Author: kannadanewsnow09

ಹುಬ್ಬಳ್ಳಿ: ನಗರದಲ್ಲಿ ಡಿ.22ರಂದು ನಡೆದಿದ್ದಂತ ಸಿಲಿಂಡರ್ ಸ್ಪೋಟ ಘಟನೆಯಲ್ಲಿ 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡು ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಾಗಿದ್ದರು. ಇವರಲ್ಲಿ ಈಗಾಗಲೇ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇಂದು ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದು, ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ. ಹುಬ್ಬಳ್ಳಿಯ ಸಾಯಿ ನಗರದ ಈಶ್ವರದೇವಸ್ಥಾನದಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲಿ ಡಿಸೆಂಬರ್.22ರಂದು ಸಿಲಿಂಡರ್ ಸ್ಪೋಟಗೊಂಡು 9 ಅಯ್ಯಪ್ಪ ಮಾಲಾಧಾರಿಗಳು ಗಾಯಗೊಂಡಿದ್ದರು. ಅವರನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇವರಲ್ಲಿ ಈಗಾಗಲೇ ಇಬ್ಬರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. ಇಂದು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅಯ್ಯಪ್ಪ ಮಾಲಾಧಾರಿ ರಾಜು ಅರ್ಲಾಪೂರ ಎಂಬುವರು ಚಿಕಿತ್ಸೆ ಫಲಿಸದೇ ಕೊನೆಯುಸಿರೆಳೆದಿದ್ದಾರೆ. ಹೀಗಾಗಿ ಮೃತರ ಸಂಖ್ಯೆ 3ಕ್ಕೆ ಏರಿಕೆಯಾದಂತೆ ಆಗಿದೆ. ಅಂದಹಾಗೇ ಈಗಾಗಲೇ ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ ತಲಾ 5 ಲಕ್ಷ ಪರಿಹಾರವನ್ನು ಘೋಷಣೆ ಮಾಡಲಾಗಿದೆ. https://kannadanewsnow.com/kannada/kannada-tv-actor-charith-balappa-arrested-for-sexually-assaulting-woman/ https://kannadanewsnow.com/kannada/26-11-mumbai-attack-mastermind-abdul-rehman-makki-passes-away-due-to-cardiac-arrest/

Read More

ಲಾಹೋರ್: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ ನ ಸೋದರ ಮಾವ ಮತ್ತು ನಿಷೇಧಿತ ಜಮಾತ್-ಉದ್-ದವಾ ಉಪ ಮುಖ್ಯಸ್ಥ ಹಫೀಜ್ ಅಬ್ದುಲ್ ರಹಮಾನ್ ಮಕ್ಕಿ ಶುಕ್ರವಾರ ಹೃದಯಾಘಾತದಿಂದ ನಿಧನರಾದರು. ಜಮಾತ್-ಉದ್-ದವಾ (ಜೆಯುಡಿ) ಪ್ರಕಾರ, ಪ್ರೊಫೆಸರ್ ಅಬ್ದುಲ್ ರಹಮಾನ್ ಮಕ್ಕಿ ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದರು ಮತ್ತು ಲಾಹೋರ್ನ ಖಾಸಗಿ ಆಸ್ಪತ್ರೆಯಲ್ಲಿ ಅಧಿಕ ಮಧುಮೇಹದ ನಂತರ ಚಿಕಿತ್ಸೆ ಪಡೆಯುತ್ತಿದ್ದರು. ಮಕ್ಕಿ ಇಂದು ಮುಂಜಾನೆ ಹೃದಯ ಸ್ತಂಭನದಿಂದ ಬಳಲುತ್ತಿದ್ದರು ಮತ್ತು ಅವರು ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು ಎಂದು ಜೆಯುಡಿ ಅಧಿಕಾರಿಯೊಬ್ಬರು ಪಿಟಿಐಗೆ ತಿಳಿಸಿದ್ದಾರೆ. ಜೆಯುಡಿ ಮುಖ್ಯಸ್ಥ ಹಫೀಜ್ ಸಯೀದ್ನ ಸೋದರ ಮಾವ ಮಕ್ಕಿಗೆ 2020 ರಲ್ಲಿ ಭಯೋತ್ಪಾದನಾ ವಿರೋಧಿ ನ್ಯಾಯಾಲಯವು ಭಯೋತ್ಪಾದಕ ಹಣಕಾಸು ಪ್ರಕರಣದಲ್ಲಿ ಆರು ತಿಂಗಳ ಜೈಲು ಶಿಕ್ಷೆ ವಿಧಿಸಿತ್ತು. ಜೆಯುಡಿ ಉಪ ಮುಖ್ಯಸ್ಥ ಮಕ್ಕಿ, ಭಯೋತ್ಪಾದಕ ಹಣಕಾಸು ಪ್ರಕರಣದಲ್ಲಿ ಶಿಕ್ಷೆಗೊಳಗಾದ ನಂತರ ಕಡಿಮೆ ಪ್ರೊಫೈಲ್ ಇಟ್ಟುಕೊಂಡಿದ್ದ. ಪಾಕಿಸ್ತಾನ್ ಮುತಾಹಿದಾ ಮುಸ್ಲಿಂ ಲೀಗ್ (ಪಿಎಂಎಂಎಲ್) ಹೇಳಿಕೆಯಲ್ಲಿ, ಮಕ್ಕಿ ಪಾಕಿಸ್ತಾನ ಸಿದ್ಧಾಂತದ ಪ್ರತಿಪಾದಕರಾಗಿದ್ದರು ಎಂದು…

Read More

ಬೆಂಗಳೂರು: ಖ್ಯಾತ ಕಿರುತೆರೆ ನಟ ಚರಿತ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಮಾಡಲಾಗಿದೆ. ಈ ಸಂಬಂಧ ಅವರ ವಿರುದ್ಧ ಎಫ್ಐಆರ್ ಕೂಡ ದಾಖಲಾಗಿದೆ. ಈ ಪ್ರಕರಣದಲ್ಲಿ ಕಿರುತೆರೆ ನಟ ಚರಿತ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಆರ್ ಆರ್ ನಗರ ಪೊಲೊಲೀಸ್ ಠಾಣೆಯಲ್ಲಿ ಕನ್ನಡದ ಮುದ್ದುಲಕ್ಷಅಮೀ ಸೀರಿಯಲ್ ನಟ ಚರಿತ್ ಬಾಳಪ್ಪ ಅವರ ವಿರುದ್ಧ ಯುವತಿಯೊಬ್ಬಳು ಲೈಂಗಿಕ ದೌರ್ಜನ್ಯ ಆರೋಪ ಮಾಡಿದ್ದಾರೆ. ಈ ಸಂಬಂಧ ದೂರು ನೀಡಿದ ಕಾರಣ, ನಟ ಚರಿತ್ ಬಾಳಪ್ಪ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇನ್ನೂ ಪರಿಚಯದ ಗೆಳತಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಪ್ರಕರಣದ ದಾಖಲಾದ ನಂತ್ರ, ಚರಿತ್ ಬಾಳಪ್ಪ ಅವರನ್ನು ಆರ್ ಆರ್ ನಗರ ಠಾಣೆಯ ಪೊಲೀಸರು ಬಂಧಿಸಿದ್ದಾರೆ. ಚರಿತ್ ಬಾಳಪ್ಪ ಅವರು ಕನ್ನಡದ ಮುದ್ದುಲಕ್ಷ್ಮೀ ಸೀರಿಯಲ್ ಸೇರಿದಂತೆ ಇತರೆ ಧಾರವಾಹಿಗಳಲ್ಲಿ ನಟಿಸಿದ್ದಾರೆ. ಅಲ್ಲದೇ ತೆಲುಗಿನ ಕಿರುತೆರೆಯಲ್ಲೂ ನಟಿಸಿದ್ದಾರೆ. ಅಂದಹಾಗೇ ಯುವತಿ ನೀಡಿರುವಂತ ದೂರಿನಲ್ಲಿ ಕಿರುತೆರೆ ನಟ ಚರಿತ್ ಬಾಳಪ್ಪ ಅವರು ತಮ್ಮ ಮೇಲೆ…

Read More

ನವದೆಹಲಿ: ಭಾರತದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಭಾರತೀಯ ಆರ್ಥಿಕತೆಯನ್ನು ಉದಾರೀಕರಣಗೊಳಿಸಿದ ಕೀರ್ತಿಗೆ ಪಾತ್ರರಾಗಿದ್ದಾರೆ. ಆದರೆ ಅವರ ಅಧಿಕಾರಾವಧಿಯಲ್ಲಿ ಅಂಗೀಕರಿಸಲಾದ ಹಲವಾರು ಹೆಗ್ಗುರುತು ಶಾಸನಗಳು ಅವರ ಪರಂಪರೆಯ ಚರ್ಚೆಗಳಲ್ಲಿ ಹೂತುಹೋಗುತ್ತವೆ. ಸಹಜವಾಗಿ, ಸಿಂಗ್ ಅವರ ಸಾಧನೆಗಳ ಕಿರೀಟದ ರತ್ನವೆಂದರೆ ಭಾರತೀಯ ಆರ್ಥಿಕತೆಯನ್ನು ಉದಾರೀಕರಣಗೊಳಿಸಲು ಅವರು ತಂದ ಸುಧಾರಣೆಗಳು. ಆದರೆ ಅವರ ಆಡಳಿತದಲ್ಲಿ ಅಂಗೀಕರಿಸಲಾದ ಇತರ ಕೆಲವು ಶಾಸನಗಳು ಭಾರತೀಯ ಆರ್ಥಿಕತೆ ಮತ್ತು ಅದರ ಜನರ ಮೇಲೆ ದೀರ್ಘಕಾಲೀನ ಮತ್ತು ಆಳವಾದ ಪರಿಣಾಮಗಳನ್ನು ಬೀರಿದವು. ಸಿಂಗ್ ಅವರು ದೆಹಲಿಯ ಏಮ್ಸ್ ನಲ್ಲಿ ಗುರುವಾರ ಕೊನೆಯುಸಿರೆಳೆದರು. ಅವರಿಗೆ 92 ವರ್ಷ ವಯಸ್ಸಾಗಿತ್ತು. ಇಲ್ಲಿ, ಸಿಂಗ್ ಅವರ ಅಧಿಕಾರಾವಧಿಯಲ್ಲಿ ಅಂಗೀಕರಿಸಲಾದ ಕೆಲವು ಗಮನಾರ್ಹ ಶಾಸನಗಳನ್ನು ನಾವು ನೋಡೋಣ. 1.ಉದ್ಯೋಗ ಖಾತ್ರಿ ಸಿಂಗ್ ಅಧಿಕಾರಕ್ಕೆ ಬಂದ ಒಂದು ವರ್ಷದ ನಂತರ, ಯುಪಿಎ ಸರ್ಕಾರವು 2005 ರಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆಯನ್ನು ಜಾರಿಗೆ ತಂದಿತು. ಇದು ಗ್ರಾಮೀಣ ಭಾರತದಲ್ಲಿ, ವಿಶೇಷವಾಗಿ ದೀನದಲಿತ ವರ್ಗಗಳಲ್ಲಿ…

Read More

ಬೆಳಗಾವಿ : “ಮನಮೋಹನ್ ಸಿಂಗ್ ಅವರು ಈ ದೇಶದ ಶ್ರೇಷ್ಠ ಪ್ರಧಾನ ಮಂತ್ರಿ. ದೇಶದ ಎಲ್ಲಾ ವರ್ಗದ ಜನರನ್ನು ಕಾಪಾಡಿದ ನಿಜವಾದ ಆರ್ಥಿಕ ತಜ್ಞ ಹಾಗೂ ಕ್ರಾಂತಿಕಾರಿ” ಎಂದು ಡಿಸಿಎಂ ಡಿ. ಕೆ.ಶಿವಕುಮಾರ್ ಅವರು ಅಭಿಪ್ರಾಯಪಟ್ಟರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ನಡೆದ ಶ್ರದ್ಧಾಂಜಲಿ ಸಭೆಯಲ್ಲಿ ಶಿವಕುಮಾರ್ ಅವರು ಮಾತನಾಡಿದರು. “ಬೆಂಗಳೂರು ವಿಶ್ವವಿದ್ಯಾನಿಲಯದಲ್ಲಿ ಮನಮೋಹನ್ ಸಿಂಗ್ ಅವರ ಹೆಸರಿನಲ್ಲಿ ಆರ್ಥಿಕ ಸಂಶೋಧನಾ ಹಾಗೂ ಅಧ್ಯಯನ ಕೇಂದ್ರವನ್ನು ಸ್ಥಾಪನೆ ಮಾಡಬೇಕು ಎಂದು ಉನ್ನತ ಶಿಕ್ಷಣ ಸಚಿವರಲ್ಲಿ ಮನವಿ ಮಾಡುತ್ತೇನೆ. ಮುಂದಿನ ಪೀಳಿಗೆಗೆ ಇವರ ಆರ್ಥಿಕ ಕ್ರಾಂತಿ ಸೇರಿದಂತೆ ದೇಶಕ್ಕೆ ನೀಡಿದ ಕೊಡುಗೆಗಳನ್ನು ತಲುಪಿಸುವುದೇ ನಿಜವಾದ ಶ್ರದ್ಧಾಂಜಲಿ. ವಿದ್ಯಾರ್ಥಿಗಳು ಇವರ ಆರ್ಥಿಕ ನೀತಿಗಳನ್ನು ಅಧ್ಯಯನ ಮಾಡುವ ಮೂಲಕ ಮನಮೋಹನ್ ಸಿಂಗ್ ಅವರ ಜ್ಞಾನವನ್ನು ಪಸರಿಸುವ ಹಾಗೂ ಉಳಿಸುವ ಕೆಲಸವಾಗುತ್ತದೆ ” ಎಂದು ಹೇಳಿದರು. “ಮದುವೆಗೆ ಮಸಣಕೋ ಎಂದ ಕಡೆಗೋಡು ಮಂಕುತಿಮ್ಮ ಎನ್ನುವ ಕವಿ ಡಿವಿಜಿ ಅವರ ಮಾತು…

Read More

ಹುಬ್ಬಳ್ಳಿ: ಹಾಡ ಹಗಲೇ ಕಣ್ಣಿಗೆ ಕಾರದಪುಡಿಯನ್ನು ಎರಚಿರುವಂತ ದುಷ್ಕರ್ಮಿಗಳು, ಹಂದಿ ವ್ಯಾಪಾರಿಯನ್ನು ಬರ್ಬರವಾಗಿ ಕೊಚ್ಚಿ ಕೊಲೆ ಮಾಡಿರುವಂತ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ. ಹುಬ್ಬಳ್ಳಿ ಹೊರವಲಯದಲ್ಲಿ ಸ್ಯಾಮುಯೆಲ್(38) ಎಂಬಾತನ ಮೇಲೆ ಹಾಡ ಹಗಲೇ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿದ್ದಾರೆ. ಕಣ್ಣಿಗೆ ಕಾರದಪುಡಿ ಎರಚಿರುವಂತ ದುಷ್ಕರ್ಮಿಗಳು, ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆಗೈದು ಪರಾರಿಯಾಗಿದ್ದಾರೆ. ಮಂಟೂರು ನಿವಾಸಿ ಸ್ಯಾಮುಯೆಲ್ ಎಂಬಾತನನ್ನು ಕೊಲೆಗೈದು ಪರಾರಿಯಾಗಿದ್ದಾರೆ. ಕೊಲೆಯ ಹಿಂದಿನ ಕಾರಣ ಹಳೇ ದ್ವೇಷದಿಂದ ಎನ್ನಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಹುಬ್ಬಳ್ಳಿ ಧಾರವಾಡ ನಗರ ಪೊಲೀಸ್ ಆಯುಕ್ತ ಶಶಿಕುಮಾರ್ ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ಬೆಂಡಿಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/my-mother-in-law-should-die-soon-daughter-in-law-writes-vow-on-note-photo-goes-viral/ https://kannadanewsnow.com/kannada/world-human-day-celebrations-scheduled-to-be-held-in-kuppally-on-december-29-postponed/

Read More

ಶಿವಮೊಗ್ಗ: ಡಿಸೆಂಬರ್.29ರಂದು ಕುಪ್ಪಳ್ಳಿಯಲ್ಲಿ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಆದರೇ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ನಿಧನ ಹಿನ್ನಲೆಯಲ್ಲಿ ಮುಂದೂಡಿಕೆ ಮಾಡಲಾಗಿದೆ. ಈ ಬಗ್ಗೆ ಕುಪ್ಪಳ್ಳಿ ರಾಷ್ಟ್ರಕವಿ ಕುವೆಂಪು ಪ್ರತಿಷ್ಠಾನದ ಕಾರ್ಯದರ್ಶಿ ಕಡಿದಾಳ್ ಪ್ರಕಾಶ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಡಾಕ್ಟರ್ ಮನಮೋಹನ್ ಸಿಂಗ್ ಅವರ ನಿಧನಕ್ಕೆ ಶೋಕಾಚರಣೆ ಇರುವುದರಿಂದ 29- 12 -2024 ರಂದು ಕುಪ್ಪಳಿಯಲ್ಲಿ ನಡೆಯಬೇಕಾಗಿದ್ದ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದಿದ್ದಾರೆ. ಆ ದಿನ ಸಮಾರಂಭ ಕುಪ್ಪಳಿಯಲ್ಲಿ ನಡೆಯುವುದಿಲ್ಲ. ಬೆಳಗ್ಗೆ 10 ರಿಂದ 11 ರವರೆಗೆ ಕವಿಶೈಲದಲ್ಲಿ ಕವಿ ನಮನ ಮಾತ್ರ ಇರುತ್ತದೆ. ಅದೇ ದಿನ ತೀರ್ಥಹಳ್ಳಿಯಲ್ಲಿ ಆಯೋಜಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮವನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/former-suzuki-motor-chairman-osamu-suzuki-who-led-company-for-40-years-dies-at-94-death/ https://kannadanewsnow.com/kannada/my-mother-in-law-should-die-soon-daughter-in-law-writes-vow-on-note-photo-goes-viral/

Read More

ಕಲಬುರ್ಗಿ: ಅತ್ತೆ ಸೊಸೆಯರು ತಾಯಿ ಮಗಳಿದ್ದಂತೆ ಇರಬೇಕು. ಹಾಗೆ ಇದ್ದಾಗ ಮಾತ್ರ ಸಂಸಾರ ಚೆಂದವಾಗಿರುತ್ತದೆ ಅಂತ ಹಿರಿಯರು ಬುದ್ಧಿ ಹೇಳುತ್ತಾರೆ. ಆದರೇ ಇಲ್ಲೊಬ್ಬ ಸೊಸೆ ಮಾತ್ರ ನಮ್ಮ ಅತ್ತೆ ಬೇಗ ಸಾಯಬೇಕು ಅಂತ ದೇವಿಗೆ ನೋಟಿನಲ್ಲಿ ಹರಕೆ ಬರೆದು, ತೀರಿಸುವಂತೆ ಕೋರಿರೋದು ವೈರಲ್ ಆಗಿದೆ. ಕಲಬುರ್ಗಿ ಜಿಲ್ಲೆಯ ಅಫಜಲಪುರ ತಾಲ್ಲೂಕಿನ ಘತ್ತರಗಿ ಗ್ರಾಮದಲ್ಲಿರುವಂತ ಭಾಗ್ಯವಂತಿ ದೇವಿ ತುಂಬಾನೇ ಪ್ರಸಿದ್ಧ ದೇವಸ್ಥಾನ. ಈ ದೇವಾಲಯಕ್ಕೆ ಹಲವೆಡೆಯಿಂದ ಭಕ್ತರು ಆಗಮಿಸಿ ತಮ್ಮ ಹರಕೆಯನ್ನು ತೀರಿಸುವಂತೆ ಭಾಗ್ಯವಂತಿ ದೇವಿಯನ್ನು ಕೋರೋದು ರೂಢಿ. ಈ ದೇವಸ್ಥಾನಕ್ಕೆ ಬಂದಿರುವಂತ ಸೊಸೆಯೊಬ್ಬರು 20 ರೂಪಾಯಿಯ ನೋಟಿನ ಮೇಲೆ ತಾಯಿ ನಮ್ಮ ಅತ್ತೆ ಬೇಗ ಸಾಯಲಿ ತಾಯಿ ಅಂತ ಹರಕೆ ಬರೆದು ಹಾಕಿರೋದು ದೇವಸ್ಥಾನದ ಹುಂಡಿಯನ್ನು ತೆರೆದು ಕಾಣಿಕೆ ಏಣಿಸುವಂತ ಸಂದರ್ಭದಲ್ಲಿ ಪತ್ತೆಯಾಗಿದೆ. 20 ರೂಪಾಯಿ ನೋಟಿನ ಮೇಲೆ ಅತ್ತೆಯ ಬಗ್ಗೆ ಸೊಸೆ ಬರೆದಿರುವಂತ ಬರಹ ಕಂಡಂತ ದೇವಸ್ಥಾನದವರು ಅಚ್ಚರಿ ಪಟ್ಟಿದ್ದಾರೆ. ಈಗ ಈ ಪೋಟೋ ಎಲ್ಲೆಡೆ ವೈರಲ್ ಆಗಿದೆ. ಹೀಗೆ…

Read More

ಮೈಸೂರು: ಹೊಸ ವರ್ಷಾಚರಣೆಗೆ ಜನರು ಎಲ್ಲಿಲ್ಲದ ತಯಾರಿಯಲ್ಲಿ ತೊಡಗಿದ್ದಾರೆ. ಆದರೇ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಹೊಸ ವರ್ಷಾಚರಣೆಗೆ ಬ್ರೇಕ್ ಹಾಕಲಾಗಿದೆ. ಇದಷ್ಟೇ ಅಲ್ಲದೇ ಅರಮನೆ ಆಡಳಿತ ಮಂಡಳಿಯ ಉಪ ನಿರ್ದೇಶಕ ಸುಬ್ರಹ್ಮಣ್ಯ ಅವರು ಆದೇಶ ಮಾಡಿದ್ದು, ಇಂದು, ನಾಳೆ ಅರಮನೆ ವಿದ್ಯುತ್ ದೀಪಾಲಂಕಾರವನ್ನು ಸ್ಥಗಿತಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಮೈಸೂರಿನಲ್ಲಿ ಈ ಬಾರಿ ಹೊಸ ವರ್ಷಾಚರಣೆಗೆ ಬ್ರೇಕ್ ಬಿದ್ದಂತೆ ಆಗಿದೆ. ಜೊತೆಗೆ ಪ್ರವಾಸಿಗರು ರಾತ್ರಿ ಹೊತ್ತಲ್ಲಿ ಮೈಸೂರು ಅರಮನೆಯನ್ನು ವಿದ್ಯುತ್ ದೀಪಾಲಂಕಾರಗಳಿಂದಲೂ ಈ ಬಾರಿ ವೀಕ್ಷಿಸೋದಕ್ಕೆ ಸಾಧ್ಯವಾಗುವುದಿಲ್ಲ. https://kannadanewsnow.com/kannada/breaking-president-draupadi-murmu-pays-last-respects-to-dr-manmohan-singh/ https://kannadanewsnow.com/kannada/former-suzuki-motor-chairman-osamu-suzuki-who-led-company-for-40-years-dies-at-94-death/

Read More

ಬೆಂಗಳೂರು: ಡಿಸೆಂಬರ್.29ರಂದು ಕೆಪಿಎಸ್ಸಿಯಿಂದ 384 ಕೆಎಎಸ್ ಹುದ್ದೆಗಳ ಪೂರ್ವಭಾವಿ ಮರು ಪರೀಕ್ಷೆ ನಡೆಸಲಾಗುತ್ತಿದೆ. ಈ ಪರೀಕ್ಷೆಗೆ ಹಾಜರಾಗುವಂತ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಹೆಚ್ಚುವರಿ ಕೆ ಎಸ್ ಆರ್ ಟಿಸಿ ಬಸ್ ಸಂಚಾರದ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 29.12.2024 ರಂದು ಕರ್ನಾಟಕ ಲೋಕಸೇವಾ ಆಯೋಗದ 2023-24ನೇ ಸಾಲಿನ ಗೆಜೆಟೆಡ್ ಪ್ರೋಬೆಷನರ್ ಗ್ರೂಪ್ ‘ಎ’ ಮತ್ತು ‘ಬಿ’ ವೃಂದದ ಪೂರ್ವಭಾವಿ ಪರೀಕ್ಷೆ ನಡೆಸಲಿದ್ದು, ಬೆಂಗಳೂರಿನಲ್ಲಿ ವಾಸಿಸುತ್ತಿರುವಂತಹ ಸುಮಾರು ಅಭ್ಯರ್ಥಿಗಳಿಗೆ ಬೆಂಗಳೂರಿನ ಸುತ್ತಮುತ್ತಲಿನ ಜಿಲ್ಲಾಗಳಾದ ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಬೆಂಗಳೂರು ಗ್ರಾಮಾಂತರ, ತುಮಕೂರು ಹಾಗೂ ಇನ್ನಿತರ ಜಿಲ್ಲೆಗಳಿಗೆ ಪರೀಕ್ಷೆ ಕೇಂದ್ರಗಳನ್ನು ಗುರುತಿಸಿದ್ದು, ನಿಗದಿತ ಸಮಯದೊಳಗೆ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ ಬೆಂಗಳೂರು ಸುತ್ತಮುತ್ತಲಿನ ಜಿಲ್ಲೆಗಳಿಗೆ ಹೆಚ್ಚುವರಿ ಬಸ್‌ಗಳ ವ್ಯವಸ್ಥೆಯನ್ನು ಕಲ್ಪಿಸುವಂತೆ ಎಕ್ಸ್ ಖಾತೆ ಮೂಲಕ ಮುಖ್ಯಮಂತ್ರಿಗಳ ಸಚಿವಾಲಯಕ್ಕೆ ಸುಮಾರು ಅಭ್ಯರ್ಥಿಗಳು ಮನವಿ ಸಲ್ಲಿಸಿದ್ದು ತ್ವರಿತಗತಿಯಲ್ಲಿ ಅಭ್ಯರ್ಥಿಗಳಿಗೆ ಅನುಕೂಲವಾಗುವಂತೆ…

Read More