Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ಗ್ರಾಹಕ ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಪರಿಚಯಿಸಲು ಬೆಸ್ಕಾಂ ಮುಂದಾಗಿದೆ ಎಂದು ಬೆಸ್ಕಾಂನ ವ್ಯವಸ್ಥಾಪಕ ನಿರ್ದೇಶಕ ಡಾ.ಎನ್.ಶಿವಶಂಕರ ತಿಳಿಸಿದ್ದಾರೆ. ಕರ್ನಾಟಕ ವಿದ್ಯುಚ್ಛಕ್ತಿ ನಿಯಂತ್ರಣ ಆಯೋಗ ಮತ್ತು ಬೆಂಗಳೂರು ವಿದ್ಯುತ್ ಸರಬರಾಜು ನಿಗಮ ನಿಯಮಿತದ ಸಹಯೋಗದಲ್ಲಿ ಮಂಗಳವಾರ ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆಯ ಅಧ್ಯಕ್ಷರು, ಸದಸ್ಯರು ಮತ್ತು ಅಧಿಕಾರಿಗಳಿಗೆ ಕೆಇಬಿ ಇಂಜಿನಿಯರ್ಸ್ ಅಸೋಸಿಯೇಷನ್ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಕಾರ್ಯಾಗಾರದಲ್ಲಿ ಅವರು ಮಾತನಾಡಿದರು. “ಗ್ರಾಹಕರ ದೂರುಗಳ ನಿರ್ವಹಣೆಗೆ ಕಾರ್ಪೋರೇಟ್ ವ್ಯವಹಾರಗಳ ಮುಖ್ಯ ಪ್ರಧಾನ ವ್ಯವಸ್ಥಾಪಕರನ್ನು ನಿಯೋಜಿಸಲಾಗಿದೆ. ಗ್ರಾಹಕರ ಹಕ್ಕಿಗೆ ಒತ್ತು ನೀಡಿ, ದೂರು ನಿರ್ವಹಣೆ ಪ್ರಕ್ರಿಯೆಯನ್ನು ಮತ್ತಷ್ಟು ಪಾರದರ್ಶಕವಾಗಿಸಲು ಡಿಜಿಟಲ್ ಪೋರ್ಟಲ್ ಸಿದ್ದಪಡಿಸಲು ಬೆಸ್ಕಾಂ ಮುಂದಾಗಿದೆ”, ಎಂದು ಅವರು ತಿಳಿಸಿದರು. “ಕೆಇಆರ್ಸಿ ಆದೇಶದ ಸೂಚನೆ ಮೇರೆಗೆ ಗ್ರಾಹಕರ ಕುಂದುಕೊರತೆಗಳ ನಿವಾರಣಾ ವೇದಿಕೆಯನ್ನು ಸ್ಥಾಪಿಸಲಾಗಿದೆ. ಗ್ರಾಹಕರು ದೂರಿಗೆ ತ್ವರಿತವಾಗಿ ಸ್ಪಂದಿಸಿ, ಸೇವೆಯ ಗುಣಮಟ್ಟ ಹೆಚ್ಚಿಸಲು ಅಧಿಕಾರಿಗಳು ಮುಂದಾಗಬೇಕು,” ಎಂದು ಬೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಕರೆ ನೀಡಿದರು. “ಗ್ರಾಹಕರ ಕುಂದುಕೊರತೆಗಳ…
ಸಾಗರ : ಅಂದು ಜ್ಯೂನಿಯರ್ ಕಾಲೇಜಿನಲ್ಲಿ ನಡೆಯುತ್ತಿದ್ದ ಗಲಾಟೆ, ದಾಂಧಲೆ ನೋಡಿ ನಾನು ದ್ವಿತೀಯ ಪಿಯುಸಿಗೆ ಶಿಕ್ಷಣ ಮೊಟಕುಗೊಳಿಸಿದವನು. ಅಂದು ಗುಣಮಟ್ಟದ ಶಿಕ್ಷಣ ಸಿಕ್ಕಿದ್ದರೆ ನಾನೂ ಬೇರೆಯದೆ ಉನ್ನತ ಸ್ಥಾನಕ್ಕೆ ಹೋಗುತ್ತಿದ್ದೆ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಲ್ಲಿನ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಮಂಗಳವಾರ ಹಮ್ಮಿಕೊಳ್ಳಲಾಗಿದ್ದ ವಿವಿಧ ಶೈಕ್ಷಣಿಕ ಚಟುವಟಿಕೆಗಳ ಸಮಾರೋಪ ಸಮಾರಂಭವನ್ನು ಉದ್ಘಾಟಿಸಿ ಅವರು ಮಾತನಾಡುತ್ತಾ, ನಾನು ಶಿಕ್ಷಣ ಮೊಟಕುಗೊಳಿಸಿದ ಸ್ಥಿತಿ ಯಾರಿಗೂ ಬರಬಾರದು ಎಂದು ಶಾಲಾಕಾಲೇಜು ಅಭಿವೃದ್ದಿಗೆ ವಿಶೇಷ ಒತ್ತು ನೀಡುತ್ತಿದ್ದೇನೆ ಎಂದರು. ತಂದೆತಾಯಿ ನಿಮ್ಮ ಮೇಲೆ ಸಾಕಷ್ಟು ಕನಸು ಕಟ್ಟಿಕೊಂಡಿರುತ್ತಾರೆ. ತಾವು ಉಪವಾಸವಿದ್ದು ಸಾಲಸೋಲ ಮಾಡಿ ನಿಮಗೆ ಗುಣಮಟ್ಟದ ಶಿಕ್ಷಣ ಕೊಡಿಸಲು ಅಹೋರಾತ್ರಿ ಪ್ರಯತ್ನಿಸುತ್ತಿರುತ್ತಾರೆ. ಅವರ ಕನಸು ಈಡೇರಿಸುವ ಸಂಕಲ್ಪ ನೀವು ಕೈಗೊಳ್ಳಬೇಕು. ಇಲ್ಲಸಲ್ಲದ ವಿಷಯಗಳಿಗೆ ಮೂಗು ತೂರಿಸಿ ನಿಮ್ಮ ಭವಿಷ್ಯ ಹಾಳು ಮಾಡಿಕೊಳ್ಳಬಾರದು. ಆಧುನಿಕ ದಿನಮಾನಗಳಲ್ಲಿ ಬೇರೆಬೇರೆ ಕ್ಷೇತ್ರದಲ್ಲಿ ವಿಫುಲವಾದ ಉದ್ಯೋಗಾವಕಾಶ ಇರುತ್ತದೆ. ಅದನ್ನು ಗುರುತಿಸಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಹೊಸದಾಗಿ ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ(NHM) ಗುತ್ತಿಗೆಯಾಧಾರದ ಮೇಲೆ ನೇಮಕಗೊಳ್ಳುವಂತ ವೈದ್ಯರು, ಸ್ಟಾಫ್ ನರ್ಸ್ ಗಳಿಗೆ ಭರ್ಜರಿ ಸಿಹಿ ಸುದ್ದಿ ನೀಡಿದೆ. ಅದೇ ಈ ಹಿಂದೆ ಇದ್ದಂತ ವೇತನವನ್ನು ಪರಿಷ್ಕರಿಸಿದೆ. ಶೇ.25ರಷ್ಟು ವೇತನವನ್ನು ಹಚ್ಚಳ ಮಾಡಿದೆ. ಇಂದು ಪತ್ರಿಕಾ ಗೋಷ್ಠಿಯಲ್ಲಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಮಾಹಿತಿ ಹಂಚಿಕೊಂಡಿದ್ದು, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮದಡಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಎಂಬಿಬಿಎಸ್ ವೈದ್ಯರು, ತಜ್ಞ ವೈದ್ಯರು ಹಾಗೂ SNCU & ICU ದಲ್ಲಿ ಕಾರ್ಯ ನಿರ್ವಹಿಸುವ ಸ್ಟಾಫ್ ನರ್ಸ್ ಗಳ ವೇತನ ಪರಿಷ್ಕರಿಸಿ ಗಣನೀಯವಾಗಿ ಹೆಚ್ಚಳ ಮಾಡಲಾಗಿದೆ. ಸದರಿ ಹುದ್ದೆಗಳು NHM ಯೋಜನೆಯಡಿ ಈ ಕೆಳಕಂಡಂತೆ ಮಂಜೂರಾಗಿರುತ್ತವೆ ಎಂದಿದ್ದಾರೆ. ಸ್ಟಾಫ್ ನರ್ಸ್ – 9041 ಎಬಿಬಿಎಸ್ ವೈದ್ಯರು – 1398 ತಜ್ಞ ವೈದ್ಯರು- 899 NHM ಯೋಜನೆಯಡಿ ಎಂಬಿಬಿಎಸ್ ಹಾಗೂ ತಜ್ಞ ವೈದ್ಯರ ವೇತನ ಕಡಿಮೆಯಿರುವ ಕಾರಣ ಅನೇಕ ವೈದ್ಯರ ಹುದ್ದೆಗಳು ಖಾಲಿ ಉಳಿದಿದ್ದು ನೇಮಕಾತಿ ಪ್ರಕ್ರಿಯೆಗೆ ಕ್ರಮ ವಹಿಸಲಾಗಿದ್ದರೂ ಸಹ ವೇತನ…
ಅಮೇರಿಕ: ಅಮೇರಿಕಾವು ಸಿರಿಯಾ ಮೇಲೆ ನಿರ್ಬಂಧ ವಿಧಿಸಿತ್ತು. ಇಂದು ಸಿರಿಯಾದಲ್ಲಿ ಮಾಜಿ ಭಯೋತ್ಪಾದಕರನ್ನು ಅಮೇರಿಕಾ ಅಧ್ಯಕ್ಷ ಟ್ರಂಪ್ ಭೇಟಿಯಾದ ಬಳಿಕ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಇಂದು ಅಮೇರಿಕಾ ಅಧ್ಯಕ್ಷ ಡೋನಾಲ್ಡ್ ಟ್ರಂಪ್ ಅವರು ಸಿರಿಯಾದಲ್ಲಿ ಮಾಜಿ ಭಯೋತ್ಪಾದಕರನ್ನು ಭೇಟಿಯಾಗಿದ್ದರು. ಮಾಜಿ ಉಗ್ರ ಹಾಗೂ ಸಿರಿಯನ್ ಅಧ್ಯಕ್ಷರನ್ನು ಭೇಟಿಯಾಗಿದ್ದರು. ಸಿರಿಯನ್ ಅಧ್ಯಕ್ಷ ಅಹ್ಮದ್ ಅಲ್-ಶರಾ ಮಾಜಿ ಉಗ್ರನಾಗಿದ್ದನು. ಸಿರಿಯನ್ ಮಾಜಿ ಅಧ್ಯಕ್ಷ ಉಗ್ರ ಅಹ್ಮದ್ ಅಲ್-ಶರಾ ಭೇಟಿಯಾಗಿ ಮಾತುಕತೆ ನಡೆಸಿದ ಬಳಿಕ ಅಮೇರಿಕಾ ಅಧ್ಯಕ್ಷ ಟ್ರಂಪ್ ಅವರು ಸಿರಿಯಾ ಮೇಲೆ ವಿಧಿಸಿದ್ದಂತ ಎಲ್ಲಾ ನಿರ್ಬಂಧ ತೆರವುಗೊಳಿಸಿದ್ದಾರೆ.
ನವದೆಹಲಿ: ಮೇ 13, ಮಂಗಳವಾರ ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ನಲ್ಲಿ ಭಾರತೀಯ ಸೇನೆಯು ‘ಆಪರೇಷನ್ ಕೆಲ್ಲರ್’ ಮೂಲಕ ಮೂವರು ಲಷ್ಕರ್-ಎ-ತೈಬಾ (ಎಲ್ಇಟಿ) ಭಯೋತ್ಪಾದಕರನ್ನು ಹೊಡೆದುರುಳಿಸಿದ ನಂತರ ಬೃಹತ್ ಪ್ರಮಾಣದ ಶಸ್ತ್ರಾಸ್ತ್ರ ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಹತರಾದ ಭಯೋತ್ಪಾದಕರಿಗೆ ಸೇರಿದ ಬೆನ್ನುಹೊರೆಯ ಚೀಲಗಳು ಮತ್ತು ಕೈಚೀಲಗಳ ಜೊತೆಗೆ ಹಲವಾರು ರೈಫಲ್ಗಳು, ಗ್ರೆನೇಡ್ಗಳು ಮತ್ತು ಮದ್ದುಗುಂಡುಗಳನ್ನು ವಶಪಡಿಸಿಕೊಳ್ಳುವುದನ್ನು ವೀಡಿಯೊ ತೋರಿಸುತ್ತದೆ. https://twitter.com/PTI_News/status/1922541202336817428 ದೇಶದ ಯಶಸ್ವಿ ಮತ್ತು ನಡೆಯುತ್ತಿರುವ ಆಪರೇಷನ್ ಸಿಂದೂರ್ ಮಧ್ಯೆ ಭಯೋತ್ಪಾದಕರ ವಿರುದ್ಧ ಭಾರತೀಯ ಸೇನೆಯು ಮತ್ತೊಂದು ಮಿಲಿಟರಿ ಕಾರ್ಯಾಚರಣೆಯನ್ನು ಆಪರೇಷನ್ ಕೆಲ್ಲರ್ ಎಂದು ಕರೆಯಲಾಗುತ್ತದೆ. ಪಾಕಿಸ್ತಾನ ಬೆಂಬಲಿತ ಭಯೋತ್ಪಾದನೆಯನ್ನು ಗುರಿಯಾಗಿಸಲು ಭಾರತೀಯ ಪಡೆಗಳು ಮೇ 7 ರಂದು ಆಪರೇಷನ್ ಸಿಂದೂರ್ ಅನ್ನು ಪ್ರಾರಂಭಿಸಿದರೆ, ಜಮ್ಮು ಮತ್ತು ಕಾಶ್ಮೀರದ ಶೋಪಿಯಾನ್ ಜಿಲ್ಲೆಯಲ್ಲಿ ಭಯೋತ್ಪಾದಕರ ಉಪಸ್ಥಿತಿಯ ಬಗ್ಗೆ ಗುಪ್ತಚರ ಮಾಹಿತಿ ಪಡೆದ ನಂತರ ಭಾರತೀಯ ಸೇನೆಯು ಮೇ 13 ರಂದು ಆಪರೇಷನ್ ಕೆಲ್ಲರ್ ಅನ್ನು ಪ್ರಾರಂಭಿಸಿತು. ಆಪರೇಷನ್ ಕೆಲ್ಲರ್ ಅಡಿಯಲ್ಲಿ, ಶೋಪಿಯಾನ್ನ ಶೋಕಲ್ ಕೆಲ್ಲರ್…
ಬೆಂಗಳೂರು: ನೀವು ಬಾಡಿಗೆ ಮನೆಯಲ್ಲಿದ್ದರೂ, ಮನೆ ಬದಲಿಸಿದ ನಂತ್ರ, ಹೊಸದಾಗಿ ತೆರಳಿದಂತ ಬಾಡಿಗೆ ಮನೆಗೂ ಗೃಹಜ್ಯೋತಿ ಯೋಜನೆಯ ಸೌಲಭ್ಯ ಪಡೆಯಲು ಅವಕಾಶವಿದೆ. ಹಾಗಾದ್ರೆ ಅದು ಹೇಗೆ ಅಂತ ಮುಂದೆ ಓದಿ. ಈ ಬಗ್ಗೆ ಬೆಸ್ಕಾಂ ಮಾಹಿತಿ ಹಂಚಿಕೊಂಡಿದ್ದು, ನೀವು ಮನೆ ಬದಲಾಯಿಸಿದಲ್ಲಿ, ಹಳೆಯ ಮನೆಯ ಆರ್ ಆರ್ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಹೊಸ ಮನೆಯ ಆರ್ ಆರ್ ಸಂಖ್ಯೆಗೂ ಗೃಹ ಜ್ಯೋತಿ ಸೌಲಭ್ಯ ಪಡೆದುಕೊಳ್ಳಿ ಅಂತ ತಿಳಿಸಿದೆ. ಡಿ-ಲಿಂಕ್ ಮಾಡುವುದು ಹೇಗೆ.? ಮನೆ ಬದಲಿಸಿ ಹೊಸ ಮನೆಗೆ ತೆರಳಿದಾಗ ವಿದ್ಯುತ್ ಗ್ರಾಹಕರು https://sevasindhugs.karnataka.gov.in/ ಜಾಲ ತಾಣಕ್ಕೆ ಭೇಟಿ ನೀಡಬೇಕು. ಹಳೆಯ ಮನೆಯ ಆರ್ ಆರ್ ಸಂಖ್ಯೆಯನ್ನು ಇಲ್ಲಿ ಕೇಳುವ ಮಾಹಿತಿ ನೀಡಿ ಡಿ-ಲಿಂಕ್ ಮಾಡಿ. ಆ ಬಳಿಕ ಹೊಸ ಮನೆಯ ಆರ್ ಆರ್ ಲಿಂಕ್ ನಮೂದಿಸಿ ಗೃಹ ಜ್ಯೋತಿಗೆ ಲಿಂಕ್ ಮಾಡಬಹುದಾಗಿದೆ. ಅಂದಹಾಗೇ ರಾಜ್ಯಾಧ್ಯಂತ ಈ ಮಾದರಿಯ 2,83,291 ಡಿ-ಲಿಂಕ್ ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಬೆಸ್ಕಾಂ ವ್ಯಾಪ್ತಿಯಲ್ಲೇ 2,14,456 ಅರ್ಜಿಗಳನ್ನು ಸ್ವೀಕರಿಸಲಾಗಿದೆ ಎಂದು…
ಚಿತ್ರದುರ್ಗ : ಚಳ್ಳಕೆರೆ ನಗರದ ಪಾವಗಡ ರಸ್ತೆಯ ಸರ್ಕಾರಿ ಕೈಗಾರಿಕಾ ತರಬೇತಿ ಸಂಸ್ಥೆಯಲ್ಲಿ 2025-26ನೇ ಸಾಲಿನ ಪ್ರವೇಶಾತಿಗೆ ಇಎಂ, ಫಿಟ್ಟರ್, ವೆಲ್ಡರ್, ಎಂ ಇ ವಿ, ಸಿಎನ್ಸಿ ಹಾಗೂ ಇತರೆ ವೃತ್ತಿಗಳಿಗೆ ಎಸ್ ಎಸ್ ಎಲ್ ಸಿ ಪಾಸಾದಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪ್ರಯುಕ್ತ ಅರ್ಹ ಅಭ್ಯರ್ಥಿಗಳು ಇದರ ಪಡೆದುಕೊಳ್ಳಲು ಕೋರಿದೆ. ಅರ್ಜಿ ಸಲ್ಲಿಕೆ ಈಗಾಗಲೇ ಮೇ 09 ರಿಂದ ಪ್ರಾರಂಭವಾಗಿದ್ದು, ಮೇ. 28 ರವರೆಗೆ ಆನ್ಲೈನ್ www.cite.karnataka.gov.in ಇಲ್ಲಿಗೆ ಲಾಗಿನ್ ಆಗಿ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಸಂಸ್ಥೆಯ ಪ್ರಾಚಾರ್ಯ ಬಿ.ಎಂ.ಬಸವಣ್ಣ ತಿಳಿಸಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9900398732, 8748884498, 9902372315 ಗೆ ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಬೆಂಗಳೂರು: ಭಾರತೀಯ ಸೇನೆ 100 ಕ್ಕೂ ಅಧಿಕ ಭಯೋತ್ಪಾದಕರನ್ನು ನಾಶ ಮಾಡಿದೆ. ಕದನ ವಿರಾಮ ಘೋಷಣೆಯಾದ ಸಮಯದಲ್ಲಿ ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಹೇಳಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ನಾಯಕರು ಒಡಕು ಮಾತುಗಳನ್ನು ಆಡಬಾರದು. ಯುದ್ಧಕ್ಕೆ ಮುನ್ನ ಶಾಂತಿಯ ಮಾತು ಆಡುತ್ತಾರೆ, ಕದನ ವಿರಾಮವಾದಾಗ ಯುದ್ಧ ನಿಲ್ಲಿಸಿದ್ದೇಕೆ ಎಂದು ಪ್ರಶ್ನಿಸುತ್ತಾರೆ. ಜೊತೆಗೆ ಅಧಿವೇಶನ ನಡೆಸಬೇಕೆಂದು ಕೇಳುತ್ತಾರೆ. ಆದರೆ ಇದು ಅಧಿವೇಶನ ನಡೆಸುವ ಸಮಯವಲ್ಲ. ನಮ್ಮ ಯೋಧರು ಸಾಕ್ಷಿಗಳನ್ನು ನೀಡಿದ್ದಾರೆ. ಇನ್ನು ಮುಂದೆ ಯಾರೂ ಸಾಕ್ಷಿ ಕೇಳಬಾರದು. ಪಾಕ್ ಆಕ್ರಮಿತ ಕಾಶ್ಮೀರವನ್ನು ವಾಪಸ್ ಪಡೆಯುವ ಬಗ್ಗೆ, ಸಿಂದೂ ನದಿ ಒಪ್ಪಂದದ ಬಗ್ಗೆ ಪ್ರಧಾನಿ ಮೋದಿ ಈಗಾಗಲೇ ಸ್ಪಷ್ಟ ಸಂದೇಶ ನೀಡಿದ್ದಾರೆ ಎಂದರು. ಈ ಸಂದರ್ಭದಲ್ಲಿ ಕಾಂಗ್ರೆಸ್ನವರು ರಾಜಕಾರಣ ಮಾಡುವುದು ಬಿಟ್ಟು ಯೋಧರಿಗೆ ಬೆಂಬಲ ನೀಡಬೇಕು. ಈ ಹಿಂದೆ ಪಿಒಕೆ ಬಿಟ್ಟುಕೊಟ್ಟಿದ್ದು, ಮುಂಬೈ ದಾಳಿ ಮೊದಲಾದವುಗಳ ಬಗ್ಗೆ ನಾವೇನೂ ಪ್ರಶ್ನೆ ಮಾಡುತ್ತಿಲ್ಲ. ಈ ಘಟನೆಗೆ ಇಂದಿರಾಗಾಂಧಿಯವರ…
ಬೆಂಗಳೂರು: ಪಾಕಿಸ್ತಾನ ಭಯೋತ್ಪಾದಕರ ನಾಡು ಎಂಬುದನ್ನು ಈಗಾಗಲೇ ಸಾಬೀತುಪಡಿಸಲಾಗಿದೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕÀ ಛಲವಾದಿ ನಾರಾಯಣಸ್ವಾಮಿ ಅವರು ತಿಳಿಸಿದ್ದಾರೆ. ರಾಜ್ಯ ಬಿಜೆಪಿ ಕಾರ್ಯಾಲಯÀ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಭಾರತವು ಬಹುಕಾಲದಿಂದ ಭಯೋತ್ಪಾದನೆ ವಿರುದ್ಧ ಹೋರಾಟ ಮಾಡುತ್ತ ಬಂದಿದೆ. ಇನ್ನೊಂದೆಡೆ ಪಾಕಿಸ್ತಾನವು, ತಮಗೂ ಭಯೋತ್ಪಾದಕರಿಗೂ ಸಂಬಂಧ ಇಲ್ಲ; ಅವರು ನಮ್ಮ ನೆಲದಲ್ಲಿ ಇಲ್ಲವೆಂದು ಅನೇಕ ಬಾರಿ ಹೇಳಿತ್ತು. ಆದರೆ, ಈಗ ಸಾಕ್ಷಿ ಸಮೇತ ಸಿಕ್ಕಿ ಬಿದ್ದಿದೆ. ಭಯೋತ್ಪಾದಕರ ನೆಲೆಗಳನ್ನು ಧ್ವಂಸ ಮಾಡಿದಾಗ ಯಾವ ಉಗ್ರರು ಸತ್ತು ಬಿದ್ದರೋ ಅವರನ್ನು ಅಲ್ಲಿನ ಸರಕಾರ ಮತ್ತು ಮಿಲಿಟರಿ ಎರಡೂ ಸೇರಿ ಗೌರವ ಕೊಡುವ ರೀತಿಯಲ್ಲಿ ಅಂತ್ಯಕ್ರಿಯೆಯನ್ನು ಮಾಡಿದ್ದು ಇಡೀ ಪ್ರಪಂಚ ನೋಡಿದೆ ಎಂದು ವಿವರಿಸಿದರು. ಇದಾದ ಬಳಿಕ ಪಾಕಿಸ್ತಾನ ನಮ್ಮ ಮೇಲೆ ಯುದ್ಧ ಮಾಡಲು ಪ್ರಾರಂಭಿಸಿತ್ತು. ಇದಕ್ಕೆ ಪ್ರತ್ಯುತ್ತರವಾಗಿ ನಮ್ಮ ಸೈನಿಕರು ಕೂಡ ಅವರ ಮೇಲೆ ಯುದ್ಧ ಅನಿವಾರ್ಯ ಎಂಬ ಪರಿಸ್ಥಿತಿ ನಿರ್ಮಾಣವಾಗಿತ್ತು. ಅವರು ಬಿಟ್ಟಿದ್ದ ಕ್ಷಿಪಣಿಗಳನ್ನು ನಮ್ಮ…
ನವದೆಹಲಿ: ಪಾಕ್ ಹೈಕಮಿಷನ್ ಅಧಿಕಾರಿಗೆ ‘ಪರ್ಸನಾ ನಾನ್ ಗ್ರಾಟಾ’ ಘೋಷಣೆ ಮಾಡಿದೆ. ಅಲ್ಲದೇ 24 ಗಂಟೆಗಳಲ್ಲಿ ಭಾರತ ತೊರೆಯಲು ಸೂಚನೆ ನೀಡಿದೆ. ನವದೆಹಲಿಯಲ್ಲಿರುವ ಪಾಕಿಸ್ತಾನ ಹೈಕಮಿಷನ್ನಲ್ಲಿ ಕೆಲಸ ಮಾಡುತ್ತಿರುವ ಪಾಕಿಸ್ತಾನಿ ಅಧಿಕಾರಿಯೊಬ್ಬರು ಭಾರತದಲ್ಲಿನ ತಮ್ಮ ಅಧಿಕೃತ ಸ್ಥಾನಮಾನಕ್ಕೆ ಹೊಂದಿಕೆಯಾಗದ ಚಟುವಟಿಕೆಗಳಲ್ಲಿ ತೊಡಗಿದ್ದಕ್ಕಾಗಿ ಭಾರತ ಸರ್ಕಾರ ಅವರನ್ನು ಗ್ರಾನಾ ನಾನ್ ಗ್ರಾಟಾ ಎಂದು ಘೋಷಿಸಿದೆ. ಆ ಅಧಿಕಾರಿಯನ್ನು 24 ಗಂಟೆಗಳ ಒಳಗೆ ಭಾರತವನ್ನು ತೊರೆಯುವಂತೆ ಕೇಳಲಾಗಿದೆ. ಈ ಕುರಿತು ಇಂದು ಪಾಕಿಸ್ತಾನ ಹೈಕಮಿಷನ್ನ ಚಾರ್ಜ್ ಡಿ ಅಫೇರ್ಸ್ಗೆ ವಿದೇಶಾಂಗ ಸಚಿವಾಲಯವು ಆದೇಶ ಹೊರಡಿಸಲಾಗಿದೆ. https://twitter.com/ANI/status/1922305432632328302 https://kannadanewsnow.com/kannada/india-has-launched-the-e-passport-service-with-a-chip/














