Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬೈಕಿನಲ್ಲಿ ತೆರಳುತ್ತಿದ್ದಂತ ಅಕ್ಷಯ್ ಮೇಲೆ ಮರದ ಕೊಂಬೆ ಬಿದ್ದು ತಲೆಗೆ ಗಂಭೀರ ಪೆಟ್ಟಾಗಿತ್ತು. ಕೋಮಾಕ್ಕೆ ಜಾರಿದ್ದಂತ ಅವರಿಗೆ ಚಿಕಿತ್ಸೆ ಫಲಕಾರಿಯಾಗಲೇ ಮೃತಪಟ್ಟಿದ್ದರು. ಇಂತಹ ಅಕ್ಷಯ್ ಸಾವಿನಲ್ಲೂ ಕುಟುಂಬಸ್ಥರು ಆತನ ಕಣ್ಣು ದಾನಕ್ಕೆ ತೀರ್ಮಾನಿಸಿದ್ದಾರೆ. ಗಾಳಿ ಮಳೆಯಿಂದ ಬೆಂಗಳೂರಿನ ಬನಶಂಕರಿ 2ನೇ ಹಂತದ ಶ್ರೀನಿವಾಸ ನಗರದಲ್ಲಿ ಮರದ ಕೊಂಬೆ ಬೈಕ್ ಸವಾರನ ಮೇಲೆ ಮುರಿದು ಬಿದ್ದ ಪರಿಣಾಮ ಅಕ್ಷಯ್ ತಲೆಗೆ ಗಂಭೀರವಾದ ಗಾಯವಾಗಿದ್ದು, ಅಪೋಲೋ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ. ಆದರೆ ಇಂದು ಹೃದಯಸ್ಥಂಬನದಿಂದ ಅಕ್ಷಯ್ ಸಾವನಪ್ಪಿದ್ದಾರೆ. ಹೌದು ಸಾವು ಬದುಕಿನ ನಡುವೆ ಹೋರಾಡುತ್ತಿರುವ ಬೈಕ್ ಸವಾರ ಅಕ್ಷಯ್ ಸದ್ಯ ಬೆಂಗಳೂರಿನ ಜಯನಗರದ ಅಪೋಲೋ ಆಸ್ಪತ್ರೆಯಲ್ಲಿ ದಾಖಲಲಾಗಿದ್ದು, ತಲೆಗೆ ಶಸ್ತ್ರ ಸಹ ಮಾಡಲಾಗಿದೆ. ಆದ್ರೆ, ಅಕ್ಷಯ್ ಬ್ರೈನ್ ಡೆಡ್ ಆಗಿದೆ ಎನ್ನುವ ಮಾಹಿತಿ ತಿಳಿದುಬಂದಿದ್ದು, ದೇವರ ಮೇಲೆ ಭಾರ ಹಾಕಿ ಎಂದು ವೈದ್ಯರು ಹೇಳಿದ್ದರು. ಹೀಗಾಗಿ ನಿನ್ನೆ ಅಕ್ಷಯ್ ಅವರ ತಾತ ಅಜ್ಜಿ ಮೊಮ್ಮಗ ಉಳಿಯಲಿ, ಆಯಸ್ಸು ಗಟ್ಟಿಯಾಗಲಿ ಕಣ್ಣು ಬಿಟ್ಟು ನಮ್ಮನ್ನ…
BREAKING: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್
ಬೆಂಗಳೂರು: ಕೇತಗಾನಹಳ್ಳಿ ಭೂ ಒತ್ತುವರಿ ಪ್ರಕರಣದಲ್ಲಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅವರ ವಿರುದ್ಧದ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಕುರಿತಂತೆ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ವಿಚಾರಣೆ ನಡೆಯಿತು. ಎಸ್ ಐಟಿ ರಚನೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಅರ್ಜಿಯನ್ನು ನ್ಯಾಯಪೀಠವು ವಿಚಾರಣೆ ನಡೆಸಿತು. ಕುಮಾರಸ್ವಾಮಿ ಪರವಾಗಿ ವಕೀಲ ಉದಯ್ ಹೊಳ್ಳ ಅವರು ವಾದಿಸಿದರು. ರಾಜ್ಯ ಸರ್ಕಾರ ಎಸ್ ಐ ಟಿ ರಚನೆ ಸಂದರ್ಭದಲ್ಲಿ ಔಪಚಾರಿಕವಾಗಿ ಯಾವುದೇ ತೆರವಾದಂತ ಅಧಿಸೂಚನೆ ಪ್ರಕಟಿಸಿಲ್ಲ ಎಂಬುದಾಗಿ ನ್ಯಾಯಪೀಠದ ಗಮನಕ್ಕೆ ತಂದರು. ವಾದ ಪ್ರತಿವಾದವನ್ನು ಆಲಿಸಿದಂತ ಹೈಕೋರ್ಟ್ ಕೇತಗಾನಹಳ್ಳಿ ಭೂ ಒತ್ತಿವರಿ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಅಲ್ಲದೇ ಎಸ್ಐಟಿ ರಚನೆಯ ಬಳಿಕ ಕುಮಾರಸ್ವಾಮಿ ನೀಡಿದ್ದಂತ ಸಮನ್ಸ್ ಅನ್ನು ತಡೆ ಹಿಡಿದಿದೆ. ಜೊತೆಗೆ ರಾಮನಗರ ಡಿಸಿ, ತಹಶೀಲ್ದಾರರಿಗೆ ನೋಟಿಸ್ ಜಾರಿ ಮಾಡಿ, ವಿಚಾರಣೆ ಮುಂದೂಡಿದೆ. https://kannadanewsnow.com/kannada/there-will-be-no-current-in-these-areas-of-bangalore-on-june-21/ https://kannadanewsnow.com/kannada/breaking-the-state-government-has-moved-to-increase-the-reservation-for-muslims-in-the-housing-scheme-by-15/ https://kannadanewsnow.com/kannada/breaking-grihalakshmi-money-released-for-the-month-of-may-minister-lakshmi-hebbalkar-gives-important-information/
ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 220/66/11 ಕೆವಿ ಎಸ್ ಆರ್ ಎಸ್ ಪೀಣ್ಯ ಮತ್ತು 66/11 ಸೊಲ್ಲದೇವನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 21.06.2025 (ಶನಿವಾರ) ರಂದು ಬೆಳಗ್ಗೆ 10:00 ಯಿಂದ ಸಂಜೆ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಜೂನ್.21ರಂದು ಈ ಕೆಳಕಂಡ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. HMT ರಸ್ತೆ, RNS ಅಪಾರ್ಟ್ ಮೆಂಟ್, CMTI, ಬೋರ್ಲಿಂಗಪ್ಪ ಗಾರ್ಡನ್, ಪೀಣ್ಯ ಪೊಲೀಸ್ ಠಾಣೆ ರಸ್ತೆ, ಟೆಲಿಫೋನ್ ಎಕ್ಸ್ ಚೆಂಜ್, 6ನೇ ಕ್ರಾಸ್, ರಿಲಯನ್ಸ್ ಕಮ್ಯೂನಿಕೇಶನ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮೂಂಡಿಪುರ, ಮುನೇಶ್ವರ ದೇವಸ್ಥಾನ ರಸ್ತೆ, MEC ಲೇಔಟ್, ಮಲಯಾಳ ಅತಿಥಿ ಗೃಹ ರಸ್ತೆ, KHB ಲೇಔಟ್, ರಾಜರಾಜೇಶ್ವರಿನಗರ, ಆಕಾಶ್ ಥೀಟರ್ ರಸ್ತೆ, ಫ್ರಂಡ್ಸ್ ಸರ್ಕಲ್, ವಿಜ್ಞಾನ ಪಬ್ಲಿಕ್ ಸ್ಕೂಲ್ ರಸ್ತೆ, ಬೀಮೇಶ್ವರ ನಗರ, ಬ್ಯಾಂಕ್ ಕಾಲೋನಿ, 6ನೇ ಮುಖ್ಯ ರಸ್ತೆ, ವಿಭಾಗ ರಸ್ತೆ, 5ನೇ ಮುಖ್ಯ…
ಬೆಂಗಳೂರು: “ವಸತಿ ಇಲಾಖೆಯಿಂದ ನಗರ ಪ್ರದೇಶಗಳಲ್ಲಿ ನಿರ್ಮಿಸಲಾಗಿರುವ ವಸತಿಗಳು ಹೆಚ್ಚಾಗಿ ಖಾಲಿ ಇದ್ದು, ಅಲ್ಪಸಂಖ್ಯಾತರು ಈ ಮನೆಗಳಿಗೆ ಹೋಗಲು ಮುಂದಾಗಿದ್ದಾರೆ. ಹೀಗಾಗಿ ಅವರಿಗೆ ನೀಡಲಾಗಿದ್ದ ವಸತಿ ಹಂಚಿಕೆ ಮೀಸಲಾತಿಯನ್ನು ಶೇ. 10 ರಿಂದ 15 ಕ್ಕೆ ಏರಿಕೆ ಮಾಡುತ್ತಿದ್ದೇವೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ವಿಧಾನಸೌಧದ ಆವರಣದಲ್ಲಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಗುರುವಾರ ಪ್ರತಿಕ್ರಿಯೆ ನೀಡಿದರು. ಕೆಲವು ನಗರ ಪ್ರದೇಶಗಳಲ್ಲಿ ಅಲ್ಪಸಂಖ್ಯಾತ ಸಮುದಾಯದ ಶೇ. 20-30 ರಷ್ಟು ಬಡವರು ಇದ್ದಾರೆ. ಹೀಗಾಗಿ ಅವರಿಗೆ ಮೀಸಲಾತಿ ಹೆಚ್ಚಳ ಮಾಡಲು ಪ್ರಸ್ತಾವನೆ ಬಂದಿದೆ. ಈ ಮನೆಗಳಿಗೆ ಹಣ ಪಾವತಿ ಮಾಡಬೇಕು. ಇತರರು ಇದಕ್ಕೆ ಹೆಚ್ಚಿನ ಆಸಕ್ತಿ ತೋರಿಲ್ಲ. ಬೆಂಗಳೂರಿನಲ್ಲೂ ಅನೇಕ ವಸತಿ ಕಟ್ಟಡಗಳಲ್ಲಿ ಮನೆಗಳು ಖಾಲಿ ಇವೆ. ಮನೆಗಳ ನಿರ್ಮಾಣಕ್ಕೆ ಕೇಂದ್ರ ಸರ್ಕಾರದ ಸಹಾಯಧನ ತೀರಾ ಕಡಿಮೆ ಇದೆ. ಈ ಮನೆಗಳನ್ನು ಕಟ್ಟಿದ ನಂತರ ಖಾಲಿ ಬಿದ್ದಿವೆ. ಇವುಗಳನ್ನು ಯಾರಿಗೆ ನೀಡಬೇಕು? ಎಂದು ಪ್ರಶ್ನಿಸಿದರು. ಮಂಡ್ಯದಲ್ಲಿಯೂ ಕಟ್ಟಡಗಳನ್ನು ನಿರ್ಮಿಸಲಾಗಿದೆ. ಆದರೆ ಅಲ್ಲಿಗೆ ಯಾರು…
ಬೆಂಗಳೂರು: ಗಣಿಗಾರಿಕೆಯಲ್ಲಿ ನಡೆದ ಅಕ್ರಮದ ತನಿಖೆಗೆ ಸೃಜಿಸಲಾಗಿರುವ ತನಿಖಾ ಸಮಿತಿಯ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ವಿವರವಾದ ತಾಂತ್ರಿಕ ಮಾಹಿತಿ ಕಲೆ ಹಾಕಲು ಅವಕಾಶ ಆಗುವ ಹಿನ್ನೆಲೆಯಲ್ಲಿ ಒಂದು ವರ್ಷದ ಅವಧಿಗೆ ವಿಸ್ತರಣೆ ಆಗಿದೆ. ಅಪ್ಸರಕೊಂಡ ಕಡಲ ಜೀವಧಾಮ ಘೋಷಣೆ ಮಾಡಲಾಗುತ್ತಿದೆ. ಹೊನ್ನಾವರದ ಸಮುದ್ರ ಪ್ರದೇಶದ ಆರು ಕಿ ಮೀ ದೂರದ ಪ್ರದೇಶವನ್ನ ವನ್ಯಧಾನಮವಾಗಿ ಘೋಷಣೆ ಮಾಡಲಾಗಿದೆ ಎಂಬುದಾಗಿ ಕಾನೂನು ಸಚಿವ ಹೆಚ್.ಕೆ ಪಾಟೀಲ್ ತಿಳಿಸಿದ್ದಾರೆ. ಇಂದು ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆರೋಗ್ಯ ಇಲಾಖೆಯ ಮೂರು ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷದ ವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಲಾಗುತ್ತಿದೆ. ಮಾಸಿಕ ಕಂತುಗಳಲ್ಲಿ ಯೋಜನೆಗೆ ಸಿಬ್ಬಂದಿಗಳಿಂದ 100 ರೂ ಸಂಗ್ರಹಕ್ಕೆ ತೀರ್ಮಾನಿಸಲಾಗಿದೆ. ಈ ಸೌಲಭ್ಯವು ಖಾಯಂ ಹಾಗೂ ಗುತ್ತಿಗೆ ನೌಕರರಿಗೂ ಸಿಗಲಿದೆ ಎಂದರು. ಹಾವೇರಿಯ ಬಸಾಪುರವನ್ನ ಗೇಲುಗುಡ್ಡ ಬಸಾಪುರ ಎಂದು ಮರು ನಾಮಕರಣ ಮಾಡಲು ಕಂದಾಯ ಇಲಾಖೆ ನಿರ್ಧಾರಿಸಿದೆ. ಅನುಭವ ಮಂಟಪ ಕಾಮಗಾರಿ ಹಣ…
ಬೆಂಗಳೂರು: ಅಫೇಸಿಯಾ ಜಾಗೃತಿ ಮಾಸದ ಅಂಗವಾಗಿ, ಸಂವಾದ್ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಅಂಡ್ ಹಿಯರಿಂಗ್, ಜೂನ್ 20, 2025 ರಂದು ಬೆಳಿಗ್ಗೆ 11:00ರಿಂದ ಮಧ್ಯಾಹ್ನ 12:00ರವರೆಗೆ ‘ಅಫೇಸಿಯಾ ಮೂಲಕ ಆರೈಕೆದಾರರ ಪ್ರಯಾಣದಲ್ಲಿ ಸಬಲೀಕರಣಗೊಳಿಸುವುದು’ ಎಂಬ ಉಚಿತ ವೆಬಿನಾರ್ನ್ನು ಆಯೋಜಿಸಿದೆ. ಅಫೇಸಿಯಾ ಎಂಬುದು ಮೆದುಳಿಗೆ ಸಂಭವಿಸುವ ಹಾನಿಯಿಂದ ಉಂಟಾಗುವ ಭಾಷಾ ಸಂಬಂಧಿತ ಅಸ್ವಸ್ಥತೆ. ಸಾಮಾನ್ಯವಾಗಿ ಪಾರ್ಶ್ವವಾಯು ಅಥವಾ ತೀವ್ರ ತಲೆ ಗಾಯದ ನಂತರ ಇದು ಉಂಟಾಗುತ್ತದೆ. ಇದರಿಂದ ವ್ಯಕ್ತಿಯ ಮಾತಾಡುವ, ಕೇಳುವ, ಓದುವ ಮತ್ತು ಬರೆಯುವ ಸಾಮರ್ಥ್ಯದಲ್ಲಿ ಅಡಚಣೆ ಉಂಟಾಗಬಹುದು — ಆದರೆ ಅವರ ಬುದ್ಧಿವಂತಿಕೆ ಹಾಗೆ ಉಳಿದಿರುತ್ತದೆ. ಈ ಸ್ಥಿತಿ, ರೋಗಿಯನ್ನು ಮಾತ್ರವಲ್ಲದೆ ಅವರ ಆರೈಕೆದಾರರ ಜೀವನದಲ್ಲಿಯೂ ಭಾರೀ ಭಾವನಾತ್ಮಕ ಹಾಗೂ ಕಾರ್ಯಚಟುವಟಿಕೆಯ ಭಾಗವಾಗಿರುತ್ತದೆ. ಈ ವೆಬಿನಾರ್ನ ಉದ್ದೇಶ ಅಫೇಸಿಯಾ ಬಗ್ಗೆ ಹೆಚ್ಚಿನ ತಿಳಿವು ನೀಡುವುದು, ಉಪಯುಕ್ತ ಆರೈಕೆ ತಂತ್ರಗಳನ್ನು ಪರಿಚಯಿಸುವುದು ಮತ್ತು ನಿಜ ಜೀವನದ ಯಶಸ್ಸಿನ ಕಥೆಗಳನ್ನು ಹಂಚಿಕೊಂಡು ಆರೈಕೆದಾರರು ಹಾಗೂ ಕುಟುಂಬ ಸದಸ್ಯರಿಗೆ ಸಹಾಯಕ ವಾತಾವರಣವನ್ನು ನಿರ್ಮಿಸುವುದು. ಅಫೇಸಿಯಾ…
ದಾವಣಗೆರೆ: ಜಿಲ್ಲೆಯಲ್ಲಿ ಜಿಲ್ಲಾಧಿಕಾರಿಗಳಿಗೆ ಬೈಕ್ ಸವಾರನೊಬ್ಬ ಅವಾಜ್ ಹಾಕಿದಂತ ಘಟನೆ ನಡೆದಿದೆ. ಒನ್ ವೇನಲ್ಲಿ ಬಂದಂತ ಬೈಕ್ ಸವಾರನನ್ನು ಪ್ರಶ್ನಿಸಿದ್ದಕ್ಕೆ ಡಿಸಿಗೆ ಅವಾಜ್ ಹಾಕಿರೋದಾಗಿ ತಿಳಿದು ಬಂದಿದೆ. ಇಂದು ಬೆಳಗ್ಗೆ ಸೈಕಲ್ಲಿನಲ್ಲಿ ದಾವಣಗೆರೆ ಜಿಲ್ಲಾಧಿಕಾರಿ ಗಂಗಾಧರಸ್ವಾಮಿ ಅವರು ತೆರಳುತ್ತಿದ್ದರು. ಈ ಸಂದರ್ಭದಲ್ಲಿ ಬೈಕ್ ಸವಾರನೊಬ್ಬ ಒನ್ ವೇನಲ್ಲಿ ವೇಗವಾಗಿ ಬಂದಿದ್ದನು. ಇದನ್ನು ಡಿಸಿ ಗಂಗಾಧರಸ್ವಾಮಿ ಪ್ರಶ್ನೆ ಮಾಡಿದ್ದರು. ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಗಂಗಾಧರಸ್ವಾಮಿಗೆ ಬೈಕ್ ಸವಾರ ಅವಾಜ್ ಹಾಕಿದ್ದಾನೆ. ತಕ್ಷಣವೇ ಪೊಲೀಸರಿಗೆ ಪೋನ್ ಮಾಡಿ ಜಿಲ್ಲಾಧಿಕಾರಿ ಬೈಕ್ ಸವಾರನ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ಪೊಲೀಸರು ಜಿಲ್ಲಾಧಿಕಾರಿಗಳಿಂದ ಬೈಕ್ ನಂಬರ್ ಪಡೆದು ಇದೀಗ ಕಾನೂನು ಕ್ರಮ ಕೈಗೊಂಡಿರೋದಾಗಿ ಹೇಳಲಾಗುತ್ತಿದೆ. https://kannadanewsnow.com/kannada/on-june-22-a-dance-performance-by-the-supreme-bhagavat-bhadrachala-ramadasu-will-take-place-in-bangalore/ https://kannadanewsnow.com/kannada/breaking-grihalakshmi-money-released-for-the-month-of-may-minister-lakshmi-hebbalkar-gives-important-information/
ಬೆಂಗಳೂರು: 17ನೇ ಶತಮಾನದಲ್ಲಿ ಜನಿಸಿದ ಕನಚರ್ಲ ಗೋಪನ್ನ, ಶ್ರೀರಾಮನ ಪ್ರತಿ ಅವಿರತ ನಿಷ್ಠೆಯಿಂದ ಭದ್ರಾಚಲ ರಾಮದಾಸು ಎಂಬ ಮಹಾನ್ ಸಂತ-ಕವಿಯಾಗಿ ಪರಿವರ್ತನಾದರು. ಗೋಲ್ಕೊಂಡ ಸುಲ್ತಾನರ ಆಳ್ವಿಕೆಯಲ್ಲಿ ಅಂಶದಾರರಾಗಿದ್ದರೂ, ಗೋಪನ್ನನ ದೃಷ್ಟಿ ಕೇವಲ ರಾಜಕಾರ್ಯಗಳಲ್ಲಿ ಸೀಮಿತವಾಗಿರಲಿಲ್ಲ. ತಮ್ಮ ಆಧ್ಯಾತ್ಮಿಕ ನಿಷ್ಠೆಯ ಪರಿಣಾಮವಾಗಿ, ಅವರು ಬಂಧನಕ್ಕೊಳಗಾದರು. ಆದರೆ ಕಾರಾಗೃಹದ ಗೋಡೆಗಳು ಸಹ ಅವರ ಆತ್ಮಶಕ್ತಿಯನ್ನು ತಡೆಯಲಿಲ್ಲ. ಬಂಧನದಲ್ಲಿಯೇ ಅವರು ಶ್ರೀರಾಮನನ್ನು ಉದ್ದೇಶಿಸಿ ನೂರಕ್ಕೂ ಅಧಿಕ ಭಕ್ತಿಮಯ ಕೀರ್ತನೆಗಳನ್ನು ರಚಿಸಿದರು—ಈ ಕೃತಿಗಳು ಶರಣಾಗತಿಯ ಭಾವನೆ, ತೀವ್ರತೆಯ ಭಕ್ತಿ, ಹಾಗೂ ದೈವೀಯ ಪ್ರೀತಿಯಿಂದ ತುಂಬಿವೆ. ಈ ಭಾವಪೂರ್ಣ ಗೀತೆಗಳು ಇಂದಿಗೂ ಕರ್ನಾಟಕ ಸಂಗೀತ ಹಾಗೂ ದೇವಸ್ಥಾನ ಸಂಪ್ರದಾಯಗಳಲ್ಲಿ ಅಮರವಾಗಿ ಉಳಿದಿವೆ. ಪೌರಾಣಿಕ ಕಥೆಯಂತೆ, ಶ್ರೀರಾಮ ಮತ್ತು ಲಕ್ಷ್ಮಣ ಸ್ವತಃ ಸುಲ್ತಾನರ ಮುಂದಿನ ಪ್ರತ್ಯಕ್ಷರಾಗಿ ಗೋಪನ್ನನ ಪರವಾಗಿ ಸಾಲವನ್ನು ತೀರಿಸಿ, ಅವರ ಬಿಡುಗಡೆಗೆ ಕಾರಣರಾದರು. ಇಂತಹ ಅರ್ಥಪೂರ್ಣ ಜೀವನವು ಅವರನ್ನು “ಪರಮ ಭಾಗವತ” ಎಂಬ ವಿಶಿಷ್ಟ ಬಿರುದಿಗೆ ಪಾತ್ರಗೊಳಿಸಿತು. ಈ ಭಕ್ತಿಯ ಶಿಖರ ಸಾಧಕನಿಗೆ ನೃತ್ಯ ನಮನವಾಗಿ, ನಟನಂ ಇನ್ಸ್ಟಿಟ್ಯೂಟ್…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಅಪ್ಸರಕೊಂಡ ಕಡಲ ಜೀವಧಾಮ ಘೋಷಣೆ, ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಉಚಿತ ಆರೋಗ್ಯ ವಿಮಾ ಯೋಜನೆ ಜಾರಿ ಸೇರಿದಂತೆ ಮಹತ್ವದ ನಿರ್ಧಾರಗಳಿಗೆ ಅನುಮೋದನೆ ನೀಡಲಾಯಿತು. ಆ ಸಚಿವ ಸಂಪುಟ ಸಭೆಯ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಂಪುಟ ಸಭೆ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಒಟ್ಟು ಸಂಪುಟ ಸಭೆಯಲ್ಲಿ 26 ವಿಷಯಗಳ ಚರ್ಚೆ ನಡೆದಿದೆ. ಗಣಿಗಾರಿಕೆಯಲ್ಲಿ ನಡೆದ ಅಕ್ರಮದ ತನಿಖೆಗೆ ಸೃಜಿಸಲಾಗಿರುವ ತನಿಖಾ ಸಮಿತಿಯ ಅವಧಿ ವಿಸ್ತರಣೆ ಮಾಡಲಾಗುತ್ತಿದೆ. ವಿವರವಾದ ತಾಂತ್ರಿಕ ಮಾಹಿತಿ ಕಲೆ ಹಾಕಲು ಅವಕಾಶ ಆಗುವ ಹಿನ್ನೆಲೆಯಲ್ಲಿ ಒಂದು ವರ್ಷದ ಅವಧಿಗೆ ವಿಸ್ತರಣೆ ಆಗಿದೆ. ಅಪ್ಸರಕೊಂಡ ಕಡಲ ಜೀವಧಾಮ ಘೋಷಣೆ ಮಾಡಲಾಗುತ್ತಿದೆ. ಹೊನ್ನಾವರದ ಸಮುದ್ರ ಪ್ರದೇಶದ ಆರು ಕಿ ಮೀ ದೂರದ ಪ್ರದೇಶವನ್ನ ವನ್ಯಧಾನಮವಾಗಿ ಘೋಷಣೆ ಮಾಡಲಾಗಿದೆ ಎಂದರು. ಆರೋಗ್ಯ ಇಲಾಖೆಯ ಮೂರು ಲಕ್ಷ…
ಬೆಂಗಳೂರು: ರಾಜ್ಯ ಸರ್ಕಾರವು ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘದ ಬೇಡಿಕೆಗೆ ಅಸ್ತು ಎಂದಿದೆ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರು, ಅವರ ಅವಲಂಬಿತರಿಗೆ ವಿಮಾ ಯೋಜನೆ ಜಾರಿಗೆ ಅನುಮೋದನೆ ನೀಡಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘವು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಗೆ ಪತ್ರದಲ್ಲಿ ಮನವಿ ಮಾಡಿತ್ತು. KSHCOEA-BMS ಸಂಘ ಸಲ್ಲಿಸಿದ್ದಂತ ಮನವಿ ಪತ್ರದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರಿಗೆ ಜೀವ-ಗುಂಪು ವಿಮೆ ಮತ್ತು ಆರೋಗ್ಯ ವಿಮೆ ಯೋಜನೆ ಜಾರಿ ಮಾಡುವಂತೆ ಮನವಿ ಮಾಡಲಾಗಿತ್ತು. ದಿನಾಂಕ 31-01-2024ರಂದು ಸಚಿವ ದಿನೇಶ್ ಗುಂಡೂರಾವ್ ಅಧ್ಯಕ್ಷತೆಯಲ್ಲಿ ನಡೆದಂತ ಸಭೆಯಲ್ಲೂ ಸಂಘವು ಈ ವಿಚಾರವನ್ನು ಪ್ರಸ್ತಾಪಿಸಿತ್ತು. ಅಭಿಯಾನ ನಿರ್ದೇಶಕರು ಈಗಾಗಲೇ ಬ್ಯಾಂಕಿನವರು ಪ್ರಸ್ತಾವನೆಯನ್ನು ಸಲ್ಲಿಸಿದ್ದು ಪರಿಶೀಲಿಸಲಾಗುತ್ತಿದೆ ಎಂಬುದಾಗಿ ಅಂದು ತಿಳಿಸಿದ್ದರು.…












