Author: kannadanewsnow09

ನವದೆಹಲಿ: ಉತ್ತರಾಖಂಡದ ಭೀಮ್ತಾಲ್ ಪಟ್ಟಣದ ಬಳಿ ಬುಧವಾರ ಬಸ್ ಕಮರಿಗೆ ಬಿದ್ದ ಪರಿಣಾಮ ಮೂವರು ಸಾವನ್ನಪ್ಪಿದ್ದಾರೆ ಮತ್ತು 24 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಅಲ್ಮೋರಾದಿಂದ ಹಲ್ದ್ವಾನಿಗೆ ತೆರಳುತ್ತಿದ್ದ ಬಸ್ ನಿಯಂತ್ರಣ ಕಳೆದುಕೊಂಡು ಭೀಮ್ತಾಲ್ ಬಳಿ 1,500 ಅಡಿ ಆಳದ ಕಮರಿಗೆ ಬಿದ್ದಿದೆ. ಪರಿಣಾಮವಾಗಿ, ಅನೇಕ ಪ್ರಯಾಣಿಕರು ಬಸ್ಸಿನಿಂದ ಎಸೆಯಲ್ಪಟ್ಟರು. ಗಾಯಗೊಂಡವರನ್ನು ಭೀಮ್ತಾಲ್ ಆಸ್ಪತ್ರೆಗೆ ದಾಖಲಿಸಲಾಗಿದೆ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದ್ದು, ಹಗ್ಗಗಳನ್ನು ಬಳಸಿ ಜನರನ್ನು ಕಮರಿಯಿಂದ ಹೊರತೆಗೆಯಲಾಗುತ್ತಿದೆ. ಹಲ್ದ್ವಾನಿಯಿಂದ ಹದಿನೈದು ಆಂಬ್ಯುಲೆನ್ಸ್ ಗಳನ್ನು ಅಪಘಾತದ ಸ್ಥಳಕ್ಕೆ ಕಳುಹಿಸಲಾಗಿದೆ. https://kannadanewsnow.com/kannada/bjp-mla-munirathnas-egg-throwing-case-three-arrested/ https://kannadanewsnow.com/kannada/ed-probe-into-over-200-canadian-colleges-in-canada-for-smuggling-indians-to-us/ https://kannadanewsnow.com/kannada/pakistani-airstrikes-kill-46-including-children-taliban-vows-retaliation/

Read More

ಬೆಂಗಳೂರು: ರಾಜರಾಜೇಶ್ವರಿ ನಗರ ಕ್ಷೇತ್ರದ ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟ ಎಸೆದ ಪ್ರಕರಣ ಸಂಬಂಧ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ ಬೆಂಗಳೂರು ದಕ್ಷಿಣ ವಿಭಾಗದ ಡಿಸಿಪಿ ಸೈದುಲು ಅಡಾವತ್ ಅವರು ಬಿಜೆಪಿ ಶಾಸಕ ಮುನಿರತ್ನ ಅವರ ಮೇಲೆ ಇಂದು ಬೆಳಿಗ್ಗೆ 11.30ರ ಸುಮಾರಿಗೆ ಮೊಟ್ಟೆ ಎಸೆಯಲಾಗಿದೆ. ಶಾಸಕರು ಕಾರ್ಯಕ್ರಮ ಮುಗಿಸಿ ವಾಪಾಸಾಗುತ್ತಿದ್ದಾಗ ಈ ಘಟನೆ ನಡೆದಿದೆ. ಶಾಸಕರ ಕಡೆಯಿಂದ ಇನ್ನೂ ನಮಗೆ ಯಾವುದೇ ದೂರು ಬಂದಿಲ್ಲ. ದೂರು ನೀಡಿದ ನಂತ್ರ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು. ಈ ಘಟನೆ ನಡೆಯುವುದಕ್ಕೂ ಮುನ್ನಮೊದಲೇ ಮಲ್ಲೇಶ್ವರಂ ಉಪ ವಿಭಾಗದ ಎಸಿಪಿ ಸ್ಥಳದಲ್ಲಿ ಇದ್ದರು. ಕಾರಿನಲ್ಲಿ ಹೋಗುವಂತೆ ಶಾಸಕರಿಗೆ ಪೊಲೀಸರು ಸೂಚಿಸಿದ್ದರು. ಆದರೂ ಮುಖ್ಯ ರಸ್ತೆ ಹತ್ತಿರವಿದ್ದ ಕಾರಣ ನಡೆದುಕೊಂಡೇ ಹೋಗಿದ್ದಾರೆ. ಈ ವೇಳೆ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆಯಲಾಗಿದೆ. ಈ ಘಟನೆ ಸಂಬಂಧ ಮುನ್ನೆಚ್ಚರಿಕೆ ಕ್ರಮವಾಗಿ ಮೂವರನ್ನು ವಶಕ್ಕೆ ಪಡೆದಿರುವುದಾಗಿ ತಿಳಿಸಿದರು. https://kannadanewsnow.com/kannada/sandhya-theatre-stampede-allu-arjun-announces-rs-2-crore-ex-gratia-for-family-of-injured-child/…

Read More

ಹೈದರಾಬಾದ್: ತೆಲಂಗಾಣದಲ್ಲಿ ‘ಪುಷ್ಪ 2’ ಚಿತ್ರದ ಪ್ರದರ್ಶನದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಗಂಭೀರವಾಗಿ ಗಾಯಗೊಂಡ ಮಗುವಿನ ಕುಟುಂಬಕ್ಕೆ ನಟ ಅಲ್ಲು ಅರ್ಜುನ್ ಮತ್ತು ನಿರ್ಮಾಪಕರು 2 ಕೋಟಿ ರೂ.ಗಳ ಪರಿಹಾರವನ್ನು ಘೋಷಿಸಿದ್ದಾರೆ. ನಟ ಅಲ್ಲು ಅರ್ಜುನ್ 1 ಕೋಟಿ ರೂ., ನಿರ್ಮಾಪಕರು ಮತ್ತು ನಿರ್ದೇಶಕರು ತಲಾ 50 ಲಕ್ಷ ರೂ.ಗಳನ್ನು ನೆರವು ನೀಡಲು ನಿರ್ಧರಿಸಿರುವುದಾಗಿ ತಿಳಿದು ಬಂದಿದೆ. ವೈದ್ಯರೊಂದಿಗೆ ಮಾತನಾಡಿದ ನಂತರ, ಹುಡುಗ ಚೇತರಿಸಿಕೊಳ್ಳುತ್ತಿದ್ದಾನೆ ಎಂದು ತಿಳಿದು ನಮಗೆ ತುಂಬಾ ಸಂತೋಷವಾಗಿದೆ. ಅವರಿಗೆ ಮತ್ತು ಅವರ ಕುಟುಂಬವನ್ನು ಪೋಷಿಸಲು, ನಾವು 2 ಕೋಟಿ ರೂ.ಗಳನ್ನು ನೀಡಲು ನಿರ್ಧರಿಸಿದ್ದೇವೆ. ಅಲ್ಲು ಅರ್ಜುನ್ 1 ಕೋಟಿ ರೂ., ನಿರ್ಮಾಪಕರು 50 ಲಕ್ಷ ರೂ., ನಿರ್ದೇಶಕರು 50 ಲಕ್ಷ ರೂ. ಈ ಮೊತ್ತವನ್ನು ತೆಲಂಗಾಣ ಚಲನಚಿತ್ರ ಅಭಿವೃದ್ಧಿ ನಿಗಮದ ಅಧ್ಯಕ್ಷ ದಿಲ್ ರಾಜು ಅವರಿಗೆ ಹಸ್ತಾಂತರಿಸಲಾಗುತ್ತಿದೆ ಎಂದು ಚಿತ್ರ ನಿರ್ಮಾಪಕ ಮತ್ತು ಅಲ್ಲು ಅರ್ಜುನ್ ಅವರ ತಂದೆ ಅಲ್ಲು ಅರವಿಂದ್ ಮಗುವನ್ನು ಭೇಟಿಯಾದ ನಂತರ ಹೇಳಿದರು.…

Read More

ಬೆಂಗಳೂರು: ನಂದಿನಿ ಉತ್ಪನ್ನಗಳ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಲಾಗಿದೆ. ಇನ್ಮುಂದೆ ಮಾರುಕಟ್ಟೆಯಲ್ಲಿ ನಂದಿನಿ ಇಡ್ಲಿ ಮತ್ತು ದೋಸೆ ಹಿಟ್ಟು ದೊರೆಯಲಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ನಂದಿನಿ ವತಿಯಿಂದ ಪ್ರಥಮ ಬಾರಿಗೆ ತಯಾರಿಸಿರುವ ನಂದಿನಿ ವೇ ಪ್ರೋಟಿನ್ ಆಧಾರಿತ ಇಡ್ಲಿ ಮತ್ತು ದೋಸೆ ಹಿಟ್ಟನ್ನು ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಸಚಿವ ವೆಂಕಟೇಶ್, ಕೃಷ್ಣಬೈರೇಗೌಡ, ದಿನೇಶ್ ಗುಂಡೂರಾವ್, ಕೆಎಂಎಫ್ ಅಧ್ಯಕ್ಷರಾದಂತ ಭೀಮ ನಾಯ್ಕ್, ವ್ಯವಸ್ಥಾಪಕ ನಿರ್ದೇಶಕ ಶಿವಸ್ವಾಮಿ ಹಾಗೂ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು. https://twitter.com/CMofKarnataka/status/1871844900842475616 https://kannadanewsnow.com/kannada/dk-shivakumar-dk-suresh-attacked-me-with-acid-mla-munirathna/ https://kannadanewsnow.com/kannada/pakistani-airstrikes-kill-46-including-children-taliban-vows-retaliation/

Read More

ಬೆಂಗಳೂರು: ಇಂದು ನನ್ನ ಮೇಲೆ ಡಿಸಿಎಂ ಡಿ.ಕೆ ಶಿವಕುಮಾರ್, ಮಾಜಿ ಸಂಸದ ಡಿ.ಕೆ ಸುರೇಶ್ ಅವರು ಆ್ಯಸಿಡ್ ದಾಳಿ ಮಾಡಿಸಿದ್ದಾರೆ ಎಂಬುದಾಗಿ ರಾಜರಾಜೇಶ್ವರಿ ನಗರದ ಬಿಜೆಪಿ ಶಾಸಕ ವಿ.ಮುನಿರತ್ನ ಗಂಭೀರ ಆರೋಪ ಮಾಡಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಇಂದು ವಾರ್ಡ್ ನಂ 42 ಲಕ್ಷ್ಮೀದೇವಿ ನಗರದಲ್ಲಿ ಕಾಂಗ್ರೆಸ್ ಸರ್ಕಾರ, ಮಾನ್ಯ ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್, ಮಾಜಿ ಸಂಸದರಾದ ಡಿ.ಕೆ.ಸುರೇಶ್, ಕಾಂಗ್ರೆಸ್ ಮುಖಂಡರಾದ ಹನುಮಂತರಾಯಪ್ಪ ಅವರ ನಿರ್ದೇಶನದಂತೆ ನನ್ನ ಮೇಲೆ ಆ್ಯಸಿಡ್ ದಾಳಿ ಮಾಡಿಸಿದ್ದಾರೆ ಹಾಗೂ ಕೊಲೆ ಮಾಡಲು ಪ್ರಯತ್ನ ಪಟ್ಟಿದ್ದಾರೆ ಎಂಬುದಾಗಿ ಹೇಳಿದ್ದಾರೆ. https://twitter.com/MunirathnaMLA/status/1871843984701862246 https://kannadanewsnow.com/kannada/jai-bapu-jai-bhim-jai-constitution-to-be-held-on-27th-deputy-cm-dk-shivakumar-shivakumar/ https://kannadanewsnow.com/kannada/pakistani-airstrikes-kill-46-including-children-taliban-vows-retaliation/

Read More

ಬೆಂಗಳೂರು : “27ರಂದು ನಡೆಯಲಿರುವ ಸಾರ್ವಜನಿಕ ಸಭೆಗೆ ಜೈ ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ಎಂದು ಹೆಸರಿಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿ ಕ್ಲಬ್ ರಸ್ತೆಯ ಸಿಪಿಇಡಿ ಶಾಲಾ ಮೈದಾನದಲ್ಲಿ ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಬುಧವಾರ ಮಾತನಾಡಿದರು. “ಈ ಪ್ರದೇಶವನ್ನು ಮಹಾತ್ಮಾ ಗಾಂಧೀಜಿ ನವನಗರ ಎಂದು ಘೋಷಣೆ ಮಾಡಿದ್ದೇವೆ. 26 ರಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿಯ ಸಭೆಯನ್ನು ಗಾಂಧಿ ಬಾವಿ (ಪಂಪ ಸರೋವರ) ಬಳಿ ಹಮ್ಮಿಕೊಳ್ಳಲಾಗಿದೆ. 1924ರಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನದಲ್ಲಿ ಮಹಾತ್ಮಾ ಗಾಂಧಿ ಅವರು ಅಧ್ಯಕ್ಷರಾಗಿದ್ದರು. ಇಂದು ಆ ಸ್ಥಾನದಲ್ಲಿ ಕರ್ನಾಟಕದವರೇ ಆದ ಮಲ್ಲಿಕಾರ್ಜುನ ಖರ್ಗೆ ಅವರು ಕುಳಿತಿರುವುದು ನಮ್ಮ ಹೆಮ್ಮೆಯ ವಿಚಾರ. ಕರ್ನಾಟಕದವರೇ ಆದ ಗಂಗಾಧರ ದೇಶಪಾಂಡೆ ಹಾಗೂ ಜವಾಹರ್ ಲಾಲ್ ನೆಹರು ಅವರು ಅಂದು ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿಗಳಾಗಿದ್ದರು. ಅವರೂ ಸೇರಿ ಬೆಳಗಾವಿಯಲ್ಲಿ ಈ ಅಧಿವೇಶನ ಮಾಡಿದ್ದರು. ಅಂದು 80 ಎಕರೆ ಜಾಗದಲ್ಲಿ ಅಧಿವೇಶನ ನಡೆದಿತ್ತು. ಇಂದು ಅದೇ ಸ್ಥಳದಲ್ಲಿ…

Read More

ಚಿತ್ರದುರ್ಗ : ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಗ್ರಾಮ ಆಡಳಿತಾಧಿಕಾರಿ ಹುದ್ದೆಗಳಿಗೆ ನಡೆಸಲಾದ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಗಳಿಸಿರುವ ಅಂತಿಮ ಅಂಕಪಟ್ಟಿಯನ್ನು ಪ್ರಕಟಿಸಲಾಗಿದೆ. ಗ್ರಾಮ ಆಡಳಿತಾಧಿಕಾರಿಗಳ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಸೂಚಿಸಲಾಗಿದ್ದು, ಅದರಂತೆ ಚಿತ್ರದುರ್ಗ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ 32 ಅನುಮೋದನೆಯಾಗಿರುವ ಹುದ್ದೆಗಳಿಗೆ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ, ಸಾಮಾನ್ಯ) ನಿಯಮಗಳನುಸಾರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳಿಸುವ ಸಂಬಂಧ ಪ್ರಾಧಿಕಾರ ನೀಡಿರುವ ಮೆರಿಟ್ ಪಟ್ಟಿಯಲ್ಲಿ 1:3 ಅನುಪಾತದಂತೆ ದಾಖಲಾತಿಗಳ ಪರಿಶೀಲನೆ ಸಂಬಂಧ ಜಿಲ್ಲಾಧಿಕಾರಿಗಳ ಕಚೇರಿ ಜಾಲತಾಣ https://chitradurga.nic.in ನಲ್ಲಿ ಮತ್ತು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಡಿ.20ರಂದು ಅಧಿಸೂಚನೆಯಲ್ಲಿ ನಿಗದಿಯಾಗಿರುವ ಹುದ್ದೆಗಳ ಎದುರಾಗಿ 1:3 ಅನುಪಾತದಂತೆ ಅಭ್ಯರ್ಥಿಗಳ ಪಟ್ಟಿಯನ್ನು ಪ್ರಕಟಿಸಲಾಗಿದೆ. 2025ರ ಜನವರಿ 04 ರಂದು ಬೆಳಿಗ್ಗೆ 10.30 ಗಂಟೆಯಿಂದ 1:3 ಅನುಪಾತದಲ್ಲಿನ ಅಭ್ಯರ್ಥಿಗಳ ದಾಖಲೆಗಳ ಪರಿಶೀಲನೆ ಮತ್ತು ವಿಕಲಚೇತನ ಅಭ್ಯರ್ಥಿಗಳ ವೈದ್ಯಕೀಯ ಪರೀಕ್ಷೆ ನಡೆಸಲಾಗುವುದು. ಜನವರಿ 15 ರಂದು ತಾತ್ಕಾಲಿಕ 1:1 ಆಯ್ಕೆ ಪಟ್ಟಿ ಮತು ಹೆಚ್ಚುವರಿ…

Read More

ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಿಮ್ಮನ್ನು ಕಾಡುತ್ತಿದೇಯೆ..!! ಸಾಲ ಲಕ್ಷ ಇರಲಿ ಕೋಟಿ ಇರಲಿ ಎಲೆ ಲವಂಗ ಏಲಕ್ಕಿ ಪ್ರಯೋಗ ಮಾಡಿ । ಸಾಲ ತೀರೋದು ಗ್ಯಾರಂಟಿ… 1)ಸಾಲ ಲಕ್ಷ ಕೋಟಿ ಇರಲಿ ಎಲೆ ಲವಂಗ ಏಲಕ್ಕಿಯ ಪ್ರಯೋಗ ಮಾಡಿದರೆ ಸಾಲತಿರುವುದು 2)ಪಕ್ಕಾ ಸಾಲ ಅಂತ ಇದ್ರೆ ಅದು ನಮ್ಮನ್ನು ನಿದ್ರೆ ಮಾಡಲು ಬಿಡುವುದಿಲ್ಲ ಯಾವಗ ಸಾಲ ತೀರುತ್ತದೆ ಎಂಬ ಚಿಂತೆ ನಮ್ಮನ್ನು ಕಾಡುತ್ತದೆ ಸಾಲ ಇಲ್ಲದ ಜೀವನ ಅತಿ ಸುಂದರ ಜೀವನ ಎನ್ನಬಹುದು ಸಾಲ ತೆಗೆದುಕೊಳ್ಳುವುದು ತುಂಬಾ ಸುಲಭ ಆದರೆ ಅದನ್ನು ತೀರಿಸುವುದು ತುಂಬಾ ಕಷ್ಟಕರವಾದ ಕೆಲಸ ಎಂದು ಎಲ್ಲರಿಗೂ ಗೊತ್ತು ಕೆಲವೊಮ್ಮೆ ಪರಿಸ್ಥಿತಿಗಳು ಹೇಗೆ ಬರುತ್ತಿದೆ ಎಂದರೆ ತಗೊಂಡ ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ಪಂಡಿತ್ ಜ್ಞಾನೇಶ್ವರ್ ರಾವ್ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ…

Read More

ನವದೆಹಲಿ: 5 ರಾಜ್ಯಗಳಿಗೆ ರಾಜ್ಯಪಾಲರನ್ನು ಘೋಷಿಸಿದ ರಾಷ್ಟ್ರಪತಿಗಳು: ಕೇರಳದ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರಕ್ಕೆ, ಅಜಯ್ ಕುಮಾರ್ ಭಲ್ಲಾ ಅವರನ್ನು ಮಣಿಪುರದ ಉಸ್ತುವಾರಿಯಾಗಿ ನೇಮಿಸಲಾಗಿದೆ. ಮಹತ್ವದ ಪುನರ್ರಚನೆಯಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಮಂಗಳವಾರ ಇಬ್ಬರು ಹೊಸ ರಾಜ್ಯಪಾಲರನ್ನು ನೇಮಿಸಿದರು ಮತ್ತು ಇತರ ಮೂವರನ್ನು ಮರು ನಿಯೋಜಿಸಿದರು, ಐದು ರಾಜ್ಯಗಳಲ್ಲಿ ನಾಯಕತ್ವವನ್ನು ಮರುಸಂಘಟಿಸಿದರು. ಅನುಭವಿ ಆಡಳಿತಗಾರ ಅಜಯ್ ಕುಮಾರ್ ಭಲ್ಲಾ ಅವರನ್ನು ಮಣಿಪುರದ ಹೊಸ ರಾಜ್ಯಪಾಲರಾಗಿ ನೇಮಿಸಲಾಗಿದೆ. ರಾಜ್ಯದಲ್ಲಿ ಹೆಚ್ಚುತ್ತಿರುವ ಹಿಂಸಾಚಾರ ಮತ್ತು ಆಳವಾದ ಜನಾಂಗೀಯ ಸಂಘರ್ಷದ ಮಧ್ಯೆ ಭಲ್ಲಾ ಅಧಿಕಾರ ವಹಿಸಿಕೊಂಡಿದ್ದಾರೆ. ಮೇ 2023 ರಲ್ಲಿ ಜನಾಂಗೀಯ ಕಲಹ ಪ್ರಾರಂಭವಾಗಿ ಒಂದು ವರ್ಷ ಕಳೆದರೂ, ಸಂಘರ್ಷವು ಬಗೆಹರಿಯದೆ ಉಳಿದಿದೆ, ಇದು ಆಡಳಿತವನ್ನು ಅಸ್ತವ್ಯಸ್ತಗೊಳಿಸಿದೆ. ಕೇರಳದ ರಾಜ್ಯಪಾಲರಾಗಿದ್ದ ಆರಿಫ್ ಮೊಹಮ್ಮದ್ ಖಾನ್ ಅವರನ್ನು ಬಿಹಾರಕ್ಕೆ ಮರು ನಿಯೋಜಿಸಲಾಗಿದೆ. ವಿಶೇಷವೆಂದರೆ, ಖಾನ್ ರಾಜ್ಯದ ಪಿಣರಾಯಿ ವಿಜಯನ್ ನೇತೃತ್ವದ ಸರ್ಕಾರದೊಂದಿಗೆ ದೀರ್ಘಕಾಲದ ಸಾರ್ವಜನಿಕ ಜಗಳದಲ್ಲಿ ಭಾಗಿಯಾಗಿದ್ದರು. ಇತರ ಪ್ರಮುಖ ನೇಮಕಾತಿಗಳಲ್ಲಿ ಒಡಿಶಾಕ್ಕೆ ವರ್ಗಾವಣೆಗೊಂಡಿರುವ ಮಿಜೋರಾಂ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ನೌಕರರು ಬಡ್ತಿ ಸೇರಿದಂತೆ ವಿವಿಧ ಭತ್ಯೆ ಪಡೆಯಲು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೇರ್ಗಡೆಗೊಳಿಸುವುದು ಕಡ್ಡಾಯವಾಗಿದೆ. ಈ ಪರೀಕ್ಷೆ ಪಾಸ್ ಮಾಡಲು ಸರ್ಕಾರಿ ನೌಕರರಿಗೆ ದಿನಾಂಕ 31-12-2025ರವರೆಗೆ ಅವಧಿಯನ್ನು ವಿಸ್ತರಿಸಿ ಆದೇಶಿಸುವಂತೆ ರಾಜ್ಯ ಸರ್ಕಾರಕ್ಕೆ ಇ-ಆಡಳಿತ ಇಲಾಖೆಯು ಪತ್ರ ಬರೆದಿದೆ. ಈ ಕುರಿತಂತೆ ಇಂದು ಇ-ಆಡಳಿತ ಕೇಂದ್ರದ ಮುಖ್ಯ ಕಾರ್ಯ ನಿರ್ವಹಣಾಧಿಕಾರಿಗಳು ಮಾಹಿತಿ ನೀಡಿದ್ದು, ರಾಜ್ಯ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರುಗಳು ಹಾಗೂ ನಿಗಮ- ಮಂಡಳಿಗಳಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧಿಕಾರಿಗಳು ಮತ್ತು ಸಿಬ್ಬಂದಿ ವರ್ಗದವರು ಸಹ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಗಳನ್ನು ತೆಗೆದುಕೊಳ್ಳಲು ಉಲ್ಲೇಖಿತ (1)ರ ಅನ್ವಯ ಸರ್ಕಾರವು ದಿನಾಂಕ: 31-12-2024 ರವರೆಗೆ ಸಮಯಾವಕಾಶ ವಿಸ್ತರಿಸಿ ಅಧಿಸೂಚನೆ ಹೊರಡಿಸಿರುತ್ತದೆ ಎಂದಿದ್ದಾರೆ. ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿದ್ದು, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗುತ್ತಾರೆ. ಆದುದರಿಂದ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ/ಪರೀಕ್ಷೆ ತೆಗೆದುಕೊಳ್ಳದೆ ಇರುವ…

Read More