Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮವಾಗಿ ಆಗಸ್ಟ್.30ರವರೆಗೆ ರಾಜ್ಯಾಧ್ಯಂತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಕುರಿತಂತೆ ಮಾಹಿತಿ ಬಿಡುಗಡೆ ಮಾಡಿರುವಂತ ಭಾರತೀಯ ಹವಾಮಾನ ಇಲಾಖೆಯು, ಆಗಸ್ಟ್.30ರವರೆಗೆ ರಾಜ್ಯದ ಕರಾವಳಿ, ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಒಳನಾಡು ಜಿಲ್ಲೆಗಳಲ್ಲಿ ಆಗಸ್ಟ್.28ರವರೆಗೆ ಗುಡುಗು, ಗಾಳಿ ಸಹಿತ ಸಾಧಾರಣ ಮಳೆಯು ಅಲ್ಲಲ್ಲಿ ಆಗಲಿದೆ ಎಂಬುದಾಗಿ ತಿಳಿಸಿದೆ. ಈಗಾಗಲೇ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶಿವಮೊಗ್ಗ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ವರುಣ ಆರ್ಭಟಿಸಿದ್ದಾನೆ. ಇದರ ನಡುವೆ ಬೀದರ್ ಜಿಲ್ಲೆಯಲ್ಲಿ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ಯೆಲ್ಲೋ ಅಲರ್ಟ್ ಘೋಷಿಸಿದೆ. ಬೀದರ್, ಭಾಲ್ಕಿ, ಔರಾದ್, ಬಸವಕಲ್ಯಾಣ, ಹುಮ್ನಾಬಾದ್ ಸೇರಿದಂತೆ ವಿವಿಧ ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದೆ. ಹೀಗಾಗಿ ವಿವಿಧೆಡೆ ಜನ ಜೀವನ ಅಸ್ತವ್ಯಸ್ಥಗೊಂಡಿದ್ದು, ಬೆಳೆ ನಾಶವಾಗುವಂತ ಭೀತಿಯಲ್ಲಿ ಅನ್ನದಾತರಿದ್ದಾರೆ. https://kannadanewsnow.com/kannada/lets-go-to-the-bjps-pilgrimage-site-its-about-politics-not-about-religion-dk-shivakumar/ https://kannadanewsnow.com/kannada/good-news-for-farmers-of-the-state-special-campaign-for-record-amendment-starts-from-september-1/
ಬೆಂಗಳೂರು: ಬಿಜೆಪಿ ನಡೆಸಿದಂತ ಧರ್ಮಸ್ಥಳ ಚಲೋ ಅದು ರಾಜಕೀಯ ಚಲೋ ಹೊರತೇ, ಅದು ಧರ್ಮದ ಚಲೋ ಅಲ್ಲ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಇಂದು ತಮ್ಮ ನಿವಾಸದ ಬಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, “ಇದು ಬಿಜೆಪಿಯ ರಾಜಕೀಯ ಅಜೆಂಡಾ. ಇಂತಹ ಬಿಜೆಪಿ ಅಲ್ಪಸಂಖ್ಯಾತ ಇಲಾಖೆಯನ್ನು ಮುಚ್ಚಿಬಿಡಲಿ. ನಮ್ಮ ದೇಶದ ನಿವಾಸಿಗಳೆಲ್ಲರನ್ನು ನಾವು ಒಪ್ಪಿಕೊಳ್ಳಲೇ ಬೇಕು. ಅವರನ್ನು ದೇಶದಿಂದ ಓಡಿಸಿ ಬಿಡಲು ಆಗುತ್ತದೆಯೇ?” ಎಂದರು. ಜೆಡಿಎಸ್ ತನ್ನ ಸಾಮಾಜಿಕ ಜಾಲತಾಣದಲ್ಲಿ ನಕಲಿ ಪತ್ರ ಹರಿಬಿಟ್ಟಿರುವ ಬಗ್ಗೆ ಕೇಳಿದಾಗ, “ಅವರು ಯಾವತ್ತಿದ್ದರೂ ಫೇಕ್. ಜೆಡಿಎಸ್ ಎಂದಿಗೂ ಫೇಕ್ ಕೆಲಸಗಳನ್ನೇ ಮಾಡುವುದು. ನಾನು ಹೆದರಿಕೊಂಡು ಬಿಟ್ಟೆ, ರಣಹೇಡಿ ಅಂತಲಾದರೂ ಟೀಕೆ ಮಾಡಿಕೊಳ್ಳಲಿ, ಪರವಾಗಿಲ್ಲ, ಅವರ ದೊಡ್ಡ, ದೊಡ್ಡ ನಾಯಕರುಗಳಿಗೆ ಹೆದರಿಕೊಳ್ಳದವನು ನಾನು. ಈಗ ಈ ಟ್ವೀಟ್ ಗಳಿಗೆ ಹೆದರಿಕೊಳ್ಳುತ್ತೇನೆಯೇ? ವಿಜಯೇಂದ್ರ ಹಾಗೂ ಅಶೋಕ್ ಅವರು ತಮ್ಮ, ತಮ್ಮ ಸಮಾಧಾನಕ್ಕೆ ಮಾತನಾಡುತ್ತಿದ್ದಾರೆ” ಎಂದರು. ಧರ್ಮಸ್ಥಳ ಚಲೋ ಬಗ್ಗೆ ಕೇಳಿದಾಗ, “ಅದು ರಾಜಕೀಯದ ಚಲೋ. ಧರ್ಮದ ಚಲೋ…
ಬೆಂಗಳೂರು : “ಹೇಗೆ ನೀರಿಗೆ, ಬೆಳಕಿಗೆ, ಗಾಳಿಗೆ ಯಾವುದೇ ಜಾತಿ ಧರ್ಮ ಇಲ್ಲವೋ, ಅದೇ ರೀತಿ ದೇವರಿಗೂ ಸಹ ಧರ್ಮವಿಲ್ಲ. ಪ್ರಾರ್ಥನೆಯು ಯಾರೊಬ್ಬರ ಸ್ವತ್ತಲ್ಲ. ನಾನು ನಂಬಿರುವ ಗುರುಗಳು ಮಾನವ ಧರ್ಮದಿಂದಲೇ ವಿಶ್ವಕ್ಕೆ ಶಾಂತಿ ಎಂದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಹೇಳಿದರು. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು. ಚಾಮುಂಡಿ ಬೆಟ್ಟ ಬರೀ ಹಿಂದೂಗಳ ಆಸ್ತಿಯಲ್ಲ ಎನ್ನುವ ಹೇಳಿಕೆಗೆ ಸಂಸದ ಯದುವೀರ ಹಾಗೂ ಪ್ರತಿಪಕ್ಷಗಳ ಟೀಕೆಯ ಬಗ್ಗೆ ಕೇಳಿದಾಗ, “ಚಾಮುಂಡೇಶ್ವರಿ ಎಲ್ಲಾ ಧರ್ಮದವರಿಗೂ ಆಶೀರ್ವಾದ ಮಾಡುವಂತಹ ದೇವರು. ರಾಜ ವಂಶಸ್ಥರು ಹಾಗೂ ನಂತರ ಬಂದ ಸರ್ಕಾರಗಳು ಚಾಮುಂಡಿ ತಾಯಿಯನ್ನು ನಾಡದೇವಿ ಎಂದು ಕರೆದಿವೆ. ಈ ದೇಗುಲ ಸಾರ್ವಜನಿಕರ ಆಸ್ತಿ. ನಾಡಧ್ವಜ, ನಾಡದೇವಿ, ರಾಷ್ಟ್ರಧ್ವಜ ಹಾಗೂ ದೇವರಿಗೆ ಜಾತಿ, ಧರ್ಮ ಬಣ್ಣದ ರಾಜಕೀಯ ಲೇಪನ ಮಾಡುವ ಅಗತ್ಯವಿಲ್ಲ” ಎಂದರು. ಹಿಂದುತ್ವದ ಮೇಲಿನ ದಾಳಿ ಹಾಗೂ ಬಾನು ಮುಷ್ತಾಕ್ ಆಯ್ಕೆಯ ಬಗ್ಗೆ ಬಿಜೆಪಿ ಟೀಕೆ ಬಗ್ಗೆ ಕೇಳಿದಾಗ, “ನಾವು ಆಚರಣೆ…
ಬೆಂಗಳೂರು: ನಾಡದೇವಿಯ ದೇವಸ್ಥಾನಕ್ಕೆ ಕೇವಲ ಹಿಂದುಗಳು ಮಾತ್ರ ಬರಬೇಕು ಎನ್ನುವ ನಿಯಮವಿದೆಯೇ? ಒಂದಷ್ಟು ಸಮುದಾಯದವರು ಬೌದ್ಧ, ಕ್ರಿಶ್ಚಿಯನ್, ಇಸ್ಲಾಂ ಧರ್ಮಕ್ಕೆ ಸೇರಿಕೊಂಡಿದ್ದಾರೆ. ಇವರನ್ನು ದೇವಾಲಯಕ್ಕೆ ಬರಬೇಡಿ ಎಂದು ಹೇಳಲು ಆಗುತ್ತದೆಯೇ? ತಂದೆ-ತಾಯಿ ಬೇರೆ, ಬೇರೆ ಧರ್ಮಕ್ಕೆ ಸೇರಿರುತ್ತಾರೆ. ಇಂತಹ ಮಕ್ಕಳ ಆಚರಣೆ ಬೇರೆ, ಬೇರೆ ಇರುತ್ತದೆ. ಬ್ಯಾರಿಗಳು ನಮಗಿಂತ ಅದ್ಭುತವಾಗಿ ಕನ್ನಡ ಮಾತನಾಡುತ್ತಾರೆ. ಅವರನ್ನು ಮುಸ್ಲಿಮರು ಎಂದು ತಳ್ಳಿಬಿಡಲು ಆಗುತ್ತದೆಯೇ? ಮುಸ್ಲಿಮರು ಶ್ಲೋಕವೊಂದನ್ನು ಪಠಣ ಮಾಡುವ ವಿಡಿಯೋ ನೋಡಿದೆ. ಅವರು ಸಹ ನಮ್ಮ ಧರ್ಮದ ಬಗ್ಗೆ ತಿಳಿದುಕೊಂಡಿದ್ದಾರೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯಿಸಿದ ಅವರು, ಮಹಾರಾಜರ ಆಳ್ವಿಕೆ ಕಾಲದಲ್ಲಿಯೂ ವಿದೇಶಗಳಿಂದ ಅತಿಥಿಗಳನ್ನು ದಸರಾಕ್ಕೆ ಆಹ್ವಾನ ಮಾಡುತ್ತಿದ್ದರು. ವಿದೇಶಿ ಧರ್ಮಿಯರೂ ಇಲ್ಲಿಗೆ ಬಂದು ಪ್ರಾರ್ಥನೆ ಸಲ್ಲಿಸುತ್ತಿದ್ದಾರೆ. ಚರ್ಚ್, ಮಸೀದಿ, ಜೈನ ಬಸದಿ, ಗುರುದ್ವಾರ ಹೀಗೆ ಎಲ್ಲಾ ಕಡೆ ನಮ್ಮನ್ನು ಒಳಗೆ ಬಿಡುವುದಿಲ್ಲವೇ. ಈ ಹಿಂದೆ ಕವಿ ನಿಸಾರ್ ಅಹಮದ್ ಅವರು ದಸರಾ ಉದ್ಘಾಟನೆ…
ಬೆಂಗಳೂರು: ರೌಡಿ ಶೀಟರ್ ಬಿಕ್ಲು ಶಿವ ಕೊಲೆ ಪ್ರಕರಣದಲ್ಲಿ ಎ1 ಆರೋಪಿಯಾಗಿರುವಂತ ಜಗ್ಗ ಆಲಿಯಾಸ್ ಜಗದೀಶ್ ಎಂಬಾತನನ್ನು ಸಿಐಡಿ ಪೊಲೀಸರು ಬಂಧಿಸಿದ್ದರು. ಬಂಧಿತ ಆರೋಪಿಯನ್ನು ಸಿಐಡಿ ಪೊಲೀಸರ ವಶಕ್ಕೂ ಹೆಚ್ಚಿನ ವಿಚಾರಣೆಗೆ ನೀಡಲಾಗಿದೆ. ಇದೇ ಸಂದರ್ಭದಲ್ಲಿ ನನಗೂ ಬೈರತಿ ಬಸವರಾಜ್ ಗೂ ಸಂಬಂಧವಿಲ್ಲ ಎಂಬುದಾಗಿ ಎ1 ಆರೋಪಿ ಜಗ್ಗ ಹೇಳಿದ್ದಾಗಿ ತಿಳಿದು ಬಂದಿದೆ. ಮಂಗಳವಾರದಂದು ಬಿಕ್ಲು ಶಿವ ಕೊಲೆ ಕೇಸಲ್ಲಿ ಎ1 ಆರೋಪಿಯಾಗಿದ್ದಂತ ಜಗದೀಶ್ ಆಲಿಯಾಸ್ ಜಗ್ಗ ನನ್ನು ಸಿಐಡಿ ಅಧಿಕಾರಿಗಳು ಬಂಧಿಸಿದ್ದರು. ಹೆಚ್ಚಿನ ವಿಚಾರಣೆಗಾಗಿ 10 ದಿನಗಳ ಕಾಲ ಸಿಐಡಿ ವಶಕ್ಕೂ ನೀಡಲಾಗಿದೆ. ಸಿಐಡಿಯ ಎಸ್ ಪಿ ವೆಂಕಟೇಶ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗುತ್ತಿದೆ. ಬಿಕ್ಲು ಶಿವನ ಜೊತೆ ಇದ್ದ ವೈಷಮ್ಯದ ಬಗ್ಗೆ, ಕಿತ್ತಗನೂರಿನ ಜಮೀನಿನ ಗಲಾಟೆಯ ಬಗ್ಗೆ, ಹಳೆಯ ಕೇಸ್ ಗಳ ಬಗ್ಗೆ ವಿಚಾರಣೆ ವೇಳೆಯಲ್ಲಿ ಹಲವು ಮಹತ್ವದ ಮಾಹಿತಿಯನ್ನು ಜಗ್ಗ ನೀಡಿದ್ದಾಗಿ ಹೇಳಲಾಗುತ್ತಿದೆ. ಇದಲ್ಲದೇ ಬೈರತಿ ಬಸವರಾಜ್ ಜೊತೆಗಿನ ಸಂಪರ್ಕದ ಬಗ್ಗೆಯೂ ಬಾಯಿ ಬಿಡಿಸಲು ಯತ್ನಿಸಲಾಗಿತತು. ಆದರೇ ಜಗ್ಗ…
ಬೆಂಗಳೂರು: ಸೆಪ್ಟಂಬರ್ 01 ರಿಂದ ಹದಿನೈದು ದಿನಗಳ ಕಾಲ ಪಹಣಿಯಲ್ಲಿನ ಸಣ್ಣಪುಟ್ಟ ತಿದ್ದುಪಡಿಗಳನ್ನು ಮಾಡಿಕೊಡಲು ವಿಶೇಷ ಅಭಿಯಾನ ಆರಂಭಿಸಲಾಗುವುದು, ರೈತರು ಕೂಡಲೆ ತಮ್ಮ ಅರ್ಜಿಯನ್ನು ಅಗತ್ಯ ದಾಖಲೆಗಳೊಂದಿಗೆ ಸಂಬಂಧಿಸಿದ ತಹಸಿಲ್ದಾರರಿಗೆ ಸಲ್ಲಿಸಬೇಕೆಂದು ರಾಜ್ಯ ಸರ್ಕಾರ ತಿಳಿಸಿದೆ. ಪಹಣಿ, ಆರ್ಟಿಸಿ ಯಲ್ಲಿನ ಲೋಪದೋಷಗಳ ತಿದ್ದುಪಡಿ ಅಧಿಕಾರವನ್ನು ಈ ಮೊದಲು ತಹಸಿಲ್ದಾರರಿಗೆ ನೀಡಲಾಗಿತ್ತು. ಆದರೆ ಇದೀಗ, ಈ ಅಧಿಕಾರವನ್ನು ಉಪವಿಭಾಗಾಧಿಕಾರಿಗಳಿಗೆ ವಹಿಸಲಾಗಿರುತ್ತದೆ. ಆರ್ಟಿಸಿ ಯಲ್ಲಿನ ಸಣ್ಣಪುಟ್ಟ ದೋಷಗಳಿಂದ ರೈತರಿಗೆ ಹಲವು ವಿಧದ ತೊಂದರೆಯಾಗುತ್ತಿದೆ. ಇದನ್ನು ಪರಿಹರಿಸಿ ರೈತರಿಗೆ ಅನುಕೂಲ ಮಾಡಿಕೊಡಬೇಕು ಎಂಬುದಾಗಿ ರೈತ ಮುಖಂಡರುಗಳು ಜಿಲ್ಲಾಡಳಿತದ ಗಮನಕ್ಕೆ ತಂದ ಹಿನ್ನೆಲೆಯಲ್ಲಿ ಇದೀಗ ರೈತರಿಗೆ ಅನುಕೂಲವಾಗುವಂತಾಗಲು ಸೆಪ್ಟಂಬರ್ 01 ರಿಂದ ಹದಿನೈದು ದಿನಗಳ ಕಾಲ ಜಿಲ್ಲೆಯಾದ್ಯಂತ ಆಯಾ ತಾಲ್ಲೂಕು ಕೇಂದ್ರಗಳಲ್ಲಿ ಪಹಣಿ ತಿದ್ದುಪಡಿ ಅಭಿಯಾನವನ್ನು ಕೈಗೊಳ್ಳಲಾಗುವುದು. ಪಹಣಿಯಲ್ಲಿನ ಸಣ್ಣ ಪುಟ್ಟ ದೋಷಗಳನ್ನು ತಿದ್ದುಪಡಿ ಮಾಡಲು (ಅಪೀಲು ಪ್ರಕರಣಗಳನ್ನು ಹೊರತುಪಡಿಸಿ) ವಿಶೇಷ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ರೈತರು ತಮ್ಮ ಅರ್ಜಿಗಳನ್ನು ಸಂಬಂಧಿಸಿದ ದಾಖಲೆಗಳೊಂದಿಗೆ ಆಯಾ ತಹಸಿಲ್ದಾರರಿಗೆ ಸಲ್ಲಿಸಬೇಕು. ತಹಸಿಲ್ದಾರರು…
ಶಿವಮೊಗ್ಗ : ಸಾಗರದ ಇತಿಹಾಸ ಪ್ರಸಿದ್ದವಾದ ಶ್ರೀ ಮಾರಿಕಾಂಬಾ ದೇವಿ ಜಾತ್ರೆಯು ಫೆಬ್ರವರಿ.3, 2026ರಂದು ನಡೆಯಲಿದೆ ಎಂದು ಮಾರಿಕಾಂಬಾ ದೇವಸ್ಥಾನ ನ್ಯಾಸ ಪ್ರತಿಷ್ಟಾನದ ಅಧ್ಯಕ್ಷ ಕೆ.ಎನ್.ನಾಗೇಂದ್ರ ಹೇಳಿದರು. ಸಾಗರದ ಮಾರಿಕಾಂಬಾ ದೇವಸ್ಥಾನದಲ್ಲಿ ಸೋಮವಾರ ಮಾರಿಕಾಂಬಾ ಜಾತ್ರಾ ವಿವರದ ನಾಮಫಲಕ ಅನಾವರಣ ಮಾಡಿ ಮಾತನಾಡಿದಂತ ಅವರು, ಜಾತ್ರೆ ನಡೆಸುವ ಕುರಿತು ಚರ್ಚೆ ನಡೆಸಲಾಗಿದ್ದು ಮುಹೂರ್ತವನ್ನು ನಿಗಧಿಪಡಿಸಲಾಗಿದೆ. 2025ರ ಡಿಸೆಂಬರ್ 23ರಂದು ಮರ ಕಡಿಯುವ ಶಾಸ್ತ, 2026ರ ಜನವರಿ 27ರಂದು ಜಾತ್ರೆಗೆ ಅಂಕೆ ಹಾಕುವುದು. ಫೆ.3ರಂದು ತವರುಮನೆಯಲ್ಲಿ ಅಮ್ಮನ ಪ್ರತಿಷ್ಟಾಪನೆ, ರಾತ್ರಿ ಅಮ್ಮನವರ ಮೆರವಣಿಗೆ ನಂತರ ಗಂಡನ ಮನೆ ದೇವಸ್ಥಾನದಲ್ಲಿ ಅಮ್ಮನ ಪ್ರತಿಷ್ಟಾಪನೆ, ಫೆ. 11ರಂದು ಅಮ್ಮನವರನ್ನು ವನಕ್ಕೆ ಬಿಡುವ ಶಾಸ್ತ್ರ ಫೆ. 15ರಂದು ಅಂಕೆ ತೆಗೆಯುವುದು ಮತ್ತು ಕೋಣವನ್ನು ಬಿಡುವ ಶಾಸ್ತ್ರ ನಡೆಯುತ್ತದೆ. ಸಾರ್ವಜನಿಕರಿಗೆ ಮಾಹಿತಿ ಹಿನ್ನೆಲೆಯಲ್ಲಿ ಆರು ತಿಂಗಳ ಮೊದಲೆ ಜಾತ್ರಾ ದಿನಾಂಕ ಘೋಷಣೆ ಮಾಡಿದೆ ಎಂದರು. ಗಂಡನ ಮನೆ ದೇವಸ್ಥಾನದ ಪ್ರಧಾನ ಅರ್ಚಕ ರವಿ ಪೋತರಾಜ ಮಾತನಾಡಿ, ಅರಸರ ಕಾಲದಿಂದಲೂ ಸಾಗರದ…
ಶಿವಮೊಗ್ಗ: ಕೆಳದಿ ಅರಸರ ಕಾಲದಿಂದಲೂ ಸಾಗರದ ಜೋಯಿಸ್ ಮನೆತನದಲ್ಲಿ ಅರಮನೆ ಗೌರಿ ಕೂರಿಸುವಂತ ಸಂಪ್ರದಾಯವಿದೆ. ಇಂದು ಅದರಂತೆ ಜೋಯಿಸ್ ಮನೆತನದವರಿಂದ ಅರಮನೆ ಗೌರಿ ಪ್ರತಿಷ್ಠಾಪಿಸಿ ವಿಶೇಷ ರೀತಿಯಲ್ಲಿ ಪೂಜಾ ಕೈಂಕರ್ಯವನ್ನು ನೆರವೇರಿಸಲಾಯಿತು. ಶಿವಮೊಗ್ಗ ಜಿಲ್ಲೆಯ ಸಾಗರದಲ್ಲಿ ಗೌರಿ ಗಣೇಶ ಹಬ್ಬ ಎಲ್ಲರ ಮನೆಯಲ್ಲೂ ಮನೆ ಮಾಡಿದೆ. ಇದೇ ಹೊತ್ತಿನಲ್ಲಿ ಕೆಳದಿ ಅರಸರ ಕಾಲದಿಂದಲೂ ಜೋಯಿಸ್ ಮನೆತನದಿಂದ ಅರಮನೆ ಗೌರಿಯನ್ನು ಪ್ರತಿಷ್ಠಾಪಿಸಿ ವಿಶೇಷವಾಗಿ ಪೂಜೆ ನಡೆಸಲಾಯಿತು. 2 ದಿನಗಳ ಕಾಲ ಗೌರಿಯನ್ನು ಪೂಜಿಸಲಾಗುತ್ತದೆ. ಈ ದೇವಿಯನ್ನು ಪ್ರತಿಯೊಬ್ಬ ಭಕ್ತರು ಸ್ಪರ್ಶಿಸಿ, ಪೂಜಿಸುವುದು ಬಹು ಹಿಂದಿನಿಂದಲೂ ನಡೆದುಕೊಂಡು ಬಂದಿರುವಂತ ಸಂಪ್ರದಾಯವಾಗಿದೆ. ಈ ಕುರಿತಂತೆ ಮಾತನಾಡಿದಂತ ಜೋಯಿಸ್ ಮನೆತನದ ಸದಾಶಿವ ಜೋಯಿಸ್ ಅವರು, ನಮ್ಮ ಕುಟುಂಬದಲ್ಲಿ ಕೆಳದಿ ಅರಸರ ಕಾಲದಿಂದಲೂ ಅರಮನೆಯಲ್ಲಿ ಪೂಜೆಗೊಳ್ಳುತ್ತಿದ್ದಂತ ಗೌರಿಯನ್ನು ಅರಸರ ಆಳ್ವಿಕೆಯ ನಂತ್ರ, ನಮ್ಮ ಮನೆತನದ ಮೂಲಕ ಮನೆಯಲ್ಲಿಯೇ ಇಟ್ಟು ಪೂಜೆ ಮಾಡುವ ಸಂಪ್ರದಾಯವನ್ನು ನಡೆಸಲಾಗುತ್ತಿದೆ. ಇದು ನೂರಾರು ವರ್ಷಗಳಿಂದ ನಡೆದುಕೊಂಡು ಬಂದಿದೆ ಎಂದರು. ನಮ್ಮ ಮನೆಯಲ್ಲಿ ಕೂರಿಸುವಂತ ಅರಮನೆ…
BREAKING: ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನಿಗೆ ಸುಪ್ರೀಂ ಕೋರ್ಟ್ ಶಾಕ್: ವಿಜಯ್ ನಿರಾಣಿ ವಿರುದ್ಧ ತನಿಖೆಗೆ ಆದೇಶ
ಬೆಂಗಳೂರು: ಮಾಜಿ ಸಚಿವ ಮುರುಗೇಶ್ ನಿರಾಣಿ ಪುತ್ರನಿಗೆ ಸುಪ್ರೀಂ ಕೋರ್ಟ್ ಬಿಗ್ ಶಾಕ್ ನೀಡಿದೆ. ವಿಜಯ್ ನಿರಾಣಿ ವಿರುದ್ಧ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ವಿಜಯ್ ನಿರಾಣಿ ವಿರುದ್ಧ ಕಾನೂನು ಪ್ರಕಾರ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 2018ರಲ್ಲಿ ಕಾರ್ಮಿಕರ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಸುಪ್ರೀಂ ಕೋರ್ಟ್ ಆದೇಶಿಸಿದೆ. 2018ರಲ್ಲಿ ನಿರಾಣಿ ಶುಗರ್ಸ್ ನ ತ್ಯಾಜ್ಯ ಘಟಕದಲ್ಲಿ 6 ಕಾರ್ಮಿಕರು ಮೃತಪಟ್ಟಿದ್ದರು. ಈ ಘಟನೆ ಸಂಬಂಧಿಸಿದಂತೆ ಕಾನೂನು ಪ್ರಕಾರ ತನಿಖೆ ನಡೆಸುವಂತೆ ಸುಪ್ರೀಂ ಕೋರ್ಟ್ ಆದೇಶದಲ್ಲಿ ತಿಳಿಸಿದೆ. https://kannadanewsnow.com/kannada/that-is-a-song-of-god-how-can-you-call-it-an-rss-song-mla-k-m-udays-question/ https://kannadanewsnow.com/kannada/good-news-for-teachers-waiting-for-transfer-extension-of-time-to-file-objections-to-the-additional-list/
ಹಾಸನ: ನಾನು ಕೋಟಿಗಟ್ಟಲೆ ಕನ್ನಡಿಗರ ಪ್ರೀತಿ, ಅಭಿಮಾನವನ್ನು ಪಡೆದಿದ್ದೇನೆ. ಇಂತಹುದ್ದರ ನಡುವೆ ಒಂದಿಬ್ಬರ ನಕಾರಾತ್ಮಕ ಟೀಕೆ, ಪ್ರತಿಕ್ರಿಯೆಗಳಿಗೆ ಉತ್ತರವನ್ನು ಕೊಡುವ ಅಗತ್ಯವಿಲ್ಲ. ಕೋಟಿ ಕನ್ನಡಿಗರ ಪ್ರೀತಿಯ ಮುಂದೆ ಒಂದಿಬ್ಬರ ಟೀಕೆ ಲೆಕ್ಕಕ್ಕಿಲ್ಲ ಎಂಬುದಾಗಿ ಬೂಕರ್ ಪ್ರಶಸ್ತಿ ವಿಜೇತ ಲೇಖಕಿ ಬಾನು ಮುಷ್ತಾಕ್ ಹೇಳಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ನನಗೆ ಕೋಟ್ಯಾಂತರ ಕನ್ನಡಿಗರು ತಮ್ಮ ಪ್ರೀತಿಯನ್ನು ತೋರಿಸುತ್ತಿದ್ದಾರೆ. ಅಭಿಮಾನವನ್ನು ವ್ಯಕ್ತ ಪಡಿಸುತ್ತಿದ್ದಾರೆ. ಎಲ್ಲೋ ಒಂದಿಬ್ಬರು ನೆಗೆಟಿವಿಟಿಗೆ ಯಾಕೆ ಪ್ರತಿಕ್ರಿಯೆ ನೀಡಬೇಕು? ಅದರ ಅಗತ್ಯವೇ ಇಲ್ಲ. ಈ ಟೀಕೆಗೆ ಜನರೇ ಪ್ರತಿಕ್ರಿಯೆ ಕೊಡುತ್ತಾರೆ ಎಂದರು. ರಾಜಕೀಯ ಮಾಡೋದಕ್ಕೆ ವಿರೋಧ ಪಕ್ಷ, ಆಡಳಿತ ಪಕ್ಷ ಅಂತ ಇರಬೇಕು. ಆದರೇ ಯಾವ ವಿಚಾರದಲ್ಲಿ ರಾಜಕೀಯ ಮಾಡಬೇಕೋ ಅದರಲ್ಲಿ ಮಾಡಬೇಕು. ಆ ಬಗ್ಗೆ ಪ್ರಜ್ಞೆ ಸಕ್ರೀಯ ರಾಜಕಾರಣದಲ್ಲಿರುವಂತವರಿಗೆ ಇರಬೇಕು ಎಂಬುದಾಗಿ ತಮ್ಮನ್ನು ಟೀಕಿಸಿದ ರಾಜಕಾರಣಿಗಳಿಗೆ ಕುಟುಕಿದರು. ನಾನು ಬಿಜೆಪಿ ಪಕ್ಷದಲ್ಲಿ ಮೈಸೂರು ಸಂಸದ ಯದುವೀರ್ ಅವರಂತಹ ಸಂತತಿ ಹೆಚ್ಚಾಗಲಿ ಎಂಬುದಾಗಿ ಆಪೇಕ್ಷೆ ಪಡುತ್ತೇನೆ. ಒಂದು ಸಮತೋಲನದಿಂದ ವಿಷಯ…












