Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವಂತ ನೀರಿನ ಬಾಟಲ್ ಬಗ್ಗೆ ಶಾಕಿಂಗ್ ವರದಿಯನ್ನು ಆಹಾರ ಸುರಕ್ಷತಾ ಇಲಾಖೆ ನೀಡಿದೆ. ಕರ್ನಾಟಕದಲ್ಲಿ ಜನರು ಬಾಟಲ್ ನೀರು ಅಂತ ಕುಡಿಯೋಕೂ ಮುನ್ನಾ ಶಾಕಿಂಗ್ ರಿಪೋರ್ಟ್ ಏನಿದೆ ಅಂತ ಮುಂದೆ ಓದಿ. ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯ ಆಹಾರ ಸುರಕ್ಷತಾ ವಿಭಾಗದ ವತಿಯಿಂದ ಫೆಬ್ರವರಿ ಮತ್ತು ಮಾರ್ಚ್‌ 2025ರ ಮಾಹೆಗಳಲ್ಲಿ ಈ ಕೆಳಕಂಡ ಕ್ರಮಗಳನ್ನು ವಹಿಸಲಾಗಿರುತ್ತದೆ. ಫೆಬ್ರವರಿ 2025: ಫೆಬ್ರವರಿ 2025ರ ಮಾಹೆಯಲ್ಲಿ ಒಟ್ಟಾರೆ 3698 ಆಹಾರ ಪದಾರ್ಥಗಳ ಮಾದರಿಗಳನ್ನು ಸಂಗ್ರಹಿಸಿ ವಿಶ್ಲೇಷಣೆಗೆ ಒಳಪಡಿಸಲಾಗಿರುತ್ತದೆ. ವಿಶೇಷ ಅಭಿಯಾನದ ಮೂಲಕ ಕುಡಿಯುವ ನೀರಿನ ಬಾಟಲ್‌ಗಳಲ್ಲಿನ ನೀರಿನ 296 ಮಾದರಿಗಳನ್ನು ವಿಶ್ಲೇಷಣೆಗಾಗಿ ಸಂಗ್ರಹಿಸಿದ್ದು, ಅವುಗಳಲ್ಲಿ 255 ಮಾದರಿಗಳ ವಿಶ್ಲೇಷಣಾ ಕಾರ್ಯ ಪೂರ್ಣಗೊಂಡಿದ್ದು, 72 ಮಾದರಿಗಳು ಸುರಕ್ಷಿತ ಎಂದು, 95 ಮಾದರಿಗಳು ಅಸುರಕ್ಷಿತ ಎಂದು ಹಾಗೂ 88 ಮಾದರಿಗಳು ಕಳಪೆ ಗುಣಮಟ್ಟದ್ದು ಎಂದು ವರದಿಯಾಗಿರುತ್ತವೆ. ಉಳಿದ ಮಾದರಿಗಳ ವಿಶ್ಲೇಷಣಾ ಕಾರ್ಯವು ಪ್ರಗತಿಯಲ್ಲಿರುತ್ತದೆ. ಕರಿದ ಹಸಿರು ಬಟಾಣಿಗಳಲ್ಲಿ ಕೃತಕ ಬಣ್ಣಗಳ ಬಳಕೆಯ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರನೊಬ್ಬ 48 ಗಂಟೆಗಳಿಗೂ ಹೆಚ್ಚು ಕಾಲ ಕ್ರಿಮಿನಲ್ ಪ್ರಕರಣಗಳಿಗೆ ಸಂಬಂಧಿಸಿದ ಕಾಯಿದೆಯ ಅಡಿಯಲ್ಲಿ ಬಂಧನದಲ್ಲಿದ್ದು, ನಂತ್ರ ಜಾಮೀನಿನ ಮೇಲೆ ಬಿಡುಗಡೆಯಾದರೇ ಆತನನ್ನು ಸೇವೆಯಿಂದ ತಂತಾನೇ ಅಮಾನತುಗೊಂಡಿರುತ್ತಾನೆ. ಈ ಹಿನ್ನಲೆಯ್ಲಿ ಸಕ್ಷಮ ಪ್ರಾಧಿಕಾರ ಅಮಾನತು ರದ್ದುಗೊಳಿಸಿ ಮುಂದಿನ ಔಪಚಾರಿಕ ಆದೇಶ ಹೊರಡಿಸುವ ತನಕ ಆತನ ಅಮಾನತು ಮುಂದುವರೆಯುತ್ತದೆ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಕರ್ನಾಟಕ ಆಡಳಿತ ನ್ಯಾಯಾಧಿಕರಣ(ಕಎಟಿ) ನೀಡಿದ್ದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ಕುಂದಾಣ ಗ್ರಾಮ ಪಂಚಾಯ್ತಿ ಪಿಡಿಓ ಡಿ.ಎಂ ಪದ್ಮನಾಭ ಎಂಬುವರು ಹೈಕೋರ್ಟ್ ಗೆ ಅರ್ಜಿಯಲ್ಲಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಮತ್ತು ಸಿಎಂ ಜೋಶಿ ಅವರ ವಿಭಾಗೀಯ ಪೀಠವು ಇಂತಹ ಅರ್ಜಿಯನ್ನು ವಜಾಗೊಳಿಸಿದೆ. ಸರ್ಕಾರಿ ನೌಕರ ಬಂಧನಕ್ಕೆ ಒಳಗಾಗಿದ್ದ ನಂತ್ರ, ನ್ಯಾಯಾಲಯದಿಂದ ಜಾಮೀನು ಪಡೆದು ಹೊರಗೆ ಬಂದ ಮೇಲೆ ನೇರ ಕಚೇರಿಗೆ ಹೋಗಬಹುದೇ ಇಲ್ಲವೇ ಎಂಬುದನ್ನು 2015ರ ಸರ್ಕಾರಿ…

Read More

ನವದೆಹಲಿ: ಕಳೆದ ವಾರ ಏಪ್ರಿಲ್ 15 ರಂದು ಸಂಸತ್ತು ಅಂಗೀಕರಿಸಿದ ವಕ್ಫ್ (ತಿದ್ದುಪಡಿ) ಮಸೂದೆ, 2025 ರ ವಿರುದ್ಧ ಸಲ್ಲಿಸಲಾದ ಪ್ರಕರಣವನ್ನು ಸುಪ್ರೀಂ ಕೋರ್ಟ್ ವಿಚಾರಣೆ ನಡೆಸುವ ಸಾಧ್ಯತೆಯಿದೆ. ಇತ್ತೀಚೆಗೆ ಮುಕ್ತಾಯಗೊಂಡ ಬಜೆಟ್ ಅಧಿವೇಶನದಲ್ಲಿ ಸಂಸತ್ತಿನ ಎರಡೂ ಸದನಗಳು ವಿವಾದಾತ್ಮಕ ಮಸೂದೆಯನ್ನು ಅಂಗೀಕರಿಸಿದವು. ನಂತರ ಕಾಂಗ್ರೆಸ್ ಮತ್ತು ಆಮ್ ಆದ್ಮಿ ಪಕ್ಷ ಸೇರಿದಂತೆ ಹಲವಾರು ಪಕ್ಷಗಳ ನಾಯಕರು ಅಖಿಲ ಭಾರತ ಮುಸ್ಲಿಂ ವೈಯಕ್ತಿಕ ಕಾನೂನು ಮಂಡಳಿಯ ಶಾಸನದ ವಿರುದ್ಧ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದರು. ಕಾಯ್ದೆಯ ಸಿಂಧುತ್ವವನ್ನು ಪ್ರಶ್ನಿಸಿ ಇಲ್ಲಿಯವರೆಗೆ ಸುಪ್ರೀಂ ಕೋರ್ಟ್‌ನಲ್ಲಿ 10 ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಲಾಗಿದೆ. ಪೌರತ್ವ ತಿದ್ದುಪಡಿ ಕಾಯ್ದೆ ಮತ್ತು ಇತರ ಹಲವಾರು ಶಾಸನಗಳಿಗೆ ಮಾಡಿದಂತೆ ಈ ಕಾಯ್ದೆಯ ಸಿಂಧುತ್ವವನ್ನು ಪಕ್ಷವು ಪ್ರಶ್ನಿಸಲಿದೆ ಎಂದು ಕಾಂಗ್ರೆಸ್ ರಾಜ್ಯಸಭಾ ಸಂಸದ ಜೈರಾಮ್ ರಮೇಶ್ ಶುಕ್ರವಾರ ಘೋಷಿಸಿದರು. ತರುವಾಯ, ಅಖಿಲ ಭಾರತ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ ಅಧ್ಯಕ್ಷ ಅಸ್ಸಾವುದ್ದೀನ್ ಓವೈಸಿ, ಕಾಂಗ್ರೆಸ್ ಸಂಸದ ಮೊಹಮ್ಮದ್ ಜಾವೇದ್ ಕೂಡ ಸುಪ್ರೀಂ ಕೋರ್ಟ್‌ನಲ್ಲಿ…

Read More

ಬೆಂಗಳೂರು: ರಾಜ್ಯದಲ್ಲಿ ಮಾರಾಟವಾಗುತ್ತಿರುವಂತ ಔಷಧಿಗಳ ಗುಣಮಟ್ಟದ ಬಗ್ಗೆ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಶಾಕಿಂಗ್ ಮಾಹಿತಿಯನ್ನು ಬಹಿರಂಗಪಡಿಸಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ರಾಜ್ಯ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆಯು ಮಾಹಿತಿ ನೀಡಿದ್ದು,  ಔಷಧ ಆಡಳಿತವು ರಾಜ್ಯದಲ್ಲಿ ತಯಾರಾಗುವ ಮತ್ತು ಮಾರಾಟಕ್ಕಾಗಿ ಸರಬರಾಜಾಗುತ್ತಿರುವ ಔಷಧಗಳ ಮತ್ತು ಕಾಂತಿವರ್ಧಕಗಳ ಮೇಲೆ ನಿಯಮಾನುಸಾರ ನಿಯಂತ್ರಣ  ಕ್ರಮಗಳನ್ನು ಕೈಗೊಳ್ಳುವುದು ಮತ್ತು ಉತ್ತಮ ಗುಣಮಟ್ಟದ, ಸುರಕ್ಷಿತ ಹಾಗೂ ಪರಿಣಾಮಕಾರಿ ಔಷಧಗಳನ್ನು ಸರ್ಕಾರ ನಿಗದಿ ಪಡಿಸಿದ ಬೆಲೆಗಳಲ್ಲಿ ಗ್ರಾಹಕರಿಗೆ ದೊರಕುವಂತೆ ಮಾಡುವುದೇ ಇಲಾಖೆಯ ಮುಖ್ಯ ಉದ್ದೇಶವಾಗಿರುತ್ತದೆ.  ಅಂತೆಯೇ ಇಲಾಖೆಯ ಆಹಾರ ಸುರಕ್ಷತಾ ವಿಭಾಗವು ಸಾರ್ವಜನಿಕರು ಸೇವಿಸುವ ಆಹಾರದ ಗುಣಮಟ್ಟ ಮತ್ತು ಸುರಕ್ಷತಾ ಅಂಶಗಳನ್ನು ಖಾತರಿಪಡಿಸುವ ಮೂಲಕ ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ನಿಟ್ಟಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದೆ. ಔಷಧ ಆಡಳಿತ: ಔಷಧ ಆಡಳಿತ ವಿಭಾಗದ ಅಮಲು ಜಾರಿ ಅಧಿಕಾರಿಗಳು ಸಾರ್ವಜನಿಕ ಆರೋಗ್ಯ ದೃಷ್ಠಿಯಿಂದ ಮಾರ್ಚ್‌ 2025ರ ಮಾಹೆಯಲ್ಲಿ ಒಟ್ಟು 1,891 ಔಷಧ ಮಾದರಿಗಳನ್ನು…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡವಾರು ಪ್ರಮಾಣ 73.45ರಷ್ಟು ಆಗಿದೆ. ಇದರ ಜೊತೆಗೆ ದ್ವಿತೀಯ ಪಿಯುಸಿ ಪರೀಕ್ಷೆ-2 ಹಾಗೂ ಪರೀಕ್ಷೆ-3ಕ್ಕೆ ದಿನಾಂಕವನ್ನು ಹಾಗೂ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ದಿನಾಂಕ 01-03-2025ರಿಂದ 20-03-2025ರವರೆಗೆ ಒಟ್ಟು 1.171 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾಧ್ಯಂತ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವನ್ನು 76 ಮೌಲ್ಯಮಾಪನ ಕೇಂದ್ರಗಳಲ್ಲಿ ದಿನಾಂಕ 21-03-2025ರಿಂದ 02-04-2025ರವರೆಗೆ 28,092 ಮೌಲ್ಯ ಮಾಪಕರಿಂದ ನಡೆಸಲಾಯಿತು. ಇಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶವನ್ನು ಇಂದ ಮಧ್ಯಾಹ್ನ 1.30 ಗಂಟೆಗಳ ನಂತ್ರ ಪ್ರಕಟಿಸಲಾಗುತ್ತದೆ. ಹೀಗಿದೆ ಜಿಲ್ಲಾವಾರು ಶೇಕಡವಾರು ಉತ್ತೀರ್ಣ ಫಲಿತಾಂಶ ಉಡುಪಿ – ಶೇ.93.90 ದಕ್ಷಿಣ ಕನ್ನಡ – ಶೇ.93.57 ಬೆಂಗಳೂರು ದಕ್ಷಿಣ – ಶೇ.85.36 ಕೊಡಗು – ಶೇ.83.84 ಬೆಂಗಳೂರು ಉತ್ತರ – ಶೇ.83.31 ಉತ್ತರ ಕನ್ನಡ –…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಪರೀಕ್ಷೆಗೆ ಹಾಜರಾದಂತ 6,37,805 ವಿದ್ಯಾರ್ಥಿಗಳಲ್ಲಿ 4,68,439 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟಾರೆ ಶೇಕಡವಾರು ಪ್ರಮಾಣ 73.45ರಷ್ಟು ಆಗಿದೆ. ಹಾಗಾದ್ರೇ ಜಿಲ್ಲಾವಾರು ಫಲಿತಾಂಶದ ಮಾಹಿತಿ ಮುಂದಿದೆ ಓದಿ. ದ್ವಿತೀಯ ಪಿಯುಸಿ ಪರೀಕ್ಷೆ-1 ಅನ್ನು ದಿನಾಂಕ 01-03-2025ರಿಂದ 20-03-2025ರವರೆಗೆ ಒಟ್ಟು 1.171 ಪರೀಕ್ಷಾ ಕೇಂದ್ರಗಳಲ್ಲಿ ರಾಜ್ಯಾಧ್ಯಂತ ನಡೆಸಲಾಯಿತು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನ ಕಾರ್ಯವನ್ನು 76 ಮೌಲ್ಯಮಾಪನ ಕೇಂದ್ರಗಳಲ್ಲಿ ದಿನಾಂಕ 21-03-2025ರಿಂದ 02-04-2025ರವರೆಗೆ 28,092 ಮೌಲ್ಯ ಮಾಪಕರಿಂದ ನಡೆಸಲಾಯಿತು. ಇಂದು ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಎಲ್ಲಾ ಕಾಲೇಜುಗಳಲ್ಲಿ ಫಲಿತಾಂಶವನ್ನು ಇಂದ ಮಧ್ಯಾಹ್ನ 1.30 ಗಂಟೆಗಳ ನಂತ್ರ ಪ್ರಕಟಿಸಲಾಗುತ್ತದೆ. ಹೀಗಿದೆ ಜಿಲ್ಲಾವಾರು ಶೇಕಡವಾರು ಉತ್ತೀರ್ಣ ಫಲಿತಾಂಶ ಉಡುಪಿ – ಶೇ.93.90 ದಕ್ಷಿಣ ಕನ್ನಡ – ಶೇ.93.57 ಬೆಂಗಳೂರು ದಕ್ಷಿಣ – ಶೇ.85.36 ಕೊಡಗು – ಶೇ.83.84 ಬೆಂಗಳೂರು ಉತ್ತರ – ಶೇ.83.31 ಉತ್ತರ ಕನ್ನಡ – ಶೇ.82.93 ಶಿವಮೊಗ್ಗ – ಶೇ.79.91 ಬೆಂಗಳೂರು…

Read More

ಬೆಂಗಳೂರು: ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟು ಅಕ್ರಮ ನಡೆಸಿದ ಪ್ರಕರಣ ಸಂಬಂಧ ಬ್ಯಾಂಕ್ ನ ಅಧ್ಯಕ್ಷ ಆರ್.ಎಂ ಮಂಜುನಆಥ ಗೌಡ ಅವರನ್ನು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಬೆಂಗಳೂರಿನ ಅಪೆಕ್ಸ್ ಬ್ಯಾಂಕ್ ನ ಅತಿಥಿ ಗೃಹದಲ್ಲಿದ್ದಂತ ಶಿವಮೊಗ್ಗ ಡಿಸಿಸಿ ಬ್ಯಾಂಕ್ ಅಧ್ಯಕ್ಷ ಆರ್.ಎಂ ಮಂಜುನಾಥ ಗೌಡ ಅವರನ್ನು ಇಡಿ ಅಧಿಕಾರಿಗಳು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನ ಅಡವಿಟ್ಟ ಪ್ರಕರಣ ಸಂಬಂಧ ಮತ್ತೊಬ್ಬ ಸಿಬ್ಬಂದಿಯನ್ನೂ ಇಡಿ ಅಧಿಕಾರಿಗಳು ವಶಕ್ಕೆ ಪಡೆದಿರುವುದಾಗಿ ಮೂಲಗಳಿಂದ ಮಾಹಿತಿ ತಿಳಿದು ಬಂದಿದೆ. ಅಂದಹಾಗೇ 2014 ರಿಂದ 15ರಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಕಲಿ ಚಿನ್ನಾಭರಣ ಅಡವಿಟ್ಟು ಬರೋಬ್ಬರಿ 62.77 ಕೋಟಿ ಸಾಲ ಪಡೆಯಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಡಿ ಅಧಿಕಾರಿಗಳು ಬೆಂಗಳೂರು, ಶಿವಮೊಗ್ಗ ಸೇರಿದಂತೆ ಐದು ಕಡೆಯಲ್ಲಿ ದಾಳಿ ನಡೆಸಿದ್ದಾರೆ. ಈ ಪ್ರಕಣದಲ್ಲಿ ಅಕ್ರಮ ನಡೆದಾಗ ಬ್ಯಾಂಕ್ ನ…

Read More

ಬೆಂಗಳೂರು: ಇಂದು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ಕ್ಕೆ ಪುನರಾವರ್ತಿತ ಮತ್ತು ಫಲಿತಾಂಶ ಉತ್ತಮಪಡಿಸಿಕೊಳ್ಳುವ ವಿದ್ಯಾರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ. ಆ ಬಗ್ಗೆ ಮಾಹಿತಿ ಮುಂದಿದೆ ಓದಿ. ಈ ಬಗ್ಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು ಪರೀಕ್ಷೆ-2ಕ್ಕೆ ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಪುನರಾವರ್ತಿತ ಅಪೂರ್ಣ ಹಾಗೂ ಫಲಿತಾಂಶ ಉತ್ತಮ ಪಡಿಸಿಕೊಳ್ಳುವ ವಿದ್ಯಾರ್ಥಿಗಳು ಮಾಹಿತಿಯನ್ನು ಪ್ರಾಂಶುಪಾಲರು ಪರೀಕ್ಷಾ ತಂತ್ರಾಂಶದಲ್ಲಿ ಇಂದೀಕರಿಸಲು ದಂಡ ರಹಿತ ಕೊನೆಯ ದಿನಾಂಕ 08-04-2025ರಿಂದ 15-04-2025 ಆಗಿರುತ್ತದೆ. ದಂಡ ಸಹಿತ ಕೊನೆಯ ದಿನಾಂಕ 16-04-2025 ರಿಂದ 17-04-2025 ಆಗಿದೆ. ಪ್ರಾಂಶುಪಾಲರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಸಂದಾಯ ಮಾಡಬೇಕಾದ ಕೊನೆಯ ದಿನಾಂಕ ದಂಡ ರಹಿತ 16-04-2025 ಆಗಿದ್ದರೇ, ದಂಡ ಸಹಿತ 19-04-2025 ಆಗಿದೆ. ಪ್ರಾಂಶುಪಾಲರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಸಲ್ಲಿಸಲು ದಿನಾಂಕ 16-04-2025ರಿಂದ 19-04-2025…

Read More

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಶೇ.93.90ರಷ್ಟು ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಉಡುಪಿ ಪ್ರಥಮ ಸ್ಥಾನ ಗಳಿಸಿದರೇ, ಶೇ.73.45ರಷ್ಟು ಫಲಿತಾಂಶ ಪಡೆಯುವ ಮೂಲಕ ಯಾದಗಿರಿ ಕೊನೆಯ ಸ್ಥಾನವನ್ನು ಪಡೆದುಕೊಂಡಿದೆ. ಇದೀಗ ವಿದ್ಯಾರ್ಥಿಗಳು ಉತ್ತರ ಪತ್ರಿಕೆ ಸ್ಕ್ಟಾನ್ಡ್ ಪ್ರತಿ, ಮರು ಮೌಲ್ಯ ಮಾಪನದ ಕುರಿತು ಮಾಹಿತಿ ಬಿಡುಗಡೆ ಮಾಡಿದ್ದು, ಆ ಮಾಹಿತಿ ಮುಂದಿದೆ ಓದಿ. 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ವಿದ್ಯಾರ್ಥಿಗಳ ಫಲಿತಾಂಶದ ಪಟ್ಟಿ KSEABಯ ಪಿಯು ಪರೀಕ್ಷಾ ಪೋರ್ಟಲ್ ಲಾಗಿನ್ ಮೂಲಕ ಆಯಾ ಕಾಲೇಜುಗಳಿಗೆ ಕಳುಹಿಸಲಾಗಿರುತ್ತದೆ. ಉತ್ತರ ಪತ್ರಿಕೆಯ ಸ್ಕ್ಯಾನಿಂಗ್ ಪ್ರತಿ ಹಾಗೂ ಮರು ಮೌಲ್ಯ ಮಾಪನ ಶುಲ್ಕವನ್ನು ಪಾವತಿಸಲು ಆನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ಚಲನ್ ಮುಖಾಂತರ ಪಾವತಿಸಲು ಅವಕಾಶವಿರುತ್ತದೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ಮಾಪನ ಇಲಾಖೆ ತಿಳಿಸಿದೆ. ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿಗಾಗಿ ಅರ್ಜಿ ಸಲ್ಲಿಸಲು ದಿನಾಂಕ 08-04-2025ರಿಂದ 13-04-2025ರವರೆಗೆ ಅವಕಾಶ ನೀಡಿದೆ. ಉತ್ತರ ಪತ್ರಿಕೆಯ ಸ್ಕ್ಯಾನ್ಡ್ ಪ್ರತಿ ಡೌನ್…

Read More

ಬೆಂಗಳೂರು: ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟವಾಗಿದೆ. ಈ ಬಾರಿ ಉಡುಪಿ ಜಿಲ್ಲೆಗೆ ಪ್ರಥಮವನ್ನು ಪಡೆದುಕೊಂಡಿದ್ದರೇ, ಯಾದಗಿರಿ ಜಿಲ್ಲೆ ಕೊನೆಯ ಸ್ಥಾನ ಪಡೆದುಕೊಂಡಿದೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಶಾಲಾ ಶಿಕ್ಷಣ ಸಚಿವ ಮಧು ಎಸ್ ಬಂಗಾರಪ್ಪ ಅವರು, ವಾಣಿಜ್ಯ ವಿಭಾಿ ಶೇ.76.07ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ. ಕಲಾ ವಿಭಾಗದಲ್ಲಿ ಸಂಜನಾ ಬಾಯಿ ಮೊದಲ ರ್ಯಾಂಕ್ ಪಡೆದಿದ್ದಾರೆ. ಬಳ್ಳಾರಿ ಜಿಲ್ಲೆ ಪಿಯು ಕಾಲೇಜಿನ ವಿದ್ಯಾರ್ಥಿನಿ ಆಗಿದ್ದಾರೆ ಎಂದರು. ರಾಮನಗ 69.71, ಕೊಪ್ಪಳ 67.20, ಬಳ್ಳಾರಿ 64.41, ಚಿತ್ರದುರ್ಗ 59.87, ಕೋಲಾರ 72.45, ಬೀದರ್ 67.31, ಬೆಳಗಾವಿ 65.37ರಷ್ಟು ಫಲಿತಾಂಶ ಬಂದಿದೆ ಎಂದರು. ಕರ್ನಾಟಕ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ಮಂಗಳವಾರ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶವನ್ನು ಪ್ರಕಟಿಸಿದೆ. ಫಲಿತಾಂಶಕ್ಕಾಗಿ ಕಾಯುತ್ತಿರುವ ವಿದ್ಯಾರ್ಥಿಗಳು ತಮ್ಮ ಕರ್ನಾಟಕ ದ್ವಿತೀಯ ಪಿಯುಸಿ ಸ್ಕೋರ್ ಕಾರ್ಡ್ ಗಳನ್ನು ಕೆಎಸ್ ಇಎಬಿಯ ಅಧಿಕೃತ ವೆಬ್ ಸೈಟ್ ನಲ್ಲಿ karresults.nic.in ಮತ್ತು kseab.karnataka.gov.in ಪರಿಶೀಲಿಸಬಹುದು. ಮಾರ್ಚ್ 1…

Read More