Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ಶಿವಮೊಗ್ಗದಲ್ಲಿ ಕಾರ್ಮಿಕ ಇಲಾಖೆಯ ಕಟ್ಟಡವೊಂದರ ಗೋಡೆ ಕುಸಿತಗೊಂಡು ವ್ಯಕ್ತಿಯೊಬ್ಬರು ಸಾವನ್ನಪ್ಪಿದ್ದಾರೆ ಎಂಬುದಾಗಿ ಕನ್ನಡ ನ್ಯೂಸ್ ನೌನಲ್ಲಿ ಸುದ್ದಿ ಪ್ರಕಟಗೊಂಡಿತ್ತು. ಆದರೇ ಶಿವಮೊಗ್ಗ ಜಿಲ್ಲೆಯ ಸಿದ್ಲೀಪುರದಲ್ಲಿ ಕಾರ್ಮಿಕ ಇಲಾಖೆಯ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಶ್ರಮಿಕ ವಸತಿ ಸಮುಚ್ಛಯವಿರುವುದು ಸರಿಯಷ್ಟೇ. ಆದರೇ ಶ್ರಮಿಕ ವಸತಿ ಸಮುಚ್ಛಯದ ಯಾವುದೇ ಗೋಡೆ ಕುಸಿದಿರುವುದಿಲ್ಲ. ಪ್ರಸ್ತುತ ಮಂಡಳಿಯಿಂದ ಸದರಿ ಸ್ಥಳದಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿರುವುದಿಲ್ಲ ಎಂಬುದಾಗಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯು ಸ್ಪಷ್ಟ ಪಡಿಸಿದೆ. ಈ ಕುರಿತಂತೆ ಕನ್ನಡ ನ್ಯೂಸ್ ನೌಗೆ ಪತ್ರ ಬರೆದಿರುವಂತ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕ ಕಲ್ಯಾಣ ಮಂಡಳಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಾರ್ಯದರ್ಶಿಗಳು ಶ್ರಮಿಕ ವಸತಿ ಸಮುಚ್ಛಯದ ಕಾಮಗಾರಿ ನಡೆಯುತ್ತಿದ್ದ ಸಂದರ್ಭದಲ್ಲಿ ಕಟ್ಟಡ ನಿರ್ಮಾಣದ ಗುತ್ತಿಗೆದಾರರು ತಾತ್ಕಾಲಿಕ ಶೆಡ್ ಗಳನ್ನು ನಿರ್ಮಿಸಿದ್ದು, ಸದರಿ ಸಮುಚ್ಛಯದ ಕಾಮಗಾರಿ ಸಂಪೂರ್ಣಗೊಂಡ ಹಿನ್ನಲೆಯಲ್ಲಿ ಗುತ್ತಿಗೆದಾರರು ತಾತ್ಕಾಲಿಕ ಶೆಡ್ ಗಳನ್ನು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ 2024-25ನೇ ಸಾಲಿನ ಶಿಕ್ಷಕರ ವರ್ಗಾವಣೆಗೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಮೂಲಕ ಶಿಕ್ಷಕರ ವರ್ಗಾವಣೆಗೆ ಚಾಲನೆ ನೀಡಿದಂತೆ ಆಗಿದೆ. ಈ ಕುರಿತು ಶಾಲಾ ಶಿಕ್ಷಣ ಇಲಾಖೆಯ ಆಯುಕ್ತರು ಪರಿಷ್ಕೃತ ವರ್ಗಾವಣೆ ವೇಳಾಪಟ್ಟಿಯನ್ನು ಪ್ರಕಟಿಸಿದ್ದಾರೆ. ಅದರಲ್ಲಿ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ :04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣ ನಿಯಮ-2020ರ ನಿಯಮ-6 ರಲ್ಲಿ ನಿಗದಿಪಡಿಸಿರುವಂತೆ…

Read More

ಶಿವಮೊಗ್ಗ: ಬಹುತೇಕರು ಯೂಟ್ಯೂಬ್ ನಲ್ಲಿ ತರಾವರಿ ವೀಡಿಯೋ ನೋಡುತ್ತಾರೆ. ಈ ವೀಡಿಯೋಗಳ ಜೊತೆಗೆ ಜಾಹೀರಾತು ಕೂಡ ಪ್ರಸಾರ ಮಾಡಲಾಗುತ್ತದೆ. ಹೀಗೊಂದು ಯೂಟ್ಯೂಬ್ ನಲ್ಲಿ ಜಾಹೀರಾತು ಕಂಡು ಹೆಚ್ಚಿನ ಲಾಭಾಂಶದ ಆಮಿಷಕ್ಕೆ ಒಳಗಾದಂತ ಮಹಿಳೆಯೊಬ್ಬರು ಬರೋಬ್ಬರಿ 49 ಲಕ್ಷ ಕಳೆದುಕೊಂಡಿದ್ದಾರೆ. ಅದು ಎಲ್ಲಿ ಅಂತ ಮುಂದೆ ಓದಿ. ಶಿವಮೊಗ್ಗ ಜಿಲ್ಲೆಯ ಹೊಸನಗರದ ಮಹಿಳೆಯೊಬ್ಬರು ಯೂಟ್ಯೂಬ್ ವೀಕ್ಷಿಸುವಂತ ಸಂದರ್ಭದಲ್ಲಿ ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡಿದ್ರೆ ಹೆಚ್ಚು ಲಾಭಾಂಶ ಸಿಗಲಿದೆ ಎನ್ನುವಂತ ಜಾಹೀರಾತು ಗಮನಿಸಿದ್ದಾರೆ. ಅದರಲ್ಲಿ ನೀಡಿದಂತ ವಾಟ್ಸ್ ಆಪ್ ಗುಂಪು ಸೇರುವಂತ ಗ್ರೂಪಿಗೂ ಆಕರ್ಷಿತಳಾಗಿ ಸೇರಿದ್ದಾರೆ. ಮಹಿಳೆ ಸೇರಿದಂತ ವಾಟ್ಸ್ ಆಪ್ ಗ್ರೂಪಿನಲ್ಲಿ ಮತ್ತೊಂದು ಆಪ್ ಡೌನ್ ಲೋಡ್ ಮಾಡುವಂತೆ ತಿಳಿಸಲಾಗಿದೆ. ಅದರಂತೆ ಅದನ್ನು ಡೌನ್ ಲೋಡ್ ಮಾಡಿಕೊಂಡ ಬಳಿಕ, ತಮ್ಮ ಕಂಪನಿಯ ವ್ಯವಸ್ಥಾಪಕರು ಎಂಬುದಾಗಿ ವ್ಯಕ್ತಿಯೊಬ್ಬ ಪರಿಚಯಿಸಿಕೊಂಡಿದ್ದಾರೆ. ಹೂಡಿಕೆ ಮಾಡೋದಕ್ಕೆ ಬ್ಯಾಂಕ್ ಖಾತೆ ಸಂಖ್ಯೆಗಳನ್ನು ಕಳುಹಿಸಿದ್ದಾರೆ. ಅವರು ನೀಡಿದಂತ ಹೂಡಿಕೆ ಮಾಡುವಂತ ಬ್ಯಾಂಕ್ ಖಾತೆಗೆ ಮಹಿಳೆ ತನ್ನ ಪತಿ ಖಾತೆಯಿಂದ ಹಣವನ್ನು ಸಂದಾಯ…

Read More

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಘಟನೆ ಎನ್ನುವಂತೆ ಕುಡಿಯಲು ಹಣ ಕೊಡಲಿಲ್ಲ ಎಂಬುದಾಗಿ ತನ್ನ ಸ್ನೇಹಿತ ಮೇಲೆಯೇ ಸ್ನೇಹಿತ ಲಾಂಗ್ ನಿಂದ ಹಲ್ಲೆ ಮಾಡಿರುವಂತ ಘಟನೆ ನಡೆದಿದೆ. ಬೆಂಗಳೂರಿನ ಅರಸು ಕಾಲೋನಿಯ ಮಾರಮ್ಮ ದೇಗುಲದ ಬಳಿಯಲ್ಲಿ ಈ ಘಟನೆ ನಡೆದಿದೆ. ಡೆಲಿವರಿ ಬಾಯ್ ಮುನಿಯಪ್ಪ ಮೇಲೆ ಗೌತಮ್, ಸೂರ್ಯ ಲಾಂಗ್ ನಿಂದ ಹಲ್ಲೆ ಮಾಡಿದ್ದಾರೆ. ಅಕ್ಟೋಬರ್.21ರಂದು ರಾತ್ರಿ 10 ಗಂಟೆಯ ಸುಮಾರಿಗೆ ಈ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಬೆಂಗಳೂರಿನ ಈಸ್ಟ್ ಎಂಡ್ ಬಾರ್ ಒಂದರಲ್ಲಿ ಮದ್ಯವನ್ನು ಮುನಿಯಪ್ಪ ಸೇವಿಸುತ್ತಿದ್ದರು. ಅಲ್ಲಿಗೆ ಬಂದು ಎಣ್ಣೆ ಕೊಡಿಸು ಎಂಬುದಾಗಿ ಆರೋಪಿಗಳಾದಂತ ಗೌತಮ್, ಸೂರ್ಯ ಕೇಳಿದ್ದಾರೆ. ನನ್ನ ಬಳಿ ಹಣ ಇಲ್ಲ. ನಿನಗೆ ಯಾಕೆ ಎಣ್ಣೆ ಕೊಡಿಸಬೇಕು ಎಂಬುದಾಗಿ ಮುನಿಯಪ್ಪ ತಿಳಿಸಿದ್ದಾರೆ. ಇದೇ ಕಾರಣಕ್ಕೆ ಕೋಪದಲ್ಲಿ ಕಾಲೋನಿ ಮಾರಮ್ಮ ದೇವಸ್ಥಾನದ ಬಳಿಯಲ್ಲಿ ಕಿರಿಕ್ ಮಾಡಲಾಗಿದೆ. ನಾನು ಜೈಲಿನಿಂದ ಹೊರ ಬಂದು 15 ದಿನ ಆಗಿದೆ ಅಷ್ಟೇ. ನನ್ನನ್ನು ಕಂಡ್ರೆ ಭಯ ಇಲ್ವ ಎಂದು…

Read More

ಓಂ ಅಂಜನೇಯಾಯ ವಿದ್ಯಮಹೆ – ಅಂಜನಾದೇವಿಯ ಪುತ್ರನಾದ ಹನುಮಂತನನ್ನು ನಾವು ಧ್ಯಾನಿಸುತ್ತೇವೆ. ವಾಯುಪುತ್ರಾಯ ಧೀಮಹಿ – ವಾಯುದೇವನ ಮಗನಾದ ಹನುಮಂತನಲ್ಲಿ ನಮ್ಮ ಮನಸ್ಸನ್ನು ಕೇಂದ್ರೀಕರಿಸುತ್ತೇವೆ. ತನ್ನೋ ಹನುಮಾನ್ ಪ್ರಚೋದಯಾತ್ – ಆ ಮಹಾ ವೀರ ಹನುಮಂತ ನಮ್ಮ ಬುದ್ಧಿಯನ್ನು, ಶಕ್ತಿ, ಧೈರ್ಯವನ್ನು ಪ್ರೇರೇಪಿಸಲಿ. — ಉಪಯೋಗ ಮತ್ತು ಪ್ರಯೋಜನಗಳು: 1. ಭಯ ನಿವಾರಣೆ – ಭೂತ, ಪ್ರೇತ, ದೆವ್ವ ಅಥವಾ ಅಶುಭ ಶಕ್ತಿಗಳಿಂದ ರಕ್ಷಣೆ ಪಡೆಯಲು ಈ ಮಂತ್ರ ಅತ್ಯಂತ ಪರಿಣಾಮಕಾರಿ. 2. ಶಕ್ತಿ ಮತ್ತು ಧೈರ್ಯ ವೃದ್ಧಿ – ಹನುಮಂತ ಶಕ್ತಿಯ ಸಂಕೇತ. ಈ ಮಂತ್ರ ಜಪ ಮಾಡಿದರೆ ದೈಹಿಕ ಮತ್ತು ಮಾನಸಿಕ ಶಕ್ತಿ ಎರಡೂ ಹೆಚ್ಚಾಗುತ್ತವೆ. 3. ಮನುಷ್ಯನ ಬುದ್ಧಿ, ಸ್ಮರಣೆ ಮತ್ತು ಏಕಾಗ್ರತೆ – ವಿದ್ಯಾರ್ಥಿಗಳು ಮತ್ತು ಪರೀಕ್ಷೆಗೆ ತಯಾರಿ ಮಾಡುವವರು ಈ ಮಂತ್ರವನ್ನು ಪ್ರತಿ ದಿನ 11 ಅಥವಾ 21 ಸಲ ಜಪಿಸಿದರೆ ಏಕಾಗ್ರತೆ ಹೆಚ್ಚಾಗುತ್ತದೆ. 4. ಆತ್ಮವಿಶ್ವಾಸ ಮತ್ತು ಧೈರ್ಯ – ಜೀವನದ ಸಂಕಷ್ಟದಲ್ಲಿ ಆತ್ಮವಿಶ್ವಾಸ ಕಳೆದುಕೊಂಡವರಿಗೆ…

Read More

ಶಿವಮೊಗ್ಗ : ಶಿವಮೊಗ್ಗ ಜಿಲ್ಲೆ ಶಿವಮೊಗ್ಗ – ಭದ್ರಾವತಿ ನಡುವೆ ಬರುವ ಎಲ್‌ಸಿ.ನಂ: 42,46 ಮತ್ತು 47 ಗಳನ್ನು ಮುಚ್ಚಲು ಅದಕ್ಕಾಗಿ ಎಲ್‌ಸಿ ಓಪನ್ನಿಗೆ ಮತ್ತು ಪರೀಕ್ಷೆಗಾಗಿ ಅ.28 ರಿಂದ ನ.03 ರವರೆಗೆ ವಿವಿಧ ದಿನಗಳಂದು ವಾಹನಗಳು ಮತ್ತು ಸಾರ್ವಜನಿಕರು ತಾತ್ಕಾಲಿಕವಾಗಿ ಸಮೀಪದ ಬದಲಿ ಮಾರ್ಗಗಳಲ್ಲಿ ಸಂಚರಿಸುವಂತೆ ಜಿಲ್ಲಾಧಿಕಾರಿಗಳು ಸೂಚಿಸಿ ಆದೇಶ ನೀಡಿರುತ್ತಾರೆ. ಎಲ್‌ಸಿ 43- ಯಲವಟ್ಟಿ ರಸ್ತೆ ಅ. 28ರ ಬೆ.8 ರಿಂದ ಅ.29 ರ ಸಂಜೆ 6ರವರೆಗೆ ಎಲ್.ಸಿ.46 ಮುಖಾಂತರ -ಹೊಸೊಡಿ ರಸ್ತೆ, ಯಲವಟ್ಟಿ ರಸ್ತೆ ಸಂಪರ್ಕ ಬದಲಿ ಮಾರ್ಗ. ಎಲ್‌ಸಿ 46- ಚಿತ್ರದುರ್ಗ ರಸ್ತೆ-ಅ.30ರ ಬೆ.8 ರಿಂದ ಅ.31 ರ ಸಂಜೆ 6 ರವರೆಗೆ ಹೊಸದಾಗಿ ನಿರ್ಮಿಸಿದ ಮೇಲ್ಸೇತುವೆ ಚಿತ್ರದುರ್ಗ ಸಂಪರ್ಕ ರಸ್ತೆ ಮಾರ್ಗ. ಎಲ್‌ಸಿ 47-ಮಲ್ಲೇಶ್ವರ ನಗರ ರಸ್ತೆ -ನ.2 ರ ಬೆ. 8 ರಿಂದ ನ. 3ರ ಸಂಜೆ 6 ರವರೆಗೆ ಮಲ್ಲೇಶ್ವರ ನಗರ ರಸ್ತೆ-ಹೊನ್ನಾಳಿ ರಸ್ತೆ- ಸಂಗೊಳ್ಳಿ ರಾಯಣ್ಣ ಸರ್ಕಲ್ -ಶಂಕರಮಠ ಸಂಪರ್ಕ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ 66/11ಕೆವಿ ಪುಟ್ಟೇನಹಳ್ಳಿ ಉಪಕೇಂದ್ರ ವ್ಯಾಪ್ತಿಯಲ್ಲಿ ದಿನಾಂಕ 28.10.2025 (ಮಂಗಳವಾರ) ರಂದು ಬೆಳಗ್ಗೆ 11:00 ಗಂಟೆಯಿಂದ ಸಂಜೆ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.  ವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ಸೆಂಚುರಿ ಲೇಔಟ್, ಅನಂತಪುರ ಗೇಟ್, ಏರ್ ಫೋರ್ಸ್, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರವೆಂಕಟಾಲ, ಪಾಲನಹಳ್ಳಿ, ಕಟ್ಟಿಗೇನಹಳ್ಳಿ, ರಾಮ್ಕಿ ಉತ್ತರ-1, ಮಾರುತಿ ನಗರ, ಪ್ರೆಸ್ಟೀಜ್ ನಗರ, ಮಾರುತಿ ನಗರ, ಮಾರುತಿ ರಾಯಲ್ ಗಾರ್. ಕಟ್ಟಿಗೇನಹಳ್ಳಿ, ಮಾರುತಿ ನಗರ, ಕೋಗಿಲು, ಪೂಜಾ ಮಹಾಲಕ್ಷ್ಮಿ ಐ/ಔ, ಸಪ್ತಗಿರಿ ಐ/ಔ, ಪ್ರಕೃತಿ ನಗರ, ಶ್ರೀನಿವಾಸಪುರ, ಅಯ್ಯಪ್ಪ ಎನ್ಕ್ಲೇವ್, SNಹಳ್ಳಿ, ಮೈಲಪನಹಳ್ಳಿ ಮತ್ತು ಸುತ್ತಮುತ್ತಲಿನ ಪ್ರದೇಶ ವ್ಯಾಪ್ತಿಯಲ್ಲಿ ಕರೆಂಟ್ ಇರೋದಿಲ್ಲ. https://kannadanewsnow.com/kannada/one-dead-another-seriously-injured-as-labour-department-building-collapses-in-shivamogga/ https://kannadanewsnow.com/kannada/public-attention-significant-change-in-aadhaar-card-update-rules-from-november-1/

Read More

ಶಿವಮೊಗ್ಗ: ಇಲ್ಲಿನ ಕೋಟೆಗಂಗೂರಿನ ಸಿದ್ಲೀಪುರ ಗ್ರಾಮದಲ್ಲಿ ನಿರ್ಮಿಸಿದ್ದಂತ ನೂತನ ಕಾರ್ಮಿಕ ಇಲಾಖೆಯ ಸಮುಚ್ಛಯದ ಕಟ್ಟಡದ ಗೋಡೆ ಕುಸಿದು ಓರ್ವ ಕಾರ್ಮಿಕ ಸಾವನ್ನಪ್ಪಿದ್ದಾರೆ. ಅಲ್ಲದೇ ಈ ದುರ್ಘಟನೆಯಲ್ಲಿ ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ನಡೆದಿದೆ. ಶಿವಮೊಗ್ಗ ತಾಲ್ಲೂಕಿನ ಕೋಟೆಗಂಗೂರಿನ ಸಿದ್ಲೀಪುರ ಗ್ರಾಮದಲ್ಲಿ ಈ ದುರ್ಘಟನೆ ನಡೆದಿದೆ. ಮೃತನನ್ನು ಸಿದ್ಲೀಪುರ ಗ್ರಾಮದ ಮಂಜು(35) ಎಂಬುದಾಗಿ ಗುರುತಿಸಲಾಗಿದೆ. ಕಟ್ಟಡ ನಿರ್ಮಾಣಕ್ಕೆ ಬಳಕೆಯಾಗಿದ್ದ ತಾತ್ಕಾಲಿಕ ಕಟ್ಟಡ ಕೆಡವಲು ಮಂಜು ಮತ್ತು ಆತನ ಸಹೋದರ ಮುತ್ತು ಮುಂದಾಗಿದ್ದರು. ಈ ವೇಳೆಯಲ್ಲಿ ಸಮುಚ್ಛಯದ ಕಟ್ಟಡ ಒಂದು ಭಾಗದ ಗೋಡೆ ದಿಢೀರ್ ಕುಸಿತಗೊಂಡು ಈ ದುರಂತ ಸಂಭವಿಸಿದೆ. ಗೋಡೆ ಕುಸಿತಗೊಂಡ ಕಾರಣ ಅವಶೇಷಗಳ ಅಡಿಯಲ್ಲಿ ಸಿಲುಕಿ ಮಂಜು ಸಾವನ್ನಪ್ಪಿದ್ದರೇ, ಸಹೋದರ ಮುತ್ತು ಕೈ ಕಾಲುಗಳಿಗೆ ತೀವ್ರ ಸ್ವರೂಪದ ಪೆಟ್ಟು ಬಿದ್ದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಆತನನ್ನು ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/consensual-sex-not-a-crime-high-courts-landmark-judgment/

Read More

ಬೆಂಗಳೂರು: ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆಯು ಅಪರಾಧವಲ್ಲ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಆ ಮೂಲಕ ಮಹಿಳೆಯೊಬ್ಬರು ವ್ಯಕ್ತಿಯೊಬ್ಬರ ವಿರುದ್ಧ ದಾಖಲಿಸಿದ್ದಂತ ರೇಪ್ ಕೇಸ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಡೇಟಿಂಗ್ ಆಪ್ ನಲ್ಲಿ ಭೇಟಿ, ಓಯೋ ರೂಂನಲ್ಲಿ ರೇಪ್ ಆರೋಪ ಸಂಬಂಧ ಹೈಕೋರ್ಟ್ ಗೆ ಮಹಿಳೆಯೊಬ್ಬರು ದಾಖಲಿಸಿದ್ದಂತ ಎಫ್ಐಆರ್ ರದ್ದುಪಡಿಸುವಂತೆ ವ್ಯಕ್ತಿಯೊಬ್ಬರು ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದಂತ ಹೈಕೋರ್ಟ್ ಪರಸ್ಪರ ಸಮ್ಮತಿಯ ಲೈಂಗಿಕ ಕ್ರಿಯೆ ಅಪರಾಧವಲ್ಲವೆಂದು ತೀರ್ಪು ನೀಡಿದೆ. ಸಾಂಪ್ರಾಸ್ ಆಂಥೋಣಿ ಎಂಬುವರ ವಿರುದ್ಧ ದಾಖಲಿಸಿದ್ದಂತ ಕೇಸ್ ರದ್ದುಪಡಿಸಿ ಆದೇಶಿಸಿದೆ. ಮಹಿಳೆ, ಯುವಕ ಡೇಟಿಂಗ್ ಆಪ್ ನಲ್ಲಿ 1 ವರ್ಷದಿಂದ ಸಂಪರ್ಕದಲ್ಲಿದ್ದರು. ಭೇಟಿಯಾಗಲು ನಿರ್ಧರಿಸಿ ರೆಸ್ಟೋರೆಂಟ್ ನಲ್ಲಿ ಊಟ ಮಾಡಿದ್ದರು. ನಂತ್ರ ಓಯೋ ರೂಮ್ ಗೆ ಕರೆದೊಯ್ದು ಯುವಕನಿಂದ ಲೈಂಗಿಕ ಕ್ರಿಯೆ ನಡೆಸಲಾಗಿದೆ. ಲೈಂಗಿಕ ಕ್ರಿಯೆಗೆ ಮುಂದಾದಾಗ ಒಪ್ಪಿಗೆ ನಿರಾಕರಿಸಿದ್ದಾಗಿ ಮಹಿಳೆ ದೂರು ನೀಡಿದ್ದಾರೆ. ಒಪ್ಪಿಗೆ ಹಿಂಪಡೆದ ಬಳಿಕವೂ ಲೈಂಗಿಕ ಕ್ರಿಯೆ ನಡೆಸಿದ್ದಾಗಿ ಆರೋಪಿಸಿದ್ದಾರೆ. ಮರುದಿನ…

Read More

ಬೆಂಗಳೂರು: ಸ್ಥಳೀಯ ಸಂಸ್ಥೆಗಳಿಗೆ ಚುನಾಯಿತ ಸದಸ್ಯರ ಅಧಿಕಾರಾವಧಿ ಮುಗಿಯುವವರೆಗೆ ಆಡಳಿತಾಧಿಕಾರಿ ನೇಮಕ ಬೇಡ ಎಂಬುದಾಗಿ ಕರ್ನಾಟಕ ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಈ ಸಂಬಂಧ ಹೈಕೋರ್ಟ್ ನ್ಯಾಯಮೂರ್ತಿ ಆರ್.ನಟರಾಜ್ ಅವರಿದ್ದ ಹೈಕೋರ್ಟ್ ಪೀಠವು ಮಧ್ಯಂತರ ಆದೇಶ ಮಾಡಿದೆ. ಉಡುಪಿ ನಗರಸಭೆ, ಕಡೂರು ಪುರಸಭೆ, ಕೊರಟಗೆರೆ ಪಟ್ಟಣ ಪಂಚಾಯ್ತಿ, ನರಸಿಂಹರಾಜಪುರ ಪಟ್ಟಣ ಪಂಚಾಯ್ತಿ, ಕೃಷ್ಣರಾಜ ಪೇಟೆ ಪುರಸಭೆ, ಟಿ ನರಸೀಪುರ ಪುರಸಭೆ, ಪಿರಿಯಾಪಟ್ಟಣ ಪುರಸಭೆ ಸದಸ್ಯರಿಂದ ಅರ್ಜಿ ಸಲ್ಲಿಸಲಾಗಿತ್ತು. ಸದಸ್ಯರ ಅವಧಿಯಿಂದ ಎಒ ನೇಕವಾಗಿದ್ದ ಅವಧಿ ಹೊರತುಪಡಿಸಲು ಕೋರಲಾಗಿತ್ತು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಚುನಾಯಿತ ಸದಸ್ಯರ ಅಧಿಕಾರವಧಿ ಮುಗಿಯುವ ತನಕ ನೇಮಕ ಬೇಡವೆಂದು ಆದೇಶಿಸಿದೆ. ಸ್ಥಳೀಯ ಸಂಸ್ಥೆಗಳಿಗೆ ಆಡಳಿತಾಧಿಕಾರಿ ನೇಮಿಸದಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನೋಟಿಸ್ ನೀಡಿ ಸೂಚಿಸಿದೆ. ರಾಜ್ಯ ಸರ್ಕಾರ, ಜಿಲ್ಲಾಧಿಕಾರಿ, ರಾಜ್ಯ ಚುನಾವಣಾ ಆಯೋಗಕ್ಕೆ ನೋಟಿಸ್ ನೀಡಲಾಗಿದೆ.

Read More