Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಡಿಸೆಂಬರ್ 30 ರಂದು ರಾತ್ರಿ 9:58 ಕ್ಕೆ ಶ್ರೀಹರಿಕೋಟಾದ ದೇಶದ ಏಕೈಕ ಬಾಹ್ಯಾಕಾಶ ನಿಲ್ದಾಣದ ಮೊದಲ ಉಡಾವಣಾ ಪ್ಯಾಡ್ನಿಂದ ಬಾಹ್ಯಾಕಾಶದಲ್ಲಿ ಡಾಕಿಂಗ್ ಪ್ರದರ್ಶಿಸಲು ಎರಡು ಸಣ್ಣ ಉಪಗ್ರಹಗಳ ಉಡಾವಣೆಯೊಂದಿಗೆ ತನ್ನ ಪ್ರಮುಖ ಸ್ಪೇಡೆಕ್ಸ್ ಮಿಷನ್ನೊಂದಿಗೆ ಕೊನೆಗೊಳಿಸಲಿದೆ. ಡಾಕಿಂಗ್ ಎಂಬುದು ಎರಡು ಉಪಗ್ರಹಗಳನ್ನು ಜೋಡಿಸಿ ನಂತರ ಬಾಹ್ಯಾಕಾಶಕ್ಕೆ ಸೇರಿಸುವ ಪ್ರಕ್ರಿಯೆಯಾಗಿದೆ – ಚಂದ್ರಯಾನ -4 ಅಥವಾ ಭಾರತೀಯ ಅಂತರಿಕ್ಷ ನಿಲ್ದಾಣವನ್ನು ಸ್ಥಾಪಿಸುವಂತಹ ಭವಿಷ್ಯದಲ್ಲಿ ಸಾಧಿಸಲು ಬಾಹ್ಯಾಕಾಶ ಸಂಸ್ಥೆ ಆಶಿಸಿದ ಕಾರ್ಯಾಚರಣೆಗಳಿಗೆ ಇದು ಅಗತ್ಯವಾಗಿದೆ. ಸ್ಪೇಡೆಕ್ಸ್ ಮಿಷನ್ ನಲ್ಲಿ ಎಸ್ ಡಿಎಕ್ಸ್ 01 ಅಥವಾ ಚೇಸರ್ ಮತ್ತು ಎಸ್ ಡಿಎಕ್ಸ್ 02 ಅಥವಾ ಟಾರ್ಗೆಟ್ ಎಂಬ ಎರಡು ಉಪಗ್ರಹಗಳು ಒಂದೇ ಕಕ್ಷೆಯಲ್ಲಿ ಜೋಡಣೆಯಾಗುತ್ತವೆ, ಪರಸ್ಪರ ಅಂತರವನ್ನು ಕಡಿಮೆ ಮಾಡುತ್ತವೆ, ಅವುಗಳ ನಡುವೆ ವಿದ್ಯುತ್ ಶಕ್ತಿಯನ್ನು ಸೇರಿಸುತ್ತವೆ ಮತ್ತು ವರ್ಗಾಯಿಸುತ್ತವೆ ಮತ್ತು ನಂತರ ಬೇರ್ಪಡುತ್ತವೆ. ಅವು ಬೇರ್ಪಟ್ಟ ನಂತರ, ಎರಡೂ ಉಪಗ್ರಹಗಳಲ್ಲಿನ ಪೇಲೋಡ್ಗಳು ಎರಡು ವರ್ಷಗಳವರೆಗೆ ಕಾರ್ಯನಿರ್ವಹಿಸುವುದನ್ನು…
ಬೆಳಗಾವಿ: ರಾಜ್ಯದಲ್ಲೇ ಬೆಚ್ಚಿ ಬೀಳಿಸುವ ಘಟನೆ ಎನ್ನುವಂತೆ ವ್ಯಕ್ತಿಯೊಬ್ಬನನ್ನು ನಡು ರಸ್ತೆಯಲ್ಲೇ, ಹಾಡ ಹಗಲೇ ಕುಡುಗೋಲಿನಿಂದ ಕೊಚ್ಚಿ ಕೊಲೆಗೆ ಯತ್ನಿಸಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಮಲ್ಲಮ್ಮನ ಬೆಳವಡಿ ಗ್ರಾಮದಲ್ಲಿ ಹಾಡ ಹಗಲೇ, ನಡು ರಸ್ತೆಯಲ್ಲೇ ಸಾರ್ವಜನಿಕರ ಎದುರೇ ದುಷ್ಕರ್ಮಿಯೊಬ್ಬ ಅಟ್ಟಹಾಸವನ್ನು ಮರೆದಿದ್ದಾನೆ. ಹಳೆಯ ದ್ವೇಷದಿಂದ ಮುಕ್ತುಮ್ ತಟಗಾರ ಎಂಬುವರ ಮೇಲೆ ಆರೋಪಿ ಮುತ್ತು ಎಂಬಾತ ಕುಡುಗೋಲಿನಿಂದ 6ಕ್ಕೂ ಹೆಚ್ಚು ಬಾರಿ ಕೊಚ್ಚಿ ಪರಾರಿಯಾಗಿದ್ದಾನೆ. ಹಾಡಹಗಲೇ ನಡೆದಂತ ಈ ಘಟನೆಯಿಂದ ಬೆಳಗಾವಿ ಜನರು ಬೆಚ್ಚಿ ಬಿದ್ದಿದ್ದಾರೆ. ಕುಡುಗೋಲಿನಿಂದ ಹಲ್ಲೆಗೆ ಒಳಗಾಗಿ, ರಕ್ತದ ಮಡುವಿನಲ್ಲಿ ಬಿದ್ದಿದ್ದಂತ ಮುಕ್ತುಮ್ ತಟಗಾರನನ್ನು ಸ್ಥಳೀಯರು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಿಸಿದ್ದಾರೆ. ಈ ಕೊಲೆಯತ್ನದ ನಿಖರ ಕಾರಣ ತಿಳಿದು ಬಂದಿಲ್ಲ. ಈ ಸಂಬಂಧ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/opposition-leaders-in-karnataka-entertained-people-through-their-statements-ramesh-babu/ https://kannadanewsnow.com/kannada/https-kannadanewsnow-com-kannada-people-in-bengaluru-note-permission-to-hold-event-at-cubbon-park-is-mandatory-from-now-on/ https://kannadanewsnow.com/kannada/opposition-leader-r-ashoka-urges-governor-to-grant-protection-to-ct-ravi-demands-judicial-probe/
ಬೆಂಗಳೂರು: ಕರ್ನಾಟಕದಲ್ಲಿ ವಿರೋಧ ಪಕ್ಷದ ನಾಯಕರಾಗಿ ವೈಫಲ್ಯಗಳನ್ನು ಕಂಡಿರುವ ಜೋಡೆತ್ತುಗಳು ಆರ್.ಅಶೋಕ್ ಮತ್ತು ಛಲವಾದಿ ನಾರಾಯಣ ಸ್ವಾಮಿ ರಾಜ್ಯದ ಜನರಿಗೆ ತಮ್ಮ ಹೇಳಿಕೆಗಳ ಮೂಲಕ ಮನರಂಜನೆ ನೀಡುತ್ತಿದ್ದಾರೆ ಎಂಬುದಾಗಿ ಮಾಜಿ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಮುಖ್ಯಸ್ಥ ರಮೇಶ್ ಬಾಬು ಹೇಳಿದ್ದಾರೆ. ಇಂದು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕರ್ನಾಟಕದ ಇಬ್ಬರು ಬಿಜೆಪಿ ವಿರೋಧ ಪಕ್ಷದ ನಾಯಕರು ತಮ್ಮ ವ್ಯರ್ಥ ಪ್ರಲಾಪಗಳಿಂದ ರಾಜ್ಯದ ಜನರ ಗಮನ ಸೆಳೆಯುವ ಪ್ರಯತ್ನಕ್ಕೆ ಮುಂದಾಗಿದ್ದಾರೆ. ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಆರ್. ಅಶೋಕ್ ರವರು, ವಿಧಾನ ಪರಿಷತ್ತಿನ ವಿರೋಧ ಪಕ್ಷದ ನಾಯಕರಾದ ಛಲವಾದಿ ನಾರಾಯಣಸ್ವಾಮಿ ಅವರು ಯಾವುದೇ ಜನಪರ ವಿಷಯಗಳ ಮೇಲೆ ಸರ್ಕಾರದ ವೈಫಲ್ಯಗಳನ್ನು ಎತ್ತಿಹಿಡಿಯಲು ವಿಫಲರಾಗಿದ್ದು, ಇವತ್ತು ರಾಜ್ಯಪಾಲರನ್ನು ಭೇಟಿಯಾಗುವುದರ ಮೂಲಕ ಅವರ ನಿಜ ಬಣ್ಣವನ್ನು ಬಯಲು ಮಾಡಿಕೊಂಡಿದ್ದಾರೆ ಎಂದಿದ್ದಾರೆ. ಬೌದ್ಧಿಕವಾಗಿ ದಿವಾಳಿಯಾಗಿರುವ ಇವರು ಕಾಂಗ್ರೆಸ್ ಪಕ್ಷವನ್ನು ಟೀಕಿಸುವ ನೈತಿಕತೆಯನ್ನು ಕಳೆದುಕೊಂಡಿದ್ದಾರೆ. ಇಂತಹ ದುರ್ಬಲ ದೌರ್ಬಲ್ಯದ ವಿರೋಧ ಪಕ್ಷದ ನಾಯಕರನ್ನು…
ಚಿತ್ರದುರ್ಗ : ಕರ್ನಾಟಕ ಲೋಕಸೇವಾ ಆಯೋಗದಿಂದ ನಡೆಸಲಾಗುವ ಗೆಜೆಟೆಡ್ ಪ್ರೊಬೇಷನರ್ 384 ಹುದ್ದೆಗಳ ನೇಮಕಾತಿಯ ಪೂರ್ವಭಾವಿ ಮರುಪರೀಕ್ಷೆಯು ಇದೇ ಡಿ.29ರಂದು ಚಿತ್ರದುರ್ಗ ನಗರದ 25 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದೆ. ಈ ಪರೀಕ್ಷೆಯಲ್ಲಿ ಅಭ್ಯರ್ಥಿಗಳು ಈ ಕೆಳಕಂಡ ಅಂಶಗಳನ್ನು ಕಡ್ಡಾಯವಾಗಿ ಪಾಲಿಸಲು ಸೂಚಿಸಿದೆ. ಅಭ್ಯರ್ಥಿಗಳು ಕೆಪಿಎಸ್ಸಿಯಿಂದ ಡೌನ್ಲೋಡ್ ಮಾಡಿಕೊಂಡ ಮರು ಪರೀಕ್ಷೆಯ ಪ್ರವೇಶ ಪತ್ರ, ಭಾವಚಿತ್ರವಿರುವ ಮೂಲ ಗುರುತಿನ ಚೀಟಿ (ಚುನಾವಣೆ ಐಡಿ, ಆಧಾರ್ ಕಾರ್ಡ್, ಡ್ರೈವಿಂಗ್ ಲೈಸನ್ಸ್, ಪಾನ್ಕಾರ್ಡ್, ಪಾಸ್ಪೋರ್ಟ್, ಸರ್ಕಾರಿ ನೌಕರರ ಐಡಿ ಪರೀಕ್ಷಾ ಕೇಂದ್ರಗಳಲ್ಲಿ ಕಡ್ಡಾಯವಾಗಿ ಹಾಜರುಪಡಿಸಬೇಕು. ಅಭ್ಯರ್ಥಿಗಳು ಮೊಬೈಲ್, ಕ್ಯಾಲ್ಕುಕಲೇಟರ್, ಸ್ಮಾರ್ಟ್ವಾಚ್, ಬ್ಲೂಟೂತ್, ವೈಟ್ ಫ್ಲೂಯಿಡ್, ವೈರ್ ಲೆಸ್ ಸೆಟ್, ಪೇಪರ್, ಬುಕ್ಸ್ ಇತರೆ ಎಲೆಕ್ಟ್ರಾನಿಕ್ ಗ್ಯಾಜೆಟ್ಗಳನ್ನು ತರುವಂತಿಲ್ಲ. ಅಭ್ಯರ್ಥಿಗಳು ಶೂ, ಸಾಕ್ಸ್, ಸ್ವೆಟರ್ ಮತ್ತು ಜರ್ಕಿನ್, ತುಂಬು ತೋಳಿನ ಷರ್ಟ್ ಮತ್ತು ಫೇಸ್ ಮಾಸ್ಕ್ ಹಾಗೂ ಇತರೆ ವಸ್ತುಗಳನ್ನು ಧರಿಸುವುದನ್ನು ನಿಷೇಧಿಸಲಾಗಿದೆ. ಅಲ್ಲದೇ ಅಭ್ಯರ್ಥಿಗಳು ಸಾಧಾರಣ ಚಪ್ಪಲಿಯನ್ನು ಮಾತ್ರ ಧರಿಸಿ ಪರೀಕ್ಷೆಗೆ ಹಾಜರಾಗಬೇಕು ಎಂದು ಜಿಲ್ಲಾಧಿಕಾರಿ ಟಿ.ವೆಂಕಟೇಶ್…
ಬಳ್ಳಾರಿ: ಜಿಲ್ಲೆಯ ಬಳ್ಳಾರಿ ನಗರ, ಬಳ್ಳಾರಿ ಗ್ರಾಮಾಂತರ, ಸಂಡೂರು, ಸಿರುಗುಪ್ಪ (ಕಂಪ್ಲಿ) ಶಿಶು ಅಭಿವೃದ್ಧಿ ಯೋಜನಾ ವ್ಯಾಪ್ತಿಯಲ್ಲಿನ ವಿವಿಧ ಗ್ರಾ.ಪಂ., ಪ.ಪಂ, ಪುರಸಭೆ, ನಗರಸಭೆ, ವ್ಯಾಪ್ತಿಯಲ್ಲಿ ಖಾಲಿ ಇರುವ ಒಟ್ಟು 96 ಕಾರ್ಯಕರ್ತೆ ಹಾಗೂ 293 ಅಂಗನವಾಡಿ ಸಹಾಯಕಿಯರ ಗೌರವಸೇವೆ ಹುದ್ದೆಗಳಿಗೆ ಆಧಿಸೂಚನೆ ಹೊರಡಿಸಿ, ಅರ್ಜಿ ಸಲ್ಲಿಸಲು ಈಗಾಗಲೇ ಕಾಲಾವಕಾಶ ಮುಗಿದಿದ್ದು, ಅರ್ಜಿ ಸಲ್ಲಿಸುವಾಗ ವೆಬ್ಸೈಟ್ನಲ್ಲಿ ಒಟ್ಟು 4 ವಿವಿಧ ಹಂತಗಳಿದ್ದು, ಇದರಲ್ಲಿ ಕೆಲವರಿಗೆ 1ನೇ ಹಂತದಲ್ಲಿಯೇ ಅಪ್ಲಿಕೇಷನ್ ಸಕ್ಸಸ್ಪುಲ್ ಅಪ್ಲೋಡ್ ಎಂಬ ಮೆಸೇಜ್ ಅವರ ಮೊಬೈಲ್ಗೆ ಸ್ವೀಕೃತವಾಗಿರುವುದರಿಂದ ಅರ್ಜಿ ಪೂರ್ಣಗೊಳಿಸಿರುವುದಿಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕ ಕೆ.ಹೆಚ್.ವಿಜಯ್ಕುಮಾರ್ ಅವರು ತಿಳಿಸಿದ್ದಾರೆ. ಸರ್ಕಾರದ ಆದೇಶದನ್ವಯ ಅರ್ಜಿ ಸಲ್ಲಿಸುವ 4 ಹಂತಗಳನ್ನು ಪೂರ್ಣಗೊಳಿಸದೆ ಅಪೂರ್ಣ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಡಿ.26 ರಿಂದ ಜ.05 ರವರೆಗೆ ಅರ್ಜಿಗಳನ್ನು ಪೂರ್ಣಗೊಳಿಸಲು ವೆಬ್ಸೈಟ್ ವಿಳಾಸ : https://karnemakaone.kar.nic.in/adcd/ ಮೂಲಕ ಅವಕಾಶ ನೀಡಿ ಅದೇಶಿಸಲಾಗಿದೆ. ಅಭ್ಯರ್ಥಿಗಳು ಮೊದಲನೇ ಹಂತ ಆನ್ಲೈನ್ ನಲ್ಲಿ ಅರ್ಜಿ ನಮೂನೆಯಲ್ಲಿ ಮಾಹಿತಿ…
ನವದೆಹಲಿ: ಜಮ್ಮು-ಕಾಶ್ಮೀರದಲ್ಲಿ ಸೇನಾ ವಾಹನವೊಂದು 160 ಅಡಿ ಆಳದ ಕಂದಕಕ್ಕೆ ಉರುಳಿ ಬಿದ್ದ ಪರಿಣಾಮ, ಹಲವರು ಯೋಧರು ಗಾಯಗೊಂಡಿದ್ದರು. ಇವರಲ್ಲಿ ಐವರು ಯೋಧರು ಹುತಾತ್ಮರಾಗಿರುವುದಾಗಿ ತಿಳಿದು ಬಂದಿದೆ. ಜಮ್ಮು ಮತ್ತು ಕಾಶ್ಮೀರದ ಮೆಂಧಾರ್ನ ನಿಯಂತ್ರಣ ರೇಖೆ (ಎಲ್ಒಸಿ) ಬಳಿ ಮಂಗಳವಾರ ಸಂಜೆ ಯೋಧರನ್ನು ಕರೆದೊಯ್ಯುತ್ತಿದ್ದ ಸೇನಾ ವಾಹನವು ಕಮರಿಗೆ ಬಿದ್ದಿದೆ. ಅನೇಕ ಜವಾನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಲ್ಲಿಯವರೆಗೆ ನಾಲ್ಕು ಶವಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಮೂಲಗಳು ತಿಳಿಸಿವೆ. ಜಮ್ಮು ಮತ್ತು ಕಾಶ್ಮೀರದ ಪೂಂಚ್ ಸೆಕ್ಟರ್ನಲ್ಲಿ ಸೇನಾ ವಾಹನವೊಂದು ಅಪಘಾತಕ್ಕೀಡಾಗಿ ಐವರು ಯೋಧರು ಹುತಾತ್ಮರಾಗಿದ್ದಾರೆ. ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ, ಮತ್ತು ಗಾಯಗೊಂಡ ಸಿಬ್ಬಂದಿ ವೈದ್ಯಕೀಯ ಆರೈಕೆ ಪಡೆಯುತ್ತಿದ್ದಾರೆ ಎಂದು ವೈಟ್ ನೈಟ್ ಕಾರ್ಪ್ಸ್ ತಿಳಿಸಿದೆ. https://twitter.com/ANI/status/1871558003285209529 https://kannadanewsnow.com/kannada/for-new-account-holders-rs-rewards-worth-rs-5000-jio-payments-bank/ https://kannadanewsnow.com/kannada/december-26-to-be-observed-as-gram-panchayat-data-operators-day-every-year-priyank-kharge/
ಮುಂಬೈ : ಜಿಯೋ ಪೇಮೆಂಟ್ಸ್ ಬ್ಯಾಂಕ್ ನಿಂದ ಹಬ್ಬದ ವಿಶೇಷ ಕೊಡುಗೆಯನ್ನು ಘೋಷಿಸಲಾಗಿದೆ, ಡಿಸೆಂಬರ್ 25ರಿಂದ ಮತ್ತು ಡಿಸೆಂಬರ್ 31ನೇ ತಾರೀಕಿನ ಮಧ್ಯೆ ಹೊಸದಾಗಿ ಉಳಿತಾಯ ಖಾತೆಯನ್ನು ತೆರೆಯುವ ಗ್ರಾಹಕರಿಗೆ ರೂ. 5,000 ಮೌಲ್ಯದ ರಿವಾರ್ಡ್ಸ್ ನೀಡಲಿದೆ. ಈ ರಿವಾರ್ಡ್ಸ್ ನಲ್ಲಿ ಮೆಕ್ ಡೊನಾಲ್ಡ್ಸ್ (McDonald’s), ಈಸ್ ಮೈಟ್ರಿಪ್ (EaseMyTrip) ಮತ್ತು ಮ್ಯಾಕ್ಸ್ ಫ್ಯಾಷನ್ (Max Fashion)ನಂತಹ ಜನಪ್ರಿಯ ಬ್ರ್ಯಾಂಡ್ಗಳ ಕೂಪನ್ಗಳು ಸೇರಿವೆ. ಬ್ಯಾಂಕ್ ತನ್ನ ಡಿಜಿಟಲ್-ಫಸ್ಟ್ ವಿಧಾನಕ್ಕೆ ಖ್ಯಾತಿ ಪಡೆದಿದ್ದು, ಐದು ನಿಮಿಷಗಳಲ್ಲಿ ಗ್ರಾಹಕರಿಗೆ ಉಳಿತಾಯ ಖಾತೆಯನ್ನು ತೆರೆಯುತ್ತದೆ. ಜಿಯೋ ಪೇಮೆಂಟ್ಸ್ ಬ್ಯಾಂಕ್ನ ಪ್ರಮುಖ ವೈಶಿಷ್ಟ್ಯಗಳಲ್ಲಿ ಬಯೋಮೆಟ್ರಿಕ್ ಆಧಾರಿತ ದೃಢೀಕರಣ, ವರ್ಚುವಲ್ ಮತ್ತು ಭೌತಿಕ ರುಪೇ ಪ್ಲಾಟಿನಂ ಡೆಬಿಟ್ ಕಾರ್ಡ್ಗಳು ಮತ್ತು ತಡೆರಹಿತ ಬ್ಯಾಂಕಿಂಗ್ ಅನುಭವ ಒಳಗೊಂಡಿವೆ. ಈ ಹಬ್ಬದ ಋತುವಿನಲ್ಲಿ, ಜಿಯೋ ಪೇಮೆಂಟ್ಸ್ ಬ್ಯಾಂಕ್ ತನ್ನ ಅತ್ಯಾಕರ್ಷಕ ರಿವಾರ್ಡ್ಸ್ ಮೂಲಕ ಹೊಸ ಗ್ರಾಹಕರನ್ನು ಆಕರ್ಷಿಸುವ ಗುರಿಯನ್ನು ಹೊಂದಿದೆ. https://kannadanewsnow.com/kannada/fire-breaks-out-at-eiffel-tower-in-paris-1200-tourists-evacuated/ https://kannadanewsnow.com/kannada/december-26-to-be-observed-as-gram-panchayat-data-operators-day-every-year-priyank-kharge/
ಪ್ಯಾರಿಸ್: ಕ್ರಿಸ್ಮಸ್ ಮುನ್ನಾದಿನದಂದು ಪ್ಯಾರಿಸ್ನ ಐಫೆಲ್ ಟವರ್ನ ಮೊದಲ ಮತ್ತು ಎರಡನೇ ಮಹಡಿಗಳ ನಡುವೆ ಬೆಂಕಿ ಕಾಣಿಸಿಕೊಂಡ ನಂತರ ಅದನ್ನು ಸ್ಥಳಾಂತರಿಸಲಾಗಿದೆ ಎಂದು ಮಾಧ್ಯಮ ವರದಿಗಳು ತಿಳಿಸಿವೆ. ಅಗ್ನಿಶಾಮಕ ದಳದವರು ಪರಿಸ್ಥಿತಿಗೆ ಸ್ಪಂದಿಸಿದ್ದರಿಂದ ಸುಮಾರು 1,200 ಪ್ರವಾಸಿಗರನ್ನು ಐಫೆಲ್ ಟವರ್ ನಿಂದ ಸುರಕ್ಷಿತವಾಗಿ ಸ್ಥಳಾಂತರಿಸಲಾಗಿದೆ. ಏತನ್ಮಧ್ಯೆ, ಬೆಂಕಿಯನ್ನು ನಿಯಂತ್ರಿಸಲು ಮತ್ತು ಸಾರ್ವಜನಿಕ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತುರ್ತು ಸೇವೆಗಳನ್ನು ತ್ವರಿತವಾಗಿ ನಿಯೋಜಿಸಲಾಯಿತು. ವಿಶೇಷವೆಂದರೆ, ಐಫೆಲ್ ಟವರ್ ಪ್ಯಾರಿಸ್ನ ಅತ್ಯಂತ ಅಪ್ರತಿಮ ಹೆಗ್ಗುರುತುಗಳಲ್ಲಿ ಒಂದಾಗಿದೆ ಮತ್ತು ಪ್ರವಾಸಿಗರಿಗೆ ವಿಶ್ವದ ಅತ್ಯಂತ ಜನಪ್ರಿಯ ಪ್ರವಾಸಿ ತಾಣಗಳಲ್ಲಿ ಒಂದಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/army-vehicle-falls-into-gorge-near-poonch-several-jawans-injured/ https://kannadanewsnow.com/kannada/december-26-to-be-observed-as-gram-panchayat-data-operators-day-every-year-priyank-kharge/
ಶ್ರೀನಗರ: 18 ಕ್ಕೂ ಹೆಚ್ಚು ಸೈನಿಕರನ್ನು ಹೊತ್ತ ಸೇನಾ ವಾಹನವು 150 ಅಡಿ ಆಳದ ಕಮರಿಗೆ ಬಿದ್ದಿದೆ. ವಾಹನವು ಪೂಂಚ್ ಜಿಲ್ಲೆಯ ಬಲ್ನೋಯ್ನ ಫಾರ್ವರ್ಡ್ ಪ್ರದೇಶದಲ್ಲಿದ್ದಾಗ ಈ ಘಟನೆ ನಡೆದಿದೆ. ವರದಿಗಳ ಪ್ರಕಾರ, ಅನೇಕ ಸೈನಿಕರು ಗಾಯಗೊಂಡಿದ್ದಾರೆ. ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ. ಈ ಬಗ್ಗೆ ಇನ್ನೂ ಹೆಚ್ಚಿನ ಮಾಹಿತಿಯನ್ನು ನಿರೀಕ್ಷಿಸಲಾಗಿದೆ. https://kannadanewsnow.com/kannada/opposition-leader-r-ashoka-urges-governor-to-grant-protection-to-ct-ravi-demands-judicial-probe/ https://kannadanewsnow.com/kannada/december-26-to-be-observed-as-gram-panchayat-data-operators-day-every-year-priyank-kharge/
ಬೆಂಗಳೂರು: ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರಿಗೆ ರಕ್ಷಣೆ ನೀಡುವಂತೆ ಕೋರಿ ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರಿಗೆ ಮನವಿ ಸಲ್ಲಿಸಲಾಗಿದೆ. ಈ ಪ್ರಕರಣವನ್ನು ನ್ಯಾಯಾಂಗ ತನಿಖೆಗೆ ನೀಡಬೇಕೆಂಬುದು ನಮ್ಮ ಆಗ್ರಹ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ರಾಜ್ಯಪಾಲರ ಭೇಟಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯಪಾಲರಾದ ಥಾವರ್ಚಂದ್ ಗೆಹ್ಲೋಟ್ ಅವರನ್ನು ಭೇಟಿ ಮಾಡಿ ಶಾಸಕ ಸಿ.ಟಿ.ರವಿ ಅವರಿಗೆ ಮಾಡಿದ ಅಪಮಾನದ ಬಗ್ಗೆ ತಿಳಿಸಲಾಗಿದೆ. ಸಿ.ಟಿ.ರವಿ ಅವರಿಗೆ ಮುಸ್ಲಿಂ ಉಗ್ರವಾದಿ ಹಾಗೂ ನಕ್ಸಲರಿಂದ ಬೆದರಿಕೆ ಇದೆ. ಹೀಗಿದ್ದರೂ ಅವರನ್ನು ಕಬ್ಬಿನ ಗದ್ದೆಗೆ ಕರೆದುಕೊಂಡು ಹೋಗಿರುವುದು ಅನುಮಾನ ತಂದಿದೆ. ಒಬ್ಬ ಪೊಲೀಸ್ ಅಧಿಕಾರಿ ಸುರಕ್ಷತೆ ದೃಷ್ಟಿಯಿಂದ ಅವರನ್ನು ಗದ್ದೆಗೆ ಕರೆದೊಯ್ಯಲಾಗಿದೆ ಎಂದು ಹೇಳಿದ್ದಾರೆ. ಅಂದರೆ ಪೊಲೀಸ್ ಠಾಣೆ ಸುರಕ್ಷಿತವಲ್ಲ ಎಂದರ್ಥ. ಪೊಲೀಸ್ ಠಾಣೆ ಸುರಕ್ಷಿತವಲ್ಲ ಎಂದು ಈ ಸರ್ಕಾರ ಜನರಿಗೆ ತಿಳಿಸಿದೆ ಎಂದರು. ಸಿ.ಟಿ.ರವಿ ಅವರಿಗೆ ಹೀಗಾದರೆ ಇನ್ನು ಸಾರ್ವಜನಿಕರ ಪಾಡೇನು ಎಂಬ ಪ್ರಶ್ನೆ ಮೂಡುತ್ತದೆ. ಇದು ರಾಜ್ಯ ಸರ್ಕಾರಕ್ಕೆ ಒಂದು ಕಪ್ಪು ಚುಕ್ಕೆಯಾಗಿದೆ. ಅದಕ್ಕಾಗಿ…