Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಖಾಸಗಿ ಸಂಘ-ಸಂಸ್ಥೆಗಳ ಚಟುವಟಿಕೆಗಳಿಗೆ ಅನುಮತಿ ಕಡ್ಡಾಯಗೊಳಿಸುವಂತ ನಿರ್ಧಾರವನ್ನು ಸಚಿವ ಸಂಪುಟ ಸಭೆಯಲ್ಲ ಕೈಗೊಳ್ಳಲಾಗಿದೆ. ಸರ್ಕಾರಿ ಶಾಲಾ – ಕಾಲೇಜುಗಳು, ಅನುದಾನಿತ ಶಿಕ್ಷಣ ಸಂಸ್ಥೆಗಳು, ಉದ್ಯಾನವನಗಳು, ಆಟದ ಮೈದಾನಗಳು, ಸಾರ್ವಜನಿಕ ರಸ್ತೆಗಳು ಹಾಗೂ ಇತರೆ ಸ್ಥಳಗಳನ್ನು ಯಾವುದೇ ಖಾಸಗಿ ಸಂಘ – ಸಂಸ್ಥೆ, ಸಂಘಟನೆಗಳು ತಮ್ಮ ಚಟುವಟಿಕೆಗಳಿಗೆ ಬಳಸುವ ಮುನ್ನ ಸ್ಥಳದ ಮಾಲೀಕತ್ವ ಹೊಂದಿದ ಸಕ್ಷಮ ಪ್ರಾಧಿಕಾರಗಳಿಂದ ಅನುಮತಿ ಪಡೆಯುವುದನ್ನು ಕಡ್ಡಾಯಗೊಳಿಸಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ. https://twitter.com/KarnatakaVarthe/status/1978826774550118533 https://kannadanewsnow.com/kannada/117-km-minister-for-long-bangalore-business-corridor-dcm-d-k-shivakumar/ https://kannadanewsnow.com/kannada/karnataka-administrative-reforms-commission-recommends-government-to-close-7-corporations-and-merge-9-corporations/

Read More

ಮೈಸೂರು: ನೈರುತ್ಯ ರೈಲ್ವೆ, ಮೈಸೂರು ವಿಭಾಗವು ಮೈಸೂರು ರೈಲು ನಿಲ್ದಾಣದ ಪ್ಲಾಟ್ಫಾರ್ಮ್ ನಂ. 2ರಲ್ಲಿ “ಪ್ರಾಜೆಕ್ಟ್ ಆಯುಷ್ಮಾನ್ ನರ್ಸಿಂಗ್ ರೂಮ್” ಅನ್ನು ಲೆಡೀಸ್ ಸರ್ಕಲ್ ಇಂಡಿಯಾ, ಎಂಎಎಲ್ ಸಿ 108ರ ಸಹಯೋಗದಲ್ಲಿ ಉದ್ಘಾಟಿಸಿದೆ. ಈ ಯೋಜನೆಯ ಉದ್ದೇಶ ತಾಯಂದಿರು ಮತ್ತು ಮಕ್ಕಳಿಗೆ ಆರಾಮದಾಯಕ ಮತ್ತು ಖಾಸಗಿ ಸ್ಥಳವನ್ನು ಒದಗಿಸುವುದು, ಪ್ರಯಾಣಿಕರ ಸೌಲಭ್ಯಗಳನ್ನು ಹೆಚ್ಚಿಸುವುದಾಗಿದೆ. ಈ ಸೌಲಭ್ಯವನ್ನು ಸಂಸದ ಯದುವೀರ ಕೃಷ್ಣದತ್ತ ಚಾಮರಾಜ ವಡಿಯಾರ್, ಮುದಿತ್ ಮಿತ್ತಾಲ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಮೈಸೂರು, ಶಮ್ಮಾಸ್ ಹಮೀದ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು ಮೈಸೂರು, ನಿಷಾ ದರ್ಶನ್, ಅಧ್ಯಕ್ಷೆ, ಎಂಎಎಲ್ ಸಿ 108 ಲೇಡೀಸ್ ಸರ್ಕಲ್ ಇಂಡಿಯಾ, ಹಾಗೂ ಇತರ ಹಿರಿಯ ಅಧಿಕಾರಿಗಳ ಉಪಸ್ಥಿತಿಯಲ್ಲಿ ಉದ್ಘಾಟಿಸಿದರು. ಈ ಕಾರ್ಯವು ಮೈಸೂರು ವಿಭಾಗದ ಪ್ರಯಾಣಿಕ ಸೌಲಭ್ಯಗಳ ಸುಧಾರಣೆಯ ನಿರಂತರ ಪ್ರಯತ್ನಗಳನ್ನು ತೋರಿಸುತ್ತದೆ. ಉದ್ಘಾಟಿತ ನರ್ಸಿಂಗ್ ರೂಮ್ ತಾಯಂದಿರು ತಮ್ಮ ಶಿಶುಗಳನ್ನು ಸುರಕ್ಷಿತ, ಸ್ವಚ್ಛ ಮತ್ತು ಆರಾಮದಾಯಕ ವಾತಾವರಣದಲ್ಲಿ ನೋಡಿಕೊಳ್ಳಲು ಅವಕಾಶ ಒದಗಿಸುತ್ತದೆ. ಈ ಸಂದರ್ಭವು ಎಲ್ಲರ ಮೆಚ್ಚುಗೆಗೆ…

Read More

ಬೆಂಗಳೂರು: “117 ಕಿ.ಮೀ ಉದ್ದದ ಬೆಂಗಳೂರು ಬಿಸಿನೆಸ್ ಕಾರಿಡಾರ್ ರಸ್ತೆ (ಈ ಹಿಂದಿನ ಪೆರಿಫೆರಲ್ ರಿಂಗ್ ರಸ್ತೆ)ಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದ್ದು, ಭೂಸಂತ್ರಸ್ತ ರೈತರಿಗೆ ಪರಿಹಾರ ಪಡೆಯಲು ನಾಲ್ಕು ಆಯ್ಕೆಗಳನ್ನು ಕಲ್ಪಿಸಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆ ಬಳಿಕ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆಗಿರುವ ಡಿ.ಕೆ. ಶಿವಕುಮಾರ್ ಅವರು ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. “ರಾಜ್ಯ ಸರ್ಕಾರ ದೊಡ್ಡ ತೀರ್ಮಾನ ಕೈಗೊಂಡಿದ್ದು, ಈ ಹಿಂದಿನ ಸರ್ಕಾರ ಉದ್ದೇಶಿಸಿದ್ದ ಪೆರಿಫೆರಲ್ ರಿಂಗ್ ರಸ್ತೆಯನ್ನು ಬೆಂಗಳೂರು ಬಿಸಿನೆಸ್ ಕಾರಿಡಾರ್ ಎಂದು ಮರುನಾಮಕರಣ ಮಾಡಿ 117 ಕಿ.ಮೀ ಉದ್ದದ ರಸ್ತೆಗೆ ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಲಾಗಿದೆ. ಬೆಂಗಳೂರು ನಗರದಲ್ಲಿ ಇಷ್ಟು ಪ್ರಮಾಣದ ಹೊಸ ರಸ್ತೆಯನ್ನು ಸೇರಿಸುವ ಮೂಲಕ ರಾಜ್ಯ ಸರ್ಕಾರ ಬೆಂಗಳೂರಿನ ಅಭಿವೃದ್ಧಿಗೆ ಹೊಸ ಅಧ್ಯಾಯ ಬರೆಯುತ್ತಿದೆ. ತುಮಕೂರು ರಸ್ತೆಯಿಂದ ಆರಂಭವಾಗಿ ಯಲಹಂಕ, ವೈಟ್ ಫೀಲ್ಡ್, ಆನೇಕಲ್, ಎಲೆಕ್ಟ್ರಾನಿಕ್ ಸಿಟಿ ಮೂಲಕ ಮೈಸೂರು…

Read More

ಶಿವಮೊಗ್ಗ : ಸಹಕಾರಿ ಸಂಸ್ಥೆಗಳು ಆರ್ಥಿಕತೆಯ ಬೆನ್ನೆಲುಬು ಆಗಿರುತ್ತದೆ ಎಂದು ಸಾಗರದ ಬೀರೇಶ್ವರ ಕೋ. ಆಪರೇಟಿವ್ ಸೊಸೈಟಿ ಅಧ್ಯಕ್ಷ ಕಲಸೆ ಚಂದ್ರಪ್ಪ ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀ ಬೀರೇಶ್ವರ ಕೋ. ಆಪರೇಟಿವ್ ಸೊಸೈಟಿಗೆ ನೂತನ ನೇಮಕವಾಗಿರುವ ಶಾಖಾ ಸಲಹಾ ಸಮಿತಿ ಸದಸ್ಯರ ಪದಗ್ರಹಣ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡುತ್ತಾ, ಸಹಕಾರಿ ಸಂಸ್ಥೆ ಅಭಿವೃದ್ದಿಯಾಗಬೇಕಾದರೆ ಷೇರುದಾರರ ಸಹಕಾರದ ಜೊತೆಗೆ ಆಡಳಿತ ಮಂಡಳಿ ನಿರ್ದೇಶಕರ ಪಾತ್ರವೂ ಪ್ರಮುಖವಾಗಿರುತ್ತದೆ ಎಂದು ಹೇಳಿದರು. ಸಾಗರವು ಸಹಕಾರಿ ಕ್ಷೇತ್ರಕ್ಕೆ ದೊಡ್ಡಮಟ್ಟದ ಕೊಡುಗೆ ನೀಡಿದ ತಾಲ್ಲೂಕು ಆಗಿದೆ. ಅನೇಕ ಸಹಕಾರಿ ಸಂಸ್ಥೆಗಳು ಇಲ್ಲಿ ಗ್ರಾಹಕ ಸೇವೆಯಲ್ಲಿ ನಿರತವಾಗಿದೆ. ಬೆಳಗಾವಿ ಜಿಲ್ಲೆಯ ಬೀರೇಶ್ವರ ಸಹಕಾರಿ ಸಂಸ್ಥೆ ಅನೇಕ ವರ್ಷಗಳಿಂದ ಗ್ರಾಹಕರಿಗೆ ಇಲ್ಲಿ ಉತ್ತಮ ಸೇವೆ ನೀಡುತ್ತಾ ಬರುತ್ತಿದೆ. ಸಂಸ್ಥೆಗೆ ಹೊಸಹೊಸ ನಿರ್ದೇಶಕರು ಬರುತ್ತಿದ್ದು, ಅವರ ಸಕ್ರಿಯ ಸೇವೆಯಿಂದ ಸಂಸ್ಥೆ ಇನ್ನಷ್ಟು ಅಭಿವೃದ್ದಿ ಹೊಂದುತ್ತದೆ ಎಂದು ತಿಳಿಸಿದರು. ಸಹಕಾರಿ ಸಂಸ್ಥೆ ವ್ಯವಸ್ಥಾಪಕ ರವೀಂದ್ರ ಹನಗಂಡಿ ಮಾತನಾಡಿ, ಬೀರೇಶ್ವರ ಸಹಕಾರಿ ಸಂಸ್ಥೆ ಒಟ್ಟು…

Read More

ಶಿವಮೊಗ್ಗ : ಬದುಕಿನಲ್ಲಿ ವಿದ್ಯಾರ್ಥಿ ಜೀವನ ಪ್ರಮುಖ ಘಟ್ಟವಾಗಿರುತ್ತದೆ ಪೋಷಕರ ನಿರೀಕ್ಷೆ ನಿಜವಾಗಿಸಲು ಅವಿರತ ಪ್ರಯತ್ನ ಮಾಡಿ ಉತ್ತಮ ಫಲಿತಾಂಶ ಪಡೆಯಿರಿ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಶ್ರೀಮತಿ ಇಂದಿರಾಗಾoಧಿ ಪ್ರಥಮ ದರ್ಜೆ ಕಾಲೇಜಿನಲ್ಲಿ 2025-26ನೇ ಸಾಲಿನ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಉದ್ಘಾಟನೆ ನೆರವೇರಿಸಿ, ಪ್ರಿಯದರ್ಶಿನಿ ವಾರ್ಷಿಕ ಸಂಚಿಕೆ ಬಿಡುಗಡೆ ಮಾಡಿ ಮಾತನಾಡಿದಂತ ಅವರು, ಶ್ರೀಮತಿ ಇಂದಿರಾಗಾoಧಿ ಕಾಲೇಜು ರಾಜ್ಯದಲ್ಲಿಯೆ ಮಾದರಿಯಾಗಿ ಕೆಲಸ ಮಾಡುತ್ತಿದೆ. ಅತಿಹೆಚ್ಚು ವಿದ್ಯಾರ್ಥಿನಿಯರು ಪದವಿ ವಿದ್ಯಾಭ್ಯಾಸ ಮಾಡುತ್ತಿದ್ದು, ಓದಿನ ಜೊತೆಗೆ ಕ್ರೀಡೆ, ಸಾಂಸ್ಕೃತಿಕ ಸ್ಪರ್ಧೆಯಲ್ಲೂ ಹೊಸ ಮೈಲಿಗಲ್ಲು ಸ್ಥಾಪಿಸಿದ್ದಾರೆ. ಕಾಲೇಜಿನ ಅಭಿವೃದ್ದಿಗೆ ಬೇಕಾದ ಅಗತ್ಯ ಸೌಲಭ್ಯ ನೀಡಲಾಗಿದೆ. ಆದರೂ ಕೆಲವರು ಹೊರ ಜಿಲ್ಲೆಗಳಿಗೆ ಮಕ್ಕಳನ್ನು ವಿದ್ಯಾಭ್ಯಾಸಕ್ಕೆ ಕಳಿಸುತ್ತಿರುವುದು ಬೇಸರದ ಸಂಗತಿ. ಕಾಲೇಜಿಗೆ ಸುಸಜ್ಜಿತ ರಂಗಮoದಿರ ನಿರ್ಮಾಣಕ್ಕೆ ಬೇಕಾದ ಸಹಕಾರ ನೀಡಲಾಗುತ್ತದೆ. ಕಾಲೇಜಿನ ಶೈಕ್ಷಣಿಕ ಚಟುವಟಿಕೆಗೆ ಯಾವುದೇ ರೀತಿಯ ಸಮಸೆಯಾಗಬಾರದು ಎಂದರು. ಚಿತ್ರನಟ…

Read More

ಬೆಂಗಳೂರು: ರಾಜ್ಯದ 7 ನಿಗಮಗಳನ್ನು ಮುಚ್ಚುವಂತೆ, 9 ನಿಗಮಗಳನ್ನು ವಿಲೀನ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಕರ್ನಾಟಕ ಆಡಳಿತ ಸುಧಾರಣಾ ಆಯೋಗವು ಶಿಫಾರಸ್ಸು ಮಾಡಿದೆ. ಈ ಬಗ್ಗೆ ಮಾಹಿತಿಯನ್ನು ಕರ್ನಾಟಕ ಆಡಳಿತ ಸುಧಾರಣಾ ಆಯೋಗದ ಅಧ್ಯಕ್ಷ ಆರ್.ವಿ ದೇಶಪಾಂಡೆ ಅವರು ಮಾಹಿತಿ ನೀಡಿದ್ದು, 9ನೇ ವರದಿಯಲ್ಲಿ 449 ಹೊಸ ಶಿಫಾರಸ್ಸುಗಳನ್ನು ಮಾಡಿ, ಸಿಎಂಗೆ ವರದಿಯನ್ನು ಸಲ್ಲಿಸಲಾಗಿದೆ ಎಂದಿದ್ದಾರೆ. ಕರ್ನಾಟಕ ಆಡಳಿತ ಸುಧಾರಣಾ ಆಯೋಗ ಸಲ್ಲಿಸಿರುವಂತ ಶಿಫಾರಸ್ಸು ವರದಿಯಲ್ಲಿ 7 ಬೋರ್ಡ್, ಕಾರ್ಪೊರೇಷನ್ ಗಳನ್ನು ಮುಚ್ಚಲು ಸಲಹೆ ಮಾಡಲಾಗಿದೆ. ಜೊತೆಗೆ 9 ಬೋರ್ಡ್ ಕಾರ್ಪೊರೇಷನ್ ಗಳನ್ನು ವಿಲೀನ ಮಾಡುವುದಕ್ಕೂ ಶಿಫಾರಸ್ಸು ಮಾಡಿರುವುದಾಗಿ ಹೇಳಿದ್ದಾರೆ. ವಿಲೀನಕ್ಕೆ ಶಿಫಾರಸ್ಸು ಮಾಡಿರುವಂತ ನಿಗಮಗಳ ಪಟ್ಟಿ ಈ ಕೆಳಗಿನಂತಿದೆ.. 1.ಕರ್ನಾಟಕ ರಾಜ್ಯ ಏಡ್ಸ್ ತಡೆಗಟ್ಟುವ ಸೊಸೈಟಿ (ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯೋಂದಿಗೆ ವೀಲಿನ) 2.ಕರ್ನಾಟಕ ರೇಷ್ಮೆ ಕೈಗಾರಿಕೆ ನಿಗಮ ನಿಯಮಿತ (ಕರ್ನಾಟಕ ರೇಷ್ಮೆ ಮಾರುಕಟ್ಟೆ ಮಂಡಳಿ ಲಿಮಿಟೆಡ್ ವಿಲೀನ ಮಾಡಬೇಕು) 3.ಆಹಾರ ಕರ್ನಾಟಕ ಲಿಮಿಟೆಡ್ (ಕರ್ನಾಟಕ ರಾಜ್ಯ ಕೃಷಿ…

Read More

ಬೆಂಗಳೂರು: ಕಾವೇರಿ ನಿವಾಸದಲ್ಲಿ ಆರ್ಥಿಕ, ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಗೆ ಆಗಮಿಸಿದ್ದ ಗಣತಿದಾರರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 45 ನಿಮಿಷಕ್ಕೂ ಹೆಚ್ಚು ಕಾಲ ಸಮಾಧಾನದಿಂದ ಉತ್ತರಿಸಿದರು.  ಗಣತಿದಾರರು ಕೇಳಿದ ಎಲ್ಲಾ ಪ್ರಶ್ನೆಗಳಿಗೂ ಮುಖ್ಯಮಂತ್ರಿಗಳು ಉತ್ತರಿಸಿ ಸಂಪೂರ್ಣ ಮಾಹಿತಿ ನೀಡಿದರು. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ನಮ್ಮ ಸರ್ಕಾರವು ಹಿಂದುಳಿದ ವರ್ಗಗಳ ಆಯೋಗದ ಮೂಲಕ ನಡೆಸುತ್ತಿರುವ ಸಾಮಾಜಿಕ ಹಾಗೂ ಶೈಕ್ಷಣಿಕ ಸಮೀಕ್ಷೆಗಾಗಿ ನನ್ನ ಮನೆಗೆ ಭೇಟಿನೀಡಿದ ಸಿಬ್ಬಂದಿಗಳಿಗೆ ಮಾಹಿತಿ ನೀಡಿ, ನನ್ನ ಕರ್ತವ್ಯವನ್ನು ಯಶಸ್ವಿಯಾಗಿ ಪೂರೈಸಿದೆ ಎಂದು ತಿಳಿಸಿದ್ದಾರೆ. ಅಸಮಾನತೆ, ಬಡತನವನ್ನು ನಿವಾರಣೆ ಮಾಡಿ ಸಮಸಮಾಜ ನಿರ್ಮಾಣ ಮಾಡುವ ಉದ್ದೇಶದೊಂದಿಗೆ ನಮ್ಮ ಸರ್ಕಾರವು ಈ ಸಮೀಕ್ಷೆಯನ್ನು ಕೈಗೊಂಡಿದೆ. ಪ್ರತಿಯೊಬ್ಬರೂ ಈ ಸಮೀಕ್ಷೆಯಲ್ಲಿ ತಪ್ಪದೇ ಪಾಲ್ಗೊಂಡು, ತಮ್ಮ ಮಾಹಿತಿಯನ್ನು ಪ್ರಾಮಾಣಿಕವಾಗಿ ನೀಡಬೇಕು. ಆಗ ಮಾತ್ರ ಸಮಾಜದ ವಾಸ್ತವ ಸ್ಥಿತಿಗತಿಯ ಬಗೆಗೆ ನಿಖರ ಮಾಹಿತಿ ದೊರೆತು, ಆರ್ಥಿಕವಾಗಿ, ಸಾಮಾಜಿಕವಾಗಿ ಹಾಗೂ ಶೈಕ್ಷಣಿಕವಾಗಿ ಹಿಂದುಳಿದ ಜನರನ್ನು ಗುರುತಿಸಿ, ಅವರ ಪ್ರಗತಿಗೆ ಕಲ್ಯಾಣ ಕಾರ್ಯಕ್ರಮಗಳನ್ನು ರೂಪಿಸಲು ಸಾಧ್ಯ…

Read More

ಮಂಡ್ಯ : ಶಿಂಷಾ ನದಿ ಪಾತ್ರದಲ್ಲಿ 144 ಸೆಕ್ಷನ್ ಜಾರಿಯಲ್ಲಿದ್ದರು ಸಹ ಅಕ್ರಮವಾಗಿ ಮರಳು ಗಣಿಗಾರಿಕೆ ಮಾಡುತ್ತಿದ್ದ ವೇಳೆ ದಾಳಿ ಮಾಡಿರುವ ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಅಧಿಕಾರಿಗಳು 15 ಟನ್ ಮರಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಮದ್ದೂರು ತಾಲ್ಲೂಕಿನ ಅಜ್ಜಹಳ್ಳಿ ಗ್ರಾಮದ ಶಿಂಷಾ ನದಿ ಪಾತ್ರದಲ್ಲಿ ಅಕ್ರಮವಾಗಿ ಮರಳುಗಾರಿಕೆ ನಡೆಯುತ್ತಿದೆ ಎಂಬ ಖಚಿತ ಮಾಹಿತಿ ಮೇರೆಗೆ ಬುಧವಾರ ದಾಳಿ ಮಾಡಿದ ಅಧಿಕಾರಿಗಳು ಅಂದಾಜು 15 ಟನ್ ಮರಳು ಹಾಗೂ ಕೊಪ್ಪರಿಕೆಗಳನ್ನು ವಶಪಡಿಸಿಕೊಂಡಿದ್ದಾರೆ. ಅಧಿಕಾರಿಗಳ ದಾಳಿಗೆ ಬೆಚ್ಚಿದ ಮರಳು ದಂಧೆಕೋರರು ತುಂಬಿ ಹರಿಯುತ್ತಿರುವ ನದಿಯಲ್ಲೆ ಪರಾರಿಯಾಗಿದ್ದಾರೆ. ಈಗಾಗಲೇ ಇದೇ ವ್ಯಾಪ್ತಿಯಲ್ಲಿ ಅಕ್ರಮ ಮರಳುಗಾರಿಕೆ ಸಂಬಂಧ 2 ಪ್ರಕರಣಗಳನ್ನು ದಾಖಲಿಸಿದ್ದರೂ ಸಹ ಅಕ್ರಮ ಮರಳು ಗಣಿಗಾರಿಕೆ ದಂಧೆ ಮುಂದುವರಿಯುತ್ತಿದ್ದು, ಅಕ್ರಮ ಮರಳು ಗಣಿಗಾರಿಕೆ ನಡೆಸುತ್ತಿರುವವರ ವಿರುದ್ಧ ಮದ್ದೂರು ನ್ಯಾಯಾಲಯದಲ್ಲಿ ದೂರು ದಾಖಲಿಸುವುದಾಗಿ ಭೂ ವಿಜ್ಞಾನಿ ಮಹೇಶ್ ರವರು ಎಚ್ಚರಿಕೆ ನೀಡಿದರು. ಇನ್ನು ಕಳೆದ ತಿಂಗಳು ಅಜ್ಜಹಳ್ಳಿ ಗ್ರಾಮದ ಸ್ಥಳೀಯರು ರಾತ್ರಿ ವೇಳೆ ಅಕ್ರಮವಾಗಿ…

Read More

ಬೆಂಗಳೂರು: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ – ಬೆಂಗಳೂರು ಕಂಟೋನ್ಮೆಂಟ್ ನಡುವೆ ವಿಶೇಷ ಎಕ್ಸ್ ಪ್ರೆಸ್ ರೈಲುಗಳನ್ನು ಓಡಿಸಲು ನಿರ್ಧರಿಸಿದೆ. * ರೈಲು ಸಂಖ್ಯೆ 07317/07318 ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ – ಬೆಂಗಳೂರು ಕಂಟೋನ್ಮೆಂಟ್ ಎಕ್ಸ್ ಪ್ರೆಸ್ ವಿಶೇಷ (ಒಂದು ಟ್ರಿಪ್): ರೈಲು ಸಂಖ್ಯೆ 07317 ಕೆಎಸ್ಆರ್ ಬೆಂಗಳೂರು – ವಾಸ್ಕೊ-ಡ-ಗಾಮ ವಿಶೇಷ ಎಕ್ಸ್ ಪ್ರೆಸ್ ರೈಲು 17.10.2025 ರಂದು ರಾತ್ರಿ 11:25ಕ್ಕೆ ಕೆಎಸ್ಆರ್ ಬೆಂಗಳೂರಿನಿಂದ ಹೊರಟು, ಮರುದಿನ ಮಧ್ಯಾಹ್ನ 02:55ಕ್ಕೆ ವಾಸ್ಕೊ-ಡ-ಗಾಮ ತಲುಪಲಿದೆ. ಮರಳಿ ಪ್ರಯಾಣದಲ್ಲಿ, ರೈಲು ಸಂಖ್ಯೆ 07318 ವಾಸ್ಕೊ-ಡ-ಗಾಮ – ಕೆಎಸ್ಆರ್ ಬೆಂಗಳೂರು ವಿಶೇಷ ಎಕ್ಸ್ ಪ್ರೆಸ್ ರೈಲು 18.10.2025 ರಂದು ಸಂಜೆ 05:00ಕ್ಕೆ ವಾಸ್ಕೊ-ಡ-ಗಾಮದಿಂದ ಹೊರಟು, ಮರುದಿನ ಬೆಳಿಗ್ಗೆ 08:30ಕ್ಕೆ ಬೆಂಗಳೂರು ಕಂಟೋನ್ಮೆಂಟ್ ತಲುಪಲಿದೆ. ರೈಲು ಸಂಖ್ಯೆ 07317 ಮಾರ್ಗಮಧ್ಯೆ ಬೆಂಗಳೂರು ಕಂಟೋನ್ಮೆಂಟ್, ಎಸ್ಎಂವಿಟಿ ಬೆಂಗಳೂರು, ತುಮಕೂರು, ಅರಸೀಕೆರೆ, ಕಡೂರು, ಚಿಕ್ಕಜಾಜೂರು, ದಾವಣಗೆರೆ,…

Read More

ಬೆಂಗಳೂರು: ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಹೇಳಿಕೆ ಬಹುಶಃ ಸುಳ್ಳಿನ ಕಟ್ಟು ಕಥೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಕ್ಷೇಪಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಡಿಕೆಶಿ ಅವರು ಮುಖ್ಯಮಂತ್ರಿ ಆಗಬೇಕೆಂಬ ಕನಸು ಕಾಣುತ್ತಿದ್ದರೆ ನಮ್ಮದೇನೂ ಅಭ್ಯಂತರ ಇಲ್ಲ; ಆದರೆ, ಬಿಜೆಪಿಯಿಂದ ಬೆದರಿಕೆ ಕರೆ ಬಂದಿತ್ತು ಎಂದಿದ್ದಾರೆ. ಬೆದರಿಕೆ ಕರೆ ಆಗಿದ್ದರೆ ಅವರು ದೂರು ಕೊಡಬೇಕಿತ್ತು. ಸತ್ಯ ಹೊರಕ್ಕೆ ಬರುತ್ತಿತ್ತು ಎಂದು ನುಡಿದರು. ಅವರ ಹೇಳಿಕೆ ಒಂದು ರೀತಿಯ ಅಭಾಸ ಎಂದು ಟೀಕಿಸಿದರು. ಈ ಮೂಲಕ ಅವರು ಕಾಂಗ್ರೆಸ್ ಪಕ್ಷವನ್ನು ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಾರೆ ಎಂದು ನನ್ನ ಅನಿಸಿಕೆ ಎಂದು ನುಡಿದರು. ಮುಖ್ಯಮಂತ್ರಿ ಹುದ್ದೆ ಬಯಸುವವರು ಹಲವು ತಂತ್ರಗಳನ್ನು ಹೂಡುವುದು ಸಹಜ. ಬಿಜೆಪಿ ವಿರುದ್ಧ ಆಪಾದನೆ ಮಾಡಿ, ಕಾಂಗ್ರೆಸ್ ಪಕ್ಷ ಅಥವಾ ಹೈಕಮಾಂಡಿಗೆ ಬ್ಲ್ಯಾಕ್‍ಮೇಲ್ ಮಾಡುತ್ತಿದ್ದಾರೆ ಎಂದು ನನ್ನ ಅನಿಸಿಕೆ ಎಂದರು. ಕನ್ನೇರಿ ಸ್ವಾಮೀಜಿಯವರಿಗೆ ವಿಜಯಪುರ ಜಿಲ್ಲೆ ಪ್ರವೇಶಕ್ಕೆ ನಿರ್ಬಂಧ ಹೇರಿದ…

Read More