Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಗ್ರಾಮ ಪಂಚಾಯತಿ ಅರಿವು ಕೇಂದ್ರದ ಮೂಲಕ ಗ್ರಾಮೀಣ ಮಕ್ಕಳ ಬೇಸಿಗೆ ಶಿಬಿರಗಳನ್ನು ನಡೆಸಲು ಗ್ರಾಮಪಂಚಾಯತಿಗಳನ್ನು ಸಜ್ಜುಗೊಳಿಸಲಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿಬ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಶಾಲೆಗಳಿಗೆ ಬೇಸಿಗೆ ರಜೆ ಆರಂಭಗೊಂಡಿದ್ದು, ಬೇಸಿಗೆ ರಜೆ ಅಂತ್ಯಗೊಳ್ಳುವವರೆಗೆ ಏಪ್ರಿಲ್ 2025- ಮೇ 2025ರ ಮಾಹೆಯಲ್ಲಿ ಶಿಬಿರಗಳನ್ನು ಆಯೋಜಿಸಲಾಗುವುದು ಎಂದು ಹೇಳಿರುವ ಸಚಿವರು ಗ್ರಾಮ ಪಂಚಾಯತಿ ಅರಿವು ಕೇಂದ್ರದಲ್ಲಿ ಹಲವು ಮಕ್ಕಳ ಸ್ನೇಹಿ ಚಟುವಟಿಕೆಗಳನ್ನು ಈಗಾಗಲೇ ಹಮ್ಮಿಕೊಳ್ಳಲಾಗಿದೆ, ಮುಂದುವರೆದ ಭಾಗವಾಗಿ ಗ್ರಾಮ ಪಂಚಾಯತಿ ನೇತೃತ್ವದಲ್ಲಿ ಮಕ್ಕಳಿಗೆ ಬೇಸಿಗೆ ಶಿಬಿರವನ್ನು ಅರಿವು ಕೇಂದ್ರಗಳ ಮೂಲಕ ಶಾಲೆಗಳ ಬೇಸಿಗೆ ರಜೆಯ ಸಮಯದಲ್ಲಿ ಆಯೋಜಿಸಲು ನಿರ್ಧರಿಸಲಾಗಿದೆ, ಶಿಬಿರದ ನಿರ್ವಹಣೆಯನ್ನು ಅರಿವು ಕೇಂದ್ರದ ಮೇಲ್ವಿಚಾರಕರು, ಗ್ರಾಮ ಪಂಚಾಯತಿ ಪುನರ್ವಸತಿ ಕಾರ್ಯಕರ್ತರು ಮತ್ತು ಗುರುತಿಸಿದ ಸ್ವಯಂ ಸೇವಕರೊಂದಿಗೆ ಪರಿಣಾಮಕಾರಿಯಾಗಿ ಆಯೋಜಿಸಲು ಕ್ರಮವಹಿಸಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ. ಹದಿನೈದು ದಿನಗಳ ಕಾಲ ಶಿಬಿರವನ್ನು ಆಯೋಜಿಸುವ ಮೂಲಕ ಓದುವ, ಬರೆಯುವ,…
ಬೆಂಗಳೂರು: ಸ್ಯಾಂಡಲ್ ವುಡ್ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಇಂದು ನಿಧನರಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ಮರಾಠ ಸಂಪ್ರದಾಯದಂತೆ ನೆರವೇರಿಸಲಾಯಿತು. ಬೆಂಗಳೂರಿನ ಪೀಣ್ಯಾದಲ್ಲಿರುವಂತ ಚಿತಾಗಾರದಲ್ಲಿ ಮರಾಠಾ ಕ್ಷತ್ರೀಯ ಸಂಪ್ರದಾಯದಂತೆ ಕನ್ನಡದ ಹಾಸ್ಯ ನಟ ಬ್ಯಾಂಕ್ ಜನಾರ್ಧನ್ ಅವರ ಅಂತ್ಯಕ್ರಿಯೆ ನೆರವೇರಿತು. ಈ ಸಂದರ್ಭದಲ್ಲಿ ಟೆನ್ನಿಸ್ ಕೃಷ್ಣ, ಗಣೇಶ್ ರಾವ್, ಡಿಂಗ್ರಿ ನಾಗರಾಜ್ ಸೇರಿದಂತೆ ಇತರರು ಭಾಗಿಯಾಗಿದ್ದರು. ಈ ವೇಳೆ ಮಾತನಾಡಿದಂತ ಪುತ್ರ ಗುರುಪ್ರಸಾದ್ ಅವರು, ಇವತ್ತು ತಂದೆಯ ಅಂತ್ರಕ್ರಿಯೆಯನ್ನು ನೆರವೇರಿಸಲಾಗಿದೆ. ಬೆಳಗ್ಗೆಯಿಂದ ಎಲ್ಲರೂ ಬಂದು ಅಂತಿಮ ದರ್ಶನ ಮಾಡಿದ್ದಾರೆ. ಇಂತಹ ಕರ್ನಾಟಕ ಜನತೆಗೆ ಧನ್ಯವಾದಗಳು ಅಂತ ಹೇಳಿದರು. ಇಷ್ಟು ವರ್ಷಗಳ ಕಾಲ ನಮ್ಮ ತಂದೆ ಬ್ಯಾಂಕ್ ಜನಾರ್ಧನ್ ಅವರನ್ನು ಹರಸಿ, ಹಾರೈಸಿ, ಪ್ರೋತ್ಸಾಹಿಸಿದ್ದೀರಿ. ನಮ್ಮ ತಂದೆ ಮತ್ತೆ ಇಲ್ಲೇ ಹುಟ್ಟಿ, ಇಲ್ಲೇ ಕಲಾವಿಧರಾಗಿ ಸೇವೆ ಸಲ್ಲಿಸಬೇಕು ಅನ್ನೋದು ನನ್ನ ಆಸೆ ಅಂತ ತಿಳಿಸಿದರು. ಇನ್ನೂ ಮೂರು ದಿನಗಳ ಕಾರ್ಯವನ್ನು ಮಾಡುತ್ತೇವೆ. ಬುಧವಾರದಂದು ಬೆಳಗ್ಗೆ 8 ಗಂಟೆಗೆ ನಮ್ಮ ತಂದೆ ಬ್ಯಾಂಕ್…
ಕಲಬುರ್ಗಿ: ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ 5,500 ಪ್ರಾಥಮಿಕ ಶಾಲಾ ಶಿಕ್ಷಕರನ್ನು ನೇಮಕ ಮಾಡಿಕೊಳ್ಳುವುದಾಗಿ ಸಚಿವ ಡಾ.ಶರಣಪ್ರಕಾಶ ಪಾಟೀಲ್ ತಿಳಿಸಿದ್ದಾರೆ. ಇಂದು ಕಲಬುರಗಿ ನಗರದ ಕೆ.ಸಿ.ಟಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಕಲ್ಯಾಣ ಕರ್ನಾಟಕ ಭಾಗದಲ್ಲಿ 5,500 ಪ್ರಾಥಮಿಕ ಶಾಲೆ ಶಿಕ್ಷಕರ ಭರ್ತಿ ಮಾಡಲಾಗುತ್ತಿದೆ. ಇದಾದ ನಂತರ ಮತ್ತೆ 5 ಸಾವಿರ ಶಿಕ್ಷಕರನ್ನು ಭರ್ತಿ ಮಾಡಲಾಗುವುದು ಎಂದರು. ಇನ್ನು 371 ಮೀಸಲಾತಿಯಂತೆ ಸ್ಥಳೀಯರಿಂದ ಹುದ್ದೆ ಭರ್ತಿ ಮಾಡಲು ಸಚಿವ ಪ್ರಿಯಾಂಕ್ ಖರ್ಗೆ ಅಧ್ಯಕ್ಷತೆಯ 371ಜೆ ಪರಿಣಾಮಕಾರಿ ಅನುಷ್ಠಾನ ಸಚಿವ ಸಂಪುಟ ಉಪ ಸಮಿತಿ ಸಭೆಯಲ್ಲಿ ಲೋಕಲ್ ಕೇಡರ್ ಹುದ್ದೆಗಳನ್ನು ಹಣಕಾಸು ಇಲಾಖೆ ಅನುಮತಿ ಇಲ್ಲದೆ ನೇಮಕ ಮಾಡಿಕೊಳ್ಳಲು ಕಾಯ್ದೆಯಲ್ಲಿಯೆ ಅವಕಾಶ ನೀಡಿದ್ದು, ಅದರಂತೆ ಇಲಾಖೆಗಳು ನೇಮಕಾತಿ ಚುರುಕುಗೊಳಿಸುವಂತೆ ನಿರ್ದೇಶನ ನೀಡಲಾಗಿದೆ. ನಮ್ಮ ಸರ್ಕಾರದ ಅವಧಿಯಲ್ಲಿಯೇ ಕಲ್ಯಾಣ ಕರ್ನಾಟಕ ಭಾಗದ ಶೇ.90ರಷ್ಟು ಖಾಲಿ ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು. https://kannadanewsnow.com/kannada/kalaburagi-super-speciality-hospital-to-be-inaugurated-on-april-16-minister-dr-sharanaprakash-patil/ https://kannadanewsnow.com/kannada/telangana-becomes-first-state-in-the-country-to-implement-sc-internal-reservation/
ಕಲಬುರಗಿ : ಕಲಬುರಗಿ ಜಿಮ್ಸ್ ಆಸ್ಪತ್ರೆಯ 8 ರಿಂದ 10ನೇ ಮಹಡಿಯಲ್ಲಿ 116 ಕೋಟಿ ರೂ. ವೆಚ್ಚದಲ್ಲಿ ನಿರ್ಮಿಸಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನೆ ಜೊತೆಗೆ 492 ಕೋಟಿ ರೂ. ಮೊತ್ತದ ವಿವಿಧ 9 ಕಾಮಗಾರಿಗಳಿಗೆ ಇದೇ ಏಪ್ರಿಲ್ 16 ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶಂಕು ಸ್ಥಾಪನೆ ನೆರವೇರಿಸಲಿದ್ದಾರೆ ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಲಶ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಖಾತೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು. ರವಿವಾರ ಕಲಬುರಗಿ ನಗರದ ಕೆ.ಸಿ.ಟಿ ಇಂಜಿನೀಯರಿಂಗ್ ಕಾಲೇಜಿನಲ್ಲಿ ಕರೆದ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ರಾಜ್ಯಸಭೆ ವಿಪಕ್ಷ ನಾಯಕ ಮಲ್ಲಿಕಾರ್ಜುನ ಖರ್ಗೆ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ಅವರು ಆಗಮಿಸಲಿದ್ದಾರೆ. ಅಂದು ಮೊದಲು ಬೆಳಿಗ್ಗೆ 11.30 ಗಂಟೆಗೆ ಉದ್ಯೋಗ ಮೇಳ, ನಂತರ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಉದ್ಘಾಟನಾ ಮತ್ತು ವಿವಿಧ ಅಭಿವೃದ್ಸಿ ಕಾಮಗಾರಿಗಳ ಅಡಿಗಲ್ಲು ನೆರವೇರಿಸುವ ಕಾರ್ಯಕ್ರಮ ಜರುಗಲಿದೆ ಎಂದ ಅವರು, ಕಿದ್ವಾಯಿ ಆಸ್ಪತ್ರೆಯಲ್ಲಿನ ಅತ್ಯಾಧುನಿಕ ಬ್ರಾಕಿಥೆರಪಿ…
ಯಾವ ನಕ್ಷತ್ರದಲ್ಲಿ ಜನಿಸಿದವರು ಎಷ್ಟು ವರ್ಷ ಈ ದಶೆಯ ಅನುಗ್ರಹ ಪಡೆಯುತ್ತಾರೆ ಗೊತ್ತಾ ? ಅಷ್ಟೋತ್ತರಿ ದಶಾಯ ಸಂಪೂರ್ಣ ಮಾಹಿತಿ ಆರಿದ್ರಾ/ಪುನರ್ವಸು/ಪುಷ್ಯ/ಆಶ್ಲೇಷಾ ನಕ್ಷತ್ರದಲ್ಲಿ ಹುಟ್ಟಿದರೆ *ರವಿ* ದೆಸೆ 6 ವರ್ಷ….. ಮಾಖಾ/ ಹುಬ್ಬಾ/ಉ ಫಾಲ್ಗುಣಿ ನಕ್ಷತ್ರದಲ್ಲಿ ಜನಿಸಿದರೆ *ಚಂದ್ರ* ದೆಸೆ 15 ವರ್ಷ….. ಹಸ್ತಾ/ಚಿತ್ತಾ/ಸ್ವಾತಿ/ವಿಶಾಖಾ ನಕ್ಷತ್ರದಲ್ಲಿ ಜನಿಸಿದರೆ *ಕುಜ* ದೆಸೆ 8 ವರ್ಷ….. ಅನುರಾಧಾ/ಜೇಷ್ಠ/ಮೂಲ ನಕ್ಷತ್ರದಲ್ಲಿ ಜನಿಸಿದರೆ *ಬುಧ* ದೆಸೆ 17 ವರ್ಷ….. ಪೂರ್ವಾಷಾಡ/ಉತ್ತರಾಷಾಡ/ಶ್ರವಣ ನಕ್ಷತ್ರದಲ್ಲಿ ಜನಿಸಿದರೆ *ಶನಿ* ದೆಸೆ 10 ವರ್ಷ….. ಧನಿಷ್ಟ/ಶತಭಿಷ/ಪೂರ್ವಭಾಧ್ರ ನಕ್ಷತ್ರದಲ್ಲಿ ಜನಿಸಿದರೆ *ಗುರು* ದೆಸೆ 19 ವರ್ಷ….. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ…
ಹೈದರಾಬಾದ್: ತೆಲಂಗಾಣ ಪರಿಶಿಷ್ಟ ಜಾತಿಗಳ (ಮೀಸಲಾತಿಯ ತರ್ಕಬದ್ಧಗೊಳಿಸುವಿಕೆ) ಕಾಯ್ದೆ 2025 ರ ಅನುಷ್ಠಾನಕ್ಕೆ ತೆಲಂಗಾಣ ಸರ್ಕಾರ ಅಧಿಸೂಚನೆ ಹೊರಡಿಸಿದೆ. ಪರಿಶಿಷ್ಟ ಜಾತಿಗಳನ್ನು (ಎಸ್ಸಿ) ಮೂರು ಗುಂಪುಗಳಾಗಿ ವರ್ಗೀಕರಿಸಲು ಏಪ್ರಿಲ್ 14, 2025 ರಂದು ನಿಗದಿತ ದಿನವಾಗಿ ರಾಜ್ಯವು ಗೆಜೆಟ್ ಅಧಿಸೂಚನೆ ಹೊರಡಿಸಿದೆ. ಕಳೆದ ವರ್ಷ ಆಗಸ್ಟ್ 1 ರಂದು ಸುಪ್ರೀಂ ಕೋರ್ಟ್ನ ಲ್ಯಾಂಡ್ ಮಾರ್ಕ್ ತೀರ್ಪಿನ ನಂತರ ಪರಿಶಿಷ್ಟ ಜಾತಿಗಳ ವರ್ಗೀಕರಣವನ್ನು ಕಾರ್ಯಗತಗೊಳಿಸಿದ ದೇಶದ ಮೊದಲ ರಾಜ್ಯ ತೆಲಂಗಾಣವಾಗಿದೆ, ಈ ಸಮುದಾಯಗಳಲ್ಲಿನ ಅತ್ಯಂತ ಅಂಚಿನಲ್ಲಿರುವ ಗುಂಪುಗಳಿಗೆ ಪ್ರತ್ಯೇಕ ಕೋಟಾಗಳನ್ನು ನೀಡಲು ಎಸ್ಸಿ ಮತ್ತು ಪರಿಶಿಷ್ಟ ಪಂಗಡಗಳನ್ನು (ಎಸ್ಟಿ) ಉಪ ವರ್ಗೀಕರಿಸುವ ಸಾಂವಿಧಾನಿಕತೆಯನ್ನು ಎತ್ತಿಹಿಡಿದಿದೆ. https://twitter.com/TelanganaCMO/status/1911696213336097222 ಮೀಸಲಾತಿ ನಿಯಮದ ಅನುಷ್ಠಾನಕ್ಕಾಗಿ ಎಸ್ಸಿಗಳನ್ನು ಮೂರು ಗುಂಪುಗಳಾಗಿ ವರ್ಗೀಕರಿಸುವಲ್ಲಿ ಸುಪ್ರೀಂ ಕೋರ್ಟ್ ತೀರ್ಪಿನ ವಿಷಯಗಳು, ಪ್ರಾಯೋಗಿಕ ದತ್ತಾಂಶ, ಸಾಮಾಜಿಕ, ಆರ್ಥಿಕ, ಶೈಕ್ಷಣಿಕ, ಉದ್ಯೋಗ ಮತ್ತು ಎಸ್ಸಿ ಸಮುದಾಯಗಳ ರಾಜಕೀಯ ಸ್ಥಿತಿಯನ್ನು ಸರ್ಕಾರ ಗಣನೆಗೆ ತೆಗೆದುಕೊಂಡಿದೆ. ಅದರಂತೆ, ಅತ್ಯಂತ ಹಿಂದುಳಿದ 15 ಉಪಜಾತಿಗಳನ್ನು 1% ಮೀಸಲಾತಿಯೊಂದಿಗೆ ಗುಂಪು…
ನವದೆಹಲಿ: ಆರೋಪಿ ಮಾಸ್ಟರ್ಮೈಂಡ್ ದೀಪಂಕರ್ ಬರ್ಮನ್ ಅವರು ಗುವಾಹಟಿಯಲ್ಲಿ ನಡೆಸುತ್ತಿದ್ದ ಮೆಸರ್ಸ್ ಡಿಬಿ ಸ್ಟಾಕ್ ಕನ್ಸಲ್ಟೆನ್ಸಿ ಹಗರಣದಲ್ಲಿ ಅವರ ಗಮನಾರ್ಹ ಭಾಗಿಯಾಗಿರುವುದನ್ನು ಬಹಿರಂಗಪಡಿಸಿದ ತನಿಖೆಯ ನಂತರ, ಕೇಂದ್ರ ತನಿಖಾ ದಳ (ಸಿಬಿಐ) 13.04.2025 ರಂದು ಗುವಾಹಟಿಯಲ್ಲಿ ಪುಷ್ಪಜಿತ್ ಪುರ್ಕಾಯಸ್ಥ ಮತ್ತು ಸಂದೀಪ್ ಗುಪ್ತಾ ಎಂಬ ಇಬ್ಬರು ವ್ಯಕ್ತಿಗಳನ್ನು ಬಂಧಿಸಿದೆ. ಗುವಾಹಟಿಯಲ್ಲಿರುವ ಆಕ್ಸಿಸ್ ಬ್ಯಾಂಕಿನ ರೆಹಬರಿ ಶಾಖೆಯ ಮಾಜಿ ಶಾಖಾ ವ್ಯವಸ್ಥಾಪಕ ಆರೋಪಿ ಪುಷ್ಪಜಿತ್ ಪುರ್ಕಾಯಸ್ಥ, ಹೆಚ್ಚಿನ ಆದಾಯದ ಸುಳ್ಳು ಭರವಸೆಗಳೊಂದಿಗೆ ಸಾರ್ವಜನಿಕರಿಂದ ಠೇವಣಿಗಳನ್ನು ಪಡೆಯಲು ಡಿಬಿ ಸ್ಟಾಕ್ ಕನ್ಸಲ್ಟೆನ್ಸಿಯೊಂದಿಗೆ ಒಪ್ಪಂದ ಮಾಡಿಕೊಂಡಿರುವುದು ಕಂಡುಬಂದಿದೆ. ತನಿಖೆಯಲ್ಲಿ ಅವರು ಮಾಸ್ಟರ್ಮೈಂಡ್ ದೀಪಂಕರ್ ಬರ್ಮನ್ ಅವರೊಂದಿಗೆ ಪಿತೂರಿ ನಡೆಸಿ, ಸುಂದರ ಮತ್ತು ಖಾತರಿಯ ಆದಾಯದ ದಾರಿತಪ್ಪಿಸುವ ಭರವಸೆಗಳ ಮೂಲಕ ಬ್ಯಾಂಕ್ ಗ್ರಾಹಕರು ಮತ್ತು ಇತರ ಹೂಡಿಕೆದಾರರನ್ನು ಯೋಜನೆಯಲ್ಲಿ ಹೂಡಿಕೆ ಮಾಡಲು ಆಮಿಷವೊಡ್ಡಿದ್ದಾರೆ ಎಂದು ತಿಳಿದುಬಂದಿದೆ. ಮುಗ್ಧ ಹೂಡಿಕೆದಾರರನ್ನು ವಂಚನೆಯ ಯೋಜನೆಯ ಮಡಿಲಿಗೆ ತರುವುದಕ್ಕಾಗಿ ಅವರು ಕಮಿಷನ್ ರೂಪದಲ್ಲಿ ಭಾರಿ ಅಕ್ರಮ ಲಾಭ ಗಳಿಸಿದರು. ಮುಂಬೈ ಮತ್ತು ಗುವಾಹಟಿಯಲ್ಲಿ…
ಹೈದರಾಬಾದ್: ತೆಲಂಗಾಣದಲ್ಲಿ ಎಸ್ಸಿ ಒಳ ಮೀಸಲಾತಿ ಜಾರಿಗೊಳಿಸಿ ಸರ್ಕಾರ ಮಹತ್ವದ ನಿರ್ಧಾರ ಪ್ರಕಟಿಸಿದೆ. 59 ಸಮುದಾಯ 3 ಗುಂಪುಗಳಾಗಿ ವರ್ಗೀಕರಿಸಿ, ಗುಂಪುಗಳ ಆಧಾರದ ಮೇಲೆ ಉದ್ಯೋಗ, ಶೈಕ್ಷಣಿಕ ಮೀಸಲಾತಿಯನ್ನು ಘೋಷಿಸಲಾಗಿದೆ. ಈ ಸಂಬಂಧ ಅಧಿಕೃತ ಆದೇಶವನ್ನು ಹೊರಡಿಸಲಾಗಿದೆ. ಸುಪ್ರೀಂ ಕೋರ್ಟ್ ಅನುಮೋದನೆ ನೀಡಿದ ನಂತರ ತೆಲಂಗಾಣ ಸರ್ಕಾರ ಸೋಮವಾರ, ಏಪ್ರಿಲ್ 14 ರಂದು ಪರಿಶಿಷ್ಟ ಜಾತಿಗಳ ಉಪವರ್ಗೀಕರಣದ ಅನುಷ್ಠಾನಕ್ಕೆ ಸಂಬಂಧಿಸಿದಂತೆ ಆದೇಶ ಹೊರಡಿಸಿದೆ. ಮಾರ್ಚ್ 18 ರಂದು, ತೆಲಂಗಾಣ ವಿಧಾನಸಭೆಯು ತೆಲಂಗಾಣ ಪರಿಶಿಷ್ಟ ಜಾತಿಗಳ (ಮೀಸಲಾತಿಗಳ ತರ್ಕಬದ್ಧಗೊಳಿಸುವಿಕೆ) ಕಾಯ್ದೆ 2025 ಅನ್ನು ಅಂಗೀಕರಿಸಿತು ಮತ್ತು ಉಪ ವರ್ಗೀಕರಣ ಕಾಯ್ದೆಯು ಏಪ್ರಿಲ್ 8 ರಂದು ತೆಲಂಗಾಣ ರಾಜ್ಯಪಾಲರ ಒಪ್ಪಿಗೆಯನ್ನು ಪಡೆಯಿತು. ಭಾರತೀಯ ಸಂವಿಧಾನದ ಶಿಲ್ಪಿ ಬಿ.ಆರ್. ಅಂಬೇಡ್ಕರ್ ಅವರ ಜನ್ಮ ದಿನಾಚರಣೆಯಂದು ಸರ್ಕಾರಿ ಆದೇಶ ಹೊರಡಿಸಲಾಗಿದೆ. ತೆಲಂಗಾಣದಲ್ಲಿ ಎಸ್ಸಿ ವರ್ಗೀಕರಣಕ್ಕೆ ಆಧಾರ ದಶಕಗಳಿಂದ ಅನನುಕೂಲಕರವಾಗಿ ಉಳಿದಿರುವ ಎಸ್ಸಿ ಸಮುದಾಯಗಳಿಗೆ ಸಾಮಾಜಿಕ ಹಿಂದುಳಿದಿರುವಿಕೆ ಮತ್ತು ಆದ್ಯತೆಯ ಆಧಾರದ ಮೇಲೆ ಪರಿಶಿಷ್ಟ ಜಾತಿಗಳ (ಎಸ್ಸಿ) ವರ್ಗೀಕರಣವನ್ನು…
ಬೆಳಗಾವಿ : ಹುಬ್ಬಳ್ಳಿಯಲ್ಲಿ ಬಾಲಕಿಯ ಕೊಲೆ ಪ್ರಕರಣದ ಆರೋಪಿಯನ್ನು ಎನ್ಕೌಂಟರ್ ಮಾಡಿದ ಪಿಎಸ್ಐ ಅನ್ನಪೂರ್ಣ ಅವರಿಗೆ ಅತ್ಯುನ್ನತ ಪದಕ ನೀಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಗೃಹ ಸಚಿವ ಪರಮೇಶ್ವರ್ ಅವರಿಗೆ ಶಿಫಾರಸ್ಸು ಮಾಡುವುದಾಗಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಸೋಮವಾರ ಬೆಳಗಾವಿಯಲ್ಲಿ ಮಾತನಾಡಿದ ಸಚಿವರು, ಪಿಎಸ್ಐ ಅನ್ನಪೂರ್ಣ ಅವರ ಕಾರ್ಯಕ್ಕೆ ಶ್ಲಾಘನೆ ವ್ಯಕ್ತಪಡಿಸುತ್ತೇನೆ. ನಾನು ಓರ್ವ ಸಚಿವೆಯಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು. ಮಹಿಳೆಯರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಭಾಗಿಯಾದ ಆರೋಪಿಗಳಿಗೆ ಕಠಿಣ ಶಿಕ್ಷೆ ಆಗಬೇಕು ಎಂದು ನಾನು ಹಿಂದಿನಿಂದಲೂ ಪ್ರತಿಪಾದಿಸುತ್ತಾ ಬಂದಿದ್ದೇನೆ. ಇಂಥ ಪ್ರಕರಣದ ಆರೋಪಿಗಳಿಗೆ ಗಲ್ಲುಶಿಕ್ಷೆ ಆಗಬೇಕು, ದೌರ್ಜನ್ಯಕ್ಕೆ ಒಳಗಾದವರಿಗೆ ತ್ವರಿತವಾಗಿ ನ್ಯಾಯಸಿಗಬೇಕು. ಅನ್ನಪೂರ್ಣ ಅವರ ಕಾರ್ಯ ಇತರ ಅಧಿಕಾರಿಗಳಿಗೆ ದಾರಿ ದೀಪವಾಗಬೇಕು ಎಂದು ಸಚಿವರು ಹೇಳಿದರು. ಇಂತಹ ಪಿಡುಗು ನಮ್ಮ ಸಮಾಜದಿಂದ ನಿರ್ಮೂಲನೆ ಆಗಬೇಕು. ಸರ್ಕಾರಿ ನೌಕರರಿಗೆ ನಮ್ಮ ಇಲಾಖೆಯಿಂದ ಕೊಡ ಮಾಡುವ ರಾಣಿ ಚನ್ನಮ್ಮ ಪ್ರಶಸ್ತಿ ನೀಡವುದಿಲ್ಲ.…
ಕೊಪ್ಪಳ: ಮುಸ್ಲೀಮರ ಮದುವೆ ಕಾಂಟ್ರ್ಯಾಕ್ಟ್ ಮದುವೆ. ಹಿಂದೂಗಳಂತೆ ಏಳೇಳು ಜನ್ಮದ ಅನುಬಂಧ ಅಲ್ಲ ಅವರದ್ದು ಎಂಬುದಾಗಿ ಕಾಂಗ್ರೆಸ್ ಶಾಸಕ ಬಸವರಾಜ ರಾಯರೆಡ್ಡಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ಕೊಪ್ಪಳದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಮುಸ್ಲೀಮರ ಮದುವೆ ಹಿಂದೂಗಳ ಮದುವೆಯಂತೆ ಅಲ್ಲ. ಅವರದ್ದು ಕಂಟ್ರ್ಯಾಕ್ಟ್ ಮ್ಯಾರಿಯೇಜ್ ಆಗಿದೆ. ಹಿಂದೂಗಳದ್ದು ಏಳೇಳು ಜನ್ಮದ ಮದುವೆಯಾಗಿದೆ ಎಂಬುದಾಗಿ ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ. ವಕ್ಫ್ ತಿದ್ದುಪಡಿ ವಿಧೇಯಕ ಸರಿಯಾಗಿ ಆಗಿಲ್ಲ ಅನಿಸುತ್ತಿದೆ. ಮುಸ್ಲೀಮರ ಹಕ್ಕುಗಳನ್ನು ಧ್ವಂಸ ಮಾಡಲು ಹೊರಟಂತಿದೆ. ವಕ್ಫ್ ಬಿಲ್ ವಿರುದ್ಧ ದೇಶದಲ್ಲಿ ಅಶಾಂತಿ ಉಂಟಾಗಬಹುದು ಎಂಬುದಾಗಿ ತಿಳಿಸಿದ್ದಾರೆ. ಸಿಎಂ ಆಗಿ ಸಿದ್ಧರಾಮಯ್ಯನವರು 5 ವರ್ಷ ಪೂರ್ಣಗೊಳಿಸುತ್ತಾರೆ. ಮುಂದಿನ ಮೂರು ವರ್ಷಗಳ ಕಾಲ ಸಿದ್ಧರಾಮಯ್ಯನವರೇ ಇರ್ತಾರೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಯಾಕೆ ಸಿಎಂ ಆಗಬಾರದು.? ಆದರೇ ನನ್ನ ಪ್ರಕಾರ ಇನ್ನೂ ಮೂರು ವರ್ಷ ಸಿದ್ಧರಾಮಯ್ಯನವರೇ ಇರ್ತಾರೆ. ಸಿದ್ಧರಾಮಯ್ಯನವರಿಗೆ ಬದ್ಧತೆ ಇದೆ. ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಮುಂದುವರೆಯುತ್ತಾರೆ. ಸದ್ಯ ಯಾವುದೇ ಬದಲಾವಣೆ ಇಲ್ಲ ಎಂಬುದಾಗಿ ತಿಳಿಸಿದರು. https://kannadanewsnow.com/kannada/attention-our-metro-passengers-4-additional-trains-will-run-in-these-areas-of-bengaluru-today/…













