Author: kannadanewsnow09

ಬೆಂಗಳೂರು: ರಾಜ್ಯದ ಎಂಜಿನಿಯರ್ ಗಳನ್ನು ಮನೆಹಾಳರು ಎಂದು ವಿರೋಧ ಪಕ್ಷದ ನಾಯಕ, ಬಿಜೆಪಿ ಮುಖಂಡ ಆರ್ ಅಶೋಕ್ ಅವರು ಜರೆದಿರುವುದನ್ನು ಡಿಸಿಎಂ ಡಿ ಕೆ ಶಿವಕುಮಾರ್ ಅವರು ಖಂಡಿಸಿದ್ದಾರೆ. ಸರ್ ಎಂ ವಿಶ್ವೇಶ್ವರಯ್ಯ ಅವರಿಂದ ಹಿಡಿದು ಈಗಿನವರವರೆಗೂ ರಾಜ್ಯದ ಪ್ರಗತಿಯಲ್ಲಿ ಇಂಜಿನಿಯರ್ ಗಳ ಕೊಡುಗೆ ಗಣನೀಯವಾದದ್ದು. ಅಣೆಕಟ್ಟೆಗಳು, ವಿದ್ಯುತ್ ಯೋಜನೆಗಳು, ಬೃಹತ್ ಕಟ್ಟಡಗಳು, ಐಟಿಬಿಟಿ ಸೇರಿದಂತೆ ನಾಡಿನ ಅಭಿವೃದ್ಧಿಗೆ ಅನೇಕ ಕ್ಷೇತ್ರಗಳಲ್ಲಿ ಇಂಜಿನಿಯರ್ ಗಳು ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ಇಲ್ಲದೆ ರಾಜ್ಯ ಮತ್ತು ದೇಶದ ಪ್ರಗತಿಯನ್ನು ಊಹಿಸಿಕೊಳ್ಳಲು ಸಾಧ್ಯವಿಲ್ಲ. ಅಂತಹ ಪ್ರಗತಿಯ ರುವಾರಿಗಳನ್ನು ಮನೆಹಾಳರು ಎಂದು ಅಶೋಕ್ ಅವರು ಕರೆದಿರುವುದು ಸರಿಯಲ್ಲ ಎಂದು ಶಿವಕುಮಾರ್ ಅವರು ಹೇಳಿದ್ದಾರೆ. ಅಶೋಕ್ ಅವರು ತಕ್ಷಣವೇ ಇಂಜಿನಿಯರ್ ಗಳ ಕ್ಷಮಾಪಣೆ ಕೇಳಬೇಕು. ತಮ್ಮ ಹೇಳಿಕೆಯನ್ನು ಹಿಂದಕ್ಕೆ ಪಡೆದುಕೊಳ್ಳಬೇಕು ಎಂದು ಶಿವಕುಮಾರ್ ಅವರು ಹೇಳಿಕೆಯಲ್ಲಿ ಮನವಿ ಮಾಡಿದ್ದಾರೆ. ದೂರವಾಣಿ ಕರೆ: ಡಿಸಿಎಂ ಡಿ ಕೆ ಶಿವಕುಮಾರ್ ಅವರು ಅಶೋಕ್ ಅವರನ್ನು ದೂರವಾಣಿ ಮೂಲಕ ಸಂಪರ್ಕಿಸಿ ಇಂಜಿನಿಯರ್ ಗಳನ್ನು…

Read More

ಬೆಂಗಳೂರು: ನಾಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆಯನ್ನು ನಿಗದಿ ಪಡಿಸಲಾಗಿದೆ. ಈ ಬಗ್ಗೆ ಸರ್ಕಾರದ ಜಂಟಿ ಕಾರ್ಯದರ್ಶಿ ಅವರು ಮಾಹಿತಿ ನೀಡಿದ್ದು, ದಿನಾಂಕ 26-07-2024ರಂದು ಶುಕ್ರವಾರ ಮಧ್ಯಾಹ್ನ 12 ಗಂಟೆಗೆ ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದ್ದಂತ ಸಚಿವ ಸಂಪುಟ ಸಭೆಯನ್ನು ಅದೇ ದಿನ ಮಧ್ಯಾಹ್ನ 1 ಗಂಟೆಗೆ ಮುಂದೂಡಲಾಗಿದೆ ಅಂತ ತಿಳಿಸಿದ್ದಾರೆ. ನಾಳೆ ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅಭಿವೃದ್ಧಿ ಕಾರ್ಯಗಳು ಸೇರಿದಂತೆ ಮಹತ್ವದ ನಿರ್ಣಯಗಳಿಗೆ ಅಂಗೀಕಾರ, ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ ನೀಡುವ ಸಾಧ್ಯತೆಯಿದೆ. https://kannadanewsnow.com/kannada/aadhaar-will-now-be-available-to-your-land-too-heres-what-you-need-to-know-about-bhoomi-aadhaar-bhu-aadhar-yojana/ https://kannadanewsnow.com/kannada/from-august-1-it-will-be-mandatory-for-health-department-employees-to-record-real-time-attendance-system-attendance/

Read More

ಇಂದಿನ ದಿನಗಳಲ್ಲಿ ಹಣ ಮಾಡುವುದೊಂದೇ ಹಲವರ ಗುರಿಯಾಗಿದೆ. ಕಷ್ಟಪಟ್ಟು ಹಣ ಸೇರಿಸುವ, ಪ್ರಗತಿ ಬಯಸಿದವರೂ ನಿಗದಿತ ಮೊತ್ತಕ್ಕಿಂತ ಹೆಚ್ಚು ಹಣ ಸಂಪಾದಿಸಲಾಗದೆ, ದುಡಿದ ಹಣವನ್ನು ಸೇರಿಸಲಾಗದೆ, ದುಂದುವೆಚ್ಚ, ಹಣದ ಕೊರತೆಯಿಂದ ಬಳಲುತ್ತಿದ್ದಾರೆ. ವ್ಯಾಲೆಟ್‌ಗಳು ಅಥವಾ ಪರ್ಸ್ ನಲ್ಲಿ ಹಣವನ್ನು ಇಡಲು ಪ್ರತಿಯೊಬ್ಬರೂ ಬಳಸುವ ಪ್ರಮುಖ ವಸ್ತುವಾಗಿದೆ. ಹೋಮ್ ಬ್ಯೂರೋ ವ್ಯವಹಾರದ ಗಲ್ಲ ಪೆಟ್ಟಿಗೆ ಕೂಡ ಇದರ ಪಕ್ಕದಲ್ಲಿದೆ. ಹಣವನ್ನು ಇಡಲು ಬಳಸುವ ಈ ಮನಿ ಪರ್ಸ್‌ನಲ್ಲಿ ಒಂದೇ ಒಂದು ವಸ್ತುವನ್ನು ಇರಿಸುವ ಮೂಲಕ ನಮ್ಮ ಹಣದ ಹರಿವನ್ನು ಹೆಚ್ಚಿಸಬಹುದು ಎಂದು ಹೇಳಲಾಗುತ್ತದೆ. ಆಧ್ಯಾತ್ಮದ ಕುರಿತಾದ ಈ ಪೋಸ್ಟ್‌ನಲ್ಲಿ ಇದರ ಅರ್ಥ ಮತ್ತು ಅದನ್ನು ಹೇಗೆ ಇಟ್ಟುಕೊಳ್ಳುವುದು ಎಂದು ನಾವು ತಿಳಿದುಕೊಳ್ಳಬಹುದು . ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಎಲ್ಲಾ ಶಾಲಾ-ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್ ಒದಗಿಸುವುದಾಗಿ ಘೋಷಣೆ ಮಾಡಲಾಗಿತ್ತು. ಅದರಂತೆ 46,829 ಶಾಲೆ, 1234 ಪಿಯು ಕಾಲೇಜುಗಳಿಗೆ ಉಚಿತ ವಿದ್ಯುತ್ ಸೌಲಭ್ಯ ಕಲ್ಪಿಸುತ್ತಿರುವುದಾಗಿ ತಿಳಿಸಿದೆ. ರಾಜ್ಯದ ಎಲ್ಲ 46,829 ಪ್ರಾಥಮಿಕ, ಪ್ರೌಢಶಾಲೆಗಳು ಹಾಗೂ 1,234 ಪದವಿಪೂರ್ವ ಕಾಲೇಜುಗಳಿಗೆ ಉಚಿತವಾಗಿ ವಿದ್ಯುತ್‌ ಕಲ್ಪಿಸಲು ಶಾಲಾ ಶಿಕ್ಷಣ ಇಲಾಖೆ ಆಯುಕ್ತೆ ಬಿ.ಬಿ.ಕಾವೇರಿ ಸುತ್ತೋಲೆ ಹೊರಡಿಸಿದ್ದಾರೆ. ಶಾಲೆಗಳಿಗೆ ಉಚಿತ ವಿದ್ಯುತ್‌ ಹಾಗೂ ನೀರಿನ ಸಂಪರ್ಕ ಕಲ್ಪಿಸುವ ಕುರಿತು 2024-25ನೇ ಸಾಲಿನ ಬಜೆಟ್‌ ಘೋಷಣೆಯ ಭಾಗವಾಗಿ ಉಚಿತವಾಗಿ ವಿದ್ಯುತ್‌ ಸೌಲಭ್ಯ ಕಲ್ಪಿಸಲು ₹25 ಕೋಟಿ ಅನುದಾನ ನೀಡಲಾಗಿದೆ. ಎಲ್ಲ ಶಾಲೆಗಳು ಆಯಾ ವ್ಯಾಪ್ತಿಯ ವಿದ್ಯುತ್‌ ಸರಬರಾಜು ಕಂಪನಿಯ ಕಚೇರಿಗಳಿಗೆ ಆರ್‌ಆರ್‌ ಸಂಖ್ಯೆ ಹಾಗೂ ಬಳಕೆದಾರರ ಐಡಿಗಳನ್ನು ನೀಡಿ ಜುಲೈ 31ರ ಒಳಗೆ ನೋಂದಣಿ ಮಾಡಿಕೊಳ್ಳುವಂತೆ ಸೂಚಿಸಿದ್ದಾರೆ. https://twitter.com/KarnatakaVarthe/status/1816455765407793569 https://kannadanewsnow.com/kannada/nipah-virus-outbreak-in-kerala-health-department-issues-guidelines-mandates-adherence-to-it/ https://kannadanewsnow.com/kannada/aadhaar-will-now-be-available-to-your-land-too-heres-what-you-need-to-know-about-bhoomi-aadhaar-bhu-aadhar-yojana/

Read More

ಬೆಂಗಳೂರು: ಕೇರಳ ರಾಜ್ಯದಲ್ಲಿ ನೀಫಾ ವೈರಸ್ ಆರ್ಭಟ ಹೆಚ್ಚಾಗಿದೆ. ಕೇರಳದ ನೆರೆಯ ರಾಜ್ಯವಾಗಿರುವಂತ ಕರ್ನಾಟಕ್ಕಕೂ ನೀಫಾ ವೈರಸ್ ಹರಡುವ ಆತಂಕ ಹೆಚ್ಚಿದೆ. ಈ ಹಿನ್ನಲೆಯಲ್ಲಿ ಆರೋಗ್ಯ ಇಲಾಖೆಯಿಂದ ನೀಫಾ ವೈರಸ್ ನಿಯಂತ್ರಣ ಸಂಬಂಧ ಮಾರ್ಗಸೂಚಿ ಪ್ರಕಟಿಸಲಾಗಿದೆ. ಆ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸುತ್ತೋಲೆಯಲ್ಲಿ ತಿಳಿಸಲಾಗಿದೆ. ಈ ಕುರಿತಂತೆ ರಾಜ್ಯ ಆರೋಗ್ಯ ಮತ್ತು ಕುಟುಂಬ ಇಲಾಖೆಯಿಂದ ಸುತ್ತೋಲೆ ಹೊರಡಿಸಲಾಗಿದ್ದು, ಕೇರಳದ ಮಲಪ್ಪುರಂ ಜಿಲ್ಲೆಯಲ್ಲಿ ದಿನಾಂಕ 21-07-2024 ರಂದು ನಿಪಾ ವೈರಸ್ ಪುಕರಣ ಪತ್ತೆಯಾಗಿದೆ. AES ರೋಗಲಕ್ಷಣಗಳನ್ನು ಹೊಂದಿದ್ದ ಮಲಪ್ಪುರಂನ 14 ವರ್ಷದ ಬಾಲಕ ಪೆರಿಂತಲ್ಮನ್ಮಾದಲ್ಲಿನ ಆರೋಗ್ಯ ಕೇಂದ್ರದಲ್ಲಿ ತೋರಿಸಿಕೊಂಡು ಹೆಚ್ಚಿನ ಚಿಕಿತ್ಸೆಗೆ ಕೋಝಿಕ್ಕೋಡ್‌ನ ಉನ್ನತ ಆರೋಗ್ಯ ಕೇಂದ್ರಕ್ಕೆ ವರ್ಗಾಯಿಸುವ ಮೊದಲು ಸಾವನ್ನಪ್ಪಿದ್ದಾನೆ. ರೋಗಿಯ ಮಾದರಿಗಳನ್ನು ಎನ್‌ಐವಿ, ಪುಣೆಗೆ ಕಳುಹಿಸಲಾಗಿ, ನಿವಾ ವೈರಸ್ ಸೋಂಕು ದೃಢಪಟ್ಟಿದೆ ಎಂದಿದೆ. ಈ ಹಿನ್ನೆಲೆಯಲ್ಲಿ ಕೇಂದ್ರವು ಮಲಪ್ಪುರಂನಲ್ಲಿ ರೋಗವನ್ನು ತಡೆಗಟ್ಟಲು ತಕ್ಷಣದ ಸಾರ್ವಜನಿಕ ಆರೋಗ್ಯ ಕ್ರಮಗಳನ್ನು ಸೂಚಿಸಿದೆ. ಪ್ರಕರಣದ ತನಿಖೆ, ಸಾಂಕ್ರಾಮಿಕ ರೋಗಗಳ ಸಂಬಂಧಗಳ ಗುರುತಿಸುವಿಕೆ ಮತ್ತು ತಾಂತ್ರಿಕ…

Read More

ಬೆಂಗಳೂರು: ಪ್ರಯಾಣಿಕರ ಅನುಕೂಲಕ್ಕಾಗಿ ಬೆಂಗಳೂರಿನ ಸರ್ ಎಂ. ಟರ್ಮಿನಲ್ ಮತ್ತು ಕಲಬುರಗಿ ನಿಲ್ದಾಣಗಳ ಮಧ್ಯೆ ಸಂಚರಿಸುವ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲುಗಳನ್ನು ಯಾದಗಿರಿ ರೈಲ್ವೆ ನಿಲ್ದಾಣದಲ್ಲಿ ಹೆಚ್ಚುವರಿ ನಿಲುಗಡೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ದಕ್ಷಿಣ ಮಧ್ಯ ರೈಲ್ವೆಯು ಸೂಚಿಸಿದೆ. ಯಾದಗಿರಿಯಲ್ಲಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲಿನ ಆಗಮನ / ನಿರ್ಗಮನದ ವೇಳಾಪಟ್ಟಿ ಈ ಕೆಳಗಿನಂತಿವೆ: 1. ಜುಲೈ 27 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 22232 ಎಸ್ಎಂವಿಟಿ ಬೆಂಗಳೂರು-ಕಲಬುರಗಿ ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲ್ದಾಣಕ್ಕೆ ರಾತ್ರಿ 9:44 ಗಂಟೆಗೆ ಆಗಮಿಸಿ, 9:45 ಕ್ಕೆ ಹೊರಡಲಿದೆ. 2. ಜುಲೈ 28 ರಿಂದ ಜಾರಿಗೆ ಬರುವಂತೆ, ರೈಲು ಸಂಖ್ಯೆ 22231 ಕಲಬುರಗಿ-ಎಸ್ಎಂವಿಟಿ ಬೆಂಗಳೂರು ವಂದೇ ಭಾರತ್ ಎಕ್ಸ್ ಪ್ರೆಸ್ ರೈಲು ಯಾದಗಿರಿ ನಿಲ್ದಾಣಕ್ಕೆ ಬೆಳಿಗ್ಗೆ 5:54 ಕ್ಕೆ ಬಂದು, 5:55 ಕ್ಕೆ ಹೊರಡಲಿದೆ. ಈ ಹೆಚ್ಚುವರಿ ನಿಲುಗಡೆಯು ಯಾದಗಿರಿಗೆ ಮತ್ತು ಅಲ್ಲಿಂದ ಪ್ರಯಾಣಿಸುವ ಪ್ರಯಾಣಿಕರಿಗೆ ಹೆಚ್ಚಿನ ನಮ್ಯತೆ…

Read More

ಬೆಂಗಳೂರು: ಮುಖ್ಯಮಂತ್ರಿಯವರ ಒಂದು ಲಕ್ಷ ಮನೆ ಯೋಜನೆಯಡಿಯಲ್ಲಿ ಫಲಾನುಭವಿಗಳಿಗೆ ಆರ್ಥಿಕ ಹೊರೆ ತಗ್ಗಿಸುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ತೀರ್ಮಾನ ಕೈಗೊಂಡಿದ್ದಾರೆ. ಬಿಜೆಪಿ ಸರ್ಕಾರ ದಲ್ಲಿ ಯೂನಿಟ್ ವೆಚ್ಚ ಹೆಚ್ಚಳ ನಿರ್ಧಾರ ದಿಂದ ಆತಂಕ ಗೊಂಡಿದ್ದ 12,153 ಕುಟುಂಬಗಳಿಗೆ ಸಿಹಿ ಸುದ್ದಿ ನೀಡಿದ್ದು, ಪ್ರತಿ ಮನೆಗೆ ಒಂದು ಲಕ್ಷ ರೂ. ನಂತೆ 121 ಕೋಟಿ 53 ಲಕ್ಷ ರೂ.ಸರ್ಕಾರವೇ ಭರಿಸಲು ಒಪ್ಪಿಗೆ ನೀಡಿದ್ದಾರೆ. ವಸತಿ ಸಚಿವ ಜಮೀರ್ ಅಹಮದ್ ಖಾನ್ ನೇತೃತ್ವದಲ್ಲಿ ಗುರುವಾರ ಸಂಜೆ ವಿಧಾನ ಸೌಧದ ಮುಖ್ಯಮಂತ್ರಿ ಯವರ ಕಚೇರಿಯಲ್ಲಿ ನಡೆದ ಸಭೆಯಲ್ಲಿ ನಗರದ ಕಾಂಗ್ರೆಸ್ ಮತ್ತು ಬಿಜೆಪಿ ಶಾಸಕರು ಮುಖ್ಯಮಂತ್ರಿ ಯವರ ಮನವೊಲಿಸುವಲ್ಲಿ ಯಶಸ್ವಿಯಾದರು. ಮುಖ್ಯಮಂತ್ರಿ ಯವರ ಒಂದು ಲಕ್ಷ ಮನೆ ಯೋಜನೆ ಗೆ 2017, ಸೆಪ್ಟೆಂಬರ್ 23 ರಂದು ಅಧಿಸೂಚನೆ ಹೊರಡಿಸಿ ಘಟಕ ವೆಚ್ಚ 6 ಲಕ್ಷ ರೂ. ನಿಗದಿ ಮಾಡಲಾಗಿತ್ತು. ಕೇಂದ್ರ ಸರ್ಕಾರ 1.50 ಲಕ್ಷ, ರಾಜ್ಯ ಸರ್ಕಾರ ಸಾಮಾನ್ಯ ವರ್ಗಕ್ಕೆ 1.20 ಲಕ್ಷ, ಎಸ್…

Read More

ಬೆಂಗಳೂರು: ರಾಯದುರ್ಗ-ತುಮಕೂರು ಹೊಸ ಮಾರ್ಗದ ಭಾಗವಾಗಿ ರಾಯದುರ್ಗ ಯಾರ್ಡ್ ನಲ್ಲಿ ಎರಡನೇ ಹಂತದ ಎಂಜಿನಿಯರಿಂಗ್ ಕಾಮಗಾರಿ ಕೈಗೊಳ್ಳುವ ಸಲುವಾಗಿ, ಈ ಕೆಳಗೆ ತಿಳಿಸಲಾದ ರೈಲು ಸೇವೆಗಳನ್ನು ರದ್ದು ಮತ್ತು ಬೇರೆ ಮಾರ್ಗದ ಮೂಲಕ ಸಂಚರಿಸಲಿವೆ. • ರೈಲುಗಳ ಸಂಚಾರ ರದ್ದು: ರೈಲು ಸಂಖ್ಯೆ 07585 ಚಿಕ್ಕಜಾಜೂರು-ಗುಂತಕಲ್ ಡೈಲಿ ಪ್ಯಾಸೆಂಜರ್ ಸ್ಪೆಷಲ್ & ಗುಂತಕಲ್-ಚಿಕ್ಕಜಾಜೂರು (07586) ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲುಗಳ ಸಂಚಾರ ಆಗಸ್ಟ್ 8, 2024 ರಂದು ರದ್ದಾಗಲಿದೆ. ರೈಲುಗಳ ಮಾರ್ಗ ಬದಲಾವಣೆ: 1. ಆಗಸ್ಟ್ 9 ರಂದು ಪ್ರಯಾಣ ಬೆಳೆಸುವ ರೈಲು ಸಂಖ್ಯೆ 06243 ಕೆಎಸ್ಆರ್ ಬೆಂಗಳೂರು-ಹೊಸಪೇಟೆ ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಚಿಕ್ಕಜಾಜೂರ, ದಾವಣಗೆರೆ, ಅಮರಾವತಿ ಕಾಲೋನಿ, ಹೊಸಪೇಟೆ ಮಾರ್ಗದ ಮೂಲಕ ಸಂಚರಿಸಲಿದೆ. ಈ ರೈಲು ಚಿತ್ರದುರ್ಗದಿಂದ ತೋರಣಗಲ್ಲು ನಿಲ್ದಾಣಗಳವರೆಗೆ ತನ್ನ ನಿಗದಿತ ನಿಲುಗಡೆ ಇರುವುದಿಲ್ಲ. 2. ಆಗಸ್ಟ್ 9 ರಂದು ಪ್ರಯಾಣ ಬೆಳೆಸುವ ರೈಲು ಸಂಖ್ಯೆ 06244 ಹೊಸಪೇಟೆ-ಕೆಎಸ್ಆರ್ ಬೆಂಗಳೂರು ಡೈಲಿ ಪ್ಯಾಸೆಂಜರ್ ಸ್ಪೆಷಲ್ ರೈಲು ಹೊಸಪೇಟೆ, ಅಮರಾವತಿ…

Read More

ಬೆಂಗಳೂರು: ಮುಡಾ ಅಕ್ರಮ ಕುರಿತಂತೆ ಚರ್ಚೆ ನಡೆಸಲು ಸದನದಲ್ಲಿ ಅವಕಾಶ ನೀಡದಿದ್ದಕ್ಕೇ ಬಿಜೆಪಿ, ಜೆಡಿಎಸ್ ಸದಸ್ಯರಿಂದ ಸದನದಲ್ಲೇ ಅಹೋರಾತ್ರಿ ಧರಣಿ ನಡೆಸಿದ್ದರು. ಈ ಬಳಿಕ ಇಂದು ರಾಜ್ಯಪಾಲರನ್ನು ಭೇಟಿಯಾಗಿ ಮುಡಾ ಅಕ್ರಮದ ಬಗ್ಗೆ ವಿರೋಧ ಪಕ್ಷಗಳಿಂದ ದೂರು ನೀಡಲಾಗಿದೆ. ಇಂದು ವಿಧಾನಸೌಧದಿಂದ ಪಾದಯಾತ್ರೆಯ ಮೂಲಕ ಸಾಗಿದಂತ ಬಿಜೆಪಿಯ ವಿಪಕ್ಷ ನಾಯಕ ಆರ್.ಅಶೋಕ್, ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ, ಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಸೇರಿದಂತೆ ಜೆಡಿಎಸ್ ನಾಯಕರು, ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿಯಾದರು. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾದಂತ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಮುಡಾ ಅಕ್ರಮದ ಬಗ್ಗೆ ರಾಜ್ಯಪಾಲರಿಗೆ ದೂರು ನೀಡಿದರು. ಅಲ್ಲದೇ ಈ ಅಕ್ರಮದ ಬಗ್ಗೆ ಸೂಕ್ತ ಸೂಚನೆ ನೀಡುವಂತೆ ರಾಜ್ಯಪಾಲರನ್ನು ಕೋರಿದರು. ಒಟ್ಟಾರೆಯಾಗಿ ರಾಜ್ಯದ ಕಾಂಗ್ರೆಸ್ ಸರಕಾರವು ಇಂದು ಸದನದಲ್ಲಿ ಮುಡಾ ವಿಚಾರದಲ್ಲಿ ಅವಕಾಶ ನೀಡದೆ ಇರುವುದನ್ನು ಖಂಡಿಸಿ ಬಿಜೆಪಿ-ಜೆಡಿಎಸ್ ಜನಪ್ರತಿನಿಧಿಗಳುÀ ರಾಜಭವನ ಚಲೋ ನಡೆಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ, ವಿಧಾನಸಭೆಯ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 14 ಜಿಲ್ಲೆಗಳಲ್ಲಿ ಪೈಲಟ್ ಯೋಜನೆಯನ್ನು ಅನುಷ್ಠಾನಗೊಳಿಸುತ್ತಿದೆ. ಹೀಗಾಗಿ 1,119 ಗ್ರಾಮ ಪಂಚಾಯ್ತಿಗಳು ಕೊಳಚೆ ನೀರಿನಿಂದ ಮುಕ್ತವಾಗಲಿದ್ದಾವೆ. ಈ ಬಗ್ಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ಬೂದು ನೀರು ನಿರ್ವಹಣೆಗೆ ವಿನೂತನ ಪ್ರಯೋಗ ಮಾಡಲಾಗುತ್ತಿದೆ. ಕೊಳಚೆ ನೀರು ಕೆರೆ, ಹಳ್ಳ ಸೇರುವುದನ್ನು ತಡೆಗಟ್ಟಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದಿದೆ. ಒಟ್ಟಾರೆಯಾಗಿ ಗ್ರಾಮಗಳ ಸ್ವಚ್ಛತೆಯನ್ನು ಆದ್ಯತೆಯಾಗಿರಿಸಿ ಬೂದು ನೀರು ನಿರ್ವಹಣೆಗೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ ರಾಜ್‌ ಇಲಾಖೆಯು ರಾಜ್ಯದ 14 ಜಿಲ್ಲೆಯಲ್ಲಿ ಪೈಲಟ್‌ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರಿಂದಾಗಿ 1,199 ಗ್ರಾಮ ಪಂಚಾಯಿತಿಗಳು ಕೊಳಚೆ ನೀರಿನಿಂದ ಮುಕ್ತವಾಗಲಿದ್ದಾವೆ. https://kannadanewsnow.com/kannada/no-insurance-company-can-deny-crop-insurance-to-farmers-minister-krishna-byre-gowda/ https://kannadanewsnow.com/kannada/aadhaar-will-now-be-available-to-your-land-too-heres-what-you-need-to-know-about-bhoomi-aadhaar-bhu-aadhar-yojana/

Read More