Subscribe to Updates
Get the latest creative news from FooBar about art, design and business.
Author: kannadanewsnow09
BREAKING: ಬೆಂಗಳೂರಿಗೆ RCB ತಂಡ ಆಗಮನ: ವಿರಾಟ್ ಕೊಹ್ಲಿಗೆ ಕನ್ನಡ ಭಾವುಟ ನೀಡಿ ಸ್ವಾಗತಿಸಿ ಡಿಸಿಎಂ ಡಿ.ಕೆ ಶಿವಕುಮಾರ್
ಬೆಂಗಳೂರು: ಐಪಿಎಲ್-2025ರ ಚಾಂಪಿಯನ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ಆಟಾಗರರು ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ಆಗಮಿಸಿದ್ದರು. ಈ ತಂಡದ ವಿರಾಟ್ ಕೊಹ್ಲಿ ಭೇಟಿಯಾದಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಕನ್ನಡ ಭಾವುಟ ನೀಡಿ ಆತ್ಮೀಯವಾಗಿ ಸ್ವಾಗತಿಸಿದರು. ಅಹಮದಾಬಾದ್ ನಿಂದ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಬಂದಿಳಿದಿದ್ದಾರೆ. ವಿಶೇಷ ವಿಮಾನದಲ್ಲಿ ಆಗಮಿಸಿದಂತ ಆರ್ ಸಿ ಬಿ ತಂಡವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದಂತ ಫೈನಲ್ ಪಂದ್ಯದಲ್ಲಿ 18 ವರ್ಷಗಳ ಬಳಿಕ ಆರ್ ಸಿ ಬಿ ಗೆಲುವು ಕಂಡಿತ್ತು. ಹೀಗಾಗಿ ರಾಜ್ಯ ಸರ್ಕಾರ ತಂಡದ ಆಟಗಾರರಿಗೆ ಸನ್ಮಾನಿಸಿ, ಅಭಿನಂದಿಸುವಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ವಿಧಾನಸೌಧದ ಬೃಹತ್ ಮೆಟ್ಟಿಲಿನ ಮೇಲೆ ಸಂಜೆ 4 ಗಂಟೆಗೆ ಆರ್ ಸಿ ಬಿ ತಂಡದ ಎಲ್ಲಾ ಆಟಗಾರರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸನ್ಮಾನಿಸಿ, ಅಭಿನಂದಿಸಲಿದ್ದಾರೆ. ಇದಕ್ಕೂ…
ಬೆಂಗಳೂರು: ನಿನ್ನೆ ಪಂಜಾಬ್ ಕಿಂಗ್ಸ್ ಹಾಕೂ ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ನಡೆದಂತ ಐಪಿಎಲ್-2025ರ ಫೈನಲ್ ಪಂದ್ಯಾವಳಿಯಲ್ಲಿ ಆರ್ ಸಿ ಬಿ ಗೆಲುವು ಕಂಡಿತ್ತು. ಈ ಹಿನ್ನಲೆಯಲ್ಲಿ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ವಿಕ್ಟರಿ ಸಮಾರಂಭವನ್ನು ಆಯೋಜಿಸಲಾಗಿದೆ. ಈ ಸಮಾರಂಭಕ್ಕೆ ತೆರಳೋದಕ್ಕೆ ಅಭಿಮಾನಿಗಳಿಗೆ ಆನ್ ಲೈನ್ ಮೂಲಕ ಖರೀದಿಸಲು ಟಿಕೆಟ್ ಬಿಡುಗಡೆ ಮಾಡಲಾಗಿದೆ. ಐಪಿಎಲ್ ಚಾಂಪಿಯನ್ ಆಸಿಬಿಯಿಂದ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ವಿಕ್ಟರಿ ಸಮಾರಂಭವನ್ನು ಆಯೋಜಿಸಲಾಗಿದೆ. ಬೆಂಗಳೂರಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯುವಂತ ಸಮಾರಂಭಕ್ಕೆ ತೆರಳಲು ಆನ್ ಲೈನ್ ಟಿಕೆಟ್ ಬಿಡುಗಡೆ ಮಾಡಲಾಗಿದೆ. ಜಿನಿ ಆಪ್ ನಲ್ಲಿ ಟಿಕೆಟ್ ಬುಕ್ ಮಾಡುವವರಿಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ಇಂದು ಸಂಜೆ 5 ಗಂಟೆಯಿಂದ 6ರವರೆಗೆ ನಡೆಯುವಂತ ಆರ್ ಸಿ ಬಿ ವಿಕ್ಟರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಅವಕಾಶ ನೀಡಲಾಗುತ್ತದೆ. ಟಿಕೆಟ್ ಇಲ್ಲದಿದ್ದರೇ ಸ್ಟೇಡಿಯಂ ಪ್ರವೇಶಕ್ಕೆ ಅವಕಾಶ ಇರುವುದಿಲ್ಲ. https://kannadanewsnow.com/kannada/minister-jameer-ahmad-gifted-a-bike-to-a-muslim-student-who-scored-125-out-of-125-in-sanskrit/ https://kannadanewsnow.com/kannada/pm-kisan-20th-installment-check-date-beneficiary-list-and-full-scheme-details/
ಬೆಂಗಳೂರು: ಮುಸ್ಲೀಂ ಸಮುದಾಯದ ವಿದ್ಯಾರ್ಥಿನಿಯಾಗಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಸಂಸ್ಕೃತದಲ್ಲಿ 125ಕ್ಕೆ 125 ಅಂಕ ತೆಗೆಯುವ ಮೂಲಕ ಮಹತ್ವದ ಸಾಧನೆ ಮಾಡಿದ್ದರು. ಇಂತಹ ವಿದ್ಯಾರ್ಥಿನಿಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ಬೈಕ್ ಗಿಫ್ಟ್ ನೀಡಿ ಪ್ರೋತ್ಸಾಹಿಸಿದ್ದಾರೆ. ಇಂದು ಚಾಮರಾಜನಗರದಲ್ಲಿ ನಡೆದಂತ ಸಮಾರಂಭದಲ್ಲಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 125ಕ್ಕೆ 125 ಅಂಕ ತೆಗೆದಿದ್ದಂತ ವಿದ್ಯಾರ್ಥಿನಿ ಜೈನಾಬ್ ಬೇಗಂ ಅವರಿಗೆ ವೈಯಕ್ತಿಕವಾಗಿ ಸಚಿವ ಜಮೀರ್ ಅಹ್ಮದ್ ಖಾನ್ ಅವರು ದ್ವಿಚಕ್ರ ವಾಹನ ಹಾಗೂ 1 ಲಕ್ಷ ನೀಡಿ ಸನ್ಮಾನಿಸಿದರು. https://twitter.com/BZZameerAhmedK/status/1930195858143805620 ಇನ್ನೂ ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ 625ಕ್ಕೆ 625 ಅಂಕಗಳನ್ನು ಗಳಿಸಿದ ಚಾಮರಾಜಪೇಟೆಯ ವಿದ್ಯಾರ್ಥಿನಿ ಶಗುಫ್ತಾ ಅಂಜುಮ್ ಗೆ ಸಚಿವ ಜಮೀರ್ ಅಹ್ಮದ್ ಖಾನ್ ಅವರು ವೈಯಕ್ತಿಕವಾಗಿ ಸನ್ಮಾನಿಸಿ ದ್ವಿಚಕ್ರ ವಾಹನದ ಜೊತೆಗೆ 1 ಲಕ್ಷ ನೀಡಿ ಗೌರವಿಸಿದರು. https://twitter.com/BZZameerAhmedK/status/1930197336031986061 ಈ ವೇಳೆ ಮಾತನಾಡಿದಂತ ಅವರು ಮುಸ್ಲೀಂ ವಿದ್ಯಾರ್ಥಿನಿಯಾಗಿ ಸಂಸ್ಕೃತದಲ್ಲಿ ಇಷ್ಟು ಅಂಕ ತೆಗೆದಿರುವುದು ಸಂತಸ, ಹೆಮ್ಮೆಯ ವಿಚಾರವಾಗಿದೆ. ಮುಂದೆ…
ಬೆಂಗಳೂರು: ವಿಧಾನಸೌಧದ ಮುಂಭಾಗದಲ್ಲಿ ಇಂದು ಸಂಜೆ 4 ಗಂಟೆಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಸನ್ಮಾನಿಸಿ, ಗೌರವಿಸಲಾಗುತ್ತಿದೆ. ಈ ವೇಳೆಯಲ್ಲಿ ವಿಧಾನಸೌಧದ ಮುಂದೆ ಆರ್ ಸಿ ಬಿ ಅಭಿಮಾನಿಗಳ ದಾಧಲೆಯೇ ನಡೆಯುತ್ತಿದೆ. ಬ್ಯಾರಿಕೇಡ್ ಹತ್ತಿ ವಿಧಾನಸೌಧದ ಒಳಗೆ ನುಗ್ಗೋದಕ್ಕೆ ಯತ್ನಿಸುತ್ತಿದ್ದಾರೆ. ಹೀಗಾಗಿ ಪೊಲೀಸರು ಫ್ಯಾನ್ಸ್ ಕಂಟ್ರೋಲ್ ಮಾಡಲು ಹರಸಾಹಸ ಪಡುವಂತೆ ಆಗಿದೆ. ಇಂದು ಮಾತನಾಡಿದ್ದಂತ ಗೃಹ ಸಚಿವ ಡಾ.ಜಿ ಪರಮೇಶ್ವರ್ ಅವರು, ಆರ್ಸಿಬಿ ತಂಡ ಗೆದ್ದಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರು ಆಡಿದ ಮಾತುಗಳು ನಿಜಕ್ಕು ಹೆಮ್ಮೆ ಎನಿಸುತ್ತದೆ. 18 ವರ್ಷಗಳಿಂದ ಸತತ ಆರಸಿಬಿ ತಂಡಕ್ಕೆ ನಿಷ್ಠೆಯಾಗಿ ಆಡಿರುವುದು ಎಲ್ಲ ಕ್ರೀಡಾಪಟುಗಳಿಗೆ ಉತ್ತಮ ಸಂದೇಶ ಕೊಡುತ್ತದೆ. ಬೆಂಗಳೂರಿನ ಬಗ್ಗೆ ಭಾವನಾತ್ಮಕ ನಂಟಿನ ಬಗ್ಗೆ ಅವರು ಹೇಳಿರುವುದು ಸಂತೋಷ ತಂದಿದೆ ಎಂದಿದ್ದರು. ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಆರ್ಸಿಬಿ ತಂಡಕ್ಕೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗುವುದು. ಎಲ್ಲ ಆಟಗಾರರು ಬಸ್ನಲ್ಲಿ ಬರುತ್ತಾರೆ. ಕಾರ್ಯಕ್ರಮ ಮುಗಿದ ಬಳಿಕ ಬಸ್ನಲ್ಲೇ…
ಶಿವಮೊಗ್ಗ: ಜಿಲ್ಲೆಯ ಸೊರಬದ ಸಾರ್ವಜನಿಕ ಆಸ್ಪತ್ರೆಯಲ್ಲಿ ನಾಳೆ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಸೊರಬ ಸಾರ್ವಜನಿಕ ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪ್ರಭು ಸಾಹುಕಾರ್ ವಿನಂತಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ನಾಳೆ ವಿಶ್ವ ಪರಿಸರ ದಿನದ ಅಂಗವಾಗಿ ಬೃಹತ್ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಬೆಳಗ್ಗೆ 9ರಿಂದ ಸಂಜೆ 3 ಗಂಟೆಯವರೆಗೆ ನಡೆಯಲಿದೆ ಎಂದು ತಿಳಿಸಿದ್ದಾರೆ. ಕನಿಷ್ಠ 45 ಕೆಜಿ ತೂಕವಿರುವಂತ ಆರೋಗ್ಯವಂತ ವ್ಯಕ್ತಿಗಳು ರಕ್ತದಾನ ಮಾಡಬಹುದು 18 ರಿಂದ 60 ವರ್ಷದ ಒಳಗಿನ ಎಲ್ಲರೂ ರಕ್ತವನ್ನು ನೀಡಬಹುದು. ಈ ಕಾರ್ಯಕ್ರಮದಲ್ಲಿ ಭಾಗಿಯಾಗಿ ರಕ್ತದಾನ ಮಾಡುವಂತೆ ಸಾರ್ವಜನಿಕರಲ್ಲಿ ಮನವಿ ಮಾಡಿದ್ದಾರೆ. ಇನ್ನೂ ಒಂದು ವರ್ಷದಿಂದ ಈಚೆಗೆ ಮಲೇರಿಯಾ, ಟೈಪೈಡ್, ಜಾಂಡೀಸ್ ಖಾಯಿಲೆಗೆ ಒಳಗಾದವರು ರಕ್ತ ನೀಡಬಾರದು. ಒಂದು ವರ್ಷದ ಈಚೆಗೆ ಶಸ್ತ್ರ ಚಿಕಿತ್ಸೆಗೆ ಒಳಗಾದವರು, ಗರ್ಭಿಣಿ ಸ್ತ್ರೀಯರು, ಹಾಲುಣಿಸುವಂತ ತಾಯಂದಿರು, ಋತುಸ್ರಾವದಲ್ಲಿರುವಂತ ಸ್ತ್ರೀಯರು ರಕ್ತ ನೀಡಬಾರದು ಎಂದು ಮಾಹಿತಿ ಹಂಚಿಕೊಂಡಿದ್ದಾರೆ.…
ಬೆಂಗಳೂರು: ಅಹಮದಾಬಾದಿನ ಮೋದಿ ಕ್ರೀಢಾಂಗಣದಲ್ಲಿ ನಡೆದಂತ ಐಪಿಎಲ್-2025ರ ಫೈನಲ್ ಪಂದ್ಯಾವಳಿಯಲ್ಲಿ ಆರ್ ಸಿ ಬಿ ಭರ್ಜರಿ ಗೆಲುವು ಸಾಧಿಸಿತ್ತು. ಈ ಬಳಿಕ ಬೆಂಗಳೂರಲ್ಲಿ ಸರ್ಕಾರದಿಂದ ನಿಗದಿ ಪಡಿಸಲಾಗಿರುವಂತ ಸನ್ಮಾನ ಕಾರ್ಯಕ್ರಮದಲ್ಲಿ ಭಾಗಿಯಾಗಲು ಆಗಮಿಸಿದ್ದಾರೆ. ಇಂತಹ ಆರ್ ಸಿ ಬಿ ಆಟಗಾರರನ್ನು ಅಭಿಮಾನಿಗಳು ಅದ್ಧೂರಿಯಾಗಿ ಸ್ವಾಗತಿಸಿದರು. ಅಹಮದಾಬಾದ್ ನಿಂದ ಬೆಂಗಳೂರಿನ ಹೆಚ್ ಎ ಎಲ್ ವಿಮಾನ ನಿಲ್ದಾಣಕ್ಕೆ ವಿಶೇಷ ವಿಮಾನದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಆಟಗಾರರು ಬಂದಿಳಿದಿದ್ದಾರೆ. ವಿಶೇಷ ವಿಮಾನದಲ್ಲಿ ಆಗಮಿಸಿದಂತ ಆರ್ ಸಿ ಬಿ ತಂಡವನ್ನು ಅದ್ಧೂರಿಯಾಗಿ ಸ್ವಾಗತಿಸಲಾಗಿದೆ. ಪಂಜಾಬ್ ಕಿಂಗ್ಸ್ ವಿರುದ್ಧ ನಿನ್ನೆ ನಡೆದಂತ ಫೈನಲ್ ಪಂದ್ಯದಲ್ಲಿ 18 ವರ್ಷಗಳ ಬಳಿಕ ಆರ್ ಸಿ ಬಿ ಗೆಲುವು ಕಂಡಿತ್ತು. ಹೀಗಾಗಿ ರಾಜ್ಯ ಸರ್ಕಾರ ತಂಡದ ಆಟಗಾರರಿಗೆ ಸನ್ಮಾನಿಸಿ, ಅಭಿನಂದಿಸುವಂತ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಬೆಂಗಳೂರಿನ ವಿಧಾನಸೌಧದ ಬೃಹತ್ ಮೆಟ್ಟಿಲಿನ ಮೇಲೆ ಸಂಜೆ 4 ಗಂಟೆಗೆ ಆರ್ ಸಿ ಬಿ ತಂಡದ ಎಲ್ಲಾ ಆಟಗಾರರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಸನ್ಮಾನಿಸಿ,…
ಬೆಂಗಳೂರು: 2025 ರ ಐಪಿಎಲ್ ಗೆಲುವಿನ ನಂತರ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ವಿಜಯೋತ್ಸವ ಮೆರವಣಿಗೆಯನ್ನು ಬೆಂಗಳೂರಿನಲ್ಲಿ ರದ್ದುಗೊಳಿಸಲಾಗಿದೆ. 18 ವರ್ಷಗಳ ದೀರ್ಘ ಕಾಯುವಿಕೆಯ ನಂತರ ಪ್ರೀತಿ ಜಿಂಟಾ ಅವರ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಂತಿಮವಾಗಿ ಜಿಂಕ್ಸ್ ಅನ್ನು ಮುರಿದು ಐಪಿಎಲ್ ಟ್ರೋಫಿಯನ್ನು ಎತ್ತಿಹಿಡಿಯಿತು. ಈ ತಂಡವನ್ನು ಬೆಂಗಳೂರಲ್ಲಿ ತೆರೆದ ವಾಹನದಲ್ಲಿ ಮೆರೆವಣಿ ಮಾಡುವ ಮೂಲಕ ವಿಜಯೋತ್ಸವ ಆಚರಿಸಲು ಸರ್ಕಾರ ತೀರ್ಮಾನಿಸಿತ್ತು. ಆದರೇ ಇದರಿಂದ ಬೆಂಗಳೂರಲ್ಲಿ ಸಂಚಾರ ದಟ್ಟಣೆ ಉಂಟಾಗಲಿದೆ. ಆರ್ ಸಿ ಬಿ ಆಟಗಾರರ ಭದ್ರತೆಯ ದೃಷ್ಠಿಯಿಂದಲೂ ಇದು ಸರಿಯಾದ ನಿರ್ಧಾರವಲ್ಲ ಎಂಬುದಾಗಿ ಪೊಲೀಸರು ಸರ್ಕಾರಕ್ಕೆ ಮನವರಿಕೆ ಮಾಡಿಕೊಟ್ಟಿದ್ದಾರೆ. ಈ ಹಿನ್ನಲೆಯಲ್ಲಿ ಆರ್ ಸಿಬಿ ತಂಡದ ವಿಜಯೋತ್ಸವ ಮೆರವಣಿಗೆ ರದ್ದುಗೊಳಿಸಲಾಗಿದೆ. ಇದರ ಬದಲಾಗಿ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಆರ್ ಸಿ ಬಿ ಆಟಗಾರರನ್ನು ಅಭಿನಂದಿಸುವಂತ ಸಮಾರಂಭವನ್ನು ಸರ್ಕಾರ ಆಯೋಜಿಸಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರು, ಇಂದು ಸಂಜೆ…
ಬೆಂಗಳೂರು: 18 ವರ್ಷಗಳ ನಂತರ ಐಪಿಎಲ್ ಚಾಂಪಿಯನ್ಶಿಪ್ ಆಗಿರುವ ಆರ್ಸಿಬಿ ತಂಡಕ್ಕೆ ನನ್ನ ಅಭಿನಂದನೆಗಳು. ವಿಶೇಷವಾಗಿ ವಿರಾಟ್ ಕೊಹ್ಲಿ ಅವರು ದೇಶಕ್ಕೆ ಮಾತ್ರವಲ್ಲದೇ, ಇಡೀ ವಿಶ್ವಕ್ಕೆ ಮಾದರಿ ಕ್ರೀಡಾಪಟುವಾಗಿ ಹೊರ ಹೊಮ್ಮಿರುವುದು ಸಂತೋಷದಾಯಕ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆರ್ಸಿಬಿ ತಂಡ ಗೆದ್ದಂತಹ ಸಂದರ್ಭದಲ್ಲಿ ವಿರಾಟ್ ಕೊಹ್ಲಿ ಅವರು ಆಡಿದ ಮಾತುಗಳು ನಿಜಕ್ಕು ಹೆಮ್ಮೆ ಎನಿಸುತ್ತದೆ. 18 ವರ್ಷಗಳಿಂದ ಸತತ ಆರಸಿಬಿ ತಂಡಕ್ಕೆ ನಿಷ್ಠೆಯಾಗಿ ಆಡಿರುವುದು ಎಲ್ಲ ಕ್ರೀಡಾಪಟುಗಳಿಗೆ ಉತ್ತಮ ಸಂದೇಶ ಕೊಡುತ್ತದೆ. ಬೆಂಗಳೂರಿನ ಬಗ್ಗೆ ಭಾವನಾತ್ಮಕ ನಂಟಿನ ಬಗ್ಗೆ ಅವರು ಹೇಳಿರುವುದು ಸಂತೋಷ ತಂದಿದೆ ಎಂದರು. ಇಂದು ಸಂಜೆ 4 ಗಂಟೆಗೆ ವಿಧಾನಸೌಧದ ಬೃಹತ್ ಮೆಟ್ಟಿಲುಗಳ ಮೇಲೆ ಆರ್ಸಿಬಿ ತಂಡಕ್ಕೆ ಸರ್ಕಾರದ ಪರವಾಗಿ ಅಭಿನಂದನೆಗಳನ್ನು ಸಲ್ಲಿಸಲಾಗುವುದು. ಎಲ್ಲ ಆಟಗಾರರು ಬಸ್ನಲ್ಲಿ ಬರುತ್ತಾರೆ. ಕಾರ್ಯಕ್ರಮ ಮುಗಿದ ಬಳಿಕ ಬಸ್ನಲ್ಲೇ ವಾಪಸ್ ಚಿನ್ನಸ್ವಾಮಿ ಸ್ಟೇಡಿಯಂಗೆ ಹೋಗುತ್ತಾರೆ. ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ…
ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಜುಲೈ 21 ರಂದು ಪ್ರಾರಂಭವಾಗಿ ಆಗಸ್ಟ್ 12 ರವರೆಗೆ ನಡೆಯಲಿದೆ. ಈ ಕುರಿತು ಮಾಹಿತಿ ನೀಡಿರುವಂತ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಅಧಿವೇಶನದ ಸಮಯದಲ್ಲಿ ಆಪರೇಷನ್ ಸಿಂಧೂರ್ ಕುರಿತು ಚರ್ಚೆ ನಡೆಯಲಿದೆ ಎಂದು ತಿಳಿಸಿದರು. ಪ್ರತಿ ಅಧಿವೇಶನವು ವಿಶೇಷವಾಗಿದೆ ಮತ್ತು ಆಪರೇಷನ್ ಸಿಂಧೂರ್ ಸೇರಿದಂತೆ ಎಲ್ಲಾ ವಿಷಯಗಳನ್ನು ನಾವು ಚರ್ಚಿಸುತ್ತೇವೆ ಎಂದು ರಿಜಿಜು ಹೇಳಿದರು. ಸರ್ಕಾರವು ಎಲ್ಲರನ್ನೂ ಮಂಡಳಿಯಲ್ಲಿ ತೆಗೆದುಕೊಳ್ಳಬೇಕೆಂದು ಬಯಸುತ್ತದೆ. ನಾವು ವಿರೋಧ ಪಕ್ಷದ ಬಳಿಗೆ ಹೋಗಿದ್ದೇವೆ ಮತ್ತು ಎಲ್ಲರೂ ಒಗ್ಗಟ್ಟಿನ ನಿಲುವನ್ನು ತೆಗೆದುಕೊಳ್ಳುತ್ತಾರೆ ಎಂದು ನಾವು ಭಾವಿಸುತ್ತೇವೆ ಎಂದರು. 23 ದಿನಗಳ ಕಾಲ ನಡೆಯಲಿರುವ ಈ ಅಧಿವೇಶನದಲ್ಲಿ ಪ್ರಮುಖ ಶಾಸಕಾಂಗ ಮಸೂದೆಗಳ ಪರಿಚಯ, ರಾಷ್ಟ್ರೀಯ ಭದ್ರತೆ, ಆರ್ಥಿಕತೆ ಮತ್ತು ಆಪರೇಷನ್ ಸಿಂಧೂರ್ನಂತಹ ಇತ್ತೀಚಿನ ರಾಷ್ಟ್ರೀಯ ಬೆಳವಣಿಗೆಗಳ ಕುರಿತು ಚರ್ಚೆಗಳು ನಡೆಯುವ ನಿರೀಕ್ಷೆಯಿದೆ. https://TWITTER.com/ANI/status/1930170590809223208
ನವದೆಹಲಿ: ಸಂಸತ್ತಿನ ಮಳೆಗಾಲದ ಅಧಿವೇಶನ ಜುಲೈ 21 ರಿಂದ ಪ್ರಾರಂಭವಾಗಿ ಆಗಸ್ಟ್ 12 ರವರೆಗೆ ನಡೆಯಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ಬುಧವಾರ ಘೋಷಿಸಿದ್ದಾರೆ. ಮೂರು ತಿಂಗಳಿಗೂ ಹೆಚ್ಚಿನ ವಿರಾಮದ ನಂತರ ಸಂಸತ್ತಿನ ಉಭಯ ಸದನಗಳು ಜುಲೈ 21 ರಂದು ಬೆಳಿಗ್ಗೆ 11 ಗಂಟೆಗೆ ಸಭೆ ಸೇರಲಿವೆ. ಈ ವರ್ಷದ ಜನವರಿ 31 ರಂದು ಸಂಸತ್ತಿನ ಬಜೆಟ್ ಅಧಿವೇಶನ ಪ್ರಾರಂಭವಾಯಿತು. 2025 ರ ಮೊದಲ ಸಂಸತ್ ಅಧಿವೇಶನವನ್ನು ಮುಕ್ತಾಯಗೊಳಿಸುವ ಮೂಲಕ ಏಪ್ರಿಲ್ 4 ರಂದು ಲೋಕಸಭೆ ಮತ್ತು ರಾಜ್ಯಸಭೆ ಎರಡನ್ನೂ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಒಂಬತ್ತು ಭಯೋತ್ಪಾದಕ ತಾಣಗಳನ್ನು ಭಾರತ ಹೊಡೆದುರುಳಿಸಿದ ಮಿಲಿಟರಿ ವ್ಯಾಯಾಮವಾದ ಆಪರೇಷನ್ ಸಿಂದೂರ್ ಬಗ್ಗೆ ಚರ್ಚಿಸಲು ವಿರೋಧ ಪಕ್ಷದ ನಾಯಕರು ವಿಶೇಷ ಸಂಸತ್ತಿನ ಅಧಿವೇಶನಕ್ಕೆ ಒತ್ತಾಯಿಸಿದ ಬೆನ್ನಲ್ಲೇ, ಮಳೆಗಾಲದ ಅಧಿವೇಶನದ ದಿನಾಂಕ ಘೋಷಣೆಯಾಗಿದೆ. https://twitter.com/ANI/status/1930170590809223208













