Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು ನ1: ವಾಟಾಳ್ ಕನ್ನಡದ ವಿಚಾರದಲ್ಲಿ ರಾಜಿ ಮಾಡಿಕೊಳ್ಳದ ಹೋರಾಟಗಾರರು. ದೇವರಾಜ ಅರಸು ಅವರು ಮಂತ್ರಿ ಸ್ಥಾನ ಕೊಡ್ತೀನಿ ಎಂದು ಕರೆದರೂ ಕನ್ನಡ ಪಕ್ಷ ಮತ್ತು ಕನ್ನಡ ಹೋರಾಟ ಬಿಡಲು ವಾಟಾಳ್ ಅವರು ಒಪ್ಪಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮೆಚ್ವುಗೆ ವ್ಯಕ್ತಪಡಿಸಿದರು. ಮೈಸೂರು ಬ್ಯಾಂಕ್ ವೃತ್ತದ ನೃಪತುಂಗ ಮಂಟಪದಲ್ಲಿ ಭುವನೇಶ್ವರಿ ಹಾಗೂ ಅಣ್ಣಮ್ಮ ದೇವತೆಯ ವೈಭವದ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ನಾವೆಲ್ಲರೂ ಕನ್ನಡ ನೆಲ, ಜಲ, ಭಾಷೆ, ಸಂಸ್ಕೃತಿ ಬಗ್ಗೆ ಅಭಿಮಾನ, ಪ್ರೀತಿ ಬೆಳೆಸಿಕೊಳ್ಳಬೇಕು. ನಮ್ಮ ನೆಲದಲ್ಲಿ ಕನ್ನಡದ ವಾತಾವರಣ ಬೆಳೆಸಬೇಕು. ಇದಕ್ಕಾಗಿ ಯಾರು ಯಾವುದೇ ಭಾಷೆಯಲ್ಲಿ ಮಾತನಾಡಿದರೂ ನೀವು ಕನ್ನಡದಲ್ಲೇ ಉತ್ತರ ಕೊಡಬೇಕು ಎಂದು ಕರೆ ನೀಡಿದರು. ಕನ್ನಡ ನೆಲದಲ್ಲಿ ಬದುಕು ಕಟ್ಟಿಕೊಂಡ ಪ್ರತಿಯೊಬ್ಬರೂ ಕನ್ನಡದ ವಾತಾವರಣವನ್ನು ಗೌರವಿಸುತ್ತಾರೆ. ಕನ್ನಡ ನೆಲದಲ್ಲಿ ನಾವು ಕನ್ನಡದಲ್ಲೇ ಮಾತಾಡುತ್ತೇವೆ ಎನ್ನುವ ಶಪಥ ಮಾಡೋಣ ಎಂದು ಕರೆ ನೀಡಿದರು. ನಮ್ಮ ಭೂಮಿ, ನಮ್ಮ ನೆಲ, ನಮ್ಮ ಜಲ, ನಮ್ಮ ಭಾಷೆ ಎನ್ನುವ…
ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ವಿಧಿಸಿರುವ ಡೆಡ್ ಲೈನ್ ಮುಗಿದಿದ್ದರೂ ಇನ್ನು ಗುಂಡಿಗಳು ಹಾಗೆಯೇ ಇವೆ. ಆ ಬಗ್ಗೆ ಮಾಧ್ಯಮಗಳು ಕೇಳಿದ್ದಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಿಸಿಎಂ ಡಿ.ಕೆ. ಶಿವಕುಮಾರ್ ಅವರನ್ನು ಕೇಳಿ ಎಂದಿರುವುದು ಬೇಜವಾಬ್ದಾರಿಯ ಪರಮಾವಧಿ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಕಟುವಾಗಿ ಟೀಕಿಸಿದರು. ಸಪ್ನ ಪುಸ್ತಕ ಮಳಿಗೆ ಪುಸ್ತಕ ಜಾತ್ರೆಯಲ್ಲಿ ಪಾಲ್ಗೊಂಡ ನಂತರ ಸಚಿವರು ಮಾಧ್ಯಮಗಳ ಜತೆ ಮಾತನಾಡಿದರು. ಶುಕ್ರವಾರದ ದಿನ ಮುಖ್ಯಮಂತ್ರಿಗಳ ಹೇಳಿಕೆ ಗಮನಿಸಿದ್ದೇನೆ. ಅವರ ಹೇಳಿಕೆ ಬೇಜವಾಬ್ದಾರಿತನದ್ದು ಎಂಬುದು ನನ್ನ ಅಭಿಪ್ರಾಯ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಾ? ಅಥವಾ ಡಿ.ಕೆ. ಶಿವಕುಮಾರ್ ಅವರಾ? ಎನ್ನುವ ಪ್ರಶ್ನೆ ಬರುತ್ತೆ. ಮುಖ್ಯಮಂತ್ರಿಗಳೇ ಸಭೆ ಮಾಡಿ ಗುಂಡಿ ಮುಚ್ಚಲು ಡೆಡ್ ಲೈನ್ ಕೊಟ್ಟಿದ್ದರು. ಆದರೆ ರಸ್ತೆಗಳಲ್ಲಿ ಗುಂಡಿಗಳು ಹಾಗೆಯೇ ಇವೆ. ಮುಖ್ಯಮಂತ್ರಿಗಳ ಮಾತಿಗೂ ಸಹ ಎಷ್ಟು ಬೆಲೆ ಅಧಿಕಾರಿಗಳು ಕೊಡುತ್ತಿದ್ದಾರೆ ಎನ್ನುವುದು ಇದರಿಂದ ಗೊತ್ತಾಗುತ್ತದೆ ಎಂದು ಬೇಸರ ವ್ಯಕ್ತಪಡಿಸಿದರು. ಮುಖ್ಯಮಂತ್ರಿಗಳ ಹೇಳಿಕೆ ನೋಡಿದಾಗ ಅವರು ಈ ರಾಜ್ಯದ ಸಿಎಂ ಆಗಿ…
ಕೇರಳ: ಕೇರಳದಲ್ಲಿ ಮಂಗಳೂರಿನ ಕುಖ್ಯಾತ ರೌಡಿಶೀಟರ್ ಬರ್ಬರ ಹತ್ಯೆ ಮಾಡಲಾಗಿದೆ. ನಟೋರಿಯಸ್ ರೌಡಿಶೀಟರ್ ಟೋಪಿ ನೌಫಾಲ್ ಎಂಬಾತನನ್ನು ಬರ್ಬರ ಹತ್ಯೆ ಮಾಡಲಾಗಿದೆ. ಕೇರಳದ ಕಾಸರಗೋಡು ಜಿಲ್ಲೆಯ ಉಪ್ಪಳದ ರೈಲ್ವೆ ಗೇಟ್ ಬಳಿಯಲ್ಲಿ ಕೊಟ್ಟಿ ನೌಫಾಲ್ ಕೊಲೆ ಮಾಡಲಾಗಿದೆ. ನೌಫಾಲ್, ಫರಂಗಿಪೇಟೆ ಜೋಡಿ ಕೊಲೆ ಕೇಸ್ ನಲ್ಲಿ ಪ್ರಮುಖ ಆರೋಪಿಯಾಗಿದ್ದನು. ಮಾರಕಾಸ್ತ್ರಗಳಿಂದ ಕೊಚ್ಚಿ ನೌಫಾಲ್ ಅನ್ನು ದುಷ್ಕರ್ಮಿಗಳು ಕೊಂದಿದ್ದಾರೆ. ಮಂಗಳಿನ ಫೈಸಲ್ ನಗರದ ನಿವಾಸಿ ಟೋಪಿ ನೌಫಾಲ್ ಆಗಿದ್ದನು. ಉಪ್ಪಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/big-news-priority-given-to-teaching-kannada-in-karnatakas-madrasas-cms-announcement/ https://kannadanewsnow.com/kannada/kannada-nadu-is-the-birthplace-of-literature-and-culture-kannadigas-have-made-unique-achievements-in-all-fields-sagar-ac/
ಕೇರಳ: ಕೇರಳವು ತನ್ನ ಕಿರೀಟಕ್ಕೆ ಮತ್ತೊಂದು ಗರಿ ಸೇರಿಸುತ್ತಾ, ತೀವ್ರ ಬಡತನವನ್ನು ನಿರ್ಮೂಲನೆ ಮಾಡಿದ ಭಾರತದ ಮೊದಲ ರಾಜ್ಯವಾಯಿತು. ಇದನ್ನು ಶನಿವಾರ ರಾಜ್ಯ ವಿಧಾನಸಭೆಯಲ್ಲಿ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಘೋಷಿಸಿದರು. ಕೇರಳ ‘ಪಿರವಿ’ ಅಥವಾ ರಚನೆಯ ದಿನದಂದು ಕರೆಯಲಾದ ಸದನದ ವಿಶೇಷ ಅಧಿವೇಶನದಲ್ಲಿ ವಿಜಯನ್ ಈ ಘೋಷಣೆ ಮಾಡಿದರು. ಇಂದಿನ ಕೇರಳ ಪಿರವಿ ಇತಿಹಾಸದಲ್ಲಿ ಒಂದು ಸ್ಥಾನವನ್ನು ಗುರುತಿಸುತ್ತದೆ ಏಕೆಂದರೆ ನಾವು ಕೇರಳವನ್ನು ತೀವ್ರ ಬಡತನವಿಲ್ಲದ ಮೊದಲ ಭಾರತೀಯ ರಾಜ್ಯವನ್ನಾಗಿ ಮಾಡುವಲ್ಲಿ ಯಶಸ್ವಿಯಾಗಿದ್ದೇವೆ. ಈ ವಿಧಾನಸಭೆಯು ಅನೇಕ ಐತಿಹಾಸಿಕ ಕಾನೂನುಗಳು ಮತ್ತು ನೀತಿ ಘೋಷಣೆಗಳಿಗೆ ಸಾಕ್ಷಿಯಾಗಿದೆ. ನವ ಕೇರಳದ ಸೃಷ್ಟಿಯಲ್ಲಿ ಮತ್ತೊಂದು ಮೈಲಿಗಲ್ಲನ್ನು ಗುರುತಿಸುವ ಕ್ಷಣದಲ್ಲಿ ವಿಧಾನಸಭೆ ಈಗ ಸಭೆ ಸೇರುತ್ತದೆ” ಎಂದು ಅವರು ಹೇಳಿದರು. 2021 ರಲ್ಲಿ ಹೊಸ ಸಚಿವಾಲಯ ಪ್ರಮಾಣವಚನ ಸ್ವೀಕರಿಸಿದ ನಂತರ ನಡೆದ ಮೊದಲ ಸಚಿವ ಸಂಪುಟ ಸಭೆಯಲ್ಲಿ ತೀವ್ರ ಬಡತನ ನಿರ್ಮೂಲನೆಯು ಒಂದು ಪ್ರಮುಖ ನಿರ್ಧಾರವಾಗಿದೆ ಎಂದು ಮುಖ್ಯಮಂತ್ರಿ ಹೇಳಿದರು. ಇದು ವಿಧಾನಸಭೆ ಚುನಾವಣೆಯ ಸಮಯದಲ್ಲಿ…
ಶಿವಮೊಗ್ಗ : ಕನ್ನಡ ನಾಡು ಸಾಹಿತ್ಯ, ಸಾಂಸ್ಕೃತಿಕ ಹಾಗೂ ಸೌಜನ್ಯತೆಯ ನೆಲವೀಡಾಗಿದ್ದು, ಕನ್ನಡಿಗರು ಎಲ್ಲಾ ಕ್ಷೇತ್ರಗಳಲ್ಲೂ ಅದ್ವಿತೀಯ ಸಾಧನೆ ಮಾಡುತ್ತಿದ್ದಾರೆ ಎಂದು ಸಾಗರ ಉಪವಿಭಾಗಾಧಿಕಾರಿ ವಿರೇಶ್ ಕುಮಾರ್ ತಿಳಿಸಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ನೆಹರೂ ಮೈದಾನದಲ್ಲಿ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಮತ್ತು ನಗರಸಭೆ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದಂತ ಅವರು, ದೇವರಾಜ ಅರಸು ಅವರು ಮುಖ್ಯಮಂತ್ರಿಗಳಾಗಿದ್ದ ಸಂದರ್ಭದಲ್ಲಿ 1973ನೇ ನವೆಂಬರ್ 1ರಂದು ಕರ್ನಾಟಕ ಎಂದು ನಾಮಕರಣಗೊಂಡ ನಮ್ಮ ಕನ್ನಡ ನಾಡು ವಿಶ್ವದಾದ್ಯಂತ ತನ್ನ ಶ್ರೇಷ್ಟತೆಯ ಮೂಲಕ ಜನಮಾನಸದಲ್ಲಿ ನೆಲೆಯೂರಿದೆ. ಕನ್ನಡಿಗರು ಎಂಬ ಹೆಮ್ಮೆ ಸದಾ ನಮ್ಮಲ್ಲಿ ಇರಬೇಕು. ನಾಡುನುಡಿ ಅಸ್ತಿತ್ವವನ್ನು ಉಳಿಸುವ ನಿಟ್ಟಿನಲ್ಲಿ ಪ್ರತಿಯೊಬ್ಬ ಕನ್ನಡಿಗ ಕಟಿಬದ್ದರಾಗಿರಬೇಕು. ರಾಜ್ಯ ಸರ್ಕಾರ ಕನ್ನಡ ಭಾಷೆ ಬೆಳವಣಿಗೆಗೆ ವಿಶೇಷ ಆದ್ಯತೆ ನೀಡುತ್ತಿದೆ ಎಂದು ಹೇಳಿದರು. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು,…
ನವದೆಹಲಿ: ಇತ್ತೀಚಿನ ಅಧಿಕೃತ ಅಂಕಿಅಂಶಗಳ ಪ್ರಕಾರ, ಅಕ್ಟೋಬರ್ 2025 ರಲ್ಲಿ ಭಾರತದ ಸರಕು ಮತ್ತು ಸೇವಾ ತೆರಿಗೆ (GST) ಸಂಗ್ರಹವು ಶೇ. 4.6 ರಷ್ಟು ಹೆಚ್ಚಾಗಿ ರೂ. 1,95,936 ಕೋಟಿಗಳಿಗೆ ತಲುಪಿದೆ, ಇದು ಸೆಪ್ಟೆಂಬರ್ನಲ್ಲಿ ರೂ. 1,87,346 ಕೋಟಿಗಳಷ್ಟಿತ್ತು. https://kannadanewsnow.com/kannada/no-one-elses-words-are-worth-anything-except-mine-and-the-chief-ministers-dcm-d-k-shivakumar/ https://kannadanewsnow.com/kannada/big-news-priority-given-to-teaching-kannada-in-karnatakas-madrasas-cms-announcement/
ಬೆಂಗಳೂರು: “ಟನಲ್ ರಸ್ತೆ ವಿಚಾರವಾಗಿ ವಿಪಕ್ಷ ಪಕ್ಷದ ನಾಯಕ ಆರ್. ಅಶೋಕ್ ಅವರ ನೇತೃತ್ವದಲ್ಲಿಯೇ ಸಮಿತಿ ರಚನೆ ಮಾಡಲು ನಾನು ತಯಾರಿದ್ದೇನೆ. ಅವರು ಸೂಚಿಸಿದ ಕಡೆಯೇ ಲಾಲ್ ಬಾಗ್ ಬಳಿ ಪ್ರವೇಶ- ನಿರ್ಗಮನ ತಾಣ ರೂಪಿಸಲಾಗುವುದು.” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದ್ದಾರೆ. ನಗರದ ಕಂಠೀರವ ಕ್ರೀಡಾಂಗಣದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. “ಅಶೋಕ್ ಅವರು ಧರಣಿ ಕೂರುವ ಅವಶ್ಯಕತೆಯಿಲ್ಲ. ಏಕೆಂದರೆ ಅವರು ಬೆಂಗಳೂರಿನವರು. ಇಲ್ಲಿಂದ ಏಳೆಂಟು ಬಾರಿ ಗೆದ್ದಿದ್ದಾರೆ. ಅವರಿಗೂ ಜವಾಬ್ದಾರಿಯಿದೆ. ಅವರ ನೇತೃತ್ವದಲ್ಲಿ ರಚಿಸಿದ ಸಮಿತಿಯೇ ಸರ್ಕಾರಕ್ಕೆ ಸಲಹೆ, ನಿರ್ದೇಶನ ನೀಡಲಿ. ಟನಲ್ ಯೋಜನೆಯನ್ನು ಅವರೂ ಗಮನಿಸಲಿ. ಅಶ್ವಥ ನಾರಾಯಣ್ ಸೇರಿ ಬೇರೆ ಯಾರ ಹೆಸರನ್ನು ಸೂಚಿಸಿದರು ಅವರನ್ನು ಈ ಸಮಿತಿಗೆ ಸೇರ್ಪಡೆ ಮಾಡಲಾಗುವುದು. ನಾವೆಲ್ಲರೂ ಒಟ್ಟಿಗೆ ಸೇರಿ ಕೆಲಸ ಮಾಡಬೇಕು, ಮಾಡೋಣ” ಎಂದರು. “ನಾನು ಶುಕ್ರವಾರ ರಾತ್ರಿ ಲಾಲ್ ಬಾಗ್ ಬಳಿ ತೆರಳಿ ಎಲ್ಲೆಲ್ಲಿ ಟನಲ್ ರಸ್ತೆಗೆ ಪ್ರವೇಶ ಕಲ್ಪಿಸಬಹುದು ಎಂದು ಪರಿಶೀಲನೆ ಮಾಡಿದ್ದೇನೆ. ಪರ್ಯಾಯ…
ಬೆಂಗಳೂರು: ಇಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಕೇಂದ್ರ ಕಛೇರಿಯಲ್ಲಿ 70ನೇ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಆಚರಿಸಲಾಯಿತು. ಈ ಸಂದರ್ಭದಲ್ಲಿ ಸಮಸ್ತ ಅಧಿಕಾರಿ/ ಸಿಬ್ಬಂದಿಗಳು ಹಾಗೂ ಪ್ರಯಾಣಿಕರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ ಭಾಆಸೇ, ಅವರು ಕನ್ನಡ ರಾಜ್ಯೋತ್ಸವದ ಶುಭಾಶಯಗಳನ್ನು ತಿಳಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ವ್ಯವಸ್ಥಾಪಕ ನಿರ್ದೇಶಕರಾದಂತ ಅಕ್ರಂ ಪಾಷ ಅವರು, ನಮ್ಮ ಚಾಲನಾ ಸಿಬ್ಬಂದಿಗಳು ಬಹಳ ಸಂತೋಷದಿಂದ ರಾಜ್ಯೋತ್ಸವವನ್ನು ಆಚರಿಸುತ್ತಾರೆ. ಕರ್ನಾಟಕ ರಾಜ್ಯದ ಇತಿಹಾಸವನ್ನು ವಿವರಿಸುತ್ತಾ ಮಾತನಾಡಿದ ಅವರು ಮೈಸೂರು ರಾಜ್ಯದಿಂದ ಕರ್ನಾಟಕವಾಗಿ ಹೆಸರಿಸಲಾದ ನಾಡು ಕರ್ನಾಟಕ ಎಂದರು. ಶ್ರೀಯುತರುಗಳಾದ ಆಲೂರು ವೆಂಕಟರಾಯರು, ಕುವೆಂಪು, ಅನಕೃ, ಇತರೆ ಮಹನೀಯರುಗಳು ಕನ್ನಡ ನಾಡಿಗಾಗಿ ದುಡಿದಿದ್ದಾರೆ. ಕನ್ನಡ ನಾಡು ನುಡಿಯನ್ನು ಗೌರವಿಸಿ, ಉಳಿಸಿ, ಬೆಳೆಸುವ ಸಂಕಲ್ಪ ಪ್ರತಿಯೊಬ್ಬರಲ್ಲಿಯೂ ಮೂಡಬೇಕು. ಎಲ್ಲರನ್ನೂ ಪ್ರೋತ್ಸಾಹಿಸಿ ಭಾಷೆಯನ್ನು ಕಲಿಯುವಂತೆ ಮಾತನಾಡಬೇಕು. ಕನ್ನಡ ಭಾಷೆ, ಕಲೆ, ಸಂಸ್ಕೃತಿ ಮತ್ತು ನೆಲದ ಬಗ್ಗೆ ಹೆಮ್ಮೆ ಮತ್ತು ಗೌರವವಿರಲಿ ಎಂದು ತಿಳಿಸಿದರು. ಕೆ ಎಸ್ ಆರ್…
ನವದೆಹಲಿ: ಭಾರತೀಯ ಟೆನಿಸ್ ಐಕಾನ್ ರೋಹನ್ ಬೋಪಣ್ಣ ಅವರು ಕೇಂದ್ರಬಿಂದುವಾಗಿದ್ದು, ವೃತ್ತಿಪರ ಟೆನಿಸ್ನಿಂದ ನಿವೃತ್ತಿ ಹೊಂದುವುದಾಗಿ ಘೋಷಿಸಿದ್ದಾರೆ. ಹೊಸ ಆಟಗಾರರ ಪೀಳಿಗೆಗೆ ಸ್ಫೂರ್ತಿ ನೀಡುತ್ತಾ, ಎರಡು ದಶಕಗಳಿಗೂ ಹೆಚ್ಚು ಕಾಲದ ವೃತ್ತಿಜೀವನದ ನಂತರ ಬೋಪಣ್ಣ ನಿವೃತ್ತಿ ಹೊಂದುತ್ತಿದ್ದಾರೆ. ಭಾರತೀಯ ಟೆನಿಸ್ನ ಸಾರ್ವಕಾಲಿಕ ಶ್ರೇಷ್ಠರಲ್ಲಿ ಒಬ್ಬರಾದ ಬೋಪಣ್ಣ ತಮ್ಮ ನಿರ್ಧಾರವನ್ನು Instagram ನಲ್ಲಿ ಪ್ರಕಟಿಸಿದ್ದಾರೆ. ನಿಮ್ಮ ಜೀವನಕ್ಕೆ ಅರ್ಥವನ್ನು ನೀಡಿದ ಯಾವುದನ್ನಾದರೂ ನೀವು ಹೇಗೆ ವಿದಾಯ ಹೇಳುತ್ತೀರಿ? ಪ್ರವಾಸದಲ್ಲಿ 20 ಮರೆಯಲಾಗದ ವರ್ಷಗಳ ನಂತರ, ನಾನು ಅಧಿಕೃತವಾಗಿ ನನ್ನ ರಾಕೆಟ್ ಅನ್ನು ನೇತುಹಾಕುವ ಸಮಯ ಬಂದಿದೆ. ನನ್ನ ಸರ್ವ್ ಅನ್ನು ಬಲಪಡಿಸಲು ಕೂರ್ಗ್ನಲ್ಲಿ ಮರ ಕತ್ತರಿಸುವುದರಿಂದ ಹಿಡಿದು, ವಿಶ್ವದ ಅತಿದೊಡ್ಡ ಕ್ರೀಡಾಂಗಣಗಳ ದೀಪಗಳ ಕೆಳಗೆ ನಿಲ್ಲುವವರೆಗೆ – ಇದು ಅವಾಸ್ತವಿಕವೆನಿಸುತ್ತದೆ. ಭಾರತವನ್ನು ಪ್ರತಿನಿಧಿಸುವುದು ನನ್ನ ಜೀವನದ ಶ್ರೇಷ್ಠ ಗೌರವವಾಗಿದೆ ಎಂದಿದ್ದಾರೆ. ವರ್ಷಗಳಲ್ಲಿ, ಬೋಪಣ್ಣ ಭಾರತೀಯ ಟೆನಿಸ್ನ ಮೂಲಾಧಾರವಾದರು, ತಮ್ಮ ದೊಡ್ಡ ಸರ್ವ್, ನಿರ್ಭೀತ ನೆಟ್ ಆಟ ಮತ್ತು ವಯಸ್ಸನ್ನು ಮೀರುವ ದೀರ್ಘಾಯುಷ್ಯದಿಂದ ಡಬಲ್ಸ್…
ಭಾರತೀಯ ಟೆನಿಸ್ ದಂತಕಥೆ ರೋಹನ್ ಬೋಪಣ್ಣ ವೃತ್ತಿಪರ ಟೆನಿಸ್ನಿಂದ ನಿವೃತ್ತಿ ಘೋಷಿಸಿದ್ದಾರೆ, ಇದು ಎರಡು ದಶಕಗಳಿಗೂ ಹೆಚ್ಚು ಕಾಲ ನಡೆದ ಮತ್ತು ಭಾರತೀಯ ಕ್ರೀಡೆಯಲ್ಲಿ ಅಳಿಸಲಾಗದ ಗುರುತು ಬಿಟ್ಟ ಅವರ ಹೊಳೆಯುವ ವೃತ್ತಿಜೀವನದ ಅಂತ್ಯವನ್ನು ಸೂಚಿಸುತ್ತದೆ. ಅವರ ಅಂತಿಮ ಪ್ರದರ್ಶನವು ಪ್ಯಾರಿಸ್ ಮಾಸ್ಟರ್ಸ್ 1000 ನಲ್ಲಿ ಬಂದಿತು, ಅಲ್ಲಿ ಅವರು ಅಲೆಕ್ಸಾಂಡರ್ ಬುಬ್ಲಿಕ್ ಅವರೊಂದಿಗೆ ಪಾಲುದಾರರಾದರು, ಕೂರ್ಗ್ನ ಕಾಫಿ ಬೆಟ್ಟಗಳಲ್ಲಿ ಪ್ರಾರಂಭವಾದ ಮತ್ತು ವಿಶ್ವ ಟೆನಿಸ್ನ ಭವ್ಯ ಹಂತಗಳನ್ನು ತಲುಪಿದ ಪ್ರಯಾಣದ ಪರದೆಯನ್ನು ಮುಚ್ಚಿದರು. ಇನ್ಸ್ಟಾಗ್ರಾಮ್ನಲ್ಲಿ ಹಂಚಿಕೊಂಡ ಭಾವನಾತ್ಮಕ ಟಿಪ್ಪಣಿಯಲ್ಲಿ, ಬೋಪಣ್ಣ ಹೀಗೆ ಬರೆದಿದ್ದಾರೆ: “ನಿಮ್ಮ ಜೀವನಕ್ಕೆ ಅರ್ಥವನ್ನು ನೀಡಿದ ಯಾವುದನ್ನಾದರೂ ನೀವು ಹೇಗೆ ವಿದಾಯ ಹೇಳುತ್ತೀರಿ? ಪ್ರವಾಸದಲ್ಲಿ 20 ಮರೆಯಲಾಗದ ವರ್ಷಗಳ ನಂತರ, ನಾನು ಅಧಿಕೃತವಾಗಿ ನನ್ನ ರಾಕೆಟ್ ಅನ್ನು ನೇತುಹಾಕುವ ಸಮಯ ಬಂದಿದೆ. ನನ್ನ ಸರ್ವ್ ಅನ್ನು ಬಲಪಡಿಸಲು ಕೂರ್ಗ್ನಲ್ಲಿ ಮರ ಕತ್ತರಿಸುವುದರಿಂದ ಹಿಡಿದು, ವಿಶ್ವದ ಅತಿದೊಡ್ಡ ಕ್ರೀಡಾಂಗಣಗಳ ದೀಪಗಳ ಕೆಳಗೆ ನಿಲ್ಲುವವರೆಗೆ – ಇದು ಅವಾಸ್ತವಿಕವೆನಿಸುತ್ತದೆ. ಭಾರತವನ್ನು…














