Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಮಂಡ್ಯ: ಜಿಲ್ಲೆಯಲ್ಲಿ ಎಐ ಚಿತ್ರಕ್ಕೆ ಜನರು ಹೈರಾಣಾಗಿದ್ದಾರೆ. ಸಾಮಾಜಿಕ ಮಾಧ್ಯಮಗಳಲ್ಲಿ ಎಐ ಮೂಲಕ ಪೋಟೋ ಎಡಿಟ್ ಮಾಡಿ ಪ್ರವಾಸಿ ತಾಣಗಳಲ್ಲಿ ಹುಲಿ, ಚಿರತೆ ಓಡಾಟವೆಂದು ಹರಿಬಿಟ್ಟ ಕಾರಣ ಭಯಭೀತರಾಗಿದ್ದಾರೆ.  ಹೌದು.. ಮಂಡ್ಯದಲ್ಲಿ ಕಿಡಿಗೇಡಿಗಳ AI ಚಿತ್ರದ ಹುಡುಗಾಟಕ್ಕೆ ಜನರು ಹೈರಾಣಾಗಿದ್ದಾರೆ. AI ಬಳಸಿ ಪ್ರವಾಸಿ ತಾಣದ ಬಳಿ ಹುಲಿ ಮತ್ತು ಚಿರತೆಗಳ ಓಡಾಟದ ಫೋಟೋ ಎಡಿಟ್ ಮಾಡಿದ್ದಾರೆ. ಎಡಿಟ್ ಮಾಡಿದ ಇಂತಹ ಚಿತ್ರಗಳನ್ನು ವೈರಲ್ ಮಾಡಿ ಜನರಲ್ಲಿ ಆತಂಕ‌ವನ್ನು ಕಿಡಿಗೇಡಿಗಳು ಮೂಡಿಸಿದ್ದಾರೆ. ಮಂಡ್ಯದ ಶ್ರೀರಂಗಪಟ್ಟಣದ ಗಂಜಾಮ್ ಬಳಿಯ ಪ್ರವಾಸಿ ತಾಣ ಗುಂಬಸ್ ಬಳಿ ಹುಲಿ ಚಿರತೆ ಕಾಣಿಸಿಕೊಂಡ ವದಂತಿ ಹರಡಲಾಗಿದೆ. ಇದಕ್ಕೆ ಪೂರಕ ಎಂಬಂತೆ AI ಮೂಲಕ ಚಿರತೆ ಹಾಗು ಹುಲಿಗಳ ಫೋಟೋ ಎಡಿಟ್ ಮಾಡಿ ವೈರಲ್ ಆಗಿದೆ.ಇದರ ಜೊತೆಗೆ ಗ್ರಾಮಕ್ಕೆ ಚಿರತೆ ಬಂದ AI ಚಿತ್ರ ಎಡಿಟ್ ಮಾಡಿ ಆತಂಕವನ್ನು ಕಿಡಿಗೇಡುಗಳು ಮಾಡಿದ್ದಾರೆ. ಈ AI ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿ ಜನರಲ್ಲಿ ಆತಂಕ ಉಂಟಾಗಿದೆ. ಇದರ ಅಸಲಿ ಸತ್ಯ ತಿಳಿಯದೆ ಸ್ಥಳೀಯ ಜನರಲ್ಲಿ ಮನೆ ಮಾಡಿದ…

Read More

ಬೆಂಗಳೂರು: ವಿಧ್ಯಾರ್ಥಿಗಳು ಶಿಕ್ಷಣದ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸಿ ಉತ್ತಮ ಸಾಧನೆ ಮಾಡಬೇಕು ಶಿಕ್ಷಣದೊಂದಿಗೆ ಕ್ರೀಡೆಯೂ ಸಹ ವಿಧ್ಯಾರ್ಥಿಗಳಿಗೆ ಅತ್ಯಂತ ಪ್ರಮುಖವಾಗಿದೆ. ಹಾಗಾಗಿ ಕ್ರೀಡೆಗೆ ಹೆಚ್ಚಿನ ಒತ್ತು ನೀಡಿ ಎಂದು ಮಾಜಿ ಸಚಿವರು ಹಾಗೂ ಹಾಲಿ ಶಾಸಕರಾದ ಕೆ. ಗೋಪಾಲಯ್ಯ ವಿಧ್ಯಾರ್ಥಿಗಳಿಗೆ ಸಲಹೆ ನೀಡಿದರು. ಮಹಾಲಕ್ಷ್ಮೀಪುರಂ ಬಿಜಿಎಸ್ ಕಾಲೇಜು ಆಟದ ಮೈದಾನದಲ್ಲಿ ಇಂದು ಆಯೋಜಿಸಿದ್ದ ಬಿಜಿಎಸ್ ಪಿಯು ಕಾಲೇಜು ವಿಧ್ಯಾರ್ಥಿಗಳಿಂದ ಕ್ರೀಡೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮುಂದಿನ ದಿನಗಳಲ್ಲಿ ಬಿಜಿಎಸ್ ಸಂಸ್ಥೆಯಿಂದ ಕ್ರೀಡಾಪಟುಗಳು ಉತ್ತಮ ರೀತಿ ತರಬೇತಿ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಹೋಗಬೇಕು ಎಂದು ತಿಳಿಸಿದರು. ಬಿಜಿಎಸ್ ಸಂಸ್ಥೆಯು ಸಂಸ್ಕಾರ, ಸಂಸ್ಕೃತಿ, ಶಿಕ್ಷಣ, ಅನ್ನದಾಸೋಹ ಇಲ್ಲಿನ ಸಾವಿರಾರು ಜನರಿಗೆ ಉದ್ಯೋಗವನ್ನು ಸೃಷ್ಟಿಸಿದೆ ಹಾಗೂ ರಾಜ್ಯದಲ್ಲಿ 1.6 ಲಕ್ಷಕ್ಕೂ ಹೆಚ್ಚಿನ ವಿಧ್ಯಾರ್ಥಿಗಳಿಗೆ ಶಿಕ್ಷಣವನ್ನು ಕೊಡುತ್ತಿರುವ ಶಿಕ್ಷಣ ಸಂಸ್ಥೆಯನ್ನು ನಿರ್ಮಿಸಿರುವ ಪರಮಪೂಜ್ಯ ಬಾಲಗಂಗಾಧರನಾಥ ಸ್ವಾಮೀಜಿ ಅವರನ್ನು ಕ್ಷಣ ಕ್ಷಣಕ್ಕೂ ಪೂಜಿಸಬೇಕು. ಈ ಸಂಸ್ಥೆಯಲ್ಲಿ ವಿಧ್ಯಾಭ್ಯಾಸ ಪಡೆಯುತ್ತಿರುವ ವಿಧ್ಯಾರ್ಥಿಗಳು ಯುಪಿಎಸ್ಸಿ ವರೆಗೂ ಇಲ್ಲಿ ಶಿಕ್ಷಣ ಪಡೆಯುವ ವ್ಯವಸ್ಥೆಯನ್ನು…

Read More

ಬೆಂಗಳೂರು: ಬಿಗ್ ಬಾಸ್ ಮನೆಗೆ ಪರಿಸರ ನಿಯಮ ಉಲ್ಲಂಘನೆಯಿಂದ ಬೀಗ ಜಡಿದ ಕೇಸ್ ಮಾಸೋ ಮುನ್ನವೇ, ಇದೀಗ ಸ್ಪರ್ಧಿ ಅಶ್ವಿನಿ ಗೌಡ ವಿರುದ್ಧ ದೂರು ದಾಖಲಾಗಿದೆ. ಈ ಸಂಬಂಧ ಹೈಕೋರ್ಟ್ ವಕೀಲ ಪ್ರಶಾಂತ್ ಮೆತಾಲ್ ಎಂಬುವರು ಬಿಗ್ ಬಾಸ್ ಮನೆಯಲ್ಲಿ ಎಸ್ ಪದ ಬಳಕೆ ಮಾಡಿದಕ್ಕೆ ಅಶ್ವಿನಿಗೌಡ ವಿರುದ್ಧ ಬಿಡದಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದೂರಿನಲ್ಲಿ ಸಹ ಸ್ಪರ್ಧಿ ರಕ್ಷಿತಾ ಕುರಿತು ಈ ಮಾತನ್ನು ಆಡಿದ್ದಾರೆ. ಇದೊಂದು ವೈಕ್ತಿತ್ವ ನಿಂದನೆಯಾಗಿ ಅಶ್ವಿನಿಗೌಡ ಆರೋಪಿಸಿದ್ದಾರೆ. ಹೀಗಾಗಿ ಅವರು ಹಾಗೂ ಕಲರ್ಸ್ ಬ್ಯುಸಿನೆಸ್ ಹೆಡ್ ಪ್ರಶಾಂತ್ ನಾಯಕ್, ಕ್ಲಸ್ಟರ್ ಹೆಡ್ ಸುಷ್ಮಾ ಮತ್ತು ಡೈರೆಕ್ಟರ್ ಪ್ರಕಾಶ್ ವಿರುದ್ಧವೂ ದೂರಿನಲ್ಲಿ ಉಲ್ಲೇಖಿಸಿದ್ದಾರೆ. ಹೀಗಾಗಿ ಬಿಡದಿ ಪೊಲೀಸ್ ಠಾಣೆಯಲ್ಲಿ ಗಂಭೀರವಲ್ಲದ ಪ್ರಕರಣ ಎಂಬುದಾಗಿ ಎನ್ ಸಿ ಆರ್ ದಾಖಲಿಸಿದ್ದಾರೆ.

Read More

ಬೆಂಗಳೂರು: ಕರ್ನಾಟಕದ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವಿದ್ಯಾರ್ಥಿಗಳು ಈಗ ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಸರ್ಕಾರ ನಿಗದಿಪಡಿಸಿದ ನಮೂನೆಯಲ್ಲಿ ಬಾಂಡ್ ಸಲ್ಲಿಸಬೇಕು, ಶೈಕ್ಷಣಿಕ ವರ್ಷದ ಅಂತಿಮ ಪ್ರವೇಶ ದಿನಾಂಕದ ನಂತರ ಕೋರ್ಸ್ ಮುಗಿಯುವ ಮೊದಲು ಕೋರ್ಸ್ ಅನ್ನು ತೊರೆದರೆ ದಂಡವಾಗಿ 10 ಲಕ್ಷ ರೂ. ಪಾವತಿಸಬೇಕಾಗುತ್ತದೆ. ಕರ್ನಾಟಕದಲ್ಲಿ ಸ್ನಾತಕೋತ್ತರ ವೈದ್ಯಕೀಯ ಅಥವಾ ದಂತ ಡಿಪ್ಲೊಮಾ ಅಧ್ಯಯನಕ್ಕೆ ದಾಖಲಾದ ವಿದ್ಯಾರ್ಥಿಗಳಿಗೆ ಸೀಟ್ ಲೀವಿಂಗ್ ಬಾಂಡ್ ದಂಡವು 4 ಲಕ್ಷ ರೂ ಆಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) 2025 ರ ಸ್ನಾತಕೋತ್ತರ ವೈದ್ಯಕೀಯ / ದಂತ ವೈದ್ಯಕೀಯ ಕೋರ್ಸ್‌ಗಳ ಪ್ರವೇಶಕ್ಕಾಗಿ ಇ-ಮಾಹಿತಿ ಬುಲೆಟಿನ್ ಅನ್ನು ಪ್ರಕಟಿಸಿದೆ, ಇದರಲ್ಲಿ ಈ ಕಾರ್ಯಕ್ರಮಗಳಿಗೆ ಸೀಟ್ ಲೀವಿಂಗ್ ಬಾಂಡ್ ಅವಶ್ಯಕತೆಗಳು ಸೇರಿವೆ. ಸೀಟ್ ಖಾಲಿ ಮಾಡುವ ಬಾಂಡ್ ದಂಡದ ಮೊತ್ತದ ಜೊತೆಗೆ, ಕೌನ್ಸೆಲಿಂಗ್ ಸಮಯದಲ್ಲಿ ಆಯ್ಕೆ ಮಾಡಿದ ಸೀಟುಗಳನ್ನು ಮುಟ್ಟುಗೋಲು ಹಾಕಿಕೊಳ್ಳುವ ಷರತ್ತುಗಳನ್ನು ಈ ನಿಯಮಗಳು ವಿವರಿಸುತ್ತವೆ. ಈ ಪ್ರಮುಖ ಷರತ್ತುಗಳು ಸೇರಿವೆ ಮೊದಲ ಸುತ್ತಿನ ಹಂಚಿಕೆಯ…

Read More

ಹಾಸನ: ಜಿಲ್ಲೆಯ ಪ್ರಸಿದ್ಧ ಹಾಸನಾಂಬೆ ದೇವಿ ದರ್ಶನಕ್ಕೆ ಅಧಿಕೃತ ತೆರೆ ಇಂದು ಬಿದ್ದಿದೆ. ದಿನಾಂಕ 10-10-2025ರಿಂದ ಭಕ್ತರ ದರ್ಶನಕ್ಕಾಗಿ ಹಾಸನಾಂಬೆ ದೇಗುಲದ ಬಾಗಿಲು ತೆರೆಯಲಾಗಿತ್ತು. 13 ದಿನಗಳಲ್ಲಿ ಬರೋಬ್ಬರಿ 26.07 ಲಕ್ಷ ಮಂದಿ ದರ್ಶನವನ್ನು ಪಡೆದಿದ್ದಾರೆ. ಈ ಬಗ್ಗೆ ಹಾಸನ ಜಿಲ್ಲಾ ಉಸ್ತುವಾರಿ ಹಾಗೂ ಕಂದಾಯ ಸಚಿವ ಕೃಷ್ಣಬೈರೇಗೌಡ ಮಾಹಿತಿ ನೀಡಿದ್ದು, ದಿನಾಂಕ 10-10-2025ರಂದು 58 ಸಾವಿರ ಮಂದಿ ದರ್ಶನವನ್ನು ಪಡೆದಿದ್ದಾರೆ. ದಿನಾಂಕ 11-10-2025ರಂದು 2.08 ಲಕ್ಷ ಭಕ್ತರು ಹಾಸನಾಂಬೆ ದೇಗುಲಕ್ಕೆ ಭೇಟಿ ನೀಡಿದ್ದಾರೆ ಎಂದಿದ್ದಾರೆ. ಹೀಗಿದೆ 13 ದಿನಗಳಲ್ಲಿ ಭಕ್ತರ ದರ್ಶನದ ಅಂಕಿ-ಸಂಖ್ಯೆ ದಿನಾಂಕ 10-10-2025 – 0.58 ಲಕ್ಷ ದಿನಾಂಕ 11-10-2025 – 2.08 ಲಕ್ಷ ದಿನಾಂಕ 12-10-2025 – 1.45 ಲಕ್ಷ ದಿನಾಂಕ 13-10-2025 – 2.29 ಲಕ್ಷ ದಿನಾಂಕ 14-10-2025 – 2.44 ಲಕ್ಷ ದಿನಾಂಕ 15-10-2025 – 2.47 ಲಕ್ಷ ದಿನಾಂಕ 16-10-2025 – 2.58 ಲಕ್ಷ ದಿನಾಂಕ 17-10-2025 – 3.62 ಲಕ್ಷ…

Read More

ರಾಯಚೂರು: “ಬಿಜೆಪಿ ನಾಯಕರಿಗೆ ಕರ್ನಾಟಕ ರಾಜ್ಯದ ಬಗ್ಗೆ ಕಾಳಜಿ ಹಾಗೂ ಬದ್ಧತೆ ಇದ್ದರೆ, ಕೃಷ್ಣಾ ಮೇಲ್ದಂಡೆ, ಮೇಕೆದಾಟು, ಮಹದಾಯಿ ಸೇರಿದಂತೆ ಪ್ರಮುಖ ನೀರಾವರಿ ಯೋಜನೆಗಳ ಜಾರಿಗೆ ಕೇಂದ್ರ ಸರ್ಕಾರದ ಮೇಲೆ ಒಟ್ಟಿಗೆ ಒತ್ತಡ ಹಾಕೋಣ ಬನ್ನಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಸವಾಲೆಸೆದರು. ಪಂಚಮುಖಿಯಲ್ಲಿ ಬ್ಲಾಕ್ ಕಾಂಗ್ರೆಸ್ ಮತ್ತು ಕಾರ್ಯಕರ್ತರ ಸಭೆ ಉದ್ದೇಶಿಸಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಶಿವಕುಮಾರ್ ಅವರು ಬುಧವಾರ ಮಾತನಾಡಿದರು. “ಬಿಜೆಪಿ ನಾಯಕರೇ, ನೀವು ನಿಗದಿ ಮಾಡುವ ಸಮಯಕ್ಕೆ ನಾನು ಬರುತ್ತೇನೆ. ನಾನು ಈಗಾಗಲೇ ಸುಮಾರು 10 ಬಾರಿ ಕೇಂದ್ರ ಸಚಿವರು ಹಾಗೂ ಪ್ರಧಾನಿಗಳ ಮುಂದೆ ಗೋಗರೆದಿದ್ದೇನೆ. ಆದರೂ ಅವರು ಸಹಾಯ ಮಾಡಿಲ್ಲ. ಕೇಂದ್ರ ಬಜೆಟ್ ನಲ್ಲಿ ಘೋಷಿಸಿದ 5300 ಕೋಟಿ ಇದುವರೆಗೂ ಕೊಟ್ಟಿಲ್ಲ. ಹೀಗಾಗಿ ಬಿಜೆಪಿ ಹಾಗೂ ಕೇಂದ್ರ ಸರ್ಕಾರಕ್ಕೆ ರೈತರ ಬಗ್ಗೆ ಕಾಳಜಿ ಇಲ್ಲ” ಎಂದು ಕಿಡಿಕಾರಿದರು. ಕೆಲಸ ಮಾಡುವವರನ್ನು ಪಕ್ಷ ಗುರುತಿಸುತ್ತದೆ “ನಮ್ಮ ದೇಶದಲ್ಲಿ ರಾಮನ ತಂದೆ ದಶರಥ ಮಹಾರಾಜನಿಗಿಂತ ರಾಮನ ಭಂಟ ಹನುಮಂತನ…

Read More

ಶಿವಮೊಗ್ಗ: ಜಿಲ್ಲೆಯ ಸಾಗರದಲ್ಲಿ ಎಡಬಿಡದೆ ಮಳೆಯಾಗುತ್ತಿದೆ. ತೀವ್ರ ಮಳೆಯಿಂದಾಗಿ ಸಾಗರ ತಾಲ್ಲೂಕಿನ ಗಂಟಿನಕೊಪ್ಪದಲ್ಲಿ ಮನೆಯೊಂದು ಕುಸಿತಗೊಂಡಿತ್ತು. ವಿಷಯ ತಿಳಿದಂತ ಶಾಸಕ ಗೋಪಾಲಕೃಷ್ಣ ಬೇಳೂರು ಅವರು, ಕೂಡಲೇ ಸ್ಥಳಕ್ಕೆ ಭೇಟಿ ನೀಡಿ, ಸಾಂತ್ವಾನ ಹೇಳುವಂತೆ ಕಾಂಗ್ರೆಸ್ ಮುಖಂಡರಿಗೆ ಸೂಚಿಸಿದ್ದರು. ಅದರಂತೆ ಭೇಟಿ ನೀಡಿದಂತ ಕಾಂಗ್ರೆಸ್ ಮುಖಂಡರು, ಸಂತೈಸಿ, ಪರಿಹಾರದ ಭರವಸೆ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನಲ್ಲಿ ತೀವ್ರ ಮಳೆಯಿಂದ ಗಂಟಿನಕೊಪ್ಪದ ವಾಸಿಗಳಾದ ಪಾರ್ವತಮ್ಮ ಕೋಂ ಬಾಬು ರವರ ಮನೆ ಹಾನಿಯಾಗಿತ್ತು. ಈ ಹಿನ್ನಲೆಯಲ್ಲಿ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರ ನಿರ್ದೇಶನದ ಮೇರೆಗೆ ಸಾಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕಲಸೆ ಚಂದ್ರಪ್ಪ, ನಗರಸಭೆ ವಿಪಕ್ಷ ನಾಯಕ ಗಣಪತಿ ಮಂಡಗಳಲೆ, ಶಾಸಕರ ಆಪ್ತ ಸಹಾಯಕ ಶ್ರೀನಿವಾಸ ಮೂರ್ತಿ ಹಾಗೂ ಮುಖಂಡರುಗಳು ಸ್ಥಳಕ್ಕೆ ಭೇಟಿ ನೀಡಿ ಸಂತ್ರಸ್ತರಿಗೆ ಸಾಂತ್ವಾನ ಹೇಳಿದರು. ಅಲ್ಲದೇ ಅಗತ್ಯ ಪರಿಹಾರಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಸಾಗರ ತಾಲ್ಲೂಕಿನಲ್ಲಿ ಮಳೆಹಾನಿ ಪ್ರದೇಶಗಳಿಗೆ ಈ…

Read More

ರಾಯಚೂರು: ಮುಂದಿನ ಸಿಎಂ ಯಾರು ಅನ್ನೋ ಚರ್ಚೆ ಬಿಸಿ ಬಿಸಿಯಾಗಿ ರಾಜ್ಯದಲ್ಲಿ ಕಾವೇರಿದೆ. ಆದರೇ ನನ್ನ ಬಗ್ಗೆ ಯಾರೂ ಚರ್ಚೆ ಮಾಡುವ ಅವಶ್ಯಕತೆಯಿಲ್ಲ. ಪಕ್ಷ ಏನು ಹೇಳುತ್ತದೆಯೋ ಅದರಂತೆ ನಾವು ಒಟ್ಟಿಗೆ ಕೆಲಸ ಮಾಡಿಕೊಂಡು ಹೋಗ್ತೀವಿ ಎಂಬುದಾಗಿ ನಾನು ಸಿಎಂ ಸಿದ್ಧರಾಮಯ್ಯಗೆ ಹೇಳಿದ್ದೇನೆ. ಅದಕ್ಕೆ ನಾನು ಬದ್ಧ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಸ್ಪಷ್ಟ ಪಡಿಸಿದ್ದಾರೆ. ಇಂದು ಮಂತ್ರಾಲಯದ ರಾಘವೇಂದ್ರ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಯತೀಂದ್ರ ಸಿದ್ಧರಾಮಯ್ಯ ಹೇಳಿಕೆ ಬಗ್ಗೆ ಕೇಳಿದಾಗ, ಅವರು ಏನು ಹೇಳಿದ್ದಾರೋ ನನಗೆ ಗೊತ್ತಿಲ್ಲ. ಆ ಬಗ್ಗೆ ಅವರನ್ನೇ ಕೇಳಿ. ಅದರ ಬಗ್ಗೆ ನನ್ನ ಕೇಳಿದ್ರೆ ನಾನು ಏನು ಹೇಳಲಿ ಎಂಬುದಾಗಿ ಹೇಳಿದರು. ನನಗೆ ಕಾಂಗ್ರೆಸ್ ಪಕ್ಷ ಎಲ್ಲಾ ಕೊಟ್ಟಿದೆ. ಅಧ್ಯಕ್ಷನಾಗಿದ್ದೇನೆ, ಡಿಸಿಎಂ ಆಗಿ ಇತಿಹಾಸ ಬರೆಯುತ್ತಿದ್ದೇನೆ. ದೊಡ್ಡ ದೊಡ್ಡ ಕೆಲಸ ನಿಭಾಯಿಸಿದ್ದೇನೆ. ನೀರಾವರಿ ಕ್ಷೇತ್ರದಲ್ಲಿ ಹೊಸ ಇತಿಹಾಸ ಬರೆಯುತ್ತೇನೆ. ಮಹದಾಯಿ, ಮೇಕೆದಾಟು ಹೋರಾಟ ಮಾಡಿದ್ದೇನೆ. ಪಕ್ಷ ನನಗೆ ಏನು…

Read More

ವಾರಣಾಸಿ: 166 ಪ್ರಯಾಣಿಕರು ಮತ್ತು ಸಿಬ್ಬಂದಿಯನ್ನು ಹೊತ್ತ ಕೋಲ್ಕತ್ತಾದಿಂದ ಶ್ರೀನಗರಕ್ಕೆ ಹೋಗುತ್ತಿದ್ದ ಇಂಡಿಗೋ ವಿಮಾನವು ಬುಧವಾರ ಇಂಧನ ಸೋರಿಕೆಯಿಂದಾಗಿ ವಾರಣಾಸಿಯ ಲಾಲ್ ಬಹದ್ದೂರ್ ಶಾಸ್ತ್ರಿ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿತು. ವಿಮಾನದಲ್ಲಿದ್ದ ಎಲ್ಲಾ ಪ್ರಯಾಣಿಕರನ್ನು ಸುರಕ್ಷಿತವಾಗಿ ಸ್ಥಳಾಂತರಿಸಲಾಯಿತು. ವಿಮಾನ ನಿಲ್ದಾಣದ ಅಧಿಕಾರಿಗಳು ಘಟನೆಯ ಬಗ್ಗೆ ಸಕ್ರಿಯವಾಗಿ ತನಿಖೆ ನಡೆಸುತ್ತಿದ್ದಾರೆ ಮತ್ತು ಪರಿಸ್ಥಿತಿ ಈಗ ನಿಯಂತ್ರಣದಲ್ಲಿದೆ ಎಂದು ವಾರಣಾಸಿ ಪೊಲೀಸರು ಸುದ್ದಿ ಸಂಸ್ಥೆ IANS ಗೆ ತಿಳಿಸಿದ್ದಾರೆ. ತುರ್ತು ಭೂಸ್ಪರ್ಶದ ನಂತರ ಸಾಮಾನ್ಯ ಕಾರ್ಯಾಚರಣೆಗಳು ಪುನರಾರಂಭಗೊಂಡಿವೆ. https://kannadanewsnow.com/kannada/terrible-bus-accident-in-uganda-at-least-63-people-dead/ https://kannadanewsnow.com/kannada/attention-to-the-states-minority-communities-invitation-to-apply-for-various-schemes/

Read More

ಉಗಾಂಡ: ಪಶ್ಚಿಮ ಉಗಾಂಡಾದ ಹೆದ್ದಾರಿಯಲ್ಲಿ ಬುಧವಾರ ಮುಂಜಾನೆ ಎರಡು ಬಸ್‌ಗಳು ಮತ್ತು ಇತರ ಎರಡು ವಾಹನಗಳು ಅಪಘಾತಕ್ಕೀಡಾಗಿ ಕನಿಷ್ಠ 63 ಜನರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಇತ್ತೀಚಿನ ವರ್ಷಗಳಲ್ಲಿ ಪೂರ್ವ ಆಫ್ರಿಕಾದ ದೇಶದಲ್ಲಿ ನಡೆದ ಅತ್ಯಂತ ಭೀಕರ ಅಪಘಾತಗಳಲ್ಲಿ ಇದು ಒಂದಾಗಿದೆ. ಉತ್ತರ ಉಗಾಂಡಾದ ಪ್ರಮುಖ ನಗರವಾದ ಗುಲುಗೆ ಹೋಗುವ ಹೆದ್ದಾರಿಯಲ್ಲಿ ಸ್ಥಳೀಯ ಕಾಲಮಾನ ಮಧ್ಯರಾತ್ರಿಯ ನಂತರ ಸಂಭವಿಸಿದ ಅಪಘಾತದಲ್ಲಿ ಹಲವಾರು ಜನರು ಗಾಯಗೊಂಡಿದ್ದಾರೆ. ವಿರುದ್ಧ ದಿಕ್ಕಿನಲ್ಲಿ ಹೋಗುತ್ತಿದ್ದ ಇಬ್ಬರು ಬಸ್ ಚಾಲಕರು ಇತರ ವಾಹನಗಳನ್ನು ಹಿಂದಿಕ್ಕಲು ಪ್ರಯತ್ನಿಸಿ ಕಿರಿಯಂಡೊಂಗೊ ಪಟ್ಟಣದ ಬಳಿ ಡಿಕ್ಕಿ ಹೊಡೆದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. https://twitter.com/siziba_bongani/status/1980886651242168738 “ಈ ಪ್ರಕ್ರಿಯೆಯಲ್ಲಿ, ಓವರ್‌ಟೇಕಿಂಗ್ ಕುಶಲತೆಯ ಸಮಯದಲ್ಲಿ ಎರಡೂ ಬಸ್‌ಗಳು ಮುಖಾಮುಖಿಯಾಗಿ ಡಿಕ್ಕಿ ಹೊಡೆದವು” ಎಂದು ಪೊಲೀಸ್ ಹೇಳಿಕೆ ತಿಳಿಸಿದೆ. ಉಗಾಂಡಾ ಮತ್ತು ಪೂರ್ವ ಆಫ್ರಿಕಾದ ಇತರೆಡೆಗಳಲ್ಲಿ ಮಾರಕ ರಸ್ತೆ ಅಪಘಾತಗಳು ಸಾಮಾನ್ಯವಾಗಿದೆ, ಅಲ್ಲಿ ರಸ್ತೆಗಳು ಹೆಚ್ಚಾಗಿ ಕಿರಿದಾಗಿರುತ್ತವೆ. ಪೊಲೀಸರು ಸಾಮಾನ್ಯವಾಗಿ ಇಂತಹ ಅಪಘಾತಗಳಿಗೆ ವೇಗದ ಚಾಲಕರನ್ನು ದೂಷಿಸುತ್ತಾರೆ.…

Read More