Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : “ಕರ್ನಾಟಕ ರಾಜ್ಯದ ಮಹಾಜನತೆ ಇಂದು 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ ಕೊಟ್ಟಿದ್ದಾರೆ. ವಿರೋಧ ಪಕ್ಷಗಳ ಸುಳ್ಳು, ಟೀಕೆ, ಅಪಪ್ರಚಾರಕ್ಕೆ ಮತದಾರರು ತಕ್ಕ ಪಾಠ ಕಲಿಸಿದ್ದಾರೆ. ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ಜಾರಿಯಾದ ಗ್ಯಾರಂಟಿ ಯೋಜನೆಗಳು ಹಾಗೂ ಅಭಿವೃದ್ಧಿಗೆ ಜಯ ಸಿಕ್ಕಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿಯಲ್ಲಿ ಉಪಚುನಾವಣೆ ಫಲಿತಾಂಶ ಹಾಗೂ ಕಾಂಗ್ರೆಸ್ ಅಭ್ಯರ್ಥಿಗಳ ಅಭೂತಪೂರ್ವ ಗೆಲುವಿನ ಬಗ್ಗೆ ಮಾಧ್ಯಮಗೋಷ್ಠಿ ಉದ್ದೇಶಿಸಿ ಶಿವಕುಮಾರ್ ಅವರು ಶನಿವಾರ ಮಾತನಾಡಿದರು. “ಈ ಉಪಚುನಾವಣೆಗಳ ಫಲಿತಾಂಶದ ಬಗ್ಗೆ ಮಾಧ್ಯಮಗಳು ನಡೆಸಿದ್ದ ಚುನಾವಣೋತ್ತರ ಸಮೀಕ್ಷೆಗಳು ಸುಳ್ಳಾಗುತ್ತವೆ ಎಂದು ನಿನ್ನೆಯೇ ಹೇಳಿದ್ದೆ. ಕೆಲವು ಕ್ಷೇತ್ರದ ಸೋಲು, ಗೆಲುವು ನನ್ನದೇ ಎಂದು ಹೇಳಿದ್ದೆ. ಮೂರು ಉಪಚುನಾವಣೆಗಳ ಫಲಿತಾಂಶ ಬಂದಿದೆ. ವಿರೋಧ ಪಕ್ಷಗಳು ಟೀಕೆ, ಅಪಪ್ರಚಾರ ಮಾಡುವುದು ನಿಲ್ಲಿಸಬೇಕು. ಭಾವನೆ ಮೇಲೆ ರಾಜಕಾರಣ ನಡೆಯೋದಿಲ್ಲ, ಬದುಕಿನ ಮೇಲಿನ ರಾಜಕಾರಣಕ್ಕೆ ಒತ್ತು ನೀಡುವಂತೆ ನಮ್ಮ ಜನರೇ ಸಂದೇಶ ನೀಡಿದ್ದಾರೆ” ಎಂದು ತಿಳಿಸಿದರು. “ವಿರೋಧ ಪಕ್ಷಗಳ ನಾಯಕರು ರಾಜ್ಯದಲ್ಲಿ ಐದು…
ಬಸವಕಲ್ಯಾಣ : ಚನ್ನಪಟ್ಟಣ, ಶಿಗ್ಗಾವಿ, ಸಂಡೂರು ಈ ಮೂರೂ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸುವ ಮೂಲಕ ರಾಜ್ಯದ ಜನತೆ ಪ್ರತಿಪಕ್ಷಗಳ ಸುಳ್ಳು ಆರೋಪಗಳಿಗೆ ತಕ್ಕ ಉತ್ತರ ನೀಡಿದ್ದಾರೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ವ್ಯಾಖ್ಯಾನಿಸಿದ್ದಾರೆ. ಬಸವಕಲ್ಯಾಣದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗ ಮಾತನಾಡಿದ ಅವರು, ಹಳೆ ಮೈಸೂರು, ಕಲ್ಯಾಣ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ನಡೆದ ಈ ಉಪ ಚುನಾವಣೆಯಲ್ಲಿ ಅಭಿವೃದ್ಧಿಗೆ ಒಲವು, ಗ್ಯಾರಂಟಿಗಳಿಗೆ ಗೆಲುವು ನೀಡಿರುವ ಮತದಾರರಿಗೆ ಧನ್ಯವಾದ ಅರ್ಪಿಸಿದರು. ಶಿಗ್ಗಾವಿಯಲ್ಲಿ ವಚನಭ್ರಷ್ಟರಿಗೆ ಮತದಾರರು ತಕ್ಕ ಉತ್ತರ ನೀಡಿದ್ದಾರೆ. ಆ ಕ್ಷೇತ್ರದ ಉಸ್ತುವಾರಿಯಾಗಿದ್ದ ತಾವು ಮತದಾರರಿಗೆ ವಿಶೇಷವಾಗಿ ಧನ್ಯವಾದ ಅರ್ಪಿಸುವುದಾಗಿ ಈಶ್ವರ ಖಂಡ್ರೆ ಹೇಳಿದರು. ಕಾಂಗ್ರೆಸ್ ಪಕ್ಷದ ನಾಯಕರು, ಸ್ಥಳೀಯ ಮುಖಂಡರು ಹಾಗೂ ಪಕ್ಷದ ಕಾರ್ಯಕರ್ತರು ಮೂರೂ ಉಪ ಚುನಾವಣೆಗಳ ಗೆಲುವಿಗೆ ಹಗಲಿರುಳು ಶ್ರಮಿಸಿದ್ದಾರೆ. ಎಲ್ಲರ ಸಂಘಟಿತ ಪ್ರಯತ್ನಕ್ಕೆ ಈ ಗೆಲುವಿನ ಹಾರ ಸಂದಿದೆ. ಉತ್ತಮ ನಾಯಕತ್ವ ನೀಡಿ ಮಾರ್ಗದರ್ಶನ ಮಾಡಿದ ಪಕ್ಷದ…
ಇಂದಿನ ದಿನಗಳಲ್ಲಿ ಎಲ್ಲರೂ ಹಣಕ್ಕೆ ಪ್ರಾಮುಖ್ಯತೆ ನೀಡುತ್ತಾರೆ. ಈ ಹಣವನ್ನು ಗಳಿಸಲು ಸಾಕಷ್ಟು ಜ್ಞಾನವನ್ನು ಹೊಂದಿರುವುದು ಮುಖ್ಯ ವಿಷಯ. ಅವರಿಗೆ ಜ್ಞಾನವಿದ್ದರೆ ಹೇಗಾದರೂ ಹಣ ಸಂಪಾದಿಸಬಹುದು. ಸರಸ್ವತಿ ದೇವಿಯು ಈ ಜ್ಞಾನದ ಅಧಿಪತಿ. ಸರಸ್ವತಿ ದೇವಿಯ ಪರಿಪೂರ್ಣ ಕೃಪೆ ಇರುವ ಯಾವುದೇ ಮನೆಯಲ್ಲಿ ಸಂಪತ್ತು ಮತ್ತು ಸಮೃದ್ಧಿಗೆ ಕೊರತೆಯಾಗುವುದಿಲ್ಲ ಎಂದು ಹೇಳಬೇಕು. ಆದ್ದರಿಂದ ಸಂಪತ್ತು ಮತ್ತು ಸಮೃದ್ಧಿಯಿಂದ ಬದುಕಲು ಬಯಸುವವರು ಮೊದಲು ಸರಸ್ವತಿ ದೇವಿಯನ್ನು ಪೂಜಿಸಬೇಕು. ಅದರ ನಂತರವೇ ಮಹಾಲಕ್ಷ್ಮಿಯನ್ನು ಪೂಜಿಸಬೇಕು. ಈ ಆಧ್ಯಾತ್ಮಿಕ ಪೋಸ್ಟ್ನಲ್ಲಿ ಸರಸ್ವತಿ ದೇವಿಯನ್ನು ಪೂಜಿಸುವ ಸರಳ ವಿಧಾನವನ್ನು ನಾವು ನೋಡಲಿದ್ದೇವೆ . ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ,…
ಮಂಡ್ಯ : ಅಂತರಾಷ್ಟ್ರೀಯ ಪ್ರಜಾ ಪ್ರಭುತ್ವ ದಿನಾಚರಣೆ ಅಂಗವಾಗಿ ಪ್ರಜಾ ಪ್ರಭುತ್ವ ಜಾಗೃತಿ ಮೂಡಿಸುವ ಸಲುವಾಗಿ ಬೀದರ್ ನಿಂದ ಚಾಮರಾಜನಗರ ಜಿಲ್ಲೆಯವರೆಗೆ ಹಮ್ಮಿಕೊಂಡಿದ್ದ ಮಾನವ ಸರಪಳಿ ನಿರ್ಮಾಣದಲ್ಲಿ ಅತಿ ಹೆಚ್ಚು ಖಾಸಗಿ ಕಂಪನಿಗಳ ಭಾಗವಹಿಸುವಿಕೆ ವಿಭಾಗದಲ್ಲಿ ಮಂಡ್ಯ ಜಿಲ್ಲೆ ಪ್ರಥಮ ಸ್ಥಾನ ಪಡೆದಿದೆ. ಜಿಲ್ಲಾಧಿಕಾರಿ ಡಾ: ಕುಮಾರ ಅವರಿಗೆ ಅಭಿನಂದನೆ ಸಲ್ಲಿಸಿರುವ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಕಾರ್ಯನಿವಾರ್ಹಕ ನಿರ್ದೇಶಕ ಕಾಂತರಾಜು ಅವರು ನವೆಂಬರ್ 26 ರಂದು ಬೆಳಗ್ಗೆ 11ಗಂಟೆಗೆ ಬೆಂಗಳೂರಿನ ಅಂಬೇಡ್ಕರ್ ಭವನದಲ್ಲಿ ಆಯೋಜಿಸಿರುವ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಪ್ರಶಸ್ತಿ ಪಡೆದುಕೊಳ್ಳುವಂತೆ ತಿಳಿಸಿದ್ದಾರೆ.
ಶಿವಮೊಗ್ಗ: ಇಂದು ರಾಜ್ಯ ಸರ್ಕಾರದಿಂದ ದಾವಣಗೆರೆ ವಿಶ್ವವಿದ್ಯಾಲಯದ ಸಿಡಿಕೇಟ್ ನಾಮನಿರ್ದೇಶಿತ ಸದಸ್ಯರನ್ನಾಗಿ ಶಿವಮೊಗ್ಗ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕಿ ಡಾ.ಜಿ.ಕೆ ಪ್ರೇಮ ಅವರನ್ನು ನೇಮಿಸಿ ಆದೇಶಿಸಿದೆ. ಇಂತಹ ಹುದ್ದೆಗೆ ನೇಮಕಗೊಂಡ ಡಾ.ಜಿ.ಕೆ ಪ್ರೇಮ ಅವರಿಗೆ ಹಿರಿಯ ಪತ್ರಕರ್ತ ಚಾರ್ವಕ ರಾಘವೇಂದ್ರ ಅವರು ಅಭಿನಂದನೆ, ಶುಭಾಶಯವನ್ನು ತಿಳಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು,ಡಾ. ಜಿ.ಕೆ. ಪ್ರೇಮಾ ಅವರು ದಾವಣಗೆರೆ ವಿವಿಯ ಸಿಂಡಿಕೇಟ್ ಸದಸ್ಯರಾಗಿ ಆಯ್ಕೆ ಆಗಿರುವುದು ತಿಳಿದು ಬಹಳ ಸಂತೋಷವಾಗಿದೆ. ಪ್ರೇಮಾ ಅವರು ನನಗೆ ಪರಿಚಯವಾಗಿದ್ದು ಜನ ಚಳವಳಿ ಸಂದರ್ಭದಲ್ಲಿ ಆಗಿದೆ. ಜನಪರ ಜೀವಪರ ಚಳವಳಿ ಎಲ್ಲೆ ನಡೆದರು ಪ್ರೇಮಾ ಇರುತ್ತಿದ್ದರು ಎಂಬುದಾಗಿ ತಿಳಿಸಿದ್ದಾರೆ. ಸದ್ಯ ಪ್ರೇಮಾ ಶಿವಮೊಗ್ಗದ ಸಹ್ಯಾದ್ರಿ ಕಾಲೇಜಿನಲ್ಲಿ ಕನ್ನಡ ಉಪನ್ಯಾಸಕಿಯಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ವಿದ್ಯಾರ್ಥಿಗಳ ನೆಚ್ಚಿನ ಟೀಚರ್ ಕೂಡ. ಬಹಳ ಹಿಂದುಳಿದ ಕಾಡುಗೊಲ್ಲ ಸಮುದಾಯದಿಂದ ಬಂದಂತ ಇವರು, ತಾವು ಹುಟ್ಟಿದ ಸಮುದಾಯದಲ್ಲಿ ಮಹಿಳೆಯರ ಕುರಿತು ಇರುವ ಮೌಡ್ಯವನ್ನು ಕಿತ್ತೊಗೆಯಲು ಈಗಲೂ ಶ್ರಮಿಸುತ್ತಿದ್ದಾರೆ ಎಂದು ಹೇಳಿದ್ದಾರೆ.…
ಬೆಂಗಳೂರು: ದಾವಣಗೆರೆ ವಿಶ್ವ ವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ನಾಮ ನಿರ್ದೇಶಿತ ಸದಸ್ಯರನ್ನಾಗಿ ಡಾ.ಜಿ.ಕೆ ಪ್ರೇಮ ಅವರನ್ನು ನೇಮಕ ಮಾಡಿ ರಾಜ್ಯ ಸರ್ಕಾರ ಆದೇಶಿಸಿದೆ. ಇಂದು ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆ ಹೊರಡಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ವಿಶ್ವ ವಿದ್ಯಾಲಯಗಳ ಅಧಿನಿಯಮ 2000ರ ಪ್ರಕರಣ 28(1)(ಜಿ)ರಡಿ ಪ್ರದತ್ತವಾದಂತ ಅಧಿಕಾರವನ್ನು ಚಲಾಯಿಸಿ ಹಾಗೂ ಕರ್ನಾಟಕ ರಾಜ್ಯ ವಿಶ್ವವಿದ್ಯಾನಿಲಯಗಳ ಅಧಿನಿಯಮ 2000ರ ಪ್ರಕರಣ 39(1)ರ ಉಪಬಂಧಕ್ಕೊಳಪಟ್ಟು ದಾವಣಗೆರೆ ವಿಶ್ವವಿದ್ಯಾಲಯದ ಸಿಂಡಿಕೇಟ್ ಪ್ರಾಧಿಕಾರಕ್ಕೆ ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ಈ ಕೆಳಕಂಡವರನ್ನು ಸರ್ಕಾರವು ನಾಮನಿರ್ದೇಶನ ಮಾಡಿ ಆದೇಶಿಸಿದೆ ಎಂದಿದ್ದಾರೆ. ಹೀಗಿದೆ ದಾವಣಗೆರೆ ವಿಶ್ವವಿದ್ಯಾಲಯದ ನಾಮ ನಿರ್ದೇಶಿತ ಸದಸ್ಯರ ಪಟ್ಟಿ ಡಾ.ಜಿ.ಕೆ ಪ್ರೇಮ, ಚಿತ್ತಯ್ಯನಹಟ್ಟಿ, ಹೊಸದುರ್ಗ ತಾಲ್ಲೂಕು, ಚಿತ್ರದುರ್ಗ ಜಿಲ್ಲೆ- ಎಂಎ, ಪಿಹೆಚ್.ಡಿ- ಮಹಿಳೆ ದ್ಯಾಮಪ್ಪ, ಬೆಂಚಕಟ್ಟೆ, ಜಗಳೂರು ತಾಲ್ಲೂಕು – ಎಂಎ, ಇಂಗ್ಲೀಷ್ – ಪರಿಶಿಷ್ಟ ಜಾತಿ ಶಬೀರ್ ಆಲಿಖಾನ್, ನರಸರಾಜ್ ಪೇಟೆ, ದಾವಣಗೆರೆ – ಬಿಎಸ್ಸಿ,…
ಬೆಂಗಳೂರು: ರಾಜ್ಯದಲ್ಲಿ ವಿವಾದಕ್ಕೆ ಕಾರಣವಾಗಿರುವಂತ ಬಿಪಿಎಲ್ ಕಾರ್ಡ್ ಸಮಸ್ಯೆಯನ್ನು 1 ವಾರದಲ್ಲೇ ಇತ್ಯರ್ಥ ಮಾಡುವುದಾಗಿ ಆಹಾರ ಸಚಿವ ಕೆ.ಹೆಚ್.ಮುನಿಯಪ್ಪ ತಿಳಿಸಿದ್ದಾರೆ. ಆದಾಯ ತೆರಿಗೆ ಪಾವತಿದಾರರು ಹಾಗೂ ಸರ್ಕಾರಿ ನೌಕರರನ್ನು ಹೊರತುಪಡಿಸಿ ಬೇರೆ ಯಾರದ್ದೇ ಬಿಪಿಎಲ್ ಕಾರ್ಡ್ಗಳು ಎಪಿಎಲ್ ಕಾರ್ಡ್ಗಳಾಗಿ ಪರಿವರ್ತನೆ ಆಗಿದ್ದರೆ, ಅವುಗಳನ್ನು 1 ವಾರದಲ್ಲಿ ಸರಿಪಡಿಸಲಾಗುವುದು. ಹಳೆಯ ಕಾರ್ಡ್ ಹಾಗೂ ನಂಬರ್ ಬಳಸಿ ಹಿಂದಿನಂತೆಯೇ ಆಹಾರ ಧಾನ್ಯ ಪಡೆಯಲೂ ಅವಕಾಶ ಕಲ್ಪಿಸಲಾಗುತ್ತದೆ ಎಂದು ಆಹಾರ ಸಚಿವರಾದ ಕೆ.ಎಚ್.ಮುನಿಯಪ್ಪ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1859914159346884646 https://kannadanewsnow.com/kannada/good-news-for-fishermen-in-the-state-rs-10-lakh-compensation-in-case-of-death-in-accident/ https://kannadanewsnow.com/kannada/hc-stays-state-waqf-boards-order-to-issue-marriage-certificates-to-muslim-couples/
ಬೆಂಗಳೂರು: ವಿವಾಹಿತ ಮುಸ್ಲಿಂ ದಂಪತಿಗೆ ವಿವಾಹ ಪ್ರಮಾಣಪತ್ರ ನೀಡಲು ರಾಜ್ಯ ವಕ್ಫ್ ಮಂಡಳಿಗೆ ಅನುಮತಿ ನೀಡಿ ರಾಜ್ಯ ಸರ್ಕಾರ ಮಾಡಿದ್ದ ಆದೇಶವನ್ನು ಜನವರಿ 7ರವರೆಗೆ ಅಮಾನತಿನಲ್ಲಿಡುವ ಮೂಲಕ ರಾಜ್ಯ ಹೈಕೋರ್ಟ್ ಗುರುವಾರ ಮಧ್ಯಂತರ ಆದೇಶ ನೀಡಿದೆ. ಅಲ್ಲದೇ, ರಾಜ್ಯ ಸರ್ಕಾರ ಮತ್ತು ವಕ್ಪ್ ಮಂಡಳಿಗೆ ನೋಟಿಸ್ ಜಾರಿ ಮಾಡಿದೆ. ಬೆಂಗಳೂರಿನ ಎ ಆಲಂ ಪಾಷಾ ಅವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್ ಅವರ ವಿಭಾಗೀಯ ಪೀಠ ವಿಚಾರಣೆ ನಡೆಸಿತು. “ಮೇಲ್ನೋಟಕ್ಕೆ ಪ್ರಬಲವಾದ ಪ್ರಕರಣ ಕಂಡುಬಂದಿರುವುದರಿಂದ 2023 ರ ಆಗಸ್ಟ್ 30 ರಂದು ವಕ್ಫ್ ಮಂಡಳಿ ಮತ್ತು ಅದರ ಅಧಿಕಾರಿಗಳಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡಲು ಅನುಮತಿಸಿದ್ದ ಆಕ್ಷೇಪಾರ್ಹ ಆದೇಶವನ್ನು ಮುಂದಿನ ವಿಚಾರಣೆವರೆಗೆ ಅಮಾನತಿನಲ್ಲಿಡಲಾಗಿದೆ. ಸರ್ಕಾರದ ಆದೇಶದ ನೆಪದಲ್ಲಿ ವಕ್ಫ್ ಮಂಡಳಿ ಅಥವಾ ಅಧಿಕಾರಿಗಳು ವಿವಾಹ ಪ್ರಮಾಣಪತ್ರಗಳನ್ನು ಮುಂದಿನ ಆದೇಶದವರೆಗೆ ನೀಡುವಂತಿಲ್ಲ. ಯಾವುದೇ ಅರ್ಹತೆ ಇಲ್ಲದ ವಕ್ಫ್ ಮಂಡಳಿ…
ಬೆಂಗಳೂರು: ಮೀನುಗಾರರ ಬದುಕನ್ನು ಹಸನಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ. ಮೀನುಗಾರಿಕೆಗೆ ತೆರಳಿದಾಗ ಅಪಾಯಕ್ಕೆ ಸಿಲುಕಿ ಮೃತಪಟ್ಟ ಮೀನುಗಾರರ ಕುಟುಂಬಕ್ಕೆ ಇನ್ನು ಮುಂದೆ ₹10 ಲಕ್ಷ ಪರಿಹಾರ ನೀಡಲಾಗುವುದು ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರು ತಿಳಿಸಿದ್ದಾರೆ. ಈ ಹಿಂದೆ ಮೀನುಗಾರರಿಗೆ ಸಮುದ್ರದಲ್ಲಿ ಮೀನುಗಾರಿಕೆ ವೇಳೆ ಹಾನಿಯಾದರೆ ಪರಿಹಾರವಾಗಿ ₹6 ಲಕ್ಷ ನೀಡಲಾಗುತ್ತಿತ್ತು. ನಮ್ಮ ಸರ್ಕಾರ ₹8 ಲಕ್ಷಕ್ಕೆ ಏರಿಸಲಾಗಿದೆ. ಮುಂದಿನ ದಿನಗಳಲ್ಲಿ ಅದನ್ನು ₹10 ಲಕ್ಷಕ್ಕೆ ಏರಿಸುತ್ತೇವೆ” ಎಂದು ಘೋಷಣೆ ಮಾಡಿದರು. “ಈ ವರ್ಷ ಮೀನುಗಾರರಿಗಾಗಿ 10 ಸಾವಿರ ಮನೆಗಳನ್ನು ನೀಡಲು ತೀರ್ಮಾನ ಮಾಡಿದ್ದೇವೆ. ಮಂಗಳೂರಿನಲ್ಲಿ ₹49 ಕೋಟಿ ವೆಚ್ಚದಲ್ಲಿ ಮೀನುಗಾರಿಕೆ ಬಂದರು ಕಾಮಗಾರಿ ಪೂರ್ಣಗೊಂಡಿದೆ. ಸಮೀಕ್ಷೆ ಪ್ರಕಾರ 99% ಮೀನುಗಾರರು ಆರ್ಥಿಕವಾಗಿ ಹಿಂದುಳಿದಿದ್ದು, ಈ ಮೀನುಗಾರರ ರಕ್ಷಣೆ ಮಾಡಲು ನಮ್ಮ ಸರ್ಕಾರ ಬದ್ಧವಾಗಿದೆ. ಮೀನು ಮಾರಾಟ ಮಾಡಲು ತ್ರಿಚಕ್ರ ಎಲೆಕ್ಟ್ರಿಕ್ ವಾಹನ ಹಂಚಲಾಗಿದೆ” ಎಂದು ತಿಳಿಸಿದರು. https://kannadanewsnow.com/kannada/broken-desk-filth-everywhere-current-shock-this-is-the-plight-of-the-prestigious-college-of-the-ocean/ https://kannadanewsnow.com/kannada/sagar-rural-police-arrest-rabari-accused-traced-within-24-hours-arrested/
ಶಿವಮೊಗ್ಗ: ರಾಬರಿ ಪ್ರಕರಣ ದಾಖಲಾದಂತ ಕೇವಲ 24 ಗಂಟೆಯಲ್ಲೇ ಆರೋಪಿಯ ಸುಳಿವು ಪತ್ತೆ ಹಚ್ಚಿದಂತ ಸಾಗರ ಗ್ರಾಮಾಂತರ ಠಾಣೆಯ ಪೊಲೀಸರು, ಅಷ್ಟೇ ವೇಗವಾಗಿ ಆತನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಡಿವೈಎಸ್ಪಿ ಗೋಪಾಲಕೃಷ್ಣ ನಾಯಕ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಾಹಿತಿ ಹಂಚಿಕೊಂಡರು. ಕಳೆದ 10 ದಿನಗಳ ಹಿಂದೆ ಸಾಗರ ಗ್ರಾಮಾಂತರ ಠಾಣೆಯ ಕಲ್ಮನೆ ಗ್ರಾಮದ ಕುಂಬಾರಗುಂಡಿಯಲ್ಲಿನ ಒಂಟಿ ಮನೆಯಲ್ಲಿದ್ದಂತ ಮಹಿಳೆಯನ್ನು ಓರ್ವ ಆರೋಪಿ ಚಾಕು ತೋರಿಸಿ, ಮನೆಯ ಲಾಕರ್ ನಲ್ಲಿದ್ದಂತ ಬಂಗಾರದ ಮಾಂಗಲ್ಯ ಸರ, ಮೊಬೈಲ್ ಹಾಗೂ ಪರ್ಸ್ ಕಿತ್ತುಕೊಂಡು ಪರಾರಿಯಾಗಿದ್ದ ಬಗ್ಗೆ ದೂರು ನೀಡಲಾಗಿತ್ತು. ಈ ದೂರಿನ ಸಂಬಂಧ ಬಿಎನ್ ಎಸ್ ಕಾಯ್ದೆಯ ಕಲಂ 307, 309(4) ಅಡಿ ಕೇಸ್ ದಾಖಲಿಸಲಾಗಿತ್ತು ಎಂದರು. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್ ಕುಮಾರ್ ಹಾಗೂ 1ನೇ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದಂತ ಅನಿಲ್ ಕುಮಾರ್ ಭೂಮಾರೆಡ್ಡಿ, 2ನೇ ಹೆಚ್ಚುವರಿ ಪೊಲೀಸ್ ಅಧೀಕ್ಷಕರಾದಂತ ಕಾರಿಯಪ್ಪ.ಎ.ಜಿ ಅವರಿಗೆ ಮಾಹಿತಿ ನೀಡಲಾಗಿತ್ತು. ಅವರ…