Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಈಗಾಗಲೇ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರಿಗೆ ಟರ್ಮ್ ಇನ್ಸೂರೆನ್ಸ್ ಜಾರಿಗೊಳಿಸಿದೆ. ಈಗ ಸರ್ಕಾರ ಮತ್ತೊಂದು ಸಿಹಿಸುದ್ದಿ ನೀಡಿದೆ. ಅದೇ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೊಳಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಆರೋಗ್ಯ ಇಲಾಖೆಯ ಮೂರು ಲಕ್ಷ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷದವರೆಗೆ ನಗದು ರಹಿತ ಆರೋಗ್ಯ ಯೋಜನೆ ಜಾರಿಗೆ ಅನುಮೋದಿಸಲಾಗಿದೆ. ಆರೋಗ್ಯ ಇಲಾಖೆಯ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ 5 ಲಕ್ಷದ ವರೆಗೆ ನಗದು ರಹಿತ ಆರೋಗ್ಯ ಯೋಜನೆಗಾಗಿ ಮಾಸಿಕ ಕುತಂಗಳಲ್ಲಿ ಸಿಬ್ಬಂದಿಗಳಿಂದ 100 ರೂಪಾಯಿ ಸಂಗ್ರಹಿಸಲು ಒಪ್ಪಿಗೆ ಸೂಚಿಸಿದೆ. ಆರೋಗ್ಯ ಇಲಾಖೆಯ ಖಾಯಂ ಹಾಗೂ ಗುತ್ತಿಗೆ ಸಿಬ್ಬಂದಿ ಹಾಗೂ ಅವರ ಅವಲಂಬಿತರಿಗೆ ಈ ಯೋಜನೆಯ ಸೌಲಭ್ಯ ಲಭ್ಯವಾಗಲಿದೆ. ಹೀಗಾಗಿ ಆರೋಗ್ಯ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ಸಿಬ್ಬಂದಿ ಮತ್ತು ಅವರ ಅವಲಂಬಿತರಿಗೆ ಇನ್ಮುಂದೆ ಐದು ಲಕ್ಷದವರೆಗೆ ನಗದು…

Read More

ಬೆಂಗಳೂರು: ಬೆಂಗಳೂರು ಹಾಲು ಒಕ್ಕೂಟದ ನೂತನ ಅಧ್ಯಕ್ಷರಾಗಿ ಮಾಜಿ ಸಂಸದ ಡಿ.ಕೆ ಸುರೇಶ್ ಆಯ್ಕೆಯಾಗಿದ್ದಾರೆ. ಇಂದು ಬೆಂಗಳೂರು ಹಾಲು ಒಕ್ಕೂಟ(BAMUL) ಚುನಾವಣೆ ನಡೆಯಿತು. ಈ ಚುನಾವಣೆಯಲ್ಲಿ ನೂತನ ಅಧ್ಯಕ್ಷರಾಗಿ ಡಿ.ಕೆ ಸುರೇಶ್ ಆಯ್ಕೆಯಾಗಿದ್ದಾರೆ. 2024ರ ಲೋಕಸಭಾ ಚುನಾವಣೆಯಲ್ಲಿ ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಸೋತ ಬಳಿಕ ಡಿ.ಕೆ ಸುರೇಶ್, ರಾಜಕೀಯದಿಂದ ಹಿನ್ನಡೆ ಅನುಭವಿಸಿದ್ದರು. ಇದೀಗ ವಿಶ್ರಾಂತಿಯ ಬಳಿಕ ಬಮೂಲ್ ಅಧ್ಯಕ್ಷರಾಗಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರೈತರು, ಸೊಸೈಟಿಯವರು ನನ್ನ ಮೇಲೆ ನಂಬಿಕೆ ಇಟ್ಟು ಆಯ್ಕೆ ಮಾಡಿದ್ದಾರೆ. ಆ ಭರವಸೆಯನ್ನು ಉಳಿಸಿಕೊಳ್ಳುತ್ತೇನೆ. ಅಧ್ಯಕ್ಷನಾಗಿ ರೈತರಿಗೆ ಎಲ್ಲಾ ಅನುಕೂಲ ಮಾಡಿಕೊಡುವಂತ ಕೆಲಸ ಮಾಡುವುದಾಗಿ ತಿಳಿಸಿದರು. ಅಂದಹಾಗೇ ಬಮೂಲ್ 14 ನಿರ್ದೇಶಕರಲ್ಲಿ ಡಿ.ಕೆ ಸುರೇಶ್ ಸೇರಿದಂತ 11 ಕಾಂಗ್ರೆಸ್ ಬೆಂಬಲಿತ ನಿರ್ದೇಶಕರಿದ್ದರು. ಇಂದು ನಿರ್ದೇಶಕ ಸ್ಥಾನದಿಂದ ಅಧ್ಯಕ್ಷ ಸ್ಥಾನಕ್ಕೆ ಸ್ಪರ್ಧಿಸಿ ಆಯ್ಕೆಯಾಗಿದ್ದಾರೆ. https://kannadanewsnow.com/kannada/madhu-received-her-phd-under-the-guidance-of-dr-s-m-muttiah-a-professor-at-sahyadri-science-college-shivamogga/ https://kannadanewsnow.com/kannada/breaking-grihalakshmi-money-released-for-the-month-of-may-minister-lakshmi-hebbalkar-gives-important-information/ https://kannadanewsnow.com/kannada/breaking-the-state-government-has-moved-to-increase-the-reservation-for-muslims-in-the-housing-scheme-by-15/

Read More

ಶಿವಮೊಗ್ಗ : ಮಧು ಟಿ. ಎಂಬುವವರು ಕುವೆಂಪು ವಿಶ್ವವಿದ್ಯಾಲಯದ ಕನ್ನಡ ವಿಭಾಗದಲ್ಲಿ ಸಹ್ಯಾದ್ರಿ ವಿಜ್ಞಾನ ಕಾಲೇಜಿನ ಪ್ರಾಧ್ಯಾಪಕರಾದ ಡಾ. ಎಸ್. ಎಂ. ಮುತ್ತಯ್ಯ ಅವರ ಮಾರ್ಗದರ್ಶನದಲ್ಲಿ ಮಂಡಿಸಿದ್ದ “ಸಮಕಾಲೀನ ಮಹಿಳಾ ಕಥನ ಸಾಹಿತ್ಯ; ವಿಭಿನ್ನ ನೆಲೆಗಳು” (ಹೆಚ್.ನಾಗವೇಣಿ, ಸುಮಂಗಲಾ, ಸುನಂದಾ ಪ್ರಕಾಶ ಕಡಮೆ, ವಿನಯಾ ಒಕ್ಕುಂದರವರ ಕಥನ ಸಾಹಿತ್ಯವನ್ನು ಅನುಲಕ್ಷಿಸಿ) ಎಂಬ ಮಹಾಪ್ರಬಂಧಕ್ಕೆ ಪಿಹೆಚ್.ಡಿ. ಪದವಿ ನೀಡಿ ಗೌರವಿಸಿದೆ. ಮಧು ಟಿ. ಶಿವಮೊಗ್ಗ ತಾಲ್ಲೂಕಿನ ಗಾಜನೂರು ಅಗ್ರಹಾರದ ಅರಸಮ್ಮ ಮತ್ತು ತಿಮ್ಮಯ್ಯ ದಂಪತಿಗಳ ಪುತ್ರರಾಗಿದ್ದು, ಪ್ರಸ್ತುತ ಕಟೀಲ್ ಅಶೋಕ ಪೈ ಕಾಲೇಜಿನಲ್ಲಿ ಉಪನ್ಯಾಸಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. https://kannadanewsnow.com/kannada/the-state-cabinet-has-approved-an-increase-in-muslim-reservation-in-the-housing-scheme/ https://kannadanewsnow.com/kannada/breaking-grihalakshmi-money-released-for-the-month-of-may-minister-lakshmi-hebbalkar-gives-important-information/

Read More

ಬೆಂಗಳೂರು: ರಾಜ್ಯದ ಮುಸ್ಲಿಂ ಸಮುದಾಯದವರಿಗೆ ಗುಡ್ ನ್ಯೂಸ್ ಎನ್ನುವಂತೆ ವಸತಿ ಯೋಜನೆಯಲ್ಲೂ ಮೀಸಲಾತಿ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದಿಸಿದೆ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ವಸತಿ ಯೋಜನೆಯಲ್ಲಿ ಮುಸ್ಲೀಂ ಸಮುದಾಯಕ್ಕೆ ಮೀಸಲಾತಿ ಹೆಚ್ಚಳಕ್ಕೆ ಅಸ್ತು ಎಂದಿದೆ. ಹೀಗಾಗಿ ಮುಸ್ಲೀಮರಿಗೆ ವಸತಿ ಯೋಜನೆಯಲ್ಲಿ ಮೀಸಲಾತಿ ಶೇ.10ರಿಂದ ಶೇ.15ಕ್ಕೆ ಹೆಚ್ಚಳವಾಗಲಿದೆ. ವಸತಿ ಯೋಜನೆಯಲ್ಲಿ ಅಲ್ಪಸಂಖ್ಯಾತರಿಗೆ ಶೇ.10ರಷ್ಟು ಮೀಸಲಾತಿ ಇತ್ತು. ಇದೀಗ ವಸತಿ ಯೋಜನೆಯ ಮೀಸಲಾತಿ ಶೇ.15ಕ್ಕೆ ಹೆಚ್ಚಳಕ್ಕೆ ರಾಜ್ಯ ಸಚಿವ ಸಂಪುಟ ಸಭೆ ಅನುಮೋದಿಸಿದೆ. https://kannadanewsnow.com/kannada/the-date-for-the-karnataka-legislative-assembly-monsoon-session-has-been-fixed-starting-from-august-11/ https://kannadanewsnow.com/kannada/breaking-grihalakshmi-money-released-for-the-month-of-may-minister-lakshmi-hebbalkar-gives-important-information/

Read More

ಬೆಂಗಳೂರು: ಗೃಹಲಕ್ಷ್ಮಿ ಯೋಜನೆಯ ಫಲಾನುಭವಿಗಳ ಪಟ್ಟಿಯಲ್ಲಿ ಯಾವುದೇ ರೀತಿಯ ಪರಿಷ್ಕರಣೆ ಇಲ್ಲ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಸ್ಪಷ್ಟಪಡಿಸಿದ್ದಾರೆ. ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರ ಪ್ರಶ್ನೆಗಳಿಗೆ ಅವರು ಉತ್ತರಿಸಿದರು. ಹಣ ಸಂದಾಯಕ್ಕೆ ತಾಂತ್ರಿಕ ಸಮಸ್ಯೆ ಆಗುತ್ತಿದೆಯೇ ಎಂಬ ಪ್ರಶ್ನೆಗೆ, ಆತಂಹ ಸಮಸ್ಯೆ ಏನೂ ಇಲ್ಲ ಎಂದರು. ಈ‌ಗಾಗಲೇ ಏಪ್ರಿಲ್ ತಿಂಗಳ ಹಣ ಸಂದಾಯವಾಗಿದ್ದು, ಮೇ ತಿಂಗಳ ಹಣ ವರ್ಗಾವಣೆ ಆಗಬೇಕಿದೆ. ನಮಗೆ ಹಣಕಾಸು ಇಲಾಖೆಯಿಂದ ಹಣ ಬಿಡುಗಡೆ ಆಗಬೇಕಿದೆ. ನಮ್ಮ ಇಲಾಖೆಯ ಬದಲಾಗಿ ಈಗ ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿ ಮೂಲಕ ಹಣ ಸಂದಾಯವಾಗುತ್ತಿದೆ ಎಂದು ಹೇಳಿದರು. ಗೃಹಲಕ್ಷ್ಮಿ ಯೋಜನೆ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಕಾಳಜಿ ಇದೆ‌. ಯೋಜನೆಗೆ ಯಾವುದೇ ತೊಂದರೆ ಇಲ್ಲ. ಜಿಲ್ಲಾ ಹಾಗೂ ತಾಲೂಕು ಪಂಚಾಯಿತಿಗಳ ಮೂಲಕ ಹಣ ಸಂದಾಯವಾಗಬೇಕು ಎಂದು ಕೇಂದ್ರದ ನಿಯಮ ಇದೆ. ಹೀಗಾಗಿ ಫಲಾನುಭವಿಗಳಿಗೆ ಹಣ ತಲುಪಲು ಕೊಂಚ ವಿಳಂಬವಾಗುತ್ತಿದೆ ಎಂದು ಉತ್ತರಿಸಿದರು. ಪ್ರತಿ ತಿಂಗಳು 10 ರಿಂದ…

Read More

ಬೆಂಗಳೂರು: ಪರಿಸರ ಮತ್ತು ಹವಾಮಾನ ವೈಪರೀತ್ಯದಂತಹ ವಿಷಯಕ್ಕೆ ಸಂಬಂಧಿಸಿದಂತೆ ಪ್ರತಿ ಶಾಲೆಯಲ್ಲೂ ʼಜಾಗೃತಿ ಕ್ಲಬ್‌ʼಗಳನ್ನು ಕಡ್ಡಾಯವಾಗಿ ಆರಂಭಿಸಲು ಕಟ್ಟುನಿಟ್ಟಿನ ಆದೇಶ ನೀಡಲಾಗಿದೆ. ಈ ಜಾಗೃತಿ ಕ್ಲಬ್‌ಗಳು ಪರಿಸರ ಮತ್ತು ನಿಸರ್ಗವನ್ನು ಉಳಿಸುವ ದಿಸೆಯಲ್ಲಿ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯ ಮಾಡಲಿದೆ ಎಂದು ಉಪ ಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್‌ ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1935311047487012957 “ಕಬ್ಬನ್ ಪಾರ್ಕ್, ಲಾಲ್ ಬಾಗ್ ರೀತಿ ಉದ್ಯಾನಗಳನ್ನು ಅಭಿವೃದ್ಧಿಪಡಿಸಿದರೆ ಬೆಂಗಳೂರು ನಗರದಾದ್ಯಂತ ಇರುವ ಅರಣ್ಯ ಇಲಾಖೆ ಜಾಗಗಳು ಉಳಿದಂತಾಗುತ್ತದೆ. ಸಾರ್ವಜನಿಕರಿಗೂ ಅನುಕೂಲವಾಗುತ್ತದೆ” ಎಂದು ಹೇಳಿದರು. “ಭೂಮಿ ನಮಗೆ ಸೇರಿದ್ದಲ್ಲ, ನಾವು ಭೂಮಿಗೆ ಸೇರಿದವರು ಎನ್ನುವುದನ್ನು ಯಾರೊಬ್ಬರು ಮರೆಯಬಾರದು. ಪ್ರಕೃತಿ ಉಚಿತವಾಗಿ ಊಟ ಕೊಡುತ್ತಿದೆ ಎಂದು ಅದನ್ನು ಕಂಠಪೂರ್ತಿ ತಿನ್ನಬಾರದು. ಭವಿಷ್ಯಕ್ಕೂ ಉಳಿಸಬೇಕು” ಎಂದು ತಿಳಿಸಿದರು. “ಸುತ್ತಲಿನ ಪ್ರಕೃತಿ, ಮಣ್ಣು, ನೀರನ್ನು ಉಳಿಸುವ ಸಂಕಲ್ಪವನ್ನು ನಮ್ಮ ಸರ್ಕಾರ ತೆಗೆದುಕೊಂಡಿದೆ. ಹಸಿರು ಮತ್ತು ಉಸಿರನ್ನು ರಕ್ಷಿಸುವ ಗ್ಯಾರಂಟಿಯನ್ನು ನಮ್ಮ ಸರ್ಕಾರ ನೀಡಲಿದೆ. ಪ್ರಕೃತಿಯಿಂದ ನಾವು ತೆಗೆದುಕೊಳ್ಳುವುದಕ್ಕಿಂತ ಹೆಚ್ಚಿಗೆ ಅದಕ್ಕೆ ವಾಪಸ್ ಕೊಡಬೇಕು. ಈ…

Read More

ಬೆಂಗಳೂರು: ಡಿಸಿಇಟಿ-25 ಪರೀಕ್ಷೆ ಬರೆದಿದ್ದ ಹೊರನಾಡು, ಗಡಿನಾಡು ಕನ್ನಡಿಗರ ಸಲುವಾಗಿ ಜೂನ್.18ರ ಬುಧವಾರ ಕೆಇಎ ಕಚೇರಿಯಲ್ಲಿ ಪರೀಕ್ಷೆ ನಡೆದು ಒಂದು ಗಂಟೆಯಲ್ಲೇ ಫಲಿತಾಂಶ ಕೂಡ ಪ್ರಕಟಿಸಲಾಗಿದೆ. ಪರೀಕ್ಷೆ ತೆಗೆದುಕೊಂಡಿದ್ದ 27 ಅಭ್ಯರ್ಥಿಗಳ ಪೈಕಿ ಪರೀಕ್ಷೆ ಗೆ ಹಾಜರಾಗಿದ್ದು ಕೇವಲ ಏಳು ಮಂದಿ. ಅವರಲ್ಲಿ ಒಬ್ಬರು ಅನುತ್ತೀರ್ಣರಾಗಿದ್ದು ಉಳಿದ ಆರು ಮಂದಿ ಅರ್ಹರಾಗಿದ್ದಾರೆ ಎಂದು ಪ್ರಸನ್ನ ತಿಳಿಸಿದ್ದಾರೆ. ಒಟ್ಟು 50 ಅಂಕಗಳ ಲಿಖಿತ ಪರೀಕ್ಷೆ ಯಲ್ಲಿ ಕನಿಷ್ಠ 12 ಅಂಕ ಪಡೆದವರು ಮಾತ್ರ ಈ ಕೋಟಾದಡಿ ಸೀಟು ಪಡೆಯಲು ಅರ್ಹರಾಗುತ್ತಾರೆ. ಆದರೆ ಏಳು ಮಂದಿಯಲ್ಲಿ ಒಬ್ಬ ವಿದ್ಯಾರ್ಥಿ ಮಾತ್ರ 10 ಅಂಕ ಪಡೆದು ಅನರ್ಹರಾಗಿದ್ದಾರೆ ಎಂದರು.

Read More

ಬೆಂಗಳೂರು : “ಬೆಂಗಳೂರು ನಗರದ ಕೆರೆಗಳ ಒತ್ತುವರಿ ಸೇರಿದಂತೆ ಕೆರೆ ಮಾಲಿನ್ಯದ ಬಗ್ಗೆ ಅಧ್ಯಯನ ನಡೆಸಲು ವಿಧಾನಪರಿಷತ್ ಸದಸ್ಯರಾದ ಟಿ.ಎ.ಶರವಣ, ಜವರಾಯಿಗೌಡ ಹಾಗೂ ಗೋಪಿನಾಥ್ ಅವರ ನೇತೃತ್ವದಲ್ಲಿ ಪ್ರತ್ಯೇಕ ಮೂರು ಸಮಿತಿಗಳನ್ನು ಮಾಡುವಂತೆ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಸೂಚನೆ ನೀಡಿದರು. ಬನಶಂಕರಿಯಲ್ಲಿರುವ ಬೆಂಗಳೂರು ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಬುಧವಾರ ನಡೆದ 2025-26ನೇ ಸಾಲಿನ ಮೊದಲನೇ ತ್ರೈಮಾಸಿಕ ಕೆಡಿಪಿ ಸಭೆಯಲ್ಲಿ ಡಿಸಿಎಂ ಮಾತನಾಡಿದರು. “ಈ ಸಮಿತಿಯು ನಗರದಾದ್ಯಂತ ಇರುವ ಕೆರೆಗಳ ಒತ್ತುವರಿ, ಕೆರೆಗಳಿಗೆ ಕೊಳಚೆ ನೀರು ಸೇರುತ್ತಿರುವುದು ಸೇರಿದಂತೆ ಇತರೇ ಸಮಸ್ಯೆಗಳ ಬಗ್ಗೆ ಅಧ್ಯಯನ ನಡೆಸಿ ವರದಿ ನೀಡಲಿದೆ.‌ ಕೆರೆಗಳಿಗೆ ಚರಂಡಿ ಕೊಳಚೆ ನೀರು ಬಿಡುತ್ತಿರುವವರು ಯಾರೇ ಆಗಿರಲಿ, ಯಾವುದೇ ಕೈಗಾರಿಕೆಗಳಾಗಲಿ ಯಾರಿಗೂ ಮುಲಾಜು ತೋರಬೇಡಿ.‌ ಅಂತಹವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಿ. ಕೆರೆಗಳನ್ನು ಈಗಲೇ ಸಂರಕ್ಷಣೆ ಮಾಡದಿದ್ದರೆ ಮುಂದಕ್ಕೆ ಕಷ್ಟವಾಗಲಿದೆ” ಎಂದು ಅಧಿಕಾರಿಗಳಿಗೆ ತಿಳಿಸಿದರು. ಸಮರ್ಪಕ ಆಸ್ತಿ ತೆರಿಗೆ ಏಕೆ ಬರುತ್ತಿಲ್ಲ “ನಗರ ಇಷ್ಟು ದೊಡ್ಡದಾಗಿ ಬೆಳೆದರೂ ಸಮರ್ಪಕ ಆಸ್ತಿ ತೆರಿಗೆ…

Read More

ಬೆಂಗಳೂರು: ಬಿಪಿಟಿ, ಬಿಪಿಒ, ಎಎಚ್ಎಸ್ ಕೋರ್ಸ್ ಗಳ ಪ್ರವೇಶಕ್ಕೆ ಅಭ್ಯರ್ಥಿಗಳ ದ್ವಿತೀಯ ಪಿಯುಸಿ ಅಂಕಗಳ ಆಧಾರದ ಮೇಲೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ Rank ಪ್ರಕಟಿಸಿದೆ. ಯುಜಿಸಿಇಟಿ ಬರೆದಿದ್ದ ಎಲ್ಲ ಅಭ್ಯರ್ಥಿಗಳಿಗೂ Rank ನೀಡಲಾಗಿದೆ. ಬಿಪಿಟಿ ಮತ್ತು ಎಎಚ್ಎಸ್ ಕೋರ್ಸ್ ಗಳಿಗೆ ವಿಜ್ಞಾನ ಮತ್ತು ಬಿಪಿಒ ಕೋರ್ಸ್ ಗಳ ಪ್ರವೇಶಕ್ಕೆ ಕಲಾ ಮತ್ತು ವಾಣಿಜ್ಯ ವಿಷಯಗಳಲ್ಲಿ ಪಿಯುಸಿ ಶಿಕ್ಷಣ ಮುಗಿಸಿರುವವರು ಕೂಡ ಅರ್ಹರು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. https://twitter.com/KEA_karnataka/status/1935316653308510241 ಒಂದು ಗಂಟೆಯಲ್ಲಿ ಕನ್ನಡ ಪರೀಕ್ಷೆ ಫಲಿತಾಂಶ ಪ್ರಕಟ ಡಿಸಿಇಟಿ-25 ಪರೀಕ್ಷೆ ಬರೆದಿದ್ದ ಹೊರನಾಡು, ಗಡಿನಾಡು ಕನ್ನಡಿಗರ ಸಲುವಾಗಿ ಬುಧವಾರ (ಜೂ.18) ಇಲ್ಲಿನ ಕೆಇಎ ಕಚೇರಿಯಲ್ಲಿ ಪರೀಕ್ಷೆ ನಡೆದು ಒಂದು ಗಂಟೆಯಲ್ಲೇ ಫಲಿತಾಂಶ ಕೂಡ ನೀಡಲಾಗಿದೆ. ಪರೀಕ್ಷೆ ತೆಗೆದುಕೊಂಡಿದ್ದ 27 ಅಭ್ಯರ್ಥಿಗಳ ಪೈಕಿ ಪರೀಕ್ಷೆ ಗೆ ಹಾಜರಾಗಿದ್ದು ಕೇವಲ ಏಳು ಮಂದಿ. ಅವರಲ್ಲಿ ಒಬ್ಬರು ಅನುತ್ತೀರ್ಣರಾಗಿದ್ದು ಉಳಿದ ಆರು ಮಂದಿ ಅರ್ಹರಾಗಿದ್ದಾರೆ ಎಂದು ಪ್ರಸನ್ನ ತಿಳಿಸಿದ್ದಾರೆ. ಒಟ್ಟು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಧ್ಯಾಹ್ನ ಉಪಹಾರ ಯೋಜನೆಯ ಮುಖ್ಯ ಅಡುಗೆಯವರು, ಸಹಾಯಕರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಮಾಸಿಕ ಗೌರವ ಸಂಭಾವನೆಯನ್ನು 1000ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಕುರಿತಂತೆ ಶಾಲಾ ಶಿಕ್ಷಣ ಇಲಾಖೆಯ ಆಯುಕ್ತ ಡಾ.ತ್ರಿಲೋಕ ಚಂದ್ರ ಕೆವಿ ಅವರು ಸುತ್ತೋಲೆ ಹೊರಡಿಸಿದ್ದಾರೆ. 2025-26ನೇ ಸಾಲಿನ ಅಯವ್ಯಯ ಭಾಷಣದ ಕಂಡಿಕೆಯ 109ರಲ್ಲಿ ಘೋಷಣಯಂತೆ ಮಧ್ಯಾಹ್ನ ಉಪಹಾರ ಯೋಜನೆಯಡಿ ಕಾರ್ಯನಿರ್ವಹಿಸುತ್ತಿರುವ ಅಡುಗೆಯವರಿಗೆ ಮತ್ತು ಸಹಾಯಕ ಅಡುಗೆಯವರಿಗೆ ನೀಡಲಾಗುತ್ತಿರುವ ಮಾಸಿಕ ಗೌರವ ಸಂಭಾವನೆಯನ್ನು ರೂ.1000ಗಳಷ್ಟು ಹೆಚ್ಚಿಸುವ ಕುರಿತಂತೆ ಉಲ್ಲೇಖಿಸಲಾಗಿದೆ ಎಂದಿದ್ದಾರೆ. ರಾಜ್ಯ ಸರ್ಕಾರದ ಉಲ್ಲೇಖದಂತೆ ಮುಖ್ಯ ಅಡುಗೆಯವರು, ಸಹಾಯಕ ಅಡುಗೆಯವರಿಗೆ ಮಾಸಿಕ ಸಂಭಾವನೆ ಕೇಂದ್ರದ ಶೇ.60ರಷ್ಟು ಅಂದರೆ ರೂ.600 ಹಾಗೂ ಮಾಸಿಕ ಸಂಭಾವನೆ ರಾಜ್ಯದ ಶೇ.40ರಷ್ಟು ಅಂದರೆ ರೂ.400 ಸೇರಿದಂತೆ ರಾಜ್ಯ ಸರ್ಕಾರದಿಂದ ನೀಡಲಾಗುತ್ತಿರುವ ಹೆಚ್ಚುವರಿ ಮಾಸಿಕ ಸಂಭಾವನೆಯ ಮೊತ್ತ ರೂ.3700 ಸೇರಿಸಿ, ರೂ.4700 ಮಾಸಿಕ ಸಂಭಾವನೆ ಮೊತ್ತ ನೀಡಲಾಗುವುದು ಅಂತ ತಿಳಿಸಿದ್ದಾರೆ. ಇನ್ನೂ ರಾಜ್ಯದ ಎಲ್ಲಾ 31 ಜಿಲ್ಲಾ…

Read More