Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಚಿತ್ರದುರ್ಗದ ಕಾಂಗ್ರೆಸ್ ಶಾಸಕ ವೀರೇಂದ್ರ ವಿರುದ್ಧ ಅಕ್ರಮ ಆನ್ ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಇಡಿ ದಾಳಿ ನಡೆಸಿ ಬಂಧಿಸಲಾಗಿತ್ತು. ಅವರಿಗೆ ಕೋರ್ಟ್ 14 ದಿನಗಳ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ. ಅಕ್ರಮ ಆನ್ ಲೈನ್ ಬೆಟ್ಟಿಂಗ್ ಪ್ರಕರಣದಲ್ಲಿ ಶಾಸಕ ವೀರೇಂದ್ರ ಪಪ್ಪಿ ಅವರನ್ನು ಇಡಿ ಬಂಧಿಸಿತ್ತು. ತಮ್ಮ ವಶಕ್ಕೂ ಪಡೆದಿತ್ತು. ಇಂದು ಮತ್ತೆ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಅವರಿಗೆ ಕೋರ್ಟ್ ಸೆಪ್ಟೆಂಬರ್ 22ರವರೆಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ.
ಬೆಂಗಳೂರು: ಮಳೆಯಿಂದಾಗಿ 683 ಕಿಮೀ ರಾಜ್ಯ ಹೆದ್ದಾರಿ, 1383 ಜಿಲ್ಲಾ ಪ್ರಮುಖ ಹೆದ್ದಾರಿ, 5558 ಗ್ರಾಮೀಣ ರಸ್ತೆಗಳು, 656 ಸೇತುವೆ/ಕಲ್ವರ್ಟ್ಗಳು, 1877ಶಾಲಾ ಕಟ್ಟಡಗಳು, 160 ಪ್ರಾಥಮಿಕ ಆರೋಗ್ಯ ಕೇಂದ್ರಗಳು, 1018 ಅಂಗನವಾಡಿಗಳು, 25279 ವಿದ್ಯುತ್ ಕಂಬಗಳು, 819 ಟ್ರಾನ್ಸ್ಫಾರ್ಮರ್ಗಳು, 31 ಸಣ್ಣ ನೀರಾವರಿ ಕೆರೆಗಳಿಗೆ ಹಾನಿ ಸಂಭವಿಸಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಡಿಸಿ, ಜಿಲ್ಲಾ ಮಟ್ಟದ ಅಧಿಕಾರಿಗಳ ಸಭೆ ನಡೆಸಿದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದಂತ ಅವರು, ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು ಎಂದಿದ್ದಾರೆ. ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ. ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ…
ನೇಪಾಳ: ಇಲ್ಲಿನ ಕಠ್ಮಂಡುವಿನಲ್ಲಿ ಭ್ರಷ್ಟಾಚಾರ ಮತ್ತು ಸರ್ಕಾರವು ಹಲವಾರು ಮಾಧ್ಯಮ ಅಪ್ಲಿಕೇಶನ್ಗಳ ಮೇಲಿನ ನಿಷೇಧವನ್ನು ವಿರೋಧಿಸಿ ಜನರಲ್-ಝಡ್ ಪ್ರತಿಭಟನಾಕಾರರು ಬೀದಿಗಿಳಿದು ನಡೆಸಿದ ಹಿಂಸಾತ್ಮಕ ಘರ್ಷಣೆಯಲ್ಲಿ ಕನಿಷ್ಠ ಎಂಟು ಜನರು ಸಾವನ್ನಪ್ಪಿದರು ಮತ್ತು ನೂರಕ್ಕೂ ಹೆಚ್ಚು ಜನರು ಗಾಯಗೊಂಡರು. ಕರ್ಫ್ಯೂ ನಿರ್ಬಂಧಗಳನ್ನು ಉಲ್ಲಂಘಿಸಿ ಸಂಸತ್ತಿನ ಬಳಿಯ ನಿರ್ಬಂಧಿತ ವಲಯಗಳನ್ನು ಪ್ರವೇಶಿಸಿದ ನಂತರ ಕೋಪಗೊಂಡ ಪ್ರತಿಭಟನಾಕಾರರು ನೇಪಾಳ ರಾಜಧಾನಿಯಲ್ಲಿ ಸೈನ್ಯವನ್ನು ನಿಯೋಜಿಸಲಾಯಿತು. ಪ್ರತಿಭಟನಾಕಾರರು ಮರದ ಕೊಂಬೆಗಳು ಮತ್ತು ನೀರಿನ ಬಾಟಲಿಗಳನ್ನು ಎಸೆದು ಸರ್ಕಾರದ ವಿರೋಧಿ ಘೋಷಣೆಗಳನ್ನು ಕೂಗಿದ ನಂತರ ಪೊಲೀಸರು ಜಲಫಿರಂಗಿ, ಅಶ್ರುವಾಯು ಮತ್ತು ರಬ್ಬರ್ ಗುಂಡುಗಳೊಂದಿಗೆ ಪ್ರತಿಕ್ರಿಯಿಸಿದರು. ದಿ ಕಠ್ಮಂಡು ಪೋಸ್ಟ್ ವರದಿಯ ಪ್ರಕಾರ, ಕೆಲವು ಪ್ರತಿಭಟನಾಕಾರರು ಸಂಸತ್ತಿನ ಆವರಣವನ್ನು ಪ್ರವೇಶಿಸುವಲ್ಲಿ ಯಶಸ್ವಿಯಾದರು, ಇದು ಪರಿಸ್ಥಿತಿಯನ್ನು ತೀವ್ರಗೊಳಿಸಿತು. ಅಶಾಂತಿಗೆ ಪ್ರತಿಕ್ರಿಯೆಯಾಗಿ, ಕಠ್ಮಂಡು ಜಿಲ್ಲಾಡಳಿತ ಕಚೇರಿ ಕರ್ಫ್ಯೂ ಅನ್ನು ವಿಸ್ತರಿಸಿತು – ಆರಂಭದಲ್ಲಿ ರಾಜಧಾನಿಯ ಬನೇಶ್ವರ ಪ್ರದೇಶದಲ್ಲಿ ವಿಧಿಸಲಾಗಿತ್ತು. ಹೊಸ ನಿರ್ಬಂಧಗಳಲ್ಲಿ ಈಗ ಹಲವಾರು ಉನ್ನತ-ಭದ್ರತಾ ವಲಯಗಳು ಸೇರಿವೆ, ಉದಾಹರಣೆಗೆ ಅಧ್ಯಕ್ಷರ ನಿವಾಸ (ಶೀತಲ್…
ಬೆಂಗಳೂರು: ರಾಜ್ಯದಲ್ಲಿ ಅತಿವೃಷ್ಟಿಯಿಂದ ಉಂಟಾಗಿರುವ ಹಾನಿ ಹಾಗೂ ಪರಿಹಾರ ಕ್ರಮಗಳ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ನಡೆಸಿದ ವಿಡಿಯೋ ಸಂವಾದದ ಮುಖ್ಯಾಂಶಗಳು… • ರಾಜ್ಯದಲ್ಲಿ ಮುಂಗಾರು ಹಂಗಾಮಿನಲ್ಲಿ ಜೂನ್ 1ರಿಂದ ಸೆಪ್ಟಂಬರ್ ಮೊದಲ ವಾರದವರೆಗೆ ವಾಡಿಕೆಗಿಂತ ಶೇ.4ರಷ್ಟು ಹೆಚ್ಚು ಮಳೆಯಾಗಿದೆ. ಈ ಅವಧಿಯಲ್ಲಿ ವಾಡಿಕೆ ಮಳೆ 721ಮಿ.ಮೀ ಇದ್ದು, 753 ಮಿ.ಮೀ ಮಳೆ ದಾಖಲಾಗಿದೆ. ಕಳೆದ ವರ್ಷ ಶೇ.23ರಷ್ಟು ಹೆಚ್ಚುವರಿ ಮಳೆ ದಾಖಲಾಗಿತ್ತು. • ಈ ಅವಧಿಯಲ್ಲಿ ಚಾಮರಾಜನಗರದಲ್ಲಿ ಶೇ.24ರಷ್ಟು ಕಡಿಮೆ ಮಳೆಯಾಗಿದೆ. ವಿಜಯಪುರ, ಗದಗ, ಬಾಗಲಕೋಟೆ, ದಾವಣಗೆರೆ, ತುಮಕೂರು ಮತ್ತು ಬೆಳಗಾವಿ ಜಿಲ್ಲೆಗಳಲ್ಲಿ ಶೇ.20ಕ್ಕಿಂತ ಹೆಚ್ಚು ಮಳೆ ದಾಖಲಾಗಿದೆ. • ರಾಜ್ಯದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಕಳೆದ ವರ್ಷಕ್ಕೆ ಹೋಲಿಸಿದರೆ ಈಗ ಸ್ವಲ್ಪ ಕಡಿಮೆಯಿದೆ. ಪ್ರಮುಖ ಜಲಾಶಯಗಳ ಗರಿಷ್ಟ ಸಾಮರ್ಥ್ಯ 895.62 ಟಿಎಂಸಿ ಇದ್ದು, ಪ್ರಸ್ತುತ 840.52 ಟಿಎಂಸಿ ಸಂಗ್ರಹವಿದೆ. ಕಳೆದ ವರ್ಷ ಈ ಅವಧಿಯಲ್ಲಿ 856.17 ಟಿಎಂಸಿ…
ಬೆಂಗಳೂರು: ತನ್ನ ಗ್ರಾಹಕರಿಗೆ ಸ್ವಿಗ್ಗಿ ಇನ್ಸ್ಟಾಮಾರ್ಟ್ “ಕ್ವಿಕ್ ಇಂಡಿಯಾ ಮೂವ್ಮೆಂಟ್ 2025” ಪ್ರಾರಂಭಿಸುವುದಾಗಿ ಘೋಷಿಸಿತು. ಈ ಮಾರಾಟವು ಖರೀದಿದಾರರಿಗೆ ತ್ವರಿತ ವಿತರಣೆಯೊಂದಿಗೆ ಅತ್ಯಾಕರ್ಷಕ ಕೊಡುಗೆಗಳನ್ನು ತರುತ್ತದೆ, ಈ ಮಾರಾಟವು ಸೆಪ್ಟೆಂಬರ್ 19 ರಿಂದ ಸೆಪ್ಟೆಂಬರ್ 28, 2025 ರವರೆಗೆ ಇನ್ಸ್ಟಾಮಾರ್ಟ್ ಅಪ್ಲಿಕೇಶನ್ ಮತ್ತು ಸ್ವಿಗ್ಗಿ ಅಪ್ಲಿಕೇಶನ್ ಎರಡರಲ್ಲೂ ನೇರ ಪ್ರಸಾರವಾಗಲಿದೆ. ಗ್ರಾಹಕರು 50-90% ವರೆಗೆ ಬೃಹತ್ ರಿಯಾಯಿತಿ ಪಡೆಯಬಹುದು. ಅದರಲ್ಲೂ ಎಲೆಕ್ಟ್ರಾನಿಕ್ಸ್, ಅಡುಗೆಮನೆ ಪದಾರ್ಥಗಳು, ಊಟ, ಸೌಂದರ್ಯ ಮತ್ತು ವೈಯಕ್ತಿಕ ಆರೈಕೆ, ಆಟಿಕೆ ಸೇರಿದಂತೆ ಹಲವು ವಸ್ತುಗಳ ಮೇಲೆ ರಿಯಾಯಿತಿ ಒದಗಿಸಲಿದ್ದು, ಕೇವಲ 10 ನಿಮಿಷಗಳಲ್ಲಿ ನಿಮ್ಮ ಮನೆ ತಲುಪಿಸಲಿದೆ. 50,000 ಕ್ಕೂ ಹೆಚ್ಚು ಉತ್ಪನ್ನಗಳ ಕೊಡುಗೆಯೊಂದಿಗೆ, ಇನ್ಸ್ಟಾಮಾರ್ಟ್ ಹಬ್ಬದ ಶಾಪಿಂಗ್ ಅನ್ನು ಋತುವಿನ ಅತಿದೊಡ್ಡ ಕೊಡುಗೆಗಳಿಗೆ ವೇಗ ಮತ್ತು ಅನುಕೂಲತೆಯನ್ನು ತರುವ ಮೂಲಕ ಮರುಕಲ್ಪನೆ ಮಾಡುತ್ತಿದೆ. ವಸ್ತುಗಳ ಮೇಲೆ ಇನ್ನಷ್ಟು ರಿಯಾಯಿತಿ ದೊರೆಯಲು ವಿವಿಧ ಬ್ಯಾಂಕ್ಗಳ ಕಾರ್ಡ್ಗಳಿಗೆ ರಿಯಾಯಿತಿ ಇರಲಿದೆ. ಪ್ರಮುಖವಾಗಿ ಎಲ್ಲಾ ಆಕ್ಸಿಸ್ ಬ್ಯಾಂಕ್ ಕ್ರೆಡಿಟ್ ಕಾರ್ಡ್ಗಳೊಂದಿಗೆ ₹1000*…
ಬೆಂಗಳೂರು: ಕಳೆದ ವರ್ಷ ಪ್ರಾರಂಭವಾದ ITCಯ ಸನ್ಫೀಸ್ಟ್ ಮಾರಿ ಲೈಟ್ ಸ್ಟ್ರಾಂಗ್ ಟೀಮ್ ನೇಮ್ಪ್ಲೇಟ್ ಅಭಿಯಾನವು ಭಾರತದಲ್ಲಿ ಯಶಸ್ವಿಯಾಗಿದ್ದು, ಸಮಾನತೆಯನ್ನು ಎತ್ತಿ ಹಿಡಿದಿದೆ. ಈ ಉಪಕ್ರಮವು ಭಾರತೀಯ ಮನೆಗಳಲ್ಲಿ ಸಮಾನತೆಯನ್ನು ಪ್ರತಿಪಾದಿಸುವ ಬ್ರ್ಯಾಂಡ್ನ ಅಚಲ ಬದ್ಧತೆಯಾಗಿದ್ದು, ಸನ್ಫೀಸ್ಟ್ ಮಾರಿ ಲೈಟ್ ಸಮಾನ ಪಾಲುದಾರಿಕೆಯ ಅಗತ್ಯವನ್ನು ನಿರಂತರವಾಗಿ ಪ್ರತಿಪಾದಿಸುತ್ತಿದೆ. ಈ ವರ್ಷ ಇದನ್ನು ಒಂದು ಹೆಜ್ಜೆ ಮುಂದೆ ತೆಗೆದುಕೊಂಡು, ಸನ್ಫೀಸ್ಟ್ ಮಾರಿ ಲೈಟ್ ಬೆಂಗಳೂರಿನಲ್ಲಿ ‘ಮಿಸ್ಸಿಂಗ್ ವೈಫ್’ ಎಂಬ ಶೀರ್ಷಿಕೆಯ ಕುತೂಹಲಕಾರಿ ಅಭಿಯಾನ ಪ್ರಾರಂಭಿಸಿತ್ತು. ಈ ಸಂದೇಶವನ್ನು ವರ್ಧಿಸಲು ಸೃಜನಶೀಲ ಮತ್ತು ಭಾವನಾತ್ಮಕವಾಗಿ ಶಕ್ತಿಯುತವಾದ ವಿಧಾನವನ್ನು ಅಳವಡಿಸಿಕೊಂಡಿದೆ. ಮನೆಯ ನಾಮಫಲಕಗಳಲ್ಲಿ ಸಂಗಾತಿಯ ಹೆಸರಿನ ಅನುಪಸ್ಥಿತಿಯು ಬಹುತೇಕ ಗಮನಕ್ಕೆ ಬರುವುದಿಲ್ಲ, ಆದ್ದರಿಂದ ಮನೆಗಳಲ್ಲಿ ಸಮಾನತೆ, ಗೌರವ ಮತ್ತು ಹಂಚಿಕೆಯ ಗುರುತಿನ ಬಗ್ಗೆ ಸಂಭಾಷಣೆಗಳನ್ನು ಹುಟ್ಟುಹಾಕುವ ಬಗ್ಗೆ ಈ ಅಭಿಯಾನವು ಗಮನ ಸೆಳೆಯಿತು. ಅಭಿಯಾನದ ಭಾಗವಾಗಿ, ಬೆಂಗಳೂರಿನಾದ್ಯಂತ ಕುತೂಹಲಕಾರಿ OOH ಸೃಜನಶೀಲರು “ನಿಖಿಲ್ ಅವರ ಪತ್ನಿ ಕಾಣೆಯಾಗಿದ್ದಾರೆ.” ಎಂಬ ಒನ್-ಲೈನರ್ಗಳನ್ನು ಪ್ರಮುಖ ಸ್ಥಳಗಳಲ್ಲಿ ಪ್ರದರ್ಶಿಸುವ ಮೂಲಕ…
ಬೆಂಗಳೂರು: ಮದ್ದೂರಲ್ಲಿ ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಹಿಂದೂ-ಮುಸ್ಲೀಂ ಯಾರೇ ಕಾನೂನು ಕೈಗೆತ್ತಿಕೊಂಡಿದ್ದರೂ ಕಾನೂನು ಕ್ರಮ ಗ್ಯಾರಂಟಿ. ನಾವು ಅದರಲ್ಲಿ ಮುಲಾಜೇ ಇಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮದ್ದೂರಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆದಿದೆ. ಮಸೀದಿ ಬಳಿಯಲ್ಲಿ ಸಾಗುವಾಗ ಈ ಘಟನೆ ನಡೆದಿದೆ. ಈ ವೇಳೆಯಲ್ಲಿ ಕೆಲವರು ಗುಂಪು ಕಟ್ಟಿಕೊಂಡು ಗಲಾಟೆಗೆ ಯತ್ನಿಸಿದ್ದಾರೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದರು. ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ 21 ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ನಾವು ಯಾರೇ ತಪ್ಪು ಮಾಡಿದ್ರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ. ಹಿಂದೂ, ಮುಸ್ಲೀಂ ಎನ್ನುವ ಬೇಧ ಭಾವವಿಲ್ಲ. ಕಾನೂನು ಕೈಗೆತ್ತಿಕೊಂಡ ಎಲ್ಲರ ವಿರುದ್ಧವೂ ಕಾನೂನು ಕ್ರಮ ಆಗಲಿದೆ ಎಂದರು ಹೇಳಿದರು. ಮದ್ದೂರಿನ ಗಲಾಟೆ ಸಂಬಂಧ ಜಿಲ್ಲಾ…
ಚಿತ್ರದುರ್ಗ: ನಗರದ ಹಿಂದೂ ಮಹಾಗಣಪತಿ ಶೋಭಾಯಾತ್ರೆ ವೇಳೆಯಲ್ಲಿ 9 ಡಿಜೆ ಬಳಕೆ ಮಾಡಲಾಗುತ್ತಿದೆ. ಆ ಮೂಲಕ ಅದ್ಧೂರಿಯಾಗಿ ಗಣೇಶ ಮೂರ್ತಿಯ ವಿಸರ್ಜನಾ ಮೆರವಣಿಗೆ ನಡೆಯಲಿದೆ ಎನ್ನುವಂತ ಪೋಸ್ಟ್ ವೈರಲ್ ಆಗಿತ್ತು. ಆ ಬಗ್ಗೆ ಚಿತ್ರದುರ್ಗ ಪೊಲೀಸ್ ಇಲಾಖೆ ಸ್ಪಷ್ಟನೆ ಏನು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಚಿತ್ರದುರ್ಗಾ ಜಿಲ್ಲಾ ಪೊಲೀಸ್ ಮಾಹಿತಿ ಬಿಡುಗಡೆ ಮಾಡಿದ್ದು, ದಿನಾಂಕ:13.09.2025 ರಂದು ಚಿತ್ರದುರ್ಗ ನಗರದಲ್ಲಿ ನಡೆಯಲಿರುವ ಹಿಂದೂ ಮಹಾಗಣಪತಿ ಶೋಭಾಯಾತ್ರೆಗೆ ವಿವಿಧ ಕಡೆಯಿಂದ 9 DJ ತರಿಸಲಾಗುತ್ತಿದೆ ಎಂಬುದಾಗಿ ಪೊಸ್ಟ್ ಹರಿದಾಡುತ್ತಿರುತ್ತದೆ ಎಂದು ತಿಳಿಸಿದೆ. ಸದರಿ ಮಾಹಿತಿ ಸತ್ಯಕ್ಕೆ ದೂರವಾಗಿರುತ್ತದೆ ಹಾಗೂ ಈ ವಿಷಯಕ್ಕೆ ಸಂಬಂಧಿಸದಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ವತಿಯಿಂದ ಯಾವುದೇ ಡಿಜೆ ಬಳಕೆಗೆ ಅನುಮತಿ ನೀಡಿರುವುದಿಲ್ಲ. ಆದ್ದರಿಂದ ಈ ರೀತಿಯ ಸುಳ್ಳು ಸುದ್ದಿಗಳನ್ನು ಸಾರ್ವಜನಿಕರು ನಂಬಬಾರದೆಂದು ಜಿಲ್ಲಾ ಪೊಲೀಸ್ ವತಿಯಿಂದ ಸೂಚಿಸಲಾಗಿರುತ್ತದೆ ಎಂದು ಸ್ಪಷ್ಟ ಪಡಿಸಿದೆ. ಈ ರೀತಿ ಸುಳ್ಳು ಸುದ್ದಿಗಳನ್ನು ಹರಡುವವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುತ್ತಿದೆ.…
ಬೆಂಗಳೂರು: ಮಂಡ್ಯದ ಮದ್ದೂರಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯ ಸಂದರ್ಭದಲ್ಲಿ ಉಂಟಾದಂತ ಕಲ್ಲು ತೂರಾಟ ಪ್ರಕರಣದಲ್ಲಿ 21 ಮಂದಿಯನ್ನು ಈಗಾಗಲೇ ಬಂಧಿಸಲಾಗಿದೆ. ಇಂತಹ ಕೃತ್ಯವೆಸಗುವ ಯಾರೇ ಆದರೂ ಕಾನೂನು ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಬೆಂಗಳೂರಿನ ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮದ್ದೂರಲ್ಲಿ ಗಣಪತಿ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ನಡೆದಿದೆ. ಮಸೀದಿ ಬಳಿಯಲ್ಲಿ ಸಾಗುವಾಗ ಈ ಘಟನೆ ನಡೆದಿದೆ. ಈ ವೇಳೆಯಲ್ಲಿ ಕೆಲವರು ಗುಂಪು ಕಟ್ಟಿಕೊಂಡು ಗಲಾಟೆಗೆ ಯತ್ನಿಸಿದ್ದಾರೆ. ಹೀಗಾಗಿ ಪರಿಸ್ಥಿತಿ ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ಮಾಡಿದ್ದಾರೆ ಎಂದರು. ಮಂಡ್ಯದ ಮದ್ದೂರಿನಲ್ಲಿ ಗಣೇಶ ಮೂರ್ತಿ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣದಲ್ಲಿ 21 ಆರೋಪಿಗಳನ್ನು ಈಗಾಗಲೇ ಬಂಧಿಸಲಾಗಿದೆ. ನಾವು ಯಾರೇ ತಪ್ಪು ಮಾಡಿದ್ರೂ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಿದ್ದೇವೆ. ಹಿಂದೂ, ಮುಸ್ಲೀಂ ಎನ್ನುವ ಬೇಧ ಭಾವವಿಲ್ಲ. ಕಾನೂನು ಕೈಗೆತ್ತಿಕೊಂಡ ಎಲ್ಲರ ವಿರುದ್ಧವೂ ಕಾನೂನು ಕ್ರಮ ಆಗಲಿದೆ ಎಂದರು ಹೇಳಿದರು. ಮದ್ದೂರಿನ ಗಲಾಟೆ…
ಮಂಡ್ಯ: ಮದ್ದೂರಲ್ಲಿ ಗಣೇಶ ಮೂರ್ತಿ ಮೆರವಣಿಗೆಯ ವೇಳೆಯಲ್ಲಿ ಕಲ್ಲು ತೂರಾಟ ನಡೆಸಿದ್ದನ್ನು ಖಂಡಿಸಿ ಪ್ರತಿಭಟನೆ ನಡೆಸಿದಂತ ಹಿಂದೂ ಮುಖಂಡರನ್ನು ಪೊಲೀಸರು ಬಂಧಿಸಿದ್ದಾರೆ. ಹೀಗೆ ಅರೆಸ್ಟ್ ಆಗಿರುವ ನಮ್ಮ ಹಿಂದು ಯುವಕರನ್ನ ಬಿಡುಗಡೆ ಮಾಡಬೇಕು. ಮಸೀದಿ ಮುಂದೆ ಗಣೇಶ ಮೆರವಣಿಗೆ ಮಾಡಲು ಅವಕಾಶ ಕೊಡಬೇಕು. ಲಾಠಿ ಪ್ರಹಾರ ಮಾಡಿದ ಅಧಿಕಾರಿ ವಿರುದ್ದ ಕ್ರಮ ಆಗಬೇಕು ಎಂಬುದಾಗಿ ಮಾಜಿ ಸಂಸದ ಪ್ರತಾಪ್ ಸಿಂಹ ಆಗ್ರಹಿಸಿದ್ದಾರೆ. ಇಂದು ಮಂಡ್ಯದ ಮದ್ದೂರು ಪ್ರತಿಭಟನೆಯ ಸ್ಥಳಕ್ಕೆ ಆಗಮಿಸಿರುವಂತ ಮಾಜಿ ಸಂಸದ ಪ್ರತಾಪ್ ಸಿಂಹ ಅವರು, ಸಮಾಧಾನದಿಂದ ಹೋರಾಟ ಮಾಡುವಂತೆ ಪ್ರತಾಪ್ ಸಿಂಹ ಮನವಿ ಮಾಡಿದ್ದಾರೆ. ಹೋರಾಟದಲ್ಲಿ ಬೆಂಬಲವಾಗಿ ನಿಂತಿರುವ ಜೆಡಿಎಸ್ ಮುಖಂಡರು. ನಿಖಿಲ್ ಕುಮಾರಸ್ವಾಮಿ ಹಾಗೂ ಕುಮಾರಸ್ವಾಮಿ ಯವರಿಗೆ ಹಾಗೂ ಪಕ್ಷಾತೀತವಾಗಿ ಬಂದಿರುವ ಕಾಂಗ್ರೆಸ್ ಕಾರ್ಯಕರ್ತರೆ ಎಂದ ಪ್ರತಾಪ್ ಸಿಂಹ ಹೇಳಿದರು. ಸಿದ್ದರಾಮಯ್ಯ ಮೊದಲ ಬಾರಿ ಸಿಎಂ ಆದಾಗ ಸಿದ್ದರಾಮಯ್ಯ ಚಾಮುಂಡಿಗೆ ಅವಮಾನ ಮಾಡಿದ್ರು. ಮಹಿಷ ದಸರ ಮಾಡಲು ಮುಂದಾಗಿದ್ರು ಅದನ್ನ ಮೆಟ್ಟಿ ನಿಂತಿದ್ದೇವೆ. ಇದೆ ರೀತಿ ಇಲ್ಲು…












