Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಗುಡ್ ಪ್ರೈಡೇ, ಹೋಲಿ ಸಾಟರ್ಡೇ ಮತ್ತು ಈಸ್ಟರ್ ಸಂಡೇ ದಿನಗಳಂದು ಮೌಲ್ಯಮಾಪನ ಕಾರ್ಯದಿಂದ ಶಿಕ್ಷಕರಿಗೆ ವಿನಾಯಿತಿ ನೀಡಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ದಿನಾಂಕ 15-04-2025ರಿಂದ ರಾಜ್ಯಾಧ್ಯಂತ ಪ್ರಾರಂಭಿಸಲಾಗಿದೆ ಎಂದಿದ್ದಾರೆ. ದಿನಾಂಕ 18-04-25ರಂದು ಗುಡ್ ಪ್ರೈಡೇ, ದಿನಾಂಕ 19-04-2025ರಂದು ಹೋಲಿ ಸಾಟರ್ಡೆ ಮತ್ತು ದಿನಾಂಕ 20-04-2025ರಂದು ಈಸ್ಟರ್ ಸಂಡೇ ಇರುವುದರಿಂದ ಸದರಿ ದಿನಗಳಂದು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದಿಂದ ವಿನಾಯ್ತಿ ಕೋರುವ ಶಿಕ್ಷಕರಿಗೆ ಮೌಲ್ಯಮಾಪನ ಕಾರ್ಯದಿಂದ ವಿನಾಯ್ತಿ ನೀಡಲು ತಿಳಿಸಿದ್ದಾರೆ. https://kannadanewsnow.com/kannada/aicc-general-secretary-randeep-surjewala-slams-centre/ https://kannadanewsnow.com/kannada/good-news-good-news-for-women-in-the-state-aadhaar-card-no-longer-required-for-free-travel-by-bus/

Read More

ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಭಾಗಿಯಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಅವರು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದರು. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಜಾಲಿ ಜಾಲಿ, ಜನಸಾಮಾನ್ಯರ ಜೇಬು ಖಾಲಿ ಖಾಲಿ, ನಗರ, ಗ್ರಾಮ ಪ್ರದೇಶದ ಎಲ್ಲಾ ಜನರು ಬಸವಳಿದು ಹೋಗಿದ್ದಾರೆ. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು 2 ರೂಪಾಯಿ, ಅಡುಗೆ ಸಿಲಿಂಡರ್ ಬೆಲೆ 50 ರೂಪಾಯಿ ಜಾಸ್ತಿ ಮಾಡಿ ಬರೆ ಹಾಕಿದೆ. ಜನವರಿ 1ನೇ ತಾರೀಕು 2014 ರಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ರೂ. 414 ಇತ್ತು. ಆದರೆ ಇಂದು ದುಪ್ಪಟ್ಟಾಗಿದೆ. ಬೆಂಗಳೂರಿನಲ್ಲಿ ರೂ. 855 ಆಗಿದೆ. ಕಾಂಗ್ರೆಸ್ ಸರ್ಕಾರದ ವೇಳೆಯಲ್ಲಿ ಏಕೆ ಸಿಲಿಂಡರ್ ಬೆಲೆ ಕಡಿಮೆಯಿತ್ತು ಎಂದರೆ ನಮ್ಮ ಸರ್ಕಾರ ಸುಮಾರು ರೂ.52 ಸಾವಿರ ಕೋಟಿಯನ್ನು ಸಬ್ಸಿಡಿ ಎಂದು ನೀಡುತ್ತಿತ್ತು. ಬಿಜೆಪಿ ಸರ್ಕಾರ…

Read More

ಬೆಂಗಳೂರು: ಒಂದೆಡೆ ಜಾತಿಗಣತಿ ವರದಿ ಜಾರಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೇ, ಮತ್ತೊಂದೆಡೆ ಇದಕ್ಕೂ ಮುನ್ನ ನಡೆದಂತ ಲಿಂಗಾಯತ ಸಮುದಾಯದ ಸಚಿವರ ಸಭೆಯಲ್ಲಿ ಜಾತಿಗಣತಿ ವರದಿ ತಿರಸ್ಕಾರ ಮಾಡಬೇಕೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಜಾತಿಗಣತಿ ವರದಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಈ ಸಭೆಗೂ ಮುನ್ನ ಲಿಂಗಾಯತ ಸಮುದಾಯದ ಸಚಿವರಿಂದ ಮಹತ್ವದ ಸಭೆ ವಿಧಾನಸೌಧದಲ್ಲಿ ನಡೆದಿದೆ ಎನ್ನಲಾಗಿದೆ. ಇಂದು ನಡೆದಂತ ಲಿಂಗಾಯತ ಸಮುದಾಯದ ಸಚಿವರ ಸಭೆಯಲ್ಲಿ ಜಾತಿಗಣತಿ ವರದಿಯನ್ನು ತಿರಸ್ಕಾರ ಮಾಡಬೇಕು ಎನ್ನುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಈ ನಿರ್ಧಾರವನ್ನು ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವಂತ ವಿಶೇಷ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ, ಚರ್ಚಿಸಲಿದೆ ಎನ್ನಲಾಗುತ್ತಿದೆ. https://kannadanewsnow.com/kannada/the-only-achievement-of-the-bjp-government-at-the-centre-is-to-suck-the-blood-of-the-poor-and-fill-the-coffers-of-the-rich-minister-krishna-byre-gowda/ https://kannadanewsnow.com/kannada/good-news-good-news-for-women-in-the-state-aadhaar-card-no-longer-required-for-free-travel-by-bus/

Read More

ಬೆಂಗಳೂರು : ಸತತ ಬೆಲೆ ಏರಿಕೆ ಮೂಲಕ ಬಡವರ ರಕ್ತವನ್ನು ಹೀರಿ ಅಂಬಾನಿ-ಅದಾನಿ ಸೇರಿದಂತೆ ಶ್ರೀಮಂತರ ಖಜಾನೆ ತುಂಬಿಸಿದ್ದೊಂದೆ ಕಳೆದ 11 ವರ್ಷದ ಕೇಂದ್ರ ಸರ್ಕಾರದ ಸಾಧನೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಕಿಡಿಕಾರಿದರು. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ವಿರುದ್ಧ ಕಾಂಗ್ರೆಸ್ ಪಕ್ಷದ ವತಿಯಿಂದ ಗುರುವಾರ ಫ್ರೀಡಂ ಪಾರ್ಕ್ನಲ್ಲಿ ಆಯೋಜಿಸಲಾಗಿದ್ದ ಬೃಹತ್ ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ಅವರು, ಕೇಂದ್ರ ಸರ್ಕಾರದ ಜನ ವಿರೋಧಿ ನೀತಿಗಳು, ಸತತ ಬೆಲೆ ಏರಿಕೆ ಹಾಗೂ ಅವೈಜ್ಞಾನಿಕ ತೆರಿಗೆ ಪದ್ಧತಿಯ ವಿರುದ್ಧ ಆಕ್ರೋಶ ಹೊರಹಾಕಿದರು. “ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಒಂದು ಲೀಟರ್ ಡೀಸೆಲ್ ಮೇಲಿನ ತೆರಿಗೆ 3.40 ರೂಪಾಯಿ ಇತ್ತು. ಆದರೆ, ಬಿಜೆಪಿ ಅವಧಿಯಲ್ಲಿ ಈ ಪ್ರಮಾಣವನ್ನು 20 ರೂಪಾಯಿಗೆ ಏರಿಸಲಾಗಿದೆ. ಲೀಟರ್ ಪೆಟ್ರೋಲ್ ಗೆ 9.20 ರೂಪಾಯಿ ಇದ್ದ ತೆರಿಗೆಯನ್ನು ಇದೀಗ 20 ರೂಪಾಯಿಗೆ ಏರಿಸಲಾಗಿದೆ. ಅಡಿಗೆ ಅನಿಲವನ್ನು ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಒಂದು ಸಿಲಿಂಡರ್ ಅನ್ನು 400…

Read More

ಬೆಂಗಳೂರು: ನ್ಯಾಯದಾನದಲ್ಲಿ ಕರ್ನಾಟಕ ಪೊಲೀಸರು ರಾಷ್ಟ್ರದಲ್ಲೇ ಮುಂಚೂಣಿಯಲ್ಲಿದ್ದಾರೆ. ಪೊಲೀಸ್ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ಕರ್ನಾಟಕ ನಂ.1 ಸ್ಥಾನ ಪಡೆದಿರುವುದಾಗಿ ಟಾಟಾ ಟ್ರಸ್ಟ್ ನ ಇಂಡಿಯನ್ ಜಸ್ಟಿಸ್ ರಿಪೋರ್ಟ್-2025ನಿಂದ ತಿಳಿದು ಬಂದಿದೆ. ನ್ಯಾಯ ನೀಡುವಿಕೆಯಲ್ಲಿ ಕರ್ನಾಟಕವು ದೇಶದಲ್ಲೇ ಮೊದಲ ಸ್ಥಾನದಲ್ಲಿದೆ ಎಂದು ಟಾಟಾ ಟ್ರಸ್ಟ್‌ ವರದಿ ನೀಡಿದೆ. ಪೊಲೀಸ್‌ ವ್ಯವಸ್ಥೆ, ನ್ಯಾಯ ವಿತರಣೆ, ಜೈಲು ನಿರ್ವಹಣೆ ಮತ್ತು ಕಾನೂನು ನೆರವಿನಲ್ಲಿ ದೇಶದ 18 ದೊಡ್ಡ ಮತ್ತು ಮಧ್ಯಮ ಗಾತ್ರದ ರಾಜ್ಯಗಳ ಪೈಕಿ ಕರ್ನಾಟಕ ಅಗ್ರಸ್ಥಾನದಲ್ಲಿದೆ. ಅಪರಾಧ ಕೃತ್ಯಗಳನ್ನು ಪತ್ತೆ ಹಚ್ಚಿ, ಸಾಕ್ಷ್ಯ ಸಂಗ್ರಹಿಸಿ, ತಪ್ಪಿತಸ್ಥರಿಗೆ ಶಿಕ್ಷೆ ಕೊಡಿಸುವವರೆಗೆ ಪೊಲೀಸ್‌ ಇಲಾಖೆಯು ನಿರ್ಣಾಯಕ ಪಾತ್ರ ವಹಿಸುತ್ತದೆ. ಈ ಎಲ್ಲಾ ಕಾರ್ಯಗಳನ್ನು ದೇಶದ ಎಲ್ಲಾ ರಾಜ್ಯಗಳಿಗಿಂತ ಬಹಳ ಯಶಸ್ವಿಯಾಗಿ ನಮ್ಮ ಕರ್ನಾಟಕ ಪೊಲೀಸ್‌ ಇಲಾಖೆಯು ಮಾಡುತ್ತಿರುವುದು ಅತ್ಯಂತ ಪ್ರಶಂಸನೀಯ ಮತ್ತು ಶ್ಲಾಘನೀಯ. ಅಂತೆಯೇ, ನಾಗರಿಕರ ರಕ್ಷಣೆಗೆ ಹಗಲಿರುಳೆನ್ನದೆ ಶ್ರಮಿಸುತ್ತಿರುವ ಪೊಲೀಸ್‌ ಇಲಾಖೆ ಅಧಿಕಾರಿಗಳಿಗೆ, ಸಿಬ್ಬಂದಿಗಳಿಗೆ ಎಲ್ಲಾ ರೀತಿಯ ನೆರವನ್ನು ನೀಡಲು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಶಾಲಾ ಪ್ರವೇಶಕ್ಕೆ ಕನಿಷ್ಠ ವಯೋಮಿತಿಯನ್ನು ಕಡಿಮೆಗೊಳಿಸಲಾಗಿದೆ. ಈ ವರ್ಷ ಮಾತ್ರವೇ 5 ವರ್ಷ 5 ತಿಂಗಳು ನಿಗದಿ ಪಡಿಸಲಾಗಿದೆ. ಒಂದನೇ ತರಗತಿ ಪ್ರವೇಶದ ಕನಿಷ್ಠ ವಯೋಮಿತಿಯನ್ನು 5 ವರ್ಷ 5 ತಿಂಗಳಿಗೆ ನಿಗದಿ ಮಾಡಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಆದೇಶ ಹೊರಡಿಸಿದೆ. ಜೂನ್‌ 1ಕ್ಕೆ 5 ವರ್ಷ 5 ತಿಂಗಳು ಪೂರೈಸಿದ ಮಕ್ಕಳು ಒಂದನೇ ತರಗತಿಗೆ ಪ್ರವೇಶ ಪಡೆಯಬಹುದು. ಈ ಅವಕಾಶ 2025-26ನೇ ಸಾಲಿಗೆ ಮಾತ್ರ ಅನ್ವಯವಾಗಲಿದೆ. 2026-27ನೇ ಶೈಕ್ಷಣಿಕ ಸಾಲಿನಿಂದ ರಾಜ್ಯ ಶಿಕ್ಷಣ ನೀತಿಯ ನಿಯಮಗಳನ್ನು ಪಾಲನೆ ಮಾಡಲಾಗುವುದು. ಇದೇ ಶೈಕ್ಷಣಿಕ ಸಾಲಿನಿಂದ ಎಲ್‌ಕೆಜಿ ಪ್ರವೇಶಕ್ಕೆ ಕನಿಷ್ಠ ವಯೋಮಿತಿ 4 ವರ್ಷ, ಯುಕೆಜಿ ಪ್ರವೇಶಕ್ಕೆ 5 ವರ್ಷ ಕಡ್ಡಾಯಗೊಳಿಸಲಾಗಿದೆ ಎಂದು ಶಾಲಾ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ. https://twitter.com/KarnatakaVarthe/status/1912771952000840037 https://kannadanewsnow.com/kannada/bengaluru-murudeshwar-bengaluru-kannur-express-to-be-fitted-with-modern-lhb-coach/ https://kannadanewsnow.com/kannada/good-news-good-news-for-women-in-the-state-aadhaar-card-no-longer-required-for-free-travel-by-bus/

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್ ಷಡಕ್ಷರಿ ಅವರು ಮತ್ತೊಂದು ಸಂತಸದ ಸುದ್ದಿಯನ್ನು ಹಂಚಿಕೊಂಡಿದ್ದಾರೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿಎಸ್ ಷಡಕ್ಷರಿ ಅವರು ದಿನಾಂಕ: 15-04-2025 ರಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳು, ಆರ್ಥಿಕ ಇಲಾಖೆಯ ಕಾರ್ಯದರ್ಶಿಗಳು ಹಾಗೂ ರಾಷ್ಟ್ರೀಕೃತ ಬ್ಯಾಂಕಿನ ಅಧಿಕಾರಿಗಳ ಜೊತೆ ವೇತನ ಪ್ಯಾಕೇಜ್ ಖಾತೆಗೆ ಸಂಬಂಧಿಸಿದಂತೆ ಈ ಕೆಳಕಂಡ ವಿಷಯಗಳ ಕುರಿತು ಸಭೆ ನಡೆಸಲಾಯಿತು. • ಕಡಿಮೆ ಬಡ್ಡಿ ದರದಲ್ಲಿ ಗೃಹ ನಿರ್ಮಾಣ ಸಾಲ • ಕಡಿಮೆ ಬಡ್ಡಿ ದರದಲ್ಲಿ ವೈಯಕ್ತಿಕ ಸಾಲ • ಕಡಿಮೆ ಬಡ್ಡಿ ದರದಲ್ಲಿ ವಾಹನ ಸಾಲ • ಕಡಿಮೆ ಬಡ್ಡಿ ದರದಲ್ಲಿ ಶೈಕ್ಷಣಿಕ ಸಾಲ • ಓವರ್ ಡ್ರಾಫ್ಟ್ ಸೌಲಭ್ಯ ಆರೋಗ್ಯ ವಿಮೆ ಗೃಹ ಸಾಲ ವರ್ಗಾವಣೆ ಬಗ್ಗೆ ಸ್ವೀಪ್ ಇನ್-ಸ್ವೀಪ್ ಓಟ್ ಅಕೌಂಟ್ >…

Read More

ಬೆಂಗಳೂರು: ಪ್ರಯಾಣಿಕರ ಸುರಕ್ಷತೆ ಮತ್ತು ಸೌಕರ್ಯವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಬೆಂಗಳೂರು-ಮುರುಡೇಶ್ವರ ಮತ್ತು ಬೆಂಗಳೂರು-ಕಣ್ಣೂರು ನಡುವೆ ಸಂಚರಿಸುವ ಎಕ್ಸ್ ಪ್ರೆಸ್ ರೈಲುಗಳ ಸಾಂಪ್ರದಾಯಿಕ ಬೋಗಿಗಳನ್ನು ಅತ್ಯಾಧುನಿಕ ಎಲ್‌ಎಚ್‌ಬಿ (ಲಿಂಕ್ ಹಾಫ್ಮನ್ ಬುಶ್) ಬೋಗಿಗಳೊಂದಿಗೆ ಬದಲಾಯಿಸಲು ನೈಋತ್ಯ ರೈಲ್ವೆ ಸಜ್ಜಾಗಿದೆ. ಪರಿಷ್ಕೃತ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿರುವ ರೈಲು ಸಂಖ್ಯೆ 16585 ಎಸ್ಎಂವಿಟಿ ಬೆಂಗಳೂರು-ಮುರುಡೇಶ್ವರ ಎಕ್ಸ್ ಪ್ರೆಸ್ ರೈಲು ಮೇ 5 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚಾರ ಆರಂಭಿಸಲಿದೆ. ಇದರ ಹಿಮ್ಮಾರ್ಗವಾದ ರೈಲು ಸಂಖ್ಯೆ 16586 ಮುರುಡೇಶ್ವರ-ಎಸ್ಎಂವಿಟಿ ಬೆಂಗಳೂರು ಎಕ್ಸ್ ಪ್ರೆಸ್ ರೈಲು ಮೇ 6, 2025 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಸಂಚರಿಸಲಿದೆ. ಇದಲ್ಲದೆ, ಬೆಂಗಳೂರಿನಿಂದ ಕಣ್ಣೂರಿಗೆ ಸಂಪರ್ಕ ಕಲ್ಪಿಸುವ ರೈಲು ಸಂಖ್ಯೆ 16511 (ಕೆಎಸ್ಆರ್ ಬೆಂಗಳೂರು-ಕಣ್ಣೂರು ಎಕ್ಸ್ ಪ್ರೆಸ್) ಮೇ 7 ರಿಂದ ಹಾಗೂ ಹಿಮ್ಮಾರ್ಗದಲ್ಲಿ ಸಂಚರಿಸುವ ರೈಲು ಸಂಖ್ಯೆ 16512 (ಕಣ್ಣೂರು-ಕೆಎಸ್ಆರ್ ಬೆಂಗಳೂರು ಎಕ್ಸ್ ಪ್ರೆಸ್) ಮೇ 8 ರಿಂದ ಎಲ್‌ಎಚ್‌ಬಿ ಬೋಗಿಗಳೊಂದಿಗೆ ಕಾರ್ಯನಿರ್ವಹಿಸಲಿವೆ. ನವೀಕರಿಸಲಾದ ಎಲ್‌ಎಚ್‌ಬಿ ರೇಕ್ ಒಟ್ಟು 20 ಬೋಗಿಗಳನ್ನು ಒಳಗೊಂಡಿರಲಿದ್ದು,…

Read More

ಹೈದರಾಬಾದ್: ಅಪಾರ್ಟ್ಮೆಂಟ್ನ ನೆಲಮಾಳಿಗೆಯ ಪಾರ್ಕಿಂಗ್ನಲ್ಲಿ ವ್ಯಕ್ತಿಯೊಬ್ಬ ಐದು ನವಜಾತ ನಾಯಿಮರಿಗಳನ್ನು ಗೋಡೆ ಮತ್ತು ನೆಲಕ್ಕೆ ಹೊಡೆದು ಕೊಂದಿರುವ ಆಘಾತಕಾರಿ ಘಟನೆ ಹೈದರಾಬಾದ್ನಲ್ಲಿ ನಡೆದಿದೆ. ಇಂಡಿಸ್ ವಿಬಿ ಅಪಾರ್ಟ್ಮೆಂಟ್ನಲ್ಲಿ ಈ ಘಟನೆ ವರದಿಯಾಗಿದ್ದು, ಸಿಸಿಟಿವಿಯಲ್ಲಿ ಸೆರೆಯಾಗಿದೆ. ಆರೋಪಿ ಆಶಿಶ್ ಎಂದು ಗುರುತಿಸಲ್ಪಟ್ಟಿದ್ದು, ಉದ್ಯಮಿ ಮತ್ತು ಸಾಕುಪ್ರಾಣಿ ಪೋಷಕರಾಗಿದ್ದು, ಘಟನೆ ವರದಿಯಾದಾಗ ತನ್ನ ನಾಯಿಯನ್ನು ನಡೆದುಕೊಂಡು ಹೋಗುತ್ತಿದ್ದರು. ಇದಲ್ಲದೆ, ಆರೋಪಿಯು ನಾಯಿಮರಿಯನ್ನು ಎತ್ತಿಕೊಂಡು ಕ್ರೂರವಾಗಿ ನೆಲಕ್ಕೆ ಒಡೆದು ಹಾಕುತ್ತಿರುವುದನ್ನು ಸಿಸಿಟಿವಿ ದೃಶ್ಯಾವಳಿಗಳು ತೋರಿಸಿವೆ. ಅವನು ನಾಯಿಮರಿ ಜೀವಂತವಾಗಿದೆಯೇ ಎಂದು ಪರಿಶೀಲಿಸುವ ಮೊದಲು ಅದನ್ನು ತನ್ನ ಕಾಲಿನ ಕೆಳಗೆ ತುಳಿದು ಹಾಕುತ್ತಿರುವುದು ಕಂಡುಬಂದಿದೆ. ಈ ಹೃದಯವಿದ್ರಾವಕ ವೀಡಿಯೊವನ್ನು X ನಲ್ಲಿ ಹಂಚಿಕೊಂಡ ಒಬ್ಬ ಬಳಕೆದಾರರು, ನಮ್ಮ ಸಮುದಾಯದಲ್ಲಿ ನಡೆದ ಪ್ರಾಣಿ ಹಿಂಸೆಯ ಭಯಾನಕ ಕೃತ್ಯವನ್ನು ತುರ್ತಾಗಿ ವರದಿ ಮಾಡಲು ನಾನು ಬರೆಯುತ್ತಿದ್ದೇನೆ. ಒಬ್ಬ ವ್ಯಕ್ತಿ 5 ನವಜಾತ ನಾಯಿಮರಿಗಳನ್ನು ಕಲ್ಲಿನಿಂದ ಮತ್ತು ಕಾಲಿನಿಂದ ಒಡೆದು ಕಂಬಕ್ಕೆ ಎಸೆದು ಕ್ರೂರವಾಗಿ ಕೊಂದಿರುವುದನ್ನು ವೀಕ್ಷಿಸಲಾಗಿದೆ” ಎಂದು ಬರೆದಿದ್ದಾರೆ. https://twitter.com/khanbr1983/status/1912745242794864813…

Read More

ಬೆಂಗಳೂರು: ರಾಜ್ಯಾಧ್ಯಂತ ನಡೆಸಲಾಗುತ್ತಿದ್ದಂತ ಲಾರಿ ಮುಷ್ಕರವನ್ನು ವಾಪಾಸ್ ಪಡೆದಿರುವುದಾಗಿ ಅಧ್ಯಕ್ಷ ಷಣ್ಮುಗಪ್ಪ ಘೋಷಿಸಿದ್ದಾರೆ. ಈ ಮೂಲಕ ಸಚಿವ ರಾಮಲಿಂಗಾರೆಡ್ಡಿ ನಡೆಸಿದಂತ ಸಂಧಾನ ಸಭೆ ಸಕ್ಸಸ್ ಆಗಿದ್ದು, ಲಾರಿ ಮುಷ್ಕರ ವಾಪಾಸ್ ಪಡೆದಂತೆ ಆಗಿದೆ. ಇಂದು ವಿಧಾನಸೌಧದಲ್ಲಿನ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರ ಕಚೇರಿಯಲ್ಲಿ ಲಾರಿ ಮಾಲೀಕರ ಸಂಘದೊಂದಿಗೆ ಮೂರನೇ ಬಾರಿ ಸಭೆ ನಡೆಸಲಾಯಿತು. ಈ ಹಿಂದೆ ರಾಮಲಿಂಗಾರೆಡ್ಡಿ ನೇತೃತ್ವದಲ್ಲಿ ಒಂದು ಸುತ್ತಿನ ಸಭೆ, ಆ ಬಳಿಕ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಎರಡನೇ ಸಭೆಯನ್ನು ನಿನ್ನೆ ನಡೆಸಲಾಗಿತ್ತು. ಇಂದಿನ ಸಭೆಯಲ್ಲಿ ಲಾರಿ ಮಾಲೀಕರ ಕೆಲ ಬೇಡಿಕೆಗಳನ್ನು ಈಡೇರಿಸೋದಕ್ಕೆ ಸರ್ಕಾರ ಒಪ್ಪಿಗೆ ಸೂಚಿಸಿದೆ ಎಂಬುದಾಗಿ ತಿಳಿದು ಬಂದಿದೆ. ಅದರಲ್ಲಿ ಟೋಲ್ ಗಳಲ್ಲಿ ಲಾರಿ, ಗೂಡ್ಸ್ ವಾಹನಗಳಿಗೆ ದರ ಫಿಕ್ಸ್ ಮಾಡಲು ಸಚಿವ ರಾಮಲಿಂಗಾರೆಡ್ಡಿ ಒಪ್ಪಿಗೆ ಸೂಚಿಸಿದ್ದಾರೆ. ಇನ್ನೂ ಕೆಲ ಬೇಡಿಕೆ ಈಡೇರಿಸೋದಕ್ಕೆ ಸರ್ಕಾರ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳೋ ಭರವಸೆಯನ್ನು ನೀಡಿದ್ದಾರೆ. ಹೀಗಾಗಿ ಲಾರಿ ಮಾಲೀಕರ ಜೊತೆಗಿನ ಸಂಧಾನ ಸಭೆ ಸಕ್ಸಸ್ ಆಗಿದ್ದು,…

Read More