Subscribe to Updates
Get the latest creative news from FooBar about art, design and business.
Author: kannadanewsnow09
ಮೈಸೂರು: ಮೈಸೂರಿನ ನೈರುತ್ಯ ರೈಲ್ವೆಯ ಈ ರೈಲುಗಳ ರದ್ದತಿ, ಭಾಗಶಃ ರದ್ದತಿ, ನಿಯಂತ್ರಣ ಹಾಗೂ ಮರುನಿಗಡಿಪಡಿಸಲಾಗಿದೆ. ವಿಶ್ವೇಶ್ವರಯ್ಯ ಜಲ ನಿಗಮ ಲಿಮಿಟೆಡ್ (ವಿಜೆಎನ್ಎಲ್) ವತಿಯಿಂದ ಹಬ್ಬನಘಟ್ಟ – ಅರಸೀಕೆರೆ ಸೆಕ್ಷನ್ ನಡುವೆ ದಿನಾಂಕ 30.06.2025 (ಸೋಮವಾರ) ದಂದು ನಡೆಯಲಿರುವ ಕಾಲುವೆ ಕ್ರಾಸಿಂಗ್ ಕಾಮಗಾರಿ ಹಿನ್ನೆಲೆಯಲ್ಲಿ, ಕೆಳಗಿನ ರೈಲು ಸೇವೆಗಳನ್ನು ರದ್ದುಪಡಿಸಲಾಗಿದೆ, ಭಾಗಶಃ ರದ್ದುಪಡಿಸಲಾಗಿದೆ, ನಿಯಂತ್ರಿಸಲಾಗಿದೆ ಮತ್ತು ಮರುನಿಗದಿ ಮಾಡಲಾಗಿದೆ: ರದ್ದುಪಡಿಸಲಾದ ರೈಲುಗಳು: ರೈಲು ಸಂ. 56267 ಅರಸೀಕೆರೆ – ಮೈಸೂರು ಪ್ಯಾಸೆಂಜರ್, ದಿನಾಂಕ 30.06.2025 ರ ಪ್ರಯಾಣವನ್ನು ರದ್ದುಪಡಿಸಲಾಗಿದೆ. ರೈಲು ಸಂ. 16206 ಮೈಸೂರು – ತಾಳಗುಪ್ಪ ಎಕ್ಸಪ್ರೆಸ್, ದಿನಾಂಕ 30.06.2025 ರ ಪ್ರಯಾಣವನ್ನು ರದ್ದುಪಡಿಸಲಾಗಿದೆ. ರೈಲು ಸಂ. 16205 ತಾಳಗುಪ್ಪ – ಮೈಸೂರು ಎಕ್ಸಪ್ರೆಸ್, ದಿನಾಂಕ 30.06.2025ರ ಪ್ರಯಾಣವನ್ನು ರದ್ದುಪಡಿಸಲಾಗಿದೆ. ಭಾಗಶಃ ರದ್ದುಪಡಿಸಲಾದ ರೈಲು: ರೈಲು ಸಂ. 16225 ಮೈಸೂರು – ಶಿವಮೊಗ್ಗ ಟೌನ್ ಎಕ್ಸಪ್ರೆಸ್, ದಿನಾಂಕ 30.06.2025 ರ ಪ್ರಯಾಣವನ್ನು ಮೈಸೂರು – ಅರಸೀಕೆರೆ ನಡುವಿನ ಮಾರ್ಗದಲ್ಲಿ ಭಾಗಶಃ ರದ್ದುಪಡಿಸಲಾಗಿದ್ದು,…
ಮೈಸೂರು: ರೈಲಿನಲ್ಲಿ ಅಕ್ರಮ ವಸ್ತುಗಳ ಸಾಗಣೆಯನ್ನು ತಡೆಗಟ್ಟಲು ನಡೆಯುತ್ತಿರುವ “ಸತರ್ಕ್” ಕಾರ್ಯಾಚರಣೆಯ ವೇಳೆ 25.06.2025 ರಂದು ಆಕಸ್ಮಿಕ ತಪಾಸಣೆ ನಡೆಸಲಾಯಿತು. ಈ ತಪಾಸಣೆ, ಸ್ಯಾಮ್ ಪ್ರಸಾಂತ್ ಜೆ.ಆರ್, ಹಿರಿಯ ವಿಭಾಗೀಯ ಭದ್ರತಾ ಆಯುಕ್ತರು ಮೈಸೂರು ಅವರ ಮಾರ್ಗದರ್ಶನದಲ್ಲಿ ಮತ್ತು ಇ.ಕೆ. ಅನುಜ್ ಕುಮಾರ್, ಸಹಾಯಕ ಭದ್ರತಾ ಆಯುಕ್ತರು ಮೈಸೂರು ಅವರ ಮೇಲ್ವಿಚಾರಣೆಯಲ್ಲಿ ನಡೆಯಿತು. ಈ ತಪಾಸಣೆಯ ತಂಡವನ್ನು ಆನಂದ ಬಿ, ಎಎಸ್ಐ ಮೈಸೂರು ಅವರು ನೇತೃತ್ವ ವಹಿಸಿದ್ದರು. ಅವರ ಜೊತೆಗೆ ಶಿವನಂದ ಟಿ, ಮುಖ್ಯ ಕಾನ್ಸ್ಟೆಬಲ್ ದಾವಣಗೆರೆ, ಮುಜಮ್ಮಿಲ್ ಖಾನ್, ಕಾನ್ಸ್ಟೆಬಲ್ ಮೈಸೂರು ಹಾಗೂ ನಾಯಿ ಪಾಳೆಯ (ಡಾಗ್ ಸ್ಕ್ವಾಡ್) ಸಿಬ್ಬಂದಿ (ಅರಸೀಕೆರೆಯಿಂದ) ಉಪಸ್ಥಿತರಿದ್ದರು. ಈ ತಂಡವು ರೈಲು ಸಂಖ್ಯೆ 17310 (ವಾಸ್ಕೋ ಡ ಗಾಮಾ – ಯಶವಂತಪುರ ಎಕ್ಸ್ಪ್ರೆಸ್) ನಲ್ಲಿ ರಾಣಿಬೆನ್ನೂರು ಮತ್ತು ಹರಿಹರ ನಿಲ್ದಾಣಗಳ ನಡುವೆ ತಪಾಸಣೆ ನಡೆಸಿತು. ತಪಾಸಣೆಯ ವೇಳೆ ಜನರಲ್ ಕೋಚ್ನಲ್ಲಿ ಒಂದು ಅನಾಮದೆಯ ಬ್ಯಾಗ್ ಪತ್ತೆಯಾಯಿತು. ಈ ವಿಷಯವನ್ನು ತಕ್ಷಣವೇ ಎ. ಕೊಂಡಾ ರೆಡ್ಡಿ ಎಸ್ಐಪಿಎಫ್…
ಬೆಂಗಳೂರು: ಹೃದಯಾಘಾತದಿಂದ ಖಾಸಗಿ ಕಾಲೇಜಿನ ಉಪನ್ಯಾಸಕರೊಬ್ಬರು ಸಾವನ್ನಪ್ಪಿರುವಂತ ಘಟನೆ ನೆಲಮಂಗಲದ ಸೋಲದೇವನಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ನೆಲಮಂಗಲ ತಾಲ್ಲೂಕಿನ ಸೋಲದೇವನಹಳ್ಳಿಯ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಿವೃತ್ತ ಐಎಎಸ್ ಅಧಿಕಾರಿ ಶಶಾಂಕ್ ಅವರ ಪುತ್ರ ಶ್ರೇಯಸ್ (33) ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಮೃತ ಶ್ರೇಯಸ್ ಮೂಲತಃ ಪಶ್ಚಿಮ ಬಂಗಾಳ ಮೂಲದವರು. ಅವರು ನಿವೃತ್ತ ಐಎಎಸ್ ಅಧಿಕಾರಿ ಶಶಾಂಕ್ ಅವರ ಪುತ್ರರಾಗಿದ್ದಾರೆ. https://kannadanewsnow.com/kannada/over-1-44-million-indian-children-still-left-unvaccinated-lancet-report/ https://kannadanewsnow.com/kannada/good-news-for-the-states-mango-growers-government-orders-to-allow-purchases-under-the-market-intervention-scheme/
ಬೆಂಗಳೂರು: ರಾಜ್ಯ ಸರ್ಕಾರದಿಂದ 2025-26ನೇ ಸಾಲಿನ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿಯಲ್ಲಿ ಮಾವು ಖರೀದಿಸಲು ಅನುಮತಿಸಿ ಅಧಿಕೃತ ಆದೇಶ ಮಾಡಿದೆ. ಈ ಕುರಿತಂತೆ ಸಹಕಾರ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, 2025-26ನೇ ಸಾಲಿನಲ್ಲಿ (Marketing Season) ರಾಜ್ಯದ ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಇತರೆ ಜಿಲ್ಲೆಗಳಲ್ಲಿ ಒಟ್ಟಾರೆ 1.39 ಲಕ್ಷ ಹೆಕ್ಟೇರ್ ಪುದೇಶದಲ್ಲಿ 08 ರಿಂದ 10 ಲಕ್ಷ ಮೆಟ್ರಿಕ್ ಟನ್ ಮಾವು ಉತ್ಪಾದನೆ ಅಂದಾಜಿಸಲಾಗಿರುತ್ತದೆ. ರಾಜ್ಯದಲ್ಲಿ ಮಾವು ಬೆಳೆಯು ಪ್ರಮುಖ ವಾಣಿಜ್ಯ ಬೆಳೆಯಾಗಿದ್ದು, ಪ್ರಸ್ತುತ ಪ್ರಮುಖ ಮಾರುಕಟ್ಟೆಗಳಲ್ಲಿ ಮಾವು ಬೆಳೆಯ ಮಾರುಕಟ್ಟೆ ಧಾರಣೆ ದಿನೇ ದಿನೇ ಕುಸಿಯುತ್ತಿದ್ದು, ಬೆಂಬಲ ಬೆಲೆ ಯೋಜನೆಯಡಿ ಖರೀದಿಸುವಂತೆ ಜಿಲ್ಲಾ ಟಾಸ್ಕ್ ಫೋರ್ಸ್ ಸಮಿತಿ ಹಾಗೂ ತೋಟಗಾರಿಕೆ ಇಲಾಖೆಯವರು ಕೋರಿರುವ ಹಿನ್ನೆಲೆಯಲ್ಲಿ ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಪತ್ರದಲ್ಲಿ ಪ್ರಸಕ್ತ ಸಾಲಿನಲ್ಲಿ ಮಾರುಕಟ್ಟೆ ಮಧ್ಯ ಪ್ರವೇಶ ಯೋಜನೆಯಡಿಯಲ್ಲಿ (MIS-PDPS) ಮಾವು ಖರೀದಿಸುವ ಬಗ್ಗೆ ಕೇಂದ್ರ ಸರ್ಕಾರಕ್ಕೆ ಪುಸ್ತಾವನೆ ಸಲ್ಲಿಸಲಾಗಿರುತ್ತದೆ…
ನವದೆಹಲಿ: ಹೊಸ ಲ್ಯಾನ್ಸೆಟ್ ಅಧ್ಯಯನದ ಪ್ರಕಾರ, 2023 ರಲ್ಲಿ 1.44 ಮಿಲಿಯನ್ಗಿಂತಲೂ ಹೆಚ್ಚು ಮಕ್ಕಳನ್ನು “ಶೂನ್ಯ-ಡೋಸ್” ಎಂದು ವರ್ಗೀಕರಿಸಲಾಗಿದ್ದು, ಬಾಲ್ಯದ ಲಸಿಕೆಯಲ್ಲಿ ನಿರ್ಣಾಯಕ ಜಾಗತಿಕ ಸವಾಲನ್ನು ಎದುರಿಸುತ್ತಿರುವ ಹಲವಾರು ದಕ್ಷಿಣ ಏಷ್ಯಾದ ದೇಶಗಳಲ್ಲಿ ಭಾರತವೂ ಒಂದು ಎನ್ನುವಂತ ಆಘಾತಕಾರಿ ಅಂಶವನ್ನು ಬಹಿರಂಗ ಪಡಿಸಿದೆ. 1980 ರಿಂದ ದಿನನಿತ್ಯದ ಬಾಲ್ಯದ ಲಸಿಕೆಯು ಲಕ್ಷಾಂತರ ಜೀವಗಳನ್ನು ಉಳಿಸಿದ್ದರೂ, ಇತ್ತೀಚಿನ ವರ್ಷಗಳಲ್ಲಿ, ವಿಶೇಷವಾಗಿ ಕೋವಿಡ್ -19 ಸಾಂಕ್ರಾಮಿಕ ರೋಗದಿಂದಾಗಿ ಜಾಗತಿಕ ಪ್ರಗತಿ ನಿಧಾನವಾಗಿದೆ. ವಿಶೇಷವಾಗಿ ಆಫ್ರಿಕಾ ಮತ್ತು ದಕ್ಷಿಣ ಏಷ್ಯಾದಲ್ಲಿ, ಅನೇಕ ಮಕ್ಕಳು ಇನ್ನೂ ಜೀವ ಉಳಿಸುವ ಲಸಿಕೆಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಈ ಅಧ್ಯಯನವು ಗ್ಲೋಬಲ್ ಬರ್ಡನ್ ಆಫ್ ಡಿಸೀಸ್ 2023 ಡೇಟಾವನ್ನು ಆಧರಿಸಿದೆ ಮತ್ತು 1980 ಮತ್ತು 2023 ರ ನಡುವೆ 204 ದೇಶಗಳಲ್ಲಿ ಲಸಿಕೆ ವ್ಯಾಪ್ತಿಯನ್ನು ನೋಡುತ್ತದೆ. ಇದು ಡಿಫ್ತೀರಿಯಾ, ದಡಾರ, ಪೋಲಿಯೊ, ಕ್ಷಯ, ನ್ಯುಮೋನಿಯಾ ಮತ್ತು ರೋಟವೈರಸ್ನಿಂದ ರಕ್ಷಿಸುವ ಲಸಿಕೆಗಳನ್ನು ಒಳಗೊಂಡಂತೆ ಎಲ್ಲಾ ಮಕ್ಕಳಿಗೆ ಶಿಫಾರಸು ಮಾಡಲಾದ 11 ಪ್ರಮುಖ ಲಸಿಕೆಗಳ ಮೇಲೆ…
ಬೆಂಗಳೂರು: ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಅರ್ಜಿ ಸಲ್ಲಿಸಿರುವವರಿಗೆ ಪರಿಶೀಲನಾ ಚೀಟಿ (ವೆರಿಫಿಕೇಷನ್ ಸ್ಲಿಪ್) ಯನ್ನು ವೆಬ್ಸೈಟ್ ನಲ್ಲಿ ಬಿಡುಗಡೆ ಮಾಡಿದ್ದು, ತಮ್ಮ ಕ್ಲೇಮ್ ಗಳಲ್ಲಿ ಲೋಪಗಳು ಆಗಿದ್ದಲ್ಲಿ ಜುಲೈ 2ರಿಂದ ಮೂರು ದಿನಗಳ ಕಾಲ ತಿದ್ದುಪಡಿಗೆ ಅವಕಾಶ ನೀಡಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಮೀಸಲಾತಿ, ಪ್ರವರ್ಗ, ಗ್ರಾಮೀಣ, ಭಾಷಾ ಅಲ್ಪಸಂಖ್ಯಾತರ ಕೋಟಾ ಇತ್ಯಾದಿ ಕ್ಲೇಮ್ ಗಳನ್ನು ಸರಿಪಡಿಸಿಕೊಳ್ಳಬೇಕೆನ್ನುವವರಿಗೆ ತಿದ್ದುಪಡಿ ಮಾಡಿಕೊಳ್ಳಲು ಅಂತಿಮ ಅವಕಾಶ ನೀಡಲಾಗುವುದು. ಈ ಸಂಬಂಧ ಜೂನ್ 26ರಂದು ಸ್ಲಾಟ್ ಬುಕ್ಕಿಂಗ್ ಗೆ ವೆಬ್ ಸೈಟ್ ನಲ್ಲಿ ಲಿಂಕ್ ಬಿಡಲಾಗುವುದು ಎಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಜುಲೈ 2ರಿಂದ 4ರವರೆಗೆ ಅಂತಹ ಅಭ್ಯರ್ಥಿಗಳು ಖುದ್ದು ಕೆಇಎ ಕಚೇರಿಗೆ ಬಂದೇ ದೋಷಗಳನ್ನು ಸರಿಪಡಿಸಿಕೊಳ್ಳಬೇಕಾಗುತ್ತದೆ. ಬರುವುದಕ್ಕೂ ಮುನ್ಬ ಮುಂಗಡವಾಗಿ ದಿನಾಂಕ ನಿಗದಿಪಡಿಸಿಕೊಂಡೇ ಬರಬೇಕು ಎಂದು ಅವರು ವಿವರಿಸಿದ್ದಾರೆ. ಇದುವರೆಗೂ ಕಾಲೇಜು ಹಂತದಲ್ಲಿ ದಾಖಲೆ ಪರಿಶೀಲನೆ ಮಾಡಿಸಿಕೊಳ್ಳದೇ ಇರುವವರು ಕೂಡ ಈ ದಿನಗಳಂದು ಕೆಇಎ…
ವಾಸ್ತು ಶಾಸ್ತ್ರದ ಪ್ರಕಾರ, ಮನೆಯೊಳಗೆ ಮನಿ ಪ್ಲಾಂಟ್ ಬೆಳೆಸುವುದರಿಂದ ಸಂಪತ್ತು ಆಕರ್ಷಿಸುತ್ತದೆ ಎಂದು ನಂಬಲಾಗಿದೆ. ಆದಾಗ್ಯೂ, ವಾಸ್ತು ಶಾಸ್ತ್ರದ ಪ್ರಕಾರ, ಮನಿ ಪ್ಲಾಂಟ್ ಅನ್ನು ಸರಿಯಾದ ಸ್ಥಳದಲ್ಲಿ ಮತ್ತು ಸರಿಯಾದ ದಿಕ್ಕಿನಲ್ಲಿ ಬೆಳೆಸಬೇಕು. ಇಲ್ಲದಿದ್ದರೆ, ಅದು ಮನೆಯಲ್ಲಿ ನಕಾರಾತ್ಮಕತೆಯನ್ನು ಹೆಚ್ಚಿಸಬಹುದು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ…
ಬೆಂಗಳೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ನೇಮಕಾತಿಗೊ ಚಾಲಕರಿಗೆ ನೇಮಕಾತಿ ಪತ್ರ ವಿತರಣೆ ಹಾಗೂ ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅನಾವರಣಗೊಳಿಸಿದರು. ಇಂದು ಬೆಂಗಳೂರಿನ ಕೆ ಎಸ್ ಆರ್ ಟಿ ಸಿಯ ಸಭಾಂಗಣದಲ್ಲಿ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯಲ್ಲಿ ಹೊಸ ನೇಮಕಾತಿ ಮೂಲಕ ಆಯ್ಕೆಗೊಂಡ ಚಾಲಕರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ನೇಮಕಾತಿ ಪತ್ರ ವಿತರಣೆ ಮಾಡಿದರು. ಈ ಕಾರ್ಯಕ್ರಮದಲ್ಲಿ ಸಾರಿಗೆ ಮತ್ತು ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಅವರು ಸಾಂಕೇತಿಕವಾಗಿ 46 ಅಭ್ಯರ್ಥಿಗಳಿಗೆ ನೇಮಕಾತಿ ಆದೇಶ ನೀಡಿದರು. ನಂತರ ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ವಾಣಿಜ್ಯ ಮಳಿಗೆಗಳ ಪರವಾನಗಿ ನಿರ್ವಹಣಾ ತಂತ್ರಾಂಶ ಅನಾವರಣಗೊಳಿಸಿದರು. ಹೊಸದಾಗಿ ನೇಮಕಗೊಂಡ ಅಭ್ಯರ್ಥಿಗಳಿಗೆ ಶುಭಾಶಯಗಳನ್ನು ತಿಳಿಸಿದ ಅವರು, 2019 ರಲ್ಲಿ ನೇಮಕಾತಿಗೆ ಅಧಿಸೂಚನೆ ಹೊರಡಿಸಲಾಗಿದ್ದು, ದೇಶದಲ್ಲೆಡೆ ಹರಡಿದ ಕೋವಿಡ್-19 ಕಾರಣದಿಂದ ಸ್ಥಗಿತಗೊಂಡಿತ್ತು. ನಂತರ ಹೊಸ ಸರ್ಕಾರ ಅಸ್ಥಿತ್ವಕ್ಕೆ ಬಂದ ನಂತರ ವಾ.ಕ.ರ.ಸಾ. ಸಂಸ್ಥೆಯಲ್ಲಿ 1000…
ಬೆಂಗಳೂರು: ರಾಜ್ಯದಲ್ಲಿ ಆರೋಗ್ಯಭಾಗ್ಯವನ್ನು ಹೆಚ್ಚಿಸಲು ಸಂಕಲ್ಪ ತೊಟ್ಟಿರುವ ನಮ್ಮ ಸರ್ಕಾರ ಮುಂದಿನ 3 ವರ್ಷದೊಳಗೆ ಪ್ರತಿ ಜಿಲ್ಲೆಯಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ, ಟ್ರಾಮಾ ಸೆಂಟರ್, ಕ್ಯಾನ್ಸರ್ ಆಸ್ಪತ್ರೆ, ಹೃದ್ರೋಗ ಚಿಕಿತ್ಸಾ ಆಸ್ಪತ್ರೆಯನ್ನು ನಿರ್ಮಾಣ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ಘೋಷಿಸಿದ್ದಾರೆ. ಬೆಂಗಳೂರಿನ ಕ್ವೀನ್ಸ್ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಸುದ್ದಿಗಾರರೊಂದಿಗೆ ಸಚಿವರು ಮಾತನಾಡಿದರು. ಕರ್ನಾಟಕವನ್ನು ಆರೋಗ್ಯಕರ ರಾಜ್ಯವನ್ನಾಗಿ ಮಾಡಲು ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಗುರಿ ಇಟ್ಟುಕೊಂಡಿದೆ. ಈ ನಿಟ್ಟಿನಲ್ಲಿ ನಮ್ಮ ವೈದ್ಯಕೀಯ ಶಿಕ್ಷಣ ಇಲಾಖೆ ಮೂರು ವರ್ಷಗಳ ಅಭಿವೃದ್ಧಿ ಯೋಜನೆಗಳ ನೀಲನಕ್ಷೆಯನ್ನು ಹಾಕಿಕೊಂಡಿದೆ ಎಂದು ತಿಳಿಸಿದರು. ಈ ನಿಟ್ಟಿನಲ್ಲಿ ಪ್ರತಿ ಜಿಲ್ಲೆಯಲ್ಲೂ ಎಲ್ಲರಿಗೂ, ಸುಲಭ ಹಾಗೂ ಸುಲಲಿತವಾಗಿ ಚಿಕಿತ್ಸೆ ದೊರೆಯುವಂತೆ ಮಾಡಲಾಗುವುದು. ನಾಗರಿಕರ ಯೋಗ ಕ್ಷೇಮದ ಬಗ್ಗೆ ಹೆಚ್ಚಿನ ಕಾಳಜಿ ವಹಿಸಲಾಗುವುದು ಎಂದು ಡಾ. ಪಾಟೀಲ್…
ಬೆಂಗಳೂರು: ಸುಮಾರು 23 ದೇಶಗಳಲ್ಲಿ ತನ್ನ ಉತ್ಕೃಷ್ಟ ಗುಣಮಟ್ಟದ ಉತ್ಪನ್ನಗಳ ಮಾರಾಟ ವ್ಯವಸ್ಥೆ ಹೊಂದಿರುವ ಸರಕಾರಿ ಸ್ವಾಮ್ಯದ ಕರ್ನಾಟಕ ಸಾಬೂನು ಮತ್ತು ಮಾರ್ಜಕಗಳ ನಿಯಮಿತಕ್ಕೆ (ಕೆಎಸ್ಡಿಎಲ್) ಭಾರತದಲ್ಲಿರುವ ಬ್ರಿಟಿಷ್ ಹೈಕಮಿಷನರ್ ಲಿಂಡಿ ಕ್ಯಾಮರಾನ್ ಮತ್ತು ಕರ್ನಾಟಕ-ಕೇರಳ ವ್ಯಾಪ್ತಿಯಲ್ಲಿನ ಡೆಪ್ಯುಟಿ ಹೈಕಮಿಷನರ್ ಚಂದ್ರು ಅಯ್ಯರ್ ಬುಧವಾರ ಭೇಟಿ ನೀಡಿದ್ದರು. ಈ ಸಂದರ್ಭದಲ್ಲಿ ಅವರಿಬ್ಬರೂ ಕೆಎಸ್ಡಿಎಲ್ ಇತಿಹಾಸ, ಕಾರ್ಯವಿಧಾನ, ಮಾರುಕಟ್ಟೆ ಜಾಲ, ಆದಾಯ, ಭವಿಷ್ಯದ ಯೋಜನೆಗಳ ಬಗ್ಗೆ ವಿವರವಾಗಿ ತಿಳಿದುಕೊಂಡರು. ಕೆಎಸ್ಡಿಎಲ್ ಗೆ ಭೇಟಿ ನೀಡಿದ ಈ ಇಬ್ಬರು ಗಣ್ಯರನ್ನು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಬರಮಾಡಿಕೊಂಡರು. ಜತೆಯಲ್ಲಿ ಸಂಸ್ಥೆಯ ಅಧ್ಯಕ್ಷ ಸಿ ಎಸ್ ನಾಡಗೌಡ ಕೂಡ ಇದ್ದರು. ಈ ಸಂದರ್ಭದಲ್ಲಿ, ಕೆಎಸ್ಡಿಎಲ್ ಚರಿತ್ರೆಯನ್ನು ಕಟ್ಟಿಕೊಡುವ ಪ್ರಾತ್ಯಕ್ಷಿಕೆಯನ್ನು ಲಿಂಡಿ ಮತ್ತು ಅಯ್ಯರ್ ಇಬ್ಬರಿಗೂ ಪ್ರದರ್ಶಿಸಲಾಯಿತು. ಸಂಸ್ಥೆಯ ಉಗಮದ ಹಿನ್ನೆಲೆಯಲ್ಲಿ ಬ್ರಿಟನ್ನಿನ ಪಾತ್ರವಿರುವುದನ್ನು ಕೇಳಿ, ಇಬ್ಬರೂ ಅಚ್ಚರಿ ವ್ಯಕ್ತಪಡಿಸಿದರು. ಜತೆಯಲ್ಲೇ ಕೆಎಸ್ಡಿಎಲ್ ಉತ್ಪನ್ನಗಳ ಪ್ರದರ್ಶನವನ್ನೂ ಏರ್ಪಡಿಸಲಾಗಿತ್ತು. ಲಿಂಡಿ ಮತ್ತು ಅಯ್ಯರ್…












