Subscribe to Updates
Get the latest creative news from FooBar about art, design and business.
Author: kannadanewsnow09
ಕೆಎನ್ಎನ್ ಡಿಜಿಟಲ್ ಡೆಸ್ಕ್: ದ್ವಿಚಕ್ರ ಹೊರತುಪಡಿಸಿ, ಇನ್ನುಳಿದ ಎಲ್ಲಾ ಮಾದರಿಯ ವಾಹನಗಳಿಗೆ ಟೋಲ್ ಫ್ಲಾಜಾಗಳಲ್ಲಿ ಶುಲ್ಕವನ್ನು ವಸೂಲಿ ಮಾಡಲಾಗುತ್ತಿದೆ. ಆದರೇ ಜುಲೈ.15ರಿಂದ ದ್ವಿಚಕ್ರ ವಾಹನಗಳಿಗೂ ಟೋಲ್ ಶುಲ್ಕ ವಿಧಿಸಲಾಗುತ್ತದೆ ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿದೆ. ಇದು ನಿಜವೇ ಎನ್ನುವ ಅಸಲಿ ಸತ್ಯ ಮುಂದಿದೆ ಓದಿ. ಜುಲೈ 15 ರಿಂದ ದ್ವಿಚಕ್ರ ವಾಹನಗಳಿಗೆ ಟೋಲ್ ಶುಲ್ಕವನ್ನು ಪರಿಚಯಿಸಬಹುದು ಎಂಬ ಹೆಚ್ಚುತ್ತಿರುವ ಊಹಾಪೋಹಗಳು ಮತ್ತು ವ್ಯಾಪಕ ಮಾಧ್ಯಮ ವರದಿಗಳ ಮಧ್ಯೆ, ಭಾರತ ಸರ್ಕಾರವು ಅಂತಹ ಹೇಳಿಕೆಗಳನ್ನು ಅಧಿಕೃತವಾಗಿ ತಳ್ಳಿಹಾಕಿದೆ. ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಈ ವರದಿಗಳನ್ನು “ಆಧಾರರಹಿತ” ಎಂದು ಕರೆದು ಬಲವಾದ ಸ್ಪಷ್ಟೀಕರಣವನ್ನು ನೀಡಿದೆ ಮತ್ತು ಅಂತಹ ಯಾವುದೇ ಪ್ರಸ್ತಾಪವು ಸಕ್ರಿಯ ಪರಿಗಣನೆಯಲ್ಲಿಲ್ಲ ಎಂದು ದೃಢಪಡಿಸಿದೆ. https://twitter.com/NHAI_Official/status/1938155675445588222 ಗುರುವಾರ NHAI ಸಾಮಾಜಿಕ ಮಾಧ್ಯಮ ಮತ್ತು ಅಧಿಕೃತ ಚಾನೆಲ್ಗಳ ಮೂಲಕ ಹೇಳಿಕೆಯನ್ನು ಬಿಡುಗಡೆ ಮಾಡಿತು. ಭಾರತ ಸರ್ಕಾರವು ದ್ವಿಚಕ್ರ ವಾಹನಗಳ ಮೇಲೆ ಬಳಕೆದಾರ ಶುಲ್ಕವನ್ನು ವಿಧಿಸಲು ಯೋಜಿಸುತ್ತಿದೆ ಎಂದು ಕೆಲವು ಮಾಧ್ಯಮಗಳು ವರದಿ…
ಬೆಂಗಳೂರು: ನಗರದ ಜನತೆಗೆ ಅನುಕೂಲ ಆಗುವ ನಿಟ್ಟಿನಲ್ಲಿ ಬಿಎಂಟಿಸಿಯಿಂದ ಹೊಸ ಮಾರ್ಗದಲ್ಲಿ ಬಸ್ ಸಂಚಾರವನ್ನು ಆರಂಭಿಸಿದೆ. ಈ ಮೂಲಕ ಜನತೆಗೆ ಅನುಕೂಲವನ್ನು ಕಲ್ಪಿಸಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮಧಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣರಹಿತ ಸೇವೆಗಳಲ್ಲಿ ನೂತನ ಮಾರ್ಗವನ್ನು ದಿನಾಂಕ.27.06.2025 ರಿಂದ ಪರಿಚಯಿಸಿದ್ದು, ವಿವರ ಈ ಕೆಳಕಂಡಂತಿದೆ: ಕ್ರ.ಸಂ ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ 01 180-ಎ ಕಾವಲ್ ಭೈರಸಂದ್ರ ಮೈಸೂರು ರಸ್ತೆ ಬಸ್ ನಿಲ್ದಾಣ ಮೇಖ್ರಿ ವೃತ್ತ, ಯಶವಂತಪುರ, ರಾಜಾಜಿನಗರ, ವಿಜಯನಗರ, ಅತ್ತಿಗುಪ್ಪೆ 06 ಸದರಿ ಮಾರ್ಗದ ವೇಳಾಪಟ್ಟಿ ವಿವರಗಳು ಈ ಕೆಳಗಿನಂತಿದೆ. ಮಾರ್ಗ ಸಂಖ್ಯೆ: 180-ಎ ಬಿಡುವ ವೇಳೆ ಕಾವಲ್ ಭೈರಸಂದ್ರ 0445, 0505, 0525, 0545, 0630, 0700, 0720, 0740, 0800, 0830, 0910, 1150, 1400, 1420, 1440, 1500, 1530,…
ಹುಬ್ಬಳ್ಳಿ: ಕರ್ನಾಟಕ ಮತ್ತು ಮಧ್ಯಪ್ರದೇಶದ ನಡುವೆ ನೇರ ರೈಲು ಸಂಪರ್ಕವನ್ನು ಹೆಚ್ಚಿಸುವ ಉದ್ದೇಶದಿಂದ, ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ ಮತ್ತು ಮಧ್ಯಪ್ರದೇಶದ ಗ್ವಾಲಿಯರ್ ನಿಲ್ದಾಣಗಳ ನಡುವೆ ಹೊಸ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಸೇವೆಯನ್ನು ರೈಲ್ವೆ ಮಂಡಳಿ ಸಂಚರಿಸಲು ಘೋಷಿಸಿದೆ. ಈ ಸೇವೆಯು ರೈಲು ಸಂಖ್ಯೆ 11085/11086 ಎಸ್ಎಂವಿಟಿ ಬೆಂಗಳೂರು – ಗ್ವಾಲಿಯರ್ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್ಪ್ರೆಸ್ ಆಗಿ ಕಾರ್ಯನಿರ್ವಹಿಸಲಿದೆ. ರೈಲು ಸಂಖ್ಯೆ 11085 ಎಸ್ಎಂವಿಟಿ ಬೆಂಗಳೂರು – ಗ್ವಾಲಿಯರ್ ಸಾಪ್ತಾಹಿಕ ಎಕ್ಸ್ಪ್ರೆಸ್ ಜೂನ್ 29, 2025 ರಿಂದ ಪ್ರತಿ ಭಾನುವಾರ ಮಧ್ಯಾಹ್ನ 3:50ಕ್ಕೆ ಬೆಂಗಳೂರಿನ ಸರ್ ಎಂ. ವಿಶ್ವೇಶ್ವರಯ್ಯ ಟರ್ಮಿನಲ್ನಿಂದ ಹೊರಟು ಮಂಗಳವಾರ ಬೆಳಿಗ್ಗೆ 10:25ಕ್ಕೆ ಗ್ವಾಲಿಯರ್ ಜಂಕ್ಷನ್ಗೆ ತಲುಪಲಿದೆ. ಮರಳಿ, ರೈಲು ಸಂಖ್ಯೆ 11086 ಗ್ವಾಲಿಯರ್ – ಎಸ್ಎಂವಿಟಿ ಬೆಂಗಳೂರು ಸಾಪ್ತಾಹಿಕ ಎಕ್ಸ್ಪ್ರೆಸ್ ಜುಲೈ 4, 2025 ರಿಂದ ಪ್ರತಿ ಶುಕ್ರವಾರ ಮಧ್ಯಾಹ್ನ 3:00ಕ್ಕೆ ಗ್ವಾಲಿಯರ್ನಿಂದ ಹೊರಟು ಭಾನುವಾರ ಬೆಳಿಗ್ಗೆ 07:35ಕ್ಕೆ ಎಸ್ಎಂವಿಟಿ ಬೆಂಗಳೂರಿಗೆ ಆಗಮಿಸಲಿದೆ. ಈ…
ಮಂಗಳೂರು: ‘ಎಸ್ಎಸ್ ಮೆಟಲ್ಸ್ ಆಂಡ್ ಇಂಡಸ್ಟ್ರೀಸ್’ನ ಅತ್ಯಾಧುನಿಕ ಟ್ಯಾಂಕರ್ ಮಾಪನಾಂಕ ನಿರ್ಣಯ ಘಟಕ ಮಂಗಳವಾರ ನಗರದಲ್ಲಿ ಉದ್ಘಾಟನೆಗೊಂಡಿದೆ. ಮಂಗಳೂರಿನ ಓಷನ್ ಪರ್ಲ್ ಹೊಟೇಲ್ನಲ್ಲಿ ನಡೆದ ಅದ್ಧೂರಿ ಕಾರ್ಯಕ್ರಮದಲ್ಲಿ ಅನಾವರಣಗೊಂಡ ಈ ಘಟಕವು ಮಂಗಳೂರು ಸೇರಿದಂತೆ ವಿವಿಧೆಡೆಗಳಲ್ಲಿ ಬೃಹತ್ ತೈಲ, ರಾಸಾಯನಿಕ ನಿರ್ವಹಣೆ ಮಾಡುವ ಕೈಗಾರಿಕೆಗಳಿಗೆ ನಿಖರತೆ, ಸುರಕ್ಷತೆ ಮತ್ತು ನಿಯಂತ್ರಕ ಕ್ರಮಗಳನ್ನು ಅನುಸರಿಸಲು ಪೂರಕವಾಗಲಿದೆ. ಉದ್ಘಾಟನಾ ಸಮಾರಂಭದಲ್ಲಿ ಉದ್ಯಮದ ಮುಖಂಡರು ಮತ್ತು ಧಾರ್ಮಿಕ ನಾಯಕರು ಪಾಲ್ಗೊಂಡಿದ್ದರು. ಬೆಂಗಳೂರಿನ ಸೈಂಟ್ ಆಂಡ್ರ್ಯೂಸ್ ಚರ್ಚ್ನ ವಂ.ಡಾ. ಡೆಕ್ಸ್ಟರ್ ಎಸ್. ಮಾಬೆನ್, ಜೋನಸ್ ಗ್ರೂಪ್ನ ನಿರ್ದೇಶಕ ಸುನಿಲ್ ಎ. ಜೋನಸ್, ಎಸ್ಎಸ್ ಮೆಟಲ್ಸ್ ನಿರ್ದೇಶಕಿ ಸಂಧ್ಯಾ ದೀಪಾ ಜೋನಸ್ ಭಾಗವಹಿಸಿದ್ದರು. ಪ್ರಮುಖ ಉದ್ಯಮ ಪ್ರತಿನಿಧಿಗಳಾದ ಎಂಆರ್ಪಿಎಲ್ನ ಜಿಜಿಎಂ (ಎಚ್ಆರ್) ಕೃಷ್ಣ ಹೆಗ್ಡೆ ಮಿಯಾರ್, ಇಂಡಿಯನ್ ಆಯಿಲ್ ಕಾರ್ಪೊರೇಷನ್ ಲಿಮಿಟೆಡ್ (ಐಒಸಿಎಲ್) ಕಾರ್ಯ ನಿರ್ವಾಹಕ ನಿರ್ದೇಶಕ ಸಂಜಯ್ ಪರಾಶರ್, ಶೈನಿ ಶಿಪ್ಪಿಂಗ್ ಮತ್ತು ಲಾಜಿಸ್ಟಿಕ್ಸ್ ಪ್ರೈವೇಟ್ ಲಿಮಿಟೆಡ್ ಸಂಸ್ಥಾಪಕ ಸ್ಟ್ಯಾನಿ ಲಿಯೋ ನೊರೊನ್ಹಾ ಉಪಸ್ಥಿತರಿದ್ದರು. ಇಂಡಿಯನ್ ಆಯಿಲ್…
ಬೆಂಗಳೂರು: ವಿದ್ಯಾರ್ಥಿಗಳಿಗೆ ಉಜ್ವಲ ಭವಿಷ್ಯವಿದ್ದು, ಮಾದಕ ವ್ಯಸನಕ್ಕೆ ಸಿಲುಕಿ ಜೀವನ ಹಾಳು ಮಾಡಿಕೊಳ್ಳಬೇಡಿ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ಬೆಂಗಳೂರು ನಗರ ಪೊಲೀಸ್ ವತಿಯಿಂದ ನಗರದ ಕಂಠೀರವ ಕ್ರೀಡಾಂಗಣದಲ್ಲಿ ಆಯೋಜಿಸಿದ್ದ ‘ಅಂತಾರಾಷ್ಟ್ರೀಯ ಮಾದಕ ವ್ಯಸನ ಮತ್ತು ಅಕ್ರಮ ಕಳ್ಳ ಸಾಗಾಣಿಕೆ ವಿರೋಧಿ ದಿನ’ವನ್ನು ಉದ್ಘಾಟಿಸಿ ಅವರು ಮಾತನಾಡಿದರು. ಕಳೆದ ಒಂದು ವರ್ಷದಲ್ಲಿ ನಾಲ್ಕು ಸಾವಿರ ಕೆ.ಜಿ. ಗಾಂಜಾ ಸೇರಿದಂತೆ 45 ಕೋಟಿ ರೂ. ಮೌಲ್ಯದ ವಿವಿಧ ಬಗೆಯ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ವಿದೇಶಿ ವಿದ್ಯಾರ್ಥಿಗಳು ಡ್ರಗ್ಸ್ ದಂಧೆಯಲ್ಲಿ ತೊಡಗುತ್ತಿದ್ದು, 200ಕ್ಕು ಹೆಚ್ಚು ವಿದೇಶಿಗರನ್ನು ಗಡಿಪಾರು ಮಾಡಲಾಗಿದೆ ಎಂದರು. ವಿಶ್ವದಲ್ಲಿ ಮಾದಕ ವಸ್ತುಗಳು ಮತ್ತು ಮಾನವ ಕಳ್ಳ ಸಾಗಾಣಿಕೆ ವಿರುದ್ಧ ಆಂದೋಲನ ಮಾಡಲಾಗುತ್ತಿದೆ. ಡ್ರಗ್ಸ್ನಿಂದಾಗುವ ಅನಾಹುತಗಳ ಬಗ್ಗೆ ಜಾಗೃತಿ ಮೂಡಿಸಲಾಗುತ್ತಿದೆ. ಮನುಷ್ಯನಿಗೆ ಆಗುವ ದೈಹಿಕ ಮತ್ತು ಮಾನಸಿಕ ದುಷ್ಪರಿಣಾಮಗಳನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಹೇಳಿದರು ಡ್ರಗ್ಸ್ ದಂಧೆಯನ್ನು ಮಟ್ಟ ಹಾಕಲು ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳಲಾಗುತ್ತಿದೆ. ಬರೀ ಕಾನೂನಿಂದ…
ಬೆಂಗಳೂರು : ಮಲೆ ಮಹದೇಶ್ವರ ಬೆಟ್ಟದ ಅರಣ್ಯ ಪ್ರದೇಶದಲ್ಲಿ ಒಂದು ಹುಲಿ ಮತ್ತು ಮೂರು ಮರಿಗಳು ಅಸಜ ಸಾವಿಗೀಡಾಗಿರುವ ಬಗ್ಗೆ ದುಃಖ ವ್ಯಕ್ತಪಡಿಸಿರುವ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ, ಪಿಸಿಸಿಎಫ್ ನೇತೃತ್ವದ ತಂಡದ ತನಿಖೆಗೆ ಆದೇಶ ನೀಡಿದ್ದಾರೆ. ಈ ಸಂಬಂಧ ಅಪರ ಮುಖ್ಯ ಕಾರ್ಯದರ್ಶಿಗಳು ಮತ್ತು ಮುಖ್ಯ ವನ್ಯಜೀವಿ ಪರಿಪಾಲಕರಿಗೆ ಲಿಖಿತ ಸೂಚನೆ ನೀಡಿರುವ ಸಚಿವರು, ಕಾನನದಲ್ಲಿ 4 ಹುಲಿಗಳು ಸಾವಿಗೀಡಾಗಿರುವುದನ್ನು ಸರ್ಕಾರ ಅತ್ಯಂತ ಗಂಭೀರವಾಗಿ ಪರಿಗಣಿಸಿದ್ದು ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಸೂಚಿಸಿದ್ದಾರೆ. ಅಳಿವಿನಂಚಿನಲ್ಲಿರುವ ಹುಲಿಗಳ ಸಂರಕ್ಷಣೆಗೆ ದಿವಂಗತ ಪ್ರಧಾನಿ ಇಂದಿರಾಗಾಂಧೀ ಅವರು ಹುಲಿ ಯೋಜನೆ (ಪ್ರಾಜೆಕ್ಟ್ ಟೈಗರ್) ಆರಂಭಿಸಿದ ತರುವಾಯ ರಾಜ್ಯದಲ್ಲಿಯೂ ಹುಲಿಗಳ ಸಂರಕ್ಷಣೆಗೆ ಕ್ರಮ ವಹಿಸಲಾಗಿದ್ದು, 563 ಹುಲಿಗಳೊಂದಿಗೆ ಕರ್ನಾಟಕ ದೇಶದಲ್ಲೇ 2ನೇ ಸ್ಥಾನದಲ್ಲಿದೆ. ಹುಲಿ ಸಂರಕ್ಷಣೆಗೆ ಹೆಸರಾಗಿರುವ ರಾಜ್ಯದಲ್ಲಿ, ಒಂದೇ ದಿನ 4 ಹುಲಿಗಳು ಅಸಹಜ ಸಾವಿಗೀಡಾಗಿರುವುದು ಅತ್ಯಂತ ನೋವು ತಂದಿದೆ ಎಂದು ತಿಳಿಸಿದ್ದಾರೆ. ಕೂಡಲೇ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿಗಳ…
ನವದೆಹಲಿ: ಅಹಮದಾಬಾದ್ ಏರ್ ಇಂಡಿಯಾ ಅಪಘಾತದ ನವೀಕರಣ: ಜೂನ್ 12 ರಂದು ಅಹಮದಾಬಾದ್ನಲ್ಲಿ ಅಪಘಾತಕ್ಕೀಡಾದ ಏರ್ ಇಂಡಿಯಾ ವಿಮಾನದ ಕಪ್ಪು ಪೆಟ್ಟಿಗೆಗಳಿಂದ ದತ್ತಾಂಶ ಹೊರತೆಗೆಯುವ ಪ್ರಕ್ರಿಯೆಯು ಪ್ರಸ್ತುತ ನಡೆಯುತ್ತಿದೆ ಎಂದು ಸರ್ಕಾರ ಗುರುವಾರ ದೃಢಪಡಿಸಿದೆ ಎಂದು ಸುದ್ದಿ ಸಂಸ್ಥೆ ಪಿಟಿಐ ವರದಿ ಮಾಡಿದೆ. ವಿಮಾನ ಅಪಘಾತ ತನಿಖಾ ಬ್ಯೂರೋ (ಎಎಐಬಿ) ಮುಖ್ಯಸ್ಥರ ನೇತೃತ್ವದ ಬಹು-ಶಿಸ್ತಿನ ತಂಡವು ವಿಮಾನ ಅಪಘಾತದ ತನಿಖೆ ನಡೆಸುತ್ತಿದೆ. ಅಧಿಕಾರಿಗಳ ಪ್ರಕಾರ, ತನಿಖೆಯ ಭಾಗವಾಗಿ ಕಾಕ್ಪಿಟ್ ವಾಯ್ಸ್ ರೆಕಾರ್ಡರ್ ಮತ್ತು ಫ್ಲೈಟ್ ಡೇಟಾ ರೆಕಾರ್ಡರ್ನ ವಿಶ್ಲೇಷಣೆಯನ್ನು ನಡೆಸಲಾಗುತ್ತಿದೆ. ಮುಂಭಾಗದ ಕಪ್ಪು ಪೆಟ್ಟಿಗೆಯಿಂದ ಕ್ರ್ಯಾಶ್ ಪ್ರೊಟೆಕ್ಷನ್ ಮಾಡ್ಯೂಲ್ (ಸಿಪಿಎಂ) ಅನ್ನು ಸುರಕ್ಷಿತವಾಗಿ ಹಿಂಪಡೆಯಲಾಯಿತು. ಜೂನ್ 25, 2025 ರಂದು, ಮೆಮೊರಿ ಮಾಡ್ಯೂಲ್ ಅನ್ನು ಯಶಸ್ವಿಯಾಗಿ ಪಡೆಯಲಾಯಿತು ಮತ್ತು ಅದರ ಡೇಟಾವನ್ನು ಎಎಐಬಿ ಲ್ಯಾಬ್ನಲ್ಲಿ ಡೌನ್ಲೋಡ್ ಮಾಡಲಾಯಿತು ಎಂದು ಹೇಳಿಕೆ ತಿಳಿಸಿದೆ. ಈ ಪ್ರಯತ್ನಗಳು ಅಪಘಾತಕ್ಕೆ ಕಾರಣವಾದ ಘಟನೆಗಳ ಅನುಕ್ರಮವನ್ನು ಪುನರ್ನಿರ್ಮಿಸುವುದು ಮತ್ತು ವಾಯುಯಾನ ಸುರಕ್ಷತೆಯನ್ನು ಹೆಚ್ಚಿಸಲು ಮತ್ತು ಭವಿಷ್ಯದಲ್ಲಿ ಸಂಭವಿಸುವ…
ಬೆಂಗಳೂರು: “ಕೇಂದ್ರ ಸಚಿವ ಸೋಮಣ್ಣ ಅವರ ಮನವಿ ಮೇರೆಗೆ ಇದೇ ತಿಂಗಳು 30ರಂದು ನಡೆಯಬೇಕಿದ್ದ ಹೇಮಾವತಿ ಲಿಂಕ್ ಕೆನಾಲ್ ಸಭೆಯನ್ನು ಜುಲೈ 4-5ಕ್ಕೆ ಮುಂದೂಡಲಾಗಿದೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಸೋಮಣ್ಣ ಅವರು ಸ್ಥಳೀಯ ಸಂಸದರೂ ಆಗಿರುವ ಕಾರಣ ಅವರಿಗೆ ಅನುಕೂಲವಾಗುವಂತೆ ಸಭೆ ಮುಂದೂಡಲಾಗಿದೆ. ಈ ಬಗ್ಗೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ” ಎಂದು ತಿಳಿಸಿದರು. ಎತ್ತಿನಹೊಳೆ ಯೋಜನೆ ಗುತ್ತಿಗೆದಾರರ ಸಭೆ ಮುಂದೂಡಿಕೆ: “ಇಂದು ತುಮಕೂರಿನಲ್ಲಿ ಯೋಜನೆ ಕಾಮಗಾರಿಯ ಗುತ್ತಿಗೆದಾರರ ಸಭೆ ನಡೆಸಲು ತೀರ್ಮಾನಿಸಲಾಗಿತ್ತು. ಆದರೆ ಪರಮೇಶ್ವರ್ ಅವರ ಅನುಪಸ್ಥಿತಿ ಹಿನ್ನೆಲೆಯಲ್ಲಿ ಈ ಸಭೆಯನ್ನು ಬೆಂಗಳೂರಿಗೆ ಸ್ಥಳಾಂತರಿಸಲಾಗಿದೆ. ಈ ಸಭೆ ನಾಳೆ ಅಥವಾ ನಾಡಿದ್ದು ನಡೆಯಲಿದೆ” ಎಂದು ಹೇಳಿದರು. “ಆದ್ಯತೆ ಮೇರೆಗೆ ಎತ್ತಿನಹೊಳೆ ಯೋಜನೆಯನ್ನು ನಿಗದಿತ ಸಮಯದ ಒಳಗೆ ಪೂರ್ಣಗೊಳಿಸಬೇಕು ಎಂದು ಮುಖ್ಯಮಂತ್ರಿಗಳ ನಿರ್ದೇಶನ ನೀಡಿದ್ದಾರೆ. ಹೀಗಾಗಿ ಈ ಯೋಜನೆ ಕಾಮಗಾರಿ ಪರಿಶೀಲನೆ ಮಾಡಲಾಗುತ್ತಿದೆ.…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಆಡಳಿತದಲ್ಲಿ ಯಾವುದೇ ಹಿಡಿತ ಕಳೆದುಕೊಂಡಿಲ್ಲ. ಇದು ಮಾಧ್ಯಮಗಳ ಸೃಷ್ಟಿ ಎಂಬುದಾಗಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರ ನಿವಾಸದ ಬಳಿ ಜಲಸಂಪನ್ಮೂಲ ಸಚಿವರೂ ಆಗಿರುವ ಡಿಸಿಎಂ ಶಿವಕುಮಾರ್ ಅವರು ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. ಶಾಸಕ ಬಿ.ಆರ್ ಪಾಟೀಲ್ ಅವರ ಭೇಟಿ ಬಗ್ಗೆ ಕೇಳಿದಾಗ, “ಪಕ್ಷದ ಅಧ್ಯಕ್ಷನಾಗಿ ನಾನು ವಾಸ್ತವಾಂಶ ತಿಳಿಯಬೇಕಾಗಿತ್ತು. ಹೀಗಾಗಿ ಅವರನ್ನು ಕರೆಸಿ ಮಾತನಾಡಿದೆ. ಅವರು ತಮ್ಮ ವಿಚಾರ ಹೇಳಿದ್ದಾರೆ. ನಾನು ಸಿಎಂ ಜೊತೆ ಚರ್ಚೆ ಮಾಡುತ್ತೇನೆ. ಸಚಿವ ಜಮೀರ್ ಅವರೊಂದಿಗೂ ಮಾತನಾಡುತ್ತೇವೆ. ಈ ಮಧ್ಯೆ ನಮ್ಮ ಪಕ್ಷದ ವರಿಷ್ಠರೂ ಕೂಡ ಆಗಮಿಸುತ್ತಿದ್ದು, ಎಲ್ಲರ ಜೊತೆ ಮಾತನಾಡಿ ಮಾಹಿತಿ ಪಡೆಯಲಿದ್ದಾರೆ” ಎಂದು ತಿಳಿಸಿದರು. ಹಲವು ಶಾಸಕರು ಸರ್ಕಾರದ ವಿರುದ್ಧ ಧ್ವನಿ ಎತ್ತಿದ್ದು, ಇದು ಮುಖ್ಯಮಂತ್ರಿಗಳು ಆಡಳಿತದಲ್ಲಿ ಹಿಡಿತ ಕಳೆದುಕೊಳ್ಳುತ್ತಿದ್ದಾರೆಯೇ ಎಂದು ಕೇಳಿದಾಗ, “ಈ ವಿಚಾರವಾಗಿ ನನಗೆ ಮಾಹಿತಿ ಇಲ್ಲ. ಏನಾದರೂ ಇದ್ದರೆ ನಮ್ಮ ಪಕ್ಷದ ವರಿಷ್ಠರ ಜೊತೆ ನಾನು ಹಾಗೂ ಮುಖ್ಯಮಂತ್ರಿಗಳು…
ಬೆಂಗಳೂರು: ಸಂಕಷ್ಟದಲ್ಲಿರುವಂತ ರಾಜ್ಯದ ಕಲಾವಿದರ ಮಾಸಾಶನವನ್ನು ಸರ್ಕಾರವು 2000 ರೂ.ನಿಂದ 2500 ರೂಪಾಯಿಗೆ ಏರಿಕೆ ಮಾಡಿ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಎಸ್ ಗೀತಾಬಾಯಿ ಅವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ಕಷ್ಟಪರಿಸ್ಥಿತಿಯಲ್ಲಿರುವ ಸಾಹಿತಿ/ಕಲಾವಿದರ ಮಾಸಾಶನ ಹಾಗೂ ವಿಧವಾ ಮಾಸಾಶನ ಪಾವತಿ ಮಾಡಲು 2025-26ನೇ ಸಾಲಿನಲ್ಲಿ ಲೆಕ್ಕಶೀರ್ಷಿಕೆ: 2205-00-102-1-18-251ರಡಿ ಹಂಚಿಕೆ ಮಾಡಿರುವ ರೂ.4392.82 ಲಕ್ಷಗಳಲ್ಲಿ ಏಪ್ರಿಲ್-2025 ರಿಂದ ಜೂನ್-2025ರವರೆಗಿನ ಮೊದಲನೇ ಕಂತಿನ ಅನುದಾನ ರೂ.10,98,21,000/-ಗಳನ್ನು ನಿರ್ದೇಶಕರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರಿಗೆ ಬಿಡುಗಡೆ ಮಾಡಿ ಆದೇಶಿಸಲಾಗಿರುತ್ತದೆ ಎಂದಿದ್ದಾರೆ. 2025-26ನೇ ಸಾಲಿನ ಆಯವ್ಯಯ ಘೋಷಣೆ ಕಂಡಿಕೆ-374 ರಲ್ಲಿನ ‘ಕಲೆ, ಸಾಹಿತ್ಯ ಮತ್ತು ಸಾಂಸ್ಕೃತಿಕ ಕ್ಷೇತ್ರದಲ್ಲಿನ ಕಲಾವಿದರ ಮಾಸಾಶನವನ್ನು 2,000 ರೂ.ಗಳಿಂದ 2,500 ರೂ.ಗಳಿಗೆ ಹೆಚ್ಚಿಸಲಾಗುವುದು ಎಂಬ ಘೋಷಣೆಯನ್ನು 2025-26ರ ಆಯವ್ಯಯ ಸೂಚನೆ ದಿನಾಂಕ:09.04.2025ರಲ್ಲಿ ತಿಳಿಸಿರುವಂತೆ 2025-26ನೇ ಸಾಲಿನ ಲೆಕ್ಕಶೀರ್ಷಿಕೆ:2205-00-102-1-8-251ರಡಿ ಒದಗಿಸಿರುವ ರೂ.4392.82 ಲಕ್ಷಗಳ ಅನುದಾನದಿಂದ ಅನುಷ್ಠಾನಗೊಳಿಸಲು ಸಹಮತಿ ನೀಡಿರುತ್ತದೆ ಎಂದು ತಿಳಿಸಿದ್ದಾರೆ.…














