Author: kannadanewsnow09

ನವದೆಹಲಿ: ಮುಂಬರುವಂತ ಲೋಕಸಭಾ ಚುನಾವಣೆ-2024 ಘೋಷಣೆಗೂ ಮುನ್ನವೇ ಬಿಜೆಪಿಯಿಂದ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ತೀವ್ರ ಕುತೂಹಲದ ನಡುವೆ ಬಿಡುಗಡೆ ಮಾಡಲಾಗಿರುವಂತ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯಲ್ಲೇ ಘಟಾನುಘಟಿ ನಾಯಕರಿಗೆ ಟಿಕೆಟ್ ಹಂಚಿಕೆ ಮಾಡಲಾಗಿದೆ. ಇಂದು ದೆಹಲಿಯ ಬಿಜೆಪಿಯ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಬಿಜೆಪಿ ವಿನೋದ್ ತಾವ್ಡೆಯವರು, ಪ್ರಧಾನಿ ನರೇಂದ್ರ ಮೋದಿಯವರ ನೇತೃತ್ವದಲ್ಲಿ ಮುಂದಿನ ಲೋಕಸಭಾ ಚುನಾವಣೆಯನ್ನು ಎದುರಿಸಲು ನಿರ್ಧರಿಸಲಾಗಿದೆ. ಗರೀಬ್ ಕಲ್ಯಾಣ, ಸಬ್ ಕಾ ಸಾಥ್, ಸಬ್ ಕಾ ವಿಕಾಸ್ ಮಂತ್ರವನ್ನು ಬಿಜೆಪಿ ಒಳಗೊಂಡಿದೆ ಎಂದರು. 10 ವರ್ಷಗಳಿಂದ ಮೋದಿ ಸರ್ಕಾರವಿದೆ. ಈ ಬಾರಿ 400ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ನಿರೀಕ್ಷೆಯಿದೆ. 195 ಕ್ಷೇತ್ರಗಳಿಗೆ ಬಿಜೆಪಿಯ ಅಭ್ಯರ್ಥಿಗಳ ಪಟ್ಟಿಯನ್ನು ಫೈಲನ್ ಮಾಡಲಾಗಿದೆ. ವಾರಣಾಸಿಯಿಂದ ಪ್ರಧಾನಿ ನರೇಂದ್ರ ಮೋದಿಯವರು ಸ್ಪರ್ಧೆ ಮಾಡಲಿದ್ದಾರೆ ಎಂದು ಹೇಳಿದರು. ಯುವಕರು 47, ಅನುಸೂಚಿತ ಜಾತಿಯ 27, ಎಸ್ಟಿ ವರ್ಗದವರಿಗೆ 18, ಇತರೆ ವರ್ಗದ 57 ಅಭ್ಯರ್ಥಿಗಳಿಗೆ ಮೊದಲ ಪಟ್ಟಿಯಲ್ಲಿ ಟಿಕೆಟ್ ನೀಡಲಾಗಿದೆ. ಎಲ್ಲಾ…

Read More

ಬೆಂಗಳೂರು: ನಗರದಲ್ಲಿನ ರಾಮೇಶ್ವರಂ ಕೆಫೆಯಲ್ಲಿ ನಡೆದಂತ ಬಾಂಬ್ ಸ್ಪೋಟ ಪ್ರಕರಣದ ಕುರಿತಂತೆ ಎಫ್ಎಸ್ಎಲ್ ತನಿಖೆಯಲ್ಲಿ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಅದೇ ಎರಡು ಬಾಂಬ್ ಗಳು ಒಂದೇ ಬಾರಿಗೆ ಸ್ಪೋಟಗೊಂಡಿದ್ದರೇ ಭಾರೀ ಪ್ರಮಾಣ ಉಂಟಾಗಿ, ಸಾವು ನೋವುಗಳ ಸಂಖ್ಯೆ ಹೆಚ್ಚಾಗುತ್ತಿತ್ತು ಎಂಬುದಾಗಿದೆ. ಬೆಂಗಳೂರಿನ ಕುಂದಲಹಳ್ಳಿ ಬಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಅವರಲ್ಲಿ ದೀಪಾಂಶು ಎಂಬುವರು ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದ ಕಾರಣ ಬ್ರೂಕ್ ಫೀಲ್ಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರ ನಡುವೆ ಘಟನೆ ಸಂಬಂಧ ತನಿಖೆ ನಡೆಸುತ್ತಿರುವಂತ ಎಫ್ಎಸ್ಎಲ್ ತಂಡಕ್ಕೆ ಮತ್ತೊಂದು ಸ್ಪೋಟಕ ಮಾಹಿತಿ ಲಭ್ಯವಾಗಿದೆ. ಅದೇ ಆರೋಪಿಗೆ 2 ಬಾಂಬ್ ಒಂದೇ ಸಲದಲ್ಲಿ ಐದು ಸೆಕೆಂಡ್ ಅಂತರದಲ್ಲಿ ಸ್ಪೋಟಿಸೋದಕ್ಕೆ ಬಾರದೇ ಇರುವುದು ಆಗಿದೆ. ರಾಮೇಶ್ವರಂ ಕೆಫೆಯಲ್ಲಿ ಇಟ್ಟಿದ್ದಂತ ಎರಡು ಬಾಂಬ್ ಗಳು ಒಂದಾದ ನಂತ್ರ ಒಂದರಂತೆ ಐದು ಸೆಕೆಂಡ್ ಗಳ ಅಂತರದಲ್ಲಿ 10 ಸೆಕೆಂಡ್ ನಲ್ಲಿ…

Read More

ಶಿವಮೊಗ್ಗ: ಮಾ.3 ರ ಭಾನುವಾರದಂದು ಜಿಲ್ಲೆಯಾದ್ಯಂತ ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ ಹಮ್ಮಿಕೊಂಡಿದ್ದು 0 ಯಿಂದ 5 ವರ್ಷದ ಎಲ್ಲ ಮಕ್ಕಳಿಗೆ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಕೋರಿದ್ದಾರೆ. 0 ಯಿಂದ 5 ವರ್ಷದೊಳಗಿನ ಮಕ್ಕಳಿಗೆ ಈ ಹಿಂದೆ ಎಷ್ಟೇ ಬಾರಿ ಲಸಿಕೆ ಹಾಕಿಸಿದ್ದರೂ ಮಾ.3 ರಂದು ಪುನಃ ಪೋಲಿಯೋ ಹಾಕಿಸಬೇಕು. ಮಾ.03 ರಂದು 120626 ಮಕ್ಕಳಿಗೆ ಲಸಿಕೆ ಹಾಕುವ ಗುರಿ ಹೊಂದಲಾಗಿದೆ. ಜೊತೆಗೆ ಅತೀ ಸೂಕ್ಷ್ಮ ಪ್ರದೇಶಗಳೆಂದು ಗುರುತಿಸಲ್ಪಟ್ಟ ಕೊಳಚೆ ಪ್ರದೇಶ, ಅಲೆಮಾರಿ ಜನಾಂಗ, ಇಟ್ಟಿಗೆ ಭಟ್ಟಿಗಳು ಮತ್ತು ಕಟ್ಟಡ ನಿರ್ಮಾಣ ಕಾರ್ಮಿಕರ ವಸತಿ ಪ್ರದೇಶಗಳನ್ನೊಂಡು ಬಸ್ ನಿಲ್ದಾಣ, ರೈಲ್ವೆ ನಿಲ್ದಾಣಗಳು ಸೇರಿದಂತೆ ಜಿಲ್ಲೆಯಾದ್ಯಂತ 1037 ಲಸಿಕಾ ಬೂತ್‍ಗಳಲ್ಲಿ ಲಸಿಕೆ ಹಾಕಲಾಗುವುದು. ಆರೋಗ್ಯ ಇಲಾಖೆಯ ಎಲ್ಲಾ ಸಿಬ್ಬಂದಿಗಳು, ಪ್ರಾಥಮಿಕ ಆರೋಗ್ಯ ಸುರಕ್ಷಾ ಅಧಿಕಾರಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಹಾಗೂ ಇತರೆ ಸಂಘ ಸಂಸ್ಥೆಗಳ ಪ್ರತಿನಿಧಿಗಳು ವ್ಯಾಕ್ಸಿನೇಟರ್‍ಗಳಾಗಿ ಕಾರ್ಯ ನಿರ್ವಹಿಸುತ್ತಾರೆ. ಶಾಲೆಗಳಲ್ಲಿ ಲಸಿಕಾ ಬೂತ್‍ಗಳನ್ನು…

Read More

ಬೆಂಗಳೂರು: ಬೆಂಗಳೂರಿನಲ್ಲಿ ಆರ್ ಎಸ್ ಮುಖಂಡ ರುದ್ರೇಶ್ ಹತ್ಯೆ ಪ್ರಕರಣ ಸಂಬಂಧ ಎನ್ಐಎ ಅಧಿಕಾರಿಗಳು ಪ್ರಮುಖ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ದಕ್ಷಿಣ ಆಫ್ರಿಕಾದಲ್ಲಿ ಮೋಸ್ಟ್ ವಾಂಟೆಂಡ್ ದರೋಡೆ ಕೋರರಲ್ಲಿ ಒಬ್ಬನಾಗಿದ್ದಂತ ಮೊಹಮ್ಮದ್ ಗೌಸ್ ನಿಯಾಜ್ ಎಂಬಾತನನ್ನು ರಾಷ್ಟ್ರೀಯ ತನಿಖಾ ದಳದ ಅಧಿಕಾರಿಗಳು ಬಂದಿಸಿದ್ದಾರೆ. 2016ರಲ್ಲಿ ಬೆಂಗಳೂರಿನಲ್ಲಿ ಆರ್ ಎಸ್ ಮುಖಂಡ ರುದ್ರೇಶ್ ಎಂಬುವರನ್ನು ಹತ್ಯೆಗೈಯ್ಯಲಾಗಿತ್ತು. ಈ ಪ್ರಕರಣವನ್ನು ತನಿಖೆ ನಡೆಸೋದಕ್ಕೆ ರಾಷ್ಟ್ರೀಯ ತನಿಖಾ ದಳಕ್ಕೆ ವಹಿಸಲಾಗಿತ್ತು. ಪ್ರಮುಖ ಆರೋಪಿಯಾಗಿದ್ದಂತ ಮೊಹಮ್ಮದ್ ಗೌಸ್ ನಿಯಾಜ್ ಬಂಧನಕ್ಕಾಗಿ ಎನ್ಐಎ ಸುಳಿವು ನೀಡಿದವರಿಗೆ 5 ಲಕ್ಷ ರೂ ಬಹುಮಾನವನ್ನು ಘೋಷಣೆ ಮಾಡಿತ್ತು. ಇಂತಹ ಆರೋಪಿಯ ಪತ್ತೆಗಾಗಿ ತನಿಖೆ ನಡೆಸಿದಂತ ಎನ್ಐಎ ಇದೀಗ ಆರ್ ಎಸ್ ಎಸ್ ಮುಖಂಡ ರುದ್ರೇಶ್ ಹತ್ಯೆಯ ಆರೋಪಿ ಮೊಹಮ್ಮದ್ ಗೌಸ್ ನಿಯಾಜ್ ನನ್ನು ದಕ್ಷಿಣ ಆಫ್ರಿಕಾದ ಅಧಿಕಾರಿಗಳೊಂದಿಗೆ ಸಂಪರ್ಕ ಸಾಧಿಸಿ, ಬಂಧಿಸುವಲ್ಲಿ ಯಶಸ್ವಿಯಾಗಿರೋದಾಗಿ ತಿಳಿದು ಬಂದಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/good-news-for-job-seekers-bmtc-invites-applications-for-2500-vacancies/ https://kannadanewsnow.com/kannada/naukri-99acres-apps-back-on-google-play-store-as-government-intervenes/

Read More

ಬೆಂಗಳೂರು: ಬಿಎಂಟಿಸಿಯಲ್ಲಿ ಕರ್ತವ್ಯ ನಿರತರಾಗಿದ್ದಂತ ವೇಳೆಯಲ್ಲೇ ಮೃತರಾದಂತ ಅವಲಂಬಿತರಿಗೆ ಅನುಕಂಪದ ಆಧಾರದ ಅಡಿಯಲ್ಲಿ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಪತ್ರವನ್ನು ಇಂದು ವಿತರಣೆ ಮಾಡಿದರು. ಈ ಕುರಿತಂತೆ ಬಿಎಂಟಿಸಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬೆಂ.ಮ.ಸಾ.ಸಂಸ್ಥೆಯಲ್ಲಿ ದಿನಾಂಕ:02.03.2024 ರಂದು ಸನ್ಮಾನ್ಯ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ರವರ ಅಧ್ಯಕ್ಷತೆಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮೃತ ನೌಕರರ ಅವಲಂಬಿತರಿಗೆ ಅನುಕಂಪದ ಆಧಾರದಡಿಯಲ್ಲಿ ನೇಮಕಾತಿ ಆದೇಶ ಪತ್ರವನ್ನು ವಿತರಿಸಲಾಯಿತು. ಸಚಿವರು ನೆರೆದಿದ್ದ ಅಭ್ಯರ್ಥಿಗಳು ಮತ್ತು ಕುಟುಂಬದವರಿಗೆ ಶುಭ ಕೋರಿ, ಸಂಸ್ಥೆ ಬಗ್ಗೆ ಹಿತ ನುಡಿಗಳನ್ನು ನುಡಿದರು. ಸಂಸ್ಥೆಯಲ್ಲಿ ಅನುಕಂಪದ ಆಧಾರದ ಮೇಲೆ ನೌಕರಿಗಾಗಿ ನಿರೀಕ್ಷಣೆಯಲ್ಲಿದ್ದ ಮೃತಾವಲಂಭಿತ ಅಭ್ಯರ್ಥಿಗಳ ಪೈಕಿ ಅರ್ಹತೆಯನುಸಾರ ಹಾಗೂ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಸುಮಾರು 200 ಮೃತಾವಲಂಭಿತರುಗಳನ್ನು ಕಳೆದ ಅಕ್ಟೋಬರ್ ಮತ್ತು ನವೆಂಬರ್-2023ರಲ್ಲಿ ದರ್ಜೆ-3 (ಮೇಲ್ವಿಚಾರಕೇತರ) ಮತ್ತು ದರ್ಜೆ-4ರ ಖಾಲಿ ಹುದ್ದೆಗಳಿಗೆ ನೇಮಕ ಮಾಡಲಾಗಿದೆ. ಅಲ್ಲದೇ, ಪ್ರಸ್ತುತ ಸಂಸ್ಥೆಯಲ್ಲಿನ ಖಾಲಿ ಹುದ್ದೆಗಳ ಲಭ್ಯತೆಗನುಗುಣವಾಗಿ ಮೃತಾವಲಂಭಿತರುಗಳನ್ನು ಅನುಕಂಪದ ಆಧಾರದ ಮೇಲೆ ನೇಮಕಾತಿ…

Read More

ನವದೆಹಲಿ: ಲೋಕಸಭಾ ಚುನಾವಣೆ-2024ಕ್ಕೆ ಇಂದು ಸಂಜೆ ಬಿಜೆಪಿಯಿಂದ ಅಭ್ಯರ್ಥಿಗಳ ( BJP Candidate List ) ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತಿದೆ ಎಂಬುದಾಗಿ ಉನ್ನತ ಮೂಲಗಳ ವರದಿಯಿಂದ ತಿಳಿದು ಬಂದಿದೆ. 2024 ರ ಲೋಕಸಭಾ ಚುನಾವಣೆಗೆ ಭಾರತೀಯ ಜನತಾ ಪಕ್ಷ (Bharatiya Janata Party’s -BJP) ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಶನಿವಾರ ಬಿಡುಗಡೆ ಮಾಡುವ ಸಾಧ್ಯತೆಯಿದೆ. 125 ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಜೆಪಿ ಹೈಕಮಾಂಡ್ ಇಂದು ಸಂಜೆ.6 ಗಂಟೆಗೆ ಬಿಡುಗಡೆ ಮಾಡಲಿದೆ ಎಂಬುದಾಗಿ ಹೇಳಲಾಗುತ್ತಿದೆ. ಈ ಪಟ್ಟಿಯಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಯಾವ ಕ್ಷೇತ್ರದಿಂದ ಸ್ಪರ್ಧೆ ಮಾಡಲಿದ್ದಾರೆ ಎಂಬುದು ಕೂಡ ರಿವೀಲ್ ಆಗೋ ಸಾಧ್ಯತೆ ಇದೆ. ಇನ್ನೂ ಬಿಜೆಪಿ ಉನ್ನತ ಮೂಲಗಳ ಮಾಹಿತಿಯಂತೆ ವಾರಣಾಸಿ ಕ್ಷೇತ್ರದಿಂದ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆ-2024ಕ್ಕೆ ಕಣಕ್ಕೆ ಇಳಿಯಲಿದ್ದಾರೆ ಎನ್ನಲಾಗುತ್ತಿದೆ. ಆ ಬಗ್ಗೆ ಇನ್ನೇನು ಕೆಲವೇ ಕ್ಷಣಗಳಲ್ಲಿ ಸ್ಪಷ್ಟ ಮಾಹಿತಿ ಹೊರ ಬೀಳಲಿದೆ. https://kannadanewsnow.com/kannada/good-news-for-job-seekers-bmtc-invites-applications-for-2500-vacancies/ https://kannadanewsnow.com/kannada/naukri-99acres-apps-back-on-google-play-store-as-government-intervenes/

Read More

ಬೆಂಗಳೂರು: ರಾಮೇಶ್ವರ ಕೆಫೆ ಘಟನೆಯ ಸಂಪೂರ್ಣ ಸತ್ಯ ಹೊರಗೆ ಬರಲಿ. ತಂತ್ರಜ್ಞಾನದ ಸಾಧ್ಯತೆಗಳನ್ನು ತನಿಖೆಯಲ್ಲಿ ಪರಿಣಾಮಕಾರಿಯಾಗಿ ಬಳಸಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಿರಿಯ ಪೊಲೀಸ್ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು. ಅವರು ಇಂದು ಗೃಹ ಇಲಾಖೆಯ ಉನ್ನತ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಜನನಿಬಿಡ ಸ್ಥಳಗಳನ್ನು ಗುರುತಿಸಿ ಅಂಥ ಪ್ರದೇಶಗಳಲ್ಲಿ ಪೊಲೀಸ ಗಸ್ತು ಹೆಚ್ಚಿಸಿ. ಜನರಿಗೆ ರಕ್ಷಣೆ ಒದಗಿಸಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಸೂಚಿಸಿದರು. ರಾಮೇಶ್ವರ ಕಫೆ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಲು ಸೂಚಿಸಿದ ಮುಖ್ಯಮಂತ್ರಿಗಳು ಇಂಥ ಪ್ರಕರಣ ಗಳು ಮರುಕಳಿಸದಂತೆ ಎಚ್ಚರ ವಹಿಸಬೇಕೆಂದರು. ಪೊಲೀಸರು ಇಂಥ ಘಟನೆ ನಡೆದಾಗ ಎಚ್ಚರಿಕೆ ವಹಿಸಿ ನಂತರ ಮರೆಯುವುದಾಗಬಾರದು. ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹಬ್ಬಿಸಿ ಜನರ ದಾರಿ ತಪ್ಪಿಸುವ ಕೆಲಸವನ್ನು ಮಟ್ಟ ಹಾಕುವಂತೆ ಸೂಚನೆ ನೀಡಿದರು. . ಸಮಾಜ ದ್ರೋಹಿಗಳ ಬಗ್ಗೆ ಯಾವುದೇ ಸಹಾನುಭೂತಿ ಇಲ್ಲದೇ ಕ್ರಮ ಜರುಗಿಸಿ – ಸಿಎಂ ಖಡಕ್ ಸೂಚನೆ ಇಂಟೆಲಿಜೆನ್ಸ್ ಹೆಚ್ಚು ಜಾಗೃತವಾಗಿರಬೇಕು.…

Read More

ಬೆಂಗಳೂರು: ನಗರದ ರಾಮೇಶ್ವರಂ ಕೆಫೆಯಲ್ಲಿ ನಡೆದಿದ್ದಂತ ಬಾಂಬ್ ಸ್ಪೋಟ ಪ್ರಕರಣ ಸಂಬಂಧ ಪೊಲೀಸರು ಇದುವರೆಗೆ ಯಾರನ್ನು ಬಂಧಿಸಿಲ್ಲ ಎಂಬುದಾಗಿ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ರಾಮೇಶ್ವರಂ ಕೆಫೆ ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ತನಿಖೆ ಕ್ಷಿಪ್ರ ಗತಿಯಲ್ಲಿ ನಡೆಯುತ್ತಿದೆ. ಘಟನಾ ಸ್ಥಳದಲ್ಲಿ ದೊರೆತ ಕುರುಹುಗಳ ಆಧಾರದ ಮೇಲೆ ಅನೇಕ ಪೊಲೀಸ್ ತಂಡಗಳು ಬೇರೆ ಬೇರೆ ಆಯಾಮಗಳಿಂದ ತನಿಖೆ ಕೈಗೊಳ್ಳುತ್ತಿವೆ. ಇದೊಂದು ಭದ್ರತಾ ವಿಷಯಕ್ಕೆ ಸಂಬಂಧಿಸಿದ ಸೂಕ್ಷ್ಮ ಪ್ರಕರಣವಾಗಿರುವುದರಿಂದ ಮಾಧ್ಯಮದವರು ಸಹಕರಿಸಬೇಕಾಗಿ ಕೋರಿದ್ದಾರೆ. https://twitter.com/CPBlr/status/1763773064259707206 ಇನ್ನೂ ಪ್ರಕರಣದ ತನಿಖೆಯನ್ನು ಕೇಂದ್ರ ಅಪರಾಧ ದಳಕ್ಕೆ (ಸಿಸಿಬಿ) ವಹಿಸಲಾಗಿದೆ. ಘಟನೆಯಲ್ಲಿನ ಗಾಯಾಳುಗಳು ಗುಣಮುಖರಾಗುತ್ತಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಇದುವರೆಗೆ ಯಾರನ್ನೂ ಬಂಧಿಸಿರುವುದುದಿಲ್ಲ ಎಂಬುದಾಗಿ ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸ್ಪಷ್ಟ ಪಡಿಸಿದ್ದಾರೆ. https://twitter.com/CPBlr/status/1763857025740755029 https://kannadanewsnow.com/kannada/good-news-for-job-seekers-bmtc-invites-applications-for-2500-vacancies/ https://kannadanewsnow.com/kannada/cafe-blast-case-one-injured-recovers-discharged-from-hospital/ https://kannadanewsnow.com/kannada/naukri-99acres-apps-back-on-google-play-store-as-government-intervenes/

Read More

ಬೆಂಗಳೂರು: ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಘಟನೆಯಲ್ಲಿ ಗಾಯಗೊಂಡಿದ್ದಂತ ಓರ್ವ ಗಾಯಾಳು ಗುಣಮುಖರಾಗಿದ್ದು, ಅವರನ್ನು ಇಂದು ಬ್ರೂಕ್ ಫೀಲ್ಡ್ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಗಿದೆ. ಈ ಕುರಿತಂತೆ ಮಾಹಿತಿ ಹಂಚಿಕೊಂಡಿರುವಂತ ವೈದ್ಯ ಡಾ.ಪ್ರದೀಪ್ ಕುಮಾರ್ ಅವರು, ಈಗ ಸದ್ಯಕ್ಕೆ ಮೂರು ಜರ ಆಸ್ಪತ್ರೆಯಲ್ಲಿ ಅಡ್ಮಿಟ್ ಗಿದ್ದರು. ಒಂದು ಪೇಷೆಂಟ್ ಗುಣಮುಖರಾಗಿ ಮನೆಗೆ ಹೋಗುತ್ತಿದ್ದಾರೆ. 23 ವರ್ಷದ ದೀಪಾಂಶು ಆಗಿದ್ದಾರೆ. ಅವರು 2 ಕಿವಿಗೆ ಪ್ರಾಬ್ಲಂ ಆಗಿ ಬಂದಿದ್ದರು ಎಂದರು. ದೀಪಾಂಶು ಅವರನ್ನು ಕಿವಿಯ ಪರದೆ ಒಡೆದಿರೋ ಬಗ್ಗೆ ಪರಿಶೀಲನೆಯನ್ನು ನಡೆಸಿದರು. ಅವರ ಕಿವಿಗೆ ಹಾನಿಯಾಗಿರೋ ಬಗ್ಗೆ ಚಿಕಿತ್ಸೆ ನೀಡಲಾಗಿದೆ. ಎಲ್ಲಾ ಹಂತದಲ್ಲೂ ಪರೀಕ್ಷೆ ನಡೆಸಿ, ದೀಪಾಂಶು ಆರೋಗ್ಯದಲ್ಲಿ ಚೇತರಿಕೆ ಕಂಡಬಂದ ಕಾರಣ, ಅವರನ್ನು ಡಿಸ್ಚಾರ್ಜ್ ಮಾಡುತ್ತಿರೋದಾಗಿ ತಿಳಿಸಿದರು. ಇನ್ನೂ ದೀಪಾಂಶು ಮಾತನಾಡಿ ನನ್ನ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ವೈದ್ಯರು ಎಲ್ಲಾ ಪರೀಕ್ಷೆ ನಡೆಸಿದ್ದಾರೆ. ನಾನು ಸೈಕ್ಯಾಟ್ರಿಸ್ಟ್ ಅನ್ನು ಸಂಪರ್ಕಿಸಿ ಸಲಹೆ ಪಡೆದಿದ್ದೇನೆ. ಇದೀಗ ಗುಣಮುಖರಾಗಿರುವ ಕಾರಣ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ತೆರಳುತ್ತಿರೋದಾಗಿ…

Read More

ಬೆಂಗಳೂರು: ನಿನ್ನೆ ಮಧ್ಯಾಹ್ನ ಬೆಂಗಳೂರಿನ ಕುಂದಲಹಳ್ಳಿ ಬಳಿಯಿರುವಂತ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟಗೊಂಡಿತ್ತು. ಈ ಘಟನೆಯಲ್ಲಿ 10 ಮಂದಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ ಘಟನೆಯಲ್ಲಿ ಸಿಲುಕಿ ಗಾಯಗೊಳ್ಳಬೇಕಿದ್ದಂತ ಆ ಯುವಕನ ಜೀವವನ್ನು ಅಮ್ಮನ ಆ ಒಂದು ಪೋನ್ ಕರೆ ಉಳಿಸಿದೆ.  ಈ ಕುರಿತಂತೆ ಯುವಕ ಕುಮಾರ್ ಎಂಬಾತ ತನ್ನ ಎಕ್ಸ್ ಖಾತೆಯಲ್ಲಿ ಬರೆದುಕೊಂಡಿದ್ದು, ನನ್ನನ್ನು ನಿನ್ನೆ ರಾಮೇಶ್ವರಂ ಕೆಫೆಯಲ್ಲಿ ಬ್ಲಾಸ್ಟ್ ನಲ್ಲಿ ಸಿಲುಕಿ ಗಾಯಗೊಳ್ಳಬೇಕಾಗಿದ್ದನ್ನು ಅಮ್ಮನ ಕರೆ ಕಾಯಿತು ಎಂದಿದ್ದಾನೆ. ರಾಮೇಶ್ವರಂ ಕೆಫೆಗೆ ನಿನ್ನೆ ತಿನ್ನೋಕೆ ಹೋಗಿದ್ದೆನು. ದೋಸೆ ತೆಗೆದುಕೊಂಡು ತಿನ್ನೋಕೆ ಕುಳಿತೆ. ದೋಸೆ ತಿನ್ನುತ್ತಿದ್ದಾಗ ಅಮ್ಮನ ಪೋನ್ ಬಂತು. ಕೆಫೆಯಲ್ಲಿ ಜನರ ಸದ್ಧಿನಿಂದ ಸರಿಯಾಗಿ ಕೇಳಿಸದ ಕಾರಣ, ಅಮ್ಮನ ಜೊತೆಗೆ ಮಾತನಾಡೋಕೆ ಆಚೆ ಬಂದೆ ಎಂದಿದ್ದಾನೆ. ನಾನು ರಾಮೇಶ್ವರಂ ಕೆಫೆಯಿಂದ 10 ಮೀಟರ್ ದೂರ ಅಮ್ಮನ ಜೊತೆಗೆ ಮಾತನಾಡೋದಕ್ಕೆ ದೋಸೆ ತಿನ್ನೋದು ಬಿಟ್ಟು ಸಾಗುತ್ತಿದ್ದಂತೇ ಬ್ಲಾಸ್ಟ್ ಆಯಿತು. ಅದೃಷ್ಠ ವಶಾತ್ ಅಮ್ಮನ ಪೋನ್ ಕರೆಯ ಕಾರಣದಿಂದ ನಾನು…

Read More