Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ಉತ್ತಮ ಸಾರಿಗೆ ಸಂಚಾರದ ವ್ಯವಸ್ಥೆ ಕಲ್ಪಿಸುತ್ತಿರುವಂತ ಬಿಎಂಟಿಸಿಯು, ತನ್ನ ಬಸ್ಸುಗಳಲ್ಲಿ ಟಿಕೆಟ್ ಇಲ್ಲದೇ ಪ್ರಯಾಣಿಸಿದಂತ 4,176 ಮಂದಿಯಿಂದ ಬರೋಬ್ಬರಿ 8.11 ಲಕ್ಷ ದಂಡವನ್ನು ವಸೂಲಿ ಮಾಡಿದೆ. ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಬಿಎಂಟಿಸಿ ವಾಹನಗಳಲ್ಲಿ ಸಂಚರಿಸುವ ಪ್ರಯಾಣಿಕರು ಟಿಕೇಟನ್ನು ಪಡೆಯದೆ ಅನಧಿಕೃತವಾಗಿ ಪ್ರಯಾಣ ಮಾಡುವವರನ್ನು ಮತ್ತು ಸಂಸ್ಥೆಯ ಸಾರಿಗೆ ಆದಾಯದ ಸೋರಿಕೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ, ನಗರದಾದ್ಯಂತ ಸಂಚರಿಸುವ ವಾಹನಗಳನ್ನು ನಮ್ಮ ಸಂಸ್ಥೆಯ ತನಿಖಾ ತಂಡಗಳು ಜೂನ್-2024 ರ ಮಾಹೆಯಲ್ಲಿ ಒಟ್ಟು 18,378 ಟ್ರಿಪ್ಗಳನ್ನು ತಪಾಸಿಸಿ 3750 ಟಿಕೇಟ್ ರಹಿತ ಪ್ರಯಾಣಿಕರನ್ನು ಪತ್ತೆ ಹಚ್ಚಿ, ಅವರಿಂದ ಒಟ್ಟು ರೂ. 7,68,910/- ದಂಡ ವಸೂಲಿ ಮಾಡಿ ಸಂಸ್ಥೆಯ ನಿರ್ವಾಹಕರ ವಿರುದ್ಧ 1014 ಪ್ರಕರಣಗಳನ್ನು ದಾಖಲಿಸಿರುತ್ತಾರೆ ಅಂತ ತಿಳಿಸಿದೆ. ಮಹಿಳಾ ಪ್ರಯಾಣಿಕರಿಗೆಂದೇ ಮೀಸಲಾಗಿರುವ ಆಸನಗಳಲ್ಲಿ ಕುಳಿತು ಪ್ರಯಾಣಿಸಿರುವ 426 ಪುರುಷ ಪ್ರಯಾಣಿಕರಿಂದ ಒಟ್ಟು ರೂ. 42,600/- ನ್ನು ಮೋಟಾರು ವಾಹನ ಕಾಯ್ದೆ 1988ರ ಕಾಲಂ…
ಬೆಂಗಳೂರು: ಇಂದು ಸಂಸತ್ತಿನಲ್ಲಿ ಮಂಡನೆಯಾದಂತ ಕೇಂದ್ರ ಬಜೆಟ್ ವಿಕಸಿತ ಭಾರತ ಎಂಬ ಹುಸಿ ಕಲ್ಪನೆಯಾಗಿದೆ. ಕೇಂದ್ರದ ನೀತಿಗಳ ಕುರಿತು ಯಾವುದೇ ಪ್ರಸ್ತಾಪವನ್ನೇ ಮಾಡಿಲ್ಲ. ಇದೊಂದು ಕೇವಲ ಕಾಗದದ ಹುಲಿಯಾಗಿದೆ ಅಂತ ಸಚಿವ ಹೆಚ್.ಕೆ ಪಾಟೀಲ್ ಅಭಿಪ್ರಾಯ ಪಟ್ಟಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ನಿರುದ್ಯೋಗ, ಬಡತನ ನಿರ್ಮೂಲನೆಯಂತಹ ಆದ್ಯತಾ ವಲಯಗಳ ಕಡೆಗೆ ಕಿಂಚಿತ್ತು ಗಮನ ನೀಡದ ಕೇಂದ್ರ ಸರ್ಕಾರದ ಬಜೆಟ್ ಭಾರತೀಯ ಮಾನವ ಸಂಪನ್ಮೂಲದ ಸದ್ಭಳಕೆಗೆ ಯಾವುದೇ ರೀತಿಯ ಕಾರ್ಯಕ್ರಮ ರೂಪಿಸದೇ ಕೇವಲ ಅಂಕಿ-ಸಂಖ್ಯೆಗಳ ಮೂಲಕ ಗೊಂದಲ ಸೃಷ್ಟಿಸಿ, ನಿರಾಸೆ ಮೂಡಿಸಿದೆ. “ವಿಕಸಿತ ಭಾರತ” ಎಂಬ ಹುಸಿ ಕಲ್ಪನೆಯನ್ನು ಅನಾವರಣಗೊಳಿಸಿರುವ ಕೇಂದ್ರದ ಬಜೆಟ್ ಐದು ವರ್ಷಗಳ ಅವಧಿಯಲ್ಲಿ 135 ಕೋಟಿ ಭಾರತೀಯ ಜನಸಂಖ್ಯೆಯ ಪೈಕಿ 20 ಲಕ್ಷ ಯುವಕರಿಗೆ ಕೌಶಲ್ಯ ತರಬೇತಿಯನ್ನು ನೀಡುವ ಬಗ್ಗೆ ಪ್ರಸ್ತಾಪಿಸಿರುವುದು ಹಾಸ್ಯಸ್ಪದವಾಗಿದೆ. ರೂ.7.50 ಲಕ್ಷ ಸಾಲ ನೀಡುವ ಕಲ್ಪನೆ ಕೇವಲ ಕಲ್ಪನೆಯಾಗಿಯೇ ಉಳಿಯಲಿದೆ, ಏಕೆಂದರೆ ಇಲ್ಲಿಯವರೆಗೂ ಬ್ಯಾಂಕ್ಗಳು ನಿರುದ್ಯೋಗಿಗಳಿಗೆ ಭದ್ರತೆ ರಹಿತ ಸಾಲವನ್ನೇ…
ಬೆಂಗಳೂರು: ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದಂತ ಕೇಂದ್ರ ಬಜೆಟ್ 2024-25ರಲ್ಲಿ ಕರ್ನಾಟಕಕ್ಕೆ ಯಾವುದೇ ಪ್ರಾಧಾನ್ಯತೆಯನ್ನು ನೀಡದೇ, ಕಡೆಗಣಿಸಲಾಗಿದೆ. ಈ ಹಿನ್ನಲೆಯಲ್ಲಿ ಜು.27ರಂದು ಪ್ರಧಾನಿ ಮೋದಿ ನೇತೃತ್ವದಲ್ಲಿ ಕರೆದಿರುವಂತ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಿರ್ಧರಿಸಿರುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡಿರುವಂತ ಮಾಡಿದಂತ ಅವರು, ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಅಂತ ವಾಗ್ಧಾಳಿ ನಡೆಸಿದ್ದಾರೆ. ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ ಎಂದಿದ್ದಾರೆ. ಇಂದು…
ಮಂಡ್ಯ : ಸ್ಟೋನ್ ಕ್ರಷರ್ ಗೆ ಎನ್ಒಸಿ ನೀಡಲು 10 ಲಕ್ಷ ರೂಪಾಯಿ ಲಂಚಕ್ಕೆ ಬೇಡಿಕೆ ಇಟ್ಟು 1 ಲಕ್ಷ ರೂಪಾಯಿಗಳನ್ನು ಪಡೆಯುವ ವೇಳೆ ಶ್ರೀರಂಗಪಟ್ಟಣ ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ಹಾಗೂ ವಾಹನ ಚಾಲಕ ಪ್ರಸನ್ನ ಕುಮಾರ್ ಮಂಗಳವಾರ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಸಂತೋಷ್ ಎಂಬುವವರಿಂದ ಒಂದು ಲಕ್ಷ ರೂಪಾಯಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದು, ಆರ್.ಎಫ್.ಒ. ಪುಟ್ಟಸ್ವಾಮಿ ಮತ್ತು ಚಾಲಕ ಪ್ರಸನ್ನಕುಮಾರ್ ಅವರನ್ನು ಬಂಧಿಸಿದ್ದಾರೆ. ಲೋಕಾಯುಕ್ತ ಎಸ್ಪಿ ಸುರೇಶ್ ಬಾಬು ನೇತೃತ್ವದಲ್ಲಿ ಕಾರ್ಯಾಚರಣೆ ನಡೆಸಲಾಗಿದ್ದು, ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ. ವರದಿ : ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/keladi-pdo-ashfaq-ahmed-on-alert-after-mlas-instructions-in-sagar-water-standing-on-road-cleared/ https://kannadanewsnow.com/kannada/big-scam-in-shivamogga-district-money-paid-to-co-operative-society-secretary-panganama/
ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency- NTA) ನೀಟ್-ಯುಜಿ 2024 ರ ( NEET-UG 2024 ) ಅಂತಿಮ ಫಲಿತಾಂಶಗಳನ್ನು ಎರಡು ದಿನಗಳಲ್ಲಿ ಪ್ರಕಟಿಸಲಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ( Union Education Minister Dharmendra Pradhan ) ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಹೇಳಿದರು. ಸುಪ್ರೀಂ ಕೋರ್ಟ್ ಇಂದು (ಜುಲೈ 23) ಮಾಡಿದ ಅವಲೋಕನಗಳ ಪ್ರಕಾರ ನೀಟ್-ಯುಜಿ ಮೆರಿಟ್ ಪಟ್ಟಿಯನ್ನು ಪರಿಷ್ಕರಿಸಲಾಗುವುದು ಎಂದು ಸಚಿವರು ಹೇಳಿದರು. “ಯಾರಾದರೂ ಪರೀಕ್ಷಾ ಅಕ್ರಮಗಳಲ್ಲಿ ಭಾಗಿಯಾಗಿರುವುದು ಕಂಡುಬಂದರೆ, ಅವರನ್ನು ಬಿಡುವುದಿಲ್ಲ. ಯಾವುದೇ ರೀತಿಯ ಉಲ್ಲಂಘನೆಗೆ ಶೂನ್ಯ ಸಹಿಷ್ಣುತೆ; ಪರೀಕ್ಷೆಗಳ ಪಾವಿತ್ರ್ಯತೆ ನಮಗೆ ಸರ್ವೋಚ್ಚವಾಗಿದೆ.” ನೀಟ್-ಯುಜಿ 2024 ಅನ್ನು ರದ್ದುಗೊಳಿಸುವ ಬೇಡಿಕೆಗಳನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ನಂತರ, ಸುಪ್ರೀಂ ಕೋರ್ಟ್ ಮಂಗಳವಾರ ತೀರ್ಪು ನೀಡಿದ್ದು, “ಪ್ರಸ್ತುತ ಹಂತದಲ್ಲಿ, ಫಲಿತಾಂಶದ ತೀರ್ಮಾನಕ್ಕೆ ಬರಲು ಸಾಕಷ್ಟು ಪುರಾವೆಗಳ ಕೊರತೆಯಿದೆ ಅಥವಾ ಪರೀಕ್ಷೆಯ ಪಾವಿತ್ರ್ಯಕ್ಕೆ ವ್ಯವಸ್ಥಿತ ಉಲ್ಲಂಘನೆಯಾಗಿದೆ ಎಂದಿತ್ತು. https://kannadanewsnow.com/kannada/former-minister-haratalu-halappa-demands-immediate-compensation-for-rain-victims/ https://kannadanewsnow.com/kannada/big-scam-in-shivamogga-district-money-paid-to-co-operative-society-secretary-panganama/
ಶಿವಮೊಗ್ಗ: ಜಿಲ್ಲೆಯಲ್ಲಿ ಕಳೆದ ಎರಡು ವಾರಗಳಿಂದ ಭಾರೀ ಮಳೆಯಾಗುತ್ತಿದೆ. ಮಳೆಯ ಕಾರಣದಿಂದ ಸಾಗರ, ಹೊಸನಗರ ತಾಲ್ಲೂಕಿನ ಅನೇಕ ಕಡೆಯಲ್ಲಿ ಜನರು ಸಂತ್ರಸ್ತರಾಗಿದ್ದಾರೆ. ಕೂಡಲೇ ತಾಲ್ಲೂಕು ಆಡಳಿತದಿಂದ ಮಳೆಹಾನಿ ಸಂತ್ರಸ್ತರಿಗೆ ಪರಿಹಾರ ನೀಡಬೇಕು. ಮನೆ ಹಾನಿಗೆ 5 ಲಕ್ಷ ಪರಿಹಾರ ಮಂಜೂರು ಮಾಡಬೇಕು ಅಂತ ಮಾಜಿ ಸಚಿವ ಹರತಾಳು ಹಾಲಪ್ಪ ಆಗ್ರಹಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಅಣಲೇಕೊಪ್ಪದಲ್ಲಿರುವಂತ ಸಾಗರ ತಾಲ್ಲೂಕು ಕಾರ್ಯನಿರತ ಪತ್ರಕರ್ತರ ಸಂಘದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಇಡೀ ರಾಜ್ಯಾಧ್ಯಂತ ಮಳೆ ಆಗುತ್ತಿದೆ. ಮಲೆನಾಡಿನಲ್ಲಿ ಹೆಚ್ಚಾಗೇ ಸುರಿಯುತ್ತಿದೆ. ಮಳೆಯಿಂದಾಗಿ ಸಾಗರ, ಹೊಸನದ ಹಲವೆಡೆ ಮನೆ ಬಿದ್ದಿವೆ. ಮಳೆಹಾನಿಯಿಂದ ಜನರು ಸಂತ್ರಸ್ತರಾಗಿದ್ದಾರೆ ಎಂದರು. ಮನೆಹಾನಿಗೆ ಕೂಡಲೇ 5 ಲಕ್ಷ ಪರಿಹಾರ ಕೊಡಿ 2019ರಲ್ಲಿ ಮಳೆಹಾನಿಯಾದವರಿಗೆ ಮನೆ ಕಟ್ಟಿಸಿಕೊಡುವ ಕೆಲಸ ಮಾಡಿದ್ದೇವೆ. 5 ಲಕ್ಷದವರೆಗೆ ಪರಿಹಾರ ಕೊಟ್ಟಿದ್ದೇವೆ. 1.5 ಲಕ್ಷ ಭಾಗಶಹ ಮಳೆಹಾನಿಗೆ, 10,000 ತತ್ ಕ್ಷಣದಲ್ಲಿ ಪರಿಹಾರವನ್ನು ನೀಡಿದ್ದೇವೆ ಎಂದು ಅವರು ತಿಳಿಸಿದರು. ಸಾಗರ ತಾಲ್ಲೂಕಿನಲ್ಲಿ ಭಾರೀ ಮಳೆಯಿಂದಾಗಿ 48 ಮನೆಗಳು ಕುಸಿದು…
ಒಂದು ಗ್ಲಾಸ್ ನೀರು ಮನೆಯಲ್ಲಿ ಯಾವುದೇ ಪ್ರಮುಖ ವಾಸ್ತು ದೋಷವನ್ನು ಸರಿಪಡಿಸಬಹುದು. ಇನ್ನು ವಾಸ್ತು ಸರಿಪಡಿಸಲು ಲಕ್ಷಗಟ್ಟಲೆ ಹಣ ಖರ್ಚು ಮಾಡಬೇಕಿಲ್ಲ. ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ…
ಬೆಂಗಳೂರು : “ಬೆಂಗಳೂರು ಎಲ್ಲರಿಗೂ ಸೇರಿದ್ದು, ಹೀಗಾಗಿ ಬೆಂಗಳೂರಿನ ಹಿತ ಕಾಪಾಡಲು ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕಕ್ಕೆ ಎಲ್ಲಾ ನಾಯಕರ ಅಭಿಪ್ರಾಯ, ಸಲಹೆ ಪಡೆಯಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನಸಭೆಯಲ್ಲಿ 2024ನೇ ಸಾಲಿನ ಗ್ರೇಟರ್ ಬೆಂಗಳೂರು ಆಡಳಿತ ವಿಧೇಯಕ ಮಂಡನೆ ಮಾಡಿದಾಗ, ವಿರೋಧ ಪಕ್ಷದ ನಾಯಕರಾದ ಆರ್.ಅಶೋಕ್, ಬಿಜೆಪಿ ಶಾಸಕರಾದ ಅಶ್ವತ್ಥ್ ನಾರಾಯಣ ಹಾಗೂ ಸುರೇಶ್ ಕುಮಾರ್ ಅವರು ಈ ವಿಧೇಯಕ ಮಂಡನೆಗೆ ವಿರೋಧ ವ್ಯಕ್ತಪಡಿಸಿದರು. ಈ ವೇಳೆ ಮಾತನಾಡಿದ ಶಿವಕುಮಾರ್ ಅವರು, “ನಾನು ಹಳ್ಳಿಯಲ್ಲಿ ಹುಟ್ಟಿರಬಹುದು. ಆದರೆ 5ನೇ ವಯಸ್ಸಿನಿಂದ ಬೆಂಗಳೂರಿನಲ್ಲೇ ವಾಸಿಸುತ್ತಿದ್ದೇನೆ. ಇಲ್ಲಿನ ಪರಿಸ್ಥಿತಿ ಆರೀತಿದ್ದೇನೆ. ನಾನು ರಾಜಕೀಯವಾಗಿ ಬೇರೆಡೆ ಪ್ರತಿನಿಧಿಸುತ್ತಿದ್ದೇನೆ. ನನಗೂ ಬೆಂಗಳೂರಿನ ಬಗ್ಗೆ ಕಾಳಜಿ ಇದೆ. ಅಧಿಕಾರಿಗಳ ಸಮಿತಿ ಮಾಡಿದ್ದಾಗ ಅವರು ಲಂಡನ್ ಮಾದರಿ ಪ್ರಸ್ತಾಪ ಮಾಡಿದ್ದರು. ಆದರೆ ನಾನು ಅದನ್ನು ಒಪ್ಪಲಿಲ್ಲ. ಈಗಿರುವ ವ್ಯವಸ್ಥೆಯನ್ನು ಸಂಪೂರ್ಣವಾಗಿ ಬದಲಿಸಲು ಆಗುತ್ತಿಲ್ಲ. ಇರುವ ವ್ಯವಸ್ಥೆಯನ್ನೇ ಸ್ವಲ್ಪ ಪ್ರಮಾಣದಲ್ಲಿ ಮಾರ್ಪಾಡು ಮಾಡಲು ಪ್ರಯತ್ನಿಸುತ್ತಿದ್ದೇವೆ” ಎಂದು ತಿಳಿಸಿದರು. “ಈ…
ಬೆಂಗಳೂರು : “ನಾಡಪ್ರಭು ಕೆಂಪೇಗೌಡರು ಕಟ್ಟಿಸಿರುವ ನಾಲ್ಕು ಗೋಪುರಗಳನ್ನು ಮೀರಿ ಬೆಳೆಯುತ್ತಿರುವ ಬೆಂಗಳೂರಿನ ಸಮರ್ಪಕ ನಿರ್ವಹಣೆಗೆ ಗ್ರೇಟರ್ ಬೆಂಗಳೂರು ಬಿಲ್ ಮಂಡನೆ ಮಾಡಲಾಗಿದೆ” ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ಅವರು ತಿಳಿಸಿದರು. ಬಿಡ್ಬ್ಲೂಎಸ್ ಎಸ್ ಬಿ ನೌಕರರ ಸಂಘ ಆಯೋಜಿಸಿದ್ದ ನಾಡಪ್ರಭು ಕೆಂಪೇಗೌಡರ 515ನೇ ಜಯಂತ್ಯೋತ್ಸವದಲ್ಲಿ ಮಾತನಾಡಿದ ಅವರು “ಕಳೆದ ಒಂದು ವರ್ಷದಿಂದ ನಮ್ಮ ಸಾರ್ವಜನಿಕರಿಂದ 70 ಸಾವಿರ ಸಲಹೆಗಳನ್ನು ಪಡೆಯಲಾಗಿದೆ. ಇವುಗಳನ್ನು ಕ್ರೋಡಿಕರಿಸಿ ಬೆಂಗಳೂರು ಜನಪ್ರತಿನಿಧಿಗಳು ಹಾಗೂ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಗ್ರೇಟರ್ ಬೆಂಗಳೂರು ಬಿಲ್ ಸಿದ್ದಪಡಿಸಲಾಗಿದೆ. ಕೆಂಪೇಗೌಡರು ಬೆಂಗಳೂರು ಕಟ್ಟಿದರು, ಕೆಂಗಲ್ ಹನುಮಂತಯ್ಯ ಅವರು ವಿಧಾನಸೌಧ ಕಟ್ಟಿದರು. ಎಸ್.ಎಂ.ಕೃಷ್ಣ ಅವರು ಬೆಂಗಳೂರಿನ ಹೆಸರನ್ನು ಅಂತರರಾಷ್ಟೀಯ ಮಟ್ಟಕ್ಕೆ ಬೆಳೆಸಿದರು. ಇಂತಹ ಬೆಂಗಳೂರನ್ನು ನಾವು ಉಳಿಸಬೇಕಾಗಿದೆ” ಎಂದು ಹೇಳಿದರು. “ಸಚಿವನಾದ ತಕ್ಷಣ ಬೆಂಗಳೂರಿಗೆ 6 ಟಿಎಂಸಿ ಕಾವೇರಿ ನೀರನ್ನು ಹೆಚ್ಚುವರಿಯಾಗಿ ಪೂರೈಕೆ ಮಾಡಲು ಕ್ರಮ ಕೈಗೊಳ್ಳಲಾಗಿದೆ. ನಗರದ ಜನರಿಗೆ ನೀರು, ಭದ್ರತೆ, ಮೂಲಸೌಕರ್ಯಗಳನ್ನು ಒದಗಿಸಿಕೊಡಬೇಕು. ವಾಹನಗಳ ಸಂಖ್ಯೆ, ನಗರಕ್ಕೆ ವಲಸೆ ಬರುವವರ ಸಂಖ್ಯೆ ಹೆಚ್ಚಾಗಿದೆ.…
ಶಿವಮೊಗ್ಗ : ತೋಟಗಾರಿಕೆ ಇಲಾಖೆ ವತಿಯಿಂದ 2024-25ನೇ ಸಾಲಿನಲ್ಲಿ ಸಮಗ್ರ ತೋಟಗಾರಿಕೆ ಅಭಿವೃದ್ಧಿ ಯೋಜನೆಯಡಿ ತೋಟಗಾರಿಕೆಯಲ್ಲಿ ವಿನೂತನ ತಂತ್ರಜ್ಞಾನ ಮತ್ತು ಯಂತ್ರೋಪಕರಣಗಳಿಗೆ ಸಹಾಯಧನ ಕಾರ್ಯಕ್ರಮದಡಿ 3ಹೆಚ್ಪಿ, 5 ಹೆಚ್ಪಿ ಮತ್ತು ಮೇಲ್ಪಟ್ಟು ಸೋಲಾರ್ ಪಂಪ್ಸೆಟ್ಗಳಿಗೆ ಇಲಾಖೆಯಿಂದ ನಿಗದಿಪಡಿಸಿದ ದರದಂತೆ ಸಹಾಯಧನವನ್ನು ನೀಡಲಾಗುತ್ತಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಆಸಕ್ತ ರೈತರು ಇಲಾಖೆಯಿಂದ ಅನುಮೋದಿತ ಎಂಪ್ಯಾನಲ್ ಸಂಸ್ಥೆಗಳಿಂದ ಸೋಲಾರ್ ಪಂಪ್ಸೆಟ್ಗಳನ್ನು ಅಳವಡಿಸಿಕೊಳ್ಳಬಹುದಾಗಿದ್ದು, ಶಿವಮೊಗ್ಗ ತಾಲೂಕಿನ ಸಾಮಾನ್ಯ ವರ್ಗಕ್ಕೆ -3, ಪ.ಜಾ. ವರ್ಗದವರಿಗೆ 5 ಮತ್ತು ಪ.ಪಂ.ದವರಿಗೆ- 1 ಸೋಲಾರ್ ಪಂಪ್ಸೆಟ್ಗಳಿಗೆ ಅವಕಾಶವಿದ್ದು, ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಆಯಾ ಹೋಬಳಿ ರೈತರ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ತಾಲೂಕು ತೋಟಗಾರಿಕೆ ಇಲಾಖೆಗಳಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಆಗಸ್ಟ್ 09ರೊಳಗಾಗಿ ಸಲ್ಲಿಸುವಂತೆ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಹೆಚ್ಚಿನ ಮಾಹಿತಿಗಾಗಿ ಆಯಾ ಹೋಬಳಿ ರೈತರ ಸಂಪರ್ಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳು ಅಥವಾ ಜಿಲ್ಲಾ ತೋಟಗಾರಿಕೆ ಇಲಾಖೆ ದೂ.ಸಂ.:08182-279415…