Author: kannadanewsnow09

ಶಿವಮೊಗ್ಗ: ಸಹಕಾರಿ ಕ್ಷೇತ್ರದಲ್ಲಿ ಇರುವವರು ರೈತರ ಧ್ವನಿಯಾಗಿ ಕೆಲಸ ಮಾಡಬೇಕು. ಜನರು ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೂಡಿಕೆ ಮಾಡಬೇಡಿ ಎಂಬುದಾಗಿ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷ ಹಾಗೂ ಸಾಗರ ಕ್ಷೇತ್ರದ ಶಾಸಕ ಗೋಪಾಲಕೃಷ್ಣ ಬೇಳೂರು ಕಿವಿಮಾತು ಹೇಳಿದ್ದಾರೆ. ಇಂದು ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ತ್ಯಾಗರ್ತಿ ಪಟ್ಟಣದಲ್ಲಿ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನ ನೂತನ ಶಾಖೆಯನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದ ಅವರು, ಜನರು ಹೆಚ್ಚಿನ ಬಡ್ಡಿ ಆಸೆಗೆ ಖಾಸಗಿ ಹಣಕಾಸು ಸಂಸ್ಥೆಗಳಲ್ಲಿ ಹೋಡಿಕೆ ಮಾಡುತ್ತಾರೆ ಇದಕ್ಕೆ ಯಾವುದೇ ಭದ್ರತೆ ಇರುವುದಿಲ್ಲ ಇದರಿಂದ ನಷ್ಟ ಸಂಭವಿಸಿದರೆ ಜನರೇ ಹೊಣೆ ಹೊರಬೇಕು. ಸಹಕಾರಿ ಬ್ಯಾಂಕ್ ಗಳಲ್ಲಿ ನಾವು ರಾಜಕೀಯ ಮಾಡಬಾರದು ರೈತರ ಸಂಕಷ್ಟಕ್ಕೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ತಿಳಿಸಿದರು. ಸಾಗರ ತಾಲೂಕು ಗ್ಯಾರಂಟಿ ಯೋಜನೆಯ ಅಧ್ಯಕ್ಷ ಬಿ ಆರ್ ಜಯಂತ್ ಮಾತನಾಡಿ ಸಹಕಾರಿ ಕ್ಷೇತ್ರದಲ್ಲಿ ಕೆಲಸ ಮಾಡುವವರು ಪ್ರಾಮಾಣಿಕವಾಗಿ ಇರಬೇಕು ಮತ್ತು ರೈತರ ಬಗ್ಗೆ ಕಾಳಜಿ…

Read More

ಬೆಂಗಳೂರು: ರಾಜ್ಯದ ಶಿಕ್ಷಕರು ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆಯ ಜೊತೆಗೆ ಶಾಲಾ ತರಗತಿಯನ್ನು ನಡೆಸುವಂತೆ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಆದೇಶಿಸಿದೆ. ಈ ಕುರಿತಂತೆ ರಾಜ್ಯ ಸರ್ಕಾರ ಆದೇಶಿಸಿದ್ದು, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗವು ಕರ್ನಾಟಕ ರಾಜ್ಯದ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಕೈಗೊಳ್ಳುವುದು ಮತ್ತು ಸಮೀಕ್ಷೆಯನ್ನು ಡಿಜಿಟಲ್ ವಿಧಾನದಲ್ಲಿ ಮಾಡಲು ತಂತ್ರಾಂಶದ ಅಭಿವೃದ್ಧಿ ಮತ್ತು ಉಸ್ತುವಾರಿಯನ್ನು ಕೈಗೊಳ್ಳುವುದು, ಹಿಂದುಳಿದ ವರ್ಗಗಳ ಆಯೋಗವು ನಡೆಸುವ ಸಮೀಕ್ಷೆಗೆ ಸಾರ್ವಜನಿಕವಾಗಿ ಲಭ್ಯವಿರುವ ಚುನಾವಣಾ ಮತದಾರರ ಪಟ್ಟಿಯನ್ನು ಉಪಯೋಗಿಸಿಕೊಂಡು ಸಮೀಕ್ಷಾ ಕಾರ್ಯವನ್ನು ಕೈಗೊಳ್ಳಲು ಅಧಿಕಾರಿಗಳನ್ನು ಹಾಗೂ ಶಿಕ್ಷಕರನ್ನು ಹಾಗೂ ಇತರ ಸಿಬ್ಬಂದಿಗಳು ಕೆಲಸ ನಿರ್ವಹಿಸುವಂತೆ ಆದೇಶಿಸಿದೆ. ಸದರಿ ಆದೇಶದಂತೆ ಸಮೀಕ್ಷೆಯನ್ನು ನಡೆಸಲಾಗುತ್ತಿದೆ. ಸಮೀಕ್ಷೆಯನ್ನು ಗ್ರೇಟರ್ ಬೆಂಗಳೂರು ಆಥಾರಿಟಿ ವ್ಯಾಪ್ತಿಯಲ್ಲಿ ದಿನಾಂಕ: 04-10-2025 ರಿಂದ ಪ್ರಾರಂಭಿಸಲಾಗಿದ್ದು, ರಾಜ್ಯದ ಇತರೆ ಭಾಗಗಳಲ್ಲಿ ದಿನಾಂಕ: 22-09-2025 ರಿಂದ ಪ್ರಾರಂಭಿಸಲಾಗಿದೆ. ಸಮೀಕ್ಷೆಯು ಪೂರ್ಣಗೊಳ್ಳಲು ಹಚ್ಚಿನ ಕಾಲಾವಕಾಶದ ಅಗತ್ಯವಿರುವುದನ್ನು ಮನಗೊಂಡು, ದಿನಾಂಕ:…

Read More

ಬೆಂಗಳೂರು: ರಾಜ್ಯದ ಕೆಲವು ಅರಣ್ಯದೊಳಗೆ ಹಾಡಿಗಳಿದ್ದು, ಇಲ್ಲಿ ವಾಸಿಸುತ್ತಿರುವ ಅರಣ್ಯವಾಸಿಗಳು ಸಾಕಿರುವ ಜಾನುವಾರುಗಳು ವನ್ಯಜೀವಿಗಳಿಂದ ಮೃತಪಟ್ಟರೆ ಪರಿಹಾರ ನೀಡಲು ಕ್ರಮ ಕೈಗೊಳ್ಳುವುದಾಗಿ ಅರಣ್ಯ ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ವಿಕಾಸಸೌಧದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಲೆ ಮಹದೇಶ್ವರ ವನ್ಯಜೀವಿಧಾಮದಲ್ಲಿ ಕಳೆದ ಜೂನ್ ನಲ್ಲಿ ಪ್ರತಿಕಾರಕ್ಕಾಗಿ ದನಕ್ಕೆ ಹಾಕಿದ್ದ ವಿಷದಿಂದ 5 ಹುಲಿಗಳು ಮೃತಪಟ್ಟಿದ್ದವು, ಈ ತಿಂಗಳ ಆದಿಯಲ್ಲೇ ಮತ್ತೊಂದು ಹುಲಿ ವಿಷಪ್ರಾಶನದಿಂದ ಮೃತಪಟ್ಟಿದೆ. ಹಾಡಿಯ ಜನರು ಹತಾಶರಾಗಿ, ಪ್ರತಿಕಾರಕ್ಕಾಗಿ ವಿಷ ಹಾಕುವುದನ್ನು ತಡೆಯಲು ಈ ಸೂಚನೆ ನೀಡಲಾಗಿದೆ ಎಂದರು. ಮುಖ್ಯಮಂತ್ರಿಗಳಿಗೆ ಹುಲಿ ಸಾವಿನ ಬಗ್ಗೆ ಈಗಾಗಲೇ ಮಾಹಿತಿ ನೀಡಲಾಗಿದ್ದು, ಅರಣ್ಯದೊಳಗಿನ ಹಾಡಿಯಲ್ಲಿರುವ ಜಾನುವಾರುಗಳು ವನ್ಯಜೀವಿ ದಾಳಿಯಿಂದ ಮೃತಪಟ್ಟರೆ ಪ್ರವಾಹದಲ್ಲಿ ಸಾವಿಗೀಡಾಗುವ ಜಾನುವಾರುಗಳಿಗೆ ನೀಡುವ ಪರಿಹಾರದ ಮೊತ್ತವನ್ನೇ ಈ ಜಾನುವಾರುಗಳಿಗೂ ನೀಡಲು ನಿರ್ಧರಿಸಲಾಗಿದ್ದು, ವನ್ಯಜೀವಿ ಸಪ್ತಾಹದ ಸಮಾರೋಪದಲ್ಲಿ ಮುಖ್ಯಮಂತ್ರಿಗಳೇ ಅಧಿಕೃತವಾಗಿ ಘೋಷಣೆ ಮಾಡಲಿದ್ದಾರೆ ಎಂದರು. ತಾವು ಸಾಕಿದ ಜಾನುವಾರುಗಳು ಮೃತಪಟ್ಟಾಗ ಸಹಜವಾಗಿಯೇ ಆಕ್ರೋಶಕ್ಕೆ ಒಳಗಾಗುತ್ತಾರೆ. ಆದರೆ ವನ್ಯಜೀವಿ…

Read More

ಬೆಂಗಳೂರು: ವಿವಿಧ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಕುಡಿದು ಮಕ್ಕಳು ಸಾವನ್ನಪ್ಪಿದ್ದಾರೆ. ಹೀಗಾಗಿ ಕೆಲ ರಾಜ್ಯಗಳಲ್ಲಿ ಕೆಮ್ಮಿನ ಸಿರಪ್ ಬಳಕೆ ನಿಷೇಧಿಸಲಾಗಿದೆ. ಇತ್ತ ಕರ್ನಾಟಕದಲ್ಲಿ ಕೆಮ್ಮಿನ ಸಿರಪ್ ಬಳಕೆ ಬಗ್ಗೆ ಮಾರ್ಗಸೂಚಿ ಹೊರಡಿಸಲಾಗಿದೆ‌. ಅವುಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ಸರ್ಕಾರ ಸೂಚಿಸಿದೆ. ಇಂದು ರಾಜ್ಯ ಆರೋಗ್ಯ ಇಲಾಖೆಯ ನಿರ್ದೇಶಕರು ಆದೇಶ ಮಾಡಿದ್ದಾರೆ. ಅದರಲ್ಲಿ ಕೆಮ್ಮಿನ ಸಿರಪ್ ಗಳ ದುರುಪಯೋಗದಿಂದಾಗಿ ಮಕ್ಕಳಲ್ಲಿ ಗಂಭೀರ ಆರೋಗ್ಯ ಸಮಸ್ಯೆಗಳು ಮತ್ತು ಸಾವುಗಳ ವರದಿಗಳು ಸರ್ಕಾರದ ಗಮನಕ್ಕೆ ಬಂದಿದೆ. ಎಲ್ಲಾ ಮಕ್ಕಳ ಸುರಕ್ಷತೆಯನ್ನು ಸಾರ್ವಜನಿಕರು ಈ ಕೆಳಗಿನ ಕಾಪಾಡಲು, ಪೋಷಕರು, ಆರೈಕೆದಾರರು ಮತ್ತು ಮಾರ್ಗದರ್ಶನಗಳನ್ನು ಅನುಸರಿಸುವಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸೂಚಿಸಿದೆ. 1. ಚಿಕ್ಕ ಮಕ್ಕಳಿಗೆ ಕೆಮ್ಮಿನ ಸಿರಪ್ ಗಳನ್ನು ನೀಡಬೇಡಿ. 2 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಕೆಮ್ಮು ಅಥವಾ ಶೀತದ ಸಿರಪ್ ಗಳನ್ನು ನೀಡಬಾರದು. 2 ರಿಂದ 5 ವರ್ಷಗಳ ವಯಸ್ಸಿನ ಮಕ್ಕಳಿಗೆ ಸರಿಯಾದ ವೈದ್ಯಕೀಯ ಪರೀಕ್ಷೆಯ ನಂತರ ತಜ್ಞ ವೈದ್ಯರ ನಿರ್ದಿಷ್ಟ ಸಲಹೆ…

Read More

ದಾವಣಗೆರೆ: ಆ ವಿದ್ಯಾರ್ಥಿ ಓದಿನಲ್ಲೂ ಚುರುಕು, ಆಟದಲ್ಲೂ ಮುಂದು. ಕಬ್ಬಡಿ ಆಟ ಆಡುವಾಗ ಬಿದ್ದಾಗ ಕೈ ಮುರಿದಿದೆ. ಇದಕ್ಕಾಗಿ ಸಾವಿರಾರು ರೂಪಾಯಿ ಖರ್ಚಾಗಿದೆ. ಅಷ್ಟು ಹಣ ಹೊಂದಿಸಲು ಪರದಾಡುತ್ತಿದ್ದಾರೆ. ಇಂತಹ ಬಡ ವಿದ್ಯಾರ್ಥಿ ನಿಮ್ಮ ಸಹಾಯದ ನಿರೀಕ್ಷಿಸಿದೆ. ಈ ಕುರಿತು ಶಾಲೆಯ ಮುಖ್ಯ ಶಿಕ್ಷಕ ಬಸಲಿಂಗಪ್ಪ ಹುಗ್ಗಿ ಮಾಹಿತಿ ಹಂಚಿಕೊಂಡಿದ್ದಾರೆ. ಈ ವಿದ್ಯಾರ್ಥಿ ಚನ್ನಗಿರಿ ತಾಲ್ಲೂಕಿನ ಶ್ರೀ ಮಹಾರುದ್ರಸ್ವಾಮಿ ಪ್ರೌಢ ಶಾಲೆಯ ವಸತಿ ನಿಲಯದಲ್ಲಿ 8ನೇ ತರಗತಿ ಓದುತ್ತಿದ್ದಾನೆ. ಈತ ಮೂಲತಃ ಹರಪನಹಳ್ಳಿ ತಾಲೂಕಿನವನಾಗಿದ್ದು ಅತ್ಯಂತ ಬಡ ವಿದ್ಯಾರ್ಥಿಯಾಗಿದ್ದಾನೆ ಎಂದು ಹೇಳಿದ್ದಾರೆ. ನಮ್ಮ ಶಾಲೆಯಲ್ಲಿ ಕಬಡ್ಡಿ ಆಡುವಾಗ ಬಿದ್ದು ಕೈ ಮುರಿದಿದ್ದು ಹೊಸಪೇಟೆಯ ಪುತ್ತೂರು ಆಸ್ಪತ್ರೆಯಲ್ಲಿ ಶಸ್ತ್ರ ಚಿಕಿತ್ಸೆ ಮಾಡಿಸಿದ್ದು. ಸುಮಾರು 50,000 . ವೆಚ್ಚವಾಗಿದ್ದು ನಮ್ಮ ಶಾಲೆಯಿಂದ ನಾನು ಮತ್ತು ನಮ್ಮ ಶಿಕ್ಷಕರು ಸೇರಿ ರೂ.20,000ಗಳನ್ನು ಶಸ್ತ್ರ್ರ ಚಿಕಿತ್ಸೆಗೆ ನೀಡಿದ್ದೇವೆ. ಉಳಿದ ಹಣವನ್ನು ಪೋಷಕರು ಬರಿಸುವ ಸ್ಥಿತಿಯಲ್ಲಿಲ್ಲ. ಆದ್ದರಿಂದ ನಿಮ್ಮ ಕೈಲಾದ ಸಹಾಯವನ್ನು ಈ ಬಡ ವಿದ್ಯಾರ್ಥಿಗೆ ಮಾಡುವಂತೆ ವಿನಂತಿಸಿದ್ದಾರೆ.…

Read More

ಶಿವಮೊಗ್ಗ: ಸಾಗರದ ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು ಆರ್ ಬಿ ಡಿ ಮೋಟಾರ್ಸ್ ಅಣಿಯಾಗಿದೆ. ಹೊಸ ಹೊಸ ವಿನೂತನ ಮಾದರಿಯ ರಾಯಲ್ ಎನ್‌ಫೀಲ್ಡ್ ಮೋಟಾರ್ ಬೈಕ್ ಗಳೊಂದಿಗೆ ಸಾಗರದಲ್ಲಿ ಹೊಸ ಶೋ ರೂಂ ಗ್ರಾಂಡ್ ಓಪನ್ ಆಗಲಿದೆ.  ಅಕ್ಟೋಬರ್.10, 2025ರಂದು ರಾಯಲ್ ಎನ್‌ಫೀಲ್ಡ್ ಬೈಕ್ ಮಾರಾಟ ಮಳಿಗೆ ಗ್ರಾಂಡ್ ಓಪನ್ ಈ ಕುರಿತಂತೆ ಮಾಹಿತಿಯನ್ನು ಹಂಚಿಕೊಂಡಿರುವಂತ ಆರ್ ಬಿ ಡಿ ಮೋಟಾರ್ಸ್ ನ RBD ಮಹೇಶ್ ಅವರು, ಸಾಗರದಲ್ಲಿ ರಾಯಲ್ ಎನ್‌ಫೀಲ್ಡ್ ಮೋಟಾರ್ ಶೋ ರೂಂ ತೆರೆಯಬೇಕು ಎಂಬುದು ಬಹು ದಿನದ ಕನಸಾಗಿತ್ತು. ಅದು ನನಸಾಗಿದೆ. ಬುಲೆಟ್ ಬೈಕ್ ಪ್ರಿಯರ ಆಸೆ ಈಡೇರಿಸಲು ಆರ್ ಬಿ ಡಿ ಮೋಟಾರ್ಸ್ ನಿಂದ ಅಕ್ಟೋಬರ್.10ರಂದು ರಾಯಲ್ ಎನ್‌ಫೀಲ್ಡ್ ಬೈಕ್ ಮಾರಾಟ ಮಳಿಗೆ ಆರಂಭಗೊಳ್ಳುತ್ತಿದೆ ಎಂದರು. ಸಾಗರದ ಲೋಹಿಯಾ ನಗರ, ವಾರ್ಡ್ ನಂ.9, ಬಿಹೆಚ್ ರಸ್ತೆ, ರಾಷ್ಟ್ರೀಯ ಹೆದ್ದಾರಿ 69ರಲ್ಲಿ ರಾಯಲ್ ಎನ್ ಫೀಲ್ಡ್ ಶೋ ರೂಂ ಗ್ರ್ಯಾಂಡ್ ಓಪನಿಂಗ್ ಆಗಲಿದೆ. ಸಾಗರದ ಸಾರ್ವಜನಿಕರು,…

Read More

ನವದೆಹಲಿ: ಅಂತರರಾಷ್ಟ್ರೀಯ ಪ್ರವಾಸೋದ್ಯಮ ವಲಯವು ಮುಂದಿನ 10 ವರ್ಷಗಳಲ್ಲಿ 9.1 ಕೋಟಿ ಹೊಸ ಉದ್ಯೋಗಗಳನ್ನು ಸೃಷ್ಟಿಸಲಿದೆ, ಇದು ಜಾಗತಿಕವಾಗಿ ಸೃಷ್ಟಿಯಾಗುವ ಪ್ರತಿ ಮೂರು ಉದ್ಯೋಗಗಳಲ್ಲಿ ಒಂದನ್ನು ಪ್ರತಿನಿಧಿಸುತ್ತದೆ ಎಂದು ವಿಶ್ವ ಪ್ರಯಾಣ ಮತ್ತು ಪ್ರವಾಸೋದ್ಯಮ ಮಂಡಳಿ (ಡಬ್ಲ್ಯೂಟಿಟಿಸಿ) ವರದಿ ಮಾಡಿದೆ. ಜನಸಂಖ್ಯಾ ಮತ್ತು ರಚನಾತ್ಮಕ ಬದಲಾವಣೆಗಳನ್ನು ಗಮನಿಸದಿದ್ದರೆ 4.3 ಕೋಟಿಗೂ ಹೆಚ್ಚು ಜನರ ಕಾರ್ಯಪಡೆಯ ಕೊರತೆ ಉಂಟಾಗಬಹುದು ಎಂದು 20 ಆರ್ಥಿಕತೆಗಳ ಮೇಲೆ ಕೇಂದ್ರೀಕರಿಸಿದ ‘ಪ್ರಯಾಣ ಮತ್ತು ಪ್ರವಾಸೋದ್ಯಮ ಕಾರ್ಯಪಡೆಯ ಭವಿಷ್ಯ’ ವರದಿ ಹೇಳುತ್ತದೆ. ಮಂಡಳಿಯು ಪ್ರಯಾಣ ಮತ್ತು ಪ್ರವಾಸೋದ್ಯಮ ಉದ್ಯಮದ ಸಮಸ್ಯೆಗಳ ಕುರಿತು ಸರ್ಕಾರಗಳೊಂದಿಗೆ ಕೆಲಸ ಮಾಡುತ್ತದೆ ಮತ್ತು ಕ್ಷೇತ್ರದ ಆರ್ಥಿಕ ಮತ್ತು ಸಾಮಾಜಿಕ ಕೊಡುಗೆಯ ಕುರಿತು ಜಾಗತಿಕ ಪ್ರಾಧಿಕಾರವಾಗಿದೆ. ಇತ್ತೀಚೆಗೆ ರೋಮ್‌ನಲ್ಲಿ ನಡೆದ 25 ನೇ ಡಬ್ಲ್ಯೂಟಿಟಿಸಿ ಜಾಗತಿಕ ಶೃಂಗಸಭೆಯಲ್ಲಿ ಬಿಡುಗಡೆಯಾದ ವರದಿಯು ವ್ಯಾಪಕವಾದ ಜಾಗತಿಕ ಸಂಶೋಧನೆಯನ್ನು ಆಧರಿಸಿದೆ, ಇದರಲ್ಲಿ ವ್ಯಾಪಾರ ನಾಯಕರ ದೊಡ್ಡ ಪ್ರಮಾಣದ ಸಮೀಕ್ಷೆ ಮತ್ತು ಪ್ರವಾಸೋದ್ಯಮ ಸಂಸ್ಥೆಯ ಸದಸ್ಯರು ಮತ್ತು ಇತರ ಪ್ರಮುಖ ಪಾಲುದಾರರೊಂದಿಗೆ…

Read More

ನವದೆಹಲಿ: ಪ್ರಧಾನ ಮಂತ್ರಿ ಆವಾಸ್ ಯೋಜನೆ (PMAY) ಗೆ ಅರ್ಜಿ ಸಲ್ಲಿಸಲು ಡಿಸೆಂಬರ್ 2025 ರವರೆಗೆ ಸರ್ಕಾರವು ಗಡುವನ್ನು ವಿಸ್ತರಿಸಿದೆ, ಅರ್ಹ ನಗರ ಮತ್ತು ಗ್ರಾಮೀಣ ಕುಟುಂಬಗಳು ಕೈಗೆಟುಕುವ ವಸತಿ ಬೆಂಬಲಕ್ಕಾಗಿ ನೋಂದಾಯಿಸಿಕೊಳ್ಳಲು ಹೆಚ್ಚುವರಿ ಸಮಯವನ್ನು ನೀಡಿದೆ. PMAY ಕೇಂದ್ರದ ಪ್ರಮುಖ ವಸತಿ ಯೋಜನೆಯಾಗಿದ್ದು, ನಗರ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಆರ್ಥಿಕವಾಗಿ ದುರ್ಬಲ ವರ್ಗಗಳು (EWS), ಕಡಿಮೆ ಆದಾಯದ ಗುಂಪುಗಳು (LIG) ಮತ್ತು ಇತರ ಅನನುಕೂಲಕರ ಸಮುದಾಯಗಳಿಗೆ ಪಕ್ಕಾ ಮನೆಗಳನ್ನು ಒದಗಿಸುವ ಗುರಿಯನ್ನು ಹೊಂದಿದೆ. ಅಧಿಕೃತ ಮಾಹಿತಿಯ ಪ್ರಕಾರ, ಈ ಯೋಜನೆಯಡಿಯಲ್ಲಿ ಇಲ್ಲಿಯವರೆಗೆ 92.61 ಲಕ್ಷಕ್ಕೂ ಹೆಚ್ಚು ಮನೆಗಳನ್ನು ಪೂರ್ಣಗೊಳಿಸಲಾಗಿದೆ. ಯಾರು ಅರ್ಹರು? PMAY ಗೆ ಅರ್ಹತೆಯನ್ನು ಆದಾಯ ಗುಂಪು, ವಸತಿ ಸ್ಥಿತಿ ಮತ್ತು ಸಾಮಾಜಿಕ ಹಿನ್ನೆಲೆಯ ಆಧಾರದ ಮೇಲೆ ನಿರ್ಧರಿಸಲಾಗುತ್ತದೆ. PMAY-ನಗರ (PMAY-U) ಅರ್ಹತೆ ಪಡೆಯಲು, ಅರ್ಜಿದಾರರು ಭಾರತದಲ್ಲಿ ಎಲ್ಲಿಯೂ ಪಕ್ಕಾ ಮನೆ ಹೊಂದಿರಬಾರದು ಮತ್ತು ಈ ಕೆಳಗಿನ ವರ್ಗಗಳಲ್ಲಿ ಒಂದಕ್ಕೆ ಒಳಪಡಬೇಕು: EWS: ವಾರ್ಷಿಕ ಆದಾಯ ₹3 ಲಕ್ಷದವರೆಗೆ…

Read More

ಬೆಂಗಳೂರು: ನಗರದಲ್ಲಿ ಬೃಹತ್ ಗಾತ್ರದ ಅರಳಿ ಮರ ಉರುಳಿ ಬಿದ್ದು ಯುವತಿಯೊಬ್ಬಳು ಸ್ಥಳದಲ್ಲೇ ಸ್ಥಳದಲ್ಲೇ ಸಾವನ್ನಪ್ಪಿರುವಂತ ಘೋರ ದುರಂತ ನಡೆದಿದೆ. ಬೆಂಗಳೂರಿನ ಉತ್ತರ ತಾಲ್ಲೂಕಿನ ಸೋಲದೇವನಹಳ್ಳಿ ಠಾಣೆಯ ಬಳಿಯಲ್ಲಿ ಈ ದುರ್ಘಟನೆ ಸಂಭವಿಸಿದೆ. ಬೆಂಗಳೂರಿನ ಆರ್ ಟಿ ನಗರದ ಕೀರ್ತನಾ(23) ಮರ ಬಿದ್ದು ಸಾವನ್ನಪ್ಪಿದಂತ ದುರ್ದೈವಿಯಾಗಿದ್ದಾರೆ. ಸ್ಯಾಂಡರ್ ವುಡ್ ಪ್ರೀಮಿಯರ್ ಲೀಗ್ ನೋಡೋದಕ್ಕೆ ಕೀರ್ತನಾ ತೆರಳಿದ್ದರು. ಆಚಾರ್ಯ ಕಾಲೇಜು ಮೈದಾನದಲ್ಲಿ ಸ್ಯಾಂಡಲ್ ವುಡ್ ಪ್ರೀಮಿಯರ್ ಪಂದ್ಯಾವಳಿ ನಡೆದಿತ್ತು. ಸ್ನೇಹಿತೆ ಜೊತೆ ದ್ವಿಚಕ್ರ ವಾಹನದಲ್ಲಿ ಮನೆಗೆ ತೆರಳುತ್ತಿದ್ದಾಗ ಮರಳ ಉರುಳಿ ಬಿದ್ದು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಈ ಸಂಬಂಧ ಸೋಲದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Read More

ನೇಪಾಳ: ಪೂರ್ವ ನೇಪಾಳದ ವಿವಿಧ ಸ್ಥಳಗಳಲ್ಲಿ ನಿನ್ನೆ ರಾತ್ರಿಯಿಂದ ಸುರಿಯುತ್ತಿರುವ ಮಳೆಯಿಂದಾಗಿ ಉಂಟಾದ ಭೂಕುಸಿತ ಮತ್ತು ಪ್ರವಾಹದಲ್ಲಿ ಭಾನುವಾರ ಬೆಳಿಗ್ಗೆವರೆಗೆ ಕನಿಷ್ಠ 51 ಜನರು ಸಾವನ್ನಪ್ಪಿದ್ದಾರೆ ಎಂದು ಸಶಸ್ತ್ರ ಪೊಲೀಸ್ ಪಡೆಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಳೆದ ಎರಡು ದಿನಗಳಲ್ಲಿ ಭಾರೀ ಮಳೆಯಿಂದ ಉಂಟಾದ ಭೂಕುಸಿತಗಳಿಂದಾಗಿ ಕೋಶಿ ಪ್ರಾಂತ್ಯದ ಇಲಾಮ್ ಜಿಲ್ಲೆಯ ವಿವಿಧ ಸ್ಥಳಗಳಲ್ಲಿ ಸುಮಾರು 37 ಜನರು ಸಾವನ್ನಪ್ಪಿದ್ದಾರೆ ಎಂದು ಸಶಸ್ತ್ರ ಪೊಲೀಸ್ ಪಡೆಯ ವಕ್ತಾರ ಕಾಳಿದಾಸ್ ಧೌಬಾಜಿ ತಿಳಿಸಿದ್ದಾರೆ. 37 ಜನರಲ್ಲಿ, ದೆಯುಮೈ ಮತ್ತು ಮೈಜೋಗ್ಮೈ ಪುರಸಭೆಗಳಲ್ಲಿ ತಲಾ ಎಂಟು ಜನರು, ಇಲಾಮ್ ಪುರಸಭೆ ಮತ್ತು ಸಂದಕ್ಪುರ್ ಗ್ರಾಮೀಣ ಪುರಸಭೆಯಲ್ಲಿ ತಲಾ ಆರು ಜನರು, ಸೂರ್ಯೋದಯ ಪುರಸಭೆಯಲ್ಲಿ ಐದು ಜನರು, ಮಂಗ್ಸೆಬಂಗ್ನಲ್ಲಿ ಮೂವರು ಮತ್ತು ಫಕ್ಫೋಕ್ಥಮ್ ಗ್ರಾಮದಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ ಎಂದು ರಾಷ್ಟ್ರೀಯ ವಿಪತ್ತು ಅಪಾಯ ಕಡಿತ ಮತ್ತು ನಿರ್ವಹಣಾ ಪ್ರಾಧಿಕಾರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಉದಯಪುರದಲ್ಲಿ ಇಬ್ಬರು ಮತ್ತು ಪಂಚಥರ್‌ನಲ್ಲಿ ಒಬ್ಬರು ಪ್ರವಾಹ ಮತ್ತು ಭೂಕುಸಿತದಿಂದ ಸಾವನ್ನಪ್ಪಿದ್ದಾರೆ. ಪ್ರತ್ಯೇಕವಾಗಿ, ರೌತಹತ್‌ನಲ್ಲಿ…

Read More