Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಾಳೆ, ನಾಡಿದ್ದು ವಿಧಾನ ಪರಿಷತ್ತಿನಲ್ಲಿ ಕೆಲ ಮಹತ್ವದ ವಿಧೇಯಕಗಳನ್ನು ಕಾಂಗ್ರೆಸ್ ಸರ್ಕಾರ ಮಂಡನೆ ಮಾಡಲಾಗುತ್ತಿದೆ. ಈ ಬಗ್ಗೆ ಮಹತ್ವದ ಚರ್ಚೆ ಕೂಡ ನಡೆಯಲಿದೆ. ಈ ಹಿನ್ನಲೆಯಲ್ಲಿ ಸದನದ ಸದಸ್ಯರಿಗೆ ಕಡ್ಡಾಯವಾಗಿ ಹಾಜರಿರುವಂತೆ ಪಕ್ಷದಿಂದ ವಿಪ್ ಜಾರಿಗೊಳಿಸಲಾಗಿದೆ. ಈ ಕುರಿತಂತೆ ವಿಧಾನಪರಿಷತ್ ಸದಸ್ಯರಿಗೆ ಮುಖ್ಯ ಸಚೇತಕ ಸಲೀಂ ಅಹ್ಮದ್ ಅವರು ಪತ್ರ ಬರೆದಿದ್ದಾರೆ. ಅದರಲ್ಲಿ ವಿಧಾನ ಪರಿಷತ್ತಿನ ಅಧಿವೇಶನದಲ್ಲಿ ಮಹತ್ವದ ವಿಧೇಯಕಗಳು ಚರ್ಚೆಗೆ ಬರಲಿದ್ದಾವೆ ಅಂತ ಹೇಳಿದ್ದಾರೆ. ದಿನಾಂಕ 25-07-2024 ಹಾಗೂ 26-07-2024ರಂದು ಅಧಿವೇಶನದ ಪ್ರಾರಂಭದಿಂದ ಮುಗಿಯುವವರೆಗೂ ತಾವುಗಳು ವಿಧಾನ ಪರಿಷತ್ ಕಲಾಪಗಳ ಸಂದರ್ಭದಲ್ಲಿ ಕಡ್ಡಾಯವಾಗಿ ಸನದಲ್ಲಿ ಹಾಜರಿರಲು ವಿಪ್ ನೀಡಲಾಗಿದೆ ಅಂತ ತಿಳಿಸಿದ್ದಾರೆ. https://kannadanewsnow.com/kannada/railways-recruited-5-02-lakh-candidates-between-2014-and-2024-130581-post-covid/ https://kannadanewsnow.com/kannada/cm-siddaramaiah-likely-to-meet-governor-in-a-few-minutes-discuss-current-developments-report-likely/
ನವದೆಹಲಿ: ಭಾರತೀಯ ರೈಲ್ವೆಯಿಂದ 2014-2024ರ ಅವಧಿಯಲ್ಲಿ ರೈಲ್ವೆಯಲ್ಲಿ 5.02 ಲಕ್ಷ ಅಭ್ಯರ್ಥಿಗಳನ್ನು ನೇಮಕ ಮಾಡಲಾಗಿದೆ. ಕೋವಿಡ್ -19 ಕಾರಣದಿಂದಾಗಿ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಿದ ನಂತರ ಕಂಪ್ಯೂಟರ್ ಆಧಾರಿತ ಪರೀಕ್ಷೆಗಳ ಮೂಲಕ 1,30,581 ಅಭ್ಯರ್ಥಿಗಳನ್ನು ನೇಮಕ ಮಾಡಲಾಗಿದೆ. ಈ ಕುರಿತಂತೆ ಭಾರತೀಯ ರೈಲ್ವೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ರೈಲ್ವೆಯಲ್ಲಿ ಖಾಲಿ ಹುದ್ದೆಗಳ ಸಂಖ್ಯೆ ಮತ್ತು ಭರ್ತಿ ಮಾಡುವುದು ಅದರ ಗಾತ್ರ, ಪ್ರಾದೇಶಿಕ ವಿತರಣೆ ಮತ್ತು ಕಾರ್ಯಾಚರಣೆಯ ನಿರ್ಣಾಯಕತೆಯನ್ನು ಪರಿಗಣಿಸಿ ನಿರಂತರ ಪ್ರಕ್ರಿಯೆಗಳಾಗಿವೆ. ನಿಯಮಿತ ಕಾರ್ಯಾಚರಣೆಗಳು, ತಂತ್ರಜ್ಞಾನದಲ್ಲಿನ ಬದಲಾವಣೆಗಳು, ಯಾಂತ್ರೀಕರಣಗಳು ಮತ್ತು ನವೀನ ಅಭ್ಯಾಸಗಳನ್ನು ಪೂರೈಸಲು ಸಾಕಷ್ಟು ಮತ್ತು ಸೂಕ್ತ ಮಾನವಶಕ್ತಿಯನ್ನು ಒದಗಿಸಲಾಗುತ್ತದೆ. ಕಾರ್ಯಾಚರಣೆ ಮತ್ತು ತಾಂತ್ರಿಕ ಅವಶ್ಯಕತೆಗಳಿಗೆ ಅನುಗುಣವಾಗಿ ರೈಲ್ವೆ ನೇಮಕಾತಿ ಏಜೆನ್ಸಿಗಳೊಂದಿಗೆ ಇಂಡೆಂಟ್ಗಳನ್ನು ನಿಯೋಜಿಸುವ ಮೂಲಕ ಖಾಲಿ ಹುದ್ದೆಗಳನ್ನು ಪ್ರಾಥಮಿಕವಾಗಿ ಭರ್ತಿ ಮಾಡಲಾಗುತ್ತದೆ ಎಂದಿದೆ. ಕೋವಿಡ್ -19 ಕಾರಣದಿಂದಾಗಿ ವಿಧಿಸಲಾದ ನಿರ್ಬಂಧಗಳನ್ನು ಸಡಿಲಿಸಿದ ನಂತರ, 2.37 ಕೋಟಿಗೂ ಹೆಚ್ಚು ಅಭ್ಯರ್ಥಿಗಳನ್ನು ಒಳಗೊಂಡ ಎರಡು ಪ್ರಮುಖ ಪರೀಕ್ಷೆಗಳನ್ನು ಯಶಸ್ವಿಯಾಗಿ ನಡೆಸಲಾಗಿದೆ. 1. 26…
ಬೆಂಗಳೂರು: ನಗರದಲ್ಲಿ ದಿನೇ ದಿನೇ ಡೆಂಗ್ಯೂ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಡೆಂಗ್ಯೂಗೆ ಕಾರಣವಾಗಿರುವಂತ ಸೊಳ್ಳೆ ನಿಯಂತ್ರಣಕ್ಕಾಗಿ, ಸೊಳ್ಳೆ ಹೆಚ್ಚಿರುವಂತ ಬೆಂಗಳೂರಿನ ಏರಿಯಾ ಜನರಿಗೆ ಬಿಬಿಎಂಪಿಯಿಂದಲೇ ಡೀಟ್ ಕ್ರೀಮ್, ನೀಮ್ ಆಯಿಲ್ ವಿತರಣೆ ಮಾಡಲಿದೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಡೆಂಘೀ ನಿಯಂತ್ರಣಕ್ಕೆ ಸಂಬಂಧಿಸಿದಂತೆ ಆಯಾ ವಲಯಗಳಲ್ಲಿ ಸೂಕ್ತ ಕ್ರಮಗಳನ್ನು ಕೈಗೊಳ್ಳಲು ಮುಖ್ಯ ಆಯುಕ್ತರಾದ ತುಷಾರ್ ಗಿರಿ ನಾಥ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಬಿಬಿಎಂಪಿಯ ವಿವಿಧ ವಿಷಯಗಳಿಗೆ ಸಂಬಂಧಿಸಿದಂತೆ ಬಿ.ಎಸ್.ಡಬ್ಲ್ಯೂ.ಎಂ.ಎಲ್ ನಲ್ಲಿ ನಡೆದ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, ನಗರದಲ್ಲಿ ಪ್ರತಿನಿತ್ಯ ಸರಾಸರಿ 150 ರಿಂದ 160 ಡೆಂಘೀ ಪ್ರಕರಣಗಳು ಕಂಡುಬರುತ್ತಿದ್ದು, ಜುಲೈ 1 ರಿಂದ ನಿನ್ನೆಯವರೆಗೆ 3304 ಪ್ರಕರಣಗಳು ವರದಿಯಾಗಿವೆ. ಈ ಸಂಬಂಧ ಎಲ್ಲಾ ವಲಯಗಳಲ್ಲಿ ಡೆಂಘೀ ನಿಯಂತ್ರಣಕ್ಕಾಗಿ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು. ವಲಯ ಆಯುಕ್ತರು ಡೆಂಘೀ ನಿಯಂತ್ರಿಸುವ ಸಂಬಂಧ ಆರೋಗ್ಯ ವಿಭಾಗದ ಅಧಿಕಾರಿಗಳ ಜೊತೆ ಪ್ರತಿನಿತ್ಯ ಸಭೆ ನಡೆಸಿ ಮೇಲ್ವಿಚಾರಣೆ ಮಾಡಬೇಕು. ಆಯಾ ವಲಯ ವ್ಯಾಪ್ತಿಯಲ್ಲಿ ಹೆಚ್ಚು ಡೆಂಘೀ ಪ್ರಕರಣಗಳು ಕಂಡುಬರುವ…
ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಪಾರದರ್ಶಕತೆಗೆ ನೂತನ ತಂತ್ರಾಂಶವನ್ನು ಅಭಿವೃದ್ಧಿ ಪಡಿಸಲಾಗಿದೆ. ಈ ಬಗ್ಗೆ ಕಂದಾಯ ಸಚಿವ ಕೃಷ್ಣಭೈರೇಗೌಡ ಮಾಹಿತಿ ನೀಡಿದ್ದು, ರೈತರಿಗಾಗುತ್ತಿರುವಂತ ತೊಂದರೆಗಳನ್ನು ನಿವಾರಿಸುವ ಸಲುವಾಗಿ ಸರ್ಕಾರ ಪಹಣಿ ತಿದ್ದುಪಡಿ ಮತ್ತು ಪೌತಿ ಖಾತೆ ಇತ್ಯಾದಿಗಳ ಇತ್ಯರ್ಥಕ್ಕಾಗಿ ಕಂದಾಯ ಅದಾಲತ್ ಗಳನ್ನು ನಡೆಸುತ್ತಿದೆ ಎಂದರು. ರಾಜ್ಯದ ರೈತರಿಗೆ ಮಂಜೂರಾದ ಜಮೀನುಗಳ ಪೋಡಿ, ದುರಸ್ತಿ ಕಾರ್ಯವನ್ನು ಆನ್ ಲೈನ್ ಮುಖಾಂತರ ನಿರ್ವಹಿಸಲು ಹೊಸ ತಂತ್ರಾಂಶಗಳನ್ನು ಅಭಿವೃದ್ಧಿ ಪಡಿಸಲಾಗುತ್ತಿದೆ ಎಂಬುದಾಗಿ ಹೇಳುವ ಮೂಲಕ, ಗುಡ್ ನ್ಯೂಸ್ ನೀಡಿದ್ದಾರೆ. https://twitter.com/KarnatakaVarthe/status/1816092459551838215 https://kannadanewsnow.com/kannada/muda-scam-bjp-jds-members-stage-dharna-in-assembly/ https://kannadanewsnow.com/kannada/cm-siddaramaiah-likely-to-meet-governor-in-a-few-minutes-discuss-current-developments-report-likely/
ಬೆಂಗಳೂರು: ಸದನದಲ್ಲಿ ಮುಡಾ ಹಗರಣ ಸಂಬಂಧ ಚರ್ಚೆಗೆ ಅವಕಾಶ ನೀಡದ ಕಾರಣ, ವಿಧಾನಸಭೆಯಲ್ಲೇ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರಿಂದ ಆಹೋರಾತ್ರಿ ಧರಣಿಗೆ ಕರೆ ನೀಡಲಾಗಿತ್ತು. ಇದೀಗ ಸದನ ಮುಂದೂಡಲ್ಪಟ್ಟರೂ, ವಿಧಾನಸಭೆಯಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಸದಸ್ಯರಿಂದ ಅಹೋರಾತ್ರಿ ಧರಣಿಯನ್ನು ಆರಂಭಿಸಲಾಗಿದೆ. ಬಿಜೆಪಿ ಶಾಸಕರು ಮತ್ತು ಮೇಲ್ಮನೆ ಸದಸ್ಯರು ರಾಜ್ಯ ವಿಧಾನಸಭೆ ಮತ್ತು ವಿಧಾನಪರಿಷತ್ತಿನಲ್ಲಿ ಅಹೋರಾತ್ರಿ ಧರಣಿ ಮಾಡಲಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ಪ್ರಕಟಿಸಿದರು. ವಿಧಾನಸೌಧದ ಬಿಜೆಪಿ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ; ಮುಖ್ಯಮಂತ್ರಿಗಳ ಕುಟುಂಬಕ್ಕೆ ಮೈಸೂರಿನಲ್ಲಿ ಮೂಡದಿಂದ ಕೊಟ್ಟ 14 ನಿವೇಶನಗಳು ವಾಪಸ್ ಬರಬೇಕು. ಈ ಸರಕಾರವು ಅಧಿಕಾರಕ್ಕೆ ಬಂದ ಬಳಿಕ 5 ಸಾವಿರಕ್ಕೂ ಹೆಚ್ಚು ನಿವೇಶನಗಳನ್ನು ಹಂಚಿದೆ. ಆ ಹಂಚಿಕೆಯನ್ನು ರದ್ದು ಮಾಡಬೇಕಿದೆ ಎಂದು ಆಗ್ರಹಿಸಿದರು. ನಾವು ಚುನಾಯಿತ ಪ್ರತಿನಿಧಿಗಳು; ಬಡವರ ನಿವೇಶನಗಳನ್ನು ಮನಸೋ ಇಚ್ಛೆ ಹಂಚಿದ ಕುರಿತು ಜನರು ನಮ್ಮನ್ನು ಕೇಳುತ್ತಿದ್ದಾರೆ. ಮೂಡದಲ್ಲಿ ಮುಖ್ಯಮಂತ್ರಿಗಳ…
ಬೆಂಗಳೂರು: ಅರಣ್ಯ ಇಲಾಖೆ ನೆಡುತೋಪುಗಳಲ್ಲಿ ನೆಟ್ಟು ಬೆಳೆಸುತ್ತಿರುವ ಶ್ರೀಗಂಧ ಮತ್ತು ಅರಣ್ಯದಲ್ಲಿನ ಶ್ರೀಗಂಧ ಮರಗಳ ಸಂರಕ್ಷಣೆಗೆ ಕಾರ್ಯ ಯೋಜನೆ ರೂಪಿಸಲು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಸೂಚಿಸಿದ್ದಾರೆ. ವಿಕಾಸಸೌಧದ ತಮ್ಮ ಕಚೇರಿಯಲ್ಲಿಂದು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ (ಕೆ.ಎಸ್.ಡಿ.ಎಲ್) ಅಧ್ಯಕ್ಷ ಅಪ್ಪಾಜಿ ನಾಡಗೌಡರೊಂದಿಗೆ ಇಂದು ನಡೆದ ಸಭೆಯ ಸಂದರ್ಭದಲ್ಲಿ ಸಚಿವರು ಅರಣ್ಯ ಇಲಾಖೆಯ ಉನ್ನತಾಧಿಕಾರಿಗಳಿಗೆ ಈ ಸೂಚನೆ ನೀಡಿದರು. ಕೆ.ಎಸ್.ಡಿ.ಎಲ್.ಗೆ ಶ್ರೀಗಂಧವೇ ಮೂಲಾಧಾರವಾಗಿದ್ದು, ತನ್ನ ಲಾಭದ ಅನುದಾನದ ಅಡಿಯಲ್ಲಿ ಪ್ರತಿ ವರ್ಷ 1 ಲಕ್ಷ ಶ್ರೀಗಂಧ ಸಸಿ ನೆಡಲು ಅರಣ್ಯ ಇಲಾಖೆಗೆ 50 ಲಕ್ಷ ರೂಪಾಯಿ ನೀಡಲಿದೆ ಎಂದು ಕೆ.ಎಸ್.ಡಿ.ಎಲ್. ಅಧ್ಯಕ್ಷರು ತಿಳಿಸಿದರು. ಶ್ರೀಗಂಧ ಕಳವಾಗದಂತೆ ನಿಯಂತ್ರಿಸುವ ಅಗತ್ಯ ಕುರಿತಂತೆ ಸಭೆಯಲ್ಲಿ ಚರ್ಚಿಸಲಾಯಿತು. ಈ ಸಂದರ್ಭದಲ್ಲಿ ಅರಣ್ಯ ಇಲಾಖೆಯ ನೆಡುತೋಪುಗಳಲ್ಲಿ ನೆಟ್ಟಿರುವ ಮತ್ತು ಅರಣ್ಯದೊಳಗೆ ಬೆಳೆದಿರುವ ಕಟಾವು ಮಾಡಬಹುದಾದ ಬಲಿತ ಮರಗಳ ಸಂರಕ್ಷಣೆಗಾಗಿ ಅರಣ್ಯ ಇಲಾಖೆಯೊಂದಿಗೆ ತಿಳಿವಳಿಕೆ ಒಪ್ಪಂದ ಮಾಡಿಕೊಳ್ಳಲು ಸಿದ್ಧ ಎಂದು ಅಧ್ಯಕ್ಷರು ಹೇಳಿದರು.…
ಬೆಂಗಳೂರು: ಇಂದಿನಿಂದ ಮುಡಾ ಹಗರಣ ಕುರಿತಂತೆ ಉಭಯ ಸದನಗಳಲ್ಲಿ ಚರ್ಚೆಗೆ ಅವಕಾಶ ಕೋರಿ ಬಿಜೆಪಿ-ಜೆಡಿಎಸ್ ಸದನದಲ್ಲಿ ಅಹೋರಾತ್ರಿ ಧರಣಿಗೆ ನಿರ್ಧರಿಸಿದೆ. ಈ ಬೆನ್ನಲ್ಲೇ ಕೆಲವೇ ಕ್ಷಣಗಳಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜಭವನಕ್ಕೆ ತೆರಳಿ, ರಾಜ್ಯಪಾಲರನ್ನು ಭೇಟಿಯಾಗಲಿದ್ದಾರೆ. ಅವರೊಂದಿಗೆ ರಾಜ್ಯದ ಪ್ರಸ್ತುತ ವಿದ್ಯಮಾನಗಳ ಬಗ್ಗೆ ಚರ್ಚೆ ಹಾಗೂ ವಾಲ್ಮೀಕಿ, ಮುಡಾ ಹಗರಣದ ಬಗ್ಗೆ ವರದಿಯನ್ನು ನೀಡಲಿದ್ದಾರೆ ಎನ್ನಲಾಗುತ್ತಿದೆ. ಇಂದು ಸಂಜೆ 6 ಗಂಟೆಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ರಾಜಭವನಕ್ಕೆ ತೆರಳಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಭೇಟಿಯಾಗಲಿದ್ದಾರೆ. ಅವರೊಂದಿಗೆ ಪ್ರಸ್ತುತ ವಿದ್ಯಮಾನಗಳ ಕುರಿತಂತೆ ಚರ್ಚೆ ನಡೆಸಲಿದ್ದಾರೆ ಎಂದು ಹೇಳಲಾಗುತ್ತಿದೆ. ಇದಲ್ಲದೇ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣ, ಮುಡಾ ಹಗರಣದ ಬಗ್ಗೆಯೂ ರಾಜ್ಯಪಾಲರಿಗೆ ಸಿಎಂ ಸಿದ್ಧರಾಮಯ್ಯ ವರದಿಯನ್ನು ನೀಡುವ ಸಾಧ್ಯತೆ ಇದೆ. ಹೀಗಾಗಿ ಇಂದಿನ ಸಿಎಂ ಸಿದ್ಧರಾಮಯ್ಯ ರಾಜ್ಯಪಾಲರ ಭೇಟಿ ತೀವ್ರ ಕುತೂಹಲ ಮೂಡಿಸಿದೆ. ರಾಜ್ಯಪಾಲರ ಭೇಟಿಯ ಬಗ್ಗೆ ಭೇಟಿಯ ಬಳಿಕ ಸಿದ್ಧರಾಮಯ್ಯ ಮಾಹಿತಿ ನೀಡಿದಾಗಲೇ ಯಾವುದಕ್ಕೆ ಭೇಟಿ ಎನ್ನುವುದು ಖಚಿತವಾಗಲಿದೆ. https://kannadanewsnow.com/kannada/bbmp-registers-142-firs-against-those-who-put-up-flexes-banners-illegally-in-bengaluru/…
ಬೆಂಗಳೂರು: ನಗರದಲ್ಲಿ ಅನಧಿಕೃತ ಫ್ಲೆಕ್ಸ್ ಗಳ ತೀವ್ರ ತೆರವು ಕಾರ್ಯಾಚರಣೆಯನ್ನು ಬಿಬಿಎಂಪಿ ನಡೆಸುತ್ತಿದೆ. ಇದೀಗ 8362ಕ್ಕೂ ಹೆಚ್ಚು ಫ್ಲೆಕ್ಸ್ ತೆರವು ಮಾಡಿದ್ದು, ಅನಧಿಕೃತವಾಗಿ ಫ್ಲೆಕ್ಸ್, ಬ್ಯಾನರ್ ಹಾಕಿದ್ದವರ ವಿರುದ್ಧ 142 ಎಫ್.ಐ.ಆರ್ ದಾಖಲು ಮಾಡಿದೆ. ಈ ಕುರಿತಂತೆ ಬಿಬಿಎಂಪಿಯ ಜಾಹೀರಾತು ವಿಭಾಗದ ಉಪ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಿಬಿಎಂಪಿ ವ್ಯಾಪ್ತಿಯಲ್ಲಿ ಅನಧಿಕೃತವಾಗಿ ಫ್ಲೆಕ್ಸ್/ಬ್ಯಾನರ್ಸ್ ಅಳವಡಿಸುವವರ ಮೇಲೆ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ. ಇದುವರೆಗೆ 8362ಕ್ಕೂ ಹೆಚ್ಚು ಫ್ಲೆಕ್ಸ್ ಗಳನ್ನು ತೆರವುಗೊಳಿಸಲಾಗಿದ್ದು, ಪೊಲೀಸ್ ಠಾಣೆಯಲ್ಲಿ ದಾಖಲಿಸಿರುವ 267 ದೂರುಗಳ ಪೈಕಿ 142 ಎಫ್ಐಆರ್ ದಾಖಲಿಸಲಾಗಿದೆ ಎಂದಿದ್ದಾರೆ. ನಗರದಲ್ಲಿ ಯಾವುದೇ ರೀತಿಯ ಅನಧಿಕೃತ ಜಾಹೀರಾತುಗಳಿರದಂತೆ ಮಾನ್ಯ ಉಪ ಮುಖ್ಯಮಂತ್ರಿಗಳು ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವರಾದ ಶ್ರೀ ಡಿ.ಕೆ ಶಿವಕುಮಾರ್ ರವರು ಕಟ್ಟುನಿಟ್ಟಿನ ನಿರ್ದೇಶನ ನೀಡಿರುತ್ತಾರೆ. ಈ ಸಂಬಂಧ ಎಲ್ಲಾ ವಲಯದಲ್ಲೂ ಅನಧಿಕೃತ ಜಾಹೀರಾತುಗಳು ಇರದಂತೆ ನೋಡಿಕೊಳ್ಳಲು ಹಾಗೂ ಕಾನೂನು ರೀತಿಯ ಕ್ರಮ ಕೈಗೊಳ್ಳಲು ಮುಖ್ಯ ಆಯುಕ್ತರು ಸೂಚನೆ ನೀಡಿರುತ್ತಾರೆ. ಅಲ್ಲದೆ ಅನಧಿಕೃತ ಜಾಹೀರಾತುಗಳನ್ನು…
ಮಂಡ್ಯ: ಕೇಂದ್ರದ ಬಿಜೆಪಿ ಸರ್ಕಾರ ಕಳೆದ 10 ವರ್ಷಗಳಿಂದ ರಾಜ್ಯಕ್ಕೆ ಮಲತಾಯಿ ಧೋರಣೆಯನ್ನೆ ಅನುಸರಿಸುತ್ತ ತನ್ನ ಹಳೇ ಚಾಳಿಯನ್ನೆ ಮುಂದುವರೆಸಿಕೊಂಡು ಹೋಗುತ್ತಿದೆ ಎಂದು ಶಾಸಕ ಕೆ.ಎಂ.ಉದಯ್ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಕೇಂದ್ರ ಬಜೆಟ್ ವಿಚಾರವಾಗಿ ಮದ್ದೂರು ಪಟ್ಟಣದಲ್ಲಿ ಬುಧವಾರ ಪ್ರತಿಕ್ರಿಯೆ ನೀಡಿದ ಮದ್ದೂರು ಶಾಸಕ ಕೆ.ಎಂ.ಉದಯ್, ರಾಜ್ಯದ ಪ್ರತಿನಿಧಿಯಾಗಿ ಆಯ್ಕೆಯಾಗಿರುವ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರ ಬಗ್ಗೆ ಬಹಳ ಗೌರವ ಇತ್ತು. ಈ ಬಾರಿಯಾದರೂ ರಾಜ್ಯಕ್ಕೆ ಹೆಚ್ಚಿನ ಯೋಜನೆ ಕೊಡ್ತಾರೆ ಅಂತಾ ಭಾವಿಸಿದ್ದೇವು. ಆದರೆ, ಅವರು ಗಮನ ಸೆಳೆದಿಲ್ಲ. ತಮ್ಮ ಸರ್ಕಾರ ಉಳಿಸಿಕೊಳ್ಳಲು ತಮ್ಮ ಮಿತ್ರ ಪಕ್ಷಗಳಾದ ಕೇವಲ ಬಿಹಾರ ಮತ್ತು ಆಂಧ್ರಪ್ರದೇಶಕ್ಕೆ ಮಾತ್ರ ಗಮನ ಹರಿಸಿದ್ದಾರೆ ಎಂದು ಕಿಡಿಕಾರಿದರು. ಕೇಂದ್ರ ಸರ್ಕಾರಕ್ಕೆ ಇಡೀ ದೇಶದಲ್ಲೇ ಅತೀ ಹೆಚ್ಚು ತೆರಿಗೆ ಪಾವತಿ ಮಾಡುವ ಎರಡನೇ ರಾಜ್ಯವಾಗಿದ್ದರೂ ಕರ್ನಾಟಕಕ್ಕೆ ಯಾವುದೇ ಹೊಸ ಯೋಜನೆಗಳನ್ನ ಕೊಟ್ಟಿಲ್ಲ. ಹಾಗೂ ನ್ಯಾಯ ಸಮ್ಮತವಾಗಿ ಜಿ.ಎಸ್.ಟಿ ಪಾಲನ್ನು ನೀಡದೇ ರಾಜ್ಯಕ್ಕೆ ದ್ರೋಹ ಎಸಗುತ್ತಿರುವುದು ಸರಿಯಲ್ಲ…
ಬೆಂಗಳೂರು: ಮುಡಾ ಹಗರಣದ ಬಗ್ಗೆ ಚರ್ಚೆಗೆ ಅವಕಾಶ ನೀಡುವಂತೆ ಪಟ್ಟು ಹಿಡಿದಿರುವ ಬಿಜೆಪಿ ಅಹೋರಾತ್ರಿ ಧರಣಿಗೆ ನಿರ್ಧಾರ ಮಾಡಿದೆ. ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದ ಬಿಜೆಪಿ ಸದಸ್ಯರು ಹಗರಣದ ತನಿಖೆಗೆ ಪಟ್ಟು ಹಿಡಿದರು. ಇಂದಿನಿಂದ ಉಭಯ ಸದನಗಳಲ್ಲೂ ಮುಡಾ ಕುರಿತಂತೆ ಚರ್ಚೆಗೆ ಅವಕಾಶ ನೀಡುವಂತೆ ಸದನದಲ್ಲೇ ಆಹೋರಾತ್ರಿ ಧರಣಿಗೆ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಈ ಕುರಿತಂತೆ ವಿಧಾನಸೌಧದ ಬಳಿಯಲ್ಲಿ ಮಾಧ್ಯಮಗಳ ಮುಂದೆ ಮಾತನಾಡಿದ ವಿರೋಧ ಪಕ್ಷದ ನಾಯಕ ಆರ್. ಅಶೋಕ್, ಇಂದಿನಿಂದ ರಾತ್ರಿಯಿಡೀ ಧರಣಿ ನಡೆಸಲಿರುವುದಾಗಿ ಘೋಷಣೆ ಮಾಡಿದರು. ದಲಿತರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಸಿಎಂ ಕುಟುಂಬಕ್ಕೆ ನೀಡಿದ ಸೈಟ್ ವಾಪಸ್ ಪಡೆಯಬೇಕು. ಸುಮಾರು ಐದು ಸಾವಿರ ನಿವೇಶನಗಳನ್ನು ಮನಬಂದಂತೆ ಹಂಚಲಾಗಿದೆ. ಅದು ಕೂಡಾ ವಾಪಸ್ ಬರಬೇಕು. ಈ ಹಿನ್ನೆಲೆಯಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ ನಲ್ಲಿ ಅಹೋರಾತ್ರಿ ಧರಣಿ ನಡೆಸುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ತಿಳಿಸಿದರು. https://kannadanewsnow.com/kannada/assembly-passes-irrigation-amendment-bill-to-protect-farmers-at-the-end-of-canals/ https://kannadanewsnow.com/kannada/good-news-for-rural-people-of-the-state-property-measurement-inside-and-outside-the-grama-thana-will-be-allowed/