Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: “ಮುಸ್ಲಿಮರಿಗೆ ಶೇ.4 ರಷ್ಟು ಮೀಸಲಾತಿ ಎಂದು ಹೇಳಿದವರು ಯಾರು?. ಅಲ್ಪಸಂಖ್ಯಾತರು ಹಾಗೂ ಹಿಂದುಳಿದವರಿಗೆ ನೀಡಲು ಸರ್ಕಾರ ನಿರ್ಧಾರ ಮಾಡಿದೆ. ಅಲ್ಪಸಂಖ್ಯಾತರು ಎಂದರೆ ಕ್ರಿಶ್ಚಿಯನ್, ಜೈನ,ಪಾರ್ಸಿ, ಸಿಖ್ ಹೀಗೆ ಎಲ್ಲರೂ ಸೇರುತ್ತಾರೆ. ಈ ಹಿಂದೆ ಪರಿಶಿಷ್ಟ ಜಾತಿ, ಪಂಗಡವರಿಗೆ ಗುತ್ತಿಗೆ ಮೀಸಲಾತಿ ನೀಡುವಂತೆ ತಿದ್ದುಪಡಿ ಮಾಡಿದ್ದೆವು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಕೆಪಿಸಿಸಿ ಕಚೇರಿ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯೆ ನೀಡಿದರು. ಮುಸ್ಲಿಮರಿಗೆ ಗುತ್ತಿಗೆಯಲ್ಲಿ ಶೇ.4 ರಷ್ಟು ಮೀಸಲಾತಿ ನೀಡಲು ಮಾಡಿರುವ ತೀರ್ಮಾನದ ಬಗ್ಗೆ ಕೇಳಿದಾಗ, “ಕೇವಲ 2 ಕೋಟಿ ಮೊತ್ತಕ್ಕೆ ಮಾತ್ರ ಒಪ್ಪಿಗೆ ನೀಡಲಾಗಿದೆ. ಇದಕ್ಕಿಂತ ಹೆಚ್ಚಿನ ಮೊತ್ತದ ಕಾಮಗಾರಿ ನಡೆಸಲು ಸಾಧ್ಯವಿಲ್ಲ. ನಾವು ಬೇರೆ ಯಾರ ಹಕ್ಕನ್ನು ಇಲ್ಲಿ ಕಸಿದುಕೊಳ್ಳುತ್ತಿಲ್ಲ ಅವರಿಗೂ ನಾವು ಬದುಕು ಕೊಡಬೇಕಲ್ಲವೇ?” ಎಂದು ಹೇಳಿದರು. ಬಿಜೆಪಿಯು ಗುತ್ತಿಗೆ ಮೀಸಲಾತಿಯನ್ನು ಮತ ಬ್ಯಾಂಕ್ ರಾಜಕಾರಣ ಎನ್ನುತ್ತಿದೆ ಎಂದಾಗ, “ಅವರು ನಮ್ಮನ್ನು ನೆನಪಿಸಿಕೊಳ್ಳುತ್ತಾ ಇರಬೇಕು.ಆಗಲೇ ನಾವು ಗಟ್ಟಿಯಾಗವುದು” ಎಂದರು. ಕಸ ವಿಲೇವಾರಿ ವಿಚಾರದಲ್ಲಿ…
ಬೆಂಗಳೂರು: ನಟಿ ರನ್ಯಾ ರಾವ್ ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಬಂಧನವಾಗಿದೆ. ಈ ಕೇಸ್ ನಂತ್ರ ಡಿಜಿಪಿ ಡಾ.ರಾಮಚಂದ್ರ ರಾವ್ ಅವರ ವಿರುದ್ಧವೂ ಈ ಪ್ರಕರಣದಲ್ಲಿ ಭಾಗಿಯಾಗಿರೋ ಆರೋಪ ಕೇಳಿ ಬಂದಿತ್ತು. ಹೀಗಾಗಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ‘ಕಡ್ಡಾಯ ರಜೆ’ ಮೇಲೆ ಕಳುಹಿಸಲಾಗಿದೆ. ಈ ಸಂಬಂಧ ರಾಜ್ಯ ಸರ್ಕಾರ ಆದೇಶ ಹೊರಡಿಸಿದ್ದು, ಐಪಿಎಸ್ ಅಧಿಕಾರಿ ಕೆವಿ ಶರತ್ ಚಂದ್ರ ಅವರನ್ನು ಎಡಿಜಿಪಿ, ನೇಮಕಾತಿಯಿಂದ ವರ್ಗಾವಣೆ ಮಾಡಿ, ಛೇರ್ ಮೆನ್ ಮತ್ತು ಮ್ಯಾನೇಜಿಂಗ್ ಡೈರೆಕ್ಟರ್, ಕರ್ನಾಟಕ ರಾಜ್ಯ ಪೊಲೀಸ್ ಹೌಸಿಂಗ್ ಮತ್ತು ಇನ್ಫಾಸ್ಟ್ರಕ್ಚರ್ ಡೆಲವೆಲಪ್ ಮೆಂಟ್ ಕಾರ್ಪೊರೇಷನ್ ಲಿಮಿಟೆಡ್, ಬೆಂಗಳೂರು ಇಲ್ಲಿಗೆ ವರ್ಗಾವಣೆ ಮಾಡಲಾಗಿದೆ. ಇನ್ನೂ ಈ ಹುದ್ದೆಯಲ್ಲಿದ್ದಂತ ಐಪಿಎಸ್ ಅಧಿಕಾರಿ ಡಾ.ಕೆ ರಾಮಚಂದ್ರ ರಾವ್ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಚಿನ್ನ ಕಳ್ಳಸಾಗಣೆ ಪ್ರಕರಣದಲ್ಲಿ ನಟಿ ರನ್ಯ ರಾವ್ ಬಂಧನದ ಬಗ್ಗೆ ಆಘಾತ ಮತ್ತು ವಿನಾಶವನ್ನು ಕರ್ನಾಟಕ ರಾಜ್ಯ ಪೊಲೀಸ್ ವಸತಿ ನಿಗಮದ ಮಹಾನಿರ್ದೇಶಕ (ಕರ್ನಾಟಕ…
ಬೆಂಗಳೂರು: ಬಿಸಿಲಿನ ತಾಪಮಾನ ಹೆಚ್ಚಾಗುತ್ತಿದ್ದು, ಜನರ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಸಾರ್ವಜನಿಕ ಆರೋಗ್ಯ ಸಲಹೆಯನ್ನು ಅನುಸರಿಸುವ ಮೂಲಕ ತಮ್ಮ ಆರೋಗ್ಯದ ಕಾಳಜಿ ವಹಿಸವಂತೆ ಹವಾಮಾನ ಇಲಾಖೆ ತಿಳಿಸಿದೆ. ಈ ಬಾರಿ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಅಲ್ಲದೆ ಮಾರ್ಚ್ ಯಿಂದ ಮೇ ವರೆಗೆ ವಾತಾರವಣದಲ್ಲಿ ಬಿಸಿಗಾಳಿ ಬೀಸಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ವರದಿ ನೀಡಿದೆ. ಇದರಿಂದಾಗಿ ವಾತಾವರಣದಲ್ಲಿ ಅನೇಕ ರೀತಿಯ ಬದಲಾವಣೆ ಉಂಟಾಗಿ ಆರೋಗ್ಯದ ಮೇಲೆ ಪರಿಣಾಮ ಬೀರುವ ಸಾಧ್ಯತೆ ಇದ್ದು, ಜಿಲ್ಲೆಯ ಜನರು ತಮ್ಮ ಆರೋಗ್ಯದÀ ಬಗ್ಗೆ ಹೆಚ್ಚಿನ ಕಾಳಜಿ ವಹಿಸಬೇಕು. ಜಿಲ್ಲೆಯಲ್ಲಿ ಬಿಸಿಲು ಹೆಚ್ಚಾಗಿದೆ. ದಿನೇ ದಿನೇ ಸಾರ್ವಜನಿಕರು ಕೆಲಸದ ಒತ್ತಡದ ಜೊತೆಗೆ ಬಿಸಿಲಿನ ಬೇಗೆಯನ್ನು ಸಹಿಸಿಕೊಳ್ಳದ ಸ್ಥಿತಿಗೆ ತಲುಪಿದ್ದಾರೆ. ಇದರಿಂದ ಮಾನಸಿಕವಾಗಿ ಹಾಗೂ ದೈಹಿಕವಾಗಿ ಕುಗ್ಗುತ್ತಿದ್ದಾರೆ. ಈ ಸಂದರ್ಭದಲ್ಲಿ ಸಾಮಾನ್ಯವಾಗಿ ಮನುಷ್ಯನ ದೇಹದ ಉಷ್ಣತೆಯು 36.4 ಡಿಗ್ರಿ ಸೆ ನಿಂದ 37.2 ಡಿಗ್ರಿ ಸೆ( 97.5 ಡಿಗ್ರಿ ಸೆ ಎಫ್ ನಿಂದ 98.9…
ಎಂಟು ದಿಕ್ಕುಗಳನ್ನು ಕಾಯುವ ದೇವತೆಗಳೇ ಅಷ್ಟ ದಿಕ್ಪಾಲಕರು. ದಿಕ್ಪಾಲಕ ಅಂದರೆ ರಕ್ಷಣೆ ನೀಡುವವ ಎಂದರ್ಥ. ಬ್ರಹ್ಮಾಂಡ ಅನಂತವಾದುದು. ಮಾಪನಕ್ಕೇ ನಿಲುಕದ ಬ್ರಹ್ಮಾಂಡವನ್ನು ಎಂಟು ದಿಕ್ಕುಗಳಿಂದ ಗುರುತಿಸುತ್ತಾರೆ. ಸನಾತನ ಪರಂಪರೆಯ ಪ್ರಕಾರ ಬ್ರಹ್ಮಾಂಡವನ್ನು ಪೊರೆಯುವಾತನೇ ಭಗವಂತ. ಅಂತೆಯೇ ಪ್ರತಿಯೊಂದು ದಿಕ್ಕಿಗೂ ಒಬ್ಬೊಬ್ಬರು ಅಧಿ ದೇವತೆಗಳಿದ್ದಾರೆ. ವಾಸ್ತುಶಾಸ್ತ್ರದ ಪ್ರಕಾರ ಅಷ್ಟದಿಕ್ಪಾಲಕರು: ಇಂದ್ರ-ಪೂರ್ವ, ಕುಬೇರ-ಉತ್ತರ, ಯಮ-ದಕ್ಷಿಣ, ವರುಣ-ಪಶ್ಚಿಮ, ಈಶಾನ (ಶಿವ)- ಈಶಾನ್ಯ, ಅಗ್ನಿ-ಆಗ್ನೇಯ, ವಾಯು-ವಾಯುವ್ಯ, ನಿರುಋುತಿ(ರಾಕ್ಷಸ)- ನೈಋುತ್ಯ. ಇಂದ್ರ: ಇಂದ್ರನು ದೇವತೆಗಳ ರಾಜ. ಸ್ವರ್ಗಲೋಕದ ಒಡೆಯ. ಮಳೆ ಮತ್ತು ಮಿಂಚುಗಳ ಅಧಿಧಿದೇವತೆ. ಐರಾವತ ಇವನ ವಾಹನ. ವಜ್ರಾಯುಧ ಇವನ ಆಯುಧ. ಅಧಿತಿಯ ಇಬ್ಬರು ಮಕ್ಕಳಲ್ಲಿ ಒಬ್ಬನಾದ ಇವನನ್ನು ಆದಿತ್ಯ ಎಂತಲೂ ಕರೆಯುತ್ತಾರೆ. ಅಗ್ನಿ: ಬೆಂಕಿಯ ದೇವತೆ. ಅವನೇ ಯಜ್ಞ ಪುರುಷ. ಹೋಮ, ಹವನಗಳಲ್ಲಿ ಅರ್ಪಣೆಯಾಗುವ ಹವಿಸ್ಸನ್ನು ಸಂಬಧಿಂಧಿತ ದೇವತೆಗಳಿಗೆ ಮುಟ್ಟಿಸುತ್ತಾನೆ. ದೇವತೆಗಳ ಸಂದೇಶವಾಹಕನಾಗಿ ಕೆಲಸ ನಿರ್ವಹಿಸುತ್ತಾನೆ. ಅಗ್ನಿಯು ಪೃಥ್ವಿಗೆ ಅಧಿಧಿಪತಿಯಾದ ದೇವತೆ ಎಂದೂ ಪ್ರಸಿದ್ಧ. ಯಮ: ಹಿಂದೂ ಪುರಾಣಗಳ ಪ್ರಕಾರ ಯಮರಾಜನೇ ಮೃತ್ಯುದೇವತೆ. ಕಾಲಪುರುಷ ಎಂತಲೂ…
ರಾಯಚೂರು: ಗರ್ಭಕೋಶದ ಕ್ಯಾನ್ಸರ್ ತಡೆಗಟ್ಟುವ ನಿಟ್ಟಿನಲ್ಲಿ ಕಲ್ಯಾಣ ಕರ್ನಾಟಕ ಭಾಗದ ಹೆಣ್ಣುಮಕ್ಕಳಿಗೆ ಈ ವರ್ಷದಿಂದ ಉಚಿತವಾಗಿ HPV ಲಸಿಕೆಯನ್ನ ನೀಡಲಾಗುವುದು ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ರಾಯಚೂರಿನ ಮಾನ್ವಿಯಲ್ಲಿ ಇಂದು ಬೃಹತ್ ಉಚಿತ ಆರೋಗ್ಯ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಸಚಿವರು, ಕಲ್ಯಾಣ ಕರ್ನಾಟಕದ ಭಾಗದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಸಾಕಷ್ಟು ಸುಧಾರಣೆ ತರುವ ಅಗತ್ಯತೆಯಿದ್ದು, ಈ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆಯಿಟ್ಟದೆ ಎಂದರು. ಲಸಿಕಾ ಕಾರ್ಯಕ್ರಮಗಳನ್ನು ಕೇಂದ್ರ ಸರ್ಕಾರ ಕೈಗೊಳ್ಳಬೇಕು. ಈ ನಿಟ್ಟಿನಲ್ಲಿ HPV ಲಸಿಕೆ ನೀಡುವುದನ್ನ ಒಂದು ರಾಷ್ಟ್ರೀಯ ಕಾರ್ಯಕ್ರಮವನ್ನಾಗಿ ಜಾರಿಗೊಳಿಸುವಂತೆ ಹಲವು ಬಾರಿ ಕೇಂದ್ರಕ್ಕೆ ಮನವಿ ಮಾಡಲಾಗಿದೆ. ಆದರೆ ಕೇಂದ್ರ ಸರ್ಕಾರ ಇಲ್ಲಿಯ ವರೆಗೂ ಕಾರ್ಯಕ್ರಮವನ್ನ ಕಾರ್ಯಗತಗೊಳಿಸಿಲ್ಲ. ಹೀಗಾಗಿ ರಾಜ್ಯ ಸರ್ಕಾರವೇ ಈ ವರ್ಷದಿಂದ ಯೋಜನೆಯನ್ನ ಕೈಗೆತ್ತಿಕೊಳ್ಳಲು ನಿರ್ಧರಿಸಿದ್ದು, ಕಲ್ಯಾಣ ಕರ್ನಾಟಕ ಭಾಗದ 14 ವರ್ಷದ ಹೆಣ್ಣುಮಕ್ಕಳಿಗೆ HPV ಲಸಿಕೆ ನೀಡಲಿದೆ. ದೇಶದಲ್ಲಿಯೇ ಈ ರೀತಿಯ ಕಾರ್ಯಕ್ರಮವನ್ನ ನೀಡುತ್ತಿರುವ ಮೊದಲ ರಾಜ್ಯ ಕರ್ನಾಟಕ ಎಂದು…
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕೆಲ ಪ್ರದೇಶಗಳಲ್ಲಿ ನಾಳೆ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ: 16.03.2025ರ ಭಾನುವಾರದ ನಾಳೆ ಎಫ್-17 ಎಸ್.ಎನ್ ನಗರ 11ಕೆ.ವಿ ಮಾರ್ಗದ ವಾಹಕ ಬದಲಾವಣೆ ಕಾರ್ಯ ಹಮ್ಮಿಕೊಂಡಿರುವುದರಿಂದ ನಾಳೆ ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಸಾಗರ ತಾಲ್ಲೂಕಿನ ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ ಅಂತ ತಿಳಿಸಿದೆ. ನಾಳೆ ಸಾಗರ ತಾಲ್ಲೂಕಿನ ಈ ಪ್ರದೇಶಗಳಲ್ಲಿ ಕರೆಂಟ್ ಇರೋದಿಲ್ಲ ವಿನೋಬನಗರ, ಮಂಕಳಲೆ, ನೆಹರುನಗರ, ಅರಳೀಕೊಪ್ಪ, ಜನ್ನತ್ನಲ್ಲಿ, ಸಿಗಂದೂರು ಮಾರ್ಕೆಟ್ ರಸ್ತೆ, ಜೋಸೆಫ್ ನಗರ, ಕೃಷ್ಣ ಗ್ಯಾರೇಜ್, ಎಲ್.ಐ.ಸಿ ಆಫೀಸ್ ಹತ್ತಿರ ಮತ್ತು ಎಫ್-17 ಎಸ್.ಎನ್ ನಗರ ಫೀಡರ್ ಮಾರ್ಗದಿಂದ ವಿದ್ಯುತ್ ಸಂಪರ್ಕ ಪಡೆದಿರುವ ಗಾಂಧೀನಗರ, ಬಿ.ಕೆ ರಸ್ತೆ, ರಾಮನಗರ, ಹೆಗಡೆ ಫಾರಂನಲ್ಲಿ ಪವರ್ ಕಟ್ ಆಗಲಿದೆ. ಎಸ್.ಎನ್ ನಗರ, ಕಂಬಳಿಕೊಪ್ಪ, ಚಿಪ್ಪಿ ಮತ್ತು ಆಧಿಶಕ್ತಿನಗರ ಪ್ರದೇಶಗಳಲ್ಲಿ ಬೆಳಗ್ಗೆ: 10:00 ಘಂಟೆಯಿಂದ…
ಬೆಂಗಳೂರು: ರಾಜ್ಯದ ಉತ್ತರ ಒಳನಾಡಿನ ಜಿಲ್ಲೆಗಳಲ್ಲಿ ಮಾರ್ಚ್.18 ಮತ್ತು 19ರಂದು ಬಿಸಿ ಗಾಳಿಯ ಪರಿಸ್ಥಿತಿ ಹೆಚ್ಚಾಗಿರಲಿದೆ. ಜನರನ್ನು ಎಚ್ಚರಿಸುವ ಸಲುವಾಗಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಕುರಿತಂತೆ ಹವಾಮಾನ ಇಲಾಖೆಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕ ರಾಜ್ಯದಲ್ಲಿ ಕಳೆದ 24 ಗಂಟೆಗಳ ಕಲಬುರಗಿ ಜಿಲ್ಲೆಯ ಐನಾಪುರ ಹೋಬಳಿಯಲ್ಲಿ ರಾಜ್ಯದಲ್ಲಿಯೇ ಗರಿಷ್ಠ 42.8 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಕಲಬುರಗಿ, ಬೀದರ್, ಬಾಗಲಕೋಟೆ, ರಾಯಚೂರು, ಯಾದಗಿರಿ ಮತ್ತು ವಿಜಯಪುರ ಜಿಲ್ಲೆಗಳ ಹಲವೆಡೆ ಮತ್ತು ಬಾಗಲಕೋಟೆ ಮತ್ತು ಬೆಳಗಾವಿ ಜಿಲ್ಲೆಗಳ ಕೆಲವು ಸ್ಥಳಗಳು ಮತ್ತು ತುಮಕೂರು, ಬಳ್ಳಾರಿ, ಗದಗ, ಕೊಪ್ಪಳ, ಉತ್ತರ ಕನ್ನಡ, ಕನ್ನಡ, ವಿಜಯನಗರ, ಚಿಕ್ಕಬಳ್ಳಾಪುರ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ 40 ° C ಗಿಂತ ಹೆಚ್ಚಿನ ತಾಪಮಾನ ದಾಖಲಾಗಿದೆ. https://twitter.com/KarnatakaSNDMC/status/1900868481785954763 ಕೆಎಸ್ಎನ್ಡಿಎಂಸಿ ಹವಾಮಾನ ಮೇಲ್ವಿಚಾರಣಾ ಜಾಲದ ಪ್ರಕಾರ, ಕಲಬುರಗಿ ಜಿಲ್ಲೆಯ 17 ಸ್ಥಳಗಳು, ಬೀದರ್ ಮತ್ತು ರಾಯಚೂರು ಜಿಲ್ಲೆಗಳಲ್ಲಿ ತಲಾ 13 ಸ್ಥಳಗಳು, ವಿಜಯಪುರ ಜಿಲ್ಲೆಯ…
ಬೆಂಗಳೂರು: ರಾಜ್ಯದ ತೆಂಗು ಬೆಳಗಾರರಿಗೆ ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರದಿಂದ ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾಧೆ ನಿಯಂತ್ರಣಕ್ಕೆ ಕ್ರಮ ಕೈಗೊಳ್ಳಲಾಗುತ್ತಿದೆ. ತೆಂಗಿನ ಮರಗಳಿಗೆ ಹರಡುವ ಬಿಳಿನೊಣದ ಕೀಟಭಾದೆ ನಿಯಂತ್ರಣಕ್ಕೆ ಸರ್ಕಾರ ಕ್ರಮ ಕೈಗೊಂಡಿದೆ. ಸಮಗ್ರ ಪೋಷಕಾಂಶ ಮತ್ತು ಕೀಟ ಹಾಗೂ ರೋಗಗಳ ನಿರ್ವಹಣೆಗೆ ಪ್ರಸಕ್ತ ಸಾಲಿನಲ್ಲಿ ತೆಂಗು ಅಭಿವೃದ್ಧಿ ಮಂಡಳಿಗೆ ₹15.31 ಕೋಟಿ ಅನುದಾನವನ್ನು ಒದಗಿಸಲಾಗಿದೆ ಎಂದು ಕೈಗಾರಿಕಾ ಸಚಿವರಾದ ಎಂ.ಬಿ ಪಾಟೀಲ್ ಅವರು ವಿಧಾನ ಮಂಡಲದ ಬಜೆಟ್ ಅಧಿವೇಶನದಲ್ಲಿ ಪ್ರಶ್ನೋತ್ತರ ಕಲಾಪದ ವೇಳೆ ತಿಳಿಸಿದರು. https://twitter.com/KarnatakaVarthe/status/1900869765453017526 https://kannadanewsnow.com/kannada/is-ayurvedic-treatment-slow-a-boon-heres-the-information/ https://kannadanewsnow.com/kannada/breaking-shivamogga-woman-dies-of-electrocution-while-starting-motor/
ಕೆಎನ್ಎನ್ ಡಿಜಿಟಲ್ ಡೆಸ್ಕ್: ಆಯುರ್ವೇದ ವೈದ್ಯಕೀಯ ಪದ್ಧತಿಯು ಅತ್ಯಂತ ಪ್ರಾಚೀನವಾದ ವೈದ್ಯಕೀಯ ಶಾಸ್ತ್ರವಾದರೂ, ವೈಜ್ಞಾನಿಕ ನೆಲೆಯಿಂದ ಕೂಡಿದೆ. ಹಾಗಾದ್ರೆ ಆಯುರ್ವೇದ ಚಿಕಿತ್ಸೆ ನಿಧಾನವೋ ಅಥವಾ ವರದಾನವೋ ಎನ್ನುವ ಬಗ್ಗೆ ಸಂಪೂರ್ಣ ಮಾಹಿತಿ ಮುಂದಿದೆ ಓದಿ. ರೋಗಸ್ತು ದೋಷ ವೈಷಮ್ಯಂ ದೋಷ ಸಾಮ್ಯಂ ಅರೋಗತಃ || ಅಂದರೆ ದೇಹದಲ್ಲಿ functional elements ಗಳಾದ ತ್ರಿದೋಷಗಳು ವಾತ, ಪಿತ್ತ, ಕಫ ಮತ್ತು ಸಪ್ತ ಧಾತುಗಳ (tissues) ಅಸಮತೋಲನೆಯಿಂದ ರೋಗದ ಉದ್ಭವವು ಹಾಗೂ ಅವುಗಳ ಸಮತೋಲನ ಕಾರ್ಯದಿಂದ ಆರೋಗ್ಯವು. ಈ ನಿಟ್ಟಿನಲ್ಲಿ ದೋಷಗಳ ಮತ್ತು ಸಪ್ತ ಧಾತುಗಳ ಸಮಸ್ಥಿತಿಯೇ ಆಯುರ್ವೇದ ಚಿಕಿತ್ಸೆಯ ಮೂಲ ಮಂತ್ರ. ಅನ್ಯ ವೈದ್ಯಕೀಯ ಪದ್ಧತಿಗಳ ಆಕರ್ಷಣೆಯಿಂದಾಗಿ, ಪ್ರಾಚೀನ ಆಯುರ್ವೇದ ವೈದ್ಯಕೀಯ ಶಾಸ್ತ್ರದ ಕಡೆಗೆ ಜನರ ಒಲವು ಕಡಿಮೆಯಾಗಿದೆ ಮತ್ತು ಹಲವು ತಪ್ಪು ಕಲ್ಪನೆಗಳನ್ನು ಹೊಂದಿದ್ದಾರೆ. ಆ ಸಂದೇಹಗಳ ಪರಿಹಾರಕ್ಕಾಗಿ ಈ ಲೇಖನ. 1.ಆಯುರ್ವೇದ ಚಿಕಿತ್ಸೆಯು ನಿಧಾನ. ಈ ತಪ್ಪು ಕಲ್ಪನೆಯು ಎಲ್ಲಾ ಸಮಯದಲ್ಲೂ ಅಥವಾ ಎಲ್ಲಾ ರೋಗಿಗಳಿಗೆ ಅನ್ವಯಿಸುವುದಿಲ್ಲ ಏಕೆಂದರೆ ಆಯುರ್ವೇದವು…
ಬೆಂಗಳೂರು: ರಾಜ್ಯದ ರಾಜಧಾನಿ ಜನರಿಗೆ ಬಿಗ್ ಶಾಕ್ ಎನ್ನುವಂತೆ ಇನ್ಮುಂದೆ ಬೆಂಗಳೂರಲ್ಲಿ ಕಸಕ್ಕೂ ಸೇವಾ ಶುಲ್ಕ ಪಾವತಿಸಬೇಕಾಗಿದೆ. ಇದು ಏಪ್ರಿಲ್ 1ರಿಂದಲೇ ಜಾರಿಗೆ ಬರಲಿದೆ ಎಂಬುದಾಗಿ ಬಿಬಿಎಂಪಿ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಏಪ್ರಿಲ್ 1ರಿಂದ ಜಾರಿಗೆ ಬರುವಂತೆ ಕಸಕ್ಕೂ ಸೇವಾ ಶುಲ್ಕ ನಿಗದಿ ಪಡಿಸಲಾಗಿದೆ. ಇದು ತೆರಿಗೆ ಅಲ್ಲ. ಕೇವಲ ಸರ್ವೀಸ್ ಚಾರ್ಜ್ ಆಗಿರುತ್ತದೆ. ಪ್ರಾಪರ್ಟಿ ಟ್ಯಾಕ್ಸ್ ಜೊತೆಗೆ ವರ್ಷಕ್ಕೆ ಎರಡು ಬಾರಿ ಹಣ ಕಟ್ಟಬಹುದು ಎಂದರು. ವಿದ್ಯುತ್ ಬಿಲ್ ರೀತಿಯಲ್ಲೇ ಬೆಂಗಳೂರಲ್ಲಿ ಪ್ರತಿ ಮನೆ ಮನೆಗೆ ಹೋಗಿ ಸಂಗ್ರಹಿಸಲು ಸಾಧ್ಯವಿಲ್ಲ. ಹೀಗಾಗಿ ಸರ್ವೀಸ್ ಚಾರ್ಜ್ ರೀತಿಯಲ್ಲಿ ಬಿಬಿಎಂಪಿ ತೆರಿಗೆಯಲ್ಲೇ ಆಡ್ ಮಾಡಲಾಗುತ್ತದೆ ಎಂದು ಹೇಳಿದರು. ಬೆಂಗಳೂರಲ್ಲಿ ಒಂದು ದಿನ ಕಸ ವಿಲೇವಾರಿ ಸ್ಥಗಿತಗೊಂಡಿತ್ತು. ಅದು ಸರಿಯಾಗಿದ್ದು, ರಾತ್ರಿಯಿಡಿ ಆನ್ ಲೋಡ್ ಮಾಡಲಾಗುತ್ತಿದೆ. ಮನವೊಲಿಕೆ ಯಶಸ್ವಿಯಾಗಿದ್ದು, ರಾತ್ರಿ ವೇಳೆ ಕಸ ವಿಲೇವಾರಿ ಆಗಲಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/gold-smuggling-case-actress-ranya-rao-moves-sessions-court-seeking-bail/ https://kannadanewsnow.com/kannada/breaking-shivamogga-woman-dies-of-electrocution-while-starting-motor/













