Subscribe to Updates
Get the latest creative news from FooBar about art, design and business.
Author: kannadanewsnow09
ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ…
ಬೆಂಗಳೂರು: ಕರ್ನಾಟಕ ರಾಜ್ಯದ ಗ್ರಾಮೀಣ ಭಾಗದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಲ್ಲಿ ಹೃದಯ ಸಂಬಂಧಿ ಕಾಯಿಲೆಗಳು ಕಾಣಿಸಿಕೊಂಡಿರುವ ಆಘಾತಕಾರಿ ಸಂಗತಿ ಅಧ್ಯಯನದಿಂದ ಹೊರ ಬಿದ್ದಿದೆ. ಅಧ್ಯಯನಕ್ಕೆ ಒಳಪಟ್ಟ 8 ಮತ್ತು 9 ನೇ ತರಗತಿಯ 30 ವಿದ್ಯಾರ್ಥಿಗಳಲ್ಲಿ ಒಬ್ಬ ವಿದ್ಯಾರ್ಥಿ ಮಧುಮೇಹದಿಂದ ಬಳಲುತ್ತಿದ್ದರೆ, ನಾಲ್ಕು ವಿದ್ಯಾರ್ಥಿಗಳು ಹೈಪರ್ ಟೆನ್ಷನ್ ನಿಂದ ನರಳುತ್ತಿದ್ದು ಚಿಕಿತ್ಸೆಗೆ ಒಳಗಾಗಿದ್ದಾರೆ! 11 ವಿದ್ಯಾರ್ಥಿಗಳಲ್ಲಿ ಟೈಗ್ರಿಸೈರೆಡ್ ( ಕೊಬ್ಬು) ಕೊಬ್ಬಿನಾಂಶ ಹೆಚ್ಚಾಗಿದ್ದು, ಒಬ್ಬ ವಿದ್ಯಾರ್ಥಿಯಲ್ಲಿ ಅಪಾಯಕಾರಿ ಹಂತ ತಲುಪಿದೆ! ಹುಬ್ಬಳ್ಳಿಯ ಕರ್ನಾಟಕ ಮೆಡಿಕಲ್ ಕಾಲೇಜು ಮತ್ತು ರಿಸರ್ಚ್ ಸೆಂಟರ್ ನ ಮಲ್ಟಿ ಡಿಸಿಪ್ಲೆನರಿ ರಿಸರ್ಚ್ ಘಟಕ ಇತ್ತೀಚಿನ ದಿನಗಳಲ್ಲಿ ಕಿಶೋರರಲ್ಲಿ ಹೃದಯ ಸಂಬಂಧಿ ಕಾಯಿಲೆ ಕಾಣಿಸಿಕೊಳ್ಳುತ್ತಿರುವ ಬಗ್ಗೆ ಅಧ್ಯಯನ ನಡೆಸಿತು. ಧಾರವಾಡ ಜಿಲ್ಲೆಯಲ್ಲಿ 8 ರಿಂದ 9 ನೇ ತರಗತಿಯಲ್ಲಿ ವ್ಯಾಸಂಗ ಮಾಆಡುತ್ತಿರುವ ಆರು ಶಾಲೆಗಳ 30 ಅಧಿಕ ತೂಕದ ಮಕ್ಕಳನ್ನು ಅಧ್ಯಯನಕ್ಕೆ ಒಳಪಡಿಸಲಾಗಿತ್ತು. ಬಾಲ್ಯಾವ್ಯಸ್ಥೆಯಲ್ಲಿ ಕಾಣಿಸಿಕೊಳ್ಳುತ್ತಿರುವ ರೋಗಗಳ ಬಗ್ಗೆ ವೈದ್ಯರ ತಂಡ ಅಧ್ಯಯನ ನಡೆಸಿದಾಗ ಆಘಾತಕಾರಿ ಸಂಗತಿಗಳು ಹೊರ…
ಬೆಂಗಳೂರು: ದಶಕದ ಬಳಿಕ ಆರೋಗ್ಯ ಇಲಾಖೆಯಲ್ಲಿ ಪೂರ್ಣಪ್ರಮಾಣದಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಯುತ್ತಿದ್ದು, ಕಳೆದ ನಾಲ್ಕು ದಿನಗಳಿಂದ ಆರೋಗ್ಯ ಸೌಧದಲ್ಲಿ ಸತತವಾಗಿ ವೈದ್ಯರು, ಸಿಬ್ಬಂದಿಗಳೊಂದಿಗೆ ವರ್ಗಾವಣೆ ಕೌನ್ಸೆಲಿಂಗ್ ನಡೆಸಲಾಗುತ್ತಿದೆ. ಪ್ರಕ್ರಿಯೆಯನ್ನು ಖುದ್ದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಇಂದು ಪರಿಶೀಲನೆ ನಡೆಸಿದರು. ಕೌನ್ಸೆಲಿಂಗ್ ಗೆ ಅರ್ಜಿ ಹಾಕಿ ವರ್ಗಾವಣೆ ಪ್ರಕ್ರಿಯೆಯಲ್ಲಿ ಪಾಲ್ಗೊಂಡಿದ್ದ ವೈದ್ಯರು ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿಗಳೊಂದಿಗೆ ವ್ಯವಸ್ಥೆ ಕುರಿತಂತೆ ಸಚಿವರು ಚರ್ಚೆ ನಡೆಸಿದರು. ಹಲವು ವರ್ಷಗಳ ಬಳಿಕ ಆರೋಗ್ಯ ಇಲಾಖೆಯಲ್ಲಿ ಕೌನ್ಸೆಲಿಂಗ್ ಮೂಲಕ ವರ್ಗಾವಣೆ ನಡೆಸುತ್ತಿರುವುದಕ್ಕೆ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಆರೋಗ್ಯ ಇಲಾಖೆ ವೈದ್ಯರು ಹಾಗೂ ಸಿಬ್ಬಂದಿಗಳು ಧನ್ಯವಾದ ತಿಳಿಸಿದರು. ಪಾರದರ್ಶಕವಾಗಿ ಕೌನ್ಸೆಲಿಂಗ್ ವರ್ಗಾವಣೆ ಪ್ರಕ್ರಿಯೆ ನಡೆಸಲಾಗುತ್ತಿದೆಯಾ ಎಂದು ಇದೇ ವೇಳೆ ಸಚಿವ ದಿನೇಶ್ ಗುಂಡೂರಾವ್ ಸಿಬ್ಬಂದಿಗಳೊಂದಿಗೆ ಚರ್ಚಿಸಿ, ಪರಿಶೀಲನೆ ನಡೆಸಿದರು.. ಸಚಿವರ ಪರಿಶೀಲನೆ ವೇಳೆ ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಹರ್ಷ ಗುಪ್ತಾ, ಇಲಾಖೆ ಆಯುಕ್ತರಾದ ಕೆ.ಬಿ ಶಿವಕುಮಾರ್ ಅವರು ಉಪಸ್ಥಿತರಿದ್ದರು. ಇಲ್ಲಿಯ ವರೆಗೆ…
ಬೆಂಗಳೂರು: ವಿಶ್ವದ ಅತಿ ದೊಡ್ಡ ಟ್ರಾಕ್ಟರ್ ಮತ್ತು ಕೃಷಿ ಉಪಕರಣ ತಯಾರಕಾ ಸಂಸ್ಥೆಯಾದ TAFE ಸಂಸ್ಥೆಯು AGCO ಸಂಸ್ಥೆಯೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ್ದು, ಬ್ರ್ಯಾಂಡ್, ವಾಣಿಜ್ಯ ಸಮಸ್ಯೆ ಮತ್ತು ಷೇರುಗಳಿಗೆ ಸಂಬಂಧಿಸಿದ ಎಲ್ಲಾ ವಿಷಯಗಳ ಕುರಿತು ಸಮಗ್ರತೆಯನ್ನು ಈ ಒಪ್ಪಂದ ಒಳಗೊಂಡಿರಲಿದೆ. TAFE ನ ಅಧ್ಯಕ್ಷೆ ಮತ್ತು ವ್ಯವಸ್ಥಾಪಕ ನಿರ್ದೇಶಕಿಯಾದ ಮಲ್ಲಿಕಾ ಶ್ರೀನಿವಾಸನ್ ಮಾತನಾಡಿ, ಮ್ಯಾಸ್ಸಿ ಫರ್ಗುಸನ್” ಮತ್ತು ಸಂಬಂಧಿತ ಟ್ರೇಡ್ಮಾರ್ಕ್ ಗಳಲ್ಲಿನ ಎಲ್ಲಾ ಹಕ್ಕುಗಳು, ಟೈಟಲ್ ಮತ್ತು ಆಸಕ್ತಿ ಮತ್ತು ಅದಕ್ಕೆ ಸಂಬಂಧಿಸಿದ ಎಲ್ಲಾ ಸದ್ಭಾವನೆಗಳನ್ನು ಒಳಗೊಂಡಂತೆ ಮ್ಯಾಸಿ ಫರ್ಗುಸನ್ ಬ್ರ್ಯಾಂಡ್ ನ ಮಾಲೀಕತ್ವವು ಭಾರತ, ನೇಪಾಳ ಮತ್ತು ಭೂತಾನ್ ಗೆ ಏಕೈಕ ಮತ್ತು ವಿಶೇಷ ಮಾಲೀಕರಾಗಿ TAFE ನೊಂದಿಗೆ ಇರುತ್ತದೆ. TAFE ನಲ್ಲಿರುವ AGCO ಷೇರುಗಳನ್ನು TAFE ಮತ್ತೆ $260 ಮಿಲಿಯನ್ಗೆ ಖರೀದಿಸಲಿದೆ ಮತ್ತು ಇದು TAFE ನ ಷೇರುಗಳ 20.7% ರಷ್ಟಿದೆ. ಇದು TAFE ಅನ್ನು ಭಾರತದ ಚೆನ್ನೈನಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ವೈವಿಧ್ಯಮಯ ಕೈಗಾರಿಕಾ ಸಮೂಹವಾದ…
ಹುಬ್ಬಳ್ಳಿ: ಕಡಿಮೆ ಪ್ರಯಾಣಿಕರ ಸಂಖ್ಯೆಯಿಂದಾಗಿ, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 17347/17348 ಎಸ್ಎಸ್ಎಸ್ ಹುಬ್ಬಳ್ಳಿ – ಚಿತ್ರದುರ್ಗ – ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲುಗಳ ಚಿಕ್ಕಜಾಜೂರು ಮತ್ತು ಚಿತ್ರದುರ್ಗ ನಡುವಿನ ಭಾಗಶಃ ರದ್ದತಿಯನ್ನು ವಿಸ್ತರಿಸಿದೆ. ಈ ಹಿಂದೆ ಜೂನ್ 30, 2025 ರವರೆಗೆ ಸೂಚಿಸಲಾಗಿದ್ದ ಈ ಭಾಗಶಃ ರದ್ದತಿಯು, ಈಗ ಜುಲೈ 2 ರಿಂದ ಡಿಸೆಂಬರ್ 31, 2025ರವರೆಗೆ ಜಾರಿಯಲ್ಲಿರುತ್ತದೆ. ಇದರನ್ವಯ, ರೈಲು ಸಂಖ್ಯೆ 17347 ಎಸ್ಎಸ್ಎಸ್ ಹುಬ್ಬಳ್ಳಿ – ಚಿತ್ರದುರ್ಗ ದೈನಂದಿನ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲು ಚಿತ್ರದುರ್ಗದ ಬದಲು ಚಿಕ್ಕಜಾಜೂರಿನಲ್ಲಿ ತನ್ನ ಸೇವೆಯನ್ನು ಕೊನೆಗೊಳಿಸಲಿದೆ. ಅದೇ ರೀತಿ, ರೈಲು ಸಂಖ್ಯೆ 17348 ಚಿತ್ರದುರ್ಗ – ಎಸ್ಎಸ್ಎಸ್ ಹುಬ್ಬಳ್ಳಿ ದೈನಂದಿನ ಕಾಯ್ದಿರಿಸದ ಎಕ್ಸ್ ಪ್ರೆಸ್ ರೈಲು ಈಗ ಚಿತ್ರದುರ್ಗದ ಬದಲು ಚಿಕ್ಕಜಾಜೂರಿನಿಂದ ಹೊರಡಲಿದೆ. ಈ ಅವಧಿಯಲ್ಲಿ ಚಿತ್ರದುರ್ಗ ಮತ್ತು ಚಿಕ್ಕಜಾಜೂರು ನಡುವಿನ ರೈಲು ಸೇವೆಗಳು ಭಾಗಶಃ ರದ್ದುಗೊಂಡಿರುತ್ತವೆ. https://kannadanewsnow.com/kannada/attention-passengers-the-operation-of-these-trains-is-canceled-route-changes/ https://kannadanewsnow.com/kannada/in-karnataka-82-tigers-have-died-in-five-and-a-half-years/
ಹುಬ್ಬಳ್ಳಿ: ಬೈಯಪ್ಪನಹಳ್ಳಿ–ಹೊಸೂರು ನಡುವಿನ ಜೋಡಿ ಮಾರ್ಗ ಕಾಮಗಾರಿ ಹಿನ್ನೆಲೆಯಲ್ಲಿ, ಮರನಾಯಕನಹಳ್ಳಿ ಯಾರ್ಡನಲ್ಲಿ ರಸ್ತೆ ಕೆಳ ಸೇತುವೆ (ಸಂಖ್ಯೆ 427A) ಕಾಮಗಾರಿ ಕೈಗೊಳ್ಳಲಾಗಿದೆ. ಇದರಿಂದಾಗಿ, ಕೆಳಕಂಡ ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ ಮತ್ತು ಮಾರ್ಗ ಬದಲಾಯಿಸಲಾಗಿದೆ. ರೈಲುಗಳ ಭಾಗಶಃ ರದ್ದು: ಜುಲೈ 5, 7, ಮತ್ತು 8, 2025 ರಂದು ಮೂರು ದಿನಗಳ ಕಾಲ ಕೆಳಕಂಡ ಮೆಮು ರೈಲು ಸೇವೆಗಳನ್ನು ಭಾಗಶಃ ರದ್ದುಗೊಳಿಸಲಾಗಿದೆ: ರೈಲು ಸಂಖ್ಯೆ 06591 ಯಶವಂತಪುರ – ಹೊಸೂರು, ರೈಲು ಸಂಖ್ಯೆ 66563 ಯಶವಂತಪುರ – ಹೊಸೂರು, ಮತ್ತು ರೈಲು ಸಂಖ್ಯೆ 66585 ಯಶವಂತಪುರ – ಹೊಸೂರು ರೈಲುಗಳು ಹೀಲಲಿಗೆ ಮತ್ತು ಹೊಸೂರು ನಡುವೆ ಭಾಗಶಃ ರದ್ದಾಗುತ್ತವೆ. ಈ ರೈಲುಗಳು ಹೀಲಲಿಗೆ ನಿಲ್ದಾಣದಲ್ಲಿ ತಮ್ಮ ಪ್ರಯಾಣವನ್ನು ಕೊನೆಗೊಳಿಸುತ್ತವೆ. ಅದೇ ರೀತಿ, ರೈಲು ಸಂಖ್ಯೆ 06592 ಹೊಸೂರು – ಯಶವಂತಪುರ, ರೈಲು ಸಂಖ್ಯೆ 66564 ಹೊಸೂರು – ಯಶವಂತಪುರ, ಮತ್ತು ರೈಲು ಸಂಖ್ಯೆ 66586 ಹೊಸೂರು – ಯಶವಂತಪುರ ರೈಲುಗಳು ಹೊಸೂರು ಮತ್ತು…
ಬೆಂಗಳೂರು: ಸಾಮಾನ್ಯ ಜನರ ಸಾರಿಗೆಯಾಗಿಯೇ ಜನಪ್ರಿಯವಾಗಿರುವ ರೈಲುಗಳ ಪ್ರಯಾಣ ದರವನ್ನು ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಅವರ ನೇತೃತ್ವದ ಕೇಂದ್ರ ಸರ್ಕಾರ ದೇಶದ ಕೋಟ್ಯಂತರ ಮಧ್ಯಮ ಮತ್ತು ಬಡವರ್ಗದ ಬದುಕಿನ ಮೇಲೆ ಬರೆ ಎಳೆದಿದೆ. ಈ ಬೆಲೆ ಏರಿಕೆಯನ್ನು ತಕ್ಷಣ ಹಿಂದೆಗೆದುಕೊಳ್ಳಬೇಕೆಂದು ಪ್ರಧಾನಿ ನರೇಂದ್ರ ಮೋದಿಯವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಒತ್ತಾಯಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಏರುತ್ತಲೇ ಇರುವ ಪೆಟ್ರೋಲ್, ಡೀಸೆಲ್ ಮತ್ತು ಅಡುಗೆ ಅನಿಲದ ದರಗಳ ಭಾರದಿಂದ ಜನರು ಈಗಾಗಲೇ ತತ್ತರಿಸಿಹೋಗಿದ್ದಾರೆ. ಹಾಲು, ಮೊಸರು, ಚಹಾ ಪುಡಿಯಿಂದ ಹಿಡಿದು ಪಾಪ್ ಕಾರ್ನ್ ವರೆಗೆ ಎಲ್ಲದರ ಮೇಲೆ ಜಿಎಸ್ಟಿ ಹೇರಿಕೆಯಿಂದಾಗಿ ಪ್ರತಿಯೊಂದು ಕುಟುಂಬದ ಬಜೆಟ್ ಏರುಪೇರಾಗಿದೆ. ಇದೇ ವೇಳೆ ರೈಲು ಪ್ರಯಾಣದ ದರ ಹೆಚ್ಚಿಸುವ ಮೂಲಕ ನರೇಂದ್ರ ಮೋದಿ ಸರ್ಕಾರ ಜನರ ಜೇಬು ಖಾಲಿ ಮಾಡಲು ಹೊರಟಿದೆ ಎಂಬುದಾಗಿ ಕಿಡಿಕಾರಿದ್ದಾರೆ. ನಮ್ಮ ಸರ್ಕಾರ ರೈತರಿಗೆ ನೆರವಾಗುವ ಉದ್ದೇಶದಿಂದ ಹಾಲಿನ ದರ ಏರಿಕೆ ಮಾಡಿದಾಗ ಜನವಿರೋಧಿ ಎಂದು ಬೊಬ್ಬಿಟ್ಟಿದ್ದ ಬಿಜೆಪಿ ನಾಯಕರು…
ದಕ್ಷಿಣ ಕನ್ನಡ: ಶ್ರೀ ಕುಕ್ಕೆ ಸುಬ್ರಹ್ಮಣ್ಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ ಮಾಸ್ಟರ್ ಪ್ಲಾನ್ ಮಂಜೂರಾತಿ ಹಾಗೂ ಈ ಕೆಳಕಂಡ ಅಭಿವೃದ್ಧಿ ಕಾರ್ಯ ಕೈಗೆತ್ತಿಕೊಳ್ಳಲು ಅಧಿಕೃತ ಮುದ್ರೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಒತ್ತಿದ್ದಾರೆ. ದೇವಸ್ಥಾನದ ಕಾಮಗಾರಿ ಕೆಲಸಗಳನ್ನು ದೇವರಿಗೆ ಮಾಡುತ್ತಿರುವ ಸೇವೆ ಎಂದು ಪರಿಗಣಿಸಿ ಪ್ರಾಮಾಣಿಕವಾಗಿ ಮಾಡಲು ಕಾಮಗಾರಿ ನಡೆಸುವ ಕಾಂಟ್ರಾಕ್ಟರುಗಳು ಹಾಗೂ ವ್ಯವಸ್ಥಾಪನ ಸಮಿತಿಯ ಸದಸ್ಯರಿಗೆ ಮುಜರಾಯಿ ಸಚಿವರು ಹಿತನುಡಿಯನ್ನು ನುಡಿದರು. ಶ್ರೀ ಕುಕ್ಕೆ ದೇವಸ್ಥಾನದ ಮಾಸ್ಟರ್ ಪ್ಲಾನ್ ಮೇಲ್ವಿಚಾರಣೆ ಮತ್ತು ವ್ಯವಸ್ಥಾಪನಾ ಸಮಿತಿ ಸಭೆ ನಡೆಸಿದರು. ಶ್ರೀ ಕುಕ್ಕೆ ದೇವಳದ ಮಾಸ್ಟರ್ ಪ್ಲಾನ್ ಯೋಜನೆಯ ಮೂರನೇ ಹಂತದಲ್ಲಿ ಪ್ರಥಮ ಆದ್ಯತೆಯಲ್ಲಿ ಕೈಗೊಳ್ಳಲಿರುವ ಕಾಮಗಾರಿಗಳ ಯೋಜನೆಯ ನಕ್ಷೆ ಹಾಗೂ ಪರಿಗಣಿಸಿರುವ ಸೌಲಭ್ಯಗಳ ಬಗ್ಗೆ ಪ್ರಾತ್ಯಕ್ಷಿಕೆಯನ್ನು ಸಚಿವರು ವೀಕ್ಷಿಸಿದರು. ಈ ಸಂದರ್ಭದಲ್ಲಿ ಕೆಲವೊಂದು ಸಲಹೆಗಳನ್ನು ಸಚಿವರು ಸದಸ್ಯರುಗಳು ನೀಡಿದ್ದು, ಅವುಗಳನ್ನು ಅಳವಡಿಸಿಕೊಂಡು ಅನುಷ್ಠಾನ ಮಾಡಲು ಸೂಚನೆ ನೀಡಿದರು. ಅಷ್ಟಮಂಗಲ ಪ್ರಶ್ನಾಚಿಂತನೆಯಲ್ಲಿ ಕಂಡುಬಂದಂತೆ ನಿಗದಿ 1. ಶ್ರೀ ದೇವಳದ…
ಬೆಂಗಳೂರು: ಇತ್ತಿಚೆಗೆ ಹೃದಯಾಘಾತಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಹೃದಯಾಘಾತಗಳನ್ನು ಅಧಿಸೂಚಿತ ಕಾಯಿಲೆ ಎಂದು ಪರಿಗಣಿಸುವ ಕುರಿತಂತೆ ಹಾಸನ ಪ್ರಕರಣಗಳ ವರದಿ ಬಂದ ಬಳಿಕ ಚರ್ಚೆ ನಡೆಸುವುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಬೆಂಗಳೂರಿನ ಆರೋಗ್ಯ ಸೌಧದಲ್ಲಿ ಇಂದು ಸುದ್ದಿಗೋಷ್ಟಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದ ಸಚಿವರು, ತಜ್ಞರ ವರದಿ ಆಧರಿಸಿ ಮುಂದಿನ ಕ್ರಮ ಕೈಗೊಳ್ಳುವುದಾಗಿ ಹೇಳಿದರು. ಹಾಸನ ಜಿಲ್ಲೆಯಲ್ಲಿ ಒಂದು ತಿಂಗಳ ಅವಧಿಯಲ್ಲಿ 18 ಹೃದಯಾಘಾತಗಳು ಸಂಭವಿಸಿವೆ. ಈ ಬಗ್ಗೆ ಹಾಸನ ಆರೋಗ್ಯ ಅಧಿಕಾರಿಗಳ ಜೊತೆ ಸಂಪರ್ಕಿಸಿ, ಹೃದಯಾಘಾತಗಳ ಬಗ್ಗೆ ವರದಿ ನೀಡುವಂತೆ ತಜ್ಞರ ಸಮಿತಿಗೆ ತಿಳಿಸಲಾಗಿದೆ. ಜಯದೇವ ಎದೆರೋಗ ಸಂಸ್ಥೆಯ ನಿರ್ದೇಶಕರ ಅಧ್ಯಕ್ಷತೆಯಲ್ಲಿ ಈಗಾಗಲೇ ಕೋವಿಡ್ ಅಡ್ಡ ಪರಿಣಾಮದಿಂದ ಆಗಿರುವ ಸಾವುಗಳು, ಹೃದಯಾಘಾತಗಳ ಕುರಿತಂತೆ ಸಂಶೋಧನೆ ನಡೆಸಿ ವರದಿ ನೀಡಲು ಸಮಿತಿ ರಚಿಸಲಾಗಿತ್ತು. ಇದೀಗ ಹಾಸನ ಹೃದಯಾಘಾತ ಪ್ರಕರಣಗಳ ಕುರಿತು ವರದಿ ನೀಡಲು ಇದೇ ಸಮಿತಿಗೆ ಜವಾವ್ದಾರಿ ವಹಿಸಲಾಗಿದೆ. 10 ದಿನಗಳ ಒಳಗಾಗಿ ಸಮಿತಿ ಸರ್ಕಾರಕ್ಕೆ ವರದಿ ಸಲ್ಲಿಸಲಿದೆ ಎಂದು ಆರೋಗ್ಯ ಸಚಿವ…
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) 2025 ರ ಸಾಮಾನ್ಯ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆಯ (Common University Entrance Test Undergraduate -CUET UG) ಅಂತಿಮ ಉತ್ತರ ಕೀಗಳನ್ನು ಬಿಡುಗಡೆ ಮಾಡಿದೆ. ಅಂತಿಮ ಉತ್ತರ ಕೀಗಳು ಈಗ ಅಧಿಕೃತ CUET ವೆಬ್ಸೈಟ್ – cuet.nta.nic.in ನಲ್ಲಿ ಲಭ್ಯವಿದೆ. ಅಧಿಕೃತ ಅಂತಿಮ ಉತ್ತರ ಕೀಲಿಯ ಪ್ರಕಾರ, ಈ ಬಾರಿ ಒಟ್ಟು 27 ಪ್ರಶ್ನೆಗಳನ್ನು ಕೈಬಿಡಲಾಗಿದೆ. ಅಂತಿಮ ಕೀ ಉತ್ತರವನ್ನು ಈ ಕೆಳಗಿನ ಹಂತಗಳನ್ನು ಅನುಸರಿಸಿ ಡೌನ್ ಲೋಡ್ ಮಾಡಿಕೊಳ್ಳುವಂತೆ ತಿಳಿಸಿದೆ. CUET UG ಅಂತಿಮ ಉತ್ತರ ಕೀ: ಪರಿಶೀಲಿಸಲು ಮತ್ತು ಡೌನ್ಲೋಡ್ ಮಾಡಲು ಹಂತಗಳು ಹಂತ 1: ಅಧಿಕೃತ ವೆಬ್ಸೈಟ್ಗೆ ಭೇಟಿ ನೀಡಿ: cuet.nta.nic.in ಹಂತ 2: ಮುಖಪುಟದಲ್ಲಿ, CUET UG 2025 ಸ್ಕೋರ್ಕಾರ್ಡ್ ಲಿಂಕ್ಗಾಗಿ ನೋಡಿ ಮತ್ತು ಅದರ ಮೇಲೆ ಕ್ಲಿಕ್ ಮಾಡಿ ಹಂತ 3: ಅರ್ಜಿ ಸಂಖ್ಯೆ ಮತ್ತು ಪಾಸ್ವರ್ಡ್ ಸಲ್ಲಿಸಿ ಹಂತ 4:…













