Author: kannadanewsnow09

ಬೆಂಗಳೂರು: ದಕ್ಷಿಣ ಮಧ್ಯ ರೈಲ್ವೆ ಕಾರ್ಯಾಚರಣೆಯ ನಿರ್ಬಂಧಗಳಿಂದಾಗಿ ಈ ರೈಲುಗಳನ್ನು ರದ್ದುಗೊಳಿಸಲು ಅಧಿಸೂಚನೆ ಹೊರಡಿಸಿದೆ. ಹೀಗಿದೆ ರದ್ದಾದ ರೈಲುಗಳ ಪಟ್ಟಿ 1. ರೈಲು ಸಂಖ್ಯೆ 07589 (ಹೊಸ ಸಂಖ್ಯೆ 57405) ತಿರುಪತಿ – ಕದಿರಿದೇವರ ಪಲ್ಲಿ, ಡಿಸೆಂಬರ್ 28, 2024 ರಿಂದ ಫೆಬ್ರವರಿ 28, 2025 ರವರೆಗೆ ರೈಲಿನ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. 2. ರೈಲು ಸಂಖ್ಯೆ 07590 (ಹೊಸ ಸಂಖ್ಯೆ 57406) ಕದಿರಿದೇವರ ಪಲ್ಲಿ-ತಿರುಪತಿ, ಡಿಸೆಂಬರ್ 29, 2024 ರಿಂದ ಮಾರ್ಚ್ 01, 2025 ರವರೆಗೆ ರೈಲಿನ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. 3. ರೈಲು ಸಂಖ್ಯೆ 07657 (ಹೊಸ ಸಂಖ್ಯೆ 57401) ತಿರುಪತಿ-ಎಸ್ಎಸ್ಎಸ್ ಹುಬ್ಬಳ್ಳಿ, ಡಿಸೆಂಬರ್ 28, 2024 ರಿಂದ ಫೆಬ್ರವರಿ 28, 2025 ರವರೆಗೆ ರೈಲಿನ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. 4. ರೈಲು ಸಂಖ್ಯೆ 07658 (ಹೊಸ ಸಂಖ್ಯೆ 57402) ಎಸ್ಎಸ್ಎಸ್ ಹುಬ್ಬಳ್ಳಿ-ತಿರುಪತಿ, ಡಿಸೆಂಬರ್ 29, 2024 ರಿಂದ ಮಾರ್ಚ್ 01, 2025 ರವರೆಗೆ ರೈಲಿನ ಪ್ರಯಾಣವನ್ನು ರದ್ದುಗೊಳಿಸಲಾಗಿದೆ. https://kannadanewsnow.com/kannada/bengaluru-metro-rail-services-to-be-extended-till-2-40-am-on-december-31/ https://kannadanewsnow.com/kannada/former-suzuki-motor-chairman-osamu-suzuki-who-led-company-for-40-years-dies-at-94-death/

Read More

ಬೆಂಗಳೂರು: ನಗರದಲ್ಲಿ ಡಿಸೆಂಬರ್.31ರಂದು ಮುಂಜಾನೆ 2.40ರವರೆಗೆ ನಮ್ಮ ಮೆಟ್ರೋ ಸಂಚಾರದ ( Namma Metro Train Service ) ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಮೂಲಕ ಹೊಸ ವರ್ಷಾಚರಣೆಯಲ್ಲಿ ತೊಡಗೋರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ( Bangalore Metro Rail Corporation Limited-BMRCL ) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025ರ ಹೊಸ ವರ್ಷದ ಮುನ್ನಾದಿನದಂದು ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸುತ್ತಿದೆ. ಕೊನೆಯ ರೈಲು ಜನವರಿ 1, 2025 ರಂದು ಮುಂಜಾನೆ 02:00 ಗಂಟೆಗೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಹೊರಡಲಿದ್ದು, ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್)ನಿಂದ ಕೊನೆಯ ರೈಲು ಎಲ್ಲಾ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2:40 ಗಂಟೆಗೆ ಹೊರಡುತ್ತವೆ ಎಂದಿದೆ. ರೈಲುಗಳು 31 ಡಿಸೆಂಬರ್ 2024ರ ರಾತ್ರಿ 11.00 ರಿಂದ ದಿನದ ವಿಸ್ತೃತ ಸೇವಾ ಅವಧಿಯವರೆಗೆ 10 ನಿಮಿಷಗಳ ಮಧ್ಯಂತರದಲ್ಲಿ ಕಾರ್ಯನಿರ್ವಹಿಸುತ್ತವೆ. ಆದಾಗ್ಯೂ, ಎಂ.ಜಿ ರಸ್ತೆಯಲ್ಲಿ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ನಮ್ಮಲ್ಲಿ ಅನೇಕರಿಗೆ ಚಹಾ ಚೀಲವನ್ನು ಹಬೆಯಲ್ಲಿ ಕಪ್ ನೀರಿನಲ್ಲಿ ಮುಳುಗಿಸುವುದು ಕೇವಲ ದಿನಚರಿಗಿಂತ ಹೆಚ್ಚಿನದಾಗಿದೆ, ಇದು ಇಂದ್ರಿಯಗಳನ್ನು ಜಾಗೃತಗೊಳಿಸುವ ಮತ್ತು ಪ್ರಕಾಶಮಾನವಾದ ಟಿಪ್ಪಣಿಯೊಂದಿಗೆ ದಿನವನ್ನು ಪ್ರಾರಂಭಿಸಲು ಸಹಾಯ ಮಾಡುವ ಸಾಂತ್ವನದಾಯಕ ಆಚರಣೆಯಾಗಿದೆ. ಆದಾಗ್ಯೂ, ಆಘಾತಕಾರಿ ಬಹಿರಂಗಪಡಿಸುವಿಕೆಯಲ್ಲಿ, ಇತ್ತೀಚಿನ ಅಧ್ಯಯನವು ಪಾಲಿಮರ್ ಆಧಾರಿತ ಚಹಾ ಚೀಲಗಳು ನಿಮ್ಮ ಕಪ್ಗೆ ಶತಕೋಟಿ ನ್ಯಾನೊಪ್ಲಾಸ್ಟಿಕ್ಗಳು ಮತ್ತು ಮೈಕ್ರೋಪ್ಲಾಸ್ಟಿಕ್ಗಳನ್ನು ಬಿಡುಗಡೆ ಮಾಡಬಹುದು ಎಂದು ಕಂಡುಹಿಡಿದಿದೆ. ಇದು ರಕ್ತಪ್ರವಾಹವನ್ನು ಪ್ರವೇಶಿಸಬಹುದು. ದೇಹದಾದ್ಯಂತ ಹರಡಬಹುದು ಮತ್ತು ನಿಮ್ಮ ಕರುಳಿನ ಕೋಶಗಳಿಂದ ಹೀರಲ್ಪಡಬಹುದು ಎಂಬುದಾಗಿ ಅಧ್ಯಯನ ತಿಳಿಸಿದೆ. ಸಣ್ಣ ಮೈಕ್ರೋಪ್ಲಾಸ್ಟಿಕ್ಗಳು ಮತ್ತು ನ್ಯಾನೊಪ್ಲಾಸ್ಟಿಕ್ಗಳು ನಾವು ಉಸಿರಾಡುವ ಗಾಳಿಯಲ್ಲಿ ಅಡಗಿರಬಹುದು ಮತ್ತು ಮೆದುಳು, ಹೃದಯ, ಮೂತ್ರಪಿಂಡ ಅಥವಾ ವೃಷಣಗಳು ಸೇರಿದಂತೆ ಮಾನವ ದೇಹದ ಊಹಿಸಲಾಗದ ಭಾಗಗಳಿಗೆ ದಾರಿ ಕಂಡುಕೊಳ್ಳುತ್ತವೆ ಎಂದು ಈ ಹಿಂದೆ ನಡೆಸಿದ ಅನೇಕ ಅಧ್ಯಯನಗಳು ಸಾಬೀತುಪಡಿಸಿವೆ. ಯುಎಬಿ ಡಿಪಾರ್ಟ್ಮೆಂಟ್ ಆಫ್ ಜೆನೆಟಿಕ್ಸ್ ಅಂಡ್ ಮೈಕ್ರೋಬಯಾಲಜಿಯ ಮ್ಯುಟಜೆನೆಸಿಸ್ ಗ್ರೂಪ್ನ ಇತ್ತೀಚಿನ ಅಧ್ಯಯನವು ಪಾಲಿಮರ್ ಆಧಾರಿತ ಚಹಾ ಚೀಲಗಳು…

Read More

ಬೆಂಗಳೂರು: ನಗರದಲ್ಲಿ ಹೊಸ ವರ್ಷಾಚರಣೆಯಲ್ಲಿ ತೊಡಗುವವರಿಗೆ ಗುಡ್ ನ್ಯೂಸ್ ಎನ್ನುವಂತೆ ಡಿಸೆಂಬರ್.31ರಂದು ಮುಂಜಾನೆ 2.40ರವರೆಗೆ ನಮ್ಮ ಮೆಟ್ರೋ ಸಂಚಾರದ ( Namma Metro Train Service ) ವ್ಯವಸ್ಥೆಯನ್ನು ಕಲ್ಪಿಸಲಾಗಿದೆ. ಈ ಬಗ್ಗೆ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು (ಬಿಎಂಆರ್‌ಸಿಎಲ್) ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025ರ ಹೊಸ ವರ್ಷದ ಮುನ್ನಾದಿನದಂದು ನೇರಳೆ ಮತ್ತು ಹಸಿರು ಮಾರ್ಗಗಳಲ್ಲಿ ಮೆಟ್ರೋ ರೈಲು ಸೇವೆಗಳನ್ನು ವಿಸ್ತರಿಸುತ್ತಿದೆ. ಕೊನೆಯ ರೈಲು ಜನವರಿ 1, 2025 ರಂದು ಮುಂಜಾನೆ 02:00 ಗಂಟೆಗೆ ಎಲ್ಲಾ ಟರ್ಮಿನಲ್ ನಿಲ್ದಾಣಗಳಿಂದ ಹೊರಡಲಿದ್ದು, ನಾಡಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮೆಜೆಸ್ಟಿಕ್)ನಿಂದ ಕೊನೆಯ ರೈಲು ಎಲ್ಲಾ ನಾಲ್ಕು ದಿಕ್ಕುಗಳಿಗೆ ಮುಂಜಾನೆ 2:40 ಗಂಟೆಗೆ ಹೊರಡುತ್ತವೆ ಎಂದಿದೆ. ರೈಲುಗಳು 31 ಡಿಸೆಂಬರ್ 2024ರ ರಾತ್ರಿ 11.00 ರಿಂದ ದಿನದ ವಿಸ್ತೃತ ಸೇವಾ ಅವಧಿಯವರೆಗೆ 10 ನಿಮಿಷಗಳ ಮಧ್ಯಂತರದಲ್ಲಿ ಕಾರ್ಯನಿರ್ವಹಿಸುತ್ತವೆ. ಆದಾಗ್ಯೂ, ಎಂ.ಜಿ ರಸ್ತೆಯಲ್ಲಿ ಜನಸಂದಣಿ ಹೆಚ್ಚಾಗುವ ಸಾಧ್ಯತೆ ಇರುವುದರಿಂದ, ಡಿಸೆಂಬರ್ 31, 2024 ರಂದು ರಾತ್ರಿ…

Read More

ಮೈಸೂರು: ತಂದೆಯವರು ಮಾಡಿಸಿದ್ದಂತ ಎಲ್ಐಸಿಯಿಂದ ಹಣ ಪಡೆಯೋ ಕಾರಣಕ್ಕಾಗಿ ಅವರನ್ನೇ ಕೊಲೆ ಮಾಡಿರುವಂತ ಘಟನೆ ಪಿರಿಯಾಪಟ್ಟಣದಲ್ಲಿ ನಡೆದಿದೆ. ತಂದೆಯನ್ನು ಪುತ್ರನೊಬ್ಬ ಕೊಲೆ ಮಾಡಿದ್ದರ ಕಾರಣ ಮತ್ತೊಬ್ಬ ಮಗ ಈ ಸುದ್ದಿ ಕೇಳಿ ಆತ್ಮಹತ್ಯೆ ಮಾಡಿಕೊಂಡಿದ್ದಾಗಿ ತಿಳಿದು ಬಂದಿದೆ. ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲ್ಲೂಕಿನ ಕೊಪ್ಪದ ಗೆರೋಸಿ ಕಾಲೋನಿಯ ಅಣ್ಣಪ್ಪ ಎಂಬುವರಿಗೆ ಪುತ್ರ ಪಾಂಡು ಎಲ್ಐಸಿ ಪಾಲಿಸಿ ಮಾಡಿಸಿದ್ದರು. ಈ ಹಣವನ್ನು ಪಡೆಯೋ ಕಾರಣದಿಂದಾಗಿ ತಂದೆ ಅಣ್ಣಪ್ಪ ಅವರಿಗೆ ಪುತ್ರ ಪಾಂಡು ಹಿಂಬದಿಯಿಂದ ತಲೆಗೆ ಹೊಡೆದು ಕೊಂದಿರುವುದಾಗಿ ಹೇಳಲಾಗುತ್ತಿದೆ. ಈ ರೀತಿಯಾಗಿ ತಂದೆಯನ್ನು ಸಾಯಿಸಿ, ಅಪ್ಪನಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಸಾವನ್ನಪ್ಪಿರುವುದಾಗಿ ಕಥೆ ಕಟ್ಟಿದ್ದಾನೆ. ಈ ವಿಷಯ ತಿಳಿದು ಅಣ್ಣಪ್ಪ ಅವರ ಮತ್ತೊಬ್ಬ ಮಗ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇನ್ನೂ ಈ ಸಂಬಂಧ ಬೈಲುಕುಪ್ಪೆ ಪೊಲೀಸರಿಗೆ ದೂರು ಸಹ ಕೊಲೆ ಮಾಡಿದ್ದಂತ ಪಾಂಡುವೇ ನೀಡಿದ್ದಾರೆ. ಈ ದೂರು ಪಡೆದಂತ ಪೊಲೀಸರು ಅಪರಿಚಿತ ವಾಹನ ಡಿಕ್ಕಿಯಾಗಿ ಸಾವು ಅಂತ ಕೇಸ್ ದಾಖಲಿಸಿದ್ದಾರೆ. ಆದರೇ ಯಾಕೋ ಪ್ರಕರಣದ…

Read More

ಹುಬ್ಬಳ್ಳಿ: ನಗರದಲ್ಲಿ ಡಿ.22ರಂದು ನಡೆದಿದ್ದಂತ ಸಿಲಿಂಡರ್ ಸ್ಪೋಟ ಘಟನೆಯಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರಲ್ಲಿ ಈಗಾಗಲೇ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇಂದು ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 4ಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಸಾಯಿ ನಗರದ ಈಶ್ವರದೇವಸ್ಥಾನದಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಡಿಸೆಂಬರ್.22ರಂದು ಸಿಲಿಂಡರ್ ಸ್ಪೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇವರಲ್ಲಿ ಈಗಾಗಲೇ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇಂದು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅಯ್ಯಪ್ಪ ಮಾಲಾಧಾರಿ ರಾಜು ಅರ್ಲಾಪೂರ ಹಾಗೂ ಲಿಂಗರಾಜು ಬೀರನೂರು(19) ಎಂಬುವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 4ಕ್ಕೆ ಏರಿಕೆಯಾದಂತೆ ಆಗಿದೆ. ಕಿಮ್ಸ್ ಆಸ್ಪತ್ರೆಯಲ್ಲಿ ಇನ್ನೂ ಐವರು ಗಾಯಾಳು ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರೆದಿದೆ. ಅಂದಹಾಗೇ ಈಗಾಗಲೇ ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು…

Read More

ಬೆಂಗಳೂರು: ನಗರದಲ್ಲಿ ಅಪರಿಚಿತ ವಾಹನವೊಂದು ಡಿಕ್ಕಿಯಾಗಿ, ಆ ಬಳಿಕ ವ್ಯಕ್ತಿಯ ಮೇಲೆಯೇ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಕೆ ಆರ್ ಮಾರ್ಕೆಟ್ ಫ್ಲೈಓವರ್ ಬಳಿಯಲ್ಲಿ ನಡೆದಿದೆ. ಬೆಂಗಳೂರಿನ ಕೆ ಆರ್ ಮಾರ್ಕೆಟ್ ಬಳಿಯ ಫ್ಲೈಓವರ್ ಮೇಲೆ ಬೈಕ್ ನಲ್ಲಿ ತೆರಳುತ್ತಿದ್ದಂತ ಶಂಕರ್ ಎಂಬುವರಿಗೆ ಹಿಂಬದಿಯಿಂದ ವಾಹನವೊಂದು ಡಿಕ್ಕಿಯಾಗಿದೆ. ಈ ಪರಿಣಾಮ ಅವರು ನಿಯಂತ್ರಣ ತಪ್ಪಿ ಕೆಳಗೆ ಬಿದ್ದಿದ್ದಾರೆ. ಈ ವೇಳೆ ಮತ್ತೊಂದು ವಾಹನ ಅವರ ಮೇಲೆ ಹರಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಮೃತ ಶಂಕರ್ ಅವರು ಮಾರ್ಕೆಟ್ ನಿಂದ ಮೈಸೂರು ರಸ್ತೆಯ ಕಡೆಗೆ ತೆರಳುತ್ತಿದ್ದಾಗಿ ತಿಳಿದು ಬಂದಿದೆ. ಈ ವೇಳೆಯಲ್ಲೇ ಅಪರಿಚಿತ ವಾಹನ ಡಿಕ್ಕಿಯಾಗಿ ಶಂಕರ್ ಸಾವನ್ನಪ್ಪಿದ್ದಾರೆ ಎನ್ನಲಾಗಿದೆ. ಮೃತ ಶಂಕರ್ ಅವರ ಪಾರ್ಥೀವ ಶರೀರವನ್ನು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಇರಿಸಲಾಗಿದೆ. ಈ ಸಂಬಂಧ ಸ್ಥಳಕ್ಕೆ ಚಾಮರಾಜಪೇಟೆ ಠಾಣೆಯ ಪೊಲೀಸರು ಆಗಮಿಸಿ, ಪರಿಶೀಲಿಸಿ ಪ್ರಕರಣ ದಾಖಲಿಸಿದ್ದಾರೆ. https://kannadanewsnow.com/kannada/manmohan-singh-brought-the-country-back-on-track-when-it-was-in-a-bad-shape-economically-hdd/ https://kannadanewsnow.com/kannada/former-suzuki-motor-chairman-osamu-suzuki-who-led-company-for-40-years-dies-at-94-death/

Read More

ಬೆಂಗಳೂರು: ನಮ್ಮ ದೇಶ ಆರ್ಥಿಕವಾಗಿ ಭೀಕರ ಪರಿಸ್ಥಿತಿಯಲ್ಲಿದ್ದಾಗ ಹಣಕಾಸು ಸಚಿವರಾಗಿ ಬಂದ ಡಾ.ಮನಮೋಹನ್ ಸಿಂಗ್ ಅವರು ಸಮರ್ಥವಾಗಿ ಕೆಲಸ ಮಾಡಿದರು ಹಾಗೂ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತಂದರು ಎಂದು ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ಹೇಳಿದರು. ಜೆಡಿಎಸ್ ಪಕ್ಷದ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಹಮ್ಮಿಕೊಳ್ಳಲಾಗಿದ್ದ ಮನಮೋಹನ್ ಸಿಂಗ್ ಅವರ ಶ್ರದ್ಧಾಂಜಲಿ ಸಮರ್ಪಣೆ ಸಭೆಯಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ಇದು ಅತ್ಯಂತ ದುಃಖದ ದಿನ. ಅವರ ನಿಧನ ನನಗೆ ಬಹಳ ನೋವುಂಟು ಮಾಡಿದೆ. ನಾನು ಮನಮೋಹನ್ ಸಿಂಗ್ ಅವರನ್ನು ನೋಡಿದ್ದು 1991ರಲ್ಲಿ, ಲೋಕಸಭೆಯಲ್ಲಿ. ನಾನು ಕೂಡ ಮೊದಲ ಬಾರಿಗೆ ಲೋಕಸಭೆಗೆ ಹೋಗಿದ್ದೆ. ಅವರು ಪಿ.ವಿ.ನರಸಿಂಹ ರಾವ್ ಸರಕಾರದಲ್ಲಿ ಆರ್ಥಿಕ ಸಚಿವರಾಗಿದ್ದರು. ನಮ್ಮ ರಾಷ್ಟ್ರದ ಆರ್ಥಿಕ ಪರಿಸ್ಥಿತಿ ಸರಿಪಡಿಸಲು ಅನೇಕ ಪ್ರಯತ್ನಗಳನ್ನು ಮಾಡಿದರು. ಆ ಸಂದರ್ಭದಲ್ಲಿ ಆರ್ಥಿಕವಾಗಿ ದೇಶದ ಸ್ಥಿತಿ ಬಹಳ ಹದಗೆಟ್ಟಿತ್ತು. ಅದಕ್ಕೂ ಹಿಂದೆ 130 ಟನ್ ಚಿನ್ನವನ್ನು ಒತ್ತೆ ಇಡಲಾಗಿತ್ತು. ಅಂತಹ ಭೀಕರ ಪರಿಸ್ಥಿತಿ ಇತ್ತು. ಆ ಸನ್ನಿವೇಶದಲ್ಲಿ ಮನಮೋಹನ್ ಸಿಂಗ್…

Read More

ಮದ್ದೂರು: ಕರ್ತವ್ಯದ ವೇಳೆಯಲ್ಲೇ ಬ್ರೈನ್ ಸ್ಟ್ರೋಕ್ ಗೆ ಒಳಗಾದಂತ ಅರಣ್ಯ ಇಲಾಖೆಯ ಗುತ್ತಿಗೆ ನೌಕರನೊಬ್ಬ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವಂತ ಘಟನೆ ಮದ್ದೂರಿನ ಕಳ್ಳಬೇಟೆ ಶಿಬಿರದಲ್ಲಿ ನಡೆದಿದೆ. ಮದ್ದೂರು ಕಳ್ಳಬೇಟೆ ಶಿಬಿರದಲ್ಲಿ ಕಳೆದ 28 ವರ್ಷಗಳಿಂದ ಹೊರಗುತ್ತಿಗೆ ನೌಕರನಾಗಿ ಮಹೇಶ್(56) ಎಂಬುವರು ಕರ್ತವ್ಯ ನಿರ್ವಹಿಸುತ್ತಿದ್ದರು. ಇಂದು ಮದ್ದೂರು ಕಳ್ಳಬೇಟೆ ಶಿಬಿರದಲ್ಲಿ ಕರ್ತವ್ಯದಲ್ಲಿದ್ದಾಗಲೇ ಮಹೇಶ್ ಅವರಿಗೆ ಬ್ರೈನ್ ಸ್ಟ್ರೋಕ್ ಆಗಿತ್ತು. ಅವರನ್ನು ಗುಂಡ್ಲುಪೇಟೆ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಆದರೇ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಮೃತ ಅರಣ್ಯ ಇಲಾಖೆಯ ಹೊರಗುತ್ತಿಗೆ ನೌಕರ ಮಹೇಶ್ ಅವರು ಕರ್ತವ್ಯದಲ್ಲಿ ಇದ್ದಾಗಲೇ ಸಾವನ್ನಪ್ಪಿದ್ದಾರೆ. ಅವರಿಗೆ ಪರಿಹಾರ ನೀಡುವಂತೆ ಕುಟುಂಬಸ್ಥರು ಆಗ್ರಹಿಸಿದ್ದಾರೆ. ಆದರೇ ಅರಣ್ಯ ಇಲಾಖೆಯ ನಿಯಮದಂತೆ ಪರಿಹಾರ ನೀಡಲು ಸಾಧ್ಯವಿಲ್ಲ ಎಂಬುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಹೀಗಾಗಿ ಮದ್ದೂರು ವಲಯ ಅರಣ್ಯಾಧಿಕಾರಿ ಕಚೇರಿಯ ಮುಂದೆ ಮೃತ ಮಹೇಶ್ ಶವವನ್ನಿರಿಸಿ ಕುಟುಂಬಸ್ಥರು ಪ್ರತಿಭಟನೆ ನಡೆಸುತ್ತಿದ್ದಾರೆ. https://kannadanewsnow.com/kannada/sachin-suicide-case-two-policemen-suspended/ https://kannadanewsnow.com/kannada/hubballi-cylinder-blast-one-more-ayyappa-maladhari-dies-death-toll-rises-to-3/

Read More

ಬೀದರ್: ಗುತ್ತಿಗೆದಾರ ಸಚಿನ್ ಆತ್ಮಹತ್ಯೆ ಕೇಸ್ ಸಂಬಂಧ ದೂರು ನೀಡಿದರೂ ಪ್ರಕರಣ ದಾಖಲಿಸದೇ ಕರ್ತವ್ಯ ಲೋಪ ಎಸಗಿದಂತ ಇಬ್ಬರು ಪೊಲೀಸರನ್ನು ಅಮಾನತುಗೊಳಿಸಲಾಗಿದೆ. ಸಚಿವ ಪ್ರಿಯಾಂಕ್ ಖರ್ಗೆ ಆಪ್ತ ರಾಜು ಕಪನೂರು ಜೀವ ಬೆದರಿಕೆ ಆರೋಪ ಮಾಡಿ, ಗುತ್ತಿಗೆದಾರ ಸಚಿನ್ ಎಂಬುವರು ಚಲಿಸುತ್ತಿದ್ದಂತ ರೈಲಿಗೆ ತಲೆಕೊಟ್ಟು ನಿನ್ನೆ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆ ನಂತ್ರ ಗಾಬರಿಯಿಂದ ಪೊಲೀಸ್ ಠಾಣೆಗೆ ತೆರಳಿ ದೂರು ನೀಡಿದ್ದರು. ಆದರೇ ಹೀಗೆ ದೂರು ನೀಡಿದ್ದರೂ ಗಾಂಧಿ ಗಂಜ್ ಠಾಣೆಯ ಪೊಲೀಸರು ಮಾತ್ರ ಕೇಸ್ ದಾಖಲಿಸದೇ ಕರ್ತವ್ಯ ಲೋಪ ಎಸಗಿದ್ದರು. ಈ ಹಿನ್ನಲೆಯಲ್ಲಿ ಬೀದರ್ ನ ಗಾಂಧಿ ಗಂಜ್ ಪೊಲೀಸ್ ಠಾಣೆಯ ರಾಜೇಶ್ ಚೆಲ್ವಾ ಹಾಗೂ ಶಾಮಲಾ ಎಂಬುವರನ್ನು ಅಮಾನತುಗೊಳಿಸಿ ಎಸ್ಪಿ ಆದೇಶಿಸಿದ್ದಾರೆ. https://kannadanewsnow.com/kannada/hubballi-cylinder-blast-one-more-ayyappa-maladhari-dies-death-toll-rises-to-3/ https://kannadanewsnow.com/kannada/26-11-mumbai-attack-mastermind-abdul-rehman-makki-passes-away-due-to-cardiac-arrest/

Read More