Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ನಿಮ್ಮ ಕನಸುಗಳನ್ನು ನನಸಾಗಿಸಲು ನೀವು ಬಯಸಿದರೆ, ನಿಮಗೆ ಮೊದಲನೆಯದು ನಂಬಿಕೆ. ನಾವು ದೃಢಸಂಕಲ್ಪ ಮತ್ತು ಆತ್ಮವಿಶ್ವಾಸವನ್ನು ಹೊಂದಿದ್ದರೆ ಮಾತ್ರ ನಮ್ಮ ಆಸೆಗಳು ಈಡೇರುತ್ತವೆ. ಕನಸುಗಳು ನಿಜವಾಗುತ್ತವೆ. ಯಾವ ಮನುಷ್ಯನೂ ಆಸೆಯಿಲ್ಲದೆ ಬದುಕಲಾರ. ನಿಮ್ಮ ಮನಸ್ಸಿನಲ್ಲಿ ಖಂಡಿತವಾಗಿಯೂ ಅಪೂರ್ಣವಾದದ್ದು ಇದೆ. ಉದಾಹರಣೆಗೆ, ನಾವು ಒಳ್ಳೆಯ ಉದ್ಯೋಗ ಪಡೆಯಬೇಕು, ಕೈತುಂಬಾ ಹಣ ಸಂಪಾದಿಸಬೇಕು, ಸಮಾಜದಲ್ಲಿ ನಾಲ್ಕು ಜನ ಗೌರವಿಸುವ ಉನ್ನತ ಸ್ಥಾನದಲ್ಲಿ ಬದುಕಬೇಕು. ಆ ಆಸೆಯನ್ನು ಈಡೇರಿಸಿಕೊಳ್ಳಲು ಸತತ ಪ್ರಯತ್ನ ಮಾಡಬೇಕು. ನಾವು ನಮ್ಮ ಮನಸ್ಸನ್ನು ಕೇಂದ್ರೀಕರಿಸಬೇಕು ಮತ್ತು ಪ್ರಗತಿಯತ್ತ ಮಾತ್ರ ಗಮನಹರಿಸಬೇಕು. ಇತರ ಅನಗತ್ಯ ವಿಷಯಗಳತ್ತ ಗಮನ ಹರಿಸಬಾರದು. ಅದಕ್ಕೊಂದು ಪುಟ್ಟ ಕಸರತ್ತು ಈ ಶಕ್ತಿ ಸರ್ಕಾರ್ ಕಸರತ್ತು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ ನಂ:- 9686268564. ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ…

Read More

ಮೈಸೂರು: ಇಂದು ಭಾರತದ ಸ್ವಾತಂತ್ರ್ಯ ಹೋರಾಟಗಾರರು ಹಾಗೂ ದೇಶದ ಪ್ರಥಮ ಉಪಪ್ರಧಾನಿ ಮತ್ತು ಗೃಹ ಸಚಿವರಾದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ 150ನೇ ಜನ್ಮ ವಾರ್ಷಿಕೋತ್ಸವದ ಅಂಗವಾಗಿ, ನೈರುತ್ಯ ರೈಲ್ವೆ, ಮೈಸೂರು ವಿಭಾಗದ ವತಿಯಿಂದ ಏಕತಾ ಪಾದಯಾತ್ರೆ ಆಯೋಜಿಸಲಾಯಿತು. ಈ ಪಾದಯಾತ್ರೆ ಚಾಮುಂಡಿ ಕ್ಲಬ್ ನಿಂದ ಪ್ರಾರಂಭವಾಗಿ ಮೈಸೂರು ರೈಲು ನಿಲ್ದಾಣದ ಬಳಿ ಸಮಾಪ್ತಿಯಾಯಿತು. ಈ ಪಾದಯಾತ್ರೆಯು ರೈಲ್ವೆ ಸಿಬ್ಬಂದಿ ಹಾಗೂ ಸಾರ್ವಜನಿಕರಲ್ಲಿ ಏಕತೆ ಮತ್ತು ಅಖಂಡತೆಯ ಸಂದೇಶವನ್ನು ಸಾರಿತು. ಮುದಿತ್ ಮಿತ್ತಲ್, ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಮೈಸೂರು ಮತ್ತು ಶ್ರೀ ಶಮ್ಮಾಸ್ ಹಮೀದ್, ಹೆಚ್ಚುವರಿ ವಿಭಾಗೀಯ ರೈಲ್ವೆ ವ್ಯವಸ್ಥಾಪಕರು, ಪಾದಯಾತ್ರೆಯನ್ನು ಮುನ್ನಡೆಸಿದರು. ಎಲ್ಲಾ ಶಾಖಾ ಅಧಿಕಾರಿಗಳು, ರೈಲ್ವೆ ರಕ್ಷಣಾ ಪಡೆ ಸಿಬ್ಬಂದಿ ಹಾಗೂ ವಿವಿಧ ವಿಭಾಗಗಳ ನೌಕರರು ಉತ್ಸಾಹಪೂರ್ಣವಾಗಿ ಪಾಲ್ಗೊಂಡರು. ಈ ಪಾದಯಾತ್ರೆಯನ್ನು ರಾಷ್ಟ್ರೀಯ ಏಕತಾ ದಿನಾಚರಣೆಯ ಅಂಗವಾಗಿ ಆಯೋಜಿಸಲಾಯಿತು. ಭಾರತದ ಏಕತೆಯ ಸಂಕೇತವಾದ “ಭಾರತದ ಉಕ್ಕಿನ ಮನುಷ್ಯ” ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ದೃಷ್ಟಿ ಮತ್ತು ದೇಶದ ಏಕೀಕರಣದ…

Read More

ಬೆಂಗಳೂರು: ನೈರುತ್ಯ ರೈಲ್ವೆ ಬೆಂಗಳೂರು ವಿಭಾಗವು ಸರ್ದಾರ್ ವಲ್ಲಭಭಾಯ್ ಪಟೇಲ್ರವರ ಜನ್ಮದಿನದ ಅಂಗವಾಗಿ ಇಂದು ರಾಷ್ಟ್ರೀಯ ಏಕತಾ ದಿನವನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಬೆಂಗಳೂರಿನ ಎಂ.ಜಿ. ರೈಲ್ವೆ ಕಾಲೋನಿಯಲ್ಲಿ ʼಏಕತೆಗಾಗಿ ಓಟʼ ವನ್ನು ಆಯೋಜಿಸಲಾಗಿತ್ತು. ಮೊದಲಿಗೆ ಬೆಂಗಳೂರು ವಿಭಾಗದ ವಿಭಾಗೀಯ ರೈಲ್ವೆ ವ್ಯವಸ್ಥಾಪಕರಾದ ಆಶುತೋಷ್ ಕುಮಾರ್ ಸಿಂಗ್ ರವರು ಅಧಿಕಾರಿಗಳು, ಸಿಬ್ಬಂದಿ, ವಿದ್ಯಾರ್ಥಿಗಳಿಗೆ ರಾಷ್ಟ್ರೀಯ ಏಕತಾ ದಿನದ ಪ್ರತಿಜ್ಞೆಯನ್ನು ಬೋಧಿಸಿದರು. ನಂತರ ಆಶುತೋಷ್ ಕುಮಾರ್ ಸಿಂಗ್ ರವರ ನೇತೃತ್ವದಲ್ಲಿ ರೈಲ್ವೆ ಕ್ರೀಡಾ ಮೈದಾನದಿಂದ ಆರಂಭಗೊಂಡ ಏಕತೆಗಾಗಿ ಓಟವು ಎಂ.ಜಿ. ರೈಲ್ವೆ ಕಾಲೋನಿಯ ಮೂಲಕ ಸಾಗಿ ಮತ್ತೆ ರೈಲ್ವೆ ಕ್ರೀಡಾ ಮೈದಾನದಲ್ಲಿ ಮುಕ್ತಾಯಗೊಳಿಸಲಾಯಿತು. ಈ ವೇಳೆ ಅಪರ ವಿಭಾಗೀಯ ರೈಲ್ವೆ ವ್ಯವಸ್ಥಾಪಕರುಗಳಾದ ಪರೀಕ್ಷಿತ್ ಮೋಹನ್ಪೂರಿಯಾ ಮತ್ತು ಪ್ರವೀಣ್ ಕಾತರಕಿ, ಹಿರಿಯ ವಿಭಾಗೀಯ ಸಿಬ್ಬಂದಿ ಅಧಿಕಾರಿ ಉಮಾ ಶರ್ಮಾ, ಹಿರಿಯ ವಿಭಾಗೀಯ ಭದ್ರತಾ ಆಯುಕ್ತ (ಆರ್.ಪಿ.ಎಫ್.) ಡಾ. ಶ್ರೇಯಾನ್ಸ್ ಚಿಂಚವಾಡೆ, ಇತರ ರೈಲ್ವೆ ಅಧಿಕಾರಿಗಳು, ಸಿಬ್ಬಂದಿ, ಪಿ.ಎಂ. ಕೇಂದ್ರೀಯ ವಿದ್ಯಾಲಯ ಮತ್ತು ಶಾಮ ವಿದ್ಯಾ ಶಾಲಾ…

Read More

ಬೆಂಗಳೂರು: ಶೀಘ್ರದಲ್ಲೇ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ಘೋಷಣೆಯಾಗಲಿದೆ. ಅದರೊಟ್ಟಿಗೆ ಖಾಲಿಯಾಗಿರುವಂತ ಗ್ರಾಮ ಪಂಚಾಯ್ತಿ ಸ್ಥಾನಗಳಿಗೂ ಚುನಾವಣೆ ಘೋಷಣೆಯಾಗುವ ಸಾಧ್ಯತೆ ಇದೆ. ಹಾಗಾದ್ರೇ ಗ್ರಾಮ ಪಂಚಾಯ್ತಿ ಸಾರ್ವತ್ರಿಕ ಚುನಾವಣೆಗೆ ನಾಮ ಪತ್ರದೊಂದಿಗೆ ಸಲ್ಲಿಸಬೇಕಾದಂತ ಅಗತ್ಯ ದಾಖಲೆಗಳು ಯಾವುವು ಎನ್ನುವ ಬಗ್ಗೆ ಮುಂದಿವೆ ಓದಿ. ಸಾಮಾನ್ಯ ಕ್ಷೇತ್ರಕ್ಕೆ 1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಥಾಗಿರಬೇಕು. 2. ನಾಮಪತ್ರ ನಮೂನೆ –5ರಲ್ಲಿ ನೀಡಬೇಕು. 3. ಠೇವಣಿ ಹಣ 200/-ರೂಗಳನ್ನು ನೀಡಿ ಚುನಾವಣಾಧಿಕಾರಿಯಿಂದ ರಶೀದಿ ಪಡೆಯುವುದು, ಸಾಮಾನ್ಯ ಮಹಿಳೆ ಮೀಸಲು ಕ್ಷೇತ್ರಕ್ಕೆ ನಾಮಪತ್ರ ಸಲ್ಲಿಸಿದರೆ ಠೇವಣಿ ಹಣ 100/- ರೂಗಳನ್ನು ನೀಡುವುದು. 4. ಇಸ್ತಿ ಬಿವಧಣಿ ಘೋಷಣಾ ಪತ್ರ ವನ್ನು 3 ಪ್ರತಿಯಲ್ಲಿ ಲಗತ್ತಿಸುವುದು. 5. ಅಭ್ಯರ್ಥಿಯಿಂದ ಘೋಷಣೆ ಪತ್ರ 6. ಗ್ರಾಮ ಪಂಚಾಯಿತಿಗೆ ಯಾವುದೇ ರೀತಿಯ ಬಾಕಿ ಇಲ್ಲದಿರುವ ಬಗ್ಗೆ ‘ಬೇ-ಬಾಕಿಪತ್ರ’ ಅನುಸೂಚಿತ ಜಾತಿ/ಅ.ಪಂಗಡ ಮೀಸಲು ಕ್ಷೇತ್ರಕ್ಕೆ 1. ಉಮೇದುವಾರನಿಗೆ 21 ವರ್ಷ ಮೇಲ್ಪಟ್ಟು ವಯಸ್ಸಾಗಿರಬೇಕು. 2. ತಹಶಿಲ್ದಾ‌ರವರಿಂದ ಜಾತಿ ಪ್ರಮಾಣ ಪತ್ರ ಪಡೆದು…

Read More

ಮೈಸೂರು: ಜಿಲ್ಲೆಯಲ್ಲಿ ಹುಲಿ ದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಕುರ್ಣೇಗಾಲ ಬಳಿ ಹುಲಿ ದಾಳಿಯಿಂದ ನಿಂಗಯ್ಯ(65) ಎಂಬುವರು ಸಾವನ್ನಪ್ಪಿದ್ದಾರೆ. ಮೈಸೂರು ಜಿಲ್ಲೆಯ ಸರಗೂರು ತಾಲ್ಲೂಕಿನ ಕುರ್ಣೆಗಾಲ ಗ್ರಾಮದಲ್ಲಿ ಹುಲಿದಾಳಿಗೆ ಮತ್ತೊಬ್ಬ ವ್ಯಕ್ತಿ ಬಲಿಯಾಗಿದ್ದಾರೆ. ಹುಲಿ ದಾಳಿಯಿಂದಾಗಿ ಕುರ್ಣೇಗಾಲ ಬಳಿ ಹುಲಿ ದಾಳಿಯಿಂದ ನಿಂಗಯ್ಯ(65) ಎಂಬುವರು ಸಾವನ್ನಪ್ಪಿದ್ದಾರೆ. https://kannadanewsnow.com/kannada/power-outage-in-these-areas-of-ulavi-soraba-taluk-on-november-2nd/ https://kannadanewsnow.com/kannada/breaking-renukashwami-murder-case-actor-darshan-gang-scheduled-for-charge-framing-on-nov-3/

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನ ಉಳವಿ ವ್ಯಾಪ್ತಿಯಲ್ಲಿ ದಿನಾಂಕ 02-11-2025ರಂದು ತುರ್ತು ವಿದ್ಯುತ್ ನಿರ್ವಹಣಾ ಕಾಮಗಾರಿಯ ಹಿನ್ನಲೆಯಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದೆ. ಈ ಕುರಿತಂತೆ ಸೊರಬ ಮೆಸ್ಕಾಂ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ:02.11.2025 ರಂದು 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರ ಉಳವಿಯಿಂದ ವಿದ್ಯುತ್ ಸರಬರಾಜಾಗುವ ಕೆಳಕಂಡ 11 ಕೆವಿ ಫೀಡರ್‌ಗಳಿಗೆ ವಿದ್ಯುತ್ ವ್ಯತ್ಯಯವಾಗಲಿದೆ ಎಂದಿದ್ದಾರೆ. ದಿನಾಂಕ:02.11.2025 ರಂದು ಉಳವಿ ಟೌನ್‌ನಲ್ಲಿ ವಾಹಕ ಬದಲಾವಣೆ ಕಾಮಗಾರಿಯನ್ನು ನಡೆಸಲು ಉದ್ದೇಶಿಸಿರುವುದರಿಂದ, 110/11 ಕೆವಿ ಉಳವಿ ವಿದ್ಯುತ್‌ ವಿತರಣಾ ಕೇಂದ್ರದಿಂದ ವಿದ್ಯುತ್ ಸರಬರಾಜಾಗುವ ಎಫ್1 ಬರಗಿ ಎನ್‌ಜೆನ್ನೈ, ಎಫ್2 ಕಾನಳ್ಳಿ, ಎಫ್-3 ಉಳವಿ, ಎಫ್4 ಹೊಸಬಾಳೆ ಮತ್ತು ಎಫ್-5 ದೂಗೂರು ಫೀಡರ್‌ಗಳ ವ್ಯಾಪ್ತಿಗೊಳಪಡುವ ಎಲ್ಲಾ ಗ್ರಾಮಗಳಿಗೆ ಬೆಳಗ್ಗೆ 10:00 ರಿಂದ ಸಂಜೆ 6:00 ರವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ತಿಳಿಸಿದ್ದಾರೆ. ವರದಿ; ವಸಂತ ಬಿ ಈಶ್ವರಗೆರೆ..,…

Read More

ಬೆಂಗಳೂರು: ಪದವಿ ಕಾಲೇಜು ಉಪನ್ಯಾಸಕರ ಅರ್ಹತಾ ಪರೀಕ್ಷೆಯಾದ ಕೆ-ಸೆಟ್ ಪರೀಕ್ಷೆಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಭಾನುವಾರ (ನ.2) ನಡೆಸಲಿದ್ದು, ಕಟ್ಟುನಿಟ್ಟಿನ ಬಿಗಿ ಕ್ರಮಗಳನ್ನು ಕೈಗೊಂಡಿದೆ. ಈ ಬಾರಿಯೂ ಮುಖಚಹರೆ ಪತ್ತೆ ತಂತ್ರಜ್ಞಾನದ ಮೂಲಕ ಅಭ್ಯರ್ಥಿಗಳನ್ನು ತಪಾಸಣೆ ಮಾಡಿಯೇ ಪರೀಕ್ಷಾ ಕೇಂದ್ರಕ್ಕೆ ಬಿಡಲಾಗುತ್ತದೆ. ಕ್ಯಾಮರಾ ಕಣ್ಗಾವಲಿನಲ್ಲಿ ಪರೀಕ್ಷೆ ನಡೆಯಲಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಒಟ್ಟು 33 ವಿಷಯಗಳಿಗೆ ನಡೆಯುವ ಕೆ-ಸೆಟ್ ಪರೀಕ್ಷೆಯನ್ನು 1.36 ಲಕ್ಷ ಮಂದಿ ತೆಗೆದುಕೊಂಡಿದ್ದಾರೆ. 11 ಜಿಲ್ಲೆಗಳ (ಬೆಂಗಳೂರು, ಬಳ್ಳಾರಿ, ಬೆಳಗಾವಿ, ದಾವಣಗೆರೆ, ಧಾರವಾಡ, ಕಲಬುರ್ಗಿ, ಮಂಗಳೂರು, ಮೈಸೂರು, ಶಿವಮೊಗ್ಗ, ತುಮಕೂರು, ವಿಜಯಪುರ) 316 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ ಅವರು ವಿವರಿಸಿದ್ದಾರೆ. ಬೆಂಗಳೂರಿನಲ್ಲಿ ಎಲ್ಲ 33 ವಿಷಯಗಳ ಪರೀಕ್ಷೆ ನಡೆದರೆ, ಉಳಿದ ಜಿಲ್ಲೆಗಳಲ್ಲಿ 11 ವಿಷಯಗಳ ಪರೀಕ್ಷೆ ಗಳು ಮಾತ್ರ ನಡೆಯಲಿವೆ. ಈ ಪರೀಕ್ಷೆಗಳಿಗೆ ನೆಗೆಟಿವ್ ಮೌಲ್ಯಮಾಪನ ಇರುವುದಿಲ್ಲ ಎಂದು ಅವರು ತಿಳಿಸಿದ್ದಾರೆ. ಬೆಳಿಗ್ಗೆ 10ರಿಂದ ಮಧ್ಯಾಹ್ನ 1ಗಂಟೆವರೆಗೆ ಪರೀಕ್ಷೆಗಳು ನಡೆಯಲಿದ್ದು, ಒಮ್ಮೆಗೇ ಎರಡೂ…

Read More

ಬೆಂಗಳೂರು: ನಗರದ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಈ ನೂತನ ಮಾರ್ಗದಲ್ಲಿ ಹೊಸದಾಗಿ ಹವಾನಿಯಂತ್ರಿತ ಎಲೆಕ್ಟ್ರಿಕ್‌ ವಜ್ರ ವೇಗದೂತ (Express Service) ಬಸ್ ಸಂಚಾರವನ್ನು ಆರಂಭಿಸಲಾಗುತ್ತಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ, ಕೆಂಪೇಗೌಡ ಬಸ್‌ ನಿಲ್ದಾಣದಿಂದ ಸೆಂಟ್ರಲ್‌ ಟಾಕೀಸ್‌, ಮಲ್ಲೇಶ್ವರ್ಂ 8ನೇ ಕ್ರಾಸ್‌, ಗೋವರ್ಧನ ಟಾಕೀಸ್‌, ಗೊರಗುಂಟೆಪಾಳ್ಯ, ಅರಶಿನಕುಂಟೆ ಮಾರ್ಗವಾಗಿ ನೆಲಮಂಗಲ ಬಸ್‌ ನಿಲ್ದಾಣಕ್ಕೆ Express (Limited Stop) ಸೇವೆಗಳನ್ನು ದಿನಾಂಕ 03.11.2025 ರಿಂದ ಜಾರಿಗೆ ಬರುವಂತೆ ಮಾರ್ಗಸಂಖ್ಯೆ ವಿ-258ಸಿ ರಲ್ಲಿ 06 ಹವಾನಿಯಂತ್ರಿತ ಎಲೆಕ್ಟ್ರಿಕ್‌ ಸಾರಿಗೆಗಳನ್ನು ಕಾರ್ಯಾಚರಣೆಗೊಳಿಸಲಾಗುತ್ತದೆ. ಹೀಗಿದೆ ಮಾರ್ಗದ ವೇಳಾ ಪಟ್ಟಿ ವಿವರಗಳು ಮಾರ್ಗಸಂಖ್ಯೆ ವಿ-258ಸಿ ವೇಳಾಪಟ್ಟಿ (ನಿರ್ಗಮನ ಸಮಯ) ಕೆಂಪೇಗೌಡ ಬಸ್‌ ನಿಲ್ದಾಣ ಮಾರ್ಗ ನೆಲಮಂಗಲ ಬಸ್‌ ನಿಲ್ದಾಣ 0600, 0640, 0710, 0740, 0820, 0850, 0930, 1005, 1035, 1105, 1205, 1305,…

Read More

ಬೆಂಗಳೂರು: ಬೇರುಮಟ್ಟದಲ್ಲಿ ಸರ್ಕಾರಿ‌ ನೌಕರರೇ ಸರ್ಕಾರವಿದ್ದಂತೆ. ಸಾರ್ವಜನಿಕರಿಗೆ ಹಾಗೂ ಸರ್ಕಾರಕ್ಕೆ ನೌಕಕರು ಸೇತುವೆಯಾಗಿದ್ದಾರೆ. ಸರ್ಕಾರದ ಯೋಜನೆಗಳನ್ನು ಜನರಿಗೆ ತಲುಪಿಸುವ ಕೆಲಸವನ್ನು ನೌಕರರು ಮಾಡುತ್ತಿದ್ದಾರೆ. ಹಾಗಾಗಿ ಪಂಚತತ್ವಗಳ ಅಳವಡಿಸಿಕೊಂಡು ಕೆಲಸ ಮಾಡಬೇಕು ಎಂದು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಜಿಲ್ಲಾಡಳಿತ ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ ಸಂಯುಕ್ತಾಶ್ರಯದಲ್ಲಿ ನಗರದ ಎಸ್ ಎಂ ಪಂಡಿತ ರಂಗಮಂದಿರದಲ್ಲಿ ಏರ್ಪಡಿಸಲಾಗಿದ್ದ 2025 ನೇ ಸಾಲಿನ ಜಿಲ್ಲಾಮಟ್ಟದ ರಾಜ್ಯ ಸರಕಾರಿ ನೌಕರರ ದಿನಾಚರಣೆ ಅಂಗವಾಗಿ ಸರ್ಕಾರಿ ಅಧಿಕಾರಿ/ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ಪ್ರಧಾನ ಹಾಗೂ 371( ಜೆ) ನಿಮಮಾವಳಿಗಳ ಕಾರ್ಯಾಗಾರ ಉದ್ಘಾಟಿಸಿ‌ ಅವರು ಮಾತನಾಡುತ್ತಿದ್ದರು. ಸಾರ್ವಜನಿಕರಿಗೆ ಸರ್ಕಾರ ಯೋಜನೆಗಳ ನೀತಿಗಳ ಬಗ್ಗೆ ನೌಕರರೇ ತಿಳುವಳಿಕೆ‌ ನೀಡಬೇಕಾಗುತ್ತದೆ. ಇತ್ತೀಚಿನ‌ ಸಾಮಾಜಿಕ ಹಾಗೂ ಶೈಕ್ಷಣಿಕ ಸರ್ವೆ ಮಾಡುವಲ್ಲಿ ಸರ್ಕಾರಿ ನೌಕರರು ಪ್ರಮುಖ ಪಾತ್ರವಹಿಸಿದ್ದಾರೆ. ದಸರಾ ಹಾಗೂ ದೀಪಾವಳಿಯಂತ ಹಬ್ಬಗಳಿಗೂ ಕೂಡಾ ರಜೆ ಇಲ್ಲದೇ ಕೆಲಸ ಮಾಡಿದ್ದಾರೆ. ಜಿಲ್ಲೆಯಲ್ಲಿ…

Read More

ಬೆಂಗಳೂರು: ಅಲೆಮಾರಿ ಸಮುದಾಯಗಳಿಗೆ ಸಾಮಾಜಿಕ ನ್ಯಾಯ ಕಲ್ಪಿಸಲು ಸರ್ಕಾರ ಬದ್ಧವಾಗಿದ್ದು ಶೇಕಡ 1ರಷ್ಟು ಮೀಸಲಾತಿಯನ್ನು ಯಾವ ರೀತಿಯಲ್ಲಿ ಕಲ್ಪಿಸಬಹುದು ಎಂಬ ಬಗ್ಗೆ ಪರಿಶೀಲಿಸಿ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಿಳಿಸಿದರು. ಈ ಮೂಲಕ ರಾಜ್ಯದ ಅಲೆಮಾರಿ ಸಮುದಾಯಗಳಿಗೆ ಶೇ.1ರಷ್ಟು ಮೀಸಲಾತಿ ಕಲ್ಪಿಸುವಂತ ಸುಳಿವು ನೀಡಿದ್ದಾರೆ. ಒಳ ಮೀಸಲಾತಿ ಕುರಿತು ಅಲೆಮಾರಿ ಒಕ್ಕೂಟದ ಪದಾಧಿಕಾರಿಗಳ ನಿಯೋಗ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಭೇಟಿ ಮಾಡಿ ಮನವಿ ಅರ್ಪಿಸಿತು. ಸಮುದಾಯದ ಬೇಡಿಕೆಗಳಿಗೆ ಸ್ಪಂದಿಸಿ ಮುಖ್ಯಮಂತ್ರಿಗಳು ಮಾತನಾಡಿದರು. “ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಸುಧಾರಣೆಗೆ ಎಸ್ ಸಿ ಪಿ /ಟಿ ಎಸ್ ಪಿ ಕಾರ್ಯ ಕ್ರಮಗಳನ್ನು ಜಾರಿಗೊಳಿಸಿದ್ದೇ ನಮ್ಮ ಸರ್ಕಾರ . ಪ್ರತಿಯೊಬ್ಬರಿಗೂ ಪರಿಹಾರ ಸಿಗಲಿ ಎನ್ನುವುದೇ ಸರ್ಕಾರದ ಉದ್ದೇಶ. ಯಾವುದೇ ಜಾತಿಯೊಳಗೆ ಇನ್ನೊಂದನ್ನು ಸೇರಿಸುವ , ಯಾವುದೇ ಸಮುದಾಯಕ್ಕೆ ಅನ್ಯಾಯ ಮಾಡುವ ಉದ್ದೇಶ ಸರ್ಕಾರಕ್ಕಿಲ್ಲ. ಇದಕ್ಕೊಂದು ಪರಿಹಾರ ಹುಡುಕಿ, ನ್ಯಾಯ ಒದಗಿಸಲಾಗುವುದು” ಎಂದರು. ” ಒಳಮೀಸಲಾತಿ…

Read More