Author: kannadanewsnow09

ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸುಗಳ ಪ್ರವೇಶಕ್ಕೆ ಸೀಟು ಹಂಚಿಕೆ ಮಾಡಲು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸಕಲ ಸಿದ್ಧತೆ ಮಾಡಿಕೊಳ್ಳುತ್ತಿದ್ದು, ಇದರ ಭಾಗವಾಗಿ ಸೋಮವಾರ ಪರಿಶೀಲನಾ ಚೀಟಿ (ವೆರಿಫಿಕೇಷನ್ ಸ್ಲಿಪ್) ಯನ್ನು ಬಿಡುಗಡೆ ಮಾಡಿದೆ. ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಭರ್ತಿ ಮಾಡುವಾಗ ಮೀಸಲಾತಿ ಇತ್ಯಾದಿ ಕ್ಲೇಮ್ ಗಳನ್ನು ಮಾಡಿಕೊಂಡಿರುತ್ತಾರೆ. ಅವೆಲ್ಲವೂ ಈ ಚೀಟಿಯಲ್ಲಿ ಉಲ್ಲೇಖವಾಗಿದೆಯೇ ಇಲ್ಲವೇ ಎಂಬುದನ್ನು ಪರಿಶೀಲಿಸಿಕೊಳ್ಳಬೇಕು. ಈ ಚೀಟಿಯಲ್ಲಿನ ಕ್ಲೇಮ್ ಪ್ರಕಾರವೇ ಸೀಟು ಹಂಚಿಕೆ ಮಾಡಲಾಗುತ್ತದೆ ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ. ಒಂದು ವೇಳೆ ಕ್ಲೇಮ್ ಮಾಡಿರುವುದರಲ್ಲಿ ತಪ್ಪಾಗಿದ್ದಲ್ಲಿ ಸರಿ ಮಾಡಿಕೊಳ್ಳಲು ಸದ್ಯದಲ್ಲೇ ದಿನಾಂಕ ನಿಗದಿ ಮಾಡಲಾಗುವುದು. ಆಗ ಮುಂಗಡವಾಗಿ ದಿನಾಂಕವನ್ನು ನಿಗದಿ ಮಾಡಿಕೊಂಡೇ ಕೆಇಎ ಗೆ ಬಂದು ಸರಿ ಮಾಡಿಕೊಳ್ಳಬೇಕು ಎಂದು ಅವರು ತಿಳಿಸಿದ್ದಾರೆ. https://twitter.com/KEA_karnataka/status/1937176677161062739 https://kannadanewsnow.com/kannada/5000-cusecs-of-water-released-from-krs-reservoir-to-river-cauvery-instructions-to-remain-alert/ https://kannadanewsnow.com/kannada/do-you-want-to-feast-your-eyes-on-the-scenic-splendor-of-the-mountains-dont-miss-out-on-watching-this-video-song/

Read More

ಮಂಡ್ಯ: ಕೃಷ್ಣರಾಜ ಜಲಾಶಯ ಭರ್ತಿಗೆ ಕೆಲವೇ ಅಡಿಗಳಷ್ಟು ನೀರು ಬಾಕಿ ಇದೆ. ಜಲನಯ ಪ್ರದೇಶದಲ್ಲಿ ನಿರಂತರವಾಗಿ ಮಳೆಯಾಗುತ್ತಿರುವ ಕಾರಣ, ಒಳ ಹರಿವಿನ ಪ್ರಮಾಣ ಕೂಡ ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ಕೆ ಆರ್ ಎಸ್ ಡ್ಯಾಂನಿಂದ ಕಾವೇರಿ ನದಿಗೆ ನೀರು ಬಿಡುಗಡೆ ಮಾಡಲಾಗುತ್ತಿದೆ. ಹೀಗಾಗಿ ನದಿ ಪಾತ್ರದ ಜನರು ಎಚ್ಚರಿಕೆಯಿಂದ ಇರುವಂತೆ ಕಾವೇರಿ ನೀರಾವರಿ ನಿಗಮ ಸೂಚಿಸಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಲಾಗಿದ್ದು,ಕಾವೇರಿ ನದಿ ಜಲಾನಯನ ಪ್ರದೇಶದಲ್ಲಿ ಭಾರಿ ಮಳೆಯಾಗುತ್ತಿರುವುದರಿಂದ ಕೃಷ್ಣರಾಜಸಾಗರ ಜಲಾಶಯಕ್ಕೆ ಹೆಚ್ಚಿನ ನೀರು ಬರುತ್ತಿದ್ದು, ಕೃಷ್ಣರಾಜಸಾಗರ ಜಲಾಶಯದಿಂದ ಸುಮಾರು 5,000 ರಿಂದ 15,000 ಕ್ಯೂಸೆಕ್ಸ್ ಗೂ ಅಧಿಕ ನೀರನ್ನು ಕಾವೇರಿ ನದಿಗೆ ಬಿಡಲಾಗುವುದು ಎಂದಿದೆ. ಈ ಪ್ರಮಾಣವು ಹೆಚ್ಚಾಗುವ ಸಂಭವವಿರುತ್ತದೆ. ಆದ್ದರಿಂದ ಕಾವೇರಿ ನದಿಯ ತಗ್ಗು ಪ್ರದೇಶದಲ್ಲಿರುವ ಮತ್ತು ನದಿಯ ಎರಡೂ ದಂಡೆಗಳಲ್ಲಿರುವ ಸಾರ್ವಜನಿಕರು ತಮ್ಮ ಆಸ್ತಿ ಪಾಸ್ತಿ ಹಾಗೂ ಜಾನುವಾರು ರಕ್ಷಣೆಗೆ ಎಚ್ಚರಿಕೆ ವಹಿಸಿ, ಸೂಕ್ತ ಮುಂಜಾಗ್ರತೆ ಕೈಗೊಂಡು ಸುರಕ್ಷಿತ ಸ್ಥಳಗಳಿಗೆ ಹೋಗಲು ಕೋರಲಾಗಿದೆ.

Read More

ತುಮಕೂರು : ಕಂದಾಯ ಪ್ರಗತಿಗೆ ಸಂಬಂಧಿಸಿದಂತೆ ಅಧಿಕಾರಿಗಳು ನೀಡುತ್ತಿರುವ ಮಾಹಿತಿ ಒಂದಕ್ಕೊಂದು ತಾಳೆಯಾಗುತ್ತಿಲ್ಲವೆಂದು ಕಂದಾಯ ಸಚಿವ ಕೃಷ್ಣಭೈರೇಗೌಡ ಅಸಮಾಧಾನ ವ್ಯಕ್ತಪಡಿಸಿದರು. ನಗರ ಕೇಂದ್ರ ಗ್ರಂಥಾಲಯದಲ್ಲಿ ಸೋಮವಾರ ಜಿಲ್ಲೆಯ ಕಂದಾಯ ಇಲಾಖೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಎಲ್ಲಾ ತಾಲ್ಲೂಕು ಕಂದಾಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು. ವರದಿಯನುಸಾರ ಜಿಲ್ಲೆಯಲ್ಲಿ ದಾಖಲೆಗಳಿಲ್ಲದ 522 ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸಿರುವುದು ಅಭಿನಂದನಾರ್ಹ. ಆದರೆ ಕೈಬಿಟ್ಟು ಹೋಗಿರುವ ಹಟ್ಟಿ, ತಾಂಡಾಗಳಲ್ಲದೆ ಸಾಮಾನ್ಯ ರೈತರು ವಾಸಿಸುವ ದಾಖಲೆ ರಹಿತ ಜನವಸತಿ ಪ್ರದೇಶಗಳನ್ನು ಗುರುತಿಸಿ ಕಂದಾಯ ಗ್ರಾಮಗಳನ್ನಾಗಿಸಲು ಪ್ರಸ್ತಾವನೆ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚನೆ ನೀಡಿದರು. ದಾಖಲೆಗಳಿಲ್ಲದ ಜನವಸತಿ ಪ್ರದೇಶಗಳನ್ನು ಕಂದಾಯ ಗ್ರಾಮಗಳೆಂದು ಗುರುತಿಸುವುದರಿಂದ ಅಲ್ಲಿನ ನಿವಾಸಿಗಳು ತಮ್ಮ ಸ್ವತ್ತಿನ ದಾಖಲೆಗಳನ್ನು ಹೊಂದುವುದರೊಂದಿಗೆ ಅವರ ಅತಂತ್ರ ಬದುಕಿನಿಂದ ಮುಕ್ತರಾಗಿ ನೆಮ್ಮದಿ ಜೀವನ ನಡೆಸಲು ಅನುವಾಗುತ್ತದೆ ಎಂದು ಹೇಳಿದರು. ಕಂದಾಯ ಇಲಾಖೆಯಲ್ಲಿ ಎಷ್ಟು ಕೆಲಸ ಮಾಡಿದರೂ ಕಡಿಮೆಯೇ! ಜನಸಾಮಾನ್ಯರಿಗೆ ಕಂದಾಯ ಸೌಲಭ್ಯಗಳನ್ನು ಒದಗಿಸುವಲ್ಲಿ ಅಧಿಕಾರಿಗಳಿಗೆ ಇಚ್ಛಾಶಕ್ತಿ ಕೊರತೆ ಎದ್ದು ಕಾಣುತ್ತಿದೆ. ಅಧಿಕಾರಿಗಳು…

Read More

ಬೆಂಗಳೂರು: “ಇಡಿ ವಿಚಾರಣೆ ಎದುರಿಸಲು ನಮ್ಮ ಕುಟುಂಬ ಸದಾ ಸಿದ್ಧ. ಯಾರದ್ದೋ ಹೇಳಿಕೆ ಮೇಲೆ ಡಿ.ಕೆ. ಸುರೇಶ್ ಅವರನ್ನು ವಿಚಾರಣೆಗೆ ಕರೆದಿದ್ದಾರೆ. ಇದನ್ನು ಮಾಧ್ಯಮಗಳು ವೈಭವೀಕರಿಸುವ ಅಗತ್ಯವಿಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಸದಾಶಿವನಗರ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಸೋಮವಾರ ಪ್ರತಿಕ್ರಿಯಿಸಿದರು. ಐಶ್ವರ್ಯಾ ಗೌಡ ಅವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡಿ.ಕೆ ಸುರೇಶ್ ಅವರನ್ನು ಇಡಿ ವಿಚಾರಣೆ ಕರೆದಿರುವ ಬಗ್ಗೆ ಕೇಳಿದಾಗ, “ಈ ಹಿಂದೆ ನನ್ನ ಮೇಲೂ ಇಡಿ ಪ್ರಕರಣ ದಾಖಲಿಸಿತ್ತು. ಅದು ಏನಾಯ್ತು? ನಮ್ಮ ರಕ್ಷಣೆಗೆ ಯಾರೂ ಬರಲಿಲ್ಲ. ಕೊನೆಗೆ ನಮಗೆ ರಕ್ಷಣೆ ನೀಡಿದ್ದು ನ್ಯಾಯಾಂಗ ವ್ಯವಸ್ಥೆ. ಜನಪ್ರತಿನಿಧಿಗಳು ತಮ್ಮ ಕ್ಷೇತ್ರದ ಜನ ಬಂದಾಗ ಅವರನ್ನು ಭೇಟಿ ಮಾಡುವು ಸಹಜ. ಇಡಿ ತನಿಖೆಗೆ ಎಲ್ಲಾ ರೀತಿಯ ಸಹಕಾರ ನೀಡಲು ಸುರೇಶ್ ತಯಾರಿದ್ದಾರೆ. ಮಾಧ್ಯಮಗಳು ಹೆಚ್ಚು ಆದ್ಯತೆ ನೀಡಬೇಕಾದ ಪ್ರಕರಣಗಳನ್ನು ಬಿಟ್ಟು, ಇದನ್ನು ಹೆಚ್ಚು ಬಿಂಬಿಸಲು ಮುಂದಾಗಿದ್ದೀರಿ. ಇದರ ಅಗತ್ಯವಿಲ್ಲ” ಎಂದು ತಿಳಿಸಿದರು. ಶಾಸಕ ಬಿ.ಆರ್ ಪಾಟೀಲ್…

Read More

ಹಾಸನ: ಅಂತಾರರಾಷ್ಟ್ರೀಯ ಬುಕರ್ ಪ್ರಶಸ್ತಿ ಪುರಸ್ಕೃತರಾದ ಬಾನುಮುಷ್ತಾಕ್ ಅವರ ಎದೆಯ ಹಣತೆ ಕಥೆಯನ್ನು ಆಧರಿಸಿದ ನಾಟಕ ಪ್ರದರ್ಶನವನ್ನು ಜುಲೈ 11ರಂದು ಹಾಸನದ ಕಲಾಭವನದಲ್ಲಿ ಹಾಸನದ ರಂಗಸಿರಿ ಕಲಾ ತಂಡ ಆಯೋಜಿಸಿದೆ. ನೀನಾಸಮ್ ರಂಗಶಿಕ್ಷಣ ಕೇಂದ್ರದ ಪ್ರಾಂಶುಪಾಲ ಡಾ.ಎಂ.ಗಣೇಶ್ ಹೆಗ್ಗೋಡು ನಿರ್ದೇಶನ ಮಾಡಿರುವ ಈ ನಾಟಕವನ್ನು ಹೆಗ್ಗೋಡಿನ ಸತ್ಯಶೋಧನ ರಂಗಸಮುದಾಯದ ನೇತೃತ್ವದಲ್ಲಿ ಜನಮನದಾಟ ರಂಗ ತಂಡ ಅಭಿನಯಿಸಲಿದೆ. ನೂತನ ಜಿಲ್ಲಾಧಿಕಾರಿ ಲತಾಕುಮಾರಿ ಅವರನ್ನು ಭೇಟಿ ಮಾಡಿದ್ದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮತ್ತು ರಂಗಸಿರಿ ಗೌರವಾಧ್ಯಕ್ಷ ಶಿವಾನಂದ ತಗಡೂರು ಅವರು ಕಾರ್ಯಕ್ರಮಕ್ಕೆ ಆಹ್ವಾನಿಸಿದರು. ಈ ಸಂದರ್ಭದಲ್ಲಿ ಜಿಲ್ಲಾ ಪತ್ರಕರ್ತರ ಸಂಘದ ಮಾಜಿ ಅಧ್ಯಕ್ಷರುಗಳಾದ ಕೆ.ಆರ್.ಮಂಜುನಾಥ್, ಬಿ.ಆರ್.ಉದಯ ಕುಮಾರ್, ರವಿ ನಾಕಲಗೂಡು, ಹಿರಿಯ ಪತ್ರಕರ್ತರಾದ ಜಿ.ಪ್ರಕಾಶ್, ವಿಜಯಕುಮಾರ್, ರಂಗಸಿರಿ ಕಾರ್ಯದರ್ಶಿ ಪಿ.ಶಾಡ್ರಾಕ್, ಸುರೇಶ್ ಇದ್ದರು. https://kannadanewsnow.com/kannada/siddaramaiah-granted-illegal-permission-to-7-mines-hd-kumaraswamy-accuses-the-cm/ https://kannadanewsnow.com/kannada/do-you-want-to-feast-your-eyes-on-the-scenic-splendor-of-the-mountains-dont-miss-out-on-watching-this-video-song/

Read More

ನವದೆಹಲಿ: ಅಕ್ರಮ ಗಣಿಗಾರಿಕೆ ಕುರಿತು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಖಾತೆ ಸಚಿವ ಹೆಚ್.ಕೆ. ಪಾಟೀಲ್‌ ಬರೆದಿರುವ ಪತ್ರವನ್ನು ಕಸದ ಬುಟ್ಟಿಗೆ ಹಾಕಬೇಕು ಎಂದು ಕೇಂದ್ರದ ಬೃಹತ್‌ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು ಗುಡುಗಿದ್ದಾರೆ. ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಕಳೆದ ಬಾರಿ ಸಿದ್ದರಾಮಯ್ಯ ಅವರು ತಮ್ಮ ಅಧಿಕಾರಾವಧಿಯಲ್ಲಿ ಕಾನೂನುಬಾಹಿರವಾಗಿ ಏಳು ಗಣಿ ಕಂಪನಿಗಳಿಗೆ ಅನುಮತಿ ನೀಡಿದ್ದರು. ಅದರ ಬಗ್ಗೆ ಏನು ಹೇಳುತ್ತೀರಿ ಹೆಚ್.ಕೆ. ಪಾಟೀಲರೇ ಎಂದು ಖಾರವಾಗಿ ಪ್ರಶ್ನಿಸಿದರು. ರಾಜಕೀಯ ದುರುದೇಶದಿಂದ ಹಾಗೂ ವಸತಿ ಇಲಾಖೆಯಲ್ಲಿ ಎದ್ದಿರುವ ಕಮೀಷನ್‌ ಮುಜುಗರದಿಂದ ಪಾರಾಗಲು ಹೆಚ್.ಕೆ. ಪಾಟೀಲ್‌ ಅವರ ಪತ್ರವನ್ನು ಹೊರಗೆ ಬಿಡಲಾಗಿದೆ ಎಂದು ಅವರು ಕಿಡಿಕಾರಿದರು. ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ಪ್ರಕರಣದ ಬಗ್ಗೆ ಈಗ ಹೆಚ್.ಕೆ. ಪಾಟೀಲ್ ಎಚ್ಚರಗೊಂಡಿದ್ದಾರೆ. 1.5 ಲಕ್ಷ ಕೋಟಿ ಹಗರಣ ಆಗಿದೆ ಎಂದಿದ್ದಾರೆ. ಎರಡು ವರ್ಷದಿಂದ ತಾವು ಕಾನೂನು ಮಂತ್ರಿಯಾಗಿದ್ದರಿ, ಕುಂಭಕರ್ಣನ ನಿದ್ದೆಯಲ್ಲಿ ಇದ್ರಾ? ಎಂದು…

Read More

ರಾಯಚೂರು: ಜಿಲ್ಲೆ ಯ 1406 ಗ್ರಾ ಮೀಣ ಜನವಸತಿಗಳಿಗೆ ಹಾಗೂ 7 ನಗರ ಸ್ಥಳೀಯ ಸಂಸ್ಥೆಗಳಿಗೆ ಬಹುಗ್ರಾ ಮ ಕುಡಿಯುವ ನೀರು ಸರಬರಾಜು ಮಾಡುವ 2978 ಕೋಟಿ ರೂ.ಗಳ ಯೋಜನೆಗೆ ರಾಯಚೂರಿನಲ್ಲಿ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಶಂಕುಸ್ಥಾಪನೆ ನೆರವೇರಿಸಿ ಕಾಮಗಾರಿಗಳಿಗೆ ಚಾಲನೆ ನೀಡಿದರು. ನಾರಾಯಣಪುರ ಜಲಾಶಯ ಈ ಯೋಜನೆಯ ಜಲಮೂಲವಾಗಿದ್ದು, 810 ಗ್ರಾಮಗಳಿಗೆ ಸೇರಿದ 1406 ಗ್ರಾಮೀಣ ಜನವಸತಿಗಳಿಗೆ ಈ ಯೋಜನೆಯ ಮೂಲಕ ನೀರು ಸರಬರಾಜು ಆಗಲಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಬೆಂಗಳೂರಿನಲ್ಲಿ ಪ್ರಕಟಿಸಿದ್ದಾರೆ. ನೀರು ಸರಬರಾಜಾಗುವ 810 ಗ್ರಾಮಗಳ 3,42,534 ಮನೆಗಳು ಶುದ್ದ ಕುಡಿಯುವ ನೀರಿನ ಸೌಲಭ್ಯ ಪಡೆಯಲಿದ್ದು, ಸುಮಾರು 30 ತಿಂಗಳ ಅವಧಿಯಲ್ಲಿ ಕಾಮಗಾರಿಗಳು ಪೂರ್ಣಗೊಳ್ಳಲಿವೆ ಎಂದೂ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ. ಈ ಭಾಗದ ಪ್ರತಿಯೊಬ್ಬರು ಪ್ರತಿ ನಿತ್ಯ 55 ಲೀಟರ್ (ಎಲ್.ಪಿ.ಸಿ.ಡಿ) ನೀರನ್ನು ಪಡೆಯಲಿದ್ದು ಈ ಯೋಜನೆಯಡಿ ಮಾನ್ವಿ, ಮಸ್ಕಿ, ಕವಿತಾಳ, ತುರ್ವಿಹಾಳ, ಬಾಳಗನೂರು,…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿಯನ್ನು ಜೂನ್.30ರವರೆಗೆ ವಿಸ್ತರಣೆ ಮಾಡಲಾಗಿದೆ. ಅಲ್ಲದೇ ಇದು ಅಂತಿಮ ವಿಸ್ತರಣೆ ಅಂತ ತಿಳಿಸಿದೆ. ಪರಿಶಿಷ್ಟ ಜಾತಿಯಲ್ಲಿ ಒಳಮೀಸಲಾತಿ ಕಲ್ಪಿಸುವ ಉದ್ದೇಶದಿಂದ ವೈಜ್ಞಾನಿಕವಾಗಿ ದತ್ತಾಂಶ ಸಂಗ್ರಹಿಸಲು ರಾಜ್ಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಕುಟುಂಬಗಳ ಸಮೀಕ್ಷೆಯ ಅವಧಿಯನ್ನು ಜೂನ್‌ 30ರ ವರೆಗೆ ವಿಸ್ತರಿಸಲಾಗಿದೆ. ನಾಗರಿಕ ಸೇವಾ ಕೇಂದ್ರಗಳಾದ ಕರ್ನಾಟಕ ಒನ್‌, ಬೆಂಗಳೂರು ಒನ್‌, ಗ್ರಾಮ ಒನ್‌ ಮತ್ತು ಬಾಪೂಜಿ ಸೇವಾ ಕೇಂದ್ರಗಳಲ್ಲಿ ಸಮೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ. ಬಿಬಿಎಂಪಿ ವ್ಯಾಪ್ತಿಯ ಎಲ್ಲ 198 ವಾರ್ಡ್‌ಗಳಲ್ಲೂ ಪ್ರತ್ಯೇಕ ಶಿಬಿರಗಳನ್ನು ತೆರೆಯಲಾಗಿದೆ. ಅಲ್ಲದೆ, ಆನ್‌ಲೈನ್‌ https://schedulecastesurvey.karnataka.gov.in/selfdeclaration/ ಲಿಂಕ್‌ ಮೂಲಕವೂ ಸ್ವಯಂಘೋಷಣೆ ಮಾಡಿಕೊಳ್ಳಬಹುದು. https://twitter.com/KarnatakaVarthe/status/1937139706619417013 https://kannadanewsnow.com/kannada/does-the-chief-minister-have-the-courage-and-morality-to-accept-the-resignation-of-the-housing-minister-hdks-question/ https://kannadanewsnow.com/kannada/do-you-want-to-feast-your-eyes-on-the-scenic-splendor-of-the-mountains-dont-miss-out-on-watching-this-video-song/

Read More

ನವದೆಹಲಿ: ವಸತಿ ಇಲಾಖೆಯಲ್ಲಿ ನಡೆದಿರುವ ಅಕ್ರಮಗಳ ಬಗ್ಗೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ; ರಾಜ್ಯ ಕಾಂಗ್ರೆಸ್‌ ಸರಕಾರದ ದರ್ಬಾರಿನಲ್ಲಿ ಶಾಸಕರ ಪರಿಸ್ಥಿತಿ ತಬರನ ಕಥೆಯಂತೆ ಆಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ನವದೆಹಲಿಯ ತಮ್ಮ ಅಧಿಕೃತ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಕೇಂದ್ರ ಸಚಿವರು; ಶಾಸಕರು ಅನುದಾನಕ್ಕಾಗಿ, ಸರಕಾರದ ಯೋಜನೆಗಳಿಗಾಗಿ ಕಚೇರಿಗಳ ಸುತ್ತ, ಮಂತ್ರಿಮಹೋದಯರ ಸುತ್ತ ತಬರನಂತೆ ಸುತ್ತುತ್ತಿದ್ದಾರೆ. ಆಡಳಿತ ಪಕ್ಷದ ಸದಸ್ಯರಿಗೇ ಇಂಥ ದುರ್ಗತಿ ಬಂದರೆ ಇತರೆ ಪಕ್ಷಗಳ ಶಾಸಕರ ಪರಿಸ್ಥಿತಿ ಏನು? ಎಂದು ಪ್ರಶ್ನಿಸಿದರು. ಹಿಂದೆ ಕೆ.ಪಿ.ಪೂರ್ಣಚಂದ್ರ ತೇಜಸ್ವಿ ಅವರು ಬರೆದಿದ್ದ ʼತಬರನ ಕಥೆʼ ಎಂಬ ಕಥೆಯನ್ನು ಗಿರೀಶ್‌ ಕಾಸರವಳ್ಳಿ ಅವರು ಸಿನಿಮಾ ಮಾಡಿದ್ದರು. ವಾಚ್‌ ಮನ್‌ ಒಬ್ಬ ತನ್ನ ಪಿಂಚಣಿಗಾಗಿ ಸರಕಾರಿ ಕಚೇರಿಗಳಿಗೆ ಅಲೆ ಅಲೆದು ಬಸವಳಿಯುವ ಕಥೆ ಅದು. ಅಂಥದ್ದೇ ಪರಿಸ್ಥಿತಿ ರಾಜ್ಯದ ಶಾಸಕರಿಗೂ ಬಂದಿರುವುದು ದುರದೃಷ್ಟಕರ. ಶಾಸಕರು ಯೋಜನೆಗಳಾಗಿ ಮಂತ್ರಿಗಳು, ಎಂಜಿಯರ್‌ ಗಳ ಕಚೇರಿಗಳ ಸುತ್ತ ತಬರನಂತೆ ಸುತ್ತುತ್ತಿದ್ದಾರೆ. ರಾಜ್ಯದಲ್ಲಿ ಇಂಥ ದುಸ್ಥಿತಿ ಹಿಂದೆಂದೂ…

Read More

ನವದೆಹಲಿ: ಲೀಡ್ಸ್‌ನಲ್ಲಿ ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನ್ನಿಂಗ್ಸ್‌ನಲ್ಲಿ ಅದ್ಭುತ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ಕೆಎಲ್ ರಾಹುಲ್ ಸುನಿಲ್ ಗವಾಸ್ಕರ್ ಮತ್ತು ರಾಹುಲ್ ದ್ರಾವಿಡ್ ಸೇರಿದಂತೆ ಇತರ ದಿಗ್ಗಜ ಆಟಗಾರರ ದಾಖಲೆಗಳನ್ನು ಮುರಿದರು. ಲೀಡ್ಸ್‌ನಲ್ಲಿ ನಡೆದ 4ನೇ ದಿನದಂದು ಸವಾಲಿನ ಪರಿಸ್ಥಿತಿಯಲ್ಲಿ ಎರಡನೇ ಇನ್ನಿಂಗ್ಸ್‌ನಲ್ಲಿ ರಾಹುಲ್ ಅದ್ಭುತ ಶತಕ ಬಾರಿಸಿದರು ಮತ್ತು ಪ್ರವಾಸಿ ತಂಡದ ಬ್ಯಾಟಿಂಗ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದರು. ತಮ್ಮ ಇನಿಂಗ್ಸ್ ಅವಧಿಯಲ್ಲಿ ರಾಹುಲ್ ಒಂದು ದೊಡ್ಡ ಮೈಲಿಗಲ್ಲು ಸಾಧಿಸಿದ್ದಾರೆ. ಇಂಗ್ಲೆಂಡ್‌ನಲ್ಲಿ ಟೆಸ್ಟ್ ಕ್ರಿಕೆಟ್‌ನಲ್ಲಿ ಏಷ್ಯನ್ ಓಪನರ್ ಗಳಿಸಿದ ಅತಿ ಹೆಚ್ಚು ಶತಕಗಳ ದಾಖಲೆಯನ್ನು ಅವರು ಮುರಿದಿದ್ದಾರೆ. ಇದು ಇಂಗ್ಲೆಂಡ್‌ನಲ್ಲಿ ಆರಂಭಿಕರಾಗಿ ಅವರ ಮೂರನೇ ಟೆಸ್ಟ್ ಶತಕವಾಗಿದ್ದು, ಇದು ಈಗ ದೇಶದಲ್ಲಿ ಆರಂಭಿಕರಾಗಿ ಎರಡು ಶತಕಗಳನ್ನು ಗಳಿಸಿದ ಗವಾಸ್ಕರ್, ದ್ರಾವಿಡ್, ರವಿಶಾಸ್ತ್ರಿ, ತಮೀಮ್ ಇಕ್ಬಾಲ್ ಮತ್ತು ವಿಜಯ್ ಮರ್ಚೆಂಟ್ ಅವರನ್ನು ಹಿಂದಿಕ್ಕಿದ ಅತಿ ಹೆಚ್ಚು ಶತಕವಾಗಿದೆ. ಇಂಗ್ಲೆಂಡ್‌ನಲ್ಲಿ ಏಷ್ಯನ್ ಓಪನರ್‌ಗಳಿಂದ ಅತಿ ಹೆಚ್ಚು ಶತಕಗಳು: 1 -…

Read More