Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಟಿ ರನ್ಯಾ ರಾವ್ ಅವರನ್ನು ಅಕ್ರಮ ಚಿನ್ನ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಬಂಧಿಸಲಾಗಿದೆ. ಅವರೀಗ ಪರಪ್ಪನ ಅಗ್ರಹಾರ ಜೈಲುಪಾಲಾಗಿದ್ದಾರೆ. ನಿನ್ನೆಯಷ್ಟೇ ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಆರ್ಥಿಕ ಅಪರಾಧಗಳ ನ್ಯಾಯಾಯಲಯು ವಜಾಗೊಳಿಸಿತ್ತು. ಹೀಗಾಗಿ ನಟಿ ರನ್ಯಾ ರಾವ್ ಅವರು ಸೆಷನ್ಸ್ ಕೋರ್ಟ್ ಗೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದಾರೆ. ನಟಿ ರನ್ಯಾ ರಾವ್ ಅವರು ಗೋಲ್ಡ್ ಸ್ಮಗ್ಲಿಂಗ್ ಪ್ರಕರಣದಲ್ಲಿ ಬಂಧನವಾಗಿ, ಜೈಲುಪಾಲಾಗಿದ್ದಾರೆ. ಅವರು ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಮ್ಯಾಜಿಸ್ಟ್ರೇಟ್ ಕೋರ್ಟ್ ವಜಾಗೊಳಿಸಿತ್ತು. ಈ ಹಿನ್ನಲೆಯಲ್ಲಿ ಅವರ ಪರ ವಕೀಲರು ಈಗ ಸೆಷನ್ಸ್ ಕೋರ್ಟ್ ಗೆ ಜಾಮೀನು ಕೋರಿ ಅರ್ಜಿಯನ್ನು ಸಲ್ಲಿಸಿದ್ದಾರೆ. ಚಿನ್ನ ಕಳ್ಳ ಸಾಗಾಟ ಪ್ರಕರಣದಲ್ಲಿ ಸೆಷನ್ಸ್ ಕೋರ್ಟ್ ಗೆ ಅರ್ಜಿಯನ್ನು ನಟಿ ರನ್ಯಾ ರಾವ್ ಪರ ವಕೀಲರು ಸಲ್ಲಿಸಿದ್ದು, ಸೋಮವಾರದಂದು ಅರ್ಜಿಯು ವಿಚಾರಣೆಗೆ ಬರುವ ಸಾಧ್ಯತೆ ಇದೆ. ಅಂದು ಯಾವ ತೀರ್ಪನ್ನು ಕೋರ್ಟ್ ನೀಡುತ್ತದೆ ಎಂಬುದನ್ನು ಕಾದು ನೋಡಬೇಕಿದೆ. https://kannadanewsnow.com/kannada/even-if-the-price-of-water-is-increased-by-1-paise-per-litre-in-bengaluru-it-will-bear-50-90-per-cent-of-the-burden/ https://kannadanewsnow.com/kannada/breaking-shivamogga-woman-dies-of-electrocution-while-starting-motor/
ಬೆಂಗಳೂರು: ನಗರದಲ್ಲಿ ಕಾವೇರಿ ನೀರು ಸರಬರಾಜಿನ ದರವನ್ನು ಪ್ರತಿ ಲೀಟರ್ ಗೆ ಕೇವಲ 1 ಪೈಸೆ ಏರಿಕೆ ಮಾಡುವುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸದನದಲ್ಲೇ ಘೋಷಿಸಿದ್ದರು. ಜಸ್ಟ್ 1 ಪೈಸೆ ಪ್ರತಿ ಲೀಟರ್ ಗೆ ನೀರಿನ ದರ ಹೆಚ್ಚಳ ಮಾಡಿದ್ರೂ, ಬೆಂಗಳೂರು ಜನರಿಗೆ ಶೇ.50 ರಿಂದ 90ರಷ್ಟು ದರದ ಹೊರೆ ಬೀಳೋದು ಫಿಕ್ಸ್ ಆದಂತೆ ಆಗಿದೆ. ಅದು ಹೇಗೆ ಅಂತ ಮುಂದೆ ಓದಿ. ಕುಡಿಯುವ ನೀರಿನ ದರವನ್ನು ಪ್ರತಿ ಲೀಟರ್ ಗೆ 1 ಪೈಸೆ ಹೆಚ್ಚಳ ಮಾಡಿದರೆ ಜನ ಸಾಮಾನ್ಯರಿಗೆ ಭಾರೀ ಹೊರೆಯಾಗಲಿವೆ. ಆದರೆ, ಸ್ಲಾಬ್ ದರದ ಮೇಲೆ 1 ಪೈಸೆ ಏರಿಕೆ ಮಾಡಿದರೆ ಅಂಥಾ ಹೊರ ಆಗಲಾರದು. ಜಲಮಂಡಳಿಯು 2014ರಲ್ಲಿ ಕಾವೇರಿ ನೀರಿನ ದರ ಏರಿಕೆ ಮಾಡಿತ್ತು. ಪ್ರಸ್ತುತ ನಗರದಲ್ಲಿ ಮನೆಗಳಿಗೆ 50 ರೂ. ಕನಿಷ್ಠ ಬೆಲೆ ನಿಗದಿಪಡಿಸಲಾಗಿದೆ. ಇದಲ್ಲದೆ, 100 ರೂ. ಅಥವಾ ನೀರಿನ ಶುಲ್ಕದ ಶೇ.25 ಸ್ಯಾನಿಟರಿ ಶುಲ್ಕವಿದೆ. ಅದರ ಜತೆಗೆ, ಬಳಸುವ ನೀರಿನ ಪ್ರಮಾಣದ ಮೇಲೆ…
ರಾಯಚೂರು: ರಾಜ್ಯದಲ್ಲಿ ದಿನೇ ದಿನೇ ಬಿಸಿಲು ಜಾಸ್ತಿಯಾಗುತ್ತಿದೆ. ಈ ಹಿನ್ನಲೆಯಲ್ಲಿ ಮಧ್ಯಾಹ್ನ 12 ರಿಂದ 3 ಗಂಟೆಯವರೆಗೆ ಮನೆ, ಕಚೇರಿಯಿಂದ ಹೊರಬರದಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಸಲಹೆ ಮಾಡಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದಲ್ಲಿ ಬಿಸಿಲು ಹೆಚ್ಚಾಗಿರುವುದರಿಂದ ಸರ್ಕಾರಿ ಕಚೇರಿ ಕೆಲಸದ ಸಮಯ ಬದಲಾವಣೆ ಬಗ್ಗೆ ಸರ್ಕಾರ ಮಟ್ಟದಲ್ಲಿ ಚರ್ಚಿಸಿ ತೀರ್ಮಾನ ಕೈಗೊಳ್ಳಲಾಗುತ್ತದೆ. ಮಧ್ಯಾಹ್ನದ ಹೊತ್ತಿನಲ್ಲಿ ಫೀಲ್ಡ್ ವಿಸಿಟ್ ಮಾಡೋದನ್ನು ಬಿಡುವಂತೆ ಸಲಹೆ ಮಾಡಿದರು. ಸರ್ಕಾರಿ ನೌಕರರು ಹೊರಗಡೆ ವೀಕ್ಷಣೆಯನ್ನು ಮಧ್ಯಾಹ್ನ 12ರಿಂದ 3ರವರೆಗೆ ಮಾಡಬಾರದು. ಬೆಳಗಿನ ಜಾವ ಅಥವಾ ಸಾಯಂಕಾಲದ ಹೊತ್ತಿನಲ್ಲಿ ಮಾಡಬೇಕು. ಸರ್ಕಾರ ರಜೆ ಕೊಡಬೇಕು ಅಂತ ಹೇಳುವುದಿಲ್ಲ. ಸಮಯ ಬದಲಾವಣೆ ಮಾಡಿಕೊಂಡರೇ ಒಳ್ಳೇದು ಅಂತ ತಿಳಿಸಿದರು. ರಾಯಚೂರು ಜಿಲ್ಲೆಯಲ್ಲಿ 43 ರಿಂದ 44 ಡಿಗ್ರಿ ಸೆಲ್ಸಿಯಸ್ ವರೆಗೆ ತಾಪಮಾನ ಹೆಚ್ಚಾಗೋ ಸಾಧ್ಯತೆ ಇದೆ. ಮಧ್ಯಾಹ್ನದ ಸಮಯದಲ್ಲಿ ಮನೆಯೊಳಗೆ ಅಥವಾ ಕಚೇರಿಯಲ್ಲೇ ಇರುವಂತೆ ನೋಡಿಕೊಳ್ಳಲು ತಿಳಿಸಲಾಗಿದೆ. ಶಾಲೆ, ಖಾಸಗಿ ಸಂಸ್ಥೆಗಳು ಈ ಬಗ್ಗೆ ಗಮನಕೊಡಬೇಕು. ಆಗಾಗ…
ಬೆಂಗಳೂರು: ರಾಜ್ಯದಲ್ಲಿ ಇಂದು ದಾಖಲೆಯ 42.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಈ ಮೂಲಕ ಕರ್ನಾಟಕದಲ್ಲಿ ದಿನೇ ದಿನೇ ಬೇಸಿಗೆಯ ಬಿಸಿಲಿನ ಝಳ ಹೆಚ್ಚಾಗುತ್ತಿರುವುದು ಆಘಾತಕಾರಿಯಾಗಿದೆ. ಕಲಬುರ್ಗಿ ಜಿಲ್ಲೆಯ ಚಿಂಚೋಳಿ ತಾಲ್ಲೂಕಿನ ಐನಾಪುರ ಗ್ರಾಮದಲ್ಲಿ ಇಂದು ದಾಖಲೆ 42.8 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ. ಇದು ರಾಜ್ಯದಲ್ಲೇ ಅತೀ ಹೆಚ್ಚು ಇಂದು ದಾಖಲಾಗಿರುವಂತ ತಾಪಮಾನವಾಗಿರುವುದಾಗಿ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕೇಂದ್ರವು ಮಾಹಿತಿ ನೀಡಿದೆ. https://twitter.com/KarnatakaSNDMC/status/1900842652985422208 ಹೀಟ್ ವೇವ್ : ಮುನ್ನೆಚ್ಚರಿಕೆ ಮಾರ್ಗಸೂಚಿ ಬಿಡುಗಡೆ ಹವಾಮಾನ ಇಲಾಖೆ ಹಾಗೂ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಜಿಲ್ಲೆಗೆ ಬಿಸಿಗಾಳಿ ಎಚ್ಚರಿಕೆ (ಹೀಟ್ ವೇವ್) ನೀಡಿದೆ. ಹೀಟ್ ವೇವ್ ಸ್ಟ್ರೋಕ್ (ಶಾಖದ ಅಲೆ) ನಿಂದಾಗಿ ಜನರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಾಧ್ಯತೆ ಇರುತ್ತದೆ. ಈ ಹಿನ್ನಲೆಯಲ್ಲಿ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರ ಸಾರ್ವಜನಿಕರ ಹಿತದೃಷ್ಟಿಯಿಂದ ಮನ್ನೆಚ್ಚರಿಕೆ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಹೀಟ್ ವೇವ್ ಸ್ಟ್ರೋಕ್ ತಪ್ಪಿಸಲು ಅನುಸರಿಸಬೇಕಾದ ಕ್ರಮಗಳು: ಸಾರ್ವಜನಿಕರು ಹೀಟ್…
ಆಂಧ್ರಪ್ರದೇಶ: ರಾಜ್ಯದಲ್ಲಿ ಬ್ಯಾಂಕ್ ಸಿಬ್ಬಂದಿಯ ಕಿರುಕುಳಕ್ಕೆ ಬೇಸತ್ತಂತ ಕುಟುಂಬವೊಂದು, ತಮ್ಮ ಅಂಗಡಿ ಮುಂದೆಯೇ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಈ ಭೀಕರ ಘಟನೆಯಲ್ಲಿ ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಆಂಧ್ರಪ್ರದೇಶದ ಚಿಲುಕುರಿ ಬಟ್ಟೆ ಅಂಗಡಿ ಮುಂದೆಯೇ ಬ್ಯಾಂಕ್ ಸಿಬ್ಬಂದಿ ಕಿರುಕುಳಕ್ಕೆ ಬೇಸತ್ತು ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದಂತ ಘಟನೆ ನಡೆದಿದೆ. ಬೆಂಕಿ ಹಚ್ಚಿಕೊಂಡಂತ ಕುಟುಂಬದ ಸದಸ್ಯರನ್ನು ಸ್ಥಳೀಯರು ರಕ್ಷಿಸಿದ್ದಾರೆ. ಈ ದುರ್ಘಟನೆಯಲ್ಲಿ ಇಬ್ಬರಿಗೆ ಗಂಭೀರ ಗಾಯವಾಗಿದ್ದು, ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಸ್ಥಳಕ್ಕೆ ಆಗಮಿಸಿದಂತ ಪೊಲೀಸರು, ಪರಿಶೀಲನೆ ನಡೆಸಿ ಕೇಸ್ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಬ್ಯಾಂಕ್ ಸಿಬ್ಬಂದಿಯ ಕಿರುಕುಳದಿಂದ ಆತ್ಮಹತ್ಯೆಯೋ ಅಥವಾ ಬೇರೆ ಕಾರಣಕ್ಕೋ ಎನ್ನುವ ಬಗ್ಗೆ ತನಿಖೆಯ ನಂತ್ರ ಖಚಿತ ಮಾಹಿತಿ ತಿಳಿದು ಬರಬೇಕಿದೆ. https://kannadanewsnow.com/kannada/cyber-training-for-state-police-personnel-home-minister-dr-g-parameshwara/ https://kannadanewsnow.com/kannada/breaking-shivamogga-woman-dies-of-electrocution-while-starting-motor/
ಬೆಂಗಳೂರು : ರಾಜ್ಯದ ಪ್ರತಿಯೊಬ್ಬ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸೈಬರ್ ಅಪರಾಧಗಳ ಕುರಿತು ಹೆಚ್ಚಿನ ಅರಿವು ಮತ್ತು ತರಬೇತಿ ನೀಡಲಾಗುವುದು ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಸಿಐಡಿ ಹಾಗೂ ಸೈಬರ್ ಕ್ರೈಮ್ ತನಿಖಾ ತರಬೇತಿ ಮತ್ತು ಸಂಶೋಧನಾ ಕೇಂದ್ರ ವತಿಯಿಂದ ನಗರದ ಖಾಸಗಿ ಹೋಟೆಲ್ನಲ್ಲಿ ಆಯೋಜಿಸಿದ್ದ “CIDECODE” ಸೈಬರ್ ಅಪರಾಧ ಶೃಂಗಸಭೆ-2025 ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಸೈಬರ್ ಅಪರಾಧಗಳಿಗೆ ಯಾವುದೇ ರೀತಿಯ ಇತಿಮಿತಿಗಳಿಲ್ಲ. ಪ್ರಪಂಚದಲ್ಲಿ ಆಗುತ್ತಿರುವ ಸೈಬರ್ ಅಪರಾಧಗಳ ಕುರಿತು ಅರಿವು ಮೂಡಿಸಬೇಕು ಎಂಬ ಉದ್ದೇಶದಿಂದ ಸಿಸಿಐಟಿಆರ್ ಸ್ಥಾಪಿಸಲಾಗಿದೆ. ಈವರೆಗೆ 46 ಸಾವಿರಕ್ಕು ಹೆಚ್ಚು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ತರಬೇತಿ ನೀಡಲಾಗಿದೆ ಎಂದು ತಿಳಿಸಿದರು. 2023ರಲ್ಲಿ 22 ಸಾವಿರ ಸೈಬರ್ ಅಪರಾಧ ಪ್ರಕರಣಗಳು ದಾಖಲಾಗಿದ್ದವು. ಬ್ಯಾಂಕ್ ಅಕೌಂಟ್, ಡೇಟಾ ಹ್ಯಾಕ್, ಸರ್ಕಾರಿ ಖಾತೆಗಳು ಹ್ಯಾಕ್ ಆಗುವುದು ಸೇರಿದಂತೆ ನಾನಾ ರೀತಿಯ ಸೈಬರ್ ಅಪರಾಧಗಳು ಆಗುತ್ತಿವೆ. ಇದನ್ನು ತಡೆಗಟ್ಟದೆ ಹೋದರೆ ಮುಂದಿನ ದಿನಗಳಲ್ಲಿ ತೊಂದರೆಗಳಾಗುತ್ತವೆ. ಸಾಮಾನ್ಯ…
ಬೆಂಗಳೂರು: ಕೋರ್ಟ್ ಗೆ ಹಾಜರಾಗುವವರೆಗೂ ನನಗೆ ಊಟ ಕೊಟ್ಟಿಲ್ಲ. ನನಗೆ ಸರಿಯಾಗಿ ನಿದ್ರೆ ಮಾಡೋಕೆ ಬಿಟ್ಟಿಲ್ಲ. ಅಧಿಕಾರಿಗಳು ಉದ್ದೇಶಪೂರ್ವಗಾವಿ ಹೀಗೆ ಮಾಡಿದ್ದಾರೆ. ನನಗೆ ಹಿಂಸೆ ಕೊಟ್ಟಿದ್ದಲ್ಲೇ ಕಣ್ಣೀರು ಬರುವಂತೆ ಹೊಡೆದ್ರು. ನನ್ನ ತಂದೆ, ಕುಟುಂಬದವರನ್ನ ಕೂಡ ಬೆದರಿಸುತ್ತಿದ್ದರು. ಅಧಿಕಾರಿಗಳ ವಿರುದ್ಧ ದೂರಿನಲ್ಲಿ ನಟಿ ರನ್ಯಾ ರಾವ್ ಉಲ್ಲೇಖ ಮಾಡಿದ್ದಾರೆ. ನಟಿ ರನ್ಯಾ ರಾವ್ ಚಿನ್ನ ಸಾಗಾಟ ಪ್ರಕರಣಕ್ಕೆ ಬಿಗ್ ಟ್ವಿಸ್ಟ್ ಸಿಕ್ಕಿದೆ. ಡಿ ಆರ್ ಐ ಅಧಿಕಾರಿಗಳ ವಿರುದ್ಧವೇ ದೂರಿನ ಸುರಿಮಳೆ ಮಾಡಿದ್ದಾರೆ. ಅದರಲ್ಲಿ ನನ್ನ ಮುಖಕಕ್ಕೆ 10 ರಿಂದ 15 ಬಾರಿ ಹೊಡೆದಿದ್ದಾರೆ. 40 ಖಾಲಿ ಹಾಳೆಗಳಲ್ಲಿ ಸಹಿ ಮಾಡಿಸಿಕೊಂಡಿದ್ದಾರೆ. ನನ್ನ ತಂದೆಗೂ ಇದಕ್ಕೂ ಸಂಬಂಧವಿಲ್ಲ. ಆದರೂ ಬೆದರಿಕೆ ಹಾಕಿದ್ದಾರೆ. ನನ್ನ ಮೇಲೆ ಒತ್ತಡ ಹಾಕಿ, ಚಿತ್ರ ಹಿಂಸೆ ನೀಡಿದ್ದಾರೆ ಎಂದಿದ್ದಾರೆ. ನನಗೆ ಹೊಡೆದ ಅಧಿಕಾರಿಗಳನ್ನು ನಾನು ಗುರುತಿಸುತ್ತೇನೆ. ನನ್ನ ಹತ್ತಿರ ಖಾಲಿ ಹಾಳೆಗಳಿಗೆ ಸಹಿ ಮಾಡಿಸಿಕೊಂಡಿದ್ದಾರೆ. ಸಾಕ್ಷ್ಯ ಪತ್ರಗಳಲ್ಲಿ 50 ರಿಂದ 60 ಪುಟಗಳಲ್ಲಿ ಸಹಿ ಮಾಡಿದ್ದೇನೆ. ನನಗೆ ಸರಿಯಾಗಿ…
ಬೆಂಗಳೂರು: ನಗರದ ಜನತೆಗೆ ನಮ್ಮ ಮೆಟ್ರೋ ಪ್ರಯಾಣ ದರ ಏರಿಕೆಯಿಂದ ತತ್ತರಿಸಿ ಹೋಗಿದ್ದಾರೆ. ಈಗ ಮೆಟ್ರೋ, ಬಸ್ ಪ್ರಯಾಣ ದರ ಏರಿಕೆ ಬೆನ್ನಲ್ಲೇ ರಾಜಧಾನಿ ಜನತೆಗೆ ಮತ್ತಷ್ಟು ಹೊರೆಯ ತೂಗುಗತ್ತಿ ಎದುರಾಗಿದೆ. ಏಪ್ರಿಲ್ ನಿಂದ ಕಸಕ್ಕೆ ಶುಲ್ಕ ನೀಡಬೇಕು. ನೀರಿನ ದರ 1 ಪೈಸೆ ಕೂಡ ಏರಿಕೆಯಾಗಲಿದೆ. ಹೌದು.. ಬೆಂಗಳೂರಲ್ಲಿ ಮೆಟ್ರೋ, ಬಸ್ ಪ್ರಯಾಣದ ಟಿಕೆಟ್ ದರ ಏರಿಕೆಯಿಂದ ತತ್ತರಿಸಿರುವಂತ ಜನತೆಗೆ ಏಪ್ರಿಲ್ ನಿಂದ ಮತ್ತೊಂದು ಹೊರೆ ಹೇರುವುದಕ್ಕೆ ರಾಜ್ಯ ಸರ್ಕಾರ ಮುಂದಾಗಿದೆ. ಏಪ್ರಿಲ್ ನಿಂದ ಮನೆ ಮನೆಯಿಂದ ತ್ಯಾಜ್ಯ ಸಂಗ್ರಹಿಸುವುದಕ್ಕೂ ಶುಲ್ಕ ವಸೂಲಿ ಜಾರಿಗೊಳಿಸಲು ನಿರ್ಧರಿಸಿದೆ. ಈ ಹಿಂದೆಯೂ ಬೆಂಗಳೂರಲ್ಲಿ ಘನತ್ಯಾಜ್ಯ ಸೇವಾ ಶುಲ್ಕ ವಿಧಿಸುವ ಕುರಿತು ಚರ್ಚೆ ನಡೆಸಲಾಗಿತ್ತು. ಆದರೇ ಸಾರ್ವಜನಿಕ ವಲಯದಲ್ಲಿ ಇದಕ್ಕೆ ವ್ಯಾಪಕ ಆಕ್ರೋಶ ವ್ಯಕ್ತವಾಗಿತ್ತು. ಈ ಹಿನ್ನಲೆಯಲ್ಲಿ ಘನ ತ್ಯಾಜ್ಯ ಸೇವಾ ಶುಲ್ಕವನ್ನು ಕೈಬಿಡಲಾಗಿತ್ತು. ಈಗ ಮತ್ತೆ ಅದು ಮುನ್ನೆಲೆಗೆ ಬಂದಿದೆ. ಇನ್ನೂ 2014ರ ನಂತ್ರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಬೆಂಗಳೂರು…
ನವದೆಹಲಿ: ಆಗ್ನೇಯ ಮಧ್ಯ ರೈಲ್ವೆ (ಎಸ್ಇಸಿಆರ್) 1003 ಅಪ್ರೆಂಟಿಸ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಐಟಿಐ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಆನ್ಲೈನ್ ಅರ್ಜಿ 03-03-2025 ರಂದು ಪ್ರಾರಂಭವಾಗುತ್ತದೆ ಮತ್ತು 02-04-2025 ರಂದು ಕೊನೆಗೊಳ್ಳುತ್ತದೆ. ಅಭ್ಯರ್ಥಿಯು ಎಸ್ಇಸಿಆರ್ ವೆಬ್ಸೈಟ್, secr.indianrailways.gov.in/ ಮೂಲಕ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬೇಕು. ಹುದ್ದೆ ಹೆಸರು: ಎಸ್ಇಸಿಆರ್ ಅಪ್ರೆಂಟಿಸ್ ಆನ್ಲೈನ್ ಫಾರ್ಮ್ 2025 ಪೋಸ್ಟ್ ದಿನಾಂಕ: 06-03-2025 ಒಟ್ಟು ಹುದ್ದೆ: 1003 ಸಂಕ್ಷಿಪ್ತ ಮಾಹಿತಿ: ಆಗ್ನೇಯ ಮಧ್ಯ ರೈಲ್ವೆ (ಎಸ್ಇಸಿಆರ್) ಖಾಲಿ ಇರುವ ಅಪ್ರೆಂಟಿಸ್ ಹುದ್ದೆಗಳ ನೇಮಕಾತಿಗೆ ಉದ್ಯೋಗ ಅಧಿಸೂಚನೆ ಹೊರಡಿಸಿದೆ. ಖಾಲಿ ಹುದ್ದೆಯ ವಿವರಗಳಲ್ಲಿ ಆಸಕ್ತಿ ಹೊಂದಿರುವ ಮತ್ತು ಎಲ್ಲಾ ಅರ್ಹತಾ ಮಾನದಂಡಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಅಧಿಸೂಚನೆಯನ್ನು ಓದಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಎಸ್ಇಸಿಆರ್ ನೇಮಕಾತಿ 2025 ಅಧಿಸೂಚನೆ ಅವಲೋಕನ: ಆಗ್ನೇಯ ಮಧ್ಯ ರೈಲ್ವೆ (ಎಸ್ಇಸಿಆರ್) ಅಪ್ರೆಂಟಿಸ್ ಹುದ್ದೆಗಳಿಗೆ ನೇಮಕಾತಿ ಅಧಿಸೂಚನೆಯನ್ನು ಅಧಿಕೃತವಾಗಿ ಬಿಡುಗಡೆ ಮಾಡಿದೆ. ನೇಮಕಾತಿ ಪ್ರಕ್ರಿಯೆ, ಅರ್ಹತೆ ಮತ್ತು ಅರ್ಜಿ…
ಬೆಂಗಳೂರು: ಬೆಂಗಳೂರು ನಗರದಲ್ಲಿ ಕಾರ್ಯನಿರ್ವಹಿಸುತ್ತಿರುವ 30 ಎಸ್ಟಿಪಿಗಳ ಗುಣಮಟ್ಟದ ಬಗ್ಗೆ ಕೇಂದ್ರ ಸರ್ಕಾರ ಜಲ್ ಹಿ ಅಮೃತ್ ಯೋಜನೆ ಅಡಿಯಲ್ಲಿ ಶ್ಲಾಘಿಸಿದೆ. 23 ಎಸ್ಟಿಪಿಗಳಿಗೆ ಕ್ಲೀನ್ ವಾಟರ್ ಕ್ರೆಡಿಟ್ನ ಅಡಿಯಲ್ಲಿ 5 ಸ್ಟಾರ್ ರೇಟಿಂಗ್ ನೀಡಿದ್ದು ಪ್ರೋತ್ಸಾಹ ಧನವಾಗಿ 103 ಕೋಟಿ ರೂಪಾಯಿಗಳನ್ನು ಮಂಜೂರು ಮಾಡಿದೆ. ಈ ಮೂಲಕ ಬೆಂಗಳೂರು ಜಲಮಂಡಳಿ ಮತ್ತೊಂದು ಹೆಗ್ಗಳಿಕೆ ಪಾತ್ರವಾಗಿದೆ. ಬೆಂಗಳೂರು ನೀರು ಸರಬರಾಜು ಹಾಗೂ ಒಳಚರಂಡಿ ಮಂಡಳಿ ಅಡಿಯಲ್ಲಿ ಬೆಂಗಳೂರು ನಗರದಲ್ಲಿ ಪ್ರತಿನಿತ್ಯ ಉತ್ಪತ್ತಿಯಾಗುವ 1,450 ಎಂ.ಎಲ್.ಡಿ ಯಷ್ಟು ನೀರನ್ನು ಸಂಸ್ಕರಿಸಲಾಗುತ್ತದೆ. ಇದಕ್ಕಾಗಿ ನಗರದ ವಿವಿಧ ಭಾಗಗಳಲ್ಲಿ 34 ಎಸ್ಟಿಪಿಗಳನ್ನು ನಿರ್ಮಿಸಲಾಗಿದೆ. ಸಂಸ್ಕರಿಸಿದ ನೀರನ್ನು ಬಳಸಿಕೊಳ್ಳುವ ನಿಟ್ಟಿನಲ್ಲಿ ಏಷ್ಯಾ ಖಂಡದಲ್ಲೇ ಪ್ರಥಮ ಸ್ಥಾನದಲ್ಲಿದ್ದು, ಎಸ್ಟಿಪಿಗಳಿಂದ ಸಂಸ್ಕರಿಸಲಾಗುವ ನೀರನ್ನು ಬೆಂಗಳೂರು ಕೆರೆಗಳಿಗೆ ಹಾಗೂ ಅಕ್ಕಪಕ್ಕದ ಜಿಲ್ಲೆಗಳ ಕೆರೆಗಳಿಗೆ ತುಂಬಿಸಲಾಗುತ್ತಿದೆ. ಜಲ್ ಹಿ ಅಮೃತ್ ಯೋಜನೆಯ ಅಡಿಯಲ್ಲಿ ದೇಶದ ನಗರಗಳಲ್ಲಿನ ಎಸ್ಟಿಪಿಗಳ ಗುಣಮಟ್ಟ ಪರಿಶೀಲನೆಗೆ ಅರ್ಜಿ ಸಲ್ಲಿಸಲು ಕೇಂದ್ರ ಸರಕಾರ ಅವಕಾಶ ನೀಡಿತ್ತು. ಉತ್ತಮ ಮಾನದಂಡಗಳನ್ನು ಅಳವಡಿಸಿಕೊಳ್ಳುವ…














