Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ ಅವರ ಹೇಳಿಕೆಗೆ ವಿಧಾನ ಪರಿಷತ್ ಸದಸ್ಯ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷರಾದಂತ ರಮೇಶ್ ಬಾಬು ಈ ಕೆಳಕಂಡಂತೆ ತಿರುಗೇಟು ನೀಡಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಆರ್ ಎಸ್ ಎಸ್ ಬ್ಯಾನ್ ಗೆ ಸಂಬಂಧಪಟ್ಟಂತೆ ಖಾಸಗಿ ಚಾನೆಲ್ ಗೆ ಸಂದರ್ಶನ ನೀಡಿರುವ ನ್ಯಾಯಮೂರ್ತಿ ಸಂತೋಷ ಹೆಗ್ಡೆರವರು ಹಲವಾರು ವಿಷಯಗಳನ್ನು ಪ್ರಸ್ತಾಪ ಮಾಡುವುದರ ಮೂಲಕ ಒಂದು ಹೊಸ ಚರ್ಚೆಯನ್ನು ಹುಟ್ಟು ಹಾಕಿದ್ದಾರೆ. ಆರ್ ಎಸ್ ಎಸ್ ಬ್ಯಾನ್ ಮಾಡುವುದಾದರೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡಬಹುದಲ್ಲವೇ ಎಂದು ಹೇಳುವ ಮೂಲಕ ತಮ್ಮ ದ್ವಂದ್ವ ವ್ಯಕ್ತಿತ್ವವನ್ನು ಜನರ ಮುಂದೆ ಬಿಚ್ಚಿಟ್ಟಿದ್ದಾರೆ. ಸ್ವತಂತ್ರ ಪೂರ್ವದಲ್ಲಿ ಎರಡು ಬಾರಿ ಮತ್ತು ಸ್ವತಂತ್ರಾ ನಂತರ ಮೂರು ಬಾರಿ ಬ್ಯಾನ್ ಗೆ ಒಳಗಾಗಿದ್ದ ಸಂಘ ಪರಿವಾರದ ಪರವಾಗಿ ಸಮರ್ಥ ವಕ್ತಾರರಾಗಿ ಕೆಲಸ ಮಾಡುವ ಜವಾಬ್ದಾರಿಯನ್ನು ಹೆಗಲಿಗೆ ಹೇರಿಸಿಕೊಂಡಿದ್ದಾರೆ ಎಂದಿದ್ದಾರೆ. ಸರ್ವೋಚ್ಚ ನ್ಯಾಯಾಲಯದ ಮುಖ್ಯ ನ್ಯಾಯಮೂರ್ತಿಗಳ ಮೇಲೆ ಹಲ್ಲೆಗೆ ಯತ್ನಿಸಿದ ಸನಾತನಿಗಳ…

Read More

ಬೆಂಗಳೂರು: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಎನ್ನುವುದೇ ಬೋಗಸ್. ದುಡ್ಡು ಹೊಡೆಯುವುದಕ್ಕೆ ಮಾಡಿರುವ ಸುಲಿಗೆ ಕಾರ್ಯಕ್ರಮ ಇದಾಗಿದೆ. ಯಾರೂ ಖಾತಾ ಬದಲಾವಣೆ ಮಾಡಿಸಿಕೊಳ್ಳಲು ಹಣ ಕಟ್ಟಬೇಡಿ. ಎರಡು ವರ್ಷಗಳಲ್ಲಿ ಜೆಡಿಎಸ್- ಬಿಜೆಪಿ ಮೈತ್ರಿ ಸರ್ಕಾರ ಅಧಿಕಾರಕ್ಕೆ ಬರುತ್ತದೆ. ಕಡಿಮೆ ದರದಲ್ಲಿ ನಿಮಗೆ ಖಾತೆ ಮಾಡಿಕೊಡುತ್ತೇವೆ. ಈ ಸರ್ಕಾರದ ಬೋಗಸ್ ಆಮಿಷಕ್ಕೆ ಮರುಳಾಗಬೇಡಿ. ಇದು ನಾನು ಬೆಂಗಳೂರು ಜನತೆಗೆ ನೀಡುತ್ತಿರುವ ಮುಕ್ತ ಕರೆ ಎಂಬುದಾಗಿ ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಹೇಳಿದ್ದಾರೆ. ಬಿ ಖಾತಾವನ್ನು ಬಿ ಖಾತೆಗೆ ಪರಿವರ್ತನೆ ಮಾಡಿಕೊಳ್ಳಲು ರಾಜ್ಯ ಕಾಂಗ್ರೆಸ್ ಸರಕಾರ ರೂಪಿಸಿರುವ ಕಾರ್ಯಕ್ರಮದ ಕುರಿತು ಕೇಂದ್ರ ಸರಕಾರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ. ಕುಮಾರಸ್ವಾಮಿ ಅವರು ಹೇಳಿದ ಮಾತುಗಳಿವು. ಕಾಂಗ್ರೆಸ್ ಸರ್ಕಾರ ಹಗಲು ದರೋಡೆ ಮಾಡುತ್ತಿದೆ. ಜನರನ್ನು ಸುಲಿಗೆ ಸರಕನ್ನಾಗಿ ಮಾಡಿಕೊಂಡಿದೆ. ಬೆಂಗಳೂರು ಜನರಿಗೆ ನಾನು ಹೇಳಲು ಬಯಸುತ್ತೇನೆ. ಯಾವುದೇ ಕಾರಣಕ್ಕೂ ಒಂದು ನಯಾಪೈಸೆ ಕಟ್ಟಬೇಡಿ. ಯಾವುದೇ ಕಾರಣಕ್ಕೂ ಎರಡು ವರ್ಷ ಖಾತೆ ಮಾಡಿಸಿಕೊಳ್ಳಬೇಡಿ.…

Read More

ಶಿವಮೊಗ್ಗ: ಮಾಜಿ ಮುಖ್ಯಮಂತ್ರಿ ದಿವಂಗತ ಎಸ್.ಬಂಗಾರಪ್ಪ ಅವರ ಹುಟ್ಟಿದ ಹಬ್ಬ ನಾಳೆಯಾಗಿದೆ. ಈ ಹಿನ್ನಲೆಯಲ್ಲಿ ಶಾಸಕ ಗೋಪಾಲಕೃಷ್ಣ ಬೇಳೂರು ಅವರು ಸಾಗರ ಉಪವಿಭಾಗೀಯ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಿಸುವ ಮೂಲಕ, ಅವರ ಹುಟ್ಟಿದ ಹಬ್ಬವನ್ನು ಆಚರಿಸಲಿದ್ದಾರೆ. ಈ ಬಗ್ಗೆ ಶಾಸಕರ ಕಚೇರಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು, ಕರ್ನಾಟಕದ ರಾಜಕಾರಣದ ಧ್ರುವತಾರೆ ಮಾಜಿ ಮುಖ್ಯಮಂತ್ರಿ ದಿವಂಗತ ಎಸ್. ಬಂಗಾರಪ್ಪ ನವರ ಹುಟ್ಟುಹಬ್ಬ ದ ಪ್ರಯುಕ್ತ ದಿನಾಂಕ:-26-10-2025 ರಂದು ಬೆಳಗ್ಗೆ 10:30 ಕ್ಕೆ ಸಾಗರದ ಉಪವಿಭಾಗೀಯ ಆಸ್ಪತ್ರೆಯ ರೋಗಿಗಳಿಗೆ ಹಣ್ಣು-ಹಂಪಲು ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದಿದೆ. ಇನ್ನೂ ಶಾಸಕ ಹಾಗೂ ಕರ್ನಾಟಕ ರಾಜ್ಯ ಅರಣ್ಯ ಕೈಗಾರಿಕಾ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಗೋಪಾಲಕೃಷ್ಣ ಬೇಳೂರು ಅವರು ಈ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ ಎಂಬುದಾಗಿ ತಿಳಿಸಿದೆ. ನಾಳೆ ಸೊರಬದ ಬಂಗಾರ ದಾಮದಲ್ಲಿ ನಮನ-ಚಿಂತನ ಸನ್ಮಾನ ಕಾರ್ಯಕ್ರಮ ಆಯೋಜನೆ ದಿನಾಂಕ: 26-10-2025ರ ಭಾನುವಾರದ ನಾಳೆ ರಾಜ್ಯ ಕಂಡ ದೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಎಸ್. ಬಂಗಾರಪ್ಪ’ನವರ 93ನೇ…

Read More

ಬೆಂಗಳೂರು : ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು, ಸಮಾಜಮುಖಿಯಾಗಿ ಸೇವೆ ಸಲ್ಲಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಬೆಂಗಳೂರು ಇವರ ವತಿಯಿಂದ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ 2025ರ ಶೈಕ್ಷಣಿಕ ಸಾಲಿನ ನೀಟ್ ಪರೀಕ್ಷೆಯಲ್ಲಿ ಉತ್ತಮ ಅಂಕ ಪಡೆದು ಸರ್ಕಾರಿ ಖೋಟ ಮೊದಲನೇ ವರ್ಷದ MBBS ಶಿಕ್ಷಣಕ್ಕೆ ಪ್ರವೇಶ ಪಡೆದ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳಿಗೆ ಪ್ರೇರಣಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದರು. ಕಾಳಿದಾಸ ಹೆಲ್ತ್ ಎಜುಕೇಶನ್ ಮತ್ತು ಅಹಿಲ್ಯಾ ಟ್ರಸ್ಟ್ ಸಂಸ್ಥೆಯು ವೈದ್ಯಕೀಯ ಶಿಕ್ಷಣಕ್ಕೆ ಪ್ರವೇಶ ಪಡೆದ ಪ್ರತಿಭಾವಂತ ಹಿಂದುಳಿದ ವರ್ಗಗಳ ವಿದ್ಯಾರ್ಥಿಗಳನ್ನು ಗುರುತಿಸಿ ಗೌರವಿಸುತ್ತಿರುವುದು ಪ್ರಶಂಸಾರ್ಹ ಕಾರ್ಯ. ಎಂಬಿಬಿಎಸ್ ಶಿಕ್ಷಣಕ್ಕೆ ಆಯ್ಕೆಯಾಗಿರುವ ವಿದ್ಯಾರ್ಥಿಗಳಿಗೆ ಸ್ಕಾಲರ್ ಶಿಪ್ ನೀಡಿ ಪ್ರೋತ್ಸಾಹ ನೀಡಲಾಗುತ್ತಿದೆ. ಸಂಸ್ಥೆಯ ರೂವಾರಿಗಳು, ಉತ್ತಮ ಸಾಮಾಜಿಕ ಕೆಲಸದಲ್ಲಿ ತೊಡಗಿಕೊಂಡಿರುವುದು ಅನುಕರಣೀಯವಾದುದು ಎಂದು ಪ್ರಶಂಸಿದರು. ಗಳಿಸಿದ ಸಂಪತ್ತಿನ ಅಲ್ಪಮೊತ್ತ ಸಮಾಜದ ಒಳಿತಿಗೆ ಬಳಸಿ ವಿದ್ಯಾರ್ಥಿವೇತನ ಪಡೆಯುವ ವೈದ್ಯಕೀಯ ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು,…

Read More

ಮಂಡ್ಯ: ನಮಗೆ RSS ಮಾತ್ರ ಅಲ್ಲ ಶತ್ರು ಅಸಮಾನತೆಯ ವ್ಯವಸ್ಥೆ ಶತ್ರು. ಪ್ರತಿಯೊಬ್ಬರಿಗೂ ಹೋರಾಟ, ಪಥಸಂಚಲನ, ರ್ಯಾಲಿ ಮಾಡುವ ಹಕ್ಕು ಇದೆ. RSS ಗೆ ಅನುಮತಿ ಇದೆ ಅಂದ್ರೆ ಭೀಮ್ ಆರ್ಮಿ ಗೂ ಇದೆ ಎಂಬುದಾಗಿ ನಟ ಚೇತನ್ ಅಹಿಂಸಾ ಹೇಳಿದ್ದಾರೆ. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಮನುವಾದಿ ಪಕ್ಷಗಳು ಕಾಂಗ್ರೆಸ್ ನ ಕೆಲವು ಮಿನಿಸ್ಟರ್ ಗಳು ದಲಿತ ಸಂಘಟನೆಗಳನ್ನ ಅವರ ವಯಕ್ತಿಕ ರಾಜಕೀಯ ಲಾಭಕ್ಕೆ ಬಳಿಸಿಕೊಂಡಿದ್ದಾರೆ. ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ನಲ್ಲಿ ಅವರು ಬಾಬಾ ಸಾಹೇಬ್ ತರನೇ ದಲಿತರಾಗಿ ಹುಟ್ಟಿರಬಹುದು. ಆದ್ರೆ ಕುವೆಂಪು ಅವರ ಸಿದ್ದಾಂತ ಉಳಿಸುತ್ತಿರುವವರು ನಾವು ಸಮಾನತವಾದಿಗಳು. ಜಾತಿ ರಾಜಕೀಯ ಮಾಡ್ತಾರೆ ಅಷ್ಟೆ. ಪಕ್ಷದವರಿಗೆ ಶತ್ರು ಯಾರು? ಬೇರೆ ಪಕ್ಷದವರು ಎಂದರು. ದಲಿತ ಸಂಘಟನೆಗೆ ಶತ್ರು ಯಾರು? ಇಡೀ ಅಸಮಾನತೆಯ ಅನ್ಯಾಯದ ವ್ಯವಸ್ಥೆ. ಪ್ರತಿಯೊಬ್ಬರೂ ಅವರದೇ ಹಕ್ಕು ಇದೆ. ನಮಗೆ RSS ಮಾತ್ರ ಅಲ್ಲ ಶತ್ರು ಅಸಮಾನತೆಯ ವ್ಯವಸ್ಥೆ ಶತ್ರು. ನಾವು ಕುವೆಂಪು ಅನುಯಾಯಿಗಳು. ಯಾರು ಸಹ…

Read More

ಬೆಂಗಳೂರು: ನಗರದ ಪರಪ್ಪನ ಕೇಂದ್ರ ಕಾರಾಗೃಹದಲ್ಲಿ ರಾಜಾತಿಥ್ಯದ ಬಗ್ಗೆ ಸುದ್ದಿಯಾಗಿ ಕೆಲ ದಿನಗಳವರೆಗೆ ಅಷ್ಟೇ ಬಂದ್ ಆದರೇ, ಮತ್ತೆ ಅದೇ ಪ್ರಕ್ರಿಯೆ ನಡೆಯುತ್ತಿದೆ ಎಂಬುದಕ್ಕೆ ಈ ಘಟನೆಯೇ ಸಾಕ್ಷಿಯಾಗಿದೆ. ಸಜಾ ಬಂಧಿಯೊಬ್ಬರ ಕೈದಿಯ ಪತ್ನಿ, ಜೈಲಿನೊಳಗೆ ಭೇಟಿ ನೀಡಿ, ಅವರೊಂದಿಗೆ ಪೋಟೋ ತೆಗೆಸಿಕೊಂಡಿರುವಂತ ಪೋಟೋಗಳು ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿವೆ. ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಮೊಬೈಲ್ ಬಳಕೆ ನಿಷೇಧಿಸಲಾಗಿದೆ. ಆಗಾಗ ಹಿರಿಯ ಅಧಿಕಾರಿಗಳು ಜೈಲಿನ ಮೇಲೆ ದಾಳಿ ನಡೆಸಿ ಇದಕ್ಕೆ ಬ್ರೇಕ್ ಹಾಕಲಾಗಿತ್ತು. ಇದರ ನಡುವೆಯೂ ಪರಪ್ಪನ ಅಗ್ರಹಾರದಲ್ಲಿ ಕೈದಿಗಳಿಗೆ ರಾಜಾತಿಥ್ಯ ಮುಂದುವರೆದಿದೆ. ಹೌದು ಪರಪ್ಪನ ಅಗ್ರಹಾರ ಜೈಲಿನಲ್ಲಿ ಕೈದಿಗಳಿಗೆ ರಾಜಾತಿಥಅಯ ಮುಂದುವರೆದಿದೆ. ಸಜಾ ಕೈದಿಯೊಬ್ಬನ ಪತ್ನಿ ರಾಜಾರೋಷವಾಗಿ ಜೈಲಿನೊಳಗೆ ಎಂಟ್ರಿಕೊಟ್ಟಿದ್ದಾರೆ. ಇದಷ್ಟೇ ಅಲ್ಲದೇ ಜೈಲಿನಲ್ಲಿ ಭೇಟಿ ಮಾಡಿ ಪೋಟೋವನ್ನು ಸಜಾಬಂಧಿಯೊಂದಿಗೆ ತೆಗೆಸಿಕೊಂಡು ಶೇರ್ ಮಾಡಿದ್ದಾರೆ. ಮಾರಪ್ಪ ಎಂಬಾತನ ಕೊಲೆ ಕೇಸ್ ನಲ್ಲಿ ಜೈಲನ್ನು ಸೇರಿರುವಂತ ಸಜಾಬಂಧಿ ಇವರಾಗಿದ್ದಾರೆ. ರಫೀಕ್ ಮತ್ತು ಸಾದಿಕ್ ಅಹಮ್ಮದ್ ಎಂಬುವರು ಜೈಲು…

Read More

ಬೆಂಗಳೂರು : ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಚರ್ಚೆ, ವಾದ ವಿವಾದ ಇರಬೇಕು. ಹಿಟ್ ಅಂಡ್ ರನ್, ಬ್ಲ್ಯಾಕ್ ಮೇಲ್ ಮಾಡುವುದಲ್ಲ. ಕುಮಾರಸ್ವಾಮಿ ನನ್ನ ವಿರುದ್ಧ ಇರುವ ದಾಖಲೆ ತಂದು ಬಹಿರಂಗ ಚರ್ಚೆಯಲ್ಲಿ ಭಾಗವಹಿಸಲಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿರುಗೇಟು ನೀಡಿದ್ದಾರೆ. ನಗರದ ಸಿಟಿ ಸಿವಿಲ್ ಕೋರ್ಟ್ ಬಳಿ ಮಾಧ್ಯಮಗಳ ಪ್ರಶ್ನೆಗೆ ಡಿ.ಕೆ. ಶಿವಕುಮಾರ್ ಅವರು ಶನಿವಾರ ಪ್ರತಿಕ್ರಿಯಿಸಿದರು. “ಶಿವಕುಮಾರ್ ಜೊತೆ ಮಾತನಾಡಲು ಆಗುತ್ತಾ, ಆ ಯೋಗ್ಯತೆ ಉಳಿಸಿಕೊಂಡಿದ್ದಾರಾ” ಎಂಬ ಕುಮಾರಸ್ವಾಮಿ ಅವರ ಹೇಳಿಕೆ ಬಗ್ಗೆ ಮಾಧ್ಯಮದವರು ಕೇಳಿದಾಗ, “ಕುಮಾರಸ್ವಾಮಿ ಬಳಿ ಸಾಕ್ಷಿಗುಡ್ಡೆ ಇದ್ದರೆ, ಜನಕ್ಕೆ, ರಾಜ್ಯಕ್ಕೆ ಒಳ್ಳೆಯದು ಮಾಡಿದ್ದರೆ ಅದನ್ನು ದಾಖಲೆ ಸಮೇತ ಬಂದು ಹೇಳಲಿ. ಜನ ಅವರಿಗೆ ಮತ ಕೊಟ್ಟು ದೊಡ್ಡ ಹುದ್ದೆ ನೀಡಿದ್ದಾರೆ. ಸಾರ್ವಜನಿಕವಾಗಿ ಬಂದು ಉತ್ತರ ನೀಡಲಿ. ಕೇವಲ ಸುಳ್ಳು ಆರೋಪ ಮಾಡುತ್ತಾ, ಬೇರೆಯವರಿಗೆ ಹೆದರಿಸುತ್ತಾ ಹೋಗುವುದಲ್ಲ. ಸದನದಲ್ಲಿ ಜೇಬು ತೋರಿಸಿ ಪೆನ್ ಡ್ರೈವ್ ತೆಗೆಯುತ್ತೇನೆ, ತೆಗೆಯುತ್ತೇನೆ ಎಂದು ಹೇಳಿದಂತೆ ಅಲ್ಲ. ಬಹಿರಂಗ ಚರ್ಚೆಗೆ ಬರಲಿ.…

Read More

ರಾಯಚೂರು: ಛಲವಾದಿ ನಾರಾಯಣಸ್ವಾಮಿ ಅವರೇ, ನಿಮ್ಮನ್ನೂ ಒಳಗೊಂಡತೆ ಈ ನಾಡಿನ ಎಲ್ಲಾ ಸಮುದಾಯದ ಮುಖಂಡರನ್ನು ಬೆಳಸುವಲ್ಲಿ ಹಾಗೂ ಅವರಿಗೆ ಉತ್ತಮ ಸ್ಥಾನಮಾನ ದೊರಕಿಸಿಕೊಡುವಲ್ಲಿ ನಮ್ಮ ಮಲ್ಲಿಕಾರ್ಜುನ ಖರ್ಗೇ ಜಿ ಹಾಗೂ ಅವರ ಕುಟುಂಬದ ಪಾತ್ರ ಹಿರಿದು. ಬದಲಾದ ರಾಜಕೀಯ ಸನ್ನಿವೇಶದಲ್ಲಿ ಆರ್ ಎಸ್ ಎಸ್ ಅನ್ನು ಮುಂದಿಟ್ಟುಕೊಂಡು ತಮ್ಮ ಅಸ್ತಿತ್ವಕ್ಕಾಗಿ, ಬೇಳೆ ಬೇಯಿಸಿಕೊಳ್ಳುತ್ತಿರುವುದು ನೀವು. ಖರ್ಗೆ ಅವರ ವಿರುದ್ಧ ತಾವು ಆಡಿರುವ ಮಾತುಗಳು ನಿಮಗೆ ಶೋಭೆ ತರುವುದಿಲ್ಲ ಎಂದು ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್‌ ಎಸ್‌ ಭೋಸರಾಜು ಪ್ರತಿಕ್ರಿಯಿಸಿದ್ದಾರೆ. ಪ್ರಿಯಾಂಕ ಖರ್ಗೆ ಅವರು ಎಷ್ಟು ಜನ ದಲಿತರನ್ನು ಗುತ್ತಿಗೆದಾರರನ್ನಾಗಿ ಮಾಡಿದ್ದಾರೆ. ಎಷ್ಟು ದಲಿತ ಅಭ್ಯರ್ಥಿಗಳಿಗೆ ನೌಕರಿ ಕೊಡಿಸಿದ್ದಾರೆ ಬೆಳಿಸಿದ್ದೀರಿ ಎಂದು ಪ್ರಶ್ನಿಸಿರುವ ವಿಧಾನ ಪರಿಷತ್‌ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣ ಸ್ವಾಮಿ ಅವರಿಗೆ ಸಚಿವ ಭೋಸರಾಜು ಎದಿರೇಟು ನೀಡಿದ್ದಾರೆ. ಪಕ್ಷ ಬದಲಾಯಿಸಿ ವೈಯುಕ್ತಿಕ ಲಾಭಕ್ಕಾಗಿ ಈ ರೀತಿ ಮನಬಂದಂತೆ ದೂಷಿಸುವುದು ಸರಿಯಲ್ಲ. ಛಲವಾದಿ ನಾರಾಯಣಸ್ವಾಮಿ ಅವರು…

Read More

ಬೆಂಗಳೂರು: ಕನ್ನಡದ ಹಲವು ಧಾರವಾಹಿಗಳಲ್ಲಿ ನಟಿಸಿ, ಹೆಸರು ಗಳಿಸಿದ್ದಂತ ಖ್ಯಾತ ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಅವರ ಸ್ನೇಹಿತೆಯ ಖಾಸಗಿ ವೀಡಿಯೋ ಕದ್ದು ಹಂಚಿದ್ದಲ್ಲದೇ, ಈ ವೀಡಿಯೋ ಇರಿಸಿಕೊಂಡು ಬ್ಲ್ಯಾಕ್ ಮೇಲ್ ಮಾಡಿದ ಕಾರಣಕ್ಕಾಗಿ ಅವರ ವಿರುದ್ಧ ಸಲ್ಲಿಸಲಾಗಿದ್ದ ದೂರಿನ ಬಳಿಕ ಈ ಎಫ್ಐಆರ್ ದಾಖಲಾಗಿದೆ. ಹೌದು.. ಸ್ನೇಹಿತೆಯ ಖಾಸಗಿ ವೀಡಿಯೋ ಹಾಗೂ ಪೋಟೋಗಳನ್ನು ಕದ್ದು ಹಂಚಿಕೆ ಮಾಡಿದ್ದಾರೆ. ಅಲ್ಲದೇ ಈ ವೀಡಿಯೋಗಳನ್ನು ಸೋಷಿಯಲ್ ಮೀಡಿಯಾದಲ್ಲಿ ಹಂಚಬಾರದು ಅಂದ್ರೆ 2 ಕೋಟಿ ರೂ ನೀಡುವಂತೆ ಬ್ಲ್ಯಾಕ್ ಮೇಲ್ ಮಾಡಿದ್ದಾರೆ ಎಂಬುದಾಗಿ ಪಾರ್ವತಿ ಎಂಬುವರು ದೂರು ನೀಡಿದ್ದರು. ಈ ದೂರು ಆಧರಿಸಿ ಶೃಂಗೇರಿ ಶಾರದಾ ಪೀಠದ ಜೋಯಿಸ್ ಕುಟುಂಬದ ಸದಸ್ಯೆ ಹಾಗೂ ಕಿರುತೆರೆ ನಟಿ ಆಶಾ ಜೋಯಿಸ್ ವಿರುದ್ದ ಪ್ರಕರಣ ದಾಖಲಾಗಿದೆ. ಅಂದಹಾಗೇ ತಾನು ಕೆಲಸ ಮಾಡುತ್ತಿದ್ದಂತ ಕಂಪನಿ ಮಾಲೀಕರನ್ನೇ ಪಾರ್ವತಿ ಮದುವೆಯಾಗಿದ್ದರು. ಇಂತಹ ಪಾರ್ವತಿಗೆ ತಾನು ಶೃಂಗೇರಿ ಮಠದ ಜೋಯಿಸ್ ಕುಟುಂಬದವಳು, ಸಿರಿಯಲ್ ನಟಿ ಎಂಬುದಾಗಿ ಆಶಾ…

Read More

ಬೆಂಗಳೂರು: ರಾಜ್ಯದ ಸ್ಥಳೀಯ ಯೋಜನಾ ಪ್ರದೇಶವನ್ನು ಹೊರತುಪಡಿಸಿದ ಪ್ರದೇಶದಲ್ಲಿ ಭೂಪರಿವರ್ತಿತ ಜಮೀನುಗಳಲ್ಲಿ ವಿನ್ಯಾಸ ಅನುಮೋದನೆಯ ಕುರಿತಂತೆ ಮಹತ್ವದ ಆದೇಶವನ್ನು ಸರ್ಕಾರ ಮಾಡಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಸುತ್ತೋಲೆ ಹೊರಡಿಸಿದ್ದು, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025 ರ ಪ್ರಕರಣ 199(ಬಿ) ರಲ್ಲಿ ಕಟ್ಟಡ ನಿರ್ಮಾಣ ಉದ್ದೇಶಗಳಿಗಾಗಿ ಇರುವ ಕಟ್ಟಡ ನಿವೇಶನಗಳಿಗಾಗಿ ಹೊಸ ಖಾತಾ ಅಥವಾ ಪಿ.ಐ.ಡಿ-ಯನ್ನು ನೀಡಲು, ಗ್ರಾಮ ಪಂಚಾಯಿತಿ ಅಥವಾ ಸರ್ಕಾರವು ಅಧಿಸೂಚನೆಯ ಮೂಲಕ ಗೊತ್ತುಪಡಿಸಲಾದ ಪ್ರಾಧಿಕಾರಗಳು, ಅಧಿಕಾರ ವ್ಯಾಪ್ತಿಯ ಯೋಜನಾ ಪ್ರಾಧಿಕಾರದ ಮೂಲಕ ಲೇಔಟ್ ಪ್ಲಾನಿಗಾಗಿ ಪೂರ್ವಾನುಮೋದನೆಯನ್ನು ಪಡೆದುಕೊಳ್ಳತಕ್ಕದ್ದು ಎಂದು ತಿಳಿಸಲಾಗಿರುತ್ತದೆ ಎಂದಿದ್ದಾರೆ. ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ ಅಧಿನಿಯಮ, 1993 ರ ಪ್ರಕರಣ 64 (5-ಎ) ರಲ್ಲಿ ಗ್ರಾಮ ಪಂಚಾಯತ್‌ಗಳು, ಕಟ್ಟಡ ಲೆಸೆನ್ಸ್ ಅಥವಾ ವಸತಿ ಅಥವಾ ವಾಸ ಸ್ಥಳಗಳ ಲೇಔಟ್‌ಗಳ ಅನುಮೋದನೆಗಳನ್ನು ನೀಡುವ ವಿಷಯದಲ್ಲಿ ನಗರ ಮತ್ತು…

Read More