Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ನಮ್ಮ ಮೆಟ್ರೋ ನಿಲ್ದಾಣದಲ್ಲಿ ತಾಯಿಯಿಂದ ಬೇರ್ಪಟ್ಟು, ತಪ್ಪಿಸಿಕೊಂಡಿದ್ದ ಪರದಾಡುತ್ತಿದ್ದಂತ ಮಗುವನ್ನು ಮರಳಿ ಅಮ್ಮನ ಮಡಿಲಿಗೆ ಸೇರಿಸುವಲ್ಲಿ BMTCL ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಬಿಎಂಆರ್ ಸಿ ಎಲ್ ನೀಡಿದ್ದು, 1 ನವೆಂಬರ್ 2025ರಂದು ಮಧ್ಯಾಹ್ನ ಸುಮಾರು 12:30 ಗಂಟೆ ಸುಮಾರಿಗೆ, 6 ವರ್ಷದ ಬಾಲಕಿ ಮೆಟ್ರೋ ರೈಲು ಪ್ರಯಾಣದ ಸಂದರ್ಭದಲ್ಲಿ ನಾದಪ್ರಭು ಕೆಂಪೇಗೌಡ ಮೆಟ್ರೋ ನಿಲ್ದಾಣ (ಮಜೆಸ್ಟಿಕ್)ದಲ್ಲಿ ತನ್ನ ತಾಯಿಯಿಂದ ಬೇರ್ಪಟ್ಟಿದ್ದಳು ಎಂದಿದೆ. ಬಾಲಕಿಯನ್ನು ಒಬ್ಬ ಪ್ರಯಾಣಿಕರು ನಿಲ್ದಾಣದ ಭದ್ರತಾ ಸಿಬ್ಬಂದಿಗೆ ಹಸ್ತಾಂತರಿಸಿದರು ಮತ್ತು ಆಕೆ ಮಜೆಸ್ಟಿಕ್ ನಿಲ್ದಾಣದಲ್ಲೇ ಇದ್ದಳು. ಆಕೆಯ ತಾಯಿಯನ್ನು ಪತ್ತೆ ಹಚ್ಚಲು ಬಿಎಂಆರ್ ಸಿ ಎಲ್ ಸಿಬ್ಬಂದಿ ಕೂಡಲೇ ಕಾರ್ಯಪ್ರವೃತ್ತರಾದರು ಎಂದು ಹೇಳಿದೆ. ಎಲ್ಲಾ ನಿಲ್ದಾಣ ನಿಯಂತ್ರಕರಿಗೂ ಎಚ್ಚರಿಕೆ ನೀಡಲಾಯಿತು ಮತ್ತು ಕೆಂಪೇಗೌಡ ಮಜೆಸ್ಟಿಕ್ ನಿಲ್ದಾಣದ ಸಿಬ್ಬಂದಿಯ ಅತ್ಯುತ್ತಮ ಪ್ರಯತ್ನದ ಫಲವಾಗಿ ಬಾಲಕಿಯ ತಾಯಿಯನ್ನು ಪತ್ತೆ ಹಚ್ಚಿ, ಬಾಲಕಿಯನ್ನು ತಾಯಿಯವರ ಕೈಗೆ ಒಪ್ಪಿಸಲಾಯಿತು. ಎಂಬುದಾಗಿ ಬಿಎಂಆರ್ ಸಿ ಎಲ್ ತಿಳಿಸಿದೆ. https://kannadanewsnow.com/kannada/minister-ishwar-khandres-big-shock-to-illegal-homestay-and-resort-owners-in-the-state/ https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/
ಚಾಮರಾಜನಗರ : ರಾಜ್ಯದ ಯಾವುದೇ ಅರಣ್ಯ ಪ್ರದೇಶದಲ್ಲಿ ಅಕ್ರಮ ಹೋಂಸ್ಟೇ ಅಥವಾ ರೆಸಾರ್ಟ್ ಗಳಿಗಾಗಲೀ, ಅಕ್ರಮ ಕಲ್ಲು ಗಣಿಗಾರಿಕೆಗಾಗಲೀ ನಮ್ಮ ಸರ್ಕಾರ ಅವಕಾಶ ನೀಡಿಲ್ಲ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಸ್ಪಷ್ಟಪಡಿಸಿದ್ದಾರೆ. ಚಾಮರಾಜನಗರದ ಜಿಲ್ಲಾ ಪಂಚಾಯ್ತಿ ಸಭಾಂಗಣದಲ್ಲಿಂದು ನಡೆದ ಜಿಲ್ಲೆಯ ಅರಣ್ಯ ಸಮಸ್ಯೆ ಕುರಿತಂತೆ ರೈತರು ಹಾಗೂ ಸಾರ್ವಜನಿಕರ ಸಂವಾದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರಣ್ಯ ಪ್ರದೇಶದಲ್ಲಿ ಅಕ್ರಮ ಗಣಿಗಾರಿಕೆ, ಹೋಂಸ್ಟೇ, ರೆಸಾರ್ಟ್ ನಡೆಯುತ್ತಿದ್ದರೆ ಸ್ಪಷ್ಟ ದೂರು ಬಂದರೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸುವ ಭರವಸೆ ನೀಡಿದರು. ಮಾನವ ವನ್ಯಜೀವಿ ಸಂಘರ್ಷ ಇಂದು ನಿನ್ನೆಯದಲ್ಲ ನೂರಾರು, ಸಾವಿರಾರು ವರ್ಷದಿಂದ ಇದೆ. ಈಗ ವನ್ಯಜೀವಿಗಳ ಸಂಖ್ಯೆಯಲ್ಲೂ ಹೆಚ್ಚಳವಾಗಿದೆ. ಇದರಿಂದ ಸಂಘರ್ಷ ಹೆಚ್ಚಳವಾಗುತ್ತಿದ್ದು, ಸ್ಥಳೀಯರ, ಸಾರ್ವಜನಿಕರ, ರೈತರ ಸಲಹೆ, ಅಭಿಪ್ರಾಯ ಪಡೆದು ಇದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಸಲುವಾಗಿ ಈ ಸಭೆ ನಡೆಸಲಾಗಿದೆ ಎಂದರು. ಈಗಾಗಲೇ ಇಲಾಖೆಯ ವತಿಯಿಂದ 2 ತಜ್ಞರ ಸಮಿತಿ ರಚಿಸಲಾಗಿದ್ದು, ವನ್ಯಜೀವಿಗಳು ನಾಡಿಗೆ ಬರುತ್ತಿರುವ…
ಬೆಳಗಾವಿ: ನಿನ್ನೆ ಬೆಳಗಾವಿಯಲ್ಲಿ ಕನ್ನಡ ರಾಜ್ಯೋತ್ಸವ ಮೆರವಣಿಗೆಯ ವೇಳೆಯಲ್ಲಿ ಚಾಕುವಿನಿಂದ ಇರಿದು ಐವರಿಗೆ ಗಾಯಗೊಳಿಸಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗಾವಿಯ ಮಾರ್ಕೆಟ್ ಪೊಲೀಸರು ಇಬ್ಬರು ಆರೋಪಿಗಳನ್ನು ಕನ್ನಡ ರಾಜ್ಯೋತ್ಸವ ಮೆರವಣಿಗೆಯ ವೇಳೆಯಲ್ಲಿ ಚಾಕುವಿನಿಂದ ಇರಿದಿದ್ದಂತವರನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಅರುಣ್ ಕುರುಬರ, ಕಿರಿಣ್ ಕುರುಬರ ಎಂಬುದಾಗಿ ತಿಳಿದು ಬಂದಿದೆ. ನಿನ್ನೆ ರಾತ್ರಿ ಆದಿತ್ಯ ಬೇಂಡಿಗೇರಿಗೆ ಚಾಕುವಿನಿಂದ ದುರುಳರು ಇರಿದಿದ್ದರು. ಬೆಳಗಾವಿ ಡಿಸಿ ಕಚೇರಿ ಎದುರೇ ಈ ಘಟನೆ ನಡೆದಿತ್ತು. ಗಾಯಾಳು ಆದಿತ್ಯ ಬೆಳಗಾವಿ ತಾಲ್ಲೂಕಿನ ಕೆ.ಕೆ ಕೊಪ್ಪದ ನಿವಾಸಿಯಾಗಿದ್ದನು. https://kannadanewsnow.com/kannada/kendhuli-rajyotsava-award-for-writer-dr-bl-venu-editor-thuruvanur-manjunath/ https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/
ಬೆಂಗಳೂರು: ಕೆಂಧೂಳಿ ಪತ್ರಿಕೆಗೆ ಐದು ವರ್ಷ ಪೂರೈಸುತ್ತಿದೆ. ಈ ಹಿನ್ನಲೆಯಲ್ಲಿ ಖ್ಯಾತ ಸಾಹಿತಿ ಡಾ.ಬಿಎಲ್ ವೇಣು ಅವರಿಗೆ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂಬುದಾಗಿ ಸಂಪಾದಕ ತುರುವನೂರು ಮಂಜುನಾಥ್ ತಿಳಿಸಿದ್ದಾರೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕೆಂಧೂಳಿ ಪತ್ರಿಕೆ ಐದು ವರ್ಷ ಪೂರೈಸಿದೆ. ಈ ಸಂದರ್ಭದಲ್ಲಿ ಸಾಹಿತ್ಯ, ಪತ್ರಿಕೋದ್ಯಮ, ಕೃಷಿ ಮತ್ತು ಸಾಮಾಜಿಕಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ಗಣ್ಯರಿಗೆ ಪ್ರತಿ ವರ್ಷ ಪ್ರಶಸ್ತಿ ಕೊಡಲು ತೀರ್ಮಾನಿಸಿದೆ ಎಂದಿದ್ದಾರೆ. ಈ ನಿಟ್ಟಿನಲ್ಲಿ ಮೊದಲನೇ ವರ್ಷ ನಾಡಿನ ಹೆಸರಾಂತ ಸಾಹಿತಿ ಡಾ.ಬಿ.ಎಲ್.ವೇಣು ಅವರಿಗೆ ‘ಕೆಂಧೂಳಿ ರಾಜ್ಯೋತ್ಸವ’ ಪ್ರಶಸ್ತಿ ಕೊಡಲು ಸಮಿತಿ ಆಯ್ಕೆ ಮಾಡಿದೆ ಎಂದು ತಿಳಿಸಲು ಹರ್ಷಿಸುತ್ತೇವೆ. ಪ್ರಶಸ್ತಿಯೂ 10 ಸಾವಿರ ನಗದು, ಪ್ರಶಸ್ತಿ ಫಲಕ ಹೊಂದಿರುತ್ತದೆ. ಈ ಪ್ರಶಸ್ತಿಯನ್ನು ಶೀಘ್ರ ನೀಡಲಾಗುವುದು ಎಂದು ಹೇಳಿದ್ದಾರೆ. ಡಾ.ಶಿವಕುಮಾರ್ ಕಂಪ್ಲಿ ಅಧ್ಯಕ್ಷತೆಯಲ್ಲಿ ಶ್ರೀದೇವಿ ಕೆರೆಮನೆ ಮತ್ತು ಪರಶಿವ ಧನಗೂರು ಅವರ ಸಮಿತಿಯಿಂ ಕೆಂಧೂಳಿ ರಾಜ್ಯೋತ್ಸವ ಪ್ರಶಸ್ತಿಗೆ ಸಾಹಿತಿ ಡಾ.ಬಿಎಲ್ ವೇಣು ಅವರನ್ನು ಆಯ್ಕೆ ಮಾಡಿದೆ ಎಂದು ಮಾಹಿತಿ…
ಮಂಗಳೂರು: ರಾಜ್ಯ ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ವಿರುದ್ದ ಬಿಜೆಪಿ ನಾಯಕರು ಮಾಡಿರುವ ಭ್ರಷ್ಟಾಚಾರದ ಆರೋಪ ಸತ್ಯಕ್ಕೆ ದೂರವಾದುದು. ರಾಜಕೀಯ ದುರುದ್ದೇಶದಿಂದ ಈ ಆರೋಪಗಳನ್ನು ಮಾಡಲಾಗಿದ್ದು, ಇದರಿಂದ ಸದನ ಹಕ್ಕುಚ್ಯುತಿ ಉಂಟಾಗಿದೆ ಎಂದು ವಿಧಾನ ಪರಿಷತ್ ಸದಸ್ಯ ಐವನ್ ಡಿಸೋಜಾ ಪ್ರತಿಕ್ರಿಯಿಸಿದ್ದಾರೆ. ಮಂಗಳೂರಿನಲ್ಲಿ ಸುದ್ದಿಗೋಷ್ಠಿ ನಡೆಸಿದ ಐವನ್ ಡಿಸೋಜಾ, ಯು.ಟಿ.ಖಾದರ್ ಅವರು ಶಾಸನ ಸಭೆಯ ಅತ್ಯನ್ನತ ಹುದ್ದೆಯಾಗಿರುವ ವಿಧಾನಸಭಾಧ್ಯಕ್ಷರಾಗಿದ್ದಾರೆ. ಆ ಸ್ಥಾನದಲ್ಲಿರುವವರ ವಿರುದ್ಧ ಭ್ರಷ್ಟಾಚಾರ ಆರೋಪ ಮಾಡುವ ಸಂದರ್ಭದಲ್ಲಿ ಶಾಸನಾತ್ಮಕ ಪ್ರಕ್ರಿಯೆಗಳನ್ನು ಅನುಸಬೇಕಾಗುತ್ತದೆ. ಅದನ್ನು ಹೊರತಾಗಿ ವಿಧಾನಸಭೆಯ ಮಾಜಿ ಅಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಹಾಗೂ ಹಾಲಿ ಶಾಸಕ ಡಾ.ವೈ.ಭರತ್ ಶೆಟ್ಟಿ ಅವರು ಹಾಲಿ ಸ್ಪೀಕರ್ ವಿರುದ್ಧ ಸುಳ್ಳು ಆರೋಪ ಮಾಡಿದ್ದಾರೆ ಎಂದು ದೂರಿದರು. ಇದು ಸದನವನ್ನು ನಿಂದಿಸಿದ ಹಾಗೂ ಹಕ್ಕುಚ್ಯುತಿಯ ನಡೆಯಾಗಿರುವುದರಿಂದ ಅವರ ವಿರುದ್ದ ಹಕ್ಕುಚ್ಯುತಿ ದೂರನ್ನು ನೀಡಲಾಗುವುದು ಎಂದು ಐವನ್ ಡಿಸೋಜಾ ತಿಳಿಸಿದರು. ಯು.ಟಿ.ಖಾದರ್ ರವರು ವಿಧಾನಸಭಾ ಸಚಿವಾಲಯದ ಮುಖ್ಯಸ್ಥರಾಗಿದ್ದು, ಅವರು ಯಾವುದೇ ಪಕ್ಷದ ಪ್ರತಿನಿಧಿಯಾಗಿರುವುದಿಲ್ಲ. ಎಲ್ಲಾ ಪಕ್ಷಗಳ ಶಾಸಕರ ವಿಚಾರದಲ್ಲೂ…
ಬೆಂಗಳೂರು : “ಟನಲ್ ರಸ್ತೆ ಯೋಜನೆ ಬಗ್ಗೆ ಬಿಜೆಪಿ ನಾಯಕರು ಟೀಕೆ ಬಿಟ್ಟು ಸಲಹೆಗಳನ್ನು ನೀಡಲಿ. ಈ ಯೋಜನೆ ನನ್ನ ಆಸ್ತಿಯಲ್ಲ. ಸಾರ್ವಜನಿಕರಿಗಾಗಿ ಮಾಡುತ್ತಿರುವ ಯೋಜನೆ. ನನಗೆ ಬಿಜೆಪಿಯವರು ಪರಿಹಾರ ಮಾತ್ರ ತಿಳಿಸಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಭಾನುವಾರ ಪ್ರತಿಕ್ರಿಯೆ ನೀಡಿದರು. ಟನಲ್ ರಸ್ತೆ ವಿರೋಧಿಸಿ ಬಿಜೆಪಿಯವರು ಸಹಿ ಸಂಗ್ರಹ ಅಭಿಯಾನ ನಡೆಸುತ್ತಿರುವ ಬಗ್ಗೆ ಕೇಳಿದಾಗ, “ನನಗೂ ಸಹಿ ಸಂಗ್ರಹ ಅಭಿಯಾನಕ್ಕೆ ಕರೆ ನೀಡಲು ಗೊತ್ತಿದೆ. ಅವರಿಗಿಂತ ಹೆಚ್ಚು ಸಂಘಟನೆ ಮಾಡುವವನು ನಾನು. ಅವರು ಒಂದು ಸಂಸ್ಥೆ ಇಟ್ಟುಕೊಂಡು ಸಂಘಟನೆ ಮಾಡುತ್ತಿದ್ದಾರೆ. ನಾವು ಪಕ್ಷದ ಮೂಲಕವೇ ಸಂಘಟನೆ ಮಾಡುತ್ತಿದ್ದೇವೆ. ಯಾವುದೇ ಪರಿಹಾರ ಹೇಳದೆ ಟೀಕೆ ಮಾಡಿದರೆ ಏನು ಪ್ರಯೋಜನ? ಒಳ್ಳೆಯ ಸಲಹೆಗಳನ್ನು ನೀಡಿದರೆ ಒಪ್ಪಿಕೊಳ್ಳೋಣ” ಎಂದರು. ಆರ್ ಎಸ್ ಎಸ್ ಇಲ್ಲದೇ ಹೋದರೆ ಬಿಜೆಪಿ ಶೂನ್ಯ “ಆರ್ ಎಸ್ ಎಸ್ ಇಲ್ಲದೇ ಹೋದರೆ ಬಿಜೆಪಿಯು ಶೂನ್ಯ. ಬಿಜೆಪಿ ಬದುಕಿರುವುದೇ ಆರ್ ಎಸ್ ಎಸ್…
ಹಾಸನ: ಜಿಲ್ಲೆಯಲ್ಲಿ ಕುಡಿಯೋದು ಬಿಡು ಎಂಬುದಾಗಿ ಬುದ್ಧಿ ಹೇಳಿದ್ದಕ್ಕೆ ಭೀಕರವಾಗಿ ಹತ್ಯೆ ಮಾಡಿರುವಂತ ಘಟನೆ ನಡೆದಿದೆ. ಹಾಸನ ಜಿಲ್ಲೆಯ ಅರಸೀಕೆರೆ ತಾಲ್ಲೂಕಿನ ರಾಂಪುರದಲ್ಲಿ ಕುಡಿಯೋದು ಬಿಡು ಎಂಬುದಾಗಿ ಬುದ್ಧಿ ಹೇಳಿದ್ದಕ್ಕೆ ಸ್ನೇಹಿತನನ್ನೇ ದುರುಳರು ಕೊಲೆ ಮಾಡಿದ್ದಾರೆ. ಕಲ್ಲಿನಿಂದ ಹೊಡೆದು ಗಿರೀಶ್(44) ಎಂಬಾತನನ್ನು ರಮೇಶ್ ಎಂಬಾತ ಹತ್ಯೆ ಮಾಡಿದ್ದಾನೆ. ನಿನ್ನೆ ಕೆಲಸ ಮುಗಿಸಿ ಅಂಗಡಿ ಬಳಿಯಲ್ಲಿ ಗಿರೀಶ್ ಕುಳಿತಿದ್ದನು. ಮದ್ಯ ಸೇವಿಸಿ ಗಿರೀಶ್ ಬಳಿಗೆ ಆರೋಪಿ ರಮೇಶ್ ಬಂದಿದ್ದನು. ಈ ಸಂದರ್ಭದಲ್ಲಿ ಕುಡಿಯಬೇಡ ಎಂಬುದಾಗಿ ರಮೇಶ್ ಗೆ ಬುದ್ಧಿವಾದವನ್ನು ಗಿರೀಶ್ ಹೇಳಿದ್ದನು. ಇದರಿಂದ ಸಿಟ್ಟಾದಂತ ರಮೇಶ್, ಗಿರೀಶ್ ಗೆ ಸಿಟ್ಟಿನಿಂದ ಕಲ್ಲಿನಿಂದ ಹಲ್ಲೆ ಮಾಡಿದ್ದಾನೆ. ಗಂಭೀರವಾಗಿ ಗಾಯಗೊಂಡಿದ್ದ ರಮೇಶ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾನೆ. ಈ ಸಂಬಂಧ ಅರಸೀಕೆರೆ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/government-grants-rs-1-crore-for-kodavar-chennad-hockey-tournament-cm-siddaramaiah-announces/ https://kannadanewsnow.com/kannada/another-good-news-for-the-women-of-the-state-akka-pade-to-be-launched-on-november-19th/
ಬೆಂಗಳೂರು : ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ, ವಿರೋಧ ಪಕ್ಷದ ನಾಯಕ ಆರ್. ಅಶೋಕ ಮತ್ತು ಇತರ ಬಿಜೆಪಿ ನಾಯಕರು ಭಾನುವಾರ ಸುರಂಗ ರಸ್ತೆ (Tunnel Road) ಕಾರಿಡಾರ್ ವಿರುದ್ಧ ಪ್ರತಿಭಟನೆ ನಡೆಸಿ, ಯೋಜನೆಯನ್ನು ರದ್ದುಪಡಿಸುವಂತೆ ಒತ್ತಾಯಿಸಿದರು. ಈ ಯೋಜನೆಯು ಅವೈಜ್ಞಾನಿಕವಾಗಿದ್ದು, ಬೆಂಗಳೂರಿನ ಸಂಚಾರ ದಟ್ಟಣೆಯನ್ನು ಪರಿಹರಿಸಲು ಸಾಧ್ಯವಿಲ್ಲ ಎಂದು ಕರೆ ನೀಡಿದ ಸೂರ್ಯ, ಯೋಜನೆಯ ಡಿಪಿಆರ್ (DPR) ಪ್ರಕಾರ ಸುರಂಗದ ಪ್ರವೇಶ ಮತ್ತು ನಿರ್ಗಮನ ದ್ವಾರಗಳಲ್ಲಿ 22 ಹೆಚ್ಚುವರಿ ಸಂಚಾರ ಅಡಚಣೆಗಳು (ಚೋಕ್ಪಾಯಿಂಟ್ಗಳು) ಸೃಷ್ಟಿಯಾಗಲಿವೆ ಎಂದು ಗಮನ ಸೆಳೆದರು. ಅಲ್ಲದೆ, ಸಾರ್ವಜನಿಕರೊಂದಿಗೆ ಸಮಾಲೋಚನೆ ನಡೆಸದೆ ಯೋಜನೆಯನ್ನು ಹೇರಲಾಗುತ್ತಿದೆ ಎಂದು ಹೇಳಿದರು. ಜೊತೆಗೆ, ಈ ಪ್ರಸ್ತಾವನೆಗೆ ಕಡ್ಡಾಯವಾಗಿ ಬೇಕಾದ ಪರಿಸರ ಪರಿಣಾಮದ ಮೌಲ್ಯಮಾಪನ (EIA) ಮತ್ತು ಭೂವೈಜ್ಞಾನಿಕ ಅಧ್ಯಯನಗಳ (geological studies) ಕೊರತೆಯನ್ನೂ ಅವರು ಎತ್ತಿ ತೋರಿಸಿದರು. ಈ ವಿಷಯದ ಕುರಿತು ‘ಎಕ್ಸ್’ನಲ್ಲಿ (ಹಿಂದಿನ ಟ್ವಿಟರ್) ಪೋಸ್ಟ್ ಮಾಡಿದ ಸೂರ್ಯ, “ಸುರಂಗ ರಸ್ತೆ ಯೋಜನೆಯು ಬೆಂಗಳೂರಿನ ಸಂಚಾರ ಸಮಸ್ಯೆಗಳಿಗೆ ಪರಿಹಾರವಲ್ಲ.…
ಕೊಳ್ಳೇಗಾಲ : ಮಾನವ-ವನ್ಯಜೀವಿ ಸಂಘರ್ಷ ನಿಯಂತ್ರಣದಲ್ಲಿ, ವನ್ಯಜೀವಿಗಳ ಸಾವಿಗೀಡಾದಾಗ ಅಧಿಕಾರಿಗಳ ಕರ್ತವ್ಯಲೋಪ, ನಿರ್ಲಕ್ಷ್ಯ ಸಾಬೀತಾದಲ್ಲಿ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು ಎದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಚಾಮರಾಜನಗರದಲ್ಲಿಂದು ಆಯೋಜಿಸಿದ್ದ ಅರಣ್ಯ ಸಮಸ್ಯೆಗಳ ಕುರಿತಂತೆ ರೈತರು ಮತ್ತು ಸಾರ್ವಜನಿಕರೊಂದಿಗೆ ಸಂವಾದಕ್ಕೆ ತೆರಳುವ ಹಾದಿಯಲ್ಲಿ ಕೊಳ್ಳೇಗಾಲದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ವನ್ಯಜೀವಿ ಮಾನವ ಸಂಘರ್ಷ ನಿಯಂತ್ರಿಸಲು ರಾಜ್ಯಮಟ್ಟದ ನಿರ್ವಹಣಾ ಕಾರ್ಯಪಡೆ ರಚಿಸಲಾಗುತ್ತಿದ್ದು, ಈ ಕಾರ್ಯಪಡೆ ವನ್ಯಜೀವಿಗಳು ನಾಡಿಗೆ ಬರುತ್ತಿರುವ ಬಗ್ಗೆ ಸಮಗ್ರ ಅಧ್ಯಯನ ನಡೆಸಲಿದೆ ಜೊತೆಗೆ ಅಧಿಕಾರಿ, ಸಿಬ್ಬಂದಿಯ ನಿರ್ಲಕ್ಷ್ಯದ ಬಗ್ಗೆಯೂ ಪರಾಮರ್ಶಿಸಲಿದೆ ಎಂದರು. ಕೆಲವು ಅಧಿಕಾರಿಗಳು ತಮ್ಮ ಕುಟುಂಬದವರೊಂದಿಗೆ ಕಾಡಿನೊಳಗೆ ಮೋಜು ಮಸ್ತಿ ಮಾಡುತ್ತಿದ್ದಾರೆ ಈ ಬಗ್ಗೆ ಕ್ರಮ ಆಗುತ್ತದೆಯೇ ಎಂದು ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಅವರು, ನಿಯಮ ಎಲ್ಲರಿಗೂ ಒಂದೇ. ಯಾವುದೇ ಅಧಿಕಾರಿ ನಿಯಮ ಉಲ್ಲಂಘಿಸಿದ್ದರೆ ಅವರ ವಿರುದ್ಧವೂ ನಿರ್ದಾಕ್ಷಿಣ್ಯ ಕ್ರಮ ಆಗಲಿದೆ ಎಂದು ಈಶ್ವರ ಖಂಡ್ರೆ ಸ್ಪಷ್ಟಪಡಿಸಿದರು.
ಬೆಂಗಳೂರು: 2024–25ರ ಸಾಲಿನಲ್ಲಿ ಸುಮಾರು 12,392 ಶಿಕ್ಷಕರಿಗೆ ನೇಮಕಾತಿ ಆದೇಶವನ್ನು ನೀಡಲಾಗಿದೆ. 2025–26ರ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇತರ ಭಾಗಗಳಲ್ಲಿ ಒಟ್ಟು 10,267 ಶಿಕ್ಷಕರ ನೇಮಕಾತಿ ಮಾಡಲು ಪ್ರಕ್ರಿಯೆ ಆರಂಭಿಸಲಾಗಿದೆ. 2016 ರಿಂದ 2020 ರ ವರೆಗಿನ ಅನುದಾನಿತ ಪ್ರೌಢಶಾಲೆಗಳು ಹಾಗೂ ಪದವಿಪೂರ್ವ ಶಾಲೆಗಳಲ್ಲಿ ಸುಮಾರು 6,000 ಶಿಕ್ಷಕರನ್ನು ನೇಮಕಾತಿ ಮಾಡಲಾಗುವುದು ಎಂಬುದಾಗಿ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಹೀಗಿದೆ ಇಂದಿನ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಅವರ ಶ್ರೀ ಕಂಠೀರವ ಹೊರಾಂಗಣ ಕ್ರೀಡಾಂಗಣದಲ್ಲಿ ಕನ್ನಡ ರಾಜ್ಯೋತ್ಸವದ ಆಚರಣೆಯ ಅಂಗವಾಗಿ ಮಾಡಿದ ಭಾಷಣದ ಪ್ರಮುಖ ಹೈಲೈಟ್ಸ್.. ನಮ್ಮ ಇಲಾಖೆಯಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಹಕಾರದಿಂದ ಹಲವಾರು ಕಾರ್ಯಕ್ರಮಗಳನ್ನು ಜಾರಿಗೆ ತಂದಿದ್ದೇವೆ. ಅದರಲ್ಲಿ ಗುಣಾತ್ಮಕ ಕಾರ್ಯಕ್ರಮಗಳು ಶಿಕ್ಷಕರ ನೇಮಕಾತಿ 2024–25ರ ಸಾಲಿನಲ್ಲಿ ಸುಮಾರು 12,392 ಶಿಕ್ಷಕರಿಗೆ ನೇಮಕಾತಿ ಆದೇಶವನ್ನು ನೀಡಲಾಗಿದೆ. 2025–26ರ ಸಾಲಿನಲ್ಲಿ ಕಲ್ಯಾಣ ಕರ್ನಾಟಕ ಹಾಗೂ ಇತರ ಭಾಗಗಳಲ್ಲಿ ಒಟ್ಟು 10,267 ಶಿಕ್ಷಕರ ನೇಮಕಾತಿ…














