Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವಿಜಯಪುರದಲ್ಲಿ ವಕ್ಫ್ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಯಾವುದೇ ರೈತರನ್ನು ಒಕ್ಕಲೆಬ್ಬಿಸಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮೊದಲ ಪ್ರತಿಕ್ರಿಯೆಯಲ್ಲಿ ತಿಳಿಸಿದ್ದಾರೆ. ವಿಧಾನಸೌಧದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ವಿಜಯಪುರದಲ್ಲಿ ವಕ್ಫ್ ಆಸ್ತಿ ಸಂಬಂಧ ಯಾವುದೇ ರೈತರನ್ನು ಒಕ್ಕಲೆಬ್ಬಿಸೋದಿಲ್ಲ. ನೋಟಿಸ್ ಕೊಟ್ಟಿದ್ದರೇ ಹಿಂಪಡೆಯಲಾಗುತ್ತದೆ ಎಂಬುದಾಗಿ ಹೇಳಿದರು. ರಾಜ್ಯದ ಇತರೆ ಜಿಲ್ಲೆಗಳಲ್ಲಿಯೂ ರೈತರಿಗೆ ನೋಟಿಸ್ ಕೊಟ್ಟಿದ್ದರೇ ಆ ಬಗ್ಗೆ ಸಚಿವರು ಪರಿಶೀಲನೆ ನಡೆಸಲಿದ್ದಾರೆ. ನಿನ್ನೆ ಕಂದಾಯ ಸಚಿವ ಕೃಷ್ಣಬೈರೇಗೌಡ, ಜಮೀರ್ ಅಹ್ಮದ್ ಹಾಗೂ ಎಂ.ಬಿ ಪಾಟೀಲ್ ಅವರು ಸುದ್ದಿಗೋಷ್ಠಿಯಲ್ಲಿ ವಿವಾದದ ಬಗ್ಗೆ ಸಂಪೂರ್ಣ ಮಾಹಿತಿಯನ್ನು ನೀಡಿದ್ದಾರೆ ಎಂದರು. https://kannadanewsnow.com/kannada/waqf-board-has-not-issued-notices-for-land-allotted-to-farmers-revenue-minister-krishna-byre-gowda/ https://kannadanewsnow.com/kannada/big-news-violation-of-the-right-to-equal-access-to-vip-in-temples-petition-submitted-to-the-supreme-court/
ಬೆಂಗಳೂರು: ರಾಜ್ಯದಲ್ಲಿ ರೈತರಿಗೆ ಮಂಜೂರಾದ ಭೂಮಿಗೆ ವಕ್ಫ್ ಬೋರ್ಡ್ ನೋಟಿಸ್ ನೀಡಿಲ್ಲ ಎಂಬುದಾಗಿ ಕಂದಾಯ ಸಚಿವ ಕೃಷ್ಣಬೈರೇಗೌಡ ಸ್ಪಷ್ಟ ಪಡಿಸಿದ್ದಾರೆ. ವಕ್ಫ್ ಮಂಡಳಿಗೆ ದಾನಿಗಳು ನೀಡಿದ 14,201 ಎಕರೆ ವಕ್ಫ್ ಆಸ್ತಿಯಿತ್ತು. ಅದರಲ್ಲಿ ಭೂ ಸುಧಾರಣೆ ಕಾಯ್ದೆಯಡಿ 11,835 ಎಕರೆ, ಇನಾಮ್ ರದ್ಧತಿ ಕಾಯ್ದೆಯಡಿ 1459 ಎಕರೆ 26 ಗುಂಟೆ ರೈತರಿಗೆ ಮಂಜೂರಾಗಿದೆ ಎಂದಿದ್ದಾರೆ. 133 ಎಕರೆ 17 ಗುಂಟೆ ಬೇರೆ ಬೇರೆ ಯೋಜನೆಗಳಿಗೆ ಭೂ ಸ್ವಾಧೀನವಾಗಿ ಪರಿಹಾರ ನೀಡಲಾಗಿದೆ. ಈ ಮೂರು ವಿಭಾಗಗಳಲ್ಲಿ ಹಂಚಿಕೆಯಾಗಿರುವ ಭೂಮಿಗೆ ಯಾವುದೇ ನೋಟಿಸ್ ಕೊಟ್ಟಿಲ್ಲ. ರೈತರಿಗೆ ಮಂಜೂರಾಗಿರುವ ಜಮೀನನ್ನು ವಾಪಸ್ ಪಡೆಯುವ ಉದ್ದೇಶವೂ ಸರಕಾರಕ್ಕಾಗಲಿ, ವಕ್ಫ್ ಸಚಿವರಿಗಾಗಲಿ ಇಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. https://twitter.com/siddaramaiah/status/1851188645438328909 https://kannadanewsnow.com/kannada/big-news-violation-of-the-right-to-equal-access-to-vip-in-temples-petition-submitted-to-the-supreme-court/ https://kannadanewsnow.com/kannada/big-news-after-the-death-of-the-mother-the-daughter-is-entitled-to-compassionate-appointment-high-courts-important-order/
ಬೆಂಗಳೂರು: ಕೌಶಲ್ಯಾಧಾರಿತ ಉದ್ಯೋಗ ಸೃಷ್ಟಿಗೆ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ಹೆಚ್ಚು ಒತ್ತು ನೀಡುತ್ತಿದ್ದು, ಕಳೆದ ಬಜೆಟ್ ಯುವಜನರಲ್ಲಿ ಕುಶಲತೆ ವೃದ್ಧಿಸುವ ನಿಟ್ಟಿನಲ್ಲಿ ₹3 ಲಕ್ಷ ಕೋಟಿಗೂ ಹೆಚ್ಚು ಹಣವನ್ನು ಮೀಸಲಿಡಲಾಗಿದೆ ಎಂದು ಕೇಂದ್ರದ ಭಾರೀ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಪ್ರಧಾನಮಂತ್ರಿ ಉದ್ಯೋಗ ಮೇಳ (ರೋಜ್ ಗಾರ್ ಮೇಳ)ದ 2ನೇ ಹಂತದಲ್ಲಿ ದೇಶದಾದ್ಯಂತ ವಿವಿಧ ಕೇಂದ್ರ ಸರಕಾರಿ ಇಲಾಖೆಗಳಲ್ಲಿ ಉದ್ಯೋಗಕ್ಕೆ ಆಯ್ಕೆಯಾದ 51,000 ಯುವಜನರಿಗೆ ದೇಶದ 40 ಸ್ಥಳಗಳಲ್ಲಿ ನೇರ ನೇಮಕಾತಿ ಪತ್ರ ನೀಡುವ ಕಾರ್ಯಕ್ರಮ ನಡೆಯಿತು. ಆನ್ಲೈನ್ ವೇದಿಕೆಯಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಪ್ರಧಾನಿಗಳು ಪಾಲ್ಗೊಂಡಿದ್ದರು ಹಾಗೂ ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಬೆಂಗಳೂರು ನಗರದ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಪ್ಪತೈದು ಯುವ ಜನರಿಗೆ ನೇಮಕಾತಿ ಪತ್ರ ವಿತರಿಸಿದ ನಂತರ ಸಭೆಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕೇಂದ್ರ ಸರಕಾರದ ಹನ್ನೆರಡು ಇಲಾಖೆಗಳಲ್ಲಿ ನೇಮಕಾತಿ ಮಾಡಿಕೊಳ್ಳಲಾಗಿದೆ. 2047ನೇ ವರ್ಷಕ್ಕೆ…
“ಆಹಾರೋಹಿ ದೇಹ ಸಂಭವ” ಅಂದರೆ ನಾವು ಯಾವ ಆಹಾರ ಸೇವಿಸುತ್ತೇವೆಯೋ ಅಂತೆಯೇ ನಮ್ಮ ದೇಹದ ರಚನೆ ಆಗುತ್ತದೆ.ನಾವು ಆಧುನಿಕತೆಗೆ ಹೊಂದಿಕೊಳ್ಳುತ್ತಾ ನಮ್ಮ ಜೀವನ ಶೈಲಿ,ಆಹಾರ ಮತ್ತು ಆಹಾರ ಕ್ರಮಗಳನ್ನು ಆಧುನಿಕತೆಗೆ ತಕ್ಕಂತೆ ಬದಲಾಯಿಸಿಕೊಂಡಿದ್ದೇವೆ. ಆಯುರ್ವೇದವು ಆಹಾರ, ನಿದ್ರೆ ಮತ್ತು ಬ್ರಹ್ಮಚರ್ಯ ಇವುಗಳನ್ನು ಮಾನವ ಜೀವನದ ಮೂರು ಸ್ತಂಭಗಳು ಎಂದು ವಿವರಿಸಿದೆ. ಹೇಗೆ ವಾಹನ ಚಲಿಸಲು ಇಂಧನ ಮುಖ್ಯವೋ, ಹಾಗೆಯೇ ಮಾನವನ ದೇಹದ ಚಟುವಟಿಕೆಗೆ ಮತ್ತು ಬೆಳವಣಿಗೆಗೆ ಆಹಾರವು ಅತ್ಯಗತ್ಯ. ಹೀಗಿರುವಾಗ ಆಹಾರದ ರುಚಿಗೆ ಮತ್ತು ಆಕರ್ಷಣೆಗೆ ಮೊರೆಹೋಗಿ ಅನೇಕ ರೋಗಗಳಿಗೆ ತುತ್ತಾಗಿದ್ದೇವೆ. ಹಾಗಾದರೆ ನಾವು ಎಂತಹ ಆಹಾರವನ್ನು ಸೇವಿಸಬೇಕು? ಎಷ್ಟು ಪ್ರಮಾಣದಲ್ಲಿ ಆಹಾರವನ್ನು ಸೇವಿಸಬೇಕು? ಆಹಾರದ ಕ್ರಮವೇನು ಎಂಬ ಹಲವು ಪ್ರಶ್ನೆಗಳಿಗೆ ಆಯುರ್ವೇದದಲ್ಲಿ ಹೀಗಿದೆ ವಿವರಣೆ. ಎಂತಹ ಆಹಾರವನ್ನು ಸೇವಿಸಬೇಕು? ಆಯುರ್ವೇದವು ಆರು ರಸ(taste)ಗಳನ್ನು ತಿಳಿಸಿದೆ ಅವುಗಳೆಂದರೆ ಮಧುರ ರಸ(ಸಿಹಿ), ಆಮ್ಲರಸ(ಹುಳಿ), ಲವಣರಸ(ಉಪ್ಪು),ತಿಕ್ತರಸ(ಕಹಿ), ಕಟುರಸ (ಖಾರ), ಕಷಾಯ ರಸ(ಒಗರು) ನಿಯಮಿತವಾಗಿ ಆರು ರಸಗಳಿಂದ ಕೂಡಿದ ಆಹಾರವನ್ನು ಸೇವಿಸುವುದರಿಂದ ದೇಹವು ಬಲದಾಯಕವಾಗುತ್ತದೆ.ಮತ್ತು ನಿಯಮಿತವಾಗಿ…
ಬೆಂಗಳೂರು : ಕಳೆದ 10 ತಿಂಗಳುಗಳಿಂದ ಸ್ಥಗಿತಗೊಂಡಿರುವ ಬೀದರ್ ನಾಗರೀಕ ವಿಮಾನಯಾನ ಸೇವೆಯನ್ನು ಪುನಾರಂಭಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿಂದು ನಡೆದ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಸಭೆಯ ಬಳಿಕ ವಿವರ ನೀಡಿದ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಉಡಾನ್ ಯೋಜನೆಯಡಿ ನೀಡಲಾಗುತ್ತಿದ್ದ ಸಬ್ಸಿಡಿ ಸ್ಥಗಿತಗೊಳಿಸಿದ ಹಿನ್ನೆಲೆಯಲ್ಲಿ ವಿಮಾನ ಯಾನ ಸೇವೆ ಸ್ಥಗಿತವಾಗಿತ್ತು. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರವೇ ಸಬ್ಸಿಡಿ ನೀಡಿ ಕರುನಾಡ ಕಿರೀಟ ಬೀದರ್ ಗೆ ವಾಯುಯಾನ ಕಲ್ಪಿಸಲು ನಿರ್ಧರಿಸಿದೆ ಎಂದರು. ರಾಜ್ಯ ಸರ್ಕಾರದ ವತಿಯಿಂದ ನೀಡಲಾಗುವ ಸಬ್ಸಿಡಿ ಹಣದ ಪೈಕಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ಶೇ. 70ರಷ್ಟು ಮತ್ತು ರಾಜ್ಯ ಸರ್ಕಾರ ಶೇ.30 ಭರಿಸಲಿದೆ. ಇನ್ನು ಕೆಲವೇ ತಿಂಗಳುಗಳಲ್ಲಿ ವಿಮಾನಯಾನ ಸೇವೆ ಪುನಾರಂಭವಾಗಲಿದೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು. ಪ್ರವಾಸೋದ್ಯಮಕ್ಕೆ ಆದ್ಯತೆ: ಬೀದರ್ ಸರ್ವ ಧರ್ಮ ಸಮನ್ವಯ ಕೇಂದ್ರ. ಸರ್ವ ಜನಾಂಗದ ಶಾಂತಿಯ ತೋಟ. ಇಲ್ಲಿ ಹಿಂದೂ, ಮುಸ್ಲಿಂ, ಸಿಖ್, ಇಸಾಯಿಗಳು…
ಬೆಂಗಳೂರು: ವಿಜಯಪುರ ಜಿಲ್ಲೆಯ ತಿಕೋಟಾ ತಾಲೂಕಿನ ಹೊನವಾಡ ಗ್ರಾಮದಲ್ಲಿ ವಕ್ಫ್ ಆಸ್ತಿಯೆಂದು ಯಾವ ರೈತರಿಗೂ ನೋಟೀಸ್ ಕೊಟ್ಟಿಲ್ಲ. ಆದ್ದರಿಂದ ಯಾರೂ ಆತಂಕಕ್ಕೆ ಒಳಗಾಗಬೇಕಿಲ್ಲ. ಈ ವಿಚಾರದಲ್ಲಿ ಬಿಜೆಪಿ ಬೇಕೆಂದೇ ರಾಜಕೀಯ ಮಾಡಿ, ಇದನ್ನು ವಿವಾದ ಮಾಡುತ್ತಿದೆ ಎಂದು ಸರಕಾರದ ಪರವಾಗಿ ಮೂವರು ಸಚಿವರು ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ವಿಜಯಪುರ ಜಿಲ್ಲೆಯಲ್ಲಿ ಈ ಸಂಬಂಧ ಉಂಟಾಗಿರುವ ಗೊಂದಲಗಳನ್ನು ನಿವಾರಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಉಸ್ತುವಾರಿ ಮತ್ತು ಬೃಹತ್ ಹಾಗೂ ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ, ಕಂದಾಯ ಸಚಿವ ಕೃಷ್ಣ ಬೈರೇಗೌಡ ಮತ್ತು ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಅವರು ವಿಧಾನಸೌಧದಲ್ಲಿ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು. ಕೃಷ್ಣ ಬೈರೇಗೌಡ ಮಾತನಾಡಿ, ವಿಜಯಪುರ ಜಿಲ್ಲೆಯಲ್ಲಿ ಒಂದು ಕಾಲಕ್ಕೆ 14,201.32 ಎಕರೆ ವಕ್ಫ್ ಮಂಡಳಿಯದಾಗಿತ್ತು. ಈ ಪೈಕಿ ಭೂ ಸುಧಾರಣಾ ಕಾಯ್ದೆಯಡಿ 11,835.29 ಎಕರೆ ಮತ್ತು ಇನಾಂ ರದ್ದತಿ ಕಾಯ್ದೆಯಡಿ 1,459.26 ಎಕರೆಯನ್ನು ರೈತರಿಗೆ ಮಂಜೂರು ಮಾಡಲಾಗಿದೆ. 137 ಎಕರೆಯನ್ನು ವಿವಿಧ ಯೋಜನೆಗಳಿಗೆ…
ಬೆಂಗಳೂರು: ನಗರದಲ್ಲಿ ಉತ್ತಮ ಸಾರಿಗೆ ಸೇವೆಯನ್ನು ಒದಗಿಸುತ್ತಿರುವುದರಲ್ಲಿ ಬಿಎಂಟಿಸಿ ಮುಂಚೂಣಿಯಲ್ಲಿದೆ. ಈಗಾಗಲೇ ಈ ಸೇವೆಗೆ ಹಲವು ಪ್ರಶಸ್ತಿಗಳನ್ನು ಮುಡಿಗೇರಿಸಿಕೊಂಡಿರುವಂತ ಬಿಎಂಟಿಸಿಗೆ, ಈಗ ರಾಷ್ಟ್ರಮಟ್ಟದ Award of Excellence in Urban Transport ಪ್ರಶಸ್ತಿ ಲಭಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಬಿಎಂಟಿಸಿ, ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯವು ನೀಡುವ City with Best Record of Public Involvement in Transport ವಿಭಾಗದಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು Award of Excellence in Urban Transport ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡಿದೆ ಎಂದಿದ್ದಾರೆ. ದಿನಾಂಕ 27.10.2024 ರಂದು ಗುಜರಾತ್ ರಾಜ್ಯದಲ್ಲಿ ಮಹಾತ್ಮ ಗಾಂಧಿ ಮಂದಿರ ಕನ್ವೆನ್ಷನ್ ಸೆಂಟರ್, ಗಾಂಧಿನಗರದಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಭಾರತ ಸರ್ಕಾರದ ವಸತಿ ಮತ್ತು ನಗರ ವ್ಯವಹಾರಗಳ ಸಚಿವರಾದ ಮನೋಹರಲಾಲ್ ಅವರಿಂದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಮಾನ್ಯ ವ್ಯವಸ್ಥಾಪಕ ನಿರ್ದೇಶಕರಾದ ರಾಮಚಂದ್ರನ್ ಆರ್. ಭಾ.ಆ.ಸೇ. ರವರು Award of Excellence in…
ಬೆಂಗಳೂರು: ರಾಜ್ಯದ ಪದವಿ ಪೂರ್ವ ಕಾಲೇಜು ಉಪನ್ಯಾಸಕರಿಗೆ ಗುಡ್ ನ್ಯೂಸ್ ಎನ್ನುವಂತೆ, ರಾಜ್ಯ ಸರ್ಕಾರವು ಉಪನ್ಯಾಸಕರಿಗೆ ವಿಶೇಷ ಭತ್ಯೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಇಂದು ಪದವಿ ಪೂರ್ವ ಶಿಕ್ಷಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಅಧ್ಯಕ್ಷರು, ಕರ್ನಾಟಕ ರಾಜ್ಯ ಪದವಿ ಪೂರ್ವ ಕಾಲೇಜುಗಳ ಉಪನ್ಯಾಸಕರ ಸಂಘ(ರಿ), ಬೆಂಗಳೂರು ಇವರ ದಿನಾಂಕ:10.06.2024ರ ಉಲ್ಲೇಖ(2)ರ ಪತ್ರವನ್ನು ಪರಿಶೀಲಿಸಲಾಯಿತು. ಮಾನ್ಯ ಕರ್ನಾಟಕ ಆಡಳಿತ ನ್ಯಾಯಮಂಡಳಿಯು ಅರ್ಜಿ ಸಂಖ್ಯೆ:4412-4428 ರಲ್ಲಿ ದಿನಾಂಕ:05.05.2021 ರ ತೀರ್ಪಿನಲ್ಲಿ ನೀಡಿದ ನಿರ್ದೇಶನ ಮತ್ತು ಮಾನ್ಯ ಕರ್ನಾಟಕ ಉಚ್ಚ ನ್ಯಾಯಾಲಯವು W.P. No:6902/2022 ರಲ್ಲಿ ದಿನಾಂಕ:20.06.2023 ರಂದು ನೀಡಿದ ತೀರ್ಪಿನಲ್ಲಿನ ಅಭಿಪ್ರಾಯದ ಬೆಳಕಿನಲ್ಲಿ, 2007-08 ರ ಶಿಕ್ಷಕರುಗಳ ನೇರ ನೇಮಕಾತಿ ಅಧಿಸೂಚನೆಯನ್ವಯ ನೇಮಕಾತಿ ಪ್ರಕ್ರಿಯೆ ಕೈಗೊಂಡು ಪಕಟಿಸಲಾದ ಅಂತಿಮ ಆಯ್ಕೆ ಪಟ್ಟಿಯಲ್ಲಿನ ಶಿಕ್ಷಕರುಗಳಿಗೆ ಸೀಮಿತಗೊಂಡಂತೆ ವಿಶೇಷ ಭತ್ಯೆಯನ್ನು ಮಂಜೂರು ಮಾಡಿ, ವಿಸ್ತ್ರತವಾದ ಆದೇಶಗಳನ್ನು ಉಲ್ಲೇಖ-1 ರಲ್ಲಿ ಹೊರಡಿಸಲಾಗಿರುತ್ತದೆ. ಸದರಿ ಆದೇಶವು ಸ್ವಯಂ ವೇದ್ಯವಾಗಿದ್ದು ಸ್ಪಷ್ಟವಾಗಿರುತ್ತದೆ ಎಂದಿದ್ದಾರೆ. ಕರ್ನಾಟಕ ಆಡಳಿತ ನ್ಯಾಯಮಂಡಳಿಯ…
ಬೆಂಗಳೂರು:-ಪ್ರಸಕ್ತ ಸಾಲಿನ ಭಾರತ ಸರ್ಕಾರದ ಪ್ರಧಾನಮಂತ್ರಿ ಉದ್ಯೋಗ ಸೃಜನ (ಪಿಎಂಇಜಿಪಿ) ಕಾರ್ಯಕ್ರಮದಡಿಯಲ್ಲಿ ಉತ್ಪಾದನೆ/ ಸೇವಾ ಘಟಕಗಳಿಗೆ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮುಖಾಂತರ ಎಲ್ಲಾ ವರ್ಗದವರು ಹೊಸದಾಗಿ ಸ್ವಂತ ಉದ್ಯೋಗ ಆರಂಭಿಸುವ ನಿರುದ್ಯೋಗ ಯುವಕ, ಯುವತಿಯರಿಂದ ಆನ್ಲೈನ್ನಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಸ್ವ-ಉದ್ಯೋಗ ಮಾಡಿಕೊಳ್ಳುವವರಿಗೆ ಪಟ್ಟಣ/ನಗರ/ಗ್ರಾಮೀಣ ಪ್ರದೇಶಗಳಲ್ಲಿ ಹೊಸ ಉದ್ದಿಮೆ ಘಟಕಗಳನ್ನು ಸ್ಥಾಪಿಸುವವರಿಗೆ ಬ್ಯಾಂಕಿನಿಂದ ಗರಿಷ್ಠ 50 ಲಕ್ಷಗಳವರೆಗೆ ಸಾಲವನ್ನು ನೀಡಿ ಗರಿಷ್ಠ ಶೇ.25 ರಿಂದ 35 ರವರೆಗೆ ಸಹಾಯಧನ ನೀಡಲಾಗುವುದು. ಕಾಫಿ ಗ್ರೈಂಡಿಂಗ್, ಫ್ಲೋರ್ ಮಿಲ್, ಸಿಮೆಂಟ್ ಬ್ಲಾಕ್ಸ್, ವರ್ಮಿ ಕಾಂಪೋಸ್ಟ್, ಜೇನುಕೃಷಿ, ಎಣ್ಣೆ ತಯಾರಿಕೆ, ರಬ್ಬರ್, ಪಶು ಆಹಾರ, ಜ್ಯೂಸ್ ತಯಾರಿಕೆ, ರೆಡಿಮೆಡ್ ಗಾರ್ಮೆಂಟ್ಸ್, ಫ್ಲೆಕ್ಸ್ ಅಂಡ್ ಪ್ರಿಂಟಿಂಗ್ ಪ್ರಸ್, ಬ್ಯೂಟಿ ಪಾರ್ಲರ್, ಸಲೂನ್, X-Ray scanning, Medical lab, ಅಡಿಕೆ ಮತ್ತು ಪೇಪರ್ ಪ್ಲೇಟ್ಸ್, ಶಾಮಿಯಾನ, ಸೆಂಟ್ರಿಂಗ್ ವಕ್ರ್ಸ್, ಎಂಜಿನಿಯರಿಂಗ್ ವಕ್ರ್ಸ್, ವೆಲ್ಡಿಂಗ್, ವಾಟರ್ ಸರ್ವೀಸ್ ಸ್ಟೇಷನ್, ಹಸು/ಕುರಿ/ಮೇಕೆ/ಎಮ್ಮೆ/ಕೋಳಿ/ಬಾತು ಕೋಳಿ/ಮೀನು ಸಾಕಾಣಿಕೆ ಹಾಗೂ ಸಸ್ಯಹಾರಿ ಮತ್ತು ಮಾಂಸಹಾರಿ ಹೋಟೆಲ್…
ಬೆಂಗಳೂರು: ಪರಿಶಿಷ್ಟ ಜಾತಿಗಳಲ್ಲಿ (ಎಸ್ಸಿ) ಆಂತರಿಕ ಮೀಸಲಾತಿ ನೀಡಲು ರಾಜ್ಯ ಸಚಿವ ಸಂಪುಟ ಸೋಮವಾರ ಒಪ್ಪಿಗೆ ನೀಡಿದ್ದು, ಪ್ರಾಯೋಗಿಕ ದತ್ತಾಂಶಗಳನ್ನು ಸಂಗ್ರಹಿಸುವ ಕಾರ್ಯವನ್ನು ನಿರ್ವಹಿಸುವ ಆಯೋಗವನ್ನು ರಚಿಸಲು ನಿರ್ಧರಿಸಿದೆ. ಹೈಕೋರ್ಟ್ ನ ನಿವೃತ್ತ ನ್ಯಾಯಾಧೀಶರ ನೇತೃತ್ವದಲ್ಲಿ ಆಯೋಗವನ್ನು ರಚಿಸಲಾಗುವುದು ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ.ಪಾಟೀಲ್ ಸಂಪುಟ ಸಭೆಯ ನಂತರ ಸುದ್ದಿಗಾರರಿಗೆ ತಿಳಿಸಿದರು. “ಸುಪ್ರೀಂ ಕೋರ್ಟ್ನಲ್ಲಿ ಆಂತರಿಕ ಮೀಸಲಾತಿ ನೀಡುವ ಬಗ್ಗೆ ಕರ್ನಾಟಕದಲ್ಲಿ ಬೇಡಿಕೆಗಳು, ಚರ್ಚೆಗಳು ಮತ್ತು ಚಿಂತನೆಗಳು ನಡೆದವು. ಎಸ್ಸಿಗಳಲ್ಲಿ ಆಂತರಿಕ ಮೀಸಲಾತಿಗೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ನ ಇತ್ತೀಚಿನ ತೀರ್ಪಿನ ಹಿನ್ನೆಲೆಯಲ್ಲಿ, ಎಸ್ಸಿಗಳಲ್ಲಿ ಆಂತರಿಕ ಮೀಸಲಾತಿ ನೀಡಲು ಕ್ಯಾಬಿನೆಟ್ ಇಂದು ಅನುಮೋದನೆ ನೀಡಿದೆ ಎಂದು ಪಾಟೀಲ್ ಹೇಳಿದರು. “…. ದತ್ತಾಂಶವನ್ನು ಪಡೆದ ನಂತರ, ಮುಂದಿನ ಕ್ರಮವನ್ನು ನಿರ್ಧರಿಸಲು ನಿರ್ಧರಿಸಲಾಗಿದೆ. ಮೂರು ತಿಂಗಳಲ್ಲಿ ವರದಿ ಸಲ್ಲಿಸುವಂತೆ ಸರ್ಕಾರ ಸಮಿತಿಗೆ ಸೂಚಿಸಲಿದೆ’ ಎಂದು ಅವರು ಹೇಳಿದರು. ಆಯೋಗವು ತನ್ನ ವರದಿಯನ್ನು ಸಲ್ಲಿಸುವವರೆಗೆ ಮುಂಬರುವ ಎಲ್ಲಾ ನೇಮಕಾತಿಗಳನ್ನು ಕನಿಷ್ಠ ಮೂರು ತಿಂಗಳವರೆಗೆ…