Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಅವರ ಮನವಿಯ ಮೇರೆಗೆ ಕೇಂದ್ರ ಸರ್ಕಾರವು ಮಾವು ಬೆಳೆಗಾರರಿಗೆ ಒಳ್ಳೆಯ ಸುದ್ದಿ ನೀಡಿದೆ. ಕರ್ನಾಟಕದಲ್ಲಿ ಮಾವಿನ ಬೆಳೆಗಾರರಿಗೆ ಕೊರತೆ ಬೆಲೆ ಪಾವತಿ ಮಾಡುವುದು ಹಾಗೂ ಮಾರುಕಟ್ಟೆ ಮಧ್ಯಸ್ಥಿಕೆಗೆ ಕೇಂದ್ರದ ಅನುಮೋದನೆ ನೀಡಿದ್ದು, ಇದರಿಂದ ಬೆಲೆ ಕುಸಿತದಿಂದ ಕಂಗಾಲಾಗಿದ್ದ ಮಾವು ಬೆಳೆಗಾರರಿಗೆ ಅನುಕೂಲ ಆಗಲಿದೆ. ಈ ಬಗ್ಗೆ ಮಾಜಿ ಪ್ರಧಾನಿಗಳು 22 ಜೂನ್ 2025 ರಂದು ಕೇಂದ್ರ ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದರು. ಮಾಜಿ ಪ್ರಧಾನಿಗಳ ಮನವಿಗೆ ಸ್ಪಂದಿಸಿರುವ ಕೇಂದ್ರ ಸಚಿವರು ಮಾವು ಬೆಳೆಗಾರರಿಗೆ ನೆರವಿನ ಹಸ್ತ ಚಾಚಿದ್ದಾರೆ. ಕರ್ನಾಟಕದ ಮಾವು ಬೆಳೆಗಾರರನ್ನು ಬೆಂಬಲಿಸಲು ಕೇಂದ್ರ ಸರ್ಕಾರ ತಕ್ಷಣ ಮಧ್ಯಪ್ರವೇಶಿಸಬೇಕು. ಕಡಿಮೆ ಇಳುವರಿ, ಹವಾಮಾನ ವೈಪರಿತ್ಯ ಮತ್ತು ಮಾವಿನಹಣ್ಣಿನ ಅಂತರಾಜ್ಯ ಸಾಗಣೆಯ ಮೇಲಿನ ನಿರ್ಬಂಧಗಳಿಂದ ಉಂಟಾದ ತೀವ್ರ ಬೆಲೆ ಕುಸಿತದ ಬಗ್ಗೆ ಮಾಜಿ ಪ್ರಧಾನಿಗಳು ಪತ್ರದಲ್ಲಿ ಉಲ್ಲೇಖಿಸಿದ್ದರು. ಈ ಸಮಸ್ಯೆಗಳಿಂದ ವಿಶೇಷವಾಗಿ ಕೋಲಾರ, ಚಿಕ್ಕಬಳ್ಳಾಪುರ, ರಾಮನಗರ ಮತ್ತು…
ಬೆಂಗಳೂರು: 87ನೇ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕೈಗೊಂಡ ನಿರ್ಣಯ ಕಾರ್ಯಗತಕ್ಕೆ ಸಭೆ ಕರೆಯಲು ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಹಾಗೂ ಕನ್ನಡ ಮತ್ತು ಸಂಸ್ಕೃತಿ ಸಚಿವ ಶಇವರಾಜ್ ತಂಗಡಗಿಗೆ MLC ದಿನೇಶ್ ಗೂಳಿಗೌಡ ಪತ್ರ ಬರೆದು ಮನವಿ ಮಾಡಿದ್ದಾರೆ. ಈ ಕುರಿತಂತೆ ಪತ್ರ ಬರೆದಿರುವಂತ ಅವರು, ಹಿರಿಯ ಸಾಹಿತಿ ಗೊ.ರು.ಚನ್ನಬಸಪ್ಪ ಅವರ ಅಧ್ಯಕ್ಷತೆಯಲ್ಲಿ ಮಂಡ್ಯದಲ್ಲಿ ಯಶಸ್ವಿಯಾಗಿ ಮುಕ್ತಾಯಗೊಂಡಿದ್ದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡ ಭಾಷೆ, ಸಂಸ್ಕೃತಿ ಮತ್ತು ಶಿಕ್ಷಣಕ್ಕೆ ಸಂಬಂಧಿಸಿದಂತೆ ಆರು ಪ್ರಮುಖ ನಿರ್ಣಯಗಳನ್ನು ಕೈಗೊಳ್ಳಲಾಗಿತ್ತು. ಈ ಎಲ್ಲ ವಿಷಯಗಳನ್ನು ಅನುಮೋದಿಸಿ, ಅವುಗಳನ್ನು ಶೀಘ್ರವಾಗಿ ಅನುಷ್ಠಾನಗೊಳಿಸಬೇಕಿದ್ದು, ಈ ನಿಟ್ಟಿನಲ್ಲಿ ಸಭೆ ಕರೆದು ಸೂಕ್ತ ತೀರ್ಮಾನವನ್ನು ತೆಗೆದುಕೊಳ್ಳಬೇಕಿದೆ ಎಂದಿದ್ದಾರೆ. ಕನ್ನಡ ರಾಜ್ಯೋತ್ಸವದ ಈ ಶುಭ ಸಂದರ್ಭದಲ್ಲಿ ಕನ್ನಡದ ಹಿತಾಸಕ್ತಿಯನ್ನು ಕಾಪಾಡುವ ನಿಟ್ಟಿನಲ್ಲಿ ಈ ಕೆಳಕಂಡ ಪ್ರಮುಖ ನಿರ್ಣಯಗಳನ್ನು ತಕ್ಷಣ ಕಾರ್ಯಗತಗೊಳಿಸುವ ಸಂಬಂಧ ತಕ್ಷಣ ತಮ್ಮ ಅಧ್ಯಕ್ಷತೆಯಲ್ಲಿ ಸಂಬಂಧಪಟ್ಟ ಎಲ್ಲರನ್ನು ಆಹ್ವಾನಿಸಲು ಮನವಿ ಮಾಡಿದ್ದಾರೆ. ಸಮ್ಮೇಳನಾಧ್ಯಕ್ಷರಾದ ಗೊ.ರು.ಚನ್ನಬಸಪ್ಪ ಅವರ…
ಹಾಸನ: ಜಿಲ್ಲೆಯಲ್ಲಿ ಹಿರಿಯ ಅಧಿಕಾರಿಯೊಬ್ಬರು ಸಾರ್ವಜನಿಕವಾಗಿ ಶಿರಸ್ತೇದಾರ್ ಒಬ್ಬರನ್ನು ನಿಂದಿಸಿರುವಂತ ಘಟನೆ ಬೆಳಕಿಗೆ ಬಂದಿದೆ. ದಲಿತ ಎನ್ನುವ ಕಾರಣಕ್ಕಾಗಿ ಉಪ ವಿಭಾಗಾಧಿಕಾರಿಯಿಂದ ನಿಂದನೆಗೆ ಒಳಗಾದಂತ ಶಿರಸ್ತೇದಾರ್ ಛೇ ದಲಿತನಾಗಿ ಹುಟ್ಟಿದ್ದೇ ತಪ್ಪಾ ಎನ್ನುವ ಅವಮಾನದಿಂದ ಸ್ವಯಂ ನಿವೃತ್ತಿಗೆ ಮುಂದಾಗಿದ್ದಾರೆ ಎನ್ನಲಾಗುತ್ತಿದೆ. ರಾಜ್ಯದಲ್ಲಿ ನಡೆಯುತ್ತಿದ್ದಂತ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಸಕಲೇಶಪುರ ಉಪವಿಭಾಗಾಧಿಕಾರಿ ರಾಜೇಶ್ ಅವರು, ಅರಕಲಗೂಡು ತಹಶೀಲ್ದಾರ್ ಹಾಗೂ ತಹಶೀಲ್ದಾರ್ ಗ್ರೇಡ್-2 ಪ್ರಭಾರ ಆಗಿದ್ದಂತ ಸ್ವಾಮಿ.ಸಿ ಅವರನ್ನು ನೇಮಿಸಲಾಗಿತ್ತು. ಸಮೀಕ್ಷೆಯ ಕಾರ್ಯದಿಂದಾಗಿ ತಹಶೀಲ್ದಾರ್ ಹಾಗೂ ತಹಶೀಲ್ದಾರ್ ಗ್ರೇಡ್-2 ಪ್ರಭಾರ ಸ್ವಾಮಿ.ಸಿ ಒಂದೇ ಕಾರಿನಲ್ಲಿ ತೆರಳುತ್ತಿದ್ದದ್ದನ್ನು ಎಸಿ ರಾಜೇಶ್ ಗಮನಿಸಿದ್ದಾರೆ. ಅಲ್ಲದೇ ತಹಶೀಲ್ದಾರ್ ಕಾರಿನ ಮುಂದಿನ ಸೀಟಿನಲ್ಲಿ ಕುಳಿತಿದ್ದರಿಂದ ಕೆಂಡಾಮಂಡಲವಾಗಿರುವಂತ ಎಸಿ ರಾಜೇಶ್, ಕಾರು ನಿಲ್ಲಿಸಿ ನಡು ರಸ್ತೆಯಲ್ಲೇ ಪ್ರಭಾರ ತಹಶೀಲ್ದಾರ್ ಗ್ರೇಡ್-2 ಆಗಿದ್ದಂತ ಸ್ವಾಮಿ.ಸಿ ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ತಹಶೀಲ್ದಾರ್ ವಾಹನದಲ್ಲಿ ತಹಶೀಲ್ದಾರ್ ಸೀಟಿನಲ್ಲಿ ಕುಳಿತುಕೊಳ್ಳಲು ಯಾರು ನಿನಗೆ ಅನುಮತಿ ನೀಡಿದ್ದು? ಕಾರಿನಿಂದ ಇಳಿ ಎಂಬುದಾಗಿ ಇಳಿಸಿ ಅವಮಾನಿಸಿದ್ದಾರೆ ಎಂಬುದಾಗಿ…
ಬೆಂಗಳೂರು: ರಾಜ್ಯದಲ್ಲಿ 70ನೇ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಗುತ್ತಿದೆ. ಈ ಸುಸಂದರ್ಭದಲ್ಲಿ ಕರ್ನಾಟಕದ ಜನತೆಗೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ(ರಿ)ದಿಂದ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕೋರಲಾಗಿದೆ. ಭಾರತೀಯ ಮಜ್ದೂರ್ ಸಂಘದೊಂದಿಗೆ ಸಂಯೋಜಿತ(ಬಿಎಂಎಸ್) ನಿಂದ ರಾಜ್ಯದ ಜನತೆಗೆ 70ನೇ ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಸಂಘ (KSHCOEA BMS) ಸಂಘದ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು ಕೋರಿದ್ದಾರೆ. ಅಂದಹಾಗೇ ರಾಜ್ಯದ ಆರೋಗ್ಯ, ವೈದ್ಯಕೀಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಕಷ್ಟಗಳಿಗೆ, ಸಮಸ್ಯೆಗಳಿಗೆ ಪರಿಹರಿಸುವ ಕೆಲಸ ಮಾಡುತ್ತಿರುವಂತ ಮುಂಚೂಣಿಯ ಸಂಘಟನೆ KSHCOEA BMS ಆಗಿದೆ. ಈ ಸಂಘದಿಂದಾಗಿ ಆರೋಗ್ಯ, ವೈದ್ಯಕೀಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ವೇತನ ಹೆಚ್ಚಳ, ಆರೋಗ್ಯ ವಿಮಾ ಸೌಲಭ್ಯ ಸೇರಿದಂತೆ ವಿವಿಧ ಸೇವಾ ಭದ್ರತೆಯನ್ನು ನೌಕರರಿಗೆ ಒದಗಿಸಿಕೊಡುವಂತ ಕೆಲಸವನ್ನು ಹಗಲಿರುಳೆನ್ನದೆ ಮಾಡುತ್ತಿದೆ. https://kannadanewsnow.com/kannada/kannada-nadu-is-the-birthplace-of-literature-and-culture-kannadigas-have-made-unique-achievements-in-all-fields-sagar-ac/ https://kannadanewsnow.com/kannada/withdrawal-of-cases-against-kannada-activists-cm-siddaramaiah-announces/
ಮಂಡ್ಯ : ಕನ್ನಡ ರಾಜ್ಯೋತ್ಸವ ನಮ್ಮ ಇತಿಹಾಸವನ್ನು ನೆನಪಿಸುವ ದಿನ ಮಾತ್ರವಲ್ಲ, ಅದು ನಮ್ಮ ಜವಾಬ್ದಾರಿಯನ್ನು ನೆನಪಿಸುವ ದಿನವೂ ಆಗಿದೆ. ನಮ್ಮ ರಾಜ್ಯವನ್ನು ಇನ್ನಷ್ಟು ಸುಂದರ, ಸಶಕ್ತ ಮತ್ತು ಸಮಾನತೆಯ ರಾಜ್ಯವನ್ನಾಗಿಹಿಸಲು ಪ್ರತಿಯೊಬ್ಬರೂ ಕಾರ್ಯಪ್ರವೃತ್ತರಾಗಬೇಕೆಂದು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ನಗರದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಧ್ವಜಾರೋಹಣ ನೆರವೇರಿಸಿ ರಾಜ್ಯೋತ್ಸವ ಸಂದೇಶ ನೀಡಿ ಮಾತನಾಡಿ, ಬೇರೆ ಭಾಷೆಗಳನ್ನು ಕಲಿಯಿರಿ ಅವಶ್ಯಕತೆ ಇದ್ದಾಗ ಮಾತ್ರ ಮಾತನಾಡಿ ಆದರೆ, ನಾವು ನಮ್ಮ ಭಾಷೆಯನ್ನು ಯಾವುದೇ ಕಾರಣಕ್ಕೂ ಬಲಿ ಕೊಟ್ಟು ಉದಾರಿಗಳಾಗಬಾರದು. ಭಾಷೆಯ ವ್ಯಾಮೋಹವೂ ಅತಿಯಾಗಿರಬಾರದು, ಆದರೆ ಕನ್ನಡ ಅಭಿಮಾನ ಇರಲೇ ಬೇಕು, ಅಭಿಮಾನವಿದ್ದರೆ ಮಾತ್ರ ಕನ್ನಡ ಉಳಿಸಲು ಬೆಳೆಸಲು ಸಾಧ್ಯ. ಕನ್ನಡ ಭಾಷೆ ತಿಳಿಯದವರಿಗೆ ಕನ್ನಡ ಕಲಿಸುವ ಕೆಲಸವಾಗಬೇಕೆಂದರು. ಕನ್ನಡ ಭಾಷೆ ಸಮೃದ್ಧವಾಗಿದೆ ಎಂದು ನಾವು ಕೈಕಟ್ಟಿ ಕುಳಿತುಕೊಳ್ಳಬಾರದು. ಆಧುನಿಕ ಶಿಕ್ಷಣ ಕ್ರಮದಿಂದ ಕನ್ನಡ ಕಲಿಕೆಯ ಬಗ್ಗೆ ಯುವಜನಾಂಗದಲ್ಲಿ ಮತ್ತು ಮಕ್ಕಳಲ್ಲಿ ಇನ್ನಷ್ಟು ಪ್ರೀತಿ ಮತ್ತು ಕಾಳಜಿ ಮೂಡುವಂತೆ ಪಾಲಕರು…
ಧನುಸ್ಸು ರಾಶಿಯವರಿಗೆ ಈ ಒಂದು ತಾಂತ್ರಿಕ ಅನುಷ್ಠಾನ ಮಾಡಿ ನೋಡಿ ಅದೃಷ್ಟದ ಬದಲಾವಣೆಯಾಗುತ್ತದೆ.. ಮೂಲ ನಕ್ಷತ್ರದವರಿಗೆ ಯೆ,ಯೊ,ಬ,ಬಿ ಇವರಿಗೆ ನೀಮ್ಮಗೆ ಎಷ್ಟೇ ಸಮಸ್ಯೆಗಳು ಇದರು ಬಗ್ಗೆ ಆರಿಯುತ್ತದೆ. ಇದು ಹರಿ ವಾಕ್ ಸತ್ಯ ನೀವು ತಾಮ್ರದ ರ್ಸಪಗಳನು ತೆಗೆದುಕೊಂಡು ಪ್ರತಿ ಮಂಗಳವಾರ ಒಂದು ಶುಕ್ರವಾರ ಒಂದು ಹೀಗೆ 5 ಮಂಗಳವಾರ 5 ಶುಕ್ರವಾರ ಒಂದು ಕೆಂಪು ವಸ್ತ್ರದಲ್ಲಿ ಪೂಜೆ ಮಾಡಿ ಗಂಟು ಕಟ್ಟಿ ಇಡಿ5 ಮಂಗಳವಾರ 5 ಶುಕ್ರವಾರವಾದ ಮೇಲೆ ಯಾವುದಾದರೂ ಪುಣೆಯ ಕ್ಷೇತ್ರ ಶಿವನ ದೇವಾಲಯವೆ ಆಗಬೇಕು ಅಲ್ಲಿ ಹುಂಡಿಗೆ ಹಾಕಿ ಇಲ್ಲವೆಂದರೆ ಎಲ್ಲಾದರೂ ಹೋಮ ಮಾಡುತ್ತಿದರೆ ಹೋಮಕ್ಕೆ ಹಾಕಿ ಮನೆಗೆ ಬಂದು ಬಿಡಿ ನಂತರ ನೋಡಿ ಬದಲಾವಣೆ ನಂತರ ನನಗೆ ತಿಳಿಸಿ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು…
ಉಡುಪಿ: ನಾನು ಕಾಂಗ್ರೆಸ್ ಸಾಮಾನ್ಯ ಕಾರ್ಯಕರ್ತೆ, ನವೆಂಬರ್ ತಿಂಗಳ ಕ್ರಾಂತಿ, ಶಾಂತಿ ಎಲ್ಲವೂ ಹೈಕಮಾಂಡ್ ಗೆ ಬಿಟ್ಟ ವಿಚಾರ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರು ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಕನ್ನಡ ರಾಜ್ಯೋತ್ಸವದ ಸಮಾರಂಭದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವರು, ಮುಖ್ಯಮಂತ್ರಿ ಬದಲಾವಣೆ ಎಐಸಿಸಿ ಅಧ್ಯಕ್ಷರಿಗೆ ಬಿಟ್ಟ ವಿಚಾರ. ನಾನು ಸೇರಿದಂತೆ ಎಲ್ಲರೂ ಪಕ್ಷ ಹೇಳಿದಂತೆ ಕೇಳುತ್ತೇವೆ. ಪಕ್ಷ ನನ್ನನ್ನು ಗುರುತಿಸಿ ಸೇವೆ ಮಾಡಲು ಅವಕಾಶ ಮಾಡಿಕೊಟ್ಟಿದೆ. ನಿಮ್ಮ ಕೆಲಸ ಬೇರೆ ಇದೆ ಎಂದು ಪಕ್ಷ ಸೂಚಿಸಿದರೂ ಸಂತೋಷದಿಂದ ಕೇಳುತ್ತೇವೆ ಎಂದರು. ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಹೈಕಮಾಂಡ್ ಮಾತಿನಂತೆ ನಡೆದುಕೊಳ್ಳುವ ವ್ಯಕ್ತಿ. ಸೋನಿಯಾ ಗಾಂಧಿ ಅವರ ತ್ಯಾಗದ ಮಾತನ್ನು ಬಹಳಷ್ಟು ಸಾರಿ ಹೇಳಿದ್ದಾರೆ. ಇದಕ್ಕೆ ವಿಶೇಷ ಅರ್ಥವನ್ನು ಕಲ್ಪಿಸುವುದು ಬೇಡ. ಗಾಂಧಿ ಪರಿವಾರದ ಇಂದಿರಾಗಾಂಧಿ, ರಾಜೀವ್ ಗಾಂಧಿ ಹಾಗೂ ಸೋನಿಯಾ ಗಾಂಧಿ ಅವರ ಇತಿಹಾಸದ ಬಗ್ಗೆ ನಮಗೆಲ್ಲ ಗೊತ್ತಿದೆ…
ಶಿವಮೊಗ್ಗ : ಕೆಳದಿ ರಾಣಿ ಚೆನ್ನಮ್ಮಾಜಿ ಕನ್ನಡ ನಾಡು ಕಂಡ ಅತ್ಯಂತ ಶ್ರೇಷ್ಟ ರಾಣಿ. ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಸುಮಾರು 15 ಲಕ್ಷ ರೂ. ವೆಚ್ಚದಲ್ಲಿ ರಾಣಿ ಚೆನ್ನಮ್ಮಾಜಿ ಕಂಚಿನ ಪುತ್ಥಳಿ ಸ್ಥಾಪಿಸಲಾಗುತ್ತಿದೆ ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಹೇಳಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಶನಿವಾರ ನಗರಸಭೆ ವತಿಯಿಂದ ಸುಮಾರು 50 ಲಕ್ಷ ರೂ. ವೆಚ್ಚದಲ್ಲಿ ಬಸ್ ನಿಲ್ದಾಣ ಸೇರಿ ವಿವಿಧ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದಂತ ಅವರು, ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಪುತ್ಥಳಿ ನಿರ್ಮಿಸಬೇಕು ಎಂದು ಈ ಭಾಗದ ಜನರ ಬಹುಕಾಲದ ಬೇಡಿಕೆಯಾಗಿದ್ದು, ಅದನ್ನು ನೆರವೇರಿಸಲಾಗುತ್ತಿದ್ದು, ಶಾಸಕರ ಅನುದಾನದಲ್ಲಿ ಪುತ್ಥಳಿಗೆ 10 ಲಕ್ಷ ರೂ. ಮೀಸಲಿಡಲಾಗಿದೆ. ಇದರ ಜೊತೆಗೆ ಬಸ್ ನಿಲ್ದಾಣ ಮತ್ತು ವೃತ್ತ ನಿರ್ಮಾಣಕ್ಕೆ 40 ಲಕ್ಷ ರೂ. ಶಾಸಕರ ವಿವೇಚನಾ ನಿಧಿಯಿಂಡ ಮೀಸಲಿಡಲಾಗಿದೆ. ಅತಿ ಶೀಘ್ರದಲ್ಲಿ ಕಾಮಗಾರಿ ಪ್ರಾರಂಭಿಸಲು ಸೂಚಿಸಲಾಗಿದೆ ಎಂದು…
ಬೆಂಗಳೂರು: ನಗರದಲ್ಲಿ ಬಹುದೊಡ್ಡ ಹಗರಣ ಎನ್ನುವಂತೆ ಇಪಿಎಫ್ಓ ಸ್ಟಾಫ್ ಕ್ರೆಡಿಟ್ ಕೋ-ಆಪರೇಟೀವ್ ಸೊಸೈಟಿಯಲ್ಲಿ ವಂಚನೆ ಪ್ರಕರಣ ಬೆಳಕಿಗೆ ಬಂದಿತ್ತು. ಈ ಪ್ರಕರಣ ಸಂಬಂಧ ಸಿಇಓ ಗೋಪಿ, ಅಕೌಟೆಂಟ್ ಜಗದೀಶ್ ಎಂಬುವರ ವಿರುದ್ಧ ಎಫ್ಐಆರ್ ದಾಖಲಾಗಿದೆ. ಇಪಿಎಫ್ ಸ್ಟಾಫ್ ಕ್ರೆಡಿಟ್ ಕೋ-ಆಪರೇಟಿವ್ ಸೊಸೈಟಿಯಲ್ಲಿ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಮುರಳಿ ಎಂಬುವರು ದೂರು ನೀಡಿದ್ದಾರೆ. ಈ ದೂರು ಆಧರಿಸಿ ಸಿಇಒ ಗೋಪಿ ಮತ್ತು ಅಕೌಂಟೆಂಟ್ ಜಗದೀಶ್ ಎಂಬುವರ ವಿರುದ್ಧ ಕೇಸ್ ದಾಖಲಾಗಿದೆ. ಎಫ್ಐಆರ್ ದಾಖಲಾದ ಹಿನ್ನಲೆಯಲ್ಲಿ ಆರೋಪಿಗಳನ್ನು ಬಂಧಿಸಿ, ಹೆಚ್ಚಿನ ವಿಚಾರಣೆ ನಡೆಸಲು ಪೊಲೀಸರು ಸಿದ್ಧತೆ ಕೈಗೊಂಡಿದ್ದಾರೆ. ಮುರುಳಿ ಎಂಬುವರು ನೀಡಿರುವಂತ ದೂರಿನಲ್ಲಿ ಇಪಿಎಫ್ ಸ್ಟಾಫ್ ಕ್ರೆಡಿಟ್ ಕೋ ಆಪರೇಟಿವ್ ಸೊಸೈಟಿಯಲ್ಲಿ ಸುಮಾರು 70 ಕೋಟಿ ಅವ್ಯವಹಾರ ಆಗಿದೆ ಎಂಬುದಾಗಿ ಉಲ್ಲೇಖಿಸಿದ್ದಾರೆ. https://kannadanewsnow.com/kannada/withdrawal-of-cases-against-kannada-activists-cm-siddaramaiah-announces/ https://kannadanewsnow.com/kannada/big-news-priority-given-to-teaching-kannada-in-karnatakas-madrasas-cms-announcement/
ಶಿವಮೊಗ್ಗ : ಕನ್ನಡ ನಾಡುನುಡಿ ವಿಷಯ ಬಂದಾಗ ನಾವೆಲ್ಲಾ ಒಗ್ಗಟ್ಟಿನ ಧ್ವನಿ ಮೊಳಗಿಸಬೇಕು. ಕನ್ನಡ ನಾಡಿನ ಒಂದಿಂಚು ಭೂಮಿ ಅನ್ಯರಾಜ್ಯಗಳಿಗೆ ಬಿಟ್ಟುಕೊಡುವ ಪ್ರಶ್ನೆಯೆ ಇಲ್ಲ ಎಂದು ಶಾಸಕ ಹಾಗೂ ಅರಣ್ಯ ಕೈಗಾರಿಕಾ ಅಭಿವೃದ್ದಿ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ನಗರದ ಕೆಳದಿ ರಾಣಿ ಚೆನ್ನಮ್ಮಾಜಿ ವೃತ್ತದಲ್ಲಿ ಶನಿವಾರ ನಗರಸಭೆ ಹಾಗೂ ವಿದ್ಯಾರಣ್ಯ ಯುವಕ ಸಂಘದ ವತಿಯಿಂದ ಕೆಳದಿಯಿಂದ ಬಂದ ವಿದ್ಯಾರಣ್ಯ ಜ್ಯೋತಿಯನ್ನು ಸ್ವಾಗತಿಸಿ, ಕನ್ನಡ ಧ್ವಜಾರೋಹಣ ನೆರವೇರಿಸಿ ಮಾತನಾಡಿದಂತ ಅವರು, ಕೇರಳದ ಕಾಸರಗೋಡು, ಬೆಂಗಳೂರಿನ ಹೊಸೂರು, ಬೆಳಗಾವಿ ಭಾಗದಲ್ಲಿ ಕರ್ನಾಟಕ ಗಡಿಯಲ್ಲಿ ಸದಾ ತಕರಾರು ತೆಗೆದು ಕನ್ನಡಿಗರ ತಾಳ್ಮೆ ಪರೀಕ್ಷೆ ಮಾಡುವ ಕೆಲಸ ನಿರಂತರ ನಡೆಯುತ್ತಿದೆ. ಕನ್ನಡಪರ ಸಂಘಟನೆಗಳು ಕಟ್ಟೆಚ್ಚರದಿಂದ ಇದ್ದು ಇಂತಹ ಘಟನೆಗಳ ವಿರುದ್ದ ಹೋರಾಟ ನಡೆಸುತ್ತಿರುವುದು ಅಭಿನಂದಾರ್ಹ ಸಂಗತಿ. ಕನ್ನಡದ ವಿಷಯ ಬಂದಾಗ ನಾವೆಲ್ಲರೂ ಕಟ್ಟೆಚ್ಚರದಿಂದ ಇರೋಣ. ನಾವು ಎಲ್ಲೆ ಇದ್ದರೂ ಕನ್ನಡಿಗರಾಗಿರೋಣ. ವಿದೇಶದಲ್ಲಿದ್ದರೂ ನಮ್ಮ ಕನ್ನಡ ಪ್ರೇಮ ಸದಾ ಹಸಿರಾಗಿರಲಿ…














