Author: kannadanewsnow09

ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿ ಸೇವೆಗಳನ್ನು ಮತ್ತಷ್ಟು ಜನರ ಬಳಿಗೆ ಕೊಂಡೊಯ್ಯುವ ನಿಟ್ಟಿನಲ್ಲಿ ಸರ್ಕಾರದ ಮಹತ್ವದ ಹೆಜ್ಜೆ ಇರಿಸಿದೆ. ಅದೇ ಪಂಚಮಿತ್ರ ಪೋರ್ಟಲ್ ಅನ್ನು ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಲೋಕಾರ್ಪಣೆಗೊಳಿಸಿದ್ದಾರೆ. ಈ ಪೋರ್ಟಲ್ ಅಡಿಯಲ್ಲಿ ಗ್ರಾಮ ಪಂಚಾಯ್ತಿ ಕೆಲ ಸೇವೆಗಳು ಆನ್ ಲೈನ್ ನಲ್ಲಿ ಲಭ್ಯವಾಗುವಂತೆ ಮಾಡಲಾಗಿದೆ. ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಶುಕ್ರವಾರದಂದು ಪಂಚಮಿತ್ರ ಪೋರ್ಟಲ್ ಅನ್ನು ಲೋಕಾರ್ಪಣೆಗೊಳಿಸಿದರು. ಈ ಪೋರ್ಟಲ್ ನಲ್ಲಿ ಗ್ರಾಮ ಪಂಚಾಯ್ತಿ ಸೇವೆಗಳನ್ನು ಆನ್ ಲೈನ್ ಮೂಲಕ ಪಡೆಯಲು ಅವಕಾಶ ಕಲ್ಪಿಸಿಕೊಡಲಿದೆ. ಗ್ರಾಮೀಣ ಜನರು ತಮ್ಮ ಕಟ್ಟಡ ನಿರ್ಮಾಣ ಅನುಮತಿ, ಹೊಸ ನೀರು ಸರಬರಾಜು ಸಂಪರ್ಕ, ಬೀದಿ ದೀಪ ನಿರ್ವಹಣೆ, ಗ್ರಾಮ ನೈರ್ಮಲ್ಯ ಸೇರಿದಂತೆ ವಿವಿಧ ಸೇವೆಗಳನ್ನು ಈ ಪಂಚಮಿತ್ರ ಪೋರ್ಟಲ್ ಮೂಲಕವೇ ಪಡೆಯಬಹುದಾಗಿದೆ. ಗ್ರಾಮ ಪಂಚಾಯ್ತಿ ಈ ಎಲ್ಲಾ ಸೇವೆಗಳು ಈಗ ಆನ್ ಲೈನ್ ನಲ್ಲೇ ಲಭ್ಯ ರಸ್ತೆ ಅಗೆಯಲು ಅನುಮತಿ ಸ್ವಾಧೀನ ಪ್ರಮಾಣ ಪತ್ರ ನಿರಾಕ್ಷೇಪಣಾ ಪತ್ರ ಕೈಗಾರಿಕಾ,…

Read More

ಬೆಂಗಳೂರು: 2023-24ನೇ ಸಾಲಿನ 5, 8 ಮತ್ತು 9ನೇ ತರಗತಿ ವಿದ್ಯಾರ್ಥಿಗಳಿಗೆ ಮೌಲ್ಯಾಂಕನ ಕಾರ್ಯವನ್ನು ನಡೆಸೋದಕ್ಕೆ ಶಿಕ್ಷಣ ಇಲಾಖೆಯಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಆ ಮಾರ್ಗಸೂಚಿ ಕ್ರಮದಂತೆ ಕ್ರಮವಹಿಸುವಂತೆ ಖಡಕ್ ಸೂಚನೆ ನೀಡಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಗುಣಮಟ್ಟ, ಮೌಲ್ಯಾಂಕನ ಮತ್ತು ಅಂಗೀಕರಣ ಪರಿಷತ್ತಿನಿಂದ ಮಾರ್ಗಸೂಚಿಯನ್ನು ಪ್ರಕಟಿಸಲಾಗಿದೆ. ಅದರಲ್ಲಿ 2023-24ನೇ ಸಾಲಿನಲ್ಲಿ ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು 9ನೇ ತರಗತಿಯ ವಿದ್ಯಾರ್ಥಿಗಳಿಗೆ ಸಂಕಲನಾತ್ಮಕ ಮೌಲ್ಯಮಾಪನ (Summative Assessment-(SA-2) ಕಾರ್ಯವನ್ನು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯ ಕೆ.ಎಸ್.ಕ್ಯು.ಎ.ಎ.ಸಿ ವತಿಯಿಂದ ದಿನಾಂಕ: 11.03.2024 ರಿಂದ 18.03.2024 ರವರೆಗೆ ನಡೆಸಲಾಗುತ್ತಿದೆ. ಈ ಮೌಲ್ಯಾಂಕನಕ್ಕೆ ಸಂಬಂಧಿಸಿದಂತೆ ಅಗತ್ಯವಿರುವ ಎಲ್ಲಾ ಸಿದ್ಧತೆಗಳನ್ನು ವ್ಯವಸ್ಥಿತವಾಗಿ ನಿರ್ವಹಿಸಬೇಕಾಗಿರುವುದು ಇಲಾಖೆಯ ಎಲ್ಲಾ ಹಂತದ ಅಧಿಕಾರಿಗಳು/ಸಿಬ್ಬಂದಿ ವರ್ಗದವರ ಪ್ರಮುಖ ಜವಾಬ್ದಾರಿಯಾಗಿರುತ್ತದೆ ಎಂದಿದೆ. ವ್ಯಾಪ್ತಿ:- • ರಾಜ್ಯ ಪಠ್ಯಕ್ರಮ ಅನುಸರಿಸುತ್ತಿರುವ ಸರ್ಕಾರಿ, ಅನುದಾನಿತ ಮತ್ತು ಅನುದಾನರಹಿತ ಶಾಲೆಗಳ 5, 8 ಮತ್ತು…

Read More

ಬೆಂಗಳೂರು: ನಗರದ ಕುಂದಲಹಳ್ಳಿ ಪ್ರದೇಶದ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಸ್ಫೋಟದ ತನಿಖೆಯಲ್ಲಿ ಅಧಿಕಾರಿಗಳು ಮಹತ್ವದ ಪ್ರಗತಿ ಸಾಧಿಸಿದ್ದಾರೆ. ಹಲವಾರು ಜನರು ಗಾಯಗೊಂಡು ಸ್ಫೋಟಕ್ಕೆ ಕಾರಣವಾದ ಆರೋಪಿಯನ್ನು ಸಿಸಿಟಿವಿ ದೃಶ್ಯಾವಳಿಗಳ ಮೂಲಕ ಗುರುತಿಸಲಾಗಿದೆ. ಯುಎಪಿಎ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲು ಈ ಬೆಳವಣಿಗೆಯ ಹಿನ್ನೆಲೆಯಲ್ಲಿ, ನಗರದ ಜನಪ್ರಿಯ ಉಪಾಹಾರ ಗೃಹ ರಾಮೇಶ್ವರಂ ಕೆಫೆಯಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟಕ್ಕೆ ಸಂಬಂಧಿಸಿದಂತೆ ಬೆಂಗಳೂರು ಪೊಲೀಸರು ಕಠಿಣ ಕಾನೂನುಬಾಹಿರ ಚಟುವಟಿಕೆಗಳು (ತಡೆಗಟ್ಟುವಿಕೆ) ಕಾಯ್ದೆ ಮತ್ತು ಸ್ಫೋಟಕ ವಸ್ತುಗಳ ಕಾಯ್ದೆಯಡಿ ಪ್ರಕರಣ ದಾಖಲಿಸಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಸ್ಫೋಟದಲ್ಲಿ 10 ಜನರು ಗಾಯಗೊಂಡಿದ್ದಾರೆ ಎಂದು ನಗರ ಪೊಲೀಸ್ ಆಯುಕ್ತರ ಕಚೇರಿ ಬಿಡುಗಡೆ ಮಾಡಿದ ಹೇಳಿಕೆಯಲ್ಲಿ ತಿಳಿಸಲಾಗಿದೆ. ಮಧ್ಯಾಹ್ನ 12.50 ರಿಂದ 1 ಗಂಟೆಯ ನಡುವೆ ಬಾಂಬ್ ಸ್ಫೋಟಗೊಂಡಿದ್ದು, ಹೋಟೆಲ್ ಸಿಬ್ಬಂದಿ ಮತ್ತು ಗ್ರಾಹಕರು ಸೇರಿದಂತೆ ಒಟ್ಟು 10 ಜನರು ಗಾಯಗೊಂಡಿದ್ದಾರೆ. ಆದಾಗ್ಯೂ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು  ಹೇಳಿದೆ. ಈ ಸಂಬಂಧ ಎಚ್ಎಎಲ್ ಪೊಲೀಸ್ ಠಾಣೆಯಲ್ಲಿ…

Read More

ಬೆಂಗಳೂರು: ಇಂದು ರಾಮೇಶ್ವರಂ ಕಫೆ ಬಾಂಬ್ ಬ್ಲಾಸ್ಟ್ ಪ್ರಕರಣದಲ್ಲಿ 10 ಜನರಿಗೆ ಗಾಯವಾಗಿದೆ ಎಂಬುದಾಗಿ ನಗರ ಪೊಲೀಸ್ ಆಯುಕ್ತರು ಖಚಿತ ಮಾಹಿತಿಯನ್ನು ನೀಡಿದ್ದಾರೆ. ಈ ಕುರಿತಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಇಂದು ಬೆಂಗಳೂರು ನಗರದ ಐ.ಟಿ.ಪಿ.ಎಲ್. ರಸ್ತೆಯಲ್ಲಿರುವ ದಿ ರಾಮೇಶ್ವಂ ಕಥೆಯಲ್ಲಿ ಮದ್ಯಾಹ್ನ ಸುಮಾರು 12-50 ರಿಂದ 01-00 ಗಂಟೆಯ ಸಮಯದಲ್ಲಿ ಬಾಂಬ್ ಸ್ಫೋಟಗೊಂಡಿರುತ್ತದೆ. ಈ ಸ್ಫೋಟದಿಂದ ಹೋಟೆಲ್ ಸಿಬ್ಬಂಧಿ ಹಾಗೂ ಗ್ರಾಹಕರು ಸೇರಿದಂತೆ ಹೊಟೆಲ್‌ನಲ್ಲಿದ್ದ ಒಟ್ಟು 10 ವ್ಯಕ್ತಿಗಳು ಗಾಯಗೊಂಡಿರುತ್ತಾರೆ. ಯಾವುದೇ ಜೀವಹಾನಿಯಾಗಿರುವುದಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಈ ಕುರಿತು ಹೆಚ್.ಎ.ಎಲ್ ಪೊಲೀಸ್ ಠಾಣೆಯಲ್ಲಿ Unlawful Activities (Prevention) Act 1967 & Explosive Substances Act ರಂತೆ ಪ್ರಕರಣ ದಾಖಲಾಗಿರುತ್ತದೆ. ಸ್ಥಳಕ್ಕೆ ವಿಧಿ ವಿಜ್ಞಾನ ತಜ್ಞರು, ಮತ್ತು ಬಾಂಬ್ ನಿಷ್ಕ್ರಿಯ ದಳ ದವರು ಬೇಟಿ ನೀಡಿ ಪರಿಶೀಲನೆ ಕೈಗೊಂಡಿರುತ್ತಾರೆ ಎಂದು ಮಾಹಿತಿ ನೀಡಿದ್ದಾರೆ. https://kannadanewsnow.com/kannada/important-information-for-state-government-employees-applications-invited-for-first-session-departmental-examination/ https://kannadanewsnow.com/kannada/kpsc-recruitment-for-364-posts-of-land-surveyors/

Read More

ಬೆಂಗಳೂರು: ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಹಾಗೂ ಬಿಜೆಪಿ ರಾಜ್ಯಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಬೆಂಗಳೂರು ರಾಮೇಶ್ವರಂ ಕೆಫೆ ಸ್ಫೋಟದ ಪ್ರಕರಣದಲ್ಲಿ ಗಾಯಗೊಂಡವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ, ವಿರೋಧ ಪಕ್ಷದ ನಾಯಕ ಆರ್ ಅಶೋಕ್ ಉಪಸ್ಥಿತರಿದ್ದರು. ಪ್ರಹ್ಲಾದ್ ಜೋಷಿ ಅವರು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿ, ಈ ಘಟನೆ ಅತ್ಯಂತ ದುರ್ದೈವದ ಘಟನೆ ಮತ್ತು ಖಂಡನೀಯ ಎಂದು ತಿಳಿಸಿದರು. ತುಷ್ಟೀಕರಣದ ರಾಜಕೀಯದಿಂದ ಇಂಥ ಸಮಸ್ಯೆ ಆಗುತ್ತಿದೆ ಎಂದು ಅವರು ಆಕ್ಷೇಪಿಸಿದರು. ಎನ್.ಐ.ಎ. ತನಿಖೆ ನಡೆಸಲು ರಾಜ್ಯ ಸರಕಾರ ಕೇಳಿದರೆ ಅದಕ್ಕೆ ಸಹಕಾರ ಕೊಡಲು ನಾವು ಸಿದ್ಧರಿದ್ದೇವೆ ಎಂದು ಅವರು ಪ್ರಶ್ನೆಗೆ ಉತ್ತರ ನೀಡಿದರು. ಕಾಂಗ್ರೆಸ್ಸಿನ ಬಿ.ಕೆ.ಹರಿಪ್ರಸಾದ್ ಅವರ ಮಾತುಗಳು, ಸರಕಾರದ ಕಾರ್ಯವೈಖರಿ ‘ಪಾಕಿಸ್ತಾನ್ ಜಿಂದಾಬಾದ್’ ಎನ್ನಲು ಕುಮ್ಮಕ್ಕು ನೀಡಿದೆ ಎಂದು ಅವರು ನುಡಿದರು. ‘ನಮಗೆ ಪಾಕಿಸ್ತಾನ ವೈರಿ ಅಲ್ಲ’ ಎನ್ನುತ್ತಾರೆ. ಅಂದರೆ ಮುಂಬೈ ಬ್ಲಾಸ್ಟ್ ಆದಾಗ ಅವರು ವೈರಿ ಆಗಿರಲಿಲ್ಲವೇ…

Read More

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಮಾಜಿ ಐಎಎಸ್ ಅಧಿಕಾರಿ, ನಟ ಶಿವರಾಮ್ ಅವರು ನಿನ್ನೆ ನಿಧನರಾಗಿದ್ದರು. ಅವರ ಪಾರ್ಥೀವ ಶರೀರವನ್ನು ಇಂದು ಅವರ ಹುಟ್ಟೂರು ಉರಗಹಳ್ಳಿ ಬಳಿಯ ತೋಟದಲ್ಲಿ ಅಂತ್ಯಕ್ರಿಯೆ ನೆರವೇರಿಸಲಾಯಿತು. ರಾಮನಗರ ತಾಲೂಕಿನ ಬಿಡದಿ ಬಳಿಯ ಉರಗಹಳ್ಳಿಯಲ್ಲಿ ಛಲವಾದಿ ಮಹಾಸಭಾದ ಸ್ವಾಮೀಜಿಯ ನೇತೃತ್ವದಲ್ಲಿ ಮಾಜಿ ಐಎಎಸ್ ಅಧಿಕಾರಿ, ನಟ ಕೆ.ಶಿವರಾಮ್ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ನೆರವೇರಿಸಲಾಯಿತು. ಅಂತಿಮ ವಿಧಿ ವಿಧಾನವನ್ನು ಶಿವರಾಮ್ ಅಳಿಯ ನಟ ಪ್ರದೀಪ್ ಅವರು ನೆರವೇರಿಸಿದರು. ಡಿಸಿ ಅವಿನಾಶ್ ಮೆನನ್ ರಾಜೇಂದ್ರ, ಎಸ್ಪಿ ಸೇರಿದಂತೆ ಹಲವರು ಅಂತ್ಯಕ್ರಿಯೆ ವೇಳೆಯಲ್ಲಿ ನೆರೆದಿದ್ದರು. ಅಗಲಿದ ನಾಯಕನಿಗೆ ಅಭಿಮಾನಿಗಳು ಕಣ್ಣೀರಿನ ವಿದಾಯ ಹೇಳಿದರು. ನಟ ಕೆ.ಶಿವರಾಮ್ ಪರಿಚಯ ರಾಮನಗರ ಜಿಲ್ಲೆಯ ಬಿಡದಿ ಬಳಿಯ ಹಳ್ಳಿಯೊಂದರಲ್ಲಿ ಬಡ ಕುಟುಂಬದಲ್ಲಿ ಏಪ್ರಿಲ್ 6, 1953 ರಂದು ಜನಸಿದ ಕೆ. ಶಿವರಾಮು 1985 ರಲ್ಲಿ ಕೆಎಎಸ್‌ ಪರೀಕ್ಷೆ ಬರೆದು ಉತ್ತೀರ್ಣರಾಗಿದ್ದರು. ಆ ಬಳಿಕ ಕನ್ನಡ ಭಾಷೆಯಲ್ಲಿ ಐಎಎಸ್‌ ಪರೀಕ್ಷೆ ಬರೆದು, ತೇರ್ಗಡೆಯಾದ…

Read More

ಬೆಂಗಳೂರು: ನಗರ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಘಟನೆಯಲ್ಲಿ ಗಾಯಾಳುಗಳಾಗಿ, ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವಂತ ಗಾಯಾಳುಗಳನ್ನು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭೇಟಿ ಮಾಡಿ ಆರೋಗ್ಯವನ್ನು ವಿಚಾರಿಸಲಿದ್ದಾರೆ. ಈ ಕುರಿತಂತೆ ರಾಜ್ಯಪಾಲರ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಇಂದು ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಬ್ಲಾಸ್ಟ್ ಘಟನೆಯಲ್ಲಿ ಗಾಯಗೊಂಡು ವೈದೇಹಿ ಹಾಗೂ ಬ್ರೂಕ್ ಫೀಲ್ಡ್ ಮಲ್ಟಿ ಸ್ಪೆಷಲಿಟಿ ಆಸ್ಪತ್ರೆಗೆ ದಾಖಲಾಗಿರುವಂತ ಗಾಯಾಳುಗಳನ್ನು ಭೇಟಿಯಾಗಲಿದ್ದಾರೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗಾಯಾಳುಗಳನ್ನು ಭೇಟಿಯಾಗಿ ಅವರ ಆರೋಗ್ಯವನ್ನು ವಿಚಾರಿಸಲಿದ್ದಾರೆ. ಅಲ್ಲದೇ ಘಟನೆಯ ಸಂಬಂಧ ಮಾಹಿತಿಯನ್ನು ಪಡೆಯಲಿದ್ದಾರೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/kpsc-recruitment-for-364-posts-of-land-surveyors/ https://kannadanewsnow.com/kannada/important-information-for-state-government-employees-applications-invited-for-first-session-departmental-examination/

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮುಂಬರುವ ಲೋಕಸಭಾ ಚುನಾವಣೆ ಹಿನ್ನಲೆಯಲ್ಲಿ ಆಡಳಿತ ಯಂತ್ರಕ್ಕೆ ಮೇಜರ್ ಸರ್ಜರಿ ಎನ್ನುವಂತೆ 49 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಅಧಿಸೂಚನೆ ಹೊರಡಿಸಲಾಗಿದ್ದು, ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಹಾಗೂ ದಿನಾಂಕ 27-02-2024ರ ಭಾರತೀಯ ಚುನಾವಣಾ ಆಯೋಗದ ಉಲ್ಲೇಖಿತ ಮಾರ್ಗಸೂಚಿಯನ್ವಯ 49 ಪೊಲೀಸ್ ಇನ್ಸ್ ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ ಆದೇಶಿಸಿರೋದಾಗಿ ತಿಳಿಸಿದೆ. ಬೆಂಗಳೂರಿನ ತಲಘಟ್ಟಪುರ ಠಾಣೆ ಇನ್ಸ್ ಪೆಕ್ಟರ್ ಜಗದೀಶ್ ಎನ್ ಅವರನ್ನು ಬೆಂಗಳೂರು ನಗರ ನಿಯಂತ್ರಣ ಕೊಠಡಿಗೆ ವರ್ಗಾವಣೆ ಮಾಡಿದ್ದರೇ, ಸಿಸಿಬಿಯ ಸುರೇಶ್ ಪಿ ಅವರನ್ನು ತಲಘಟ್ಟಪುರಕ್ಕೆ ಪಿಎಸ್ಐ ಆಗಿ ವರ್ಗಾವಣೆ ಮಾಡಲಾಗಿದೆ. ಕಾಟನ್ ಪೇಟೆ ಠಾಣೆ ಪಿಎಸ್ಐ ಯರೀಸ್ವಾಮಿ.ಈ ಅವರನ್ನು ರಾಜ್ಯಗುಪ್ತವಾರ್ತೆಗೆ, ಸಿಸಿಬಿಯ ಸುಧಾಕರ್.ಬಿಎಸ್ ಅವರನ್ನು ಕಾಟನ್ ಪೇಟೆ ಪೊಲೀಸ್ ಠಾಣೆಯ ಪಿಎಸ್ಐ ಆಗಿ ನೇಮಿಸಲಾಗಿದೆ. ಕೆಜಿ ಹಳ್ಳಿ ಠಾಣೆ ಪಿಎಸ್ಐ ಶಿವಸ್ವಾಮಿ ಸಿಬಿ ಅವರನ್ನು ಬೆಂಗಳೂರಿನ ಆಗ್ನೇಯ ವಿಭಾಗದ ಮಹಿಳಾ ಪೊಲೀಸ್ ಠಾಣೆಯ…

Read More

ಬೆಂಗಳೂರು: ನೀವು ಬ್ರ್ಯಾಂಡ್ ಬೆಂಗಳೂರು ರೂಪಿಸದೇ ಇದ್ದರೂ ಪರವಾಗಿಲ್ಲ, ಬಾಂಬ್ ಬೆಂಗಳೂರು ಸೃಷ್ಟಿಸಬೇಡಿ. ಕಾಂಗ್ರೆಸ್ ಸರ್ಕಾರದ ಓಲೈಕೆ ರಾಜಕಾರಣದಿಂದಲೇ ಬಾಂಬ್ ಸ್ಫೋಟ ನಡೆದಿದೆ ಎಂದು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ಖಂಡಿಸಿದರು. ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ನಡೆದ ಪತ್ರಿಕಾಗೋಷ್ಠಿಯಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರೊಂದಿಗೆ ಆರ್.ಅಶೋಕ ಪಾಲ್ಗೊಂಡು ಮಾತನಾಡಿದ ಅವರು, ನಾವೆಲ್ಲರೂ ತಲೆತಗ್ಗಿಸುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ. ಶಾಂತಿಯ ತೋಟವನ್ನು ಕೆಡಿಸುವ ಭಯೋತ್ಪಾದಕ ಚಟುವಟಿಕೆ ರಾಜಧಾನಿಯಲ್ಲಿ ನಡೆದಿದೆ. ಆಡಳಿತ ಪಕ್ಷದ ಸಚಿವರು, ಶಾಸಕರು ತಮ್ಮ ಮನಸ್ಥಿತಿಯನ್ನು ಬದಲಿಸಿಕೊಳ್ಳಬೇಕು. ನೀವು ಮತ‌ ಹಾಕಿ, ನಾವು ನಿಮ್ಮನ್ನು ರಕ್ಷಿಸುತ್ತೇವೆ ಎಂಬಂತಹ ಮನಸ್ಥಿತಿಯನ್ನು ಸೃಷ್ಟಿಸಲಾಗಿದೆ. ಈ ಮೂಲಕ ಭಯೋತ್ಪಾದಕ ತಂಡಕ್ಕೆ ರಹದಾರಿ ನೀಡಲಾಗಿದೆ ಎಂದರು. ಬ್ರ್ಯಾಂಡ್ ಬೆಂಗಳೂರು ಮಾಡದಿದ್ದರೂ ಪರವಾಗಿಲ್ಲ. ಬಾಂಬ್ ಬೆಂಗಳೂರು ಎಂಬ ಕಳಂಕವನ್ನು ತರುವುದು ಬೇಡ. ಬೆಂಗಳೂರಿನ ರಾಮೇಶ್ವರ ಕೆಫೆಯಲ್ಲಿ ದೇಶ, ವಿದೇಶಗಳ ಕಂಪನಿಗಳ ಜನರು ಬರುತ್ತಾರೆ. ಬೆಂಗಳೂರಿನ ವರ್ಚಸ್ಸು ಕಡಿಮೆ ಮಾಡಿ, ಅಭದ್ರತೆ ಮೂಡಿಸಿ, ಹೂಡಿಕೆ ಇಳಿಕೆ ಮಾಡಲು ಭಯೋತ್ಪಾದಕರು…

Read More

ಬೆಂಗಳೂರು: ಡಿಸಿಎಂ ಡಿಕೆ ಶಿವಕುಮಾರ್ ಇಂದು ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿ ಉಂಟಾದಂತ ಬಾಂಬ್ ಸ್ಪೋಟದ ಘಟನಾ ಸ್ಥಳಕ್ಕೆ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಬಳಿಕ ಅವರು ಏನು ಹೇಳಿದರು ಅಂತ ಮುಂದೆ ಓದಿ. ಇಂದು ಬೆಂಗಳೂರಿನ ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಬಾಂಬ್ ಸ್ಪೋಟ ನಡೆದಿತ್ತು. ಈ ಘಟನಾ ಸ್ಥಳಕ್ಕೆ ಡಿಸಿಎಂ ಡಿಕೆ ಶಿವಕುಮಾರ್ ಹಾಗೂ ಗೃಹ ಸಚಿವ ಡಾ.ಜಿ ಪರಮೇಶ್ವರ್ ಭೇಟಿ ನೀಡಿ, ಪರಿಶೀನೆ ನಡೆಸಿದರು. ಈ ಬಳಿಕ ಮಾತನಾಡಿದಂತ ಡಿಸಿಎಂ ಡಿಕೆಶಿ ಅವರು, ರಾಮೇಶ್ವರಂ ಕೆಫೆಗೆ ಮಧ್ಯಾಹ್ನದ ವೇಳೆಯಲ್ಲಿ 30 ವರ್ಷದ ವ್ಯಕ್ತಿಯೊಬ್ಬ ಬ್ಯಾಗ್ ನಲ್ಲಿ ಬಾಂಬ್ ಇಟ್ಟು ಹೋಗಿದ್ದಾನೆ. ಆತನ ಚಹರೆ ಕೆಫೆಯಲ್ಲಿರುವಂತ ಸಿಸಿಟಿವಿಯಲ್ಲಿ ಸೆರೆಯಾಗಿದೆ ಎಂದರು. ಮಧ್ಯಾಹ್ನ 12ರ ಸುಮಾರಿ 30 ವರ್ಷದ ವ್ಯಕ್ತಿ ಬ್ಯಾಗ್ ನಲ್ಲಿ ತಂದಿದ್ದಂತ ಸ್ಪೋಟಕವನ್ನು ರಾಮೇಶ್ವರಂ ಕೆಫೆಯಲ್ಲಿ ಇರಿಸಿದ್ದಾರೆ. ನಂತ್ರ ಟೋಕನ್ ತೆಗೆದುಕೊಂಡು ರವೆ ಇಡ್ಲಿ ಕೂಡ ಸೇವಿಸಿ ಹೋಗಿದ್ದಾನೆ. ಟೈಮರ್ ಇಟ್ಟು ಮಧ್ಯಾಹ್ನ 12.55ರ ವೇಳೆಯಲ್ಲಿ ಕಡಿಮೆ ತೀವ್ರತೆಯಲ್ಲಿ…

Read More