Author: kannadanewsnow09

ಬೆಂಗಳೂರು: ನಗರದ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಐಪಿಎಲ್ ಪಂದ್ಯಗಳು ರದ್ದಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಶಾಂತಿನಗರ, ರಿಚ್ಮಡ್ ಸರ್ಕಲ್, ಕಾರ್ಪೊರೇಷನ್, ಕಬ್ಬನ್ ಪಾರ್ಕ್, ಚಿನ್ನಸ್ವಾಮಿ ಮೈದಾನ, ವಿಧಾನಸೌಧ, ಕೆಆರ್ ಮಾರ್ಕೆಟ್, ಮೆಜೆಸ್ಟಿಕ್, ರಾಜಾಜಿನಗರ, ಲಾಲ್ ಬಾಗ್, ಜಯನಗರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಐಪಿಎಲ್ ಪಂದ್ಯ ಆರಂಭಕ್ಕೂ ಮುನ್ನವೇ ಬೆಂಗಳೂರಲ್ಲಿ ಮಳೆ ಮತ್ತೊಂದೆಡೆ ಐಪಿಎಸ್ ಪಂದ್ಯಾವಳಿ ಆರಂಭಕ್ಕೆ ಮುನ್ನವೇ ಬೆಂಗಳೂರಲ್ಲಿ ಭಾರಿ ಮಳೆಯಾಗುತ್ತಿದೆ. ಚಿನ್ನಸ್ವಾಮಿ ಸ್ಟೇಡಿಯಂ ಸುತ್ತಮುತ್ತ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ಇಂದಿನ ಐಪಿಎಲ್ ಪಂದ್ಯಕ್ಕೆ ಮಳೆ ಅಡ್ಡಿ ಸಾಧ್ಯತೆ ಇದೆ. https://kannadanewsnow.com/kannada/pakistan-vigilant-eye-on-terrorists-tomorrow-isro-to-launch-indias-surveillance-satellite/ https://kannadanewsnow.com/kannada/big-news-attention-state-ration-card-holders-name-additions-allowed-again-to-be-corrected-in-ration-card-ration-card/

Read More

ಶ್ರೀಹರಿಕೋಟಾ: ಭಾರತದ ರಕ್ಷಣೆಗೆ ಬಲ ನೀಡಲು ಇಸ್ರೋ ಸಜ್ಜಾಗಿದೆ. ಪಾಕಿಸ್ತಾನ, ಉಗ್ರರ ಮೇಲೆ ಹದ್ದಿನ ಕಣ್ಣಿಡಲು ನಾಳೆ ಭಾರತದ ಬೇಹುಗಾರಿಕಾ ಉಪಗ್ರಹ ಉಡಾವಣೆಯನ್ನು ಇಸ್ರೋ ಮಾಡಲಿದೆ. ಭಾರತವು ತನ್ನ ಬಾಹ್ಯಾಕಾಶ ಕಾರ್ಯಕ್ರಮದ 101ನೇ ಕಾರ್ಯಾಚರಣೆಯೊಂದಿಗೆ ಮಹತ್ವದ ಮೈಲಿಗಲ್ಲು ಸಾಧಿಸಲು ಸಜ್ಜಾಗಿದೆ. ಮೇ 18, 2025 ರಂದು ಬೆಳಿಗ್ಗೆ 05:59 IST ಕ್ಕೆ, ಇಸ್ರೋ SHAR ನ ಸತೀಶ್ ಧವನ್ ಬಾಹ್ಯಾಕಾಶ ಕೇಂದ್ರದಲ್ಲಿರುವ ಮೊದಲ ಉಡಾವಣಾ ಪ್ಯಾಡ್ (FLP) ನಿಂದ PSLV-C61 ನಲ್ಲಿ EOS-09 ಅನ್ನು ಉಡಾವಣೆ ಮಾಡಲಿದೆ. ಈ ಕಾರ್ಯಾಚರಣೆಯು ಭೂಮಿಯ ವೀಕ್ಷಣಾ ಉಪಗ್ರಹವನ್ನು ಸೂರ್ಯ ಸಿಂಕ್ರೊನಸ್ ಪೋಲಾರ್ ಆರ್ಬಿಟ್ (SSPO) ಗೆ ಇರಿಸುತ್ತದೆ. ಉಡಾವಣಾ ವಾಹನ – PSLV-C61 PSLV-C61 ಪೋಲಾರ್ ಉಪಗ್ರಹ ಉಡಾವಣಾ ವಾಹನದ ( Polar Satellite Launch Vehicle-PSLV) 63 ನೇ ಹಾರಾಟ ಮತ್ತು PSLV-XL ಸಂರಚನೆಯನ್ನು ಬಳಸುವ 27 ನೇ ಹಾರಾಟವನ್ನು ಸೂಚಿಸುತ್ತದೆ. ಈ ಕಾರ್ಯಾಚರಣೆಯು ವ್ಯಾಪಕ ಶ್ರೇಣಿಯ ಪೇಲೋಡ್‌ಗಳು ಮತ್ತು ಕಕ್ಷೆಗಳಲ್ಲಿ ವಿಶ್ವಾಸಾರ್ಹ ಕಾರ್ಯಕ್ಷಮತೆಯನ್ನು…

Read More

ಶಿವಮೊಗ್ಗ: ದೇಶದ ಜನರು ಇಡೀ ಪಾಕಿಸ್ತಾನವನ್ನೇ ಉಡೀಸ್ ಮಾಡುವಂತ ಆಶಯ ಇಟ್ಟುಕೊಂಡಿದ್ದರು. ಆದರೇ ಹಾಗೆ ಆಗಲಿಲ್ಲ ಎಂಬುದಾಗಿ ಸಾಗರ ಕ್ಷೇತ್ರದ ಕಾಂಗ್ರೆಸ್ ಶಾಸಕ ಗೋಪಾಲಕೃಷ್ಣ ಬೇಳೂರು ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಆಪರೇಷನ್ ಸಿಂಧೂರ್ ಯಶಸ್ವಿಯಾಗಿ ನಡೆಸಿದ ಸೈನಿಕರಿಗೆ ಅಭಿನಂದನೆಯನ್ನು ತಿಳಿಸಿದರು. ನಮ್ಮ ಸೈನಿಕರು ಬಹಳ ಚೆನ್ನಾಗಿ ಹೋರಾಡಿದ್ದಾರೆ ಎಂಬುದಾಗಿ ಶ್ಲಾಘನೆ ವ್ಯಕ್ತ ಪಡಿಸಿದರು. ಅಲ್ಲದೇ ಇಡೀ ಪ್ರಪಂಚವೇ ಭಾರತದತ್ತ ತಿರುಗಿ ನೋಡುವಂತೆ ನಮ್ಮ ಯೋಧರು ಮಾಡಿದ್ದಾರೆ ಎಂದರು. ಮುಸಲ್ಮಾನ್, ಕ್ರಿಶ್ಚಿಯನ್, ಹಿಂದೂ ಸೇರಿದಂತೆ ಎಲ್ಲರೂ ಪಾಕಿಸ್ತಾನವನ್ನು ಉಡೀಸ್ ಮಾಡುವ ಆಶಯ ಇಟ್ಟುಕೊಂಡಿದ್ದರು. ಆದರೇ ಹಾಗೆ ಆಗಲಿಲ್ಲ. ಈ ಬಗ್ಗೆ ದೇಶದ ಜನರಲ್ಲಿ ಬೇಸರವಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/two-bikers-were-victims-of-a-hit-and-run-in-bangalore/ https://kannadanewsnow.com/kannada/big-news-attention-state-ration-card-holders-name-additions-allowed-again-to-be-corrected-in-ration-card-ration-card/

Read More

ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತವರಿಗೆ ಅಪರಿಚಿತ ವಾಹನ ಡಿಕ್ಕಿಯಾಗಿ ಪರಾರಿಯಾದ ಘಟನೆಯಲ್ಲಿ ಇಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲ್ಲೂಕಿನ ವಿಜಯಪುರ ಬೈಪಾಸ್ ನ ಸಿಲ್ಕ್ ಫ್ಯಾಕ್ಟರಿ ಬಳಿಯಲ್ಲಿ ಅಪರಿಚಿತ ವಾಹನವೊಂದು ಬೈಕ್ ನಲ್ಲಿ ತೆರಳುತ್ತಿದ್ದಂತವರಿಗೆ ಡಿಕ್ಕಿಯಾಗಿದೆ. ಈ ಹಿಟ್ ಅಂಡ್ ರನ್ ಅಪಘಾತದಲ್ಲಿ ಬೈಕ್ ಸವಾರ ಮತ್ತು ಮಹಿಳೆ ಸ್ಥಳದಲ್ಲೇ ದುರ್ಮರಣ ಹೊಂದಿದ್ದಾರೆ. ಈ ವಿಷಯ ತಿಳಿದು ವಿಜಯಪುರ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಬೈಕ್ ಸವಾರರಿಗೆ ಡಿಕ್ಕಿಯಾಗಿ ಪರಾರಿಯಾಗಿರುವಂತ ಅಪರಿಚಿತ ವಾಹನದ ಚಾಲಕನ ಬಂಧನಕ್ಕೆ ಬಲೆ ಬೀಸಿದ್ದಾರೆ. https://kannadanewsnow.com/kannada/big-news-attention-state-ration-card-holders-name-additions-allowed-again-to-be-corrected-in-ration-card-ration-card/ https://kannadanewsnow.com/kannada/alert-public-beware-if-you-make-this-mistake-fraudsters-will-use-a-sim-card-in-your-name/

Read More

ಜೆರುಸಲೆಮ್/ಕೈರೋ: ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ವಾಯುಪಡೆ ಗಾಜಾ ಮೇಲೆ ನಡೆಸಿದ ಹೊಸ ದಾಳಿಗಳಲ್ಲಿ ಕನಿಷ್ಠ 146 ಪ್ಯಾಲೆಸ್ಟೀನಿಯನ್ನರು ಸಾವನ್ನಪ್ಪಿದ್ದಾರೆ. ಇನ್ನೂ ಅನೇಕರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.  ಮಾರ್ಚ್‌ನಲ್ಲಿ ಕದನ ವಿರಾಮ ರದ್ದುಗೊಂಡ ನಂತರ ಗುರುವಾರದಿಂದ ಇಸ್ರೇಲಿ ದಾಳಿಗಳು ಅತ್ಯಂತ ಮಾರಕ ಬಾಂಬ್ ದಾಳಿಗಳಲ್ಲಿ ಒಂದನ್ನು ಕಂಡಿವೆ. ಹೊಸ ಕದನ ವಿರಾಮದತ್ತ ಯಾವುದೇ ಸ್ಪಷ್ಟ ಪ್ರಗತಿಯಿಲ್ಲದೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ ತಮ್ಮ ಮಧ್ಯಪ್ರಾಚ್ಯ ಪ್ರವಾಸವನ್ನು ಕೊನೆಗೊಳಿಸಿದ್ದರಿಂದ ಇತ್ತೀಚಿನ ದಾಳಿಗಳು ನಡೆದಿವೆ. ಮಧ್ಯರಾತ್ರಿಯಿಂದ, ನಾವು 58 ಹುತಾತ್ಮರನ್ನು ಸ್ವೀಕರಿಸಿದ್ದೇವೆ. ಆದರೆ ಸಾವನ್ನಪ್ಪಿದವರು ಹೆಚ್ಚಿನವರು ಅವಶೇಷಗಳ ಅಡಿಯಲ್ಲಿದ್ದಾರೆ. ಆಸ್ಪತ್ರೆಯೊಳಗಿನ ಪರಿಸ್ಥಿತಿ ವಿಕೋಪಕಾರಿಯಾಗಿದೆ ಎಂದು ಉತ್ತರ ಗಾಜಾದಲ್ಲಿರುವ ಇಂಡೋನೇಷ್ಯಾ ಆಸ್ಪತ್ರೆಯ ನಿರ್ದೇಶಕ ಮರ್ವಾನ್ ಅಲ್-ಸುಲ್ತಾನ್ ಹೇಳಿದ್ದಾರೆ. ಕಳೆದ 24 ಗಂಟೆಗಳಲ್ಲಿ ಇಸ್ರೇಲ್ ನಡೆಸಿದ ದಾಳಿಯಲ್ಲಿ 459 ಜನರು ಗಾಯಗೊಂಡಿದ್ದಾರೆ ಎಂದು ಸ್ಥಳೀಯ ಆರೋಗ್ಯ ಅಧಿಕಾರಿಗಳು ತಿಳಿಸಿದ್ದಾರೆ. ಗಾಜಾ ಪಟ್ಟಿಯಲ್ಲಿ ಕಾರ್ಯಾಚರಣೆಗಳನ್ನು ವಿಸ್ತರಿಸಲು ಮತ್ತು ಪ್ಯಾಲೆಸ್ಟೀನಿಯನ್ ಎನ್ಕ್ಲೇವ್ ಪ್ರದೇಶಗಳಲ್ಲಿ…

Read More

ಬಾಗಲಕೋಟೆ: ರಾಜ್ಯದಲ್ಲೊಂದು ಮನಕಲಕುವ ಘಟನೆ ಎನ್ನುವಂತೆ ತಾಳಿ ಕಟ್ಟಿ, ಆರತಕ್ಷತೆಯ ವೇಳೆಯಲ್ಲಿ ವರನಿಗೆ ಹೃದಯಾಘಾತದಿಂದ ಕುಸಿದು ಬಿದ್ದು ಕಲ್ಯಾಣ ಮಂಟಪದಲ್ಲೇ ಸಾವನ್ನಪ್ಪಿರುವಂತ ಘಟನೆ ಬಾಗಲಕೋಟೆಯಲ್ಲಿ ನಡೆದಿದೆ. ಬಾಗಲಕೋಟೆ ಜಿಲ್ಲೆಯ ಜಮಖಂಡಿಯಲ್ಲಿ ತಾಳಿ ಕಟ್ಟಿ, ಆರತಕ್ಷತೆಯ ವೇಳೆಯಲ್ಲಿ ವರ ಪ್ರವೀಣ್ ಕುರ್ನೆಗೆ ಕಲ್ಯಾಣ ಮಂಟಪದಲ್ಲಿ ಹೃದಯಾಘಾತ ಉಂಟಾಗಿದೆ. ಹೀಗಾಗಿ ಅಲ್ಲೇ ಕುಸಿದು ಬಿದ್ದಿದ್ದಾರೆ. ಅವರನ್ನು ಆಸ್ಪತ್ರೆಗೆ ಚಿಕಿತ್ಸೆಗಾಗಿ ಕರೆದೊಯ್ದಿದ್ದಾರೆ. ಆದರೇ ಚಿಕಿತ್ಸೆಗೂ ಮುನ್ನಾ ವರ ಪ್ರವೀಣ್ ಕುರ್ನೆ ಸಾವನ್ನಪ್ಪಿದ್ದಾರೆ. ಇದೀಗ ಕಲ್ಯಾಣ ಮಂಟಪದಲ್ಲೇ ವರ ಪ್ರವೀಣ್ ಕುರ್ನೆ ಸಾವನ್ನಪ್ಪಿದ್ದಾರೆ. ಈ ಹಿನ್ನಲೆಯಲ್ಲಿ ಕಲ್ಯಾಣ ಮಂಟಪವು ಸೂತಕದ ಮನೆಯಾಗಿದೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. https://kannadanewsnow.com/kannada/try-to-achieve-first-place-in-gst-collection-in-the-country-cms-call-to-commercial-tax-officials/ https://kannadanewsnow.com/kannada/big-news-attention-state-ration-card-holders-name-additions-allowed-again-to-be-corrected-in-ration-card-ration-card/

Read More

ಬೆಂಗಳೂರು : ಜಿಎಸ್ಟಿ ಸಂಗ್ರಹಣೆಯಲ್ಲಿ ಕರ್ನಾಟಕ ರಾಜ್ಯ ದೇಶದಲ್ಲಿ ದ್ವಿತೀಯ ಸ್ಥಾನದಲ್ಲಿದ್ದು, ಮುಂದಿನ ದಿನಗಳಲ್ಲಿ ಎರಡನೇ ಸ್ಥಾನಕ್ಕೆ ಬರಲು ಪ್ರಯತ್ನಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಾಣಿಜ್ಯ ತೆರಿಗೆ ಅಧಿಕಾರಿಗಳಿಗೆ ತಿಳಿಸಿದರು. ಅವರು ಇಂದು ಕರ್ನಾಟಕ ವಾಣಿಜ್ಯ ತೆರಿಗೆಗಳ ಸೇವಾ ಸಂಘ ಬೆಂಗಳೂರು ಇವರ ವತಿಯಿಂದ ಆಯೋಜಿಸಲಾಗಿದ್ದ ಸುವರ್ಣ ಮಹೋತ್ಸವ ಕಾರ್ಯಕ್ರಮ ವನ್ನು ಉದ್ಘಾಟಿಸಿ ಮಾತನಾಡಿದರು. ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಸಂಘವು 50 ವರ್ಷಗಳ ಮೈಲಿಗಲ್ಲನ್ನು ಸಾಧಿಸಿದ್ದು, ಇದಕ್ಕಾಗಿ ಶ್ರಮಿಸಿದ ಸಂಘದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆಗಳು. ನಿಮ್ಮೆಲ್ಲರ ಸಹಕಾರದಿಂದ ನಾನು ಆರ್ಥಿಕ ಇಲಾಖೆಯ ಜವಾಬ್ದಾರಿಯನ್ನು ದೀರ್ಘ ಕಾಲದವರೆಗೆ ನಿಭಾಯಿಸಲು ಸಾಧ್ಯವಾಯಿತು. ನಾನು ಹಣಕಾಸು ಮಂತ್ರಿಯಾಗಿ, ಉಪಮುಖ್ಯಮಂತ್ರಿಯಾಗಿ ಹಾಗೂ ಮುಖ್ಯಮಂತ್ರಿಯಾಗಿ ಹಣಕಾಸು ಇಲಾಖೆಯ ಕಾರ್ಯಭಾರವನ್ನು ನಿರ್ವಹಿಸಿದ್ದೇನೆ. ಈಗ ಸರ್ಕಾರದ ಯಶಸ್ವಿ ಆಡಳಿತಕ್ಕೆ ಎರಡು ವರ್ಷ ಪೂರೈಸಿದ್ದು, ಮೇ 20 ರಂದು ವಿಜಯನಗರ ಜಿಲ್ಲೆಯ ಹೊಸಪೇಟೆಯಲ್ಲಿ ಸಮಾವೇಶವನ್ನು ಏರ್ಪಡಿಸಲಾಗಿದೆ ಎಂದರು. ತೆರಿಗೆ ಸಂಗ್ರಹಣೆಯಲ್ಲಿ ಗುರಿ ಸಾಧನೆ ಆಗಬೇಕು ತೆರಿಗೆ ಸಂಗ್ರಹಣೆಯಲ್ಲಿ ವಾಣಿಜ್ಯ…

Read More

ಬೆಂಗಳೂರು: ಕೆ ಎಸ್ ಆರ್ ಟಿಸಿಯಲ್ಲಿ ಖಾಲಿ ಇದ್ದಂತ ಚಾಲಕ ಕಂ ನಿರ್ವಾಹಕರ ಹುದ್ದೆಗೆ ಅರ್ಜಿಯನ್ನು ಕರೆಯಲಾಗಿತ್ತು. ಈ ಹುದ್ದೆಗೆ ಅರ್ಜಿ ಸಲ್ಲಿಸಿದ್ದಂತವರಿಗೆ ಈಗಾಗಲೇ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗಿತ್ತು. ಇದೀಗ ಹಾಸನ ತರಬೇತಿ ಕೇಂದ್ರದಲ್ಲಿ ನಡೆಯುತ್ತಿರುವ ಚಾಲಕ-ಕಂ-ನಿರ್ವಾಹಕ ಹುದ್ದೆಯ ಚಾಲನಾ ವೃತ್ತಿ ಪರೀಕ್ಷೆಗೆ ಹಾಜರಾಗುವಂತೆ ಸೂಚನೆ ನೀಡಲಾಗಿದೆ. ಈ ಬಗ್ಗೆ ಕೆ ಎಸ್ ಆರ್ ಟಿಸಿ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸಲ್ಲಿಸಿ ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಂಡಿದ್ದ ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 16-12-2024 ರಿಂದ ನಡೆಸಲಾಗುತ್ತಿದೆ. ಸದರಿ ಚಾಲನಾ ವೃತ್ತಿ ಪರೀಕ್ಷೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ದಿನಾಂಕ: 08-05-2025 ರಿಂದ 20-05-2025 ರವೆರೆಗೆ ಅವಕಾಶ ಕಲ್ಪಿಸಲಾಗಿತ್ತು ಎಂದು ಹೇಳಿದೆ. ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಿ ಚಾಲನಾ ವೃತ್ತಿ ಪರೀಕ್ಷೆಯನ್ನು ದಿನಾಂಕ: 23-05-2025 ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ ದಿನಾಂಕ: 22-05-2025 ರ…

Read More

ಬೆಂಗಳೂರು: ರಾಜ್ಯದ ಅಂಗವೈಕಲ್ಯವುಳ್ಳ ಸರ್ಕಾರಿ ನೌಕರರಿಗೆ ಸರ್ಕಾರ ಗುಡ್ ನ್ಯೂಸ್ ನೀಡಿದೆ. ಅಂಗವೈಕಲ್ಯ ಉಳ್ಳಂತ ಸರ್ಕಾರಿ ನೌಕರರಿಗೆ ಗ್ರೂಪ್-ಬಿ ಮತ್ತು ಗ್ರೂಪ್-ಎ (ಕಿರಿಯ ಶ್ರೇಣಿ) ವೃಂದಗಳಿಗೆ ಮುಂಬಡ್ತಿ ನೀಡುವಲ್ಲಿ ಶೇ.4ರಷ್ಟು ಮೀಸಲಾತಿ ನಿಗದಿ ಪಡಿಸಿ ಆದೇಶಿಸಿದೆ. ಈ ಬಗ್ಗೆ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಿದ್ದು, ದಿನಾಂಕ:28.03.2023ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಮತ್ತು ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ ನೀಡುವ ಮುಂಬಡ್ತಿಯಲ್ಲಿ ಎದ್ದುಕಾಣುವ ಅಂಗವೈಕಲ್ಯವನ್ನುಳ್ಳ ಸರ್ಕಾರಿ ನೌಕರರಿಗೆ ಶೇಕಡ 4 ರಷ್ಟು ಮೀಸಲಾತಿ ಆಸ್ಪದವನ್ನು ಕಲ್ಪಿಸಲಾಗಿರುತ್ತದೆ. ದಿನಾಂಕ:28.11.2023ರ ಸರ್ಕಾರಿ ಆದೇಶದ ಅನುಬಂಧ-2ರಲ್ಲಿ ಎದ್ದು ಕಾಣುವ ಅಂಗವೈಕಲ್ಯವನ್ನುಳ್ಳ ನೌಕರರಿಗೆ ಗ್ರೂಪ್ ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್ ಸಿ ಯಿಂದ ಗ್ರೂಪ್-ಸಿ ಹುದ್ದೆಗಳಿಗೆ ಮುಂಬಡ್ತಿ ನೀಡುವ ಸಂದರ್ಭದಲ್ಲಿ ನಿಗದಿಪಡಿಸಿರುವ 100 ಬಿಂದುಗಳ ರೋಸ್ಮರಿನಲ್ಲಿ 5, 30, 55, 82ನೇ ಬಿಂದುಗಳನ್ನು ಗುರುತಿಸಲಾಗಿದೆ. ರಾಜ್ಯ ಸಿವಿಲ್ ಸೇವೆಗಳಲ್ಲಿನ ಗ್ರೂಪ್-ಡಿ ಯಿಂದ ಗ್ರೂಪ್-ಸಿ ಮತ್ತು ಗ್ರೂಪ್-ಸಿ ಯಿಂದ ಗ್ರೂಪ್-ಸಿ ವೃಂದಗಳಿಗೆ ಸೇರಿದ ಹುದ್ದೆಗಳಿಗೆ…

Read More

ಬೆಂಗಳೂರು : ಖಾಸಗಿ ವೈದ್ಯಕೀಯ ಕಾಲೇಜುಗಳ ಒತ್ತಡದ ಹೊರತಾಗಿಯೂ, ಮುಂದಿನ ಶೈಕ್ಷಣಿಕ ವರ್ಷಕ್ಕೆ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್‌ಗಳ ಶುಲ್ಕ ವಿಚಾರದಲ್ಲಿ ಯಾವುದೇ ಹೆಚ್ಚಳವಿಲ್ಲ ಎಂದು ರಾಜ್ಯ ಸರ್ಕಾರ ಮಹತ್ವದ ಘೋಷಣೆ ಮಾಡಿದೆ. ಈ ವಿಷಯವನ್ನು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣ್ ಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ. ಖಾಸಗಿ ವೈದ್ಯಕೀಯ ಕಾಲೇಜು ಹಾಗೂ ದಂತ ವೈದ್ಯಕೀಯ ಕಾಲೇಜುಗಳ ಆಡಳಿತ ಮಂಡಳಿಯ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಸಚಿವ ಡಾ. ಶರಣ್‌ ಪ್ರಕಾಶ್‌ ಪಾಟೀಲ್‌ ಈ ವಿಷಯವನ್ನು ಶನಿವಾರ ಸ್ಪಷ್ಟಪಡಿಸಿದರು. ಖಾಸಗಿ ಕಾಲೇಜುಗಳು 10% ರಿಂದ 15% ಶುಲ್ಕ ಹೆಚ್ಚಳಕ್ಕೆ ಮನವಿ ಮಾಡಿದ್ದವು. ಆದರೆ ರಾಜ್ಯ ಸರ್ಕಾರದ ಕಳೆದ ವರ್ಷ 10% ಹೆಚ್ಚಳಕ್ಕೆ ಅನುಮತಿ ನೀಡಿತ್ತು. ಆದರೆ ಈ ವರ್ಷ ಯಾವುದೇ ಹೆಚ್ಚಳಕ್ಕೆ ಅವಕಾಶವಿಲ್ಲ ಎಂದು ಸಚಿವರು ತಿಳಿಸಿದ್ದಾರೆ. ಈ ವಿಷಯವನ್ನು ಸಭೆಯಲ್ಲಿ ಪ್ರಸ್ತಾಪಿಸಿದಾಗ ಕೂಡಲೇ ಪ್ರತಿಕ್ರಿಯೆ ನೀಡಿದ ಸಚಿವ ಶರಣ್‌ ಪ್ರಕಾಶ್‌…

Read More