Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾನು ಮಂತ್ರಿ ಆಗಿ 40 ವರ್ಷ ಆಯ್ತು. ಎರಡು ಬಾರಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಆಗಿದ್ದೇನೆ. ಯಾವತ್ತೂ ಸೊಕ್ಕು, ಅಹಂಕಾರ ಮಾಡಿಲ್ಲ. ಜನ ಅವಕಾಶ ಕೊಟ್ಟಾಗ ಅಧಿಕಾರ ನಡೆಸಿದ್ದೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದರು. ಇಂದು ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು ನಾವು ಸೋತಾಗ ಹೋರಾಟ ಮಾಡಿದ್ದೇವೆ. ಸಾಲದ್ದಕ್ಕೆ ದೇವೇಗೌಡರು, ಕುಮಾರಸ್ವಾಮಿ ಅವ್ರು, ನಿಖಿಲ್ ಎಲ್ರೂ ಅಳೋದು. ಅಳೋದನ್ನು ರೂಢಿ ಮಾಡಿಕೊಂಡಿದ್ದಾರೆ. ಆದ್ರೂ ಜನ ನಮಗೆ ಮತ ಹಾಕಿದ್ದಾರೆ. ಬಿಜೆಪಿಯವರು ಮತದಾರರನ್ನು ಪೆದ್ದರು ಎಂದು ಭಾವಿಸುವುದನ್ನು ನಿಲ್ಲಿಸಬೇಕು. ಪ್ರತೀ ಬಾರಿ ಮತದಾರರನ್ನು ಬಕ್ರಾ ಮಾಡಿ ಗೆಲ್ತೀವಿ ಎನ್ನುವ ಬುದ್ದಿಯನ್ನು ಬಿಜೆಪಿಯವರು ಬಿಡಬೇಕು ಎಂದರು. ಈ ಬಾರಿ ಬಿಜೆಪಿ, ಜೆಡಿಎಸ್ ಇಬ್ಬರೂ ಸೇರಿ ಅಪಪ್ರಚಾರ ಮಾಡಿದ್ರು. ಇಬ್ಬರೂ ಒಟ್ಟಾಗಿ ಚುನಾವಣೆ ಮಾಡಿದ್ರು. ಪಾದಯಾತ್ರೆ ಮಾಡಿದ್ದೇನು ? ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿ ನಿರಂತರವಾಗಿ ಫಲಾನುಭವಿಗಳನ್ನು ಅವಮಾನಿಸಿದರು. ಪ್ರಧಾನಿ ನರೇಂದ್ರ ಮೋದಿಯವರೂ ಗ್ಯಾರಂಟಿಗಳ ಬಗ್ಗೆ ಅಪಪ್ರಚಾರ ಮಾಡಿದ್ದರು ಎಂದು ಕಿಡಿಕಾರಿದರು. ಮಹಾರಾಷ್ಟ್ರ ಸರ್ಕಾರ…
ಬೆಂಗಳೂರು: ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆದಂತ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಗೆಲುವಿನ ಬಗ್ಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಏನು ಹೇಳಿದ್ರು ಅಂತ ಅವರ ಸುದ್ದಿಗೋಷ್ಠಿಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದು ಕಾಂಗ್ರೆಸ್ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಮಾತನಾಡಿದರು. ಕರ್ನಾಟಕದಲ್ಲಿ ನಡೆದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಜಯಭೇರಿ ಬಾರಿಸಿದ್ದಾರೆ. ಇದು ರಾಜ್ಯ ಸರ್ಕಾರದ ಸಾಧನೆ, ಕಾಂಗ್ರೆಸ್ ಪಕ್ಷಷದ ಪಕ್ಷದ ಸಿದ್ಧಾಂತ ಮತ್ತು ನಮ್ಮ ಕಾರ್ಯಕರ್ತರ ಅವಿರತ ಶ್ರಮದ ಗೆಲುವು ಈ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಅನಂತ ಧನ್ಯವಾದಗಳು. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸೀರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು. …
ಬೆಂಗಳೂರು: 1876 ಜನ ಮಾತ್ರ ನನಗೆ ಓಟು ಹಾಕಿದ್ದು, ಶೇ. 99 ಮತದಾರರು ನಮ್ಮನ್ನು ಬೆಂಬಲಿಸಿಲ್ಲ. ಮತ ಹಾಕಿದ ಎಲ್ಲರಿಗೂ ನನ್ನ ನಮನಗಳು, ಧನ್ಯವಾದಗಳು. ನೀವು ಇಷ್ಟು ಜನರಾದರೂ ನಮ್ಮನ್ನು ಬೆಂಬಲಿಸಿದಿರಲ್ಲ ಎನ್ನುವುದೇ ಸದ್ಯದ ತೃಪ್ತಿ ಎಂಬುದಾಗಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ ರಾಜ್ಯಾಧ್ಯಕ್ಷ, ಶಿಗ್ಗಾಂವಿ ಕ್ಷೇತ್ರದಿಂದ ಸ್ಪರ್ಧಿಸಿ ಸೋಲುಂಡಂತ ರವಿಕೃಷ್ಣಾ ರೆಡ್ಡಿ ತಿಳಿಸಿದ್ದಾರೆ. ಇಂದು ತಮ್ಮ ಫೇಸ್ ಬುಕ್ ಮುಖಪುಟದಲ್ಲಿ ಬರೆದುಕೊಂಡಿರುವಂತ ಅವರು, ಶಿಗ್ಗಾವಿ-ಸವಣೂರಿನ ನಾಗರಿಕರು ಎಂದಿನಂತೆ ಶಿಗ್ಗಾವಿಯಲ್ಲಿರುವ KRS ಪಕ್ಷದ ಕಚೇರಿಗೆ ಬಂದು ತಮ್ಮ ನ್ಯಾಯಬದ್ಧ ಕೆಲಸಗಳನ್ನು ಮಾಡಿಸಿಕೊಳ್ಳಬಹುದು. ಆದರೆ… ಶಿಗ್ಗಾವಿ ಸವಣೂರು ವಿಧಾನಸಭಾ ಕ್ಷೇತ್ರದ ಜನತೆ ಈ ಉಪಚುನಾವಣೆಯಲ್ಲಿ ನನ್ನನ್ನು ಮತ್ತು ನಮ್ಮ ಪಕ್ಷವನ್ನು ಸಾರಾಸಗಟಾಗಿ ತಿರಸ್ಕರಿಸಿದ್ದಾರೆ. ಒಟ್ಟು #1876 ಜನ ಮಾತ್ರ ನನಗೆ ಓಟು ಹಾಕಿದ್ದು, ಶೇ. 99 ಮತದಾರರು ನಮ್ಮನ್ನು ಬೆಂಬಲಿಸಿಲ್ಲ. ಮತ ಹಾಕಿದ ಎಲ್ಲರಿಗೂ ನನ್ನ ನಮನಗಳು, ಧನ್ಯವಾದಗಳು. ನೀವು ಇಷ್ಟು ಜನರಾದರೂ ನಮ್ಮನ್ನು ಬೆಂಬಲಿಸಿದಿರಲ್ಲ ಎನ್ನುವುದೇ ಸದ್ಯದ ತೃಪ್ತಿ ಎಂದಿದ್ದಾರೆ. ಈ…
ಪೇಶಾವರ: ವಾಯುವ್ಯ ಪಾಕಿಸ್ತಾನದ ಪ್ರಕ್ಷುಬ್ಧ ಖೈಬರ್ ಪಖ್ತುನ್ಖ್ವಾ ಪ್ರಾಂತ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ನಡೆದ ಕೋಮು ಹಿಂಸಾಚಾರದಲ್ಲಿ ಕನಿಷ್ಠ 32 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಅಫ್ಘಾನಿಸ್ತಾನದ ಗಡಿಯಲ್ಲಿರುವ ಕುರ್ರಾಮ್ ಜಿಲ್ಲೆಯ ಅಲಿಜೈ ಮತ್ತು ಬಗಾನ್ ಬುಡಕಟ್ಟು ಜನಾಂಗದವರ ನಡುವೆ ಗುರುವಾರ ಪ್ರಯಾಣಿಕರ ವ್ಯಾನ್ಗಳ ಬೆಂಗಾವಲು ವಾಹನದ ಮೇಲೆ ನಡೆದ ದಾಳಿಯ ನಂತರ ಘರ್ಷಣೆಗಳು ನಡೆದಿದ್ದು, ಇದರಲ್ಲಿ 47 ಜನರು ಸಾವನ್ನಪ್ಪಿದ್ದಾರೆ. ಬಲಿಷ್ಖೇಲ್, ಖಾರ್ ಕಾಳಿ, ಕುಂಜ್ ಅಲಿಜೈ ಮತ್ತು ಮಕ್ಬಾಲ್ನಲ್ಲಿಯೂ ಗುಂಡಿನ ದಾಳಿ ಮುಂದುವರೆದಿದೆ. ಬುಡಕಟ್ಟು ಜನಾಂಗದವರು ಭಾರಿ ಮತ್ತು ಸ್ವಯಂಚಾಲಿತ ಶಸ್ತ್ರಾಸ್ತ್ರಗಳಿಂದ ಪರಸ್ಪರ ಗುರಿಯಾಗಿಸುತ್ತಿದ್ದಾರೆ. ಘರ್ಷಣೆಯಲ್ಲಿ ಈವರೆಗೆ 18 ಜನರು ಸಾವನ್ನಪ್ಪಿದ್ದಾರೆ ಮತ್ತು 30 ಜನರು ಗಾಯಗೊಂಡಿದ್ದಾರೆ. ಘರ್ಷಣೆಯಲ್ಲಿ ೩೦ ಕ್ಕೂ ಹೆಚ್ಚು ಸಾವುಗಳು ಸಂಭವಿಸಿವೆ ಎಂದು ಸ್ವತಂತ್ರ ಮತ್ತು ಮಾಧ್ಯಮ ಮೂಲಗಳು ವರದಿ ಮಾಡಿವೆ. ಘರ್ಷಣೆಯಲ್ಲಿ ಮನೆಗಳು ಮತ್ತು ಅಂಗಡಿಗಳು ಸಹ ಹಾನಿಗೊಳಗಾಗಿವೆ. ವಿವಿಧ ಗ್ರಾಮಗಳ ಜನರು ಸುರಕ್ಷಿತ ಸ್ಥಳಗಳಿಗೆ…
ಬೆಂಗಳೂರು: ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳು ದಿಗ್ವಿಜಯ ಸಾಧಿಸಿದ್ದಾರೆ. ಚನ್ನಪಟ್ಟಣದಲ್ಲಿ ಸಿಪಿ ಯೋಗೇಶ್ವರ್, ಶಿಗ್ಗಾಂವಿಯಲ್ಲಿ ಯಾಸಿರ್ ಅಹ್ಮದ್ ಪಠಾಣ್ ಹಾಗೂ ಸಂಡೂರಿನಲ್ಲಿ ಅನ್ನಪೂರ್ಣ ತುಕಾರಾಂ ಗೆಲುವು ಸಾಧಿಸಿದ್ದಾರೆ. ಕಾಂಗ್ರೆಸ್ ಸರ್ಕಾರವನ್ನು ಅಭೂತಪೂರ್ವಕವಾಗಿ ಬೆಂಬಲಿಸಿದ ಕರ್ನಾಟಕ ಜನತೆಗೆ ಸಚಿವ ಪ್ರಿಯಾಂಕ್ ಖರ್ಗೆ ಧನ್ಯವಾದಗಳನ್ನು ಹೇಳಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಚನ್ನಪಟ್ಟಣ, ಶಿಗ್ಗಾವಿ ಹಾಗೂ ಸಂಡೂರು, ಮೂರೂ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಆಶೀರ್ವದಿಸಿದ ಮತದಾರರಿಗೆ ಧನ್ಯವಾದಗಳು. ಈ ಉಪ ಚುನಾವಣೆಯ ಅಭೂತಪೂರ್ವ ಫಲಿತಾಂಶವು ನಮ್ಮ ಸರ್ಕಾರದ ಜನಪರ ಆಡಳಿತಕ್ಕೆ, ಅಭಿವೃದ್ಧಿಪರ ನೀತಿಗೆ ಹಾಗೂ ಜನರ ಬದುಕನ್ನು ಬದಲಿಸಿದ ಗ್ಯಾರಂಟಿ ಯೋಜನೆಗಳ ಯಶಸ್ಸಿಗೆ ಹಿಡಿದ ಕನ್ನಡಿಯಾಗಿದೆ. ಈ ಉಪ ಚುನಾವಣೆಯ ಗೆಲುವು ನಮ್ಮ ಸರ್ಕಾರಕ್ಕೆ ಮತ್ತಷ್ಟು ಬಲ ನೀಡಿದೆ, ಇನ್ನಷ್ಟು ಜನಹಿತದ ಕಾರ್ಯಕ್ರಮಗಳನ್ನು ಕೈಗೊಳ್ಳಲು ಪ್ರೇರಣೆ ಮತ್ತು ಚೈತನ್ಯವನ್ನು ನೀಡಿದೆ ಎಂದಿದ್ದಾರೆ. ಕರ್ನಾಟಕದ ಪ್ರಬುದ್ಧ ಹಾಗೂ ಪ್ರಜ್ಞಾವಂತ ಮತದಾರರು ಪ್ರಗತಿ, ಶಾಂತಿ, ಸೌಹಾರ್ದತೆಯನ್ನು ಬಯಸುತ್ತಾರೆ, ಭವಿಷ್ಯ ರೂಪಿಸುವ ಉದ್ಯೋಗ…
ಬೆಂಗಳೂರು: ಬಿಜೆಪಿಯ ಕೋಮು ಆಧಾರಿತ ಕ್ಷುಲ್ಲಕ ರಾಜಕಾರಣ ನಡೆಯಲ್ಲ ಎಂಬ ಸಂದೇಶವನ್ನ ಮೂರು ಕ್ಷೇತ್ರಗಳಲ್ಲಿ ಜನರು ತಮ್ಮ ಮತದಾನದ ಮೂಲಕ ತೋರ್ಪಡಿಸಿದ್ದಾರೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಜಯಭೇರಿ ಭಾರಿಸಿದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಸಚಿವರು, ಚುನಾವಣೆಯಲ್ಲಿ ಬಿಜೆಪಿ ಸುಳ್ಳಿನ ಪ್ರಚಾರ ನಡೆಸಿತ್ತು ಎಂದರು. ಒಂದು ಸಮುದಾಯವನ್ನ ಟಾರ್ಗೆಟ್ ಮಾಡುವ ಬಿಜೆಪಿಯ ಕ್ಷುಲ್ಲಕ ರಾಜಕಾರಣವನ್ನ ನಾವು ಒಪ್ಪುವುದಿಲ್ಲ ಎಂಬ ಸಂದೇಶವನ್ನ ಜನರು ನೀಡಿದ್ದಾರೆ. ಕಾಂಗ್ರೆಸ್ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಜನರು ಸ್ಪಂದಿಸಿದ್ದಾರೆ. ಈ ಚುನಾವಣೆಯ ಫಲಿತಾಂಶ ಕಾಂಗ್ರೆಸ್ ಸರ್ಕಾರ ಇನ್ನಷ್ಟು ಒಳ್ಳೆಯ ಕೆಲಸಗಳನ್ನ ಮಾಡಲು ಪ್ರೇರಣೆಯಾಗಿದೆ ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು. ಸಂಡೂರ ಕಾಂಗ್ರೆಸ್ ಗೆದ್ದ ಕ್ಷೇತ್ರವಾಗಿತ್ತು. ಅಲ್ಲಿ ಗೆಲ್ಲುವ ವಿಶ್ವಾಸವಿತ್ತು. ಶಿಗ್ಗಾವಿಯಲ್ಲಿ ಕಾಂಗ್ರೆಸ್ ಗೆಲುವು ಪಕ್ಷಕ್ಕೆ ಹೆಚ್ಚಿನ ಬಲ ತುಂಬಲಿದೆ. ಅಲ್ಪಸಂಖ್ಯಾತ ಸಮುದಾಯದ ಕಾಂಗ್ರೆಸ್ ಅಭ್ಯರ್ಥಿ ಗೆದ್ದಿರುವುದು ಬಿಜೆಪಿಯ ಕೋಮು ರಾಜಕಾರಣಕ್ಕೆ ತಕ್ಕ ಪಾಠ ಕಲಿಸಿದಂತಾಗಿದೆ. ಚೆನ್ನಪಟ್ಟಣದಲ್ಲಿ ಕಾಂಗ್ರೆಸ್ ಗೆ ಮೊದಲಿನಿಂದಲು ಬೆಂಬಲವಿತ್ತು. ಕುಮಾರಸ್ವಾಮಿ…
ಬೆಂಗಳೂರು: ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಯಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿ ವಿಜಯ ಸಾಧಿಸಿದೆ. ಜೊತೆಗೆ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ದೃಷ್ಟಿಯಿಂದ ಕಾಂಗ್ರೆಸ್ಗೆ ಮತ ಹಾಕಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮೂರು ಕ್ಷೇತ್ರಗಳ ಉಪಚುನಾವಣೆಯಲ್ಲಿ ಜನರು ನೀಡಿದ ತೀರ್ಪಿಗೆ ತಲೆಬಾಗುತ್ತೇನೆ. ಶಿಗ್ಗಾಂವಿ, ಚನ್ನಪಟ್ಟಣದಲ್ಲಿ ಕೊನೆ ಗಳಿಗೆಯಲ್ಲಿ ಅಭ್ಯರ್ಥಿಯನ್ನು ತೀರ್ಮಾನಿಸಲಾಗಿತ್ತು. ಇದು ನಮಗೆ ನಕಾರಾತ್ಮಕವಾಗಿ ಪರಿಣಮಿಸಿದೆ. ಸಂಡೂರಿನಲ್ಲಿ ಉತ್ತಮ ಸ್ಪರ್ಧೆ ನೀಡಲಾಗಿದೆ. ನಿಖಿಲ್ ಕುಮಾರಸ್ವಾಮಿ ಎರಡು ಬಾರಿ ಸೋತಿದ್ದಾರೆ ಎಂಬ ಅನುಕಂಪವಿದ್ದು, ಈ ಬಾರಿ ಗೆಲ್ಲುವ ನಿರೀಕ್ಷೆ ಇತ್ತು. ಆದರೆ ಆ ನಿರೀಕ್ಷೆ ಸುಳ್ಳಾಗಿದೆ. ಇದು ಸಿದ್ದರಾಮಯ್ಯ ಅಥವಾ ಡಿ.ಕೆ.ಶಿವಕುಮಾರ್ ಅವರ ಗೆಲುವಲ್ಲ. ಈ ಮೂರು ಕ್ಷೇತ್ರಗಳಲ್ಲಿ ಕಾಂಗ್ರೆಸ್ ಹಣದ ಹೊಳೆ ಹರಿಸಿದೆ. ಅಧಿಕಾರಿಗಳು, ಗುತ್ತಿಗೆದಾರರು ಸರ್ಕಾರದ ಪರವಾಗಿ ಕೆಲಸ ಮಾಡಿದ್ದಾರೆ. ಅಧಿಕಾರವಿದ್ದಾಗ ಜನರು ಕೂಡ ಅಭಿವೃದ್ಧಿಯಿಂದ ವಂಚಿತರಾಗುತ್ತೇವೆ ಎಂಬ ಭಯದಿಂದ ಮತ ಹಾಕುತ್ತಾರೆ ಎಂದರು. ಈ ಫಲಿತಾಂಶದ ಕುರಿತು ಪಕ್ಷದ ವೇದಿಕೆಯಲ್ಲಿ…
ಬೆಂಗಳೂರು: ನಮ್ಮ ಆಡಳಿತ ಮೇಲೆ ವಿಶ್ವಾಸವಿಟ್ಟು ಕಾಂಗ್ರೆಸ್ ಪಕ್ಷವನ್ನು ಬೆಂಬಲಿಸಿದ ಸಂಡೂರು, ಶಿಗ್ಗಾಂವಿ ಮತ್ತು ಚನ್ನಪಟ್ಟಣದ ಮತದಾರರಿಗೆ ಅನಂತ ಧನ್ಯವಾದಗಳು ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು 3 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಿದ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ವಿಧಾನಸಭಾ ಉಪಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳಿಗೆ ಮತನೀಡಿ, ಆಶೀರ್ವದಿಸಿದ ಶಿಗ್ಗಾಂವಿ, ಸಂಡೂರು ಹಾಗೂ ಚನ್ನಪಟ್ಟಣದ ಮತದಾರರಿಗೆ ನನ್ನ ಪ್ರೀತಿಪೂರ್ವಕ ಧನ್ಯವಾದಗಳು ಎಂದಿದ್ದಾರೆ. ಈ ಮೂರೂ ಕ್ಷೇತ್ರಗಳಲ್ಲಿ ಭರ್ಜರಿ ಜಯ ದಾಖಲಿಸಿ, ವಿಧಾನಸಭೆಗೆ ಪ್ರವೇಶಿಸಿರುವ ನಮ್ಮ ಅಭ್ಯರ್ಥಿಗಳಾದ ಯಾಸಿರ್ ಅಹ್ಮದ್ ಖಾನ್ ಪಠಾಣ್, ಅನ್ನಪೂರ್ಣ ತುಕಾರಾಮ್ ಹಾಗೂ ಸಿ.ಪಿ. ಯೋಗೇಶ್ವರ್ ಅವರಿಗೆ ಹೃದಯಪೂರ್ವಕ ಅಭಿನಂದನೆಗಳು ಅಂತ ಹೇಳಿದ್ದಾರೆ. ವಿಪಕ್ಷಗಳ ನಿರಂತರ ಅಪಪ್ರಚಾರ, ಸುಳ್ಳು ಆರೋಪಗಳನ್ನು ಮೆಟ್ಟಿನಿಂತು ನಾವು ಸಾಧಿಸಿರುವ ಈ ಗೆಲುವು ದಿಗ್ವಿಜಯವಾಗಿ ಕಾಣುತ್ತಿದೆ. ಈ ಗೆಲುವಿನ ಹಿಂದಿರುವ ನಮ್ಮ ಕಾರ್ಯಕರ್ತರು ಮತ್ತು ಮುಖಂಡರ ಅಪಾರ ಶ್ರಮವನ್ನು ಇದೇ ವೇಳೆ ನೆನೆಯುತ್ತೇನೆ ಅಂತ ತಿಳಿಸಿದ್ದಾರೆ. ಈ ಗೆಲುವು ನಮ್ಮ…
ಬೆಂಗಳೂರು: ಅಚ್ಚರಿಯ ಬೆಳವಣಿಗೆಯೊಂದರಲ್ಲಿ ಬೆಂಗಳೂರಿನ ಹೆಣ್ಣೂರು ಠಾಣಾ ವ್ಯಾಪ್ತಿಯಲ್ಲಿನ ಪ್ರಕರಣವೊಂದರಲ್ಲಿ ಸ್ಥಳೀಯ ಪೊಲೀಸರ ಕರ್ತವ್ಯಲೋಪ ಪ್ರಕರಣದಲ್ಲಿ ಖುದ್ದು ಹಾಜರಾಗುವಂತೆ ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರಿನ ನ್ಯಾಯಾಲಯವು ಸಮನ್ಸ್ ಹೊರಡಿಸಿದೆ. ಬೆಂಗಳೂರಿನ ಹೆಣ್ಣೂರು ಠಾಣಾವ್ಯಾಪ್ತಿಯಲ್ಲಿ ಕೆಲವು ದಿನಗಳ ಹಿಂದೆ ಕೇರಳ ಮೂಲದ ವ್ಯಕ್ತಿಯ ಕೌಟುಂಬಿಕ ವ್ಯಾಜ್ಯದ ನಡುವೆ ಕೆಲವು ರೌಡಿಗಳು ಸಜಿ ಜೋಸೆಫ್ ಎಂಬವರ ಜಮೀನಿಗೆ ನುಗ್ಗಿ ದಾಂದಲೆ ನಡೆಸಿದ್ದ ಘಟನೆ ಭಾರೀ ಸುದ್ದಿಯಾಗಿತ್ತು. ತಾವು ಸಚಿವ ಭೈರತಿ ಸುರೇಶ್ ಸಹಚರರೆಂದು ಹೇಳಿ ಸ್ಥಳೀಯ ರೌಡಿಗಳು ಜಮೀನು ಬಿಟ್ಟುಕೊಡುವಂತೆ ಜೀವಬೆದರಿಕೆಯೊಡ್ಡಿದ್ದರು. ಅಷ್ಟೇ ಅಲ್ಲ, ಕೆಲವು ವ್ಯಕ್ತಿಗಳನ್ನು ಹಾಗೂ ನಿಷೇಧಿತ ನಾಯಿಯನ್ನೂ ಸ್ಥಳದಲ್ಲಿ ನಿಯೋಜಿಸಿದ್ದಾರೆ ಎಂದು ಕಿರುಕುಳಕ್ಕೆ ಒಳಗಾದ ಸಜಿ ಜೋಸೆಫ್ ಆರೋಪಿಸಿದ್ದರು. ರೌಡಿಗಳ ಜೊತೆ ಸ್ಥಳೀಯ ಪೊಲೀಸರೂ ಸ್ಥಳಕ್ಕೆ ಭೇಟಿ ನೀಡಿ ತಮಗೆ ಬೆದರಿಸಿದ್ದರು ಎಂದು ಜೋಸೆಫ್ ಆರೋಪಿಸಿದ್ದರು. ಈ ಸಂಬಂಧ ಗೃಹ ಸಚಿವರು, ರಾಜ್ಯ ಪೊಲೀಸ್ ಮಹಾನಿರ್ದೇಶಕರು ಹಾಗೂ ಪೊಲೀಸ್ ಆಯುಕ್ತರು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಆದರೂ ಪೊಲೀಸರು…
ಬೆಂಗಳೂರು: ‘ಕತ್ತಲೆ ಜಗತ್ತು’ ಈ ಪುಸ್ತಕದಲ್ಲಿ ಪ್ರತಾಪ್ ಸಿಂಹ ಅವರ ನಡೆ-ನುಡಿ-ವಿವಾದಗಳ ಬಗ್ಗೆ ಹೆಚ್ಚಾಗಿ ಸಂಗತಿಗಳು ಇದೆ ಎಂಬ ಕಾರಣಕ್ಕಾಗಿ ಬಾರೀ ಸುದ್ದಿಗೆ ಗ್ರಾಸವಾಗಿದೆ. ಪ್ರತಾಪ್ ಸಿಂಹ ಅವರ ರಾಜಕೀಯ ಎದುರಾಳಿಗಳ ಕೈಯಲ್ಲೇ ಈ ಪುಸ್ತಕ ಹರಿದಾಡುತ್ತಿದ್ದು ಈ ಬೆಳವಣಿಗೆ ಬಗ್ಗೆ ಪ್ರತಾಪ್ ಸಿಂಹ ಅವರು ಗಲಿಬಿಲಿಗೊಂಡಿದ್ದಾರೆ. ಈ ಪುಸ್ತಕದಲ್ಲಿನ ಬರಹಗಳು ತಮ್ಮ ಬಗ್ಗೆ ಅಪರಾಚರ ಮಾಡುಂತಿದ್ದು ಇದರ ಬಿಡುಗಡೆಗೆ ನಿರ್ಬಂಧ ಕೋರಿ ಪ್ರತಾಪ್ ಸಿಂಹ ಅವರು ಕೋರ್ಟ್ ಮೊರೆಹೋಗಿದ್ದಾರೆ. ಸಧ್ಯಕ್ಕೆ ಬೆಂಗಳೂರಿನ ಸಿವಿಲ್ ಕೋರ್ಟ್ ‘ಕತ್ತಲೆ ಜಗತ್ತು’ ಪುಸ್ತಕದ ಬಿಡುಗಡೆಗೆ ತಾತ್ಕಾಲಿಕ ತಡೆಯಾಜ್ಞೆ ನೀಡಿದೆ. ಆದರೆ ಅಷ್ಟರಲ್ಲೇ ಸಾವಿರಾರು ಪುಸ್ತಕಗಳು ಮಾರುಕಟ್ಟೆಯಲ್ಲಿ ಬಿಕಾರಿಯಾಗಿವೆ ಎನ್ನಲಾಗುತ್ತಿದೆ. ಪತ್ರಕರ್ತ ಹಾಗೂ ‘ಬೆತ್ತಲೆ ಜಗತ್ತು’ ಅಂಕಣ ಖ್ಯಾತಿಯ ಪ್ರತಾಪ್ ಸಿಂಹ ಎರಡು ಬಾರಿ ಮೈಸೂರು ಲೋಕಸಭಾ ಕ್ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಮೂಲಕ ಸಂಸತ್ತಿಗೆ ಆಯ್ಕೆಗೊಂಡಿದ್ದರಾದರೂ ಕಳೆದ 2024ರ ಲೋಕಸಭಾ ಚುನಾವಣೆಯಲ್ಲಿ ಟಿಕೆಟ್ ವಂಚಿತರಾಗಿದ್ದರು. ಈ ಟಿಕೆಟ್ ವಂಚಿತರಾಗಲು ಕಾರಣ ಏನು ಎಂಬ ಕುತೂಹಲ ಎಲ್ಲರದ್ದಾಗಿದೆ.…