Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಸಚಿವ ರಾಮಲಿಂಗಾ ರೆಡ್ಡಿ ಅವರ ಇಚ್ಛಾ ಶಕ್ತಿ, ಬದ್ಧತೆಗೆ ಮತ್ತೊಂದು ಸೇರ್ಪಡೆಗೊಂಡಿದೆ. ಅದರಲ್ಲೂ ಮುಜರಾಯಿ ಇಲಾಖೆಯಲ್ಲಿ ಕ್ರಾಂತಿಕಾರಿ ಯೋಜನೆಗಳಿಗೆ ಮುನ್ನುಡಿಯನ್ನು ಬರೆದಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿರುವಂತ ಅವರು, ಮುಜರಾಯಿ ಇಲಾಖೆಯ ದೇವಸ್ಥಾನಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಮತ್ತು ಸಿಬ್ಬಂದಿಗಳ ಮಕ್ಕಳಿಗೆ ಇದುವರೆಗೂ ಯಾವುದೇ ರೀತಿಯ ವಿದ್ಯಾರ್ಥಿ ಪ್ರೋತ್ಸಾಹ ಧನ ಯೋಜನೆ ಜಾರಿಯಲ್ಲಿರಲಿಲ್ಲ.ದಿನಾಂಕ:27.10.2023 ಈ ಬಗ್ಗೆ ಆದೇಶ ಮಾಡಿ ಯೋಜನೆ ಜಾರಿಗೆ ತರಲಾಗಿದೆ ಎಂದಿದ್ದಾರೆ. ಈ ಕೆಳಕಂಡ ಕೋರ್ಸ್ ಗಳಿಗೆ ವಿದ್ಯಾರ್ಥಿ ಪ್ರೋತ್ಸಾಹ ಧನ ನೀಡಲು ಪ್ರಾರಂಭಿಸಲಾಯಿತು ಎಂದಿದ್ದಾರೆ. ಪಿ.ಯು.ಸಿ ರೂ.5,000 ಪದವಿ ರೂ.7,000 ಸ್ನಾತಕೋತ್ತರ ಪದವಿ ರೂ.15,000 ಇಂಜಿನಿಯರಿಂಗ್ ರೂ.25,000 ವೈದ್ಯಕೀಯ/ ಡೆಂಟಲ್ ರೂ.50,000 ಇತರೆ ವೈದ್ಯಕೀಯ ರೂ.25,000 ವಿದೇಶ ವ್ಯಾಸಂಗ ರೂ.1,00,000 ಇಲ್ಲಿಯವರೆಗೆ ಪ್ರೋತ್ಸಾಹಧನ 254 ವಿದ್ಯಾರ್ಥಿಗಳಿಗೆ ರೂ.38.38 ಲಕ್ಷ ಪಾವತಿಸಲಾಗಿದ್ದು, ಇನ್ನು 19 ಅರ್ಜಿಗಳನ್ನು ಸ್ವೀಕರಿಸಲಾಗಿದೆ. ಇದರಲ್ಲಿ ಅರ್ಚಕರ ಮಕ್ಕಳು 230 ,ನೌಕರರ ಮಕ್ಕಳು 24 ಸೇರಿವೆ. ವಿಶೇಷವೆಂದರೆ 5 ವಿದ್ಯಾರ್ಥಿಗಳಿಗೆ ತಲಾ 1 ಲಕ್ಷದಂತೆ 5…
ಬೆಂಗಳೂರು : ಕರ್ನಾಟಕದಲ್ಲೂ ಜಿಯೋ ವೈರ್ ಲೆಸ್ ಮತ್ತು ವೈರ್ ಲೈನ್ ಗಳೆರಡರಲ್ಲೂ ತನ್ನ ಪಾರಮ್ಯವನ್ನು ಮುಂದುವರಿಸಿದೆ. ಟ್ರಾಯ್ ನಿಂದ (ಭಾರತೀಯ ದೂರಸಂಪರ್ಕ ನಿಯಂತ್ರಣ ಪ್ರಾಧಿಕಾರ) ಇತ್ತೀಚೆಗೆ ಬಿಡುಗಡೆ ಮಾಡಿದ ವರದಿಯಂತೆ, ಕರ್ನಾಟಕದಲ್ಲಿ 2.95 ಲಕ್ಷ ಮೊಬೈಲ್ ಚಂದಾದಾರರ ನಿವ್ವಳ ಸೇರ್ಪಡೆ ದಾಖಲಿಸಿದ್ದು, 2025ರ ಸೆಪ್ಟೆಂಬರ್ ಅಂತ್ಯದ ವೇಳೆಗೆ ಜಿಯೋದ ಒಟ್ಟು ಬಳಕೆದಾರರ ಸಂಖ್ಯೆ ರಾಜ್ಯದಲ್ಲಿ 2.56 ಕೋಟಿಗೆ ತಲುಪಿದೆ. ಕರ್ನಾಟಕ ವೃತ್ತದಲ್ಲಿ ಸಕ್ರಿಯ ಜಿಯೋ ಏರ್ಫೈಬರ್ ಚಂದಾದಾರರ ಸಂಖ್ಯೆ 2025ರ ಸೆಪ್ಟೆಂಬರ್ ತಿಂಗಳಲ್ಲಿ 3,74,894ಕ್ಕೆ ಏರಿತು, ಆಗಸ್ಟ್ನಲ್ಲಿ ಈ ಸಂಖ್ಯೆ 3,63,327 ರಷ್ಟಿತ್ತು -ಇನ್ನು ಜಿಯೋದ ಸಮೀಪ ಪ್ರತಿಸ್ಪರ್ಧಿ ಎನಿಸಿದ ಭಾರ್ತಿ ಏರ್ಟೆಲ್ ಕೇವಲ 2,04,945 ಚಂದಾದಾರರನ್ನು ನೋಂದಾಯಿಸಿದೆ. ಟ್ರಾಯ್ ಪ್ರಕಾರ, ಸೆಪ್ಟೆಂಬರ್ ಅಂತ್ಯದವರೆಗೆ ಜಿಯೋ ಸುಮಾರು 50 ಕೋಟಿ 54 ಲಕ್ಷ ಗ್ರಾಹಕರು ಮತ್ತು ಶೇ 50.77ರಷ್ಟು ಮಾರುಕಟ್ಟೆ ಪಾಲನ್ನು ಹೊಂದಿದ್ದು ಮುಂಚೂಣಿಯಲ್ಲಿದೆ. ಏರ್ಟೆಲ್ ಸುಮಾರು 30.14 ಕೋಟಿ ಮತ್ತು ವೊಡಾ-ಐಡಿಯಾ ಸುಮಾರು 12 ಕೋಟಿ 78 ಲಕ್ಷ…
ಬೆಂಗಳೂರು: ನಗರದಲ್ಲಿ ಪಬ್ಲಿಕ್ ಪ್ರಾಸಿಕ್ಯೂಟರ್ ಒಬ್ಬರು ಲೋಕಾಯುಕ್ತ ಬಲೆಗೆ ಬಿದ್ದಿರುವಂತ ಘಟನೆ ನಡೆದಿದೆ. 1,100 ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ರೆಡ್ ಹ್ಯಾಂಡ್ ಹಿಡಿದಿದ್ದಾರೆ. ಬೆಂಗಳೂರಿನ 46ನೇ ಸಿಸಿಹೆಚ್ ಕೋರ್ಟ್ ಪಬ್ಲಿಕ್ ಪ್ರಾಸಿಕ್ಯೂಟರ್ ಲತಾ ಎಂಬುವರೇ ಲೋಕಾಯುಕ್ತ ಬಲೆಗೆ ಬಿದ್ದಂತವರಾಗಿದ್ದಾರೆ. ಕ್ರಿಮಿನಲ್ ಕೇಸ್ ನಲ್ಲಿ ಆಕ್ಷೇಪಣೆ ಸಲ್ಲಿಸಲು ಲಂಚಕ್ಕೆ ಪಬ್ಲಿಕ್ ಪ್ರಾಸಿಕ್ಯೂಟರ್ ಲತಾ ಬೇಡಿಕೆ ಇಟ್ಟಿದ್ದರಂತೆ. ಎ.ರಾಜಾ ಎಂಬುವರಿದೆ 1,100 ಲಂಚಕ್ಕೆ ಬೇಡಿಕೆಯನ್ನು ಪಿಪಿ ಲತಾ ಇಟ್ಟಿದ್ದರಂತೆ. ಈ ಸಂಬಂಧ ರಾಜಾ ಅವರು ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಇಂದು ಲಂಚದ ಹಣವನ್ನು ಪಡೆಯುತ್ತಿದ್ದಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ, ಬೆಂಗಳೂರಿನ 46ನೇ ಸಿಸಿಹೆಚ್ ನ್ಯಾಯಾಲಯದ ಪಿಪಿ ಲತಾ ರೆಡ್ ಹ್ಯಾಂಡ್ ಆಗಿ ಹಿಡಿದಿದ್ದಾರೆ. https://kannadanewsnow.com/kannada/bjp-mlc-seen-in-cm-siddaramaiahs-car/ https://kannadanewsnow.com/kannada/big-alert-fake-eno-has-entered-the-market-find-out-which-one-is-genuine/
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಕಾರಿನಲ್ಲಿ ಬಿಜೆಪಿ ಎಂಎಲ್ಸಿ ಪ್ರತ್ಯಕ್ಷವಾಗಿ ತೀವ್ರ ಕುತೂಹಲ ಮೂಡಿಸಿದ್ದಾರೆ. ಸಿಎಂ ಸಿದ್ಧರಾಮಯ್ಯ ಕಾರಿನಲ್ಲಿ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಆಗಮಿಸಿ ಕುತೂಹಲ ಮೂಡಿಸಿದ್ದಾರೆ. ಹೊರಗೆ ಸಿಎಂ ಸಿದ್ಧರಾಮಯ್ಯ ವಿರುದ್ಧ ವಾಗ್ಧಾಳಿ ನಡೆಸುತ್ತಿದ್ದಂತ ಅವರು, ಸಿದ್ಧರಾಮಯ್ಯ ಜೊತೆಗೆ ಕಾರಿನಲ್ಲಿ ಆಗಮಿಸಿ, ಗಮನ ಸೆಳೆದಿದ್ದಾರೆ. ಇನ್ನೂ ಸಿಎಂ ಜೊತೆಯಲ್ಲೆ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್ ಆತ್ಮೀಯವಾಗಿ ಮಾತುಕತೆ ನಡೆಸಿದ್ದು ಕಂಡು ಬಂದಿದೆ. ಸಿಎಂ ಸಿದ್ಧರಾಮಯ್ಯ ಅವರ ಕಾವೇರಿಯಿಂದ ವಿಧಾನಸೌಧಕ್ಕೆ ರವಿಕುಮಾರ್ ಬಂದಿದ್ದು ಕಂಡು ಬಂದಿತು. ಕಾಂಗ್ರೆಸ್ ನಾಯಕರ ವಿರುದ್ಧ ಎನ್.ರವಿಕುಮಾರ್ ವಾಗ್ಧಾಳಿ ನಡೆಸುತ್ತಿದ್ದರು. ಇದೀಗ ಆತ್ಮೀಯವಾಗಿ ಮಾತನಾಡಿಕೊಂಡು ವಿಧಾನ ಪರಿಷತ್ ವಿಪಕ್ಷ ಮುಖ್ಯ ಸಚೇತಕ ಎನ್ ರವಿಕುಮಾರ್ ಬಂದು ಗಮನ ಸೆಳೆಯದರು. https://kannadanewsnow.com/kannada/shock-for-tourists-going-to-bandipur-nagarhole-1-trip-cut-from-safari-trips/ https://kannadanewsnow.com/kannada/big-alert-fake-eno-has-entered-the-market-find-out-which-one-is-genuine/
ವಾಸ್ತು, ಇತ್ತೀಚೆಗೆ ನಾವು ಈ ವಾಸ್ತು ಬಗ್ಗೆ ಹೆಚ್ಚು ಮಾತನಾಡುತ್ತಿದ್ದೇವೆ. ಆದರೆ ವಾಸ್ತು ಇಂದು ನಿನ್ನೆಯದಲ್ಲ. ವಾಸ್ತು ರಾಜರ ಕಾಲದಿಂದಲೂ ಇದೆ. ವಾಸ್ತುವನ್ನು ನಂಬುವವರು ಈ ಪರಿಹಾರವನ್ನು ಅನುಸರಿಸಬಹುದು. ಅನೇಕರ ಮನೆಯಲ್ಲಿ ವಾಸ್ತು ಸರಿಯಾಗಿ ಹೊಂದಿಸದೇ ಇರುವುದರಿಂದ ಕುಟುಂಬದಲ್ಲಿ ಕೆಲವು ಸಮಸ್ಯೆಗಳು ಉದ್ಭವಿಸುತ್ತವೆ. ಕೆಲವರಿಗೆ ಮನೆಯಲ್ಲಿ ನೆಮ್ಮದಿ ಕಳೆದುಕೊಳ್ಳಬಹುದು, ವ್ಯಾಪಾರದಲ್ಲಿ ನಷ್ಟ ಉಂಟಾಗಬಹುದು, ಕೆಲವರಿಗೆ ಮನೆಯಲ್ಲಿ ಜಗಳಗಳು ಕೂಡ ಬರಬಹುದು. ಕೆಲವು ಮನೆಗಳಲ್ಲಿ ವಾಸ್ತು ಸರಿಯಿಲ್ಲದ ಕಾರಣ ಕುಟುಂಬ ಎರಡು ಹೋಳಾಗುತ್ತದೆ. ಸಣ್ಣಪುಟ್ಟ ವಾಸ್ತು ಸಮಸ್ಯೆಯಾಗಿದ್ದರೆ ಅದನ್ನು ಸುಲಭವಾಗಿ ಸರಿಪಡಿಸಬಹುದು. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ,…
ಬೆಂಗಳೂರು: ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶಕ್ಕೆ ಸಫಾರಿಗೆ ತೆರಳುವಂತ ಪ್ರವಾಸಿಗರಿಗೆ ಶಾಕ್ ಎನ್ನುವಂತೆ, ನಿನ್ನೆಯಿಂದಲೇ ಜಾರಿಗೆ ಬರುವಂತೆ ಸಫಾರಿಯ ಟ್ರಿಪ್ ಗಳ ಪೈಕಿ 1 ಟ್ರಿಪ್ ಕಡಿತಗೊಳಿಸಿ ಅರಣ್ಯ ಸಚಿವ ಈಶ್ವರ್ ಖಂಡ್ರೆ ಆದೇಶಿಸಿದ್ದಾರೆ. ಈ ಕುರಿತಂತೆ ಟಿಪ್ಪಣಿ ಆದೇಶ ಹೊರಡಿಸಿರುವಂತ ಅವರು, ಬಂಡೀಪುರ, ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ವನ್ಯಜೀವಿಗಳ ವೀಕ್ಷಣೆಗೆ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದ್ದು, ಸಫಾರಿಯ ಟ್ರಿಪ್ ಸಂಖ್ಯೆ ಹೆಚ್ಚಳ ಮಾಡಲಾಗಿದೆ. ರಾತ್ರಿ 6:00 ಗಂಟೆಯ ನಂತರವೂ ಕಾಡಿನಲ್ಲಿ ಸಫಾರಿ ವಾಹನಗಳು ಸಂಚರಿಸುತ್ತಿವೆ. ವಾಹನದ ಬೆಳಕು ಮತ್ತು ಶಬ್ದದಿಂದ ವನ್ಯಜೀವಿಗಳು ಕಾಡಿನಿಂದ ನಾಡಿಗೆ ಬಂದು ಉಪಟಳ ನೀಡುತ್ತಿವೆ ಎಂದು ವಿವಿಧ ರೈತ ಸಂಘಟನೆಗಳು ಆರೋಪಿಸಿ, ಕೂಡಲೇ ಸಫಾರಿ ನಿಲ್ಲಿಸುವಂತೆ ಮನವಿ ಮಾಡಿದ್ದಾರೆ ಎಂದಿದ್ದಾರೆ. ಸಫಾರಿಯು ಕಾಡಿನ ಬಗ್ಗೆ, ವನ್ಯಜೀವಿಗಳ ಬಗ್ಗೆ ಪರಿಸರ ಆಸಕ್ತರಿಗೆ ಶಿಕ್ಷಣವೂ ಆಗಿದೆ. ಹಲವರಿಗೆ ಜೀವನೋಪಾಯವೂ ಆಗಿದೆ. ಈ ನಿಟ್ಟಿನಲ್ಲಿ ದಿನಾಂಕ 28.10.2025 ರಿಂದ ಹಾಲಿ ಇರುವ ಸಫಾರಿಯ ಟ್ರಿಪ್ ಗಳ ಪೈಕಿ…
ನವದೆಹಲಿ: ಭಾರತದ ಸೇವಾ ವಲಯವು ದೇಶದ ಸುಮಾರು ಶೇ. 30 ರಷ್ಟು ಉದ್ಯೋಗಿಗಳನ್ನು ನೇಮಿಸಿಕೊಂಡಿದೆ, ಇದು ಜಾಗತಿಕ ಸರಾಸರಿ ಶೇ. 50 ಕ್ಕಿಂತ ಇನ್ನೂ ಕಡಿಮೆಯಾಗಿದೆ, ಇದು ನಿಧಾನಗತಿಯ ರಚನಾತ್ಮಕ ಪರಿವರ್ತನೆಯನ್ನು ಪ್ರತಿಬಿಂಬಿಸುತ್ತದೆ ಎಂದು ನೀತಿ ಆಯೋಗ ಮಂಗಳವಾರ ತನ್ನ ವರದಿಯಲ್ಲಿ ತಿಳಿಸಿದೆ. ‘ಭಾರತದ ಸೇವಾ ವಲಯ: ಉದ್ಯೋಗ ಪ್ರವೃತ್ತಿಗಳು ಮತ್ತು ರಾಜ್ಯ ಮಟ್ಟದ ಚಲನಶಾಸ್ತ್ರದಿಂದ ಒಳನೋಟಗಳು’ ಎಂಬ ಶೀರ್ಷಿಕೆಯ ವರದಿಯಲ್ಲಿ, ಭಾರತದ ಉದ್ಯೋಗ ಬೆಳವಣಿಗೆ ಮತ್ತು ಸಾಂಕ್ರಾಮಿಕ ನಂತರದ ಚೇತರಿಕೆಗೆ ಸೇವೆಗಳು ಮುಖ್ಯ ಆಧಾರವಾಗಿ ಉಳಿದಿವೆ, ಆದರೆ ಸವಾಲುಗಳು ಮುಂದುವರೆದಿವೆ ಎಂದು ಆಯೋಗ ಹೇಳಿದೆ. “2011-12ರಲ್ಲಿ ಶೇ. 26.9 ಕ್ಕೆ ಹೋಲಿಸಿದರೆ ಸೇವಾ ವಲಯದ ಉದ್ಯೋಗವು 2023-24ರಲ್ಲಿ ಶೇ. 29.7 ಕ್ಕೆ ಏರಿದೆ, ಕಳೆದ ಆರು ವರ್ಷಗಳಲ್ಲಿ 40 ಮಿಲಿಯನ್ ಉದ್ಯೋಗಗಳು ಸೃಷ್ಟಿಯಾಗಿವೆ” ಎಂದು ಆಯೋಗ ಹೇಳಿದೆ. “ಆದಾಗ್ಯೂ, ಇದು ಇನ್ನೂ ಜಾಗತಿಕ ಸರಾಸರಿ ಶೇ. 50 ಕ್ಕಿಂತ ಹಿಂದುಳಿದಿದೆ, ಇದು ನಿಧಾನಗತಿಯ ರಚನಾತ್ಮಕ ಪರಿವರ್ತನೆಯನ್ನು ಪ್ರತಿಬಿಂಬಿಸುತ್ತದೆ” ಎಂದು ಅದು…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಭಾರತದ ಹಿರಿಯ ಬ್ಯಾಟ್ಸ್ಮನ್ ರೋಹಿತ್ ಶರ್ಮಾ, ತಮ್ಮ ಶ್ರೇಷ್ಠ ವೃತ್ತಿಜೀವನದಲ್ಲಿ ಮೊದಲ ಬಾರಿಗೆ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಪುರುಷರ ಏಕದಿನ ಬ್ಯಾಟ್ಸ್ಮನ್ ಶ್ರೇಯಾಂಕದಲ್ಲಿ ಶುಭ್ಮನ್ ಗಿಲ್ ಮತ್ತು ಅಫ್ಘಾನಿಸ್ತಾನದ ಇಬ್ರಾಹಿಂ ಝದ್ರಾನ್ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನ ಪಡೆದರು. 38 ವರ್ಷದ ರೋಹಿತ್ ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ಧದ ಮೂರನೇ ಮತ್ತು ಅಂತಿಮ ಏಕದಿನ ಪಂದ್ಯದಲ್ಲಿ ಅಜೇಯ 121 ರನ್ ಗಳಿಸುವ ಮೂಲಕ ಎರಡು ಸ್ಥಾನಗಳ ಏರಿಕೆಯೊಂದಿಗೆ ಇತಿಹಾಸ ಸೃಷ್ಟಿಸಿದರು. ಈ ಪಂದ್ಯದಲ್ಲಿ ಅವರು ತಮ್ಮ ತಂಡವನ್ನು ಒಂಬತ್ತು ವಿಕೆಟ್ಗಳ ಭರ್ಜರಿ ಗೆಲುವಿನತ್ತ ಮುನ್ನಡೆಸಿದರು. https://twitter.com/ICC/status/1983445935775723936 ‘ಹಿಟ್ಮ್ಯಾನ್’ ಕಳೆದ ದಶಕದಲ್ಲಿ ಬಹುಪಾಲು ಕಾಲ ಅಗ್ರ 10 ರೊಳಗೆ ಸ್ಥಾನ ಪಡೆದಿದ್ದಾರೆ, ಅಂತಿಮವಾಗಿ ನಂಬರ್ 1 ಸ್ಥಾನಕ್ಕೆ ತಲುಪಿದ್ದಾರೆ. ಭಾರತ 1-2 ಅಂತರದಲ್ಲಿ ಸೋತ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಅವರನ್ನು ಸರಣಿಯ ಆಟಗಾರ ಎಂದು ಆಯ್ಕೆ ಮಾಡಲಾಯಿತು. ಈ ವಾರ ನವೀಕರಿಸಿದ ಐಸಿಸಿ ಶ್ರೇಯಾಂಕದಲ್ಲಿ ಸ್ಥಾನ ಪಡೆದ…
ಚಾಮರಾಜನಗರ: ಜಿಲ್ಲೆಯಲ್ಲಿ ಕೋಂಬಿಂಗ್ ಕಾರ್ಯಾಚರಣೆಯ ವೇಳೆಯಲ್ಲಿ ಹಾಡಹಗಲೇ ಹುಲಿಯೊಂದು ಹಸುವಿನ ಮೇಲೆ ದಾಳಿ ನಡೆಸಿ ಕೊಂದು ಹಾಕಿದೆ. ಹೌದು. ಕೋಂಬಿಂಗ್ ಕಾರ್ಯಾಚರಣೆಯ ವೇಳೆಯಲ್ಲಿ ಹುಲಿ ದಾಳಿಗೆ ಹಸು ಬಲಿಯಾಗಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ ಕಲ್ಲಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಪಡಗೂರು ಗ್ರಾಮದಲ್ಲಿ ನಡೆಯುತ್ತಿದ್ದ ಹುಲಿ ಸೆರೆ ಕಾರ್ಯಾಚರಣೆಯ ವೇಳೆಯಲ್ಲಿ ಹಾಡಹಗಲೇ ಹಸುವಿನ ಮೇಲೆ ದಾಳಿ ನಡೆಸಿ, ಕೊಂದಿದೆ. ಹುಲಿ ಸೆರೆ ಕಾರ್ಯಾಚರಣೆಯ ವೇಳೆ ಮಾರ್ಗಸೂಚಿ ಪಾಲನೆ ಮಾಡದಿದ್ದದ್ದೇ ಇದಕ್ಕೆ ಕಾರಣ ಎಂಬುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ. ಕೋಂಬಿಂಗ್ ನಡೆಸುವಾಗ ಎಚ್ಚರಿಕೆ ಕೊಡಬೇಕಿದ್ದ ಅರಣ್ಯ ಇಲಾಖೆ, ಇದನ್ನು ಮರೆತಿದ್ದೇ ಕಾರಣ ಎನ್ನಲಾಗುತ್ತಿದೆ. https://kannadanewsnow.com/kannada/there-is-no-vacancy-for-the-cm-post-in-the-state-minister-bairati-suresh/
ಕೋಲಾರ : ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ. ಆ ಹುದ್ದೆಯನ್ನು ತೆಗೆದು ನಮಗೆ ಕೊಡಿ ಎಂದು ಯಾರೂ ಕೇಳುತ್ತಿಲ್ಲ ಎಂದು ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬೈರತಿ ಸುರೇಶ್ ಸ್ಪಷ್ಟಪಡಿಸಿದ್ದಾರೆ. ಕೋಲಾರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಯಾವ ಕ್ರಾಂತಿಯೂ ಇಲ್ಲ, ಭ್ರಾಂತಿಯೂ ಇಲ್ಲ. ಎಲ್ಲವೂ ಊಹಾಪೋಹದ ಸುದ್ದಿ ಎಂದರು. ದಲಿತ ಸಿಎಂ ವಿಚಾರ ಮುನ್ನೆಲೆಗೆ ಬಂದಿದೆ ಎಂಬ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದ ಸಚಿವರು, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಯಾವುದೇ ಹುದ್ದೆಯನ್ನು ಕೇಳಲು ಎಲ್ಲರಿಗೂ ಹಕ್ಕಿದೆ. ಹೀಗಾಗಿ ದಲಿತ ಸಿಎಂ ಆಗಬೇಕೆಂದು ಹೇಳುವುದರಲ್ಲಿ ತಪ್ಪೇನಿದೆ ಎಂದು ಪ್ರಶ್ನಿಸಿದರು. ಆದರೆ, ರಾಜ್ಯದಲ್ಲಿ ಮುಖ್ಯಮಂತ್ರಿ ಸ್ಥಾನ ಖಾಲಿಯಿಲ್ಲ. ಸಿದ್ದರಾಮಯ್ಯ ಅವರು ರಾಜ್ಯವನ್ನು ಸಮರ್ಥವಾಗಿ ನಿಭಾಯಿಸಿಕೊಂಡು ಹೋಗುತ್ತಿದ್ದಾರೆ ಎಂದು ಹೇಳಿದರು. ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ ಕೆ ಶಿವಕುಮಾರ್, ನಾನು ಸೇರಿದಂತೆ ಎಲ್ಲರೂ ಕಾಂಗ್ರೆಸ್ ಪಕ್ಷದ ಶಿಸ್ತಿನ ಸಿಪಾಯಿಗಳು. ಯಾವುದೇ ವಿಚಾರದಲ್ಲಿ ಅಂತಿಮ ನಿರ್ಧಾರವನ್ನು ನಮ್ಮ ಸಮರ್ಥವಾಗಿರುವ ಹೈಕಮಾಂಡ್ ಕೈಗೊಳ್ಳಲಿದೆ ಎಂದರು. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ…














