Author: kannadanewsnow09

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ, ಸರ್ಕಾರವು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು 186 ಖಾಸಗಿ ಆಸ್ಪತ್ರೆಗಳಿಗೆ ವಿಸ್ತರಿಸಿ ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರದಿಂದ ಆದೇಶ ಹೊರಡಿಸಿದ್ದು, ದಿನಾಂಕ:09.03.2023 ರ ಆದೇಶದಲ್ಲಿ ಈಗಾಗಲೇ ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್‌ನ ವಿವಿಧ ಯೋಜನೆಯಡಿಯಲ್ಲಿ ಹಾಗೂ ಕರ್ನಾಟಕ ಸರ್ಕಾರಿ ನೌಕರರ (ವೈದ್ಯಕೀಯ ಹಾಜರಾತಿ) ನಿಯಮಗಳು 1963 ರಡಿ ನೊಂದಾಯಿತಗೊಂಡಿರುವ ಖಾಸಗಿ ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯಡಿ (KASS), “ಭಾವಿತ ನೊಂದಾವಣೆಗೆ (Deemed Empanelment) ಒಳಪಡಿಸಲು ಆದೇಶಿಸಲಾಗಿದೆ. ಅದರಂತೆ, ಆಸ್ಪತ್ರೆಗಳು ಹೊಂದಿರಬೇಕಾದ ಮೂಲ ಸೌಕರ್ಯಗಳು ಹಾಗೂ ಇತರೆ ಮಾನದಂಡಗಳನ್ನು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ ವತಿಯಿಂದ ಪರಿಶೀಲಿಸಿಕೊಂಡು, ಆಸ್ಪತ್ರೆಗಳೊಂದಿಗೆ ಸೂಕ್ತ ಒಪ್ಪಂದ (MoU) ಮಾಡಿಕೊಳ್ಳುವ ಷರತ್ತಿಗೊಳಪಟ್ಟು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಒಳಪಡಲು ಇಚ್ಛೆ ವ್ಯಕ್ತಪಡಿಸಿರುವ ಅನುಬಂಧದಲ್ಲಿನ 186 ಆಸ್ಪತ್ರೆಗಳನ್ನು ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಗೆ ಖಾಸಗಿ ನೊಂದಾವಣೆಗೊಳಿಸಲಾಗಿದೆ. ಸದರಿ ಅಧಿಸೂಚನೆಯನ್ನು ಸರ್ಕಾರದ ಆದೇಶ ಸಂಖ್ಯೆ: ಸಿಆಸುಇ 16 ಎಸ್‌ಎಂಆ‌ 2020,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ವಿಶ್ವ ವಿಖ್ಯಾತ ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಅವರನ್ನು ಆಯ್ಕೆ ಮಾಡಲಾಗಿತ್ತು. ಈ ಕ್ರಮವನ್ನು ಪ್ರಶ್ನಿಸಿ ಹೈಕೋರ್ಟ್ ಬಳಿಕ ಸುಪ್ರೀಂ ಕೋರ್ಟ್ ಗೆ ಪಿಐಎಲ್ ಸಲ್ಲಿಸಲಾಗಿತ್ತು. ಇಂದು ಈ ಅರ್ಜಿಯನ್ನು ವಜಾಗೊಳಿಸಲಾಗಿತ್ತು. ಸುಪ್ರೀಂ ಕೋರ್ಟ್ ತೀರ್ಪನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸ್ವಾಗತಿಸಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಮೈಸೂರು ದಸರಾ ಉದ್ಘಾಟನೆಗೆ ಬೂಕರ್ ಪ್ರಶಸ್ತಿ ವಿಜೇತ ಸಾಹಿತಿ ಬಾನು ಮುಷ್ತಾಕ್ ಅವರನ್ನು ಆಹ್ವಾನಿಸಿದ ರಾಜ್ಯ ಸರ್ಕಾರದ ನಿಲುವಿನ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯನ್ನು ವಜಾಗೊಳಿಸಿರುವ ಸರ್ವೋಚ್ಚ ನ್ಯಾಯಾಲಯದ ತೀರ್ಪನ್ನು ಸ್ವಾಗತಿಸುತ್ತೇನೆ ಎಂದಿದ್ದಾರೆ. ಮೈಸೂರು ದಸರಾವನ್ನು ಧಾರ್ಮಿಕ ನೆಲೆಗಟ್ಟಿಗೆ ಸೀಮಿತವಾಗಿಸಲು ಸಾಧ್ಯವಿಲ್ಲ. ಜಾತಿ, ಧರ್ಮಗಳನ್ನು ಮೀರಿ ನಾಡಿನ ಸಮಸ್ತ ಜನರು ಕೂಡಿ ಸಂಭ್ರಮಿಸುವ ಹಬ್ಬವೆಂದು ನಾವು ಮೊದಲಿನಿಂದಲೂ ಹೇಳುತ್ತಾ ಬಂದಿದ್ದೆವು, ಆದರೂ ಇದರ ವಿರುದ್ಧ ವ್ಯವಸ್ಥಿತ ಅಪಪ್ರಚಾರ ನಡೆಸಿ, ಸಮಾಜವನ್ನು ಒಡೆಯುವ ಪ್ರಯತ್ನ ಮಾಡಲಾಯಿತು. ಈಗ ಸುಪ್ರೀಂ ತೀರ್ಪಿನಿಂದ ನಮ್ಮ…

Read More

ಕಲಬುರ್ಗಿ: ರಾಜ್ಯದಲ್ಲೊಂದು ಬೆಚ್ಚಿ ಬೀಳಿಸೋ ಕೃತ್ಯ ಎನ್ನುವಂತೆ ತಂದೆಯ ಮೇಲಿನ ಸೇಡಿಗಾಗಿ ಅವರ ಮಗಳನ್ನೇ ಪಾಪಿಯೊಬ್ಬ ಬರ್ಬರವಾಗಿ ಕೊಲೆ ಮಾಡಿರುವಂತ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿಯಲ್ಲಿ ಓರ್ವ ಯುವಕನ ಆತ್ಮಹತ್ಯೆಗೆ ಪ್ರತೀಕಾರವಾಗಿ ಏನನ್ನು ಅರಿಯದಂತ ಜೀವನದಲ್ಲಿ ಬಾಳಿ ಬದುಕಬೇಕಾಗಿದ್ದಂತ ಯುವತಿಯನ್ನು ಯುವಕನೊಬ್ಬ ರಾಡ್ ನಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ್ದಾನೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲ್ಲೂಕಿನ ಮಳಖೇಡ ಗ್ರಾಮದಲ್ಲಿ ಕಬ್ಬಿಣದ ರಾಡ್ ನಿಂದ ಯುವತಿ ಭಾಗ್ಯಶ್ರೀ ಸುಲಹಳ್ಳಿ ತಲೆಗೆ ಹೊಡೆದು ಬರ್ಬರವಾಗಿ ಮಂಜುನಾಥ್ ಎಂಬಾತ ಕೊಲೆಗೈದಿದ್ದಾನೆ. ಕಳೆದ ಸೆ.11ರಂದು ಭಾಗ್ಯಶ್ರೀ ಹಾಗೂ ಅಕ್ಕ ಜೊತೆಗೆ ವಾಕಿಂಗ್ ತೆರಳಿದ್ದರು. ಕಿರಾಣಿ ಅಂಗಡಿಯಲ್ಲಿ ದಿನಸಿ ತೆಗೆದುಕೊಂಡು ಬರುವಷ್ಟರಲ್ಲಿ ಭಾಗ್ಯಶ್ರೀ ನಾಪತ್ತೆಯಾಗಿದ್ದಳು. ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಈ ಸಂಬಂಧ ಪೊಲೀಸರಿಗೆ ದೂರು ನೀಡಿದ್ದರು. ಆದರೇ ಇಂದು ಬೆಳಗ್ಗೆ ಮಳಖೇಡ ಸಿಮೆಂಟ್ ಕಾರ್ಖಾನೆ ಪಕ್ಕದಲ್ಲಿನ ನಾಲೆಯಲ್ಲಿ ಭಾಗ್ಯಶ್ರೀ ಮೃತದೇಹ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಕಬ್ಬಿಣದ ರಾಡ್ ನಿಂದ ತಲೆಗೆ ಹೊಡೆದು ಹತ್ಯೆ ಮಾಡಿರುವುದಾಗಿ ತನಿಖೆಯ ವೇಳೆ ತಿಳಿದು ಬಂದಿದೆ.…

Read More

ಚಿತ್ರದುರ್ಗ : ಸೆಪ್ಟೆಂಬರ್ 22 ರಂದು ಆರಂಭವಾಗುವ ಸಾಮಾಜಿಕ ಮತ್ತು ಶೈಕ್ಷಣಿಕ ಜಾತಿ ಗಣತಿ ಸಮೀಕ್ಷೆ ವೇಳೆಯಲ್ಲಿ ಜಾತಿ ಮತ್ತು ಉಪಜಾತಿ ಎರಡು ಕಾಲಂಗಳಲ್ಲೂ “ಕಾಡುಗೊಲ್ಲ” ಎಂದು ನಮೂದಿಸಬೇಕೆಂದು ಸಮುದಾಯ ಮುಖಂಡರು ಮನವಿ ಮಾಡಿದರು. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರದ ಪುಷ್ಪಾಂಜಲಿ ಟಾಕೀಸ್ ರಸ್ತೆಯಲ್ಲಿರುವ ವಿಲಾಸ್ ಹಾಲ್ ನಲ್ಲಿ ಗುರುವಾರ ಪಕ್ಷತಿತವಾಗಿ ಸಮುದಾಯದ ಮುಖಂಡರು ಪೂರ್ವಭಾವಿ ಸಭೆ ನಡೆಸಿ ಮಾಹಿತಿ ನೀಡಿದರು. ಈ ಸಮೀಕ್ಷೆಯು ನಮ್ಮ ಸಮಾಜ ಜನಸಂಖ್ಯೆ ಎಷ್ಟಿದೆ ಎಂಬುದನ್ನು ತಿಳಿಯಲು ಜಾತಿ ಗಣತಿ ಕಾರ್ಯ ಸರ್ಕಾರ ನಡೆಸುತ್ತಿದೆ. ಸಮುದಾಯದ ವಿಚಾರ ಬಂದಾಗ ನಮ್ಮ ತನವನ್ನು ಬಿಟ್ಟುಕೊಡಬಾರದು. ಕಾಡುಗೊಲ್ಲರ ಅಸ್ಮಿತೆಯನ್ನು ಕಾಪಾಡಬೇಕಿದೆ. ಈಗಿರುವಾಗ ನಾವು ಜಾತಿ ಕಾಲಂ ನಲ್ಲಿ ಕಾಡುಗೊಲ್ಲ ಎಂದೇ ನಮೂದಿಸಬೇಕು. ಜಾತಿ ಹಾಗೂ ಉಪಜಾತಿ ಕಾಲಂನಲ್ಲಿ ಕಾಡುಗೊಲ್ಲ ಎಂದೇ ಬರೆಸಿದಾಗ ಮಾತ್ರ ಸಮುದಾಯದ ಸ್ಥಿತಿಗತಿಯ ಸ್ಪಷ್ಟ ಚಿತ್ರಣ ಮತ್ತು ಸಾಮಾಜಿಕ ಅನುಕೂಲಗಳು ಸಿಗುತ್ತವೆ ಎಂದು ಮುಖಂಡರು ಒತ್ತಿ ಒತ್ತಿ ಹೇಳಿದರು. ಅಧಿಕಾರಿಗಳು ಮನೆ ಮನೆಗೆ ಸರ್ವೆಗೆ ಬಂದಾಗ…

Read More

ಬೆಂಗಳೂರು: ನಗರದಲ್ಲಿ ಬೆಚ್ಚಿ ಬೀಳಿಸೋ ಕೃತ್ಯವೊಂದು ನಡೆಸಲಾಗಿದೆ. ಲೈಂಗಿಕ ಕ್ರಿಯೆಗೆ ಒಪ್ಪದ ಯುವತಿಗೆ ವ್ಯಕ್ತಿಯೊಬ್ಬ ಚಾಕುವಿನಿಂದ ಇರಿದಿರುವಂತ ಘಟನೆ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಇರುವಂತ ಕೋ ಲಿವಿಂಗ್ ಪಿಜಿಯಲ್ಲಿ ನಡೆದಿದೆ. ಮದುವೆಯಾಗಿ ಮಗುವಿದ್ದರೂ ಬೆಂಗಳೂರಿನ ವೈಟ್ ಫೀಲ್ಡ್ ನಲ್ಲಿ ಇರುವಂತ ಕೋ ಲಿವಿಂಗ್ ಪಿಜಿಯಲ್ಲಿ ಟೆಕ್ಕಿ ಬಾಬು ಎನ್ನುವಾತ ಒಬ್ಬನೇ ವಾಸವಿದ್ದನು. ಎರಡು ತಿಂಗಳ ಹಿಂದೆ ಅದೇ ಪಿಜೆಗೆ ಬಂದಿದ್ದಂತ ಯುವತಿ ವಾಸವಾಗಿದ್ದಳು. ಬಾಬುಗೆ ಆಕೆ ಪರಿಚಯವಾಗಿದ್ದಳು. ಆಕೆಯ ಪೋನ್ ನಂಬರ್ ಪಡೆದಿದ್ದಂತ ಬಾಬು, ಆಕೆಯೊಂದಿಗೆ ಮಾತನಾಡುತ್ತಿದ್ದಂತೆ. ಮೂರು ದಿನಗಳ ಹಿಂದೆ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದಾಗ, ಯುವತಿ ಒಪ್ಪಿರಲಿಲ್ಲ. ಆಕೆಯ ಖಾಸಗಿ ಪೋಟೋ ಇಟ್ಟುಕೊಂಡು 70 ಸಾವಿರ ಹಣಕ್ಕೂ ಡಿಮ್ಯಾಂಡ್ ಮಾಡಿದ್ದನಂತೆ. ಇದಷ್ಟೇ ಅಲ್ಲದೇ ಯುವತಿಯ ಮೊಬೈಲ್ ಪಡೆದು, ಆಕೆಯ ಖಾತೆಯಲ್ಲಿದ್ದಂತ 14 ಸಾವಿರ ಹಣವನ್ನು ತನ್ನ ಖಾತೆಗೆ ವರ್ಗಾಯಿಸಿಕೊಂಡಿದ್ದಾನೆ. ಇನ್ನೂ ಹಣಕ್ಕೆ ಬೇಡಿಕೆ ಇಟ್ಟಾಗ ಸ್ನೇಹಿತರ ಬಳಿ ಸಾಲ ಪಡೆದು ನೀಡುವುದಾಗಿ ಯುವತಿ ತಿಳಿಸಿದ್ದಾರೆ. ಇದಕ್ಕೂ ಬಿಡದೇ ಗಲಾಟೆ…

Read More

ಬೆಂಗಳೂರು : ಹಿಂದುಳಿದ ವರ್ಗಗಳ ಆಯೋಗ ಶಾಸನಬದ್ಧ ಸಂಸ್ಥೆಯಾಗಿದ್ದು, ಅವರಿಗೆ ಯಾವುದೇ ನಿರ್ದೇಶನಗಳನ್ನು ನೀಡಲು ಸಾಧ್ಯವಿಲ್ಲ. ಸಮೀಕ್ಷೆಯ ಬಗ್ಗೆ ಅಭಿಪ್ರಾಯಗಳನ್ನು ಆಯೋಗಕ್ಕೆ ವಿವರಿಸಲಾಗಿದ್ದು, ಅಂತಿಮ ನಿರ್ಧಾರ ಆಯೋಗವೇ ಕೈಗೊಳ್ಳಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ವಾರ್ತಾಸೌಧದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಆರ್ಥಿಕ, ಸಾಮಾಜಿಕ ಸಮೀಕ್ಷೆಗೆ ಸಚಿವಸಂಪುಟದಲ್ಲಿ ವಿರೋಧ ವ್ಯಕ್ತವಾಗಿರುವ ಬಗ್ಗೆ ಪರ್ತಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಬಿಜೆಪಿಯವರು ಈ ವಿಚಾರದಲ್ಲಿ ರಾಜಕೀಯ ಮಾಡುತ್ತಿದ್ದು, ಕಾಂಗ್ರೆಸ್ ಸರ್ಕಾರ ಹಿಂದೂ ವಿರೋಧಿಯಾಗಿದೆ ಎಂದು ಆರೋಪಿಸುತ್ತಿದ್ದಾರೆ. ಇದನ್ನು ಎಲ್ಲ ಸಚಿವರೂ ಒಕ್ಕೊರಲಿನಿಂದ ಖಂಡಿಸಬೇಕು ಎಂದು ಎಲ್ಲ ಸಚಿವರಿಗೂ ಸೂಚಿಸಲಾಗಿದೆ. ಸಮೀಕ್ಷೆಯು ಸೆಪ್ಟೆಂಬರ್ 22 ರಿಂದ ಪ್ರಾರಂಭವಾಗಲಿದ್ದು, ಸಮೀಕ್ಷೆಯನ್ನು ಮುಂದೂಡುವುದಿಲ್ಲ ಎಂದರು. https://kannadanewsnow.com/kannada/the-government-has-issued-an-important-order-regarding-the-footpaths-and-stone-roads-for-the-lands-of-the-farmers-in-the-state/ https://kannadanewsnow.com/kannada/good-news-for-the-people-of-the-state-the-government-has-ordered-to-open-yoga-and-naturopathy-centers-in-10-taluks/

Read More

ಬೆಂಗಳೂರು: ರಾಜ್ಯದ ಜನತೆಗೆ ಮತ್ತೊಂದು ಗುಡ್ ನ್ಯೂಸ್ ಎನ್ನುವಂತೆ 10 ತಾಲ್ಲೂಕಿನಲ್ಲಿ ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲು ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಆಯುಷ್ ಆಯುಕ್ತರು ಪುಸ್ತಾವನೆ ಸಲ್ಲಿಸಿ, ತಾಲ್ಲೂಕು ಆಸ್ಪತ್ರೆಗಳಲ್ಲಿ ಯೋಗ ಮತ್ತು ಪುಕೃತಿ ಚಿಕಿತ್ಸೆ ಕೇಂದ್ರಗಳನ್ನು ತೆರೆಯಲು ಕೇಂದ್ರ ಪುರಸ್ಕೃತ ಯೋಜನೆಯಾದ ರಾಷ್ಟ್ರೀಯ ಗ್ರಾಮೀಣ ಆರೋಗ್ಯ ಅಭಿಯಾನ (NRHM) ದಡಿ ಸಾರ್ವಜನಿಕ ಖಾಸಗಿ ಸಹಭಾಗಿತ್ವದೊಂದಿಗೆ 2009-10ರಿಂದ ರಾಜ್ಯದ 10 ತಾಲ್ಲೂಕಾ ಆಸ್ಪತ್ರೆಗಳಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಗಳು ಆರೋಗ್ಯ ಇಲಾಖೆ ಮತ್ತು ಅಧ್ಯಕ್ಷರು, ಶಾಂತಿವನ ಟ್ರಸ್ ಧರ್ಮಸ್ಥಳರವರ ನಡುವೆ 10 ವರ್ಷದ ಅವಧಿಗೆ MOU ಮಾಡಿಕೊಳ್ಳಲಾಗಿತ್ತು.ತದನಂತರ ಐದು ವರ್ಷಗಳಿಗೆ MoU ಮುಂದುವರೆದು 2022ಕ್ಕೆ ಮುಕ್ತಾಯಗೊಂಡಿರುತ್ತದೆ. ಅಲ್ಲದೇ, ಏಪ್ರಿಲ್- 2022 ರಿಂದ ಆಗಸ್ಟ್-2024 ರವರೆಗೆ ಸದರಿ ಕೇಂದ್ರಗಳನ್ನು ಶಾಂತಿವನ ಟ್ರಸ್ ರವರು ನಿರ್ವಹಿಸಿರುತ್ತಾರೆ. ದಿನಾಂಕ:28-11-2024 ರಂದು ನಡೆದ ಸಭೆಯ ನಡವಳಿಯ ನಿರ್ಣಯದಲ್ಲಿ ಸದರಿ…

Read More

ಬೆಂಗಳೂರು: ನಾವು ಜಾತಿ ಸಮೀಕ್ಷೆಯನ್ನು ಮುಂದೂಡೋದಕ್ಕೂ ಬರೋದಿಲ್ಲ. ನಾವು ನಿರ್ದೇಶನ ಕೋಡೋದಕ್ಕೂ ಬರೋದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸ್ಪಷ್ಟ ಪಡಿಸಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಾತಿಗಣತಿ ಸಮೀಕ್ಷೆಯನ್ನು ನಾವು ಮುಂದೂಡಲ್ಲ. ನಾವು ನಿರ್ದೇಶನ ಕೊಡೋದಕ್ಕೆ ಬರೋದಿಲ್ಲ. ಸಮೀಕ್ಷೆ ವಿಚಾರದಲ್ಲಿ ಬಿಜೆಪಿಯವರು ರಾಜಕೀಯ ಮಾಡುತ್ತಿದ್ದಾರೆ ಎಂಬುದಾಗಿ ಹೇಳಿದರು.

Read More

ಬೆಂಗಳೂರು: ಜಾತಿ ಸಂಘರ್ಷದ ಕಿಚ್ಚುಹಚ್ಚಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಕ್ರೈಸ್ತ ಸಮುದಾಯ ಆಕ್ರೋಶ ಹೊರಹಾಕಿದೆ. ಕ್ರಿಶ್ಚಿಯನ್ ಧರ್ಮದಲ್ಲಿ ಜಾತಿ ವ್ಯವಸ್ಥೆ ಸೃಷ್ಠಿಸಲು ರಾಜ್ಯ ಸರ್ಕಾರ ಮುಂದಾಗಿರುವುದು ಸರಿಯಲ್ಲ, ಈ ಸಂಬಂಧದ ನಿರ್ಧಾರವನ್ನು ಕೈಬಿಡಬೇಕೆಂದು ಕ್ರಿಶ್ಚಿಯನ್ ಸೇವಾ ಸಂಘ (CSS) ಒತ್ತಾಯಿಸಿದೆ. ರಾಷ್ಟ್ರೀಯ ಹಿತಾಸಕ್ತಿಯನ್ನು ಪ್ರತಿಪಾದಿಸುತ್ತಿರುವ ಕ್ರೈಸ್ತಧರ್ಮದ ಹಾಗೂ ಜನರ ಹಿತಾಸಕ್ತಿ ಸಂಬಂಧ ವಿವಿಧ ಕಾರ್ಯಕ್ರಮಗಳನ್ನು ನಡೆಸುತ್ತಾ ಬರುತ್ತಿರುವ ಕ್ರಿಶ್ಚಿಯನ್ ಸೇವಾ ಸಂಘದ ಅಧ್ಯಕ್ಷ ಶಾಜಿ ಟಿ ವರ್ಗೀಸ್ ಅವರು, ರಾಜ್ಯ ಸರ್ಕಾರದ ನಡೆ ವಿರೋಧಿಸಿ ಸಿಎಂ ಸಿದ್ದರಾಮಯ್ಯ, ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರು, ಮುಖ್ಯ ಕಾರ್ಯದರ್ಶಿ, ರಾಜ್ಯ ಹಿಂದುಳಿದ ವರ್ಗಗಳ ಆಯುಕ್ತರಿಗೆ ಪತ್ರ ಬರೆ ಬೆಳವಣಿಗೆ ಗಮನಸೆಳೆದಿದೆ. ಸಂವಿಧಾನದ ಆಶಯಗಳನ್ನು ಗೌರವಿಸುವ ಬಗ್ಗೆ ಭರವಸೆ ನೀಡಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಪಕ್ಷವು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲಿ ಈ ರಾಜ್ಯವನ್ನು ‘ಸರ್ವ ಜನಾಂಗಗಳ ಶಾಂತಿಯ ತೋಟ’ವನ್ನಾಗಿ ಮಾಡುವ ಭರವಸೆಯನ್ನು ನೀಡಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದು ಅಧಿಕಾರಕ್ಕೆ ಬಂದಿರುವ ಕಾಂಗ್ರೆಸ್ ಸರ್ಕಾರ…

Read More

ಚಾಮರಾಜನಗರ : ಕುರುಕಲು ತಿಂಡಿ ಪ್ರಿಯರನ್ನು ನೋಡಿರುತ್ತೀರಿ, ಹೆಚ್ಚು ತಿನ್ನುವ ತಿಂಡಿಪೋತರನ್ನು ಕಂಡಿರುತ್ತೀರಿ. ಆದರೆ, ಇಲ್ಲೋರ್ವ ಹಣ್ಣಿನ ರಸದಂತೆ ಎಂಜಿನ್ ಆಯಿಲ್ ಕುಡಿದು ಎಲ್ಲರನ್ನೂ ಅಚ್ಚರಿಗೆ ಒಳಗಾ ಗುವಂತೆ ಮಾಡಿದ ಘಟನೆ ಚಾಮರಾಜನಗರ ನಡೆದಿದೆ. ಜಿಲ್ಲೆಯ ಕೊಳ್ಳೇಗಾಲದಲ್ಲಿ ಮೈಸೂರಿನ ಕುಮಾರ್‌ಎಂಬ ಅಯ್ಯಪ್ಪಸ್ವಾಮಿ ಭಕ್ತ ಕೊಳ್ಳೇಗಾಲದ ಮೂಲಕ ಶಬರಿಮಲೆ ಯಾತ್ರೆಗೆ ತೆರಳುವಾಗ ಕೊಳ್ಳೇಗಾಲದಲ್ಲಿ ಹಣ್ಣಿನ ರಸದಂತೆ ಎಂಜಿನ್ ಆಯಿಲ್ ಅನ್ನು ಗಟಗಟನೇ ಕುಡಿದು ಅಚ್ಚರಿ ಮೂಡಿಸಿದ್ದಾರೆ. ಈ ಬಗ್ಗೆ ಕುಮಾರ್‌ ಮಾತನಾಡಿ, ಕಳೆದ 29 ವರ್ಷದಿಂದ ಇದನ್ನೇ ಕುಡಿದು ಜೀವಿಸುತ್ತಿದ್ದೇನೆ. ಊಟ-ತಿಂಡಿ ಯಾವುದೂ ಸೇರುವುದಿಲ್ಲ. ಕುಡಿದರೇ ಟೀ-ಕಾಫಿ ಹಾಗೂ ಎಂಜಿನ್ ಆಯಿಲ್ ಅಷ್ಟೇ. ಕಾಪಾಡಲು ದೇವರು ಇದ್ದಾಗ ಯಾಕೆ ಚಿಂತೆ. ಕಳೆದ 29 ವರ್ಷದಿಂದ ಇದೇ ನನಗೆ ಆಹಾರ ಎಂದರು. ಕುಮಾ‌ರ್ ಅವರನ್ನು ಕಂಡ ಸ್ಥಳೀಯರು ಅಚ್ಚರಿಗೆ ಒಳಗಾದರು.

Read More