮೀದಾರರಾಗಿ ಕಾರ್ಯ ನಿರ್ವಹಿಸಿದರು. 1983ರಲ್ಲಿ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಸೇರಿ 30 ವರ್ಷಗಳ ಕಾಲ ವಿವಿಧ ಹುದ್ದೆಗಳನ್ನು ನಿರ್ವಹಿಸಿದರು. ಪ್ರಮುಖವಾಗಿ ಮಂಡ್ಯ ಹಾಗೂ ರಾಮನಗರ ಜಿಲ್ಲಾ ವಾರ್ತಾಧಿಕಾರಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ, ಬೆಂಗಳೂರು ಜಲಮಂಡಳಿ ಹಾಗೂ…
ಬೆಂಗಳೂರು: ಶಕ್ತಿ ದೇವತೆ ಹಾಸನಾಂಬೆ ಜಾತ್ರೆ ಈ ಬಾರಿ ಅಭೂತಪೂರ್ವ ದಾಖಲೆಯನ್ನು ಬರೆದಿದೆ. 9 ದಿನಗಳ ಉತ್ಸವದಲ್ಲಿ 19 ಲಕ್ಷ ಭಕ್ತಾದಿಗಳು ದರ್ಶನ ಪಡೆದಿದ್ದಾರೆ. 9 ಕೋಟಿ ರೂಪಾಯಿ ಲಾಡ್ ಮತ್ತು ಟಿಕೆಟ್ ನಿಂದ ಸಂಗ್ರಹವಾಗಿದೆ. ಇಷ್ಟೊಂದು ಪ್ರಮಾಣದಲ್ಲಿ ಭಕ್ತರು ಹರಿದುಬಂದಿರುವುದು ಶಕ್ತಿ ಯೋಜನೆಯ ಪರಿಣಾಮ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಪತ್ರಿಕಾ ಹೇಳಿಕೆ ನೀಡಿರುವ ಅವರು, 24 ಗಂಟೆ ದೇವಿಯ ದರ್ಶನದ ವ್ಯವಸ್ಥೆ ಅದ್ಬುತವಾಗಿತ್ತು. ಬೀದರ್ ನಿಂದ ಚಾಮರಾಜನಗರದವರೆಗೆ ಬಳ್ಳಾರಿಯಿಂದ ಕೋಲಾರದವರೆಗೆ ಮಾತ್ರವಲ್ಲ ವಿವಿಧ ರಾಜ್ಯಗಳ ಭಕ್ತರು, ಬೇರೆ ದೇಶಗಳ ಭಕ್ತರೂ ಆನ್ ಲೈನ್ ನಲ್ಲಿ ಟಿಕೆಟ್ ಬುಕ್ ಮಾಡಿಕೊಂಡು ಬಂದಿದ್ದರು. ಉಚಿತ ಬಸ್ ಪ್ರಯಾಣ ಇರುವುದರಿಂದ ಇಷ್ಟು ಭಕ್ತರು ಬರಲು ಸಾಧ್ಯವಾಗಿದೆ. ಇದನ್ನು ನೋಡಿ ಸರ್ಕಾರಕ್ಕೆ ಹೆಮ್ಮೆಯಾಗುತ್ತಿದೆ. ಸಾರ್ಥಕ ಭಾವ ಮೂಡುತ್ತಿದೆ ಎಂದು ಹೇಳಿದರು. ಶಕ್ತಿ ಯೋಜನೆ ಮಹಿಳೆಯರ ಶಕ್ತಿ ವೃದ್ಧಿ ಮಾಡಿರುವುದರ ಜತೆಗೆ ನಮ್ಮ ಧಾರ್ಮಿಕ ಶಕ್ತಿಯನ್ನೂ ಹೆಚ್ಚಿಸಿದೆ ಎಂಬುದು ಸಾಕ್ಷಿ. ಮಾತ್ರವಲ್ಲ ಹಾಸನಾಂಬೆ ದರ್ಶನಕ್ಕೆ ಜಿಲ್ಲಾಡಳಿತ ಅಷ್ಟು ಸಮರ್ಪಕ…
ಬೆಳಗಾವಿ : ಕುಕಡೊಳ್ಳಿ ಗ್ರಾಮದ ಮಹಿಳೆಯೊಬ್ಬರು ಗೃಹಲಕ್ಷ್ಮಿ ಹಣ ಕೂಡಿಟ್ಟು, ಮಿರ್ಚಿ ಮಿಕ್ಸರ್ ಮಷಿನ್ (ಖಾರದ ಗಿರಣಿ) ಖರೀದಿಸಿದ್ದು, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಭಾನುವಾರ ಮಷಿನ್ ಉದ್ಘಾಟಿಸಿ, ಮಹಿಳೆಯ ನೂತನ ಉದ್ಯಮಕ್ಕೆ ಶುಭ ಕೋರಿದರು. ತಾಯವ್ವ ಕ. ಲಕಮೋಜಿ ಎಂಬ ಮಹಿಳೆ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಯೋಜನೆಯಿಂದ ಭವಿಷ್ಯ ಕಟ್ಟಿಕೊಳ್ಳಲು ಮುಂದಾದವರು. ಅವರ ಒತ್ತಾಸೆಯ ಮೇರೆಗೆ ಸಚಿವರು ಕುಕಡೊಳ್ಳಿಗೆ ತೆರಳಿ ನೂತನ ಯಂತ್ರ ಉದ್ಘಾಟಿಸಿದರು. ಲಕ್ಷಾಂತರ ಬಡ ಕುಟುಂಬಗಳ ಆರ್ಥಿಕ ಪರಿಸ್ಥಿತಿಯನ್ನು ಗೃಹಲಕ್ಷ್ಮೀ ಸುಧಾರಣೆಗೊಳಿಸಿದ್ದು, ಸಾಕಷ್ಟು ಬಡ ಕುಟುಂಬಗಳು ಗೃಹಲಕ್ಷ್ಮಿ ಯೋಜನೆಯ ಮೂಲಕ ಬದುಕು ಕಟ್ಟಿಕೊಂಡಿವೆ. ಯೋಜನೆಯ ಸಾರ್ಥಕತೆಗೆ ಇದಕ್ಕಿಂತ ಬೇರೆ ಉದಾಹರಣೆ ಬೇಕೆ ಎಂದು ಲಕ್ಷ್ಮೀ ಹೆಬ್ಬಾಳಕರ್ ಈ ಸಂದರ್ಭದಲ್ಲಿ ಪ್ರಶ್ನಿಸಿದರು. ಈ ಸಂದರ್ಭದಲ್ಲಿ ಚನ್ನಬಸಯ್ಯ ಹಿರೇಮಠ್, ಬಸಯ್ಯ ಚಿಕ್ಕಮಠ್, ವೀರನಗೌಡ ಪಾಟೀಲ, ತಾಯಪ್ಪ ಮರಕಟ್ಟಿ, ಪುಂಡಲೀಕ ಬೈರೋಜಿ, ಕಲ್ಲಪ್ಪ ವಡ್ಡಿನ, ಪರಶುರಾಮ ಕುರುಬರ, ಅನ್ನಪೂರ್ಣ ಪಾಟೀಲ, ಗದಿಗೆಪ್ಪ ವಡ್ಡಿನ, ದೊಡ್ಡಪ್ಪ ದೇಶನೂರ್,…
ವಿಜಯಪುರ: ಜಿಲ್ಲೆಯಲ್ಲಿ ರೈಲ್ವೆ ಸಿಬ್ಬಂದಿಗಳು ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವವನ್ನು ಆಚರಿಸಿದರು. ಈ ಮೂಲಕ ಕನ್ನಡಮ್ಮನ ಡಿಂಢಿಮದ ಕಹಳೆ ಮೊಳಗಿಸಿದರು. ನೈಋತ್ಯ ರೈಲ್ವೆ ಹುಬ್ಬಳ್ಳಿ ವಿಭಾಗದ ವಿಜಯಪುರ ರೈಲ್ವೆ ನಿಲ್ದಾಣದಲ್ಲಿ ವಿಜಯಪುರ ರೈಲ್ವೆ ಸಿಂಬ್ಬಂದಿಗಳಿಂದ ತಾಯಿ ಭುವನೇಶ್ವರಿಯ 69ನೇ ಕನ್ನಡ ರಾಜೋತ್ಸವವನ್ನು ಸಡಗರ, ಸಂಭ್ರಮದಿಂದ ಅದ್ದೂರಿಯಾಗಿ ಆಚರಿಸಲಾಯಿತು. ಎಲ್ಲರೂ ಒಗ್ಗಟಾಗಿ ಕನ್ನಡವೇ ಸತ್ಯ, ಕನ್ನಡವೇ ನಿತ್ಯ, ಸಿರಿಗನ್ನಡಂ ಗೆಲ್ಗೆ, ಸಿರಿಗನ್ನಡಂ ಬಾಳ್ಗೆ, ಕನ್ನಡವೇ ಜಾತಿ, ಕನ್ನಡವೇ ಧರ್ಮ ಹೀಗೆ ಹಲವಾರು ಘೋಷಣೆಯನ್ನು ಕೂಗುವ ಮೂಲಕ ಇಡೀ ನಿಲ್ದಾಣಕ್ಕೆ ಕಳೆಗಟ್ಟುವಂತೆ ಮಾಡಿದರು. ಈ ಸಂದರ್ಭದಲ್ಲಿ ನಿಲ್ದಾಣದ ವ್ಯವಸ್ಥಾಪಕರಾದ ಎಂ. ವೈ. ಪಾಟೀಲ, ಸಹಾಯಕ ವಿಭಾಗೀಯ ಇಂಜಿನಿಯರ್ ಚಂದನ್ ಕುಮಾರ್ ಝಾ, ಹಿರಿಯ ಸೆಕ್ಷನ್ ಎಂಜಿನಿಯರ್ ರಾಜಕುಮಾರ್ ಜಾಧವ್, ಆರ್ ಪಿಎಫ್ ಪುಟ್ಟಸ್ವಾಮಿ ಗೌಡ, ನೈಋತ್ಯ ರೈಲ್ವೆ ಮಜ್ದೂರ್ ಸಂಘದ ಕಾರ್ಯದರ್ಶಿ ಎಂ. ಡಿ. ಆತ್ತಾರ್, ಗೂಡ್ಸ್ ಟ್ರೈನ್ ಮ್ಯಾನೇಜರ್ ಪರಶುರಾಮ ಚವ್ಹಾಣ ಹಾಗೂ ಇತರರು ಭಾಗವಹಿಸಿದರು. ಕನ್ನಡ ರಾಜ್ಯೋತ್ಸವದ ಪ್ರಯುಕ್ತ ವಿಜಯಪುರ ರೈಲ್ವೆ ಕನ್ನಡ…
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗೋಕುಂಟೆಯಲ್ಲಿ ಮುಳುಗಿ ಒಂದೇ ಕುಟುಂಬದ ಮೂವರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಕಂಬತ್ತನಹಳ್ಳಿ ಗ್ರಾಮದಲ್ಲಿ ಗೋಕುಂಟೆಗೆ ತೆರಳಿದ್ದಂತ ಮೂವರು ಅದರಲ್ಲೇ ಮುಳುಗಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಮೃತರನ್ನು ರಂಜಿತ್(27), ರಮ್ಯಾ (24) ಹಾಗೂ ಅಭಿಲಾಶ್ (21) ಎಂಬುದಾಗಿ ಗುರುತಿಸಲಾಗಿದೆ. ಮೃತರ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಕಂಬತ್ತನಹಳ್ಳಿ ಗ್ರಾಮದಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ಊಟಕ್ಕೆ ಸಂಬಂಧಿಕರೆಲ್ಲರು ಸೇರಿದ್ದರು. ಊಟದ ನಂತ್ರ ಗೋಕುಂಟೆಯಲ್ಲಿ ಇಳಿದಾಗ ಮೂವರು ನೀರಿನಲ್ಲಿ ಮುಳುಗಿ ಧಾರುಣವಾಗಿ ಸಾವನ್ನಪ್ಪಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಪರೇಸಂದ್ರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. https://kannadanewsnow.com/kannada/bjp-will-fight-against-land-grabbing-to-appease-muslims-r-ashoka/ https://kannadanewsnow.com/kannada/good-news-for-passengers-special-train-services-for-chhath-puja/
ಶ್ರೀನಗರ: ಇಲ್ಲಿನ ಲಾಲ್ ಚೌಕ್ನಲ್ಲಿ ಮೊದಲ ಬಾರಿಗೆ ಭವ್ಯ ದೀಪಾವಳಿ ಆಚರಣೆ ನಡೆಯಿತು. ಅಲ್ಲಿ ನೂರಾರು ಸ್ಥಳೀಯರು ಮತ್ತು ಪ್ರವಾಸಿಗರು ದೀಪಗಳ ಹಬ್ಬವನ್ನು ಗುರುತಿಸಲು ದೀಪಗಳನ್ನು ಬೆಳಗಿಸಲು ಒಟ್ಟುಗೂಡಿದರು. ಸುಗಮ ಆಚರಣೆಗಳನ್ನು ಖಚಿತಪಡಿಸಿಕೊಳ್ಳಲು ಈ ಪ್ರದೇಶದಲ್ಲಿ ಗಮನಾರ್ಹ ಭದ್ರತಾ ಉಪಸ್ಥಿತಿಯನ್ನು ಸ್ಥಾಪಿಸಲಾಯಿತು. ಆದಾಗ್ಯೂ, ರೋಮಾಂಚಕ ಹಬ್ಬಗಳ ಮಧ್ಯೆ, ಕಾಶ್ಮೀರದ ಯುವ ಪ್ರಭಾವಶಾಲಿಯೊಬ್ಬರು ನಗರದ ಹೃದಯಭಾಗದಲ್ಲಿರುವ ಅಪ್ರತಿಮ ಪ್ರದೇಶವಾದ ಶ್ರೀನಗರದ ಲಾಲ್ ಚೌಕ್ನಲ್ಲಿ ಹಿಂದೂ ವಿಗ್ರಹಗಳು ಮತ್ತು ದೀಪಾವಳಿ ಆಚರಣೆಗಳ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದರು. ಆನ್ಲೈನ್ನಲ್ಲಿ ಅನುಯಾಯಿಗಳನ್ನು ಸಂಪಾದಿಸಿರುವ ಹುಡುಗ, ಹಬ್ಬದ ಸಂದರ್ಭದಲ್ಲಿ ಹಲವಾರು ಹಿಂದೂ ಚಿಹ್ನೆಗಳನ್ನು ಎದುರಿಸಿದ ನಂತರ ತನ್ನ ಅನುಭವ ಮತ್ತು ನಿರಾಶೆಯನ್ನು ಹಂಚಿಕೊಂಡಿದ್ದಾನೆ. https://twitter.com/TimesAlgebraIND/status/1852768326784540737 ಹೀಗಿದೆ ಬಾಲಕನ ವಿವಾದಾತ್ಮಕ ಹೇಳಿಕೆ ನಾನು ಮನೆಯಲ್ಲಿ ಬೇಸರಗೊಳ್ಳುತ್ತಿದ್ದೆ. ಆದ್ದರಿಂದ, ನಾನು ಹೊರಗೆ ಬಂದೆ. ಆದರೆ ಕಾಶ್ಮೀರದಲ್ಲಿ ಅನೇಕ ಹಿಂದೂ ವಿಗ್ರಹಗಳನ್ನು ನೋಡಿದಾಗ ನನ್ನ ಮನಸ್ಥಿತಿ ಮತ್ತೆ ಬದಲಾಯಿತು ಎಂದು ಅವರು ಹೇಳಿದರು. https://twitter.com/VipulSharma1994/status/1852755747937128659 ಅವರ ವಿವಾದಾತ್ಮಕ ಹೇಳಿಕೆಯು ಹಿಂದೂ ಸಮುದಾಯದ ಸಂಪ್ರದಾಯಗಳ…
ಮಂಗಳ ಗ್ರಹಕ್ಕೆ ಬೇರೆ ಯಾವ ಗ್ರಹಕ್ಕೂ ಇಲ್ಲದ ವಿಶೇಷ ಅಂಶವಿದೆ. ಹೌದು ಲಾರ್ಡ್ ಮಂಗಳವನ್ನು ಮಾತ್ರ ದುಷ್ಟ ಚಿಹ್ನೆ ಎಂದು ಹೇಳಲಾಗುತ್ತದೆ. ಆದರೆ ಮಂಗಳ ಗ್ರಹದಿಂದ ಉಂಟಾಗಬಹುದಾದ ದೋಷಗಳನ್ನು ಪರಿಗಣಿಸಿ, ಮಂಗಳ ಭಗವಂತನು ತೊಂದರೆದಾಯಕ ವ್ಯಕ್ತಿ ಎಂದು ಭಾವಿಸುತ್ತೇವೆ. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ನಾವು ಮಂಗಳ ಗ್ರಹದಿಂದ ಉಂಟಾಗುವ ದೋಷಗಳನ್ನು ತೊಡೆದುಹಾಕಲು ಮಾಡಬಹುದಾದ ಸರಳ ಪರಿಹಾರವನ್ನು ನೋಡುತ್ತೇವೆ . ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ,…
ಬೆಂಗಳೂರು: ಮಾದನಾಯಕನಹಳ್ಳಿಯ ಅಪಾರ್ಮೆಂಟ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಂತ ನಟ, ನಿರ್ದೇಶಕ ಗುರುಪ್ರಸಾದ್ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯಗೊಂಡಿದ್ದು, ಇಂದೇ ವಿಲ್ಸನ್ ಗಾರ್ಡನ್ ನಲ್ಲಿರುವಂತ ವಿದ್ಯುತ್ ಚಿತಾಗಾರದಲ್ಲಿ ಅಂತ್ಯಕ್ರಿಯೆ ನೆರವೇರಿಸುವುದಾಗಿ ಕುಟುಂಬಸ್ಥರು ತಿಳಿಸಿದ್ದಾರೆ. ಸಾಲಗಾರರ ಕಾಟಕ್ಕೆ ಬೇಸತ್ತು ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಆತ್ಮಹತ್ಯೆಗೆ ಶರಣಾಗಿರುವುದಾಗಿ ತಿಳಿದು ಬಂದಿತ್ತು. ಅವರ ಮೃತದೇಹವನ್ನು ವಿಕ್ಟೋರಿಯ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಇದೀಗ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ಮುಕ್ತಾಯವಾಗಿರುವುದಾಗಿ ತಿಳಿದು ಬಂದಿದೆ. ವಿಕ್ಟೋರಿಯ ಆಸ್ಪತ್ರೆಯಿಂದ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಅವರ ಪಾರ್ಥೀವ ಶರೀರವನ್ನು ವಿಲ್ಸನ್ ಗಾರ್ಡನ್ ನಲ್ಲಿರುವಂತ ವಿದ್ಯುತ್ ಚಿತಾಗಾರಕ್ಕೆ ಕೊಂಡೊಯ್ಯಲಾಗುತ್ತದೆ. ಅಲ್ಲಿ ಇಂದೇ ಅಂತ್ಯಕ್ರಿಯೆಯನ್ನು ನೆರವೇರಿಸುವುದಾಗಿ ತಿಳಿದು ಬಂದಿದೆ. https://kannadanewsnow.com/kannada/actor-vijay-opposes-one-nation-one-election/ https://kannadanewsnow.com/kannada/bjp-will-fight-against-land-grabbing-to-appease-muslims-r-ashoka/
ಚೆನ್ನೈ: ತಮಿಳು ನಟ ವಿಜಯ್ ( Tamil actor Vijay ) ಅವರ ತಮಿಳಗ ವೆಟ್ರಿ ಕಳಗಂ (Tamilaga Vettri Kazhagam -TVK) ಭಾನುವಾರ ನಡೆದ ಕಾರ್ಯಕಾರಿ ಮಂಡಳಿ ಸಭೆಯಲ್ಲಿ ‘ಒಂದು ರಾಷ್ಟ್ರ ಒಂದು ಚುನಾವಣೆ’ ಕೇಂದ್ರದ ಪ್ರಸ್ತಾಪವನ್ನು ವಿರೋಧಿಸಿ ನಿರ್ಣಯವನ್ನು ಅಂಗೀಕರಿಸಿತು. ತಮಿಳುನಾಡಿನಿಂದ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯನ್ನು (ನೀಟ್) ಹಿಂತೆಗೆದುಕೊಳ್ಳಬೇಕೆಂದು ಒತ್ತಾಯಿಸಿ ಪಕ್ಷವು ನಿರ್ಣಯವನ್ನು ಅಂಗೀಕರಿಸಿತು. ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆಸದ ಡಿಎಂಕೆ ಸರ್ಕಾರವನ್ನು ಅದು ಖಂಡಿಸಿತು ಮತ್ತು ಅದಕ್ಕೆ ಕೇಂದ್ರವನ್ನು ದೂಷಿಸಿತು. ತಮಿಳುನಾಡು ಮುಖ್ಯಮಂತ್ರಿ ಎಂ.ಕೆ.ಸ್ಟಾಲಿನ್ ನೇತೃತ್ವದ ಡಿಎಂಕೆ ವಿರುದ್ಧ ವಾಗ್ದಾಳಿ ನಡೆಸಿದ ಟಿವಿಕೆ, ಅಧಿಕಾರಕ್ಕೆ ಬರಲು ಅದರ ಚುನಾವಣಾ ಭರವಸೆ ಸುಳ್ಳುಗಳಿಂದ ತುಂಬಿದೆ ಎಂದು ಹೇಳಿದೆ. ಫೆಬ್ರವರಿಯಲ್ಲಿ ತಮ್ಮ ರಾಜಕೀಯ ಪಕ್ಷವನ್ನು ಪ್ರಾರಂಭಿಸಿದ ಎಂಟು ತಿಂಗಳ ನಂತರ ಅಕ್ಟೋಬರ್ 27 ರಂದು ವಿಜಯ್ ತಮಿಳುನಾಡಿನ ವಿಲ್ಲುಪುರಂ ಜಿಲ್ಲೆಯಲ್ಲಿ ತಮ್ಮ ಮೊದಲ ರಾಜಕೀಯ ರ್ಯಾಲಿಯನ್ನು ನಡೆಸಿದರು. ಸಮಾನತೆ, ಸಾಮಾಜಿಕ ನ್ಯಾಯ, ಜಾತ್ಯತೀತತೆ, ನ್ಯಾಯಾಲಯಗಳಲ್ಲಿ ತಮಿಳನ್ನು ಆಡಳಿತ ಭಾಷೆಯಾಗಿ…
ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಲೊಟ್ಟೆಗೊಲ್ಲ ಹಳ್ಳಿ ಭೂ ಪ್ರಕರಣದಲ್ಲಿ ಮಾಡಿರಬಹುದಾದ ವಂಚನೆ, ಅವರ ಶಿಕ್ಷಣ ಸಂಸ್ಥೆಗೆ ಪಡೆದಿರುವ ಅಕ್ರಮ ಭೂಮಿ, ಕಂದಾಯ ಸಚಿವರಾಗಿ ಅಕ್ರಮವಾಗಿ ಹಂಚಿರುವ ಭೂಮಿಯ ಆರೋಪಗಳಿಗೆ ಸಾರ್ವಜನಿಕವಾಗಿ ಇಲ್ಲಿಯವರೆಗೆ ಉತ್ತರ ನೀಡದೆ ಪಲಾಯನ ಮಾಡುತ್ತಿರುವ ಆರ್. ಅಶೋಕ್ ರವರು, ಕಾಂಗ್ರೆಸ್ ಪಕ್ಷ ಮತ್ತು ಸರ್ಕಾರದ ಮೇಲೆ ಮಾತನಾಡುವ ಯಾವುದೇ ನೈತಿಕತೆ ಉಳಿಸಿಕೊಂಡಿಲ್ಲ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ವಾಗ್ಧಾಳಿ ನಡೆಸಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕದ ನವರಂಗಿ ವಿರೋಧ ಪಕ್ಷದ ನಾಯಕ ಶ್ರೀ ಆರ್ ಅಶೋಕ್ ರವರು ಚನ್ನಪಟ್ಟಣದ ಉಪಚುನಾವಣೆಯಲ್ಲಿ ಮಾತನಾಡುವಾಗ ಕಾಂಗ್ರೆಸ್ ಪಕ್ಷದ ದುರಾಡಳಿತದ ವಿರುದ್ಧ ಉಪಚುನಾವಣೆ ನಡೆಯುತ್ತಿದೆ ಎನ್ನುವ ಮಾತನ್ನು ಹೇಳಿದ್ದಾರೆ. ಬಹುತೇಕ ಕಾಂಗ್ರೆಸ್ ಪಕ್ಷಕ್ಕೆ ಅಥವಾ ಕರ್ನಾಟಕದ ಕಾಂಗ್ರೆಸ್ ನಾಯಕರಿಗೆ ಉಪಚುನಾವಣೆಗಳನ್ನು ದುರಾಡಳಿತದ ಮೇಲೆ ನಡೆಸುವ ಅವಶ್ಯಕತೆ ಇರುವುದಿಲ್ಲ. ಅಂತಹ ಅವಶ್ಯಕತೆ ಏನಾದರೂ ಇದ್ದರೆ ಅದು ಭಾರತೀಯ ಜನತಾ…