Subscribe to Updates
Get the latest creative news from FooBar about art, design and business.
Author: kannadanewsnow09
ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿ ನರೇಗಾ ಯೋಜನೆಯಲ್ಲಿ ಭಾರೀ ಅವ್ಯವಹಾರ ನಡೆದಿದೆ. ಬಹುದೊಡ್ಡ ಹಗರಣವೇ ಆಗಿದೆ ಎಂಬುದಾಗಿ ನಿಮ್ಮ ಕನ್ನಡ ನ್ಯೂಸ್ ನೌ ಸುದ್ದಿ ಪ್ರಕಟಿಸಿತ್ತು. ಈ ವರದಿಯನ್ನು ಗಮನಿಸಿದಂತ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಸೂಕ್ತ ರೀತಿಯಲ್ಲಿ ತನಿಖೆ ನಡೆಸಿ, ವರದಿ ನೀಡುವಂತೆ ಆದೇಶಿಸಿದ್ದಾರೆ. ನಿನ್ನೆ ನಿಮ್ಮ ಕನ್ನಡ ನ್ಯೂಸ್ ನೌನಲ್ಲಿ ರಾಜ್ಯದಲ್ಲೊಂದು ಬಹುದೊಡ್ಡ ಹಗರಣ: ಇಲ್ಲಿ ಸತ್ತವರು, ಅನಾರೋಗ್ಯ ಪೀಡಿತರ ಹೆಸರಿಗೂ ‘ನರೇಗಾ ಹಣ’ ಜಮಾ ಎಂಬ ತಲೆಬರಹದಲ್ಲಿ ಸುದ್ದಿಯನ್ನು ಪ್ರಕಟಿಸಿತ್ತು. ಸಾಗರ ತಾಲ್ಲೂಕಿನ ಕಲ್ಮನೆ ಗ್ರಾಮ ಪಂಚಾಯ್ತಿಯಲ್ಲಿನ ನರೇಗಾ ಯೋಜನೆಯ ಹಗರಣದ ಸುದ್ದಿ ರಾಜ್ಯಾಧ್ಯಂತ ಭಾರೀ ವೈರಲ್ ಕೂಡ ಆಗಿತ್ತು. ಈ ಸುದ್ದಿಯನ್ನು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರು ಗಮನಿಸಿದ್ದು, ಈ ಕುರಿತಂತೆ ಸೂಕ್ತ ತನಿಖೆಗೆ ಇಲಾಖೆಯ ಅಧಿಕಾರಿಗಳಿಗೆ ಖಡಕ್ ಸೂಚನೆ ನೀಡಿದ್ದಾರೆ. ಗ್ರಾಮೀಣಾಭಿವೃದ್ಧಿ ಆಯುಕ್ತಾಲಯದ ಮುಖ್ಯ ಕಾರ್ಯದರ್ಶಿಗಳು ಶಿವಮೊಗ್ಗ ಜಿಲ್ಲಾ…
ಹುಬ್ಬಳ್ಳಿ: ಮೈಸೂರಿನಲ್ಲಿ ನಡೆಯುವ ದಸರಾ ಹಬ್ಬದ ಪ್ರಯುಕ್ತ, ಹೆಚ್ಚುವರಿ ಪ್ರಯಾಣಿಕರ ದಟ್ಟಣೆಯನ್ನು ನಿಭಾಯಿಸಲು, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 07339/07340 ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು – ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲನ್ನು ಚಾಮರಾಜನಗರದವರೆಗೆ ತಾತ್ಕಾಲಿಕವಾಗಿ ವಿಸ್ತರಿಸಲು ನಿರ್ಧರಿಸಿದೆ. 1. ರೈಲು ಸಂಖ್ಯೆ 07339 ಎಸ್ಎಸ್ಎಸ್ ಹುಬ್ಬಳ್ಳಿ – ಕೆಎಸ್ಆರ್ ಬೆಂಗಳೂರು ವಿಶೇಷ ರೈಲು ಸೆಪ್ಟೆಂಬರ್ 28, 2025 ರಿಂದ ಅಕ್ಟೋಬರ್ 4, 2025 ರವರೆಗೆ (ಒಟ್ಟು 07 ಟ್ರಿಪ್ಗಳು) ಚಾಮರಾಜನಗರದವರೆಗೆ ವಿಸ್ತರಣೆಯಾಗಲಿದೆ. 2. ರೈಲು ಸಂಖ್ಯೆ 07340 ಕೆಎಸ್ಆರ್ ಬೆಂಗಳೂರು – ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲು ಸೆಪ್ಟೆಂಬರ್ 29, 2025 ರಿಂದ ಅಕ್ಟೋಬರ್ 5, 2025 ರವರೆಗೆ (ಒಟ್ಟು 07 ಟ್ರಿಪ್ಗಳು) ಚಾಮರಾಜನಗರದಿಂದ ಹೊರಡಲಿದೆ. ಹುಬ್ಬಳ್ಳಿ-ಯಶವಂತಪುರ – ಹುಬ್ಬಳ್ಳಿ ನಡುವಿನ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇರುವುದಿಲ್ಲ. ಬೆಂಗಳೂರಿನ ನಂತರ, ರೈಲು ಸಂಖ್ಯೆ 07339 ಕೆಎಸ್ಆರ್ ಬೆಂಗಳೂರಿನಿಂದ ಬೆಳಿಗ್ಗೆ 07:00 ಗಂಟೆಗೆ ಹೊರಟು ಮಧ್ಯಾಹ್ನ 12:15 ಗಂಟೆಗೆ ಚಾಮರಾಜನಗರ ತಲುಪಲಿದೆ.…
ದೊಡ್ಡಬಳ್ಳಾಪುರ: ರಾಮಯ್ಯನಪಾಳ್ಯ ಫಾರ್ಮ್ ಹೌಸ್ ನಲ್ಲಿ ನಟ ಪ್ರಥಮ್ ಗೆ ಧಮ್ಕಿ ಹಾಕಿದ್ದ ಪ್ರಕರಣದಲ್ಲಿ ಇಬ್ಬರ ವಿರುದ್ಧ ಪ್ರಕರಣ ದಾಖಲಾಗಿತ್ತು. ಆ ಬಳಿಕ ಬಂಧನ ಕೂಡ ಆಗಿತ್ತು. ಈ ಪ್ರಕರಣದಲ್ಲಿ ಜಾಮೀನು ಪಡೆದಿದ್ದರು. ಜಾಮೀನು ಪಡೆದು ಹೊರಗೆ ಬಂದ ನಂತ್ರವೂ ಧಮ್ಕಿ ಹಾಕಿದ್ದರಿಂದ, ಜಾಮೀನು ರದ್ದುಗೊಳಿಸಿ ನ್ಯಾಯಾಧೀಶರು ಜೈಲಿಗೆ ಇಬ್ಬರು ಆರೋಪಿಗಳ್ನು ಕಳುಹಿಸಿದ್ದಾರೆ. ರಾಮಯ್ಯನಪಾಳ್ಯ ಫಾರ್ಮ್ ಹೌಸ್ ನಲ್ಲಿ ನಟ ಪ್ರಥಮ್ ಗೆ ಧಮ್ಕಿ ಹಾಕಿದ ಪ್ರಕರಣ ಸಂಬಂಧ ಆರೋಪಿಗಳಾದ ಬೇಕರಿ ರಘು ಹಾಗೂ ಯಶಸ್ವಿನಿ ಗೌಡ ಜಾಮೀನು ರದ್ದುಗೊಳಿಸಲಾಗಿದೆ. ದೊಡ್ಡಬಳ್ಳಾಪುರ ಜೆಎಂಎಫ್ ಸಿ ನ್ಯಾಯಾಲಯವು ಜಾಮೀನು ರದ್ದುಗೊಳಿಸಿದೆ.ಜಾಮೀನು ರದ್ದುಪಡಿಸಿ ಇಬ್ಬರನ್ನು ಜೈಲಿಗೆ ಕಳುಹಿಸಲಾಗಿದೆ. ಅಂದಹಾಗೇ ಪ್ರಕರಣದಲ್ಲಿ ಷರತ್ತುಬದ್ಧ ಜಾಮೀನನ್ನು ಬೇಕರಿ ರಘು, ಯಶಸ್ವಿನಿಗೆ ನೀಡಲಾಗಿತ್ತು. ಜಾಮೀನು ಪಡೆದ ಬಳಿಕವೂ ನಟ ಪ್ರಥಮ್ ಗೆ ಧಮ್ಕಿ ಹಾಕಿದ ಆರೋಪ ಕೇಳಿ ಬಂದಿತ್ತು. ಕಳೆದ ಶನಿವಾರ ದೊಡ್ಡಬಳ್ಳಾಪುರ ಗ್ರಾಮಾಂತರ ಠಾಣೆಗೆ ನಟ ಪ್ರಥಮ್ ದೂರು ನೀಡಿದ್ದರು. ಪೊಲೀಸರು ಈ ದೂರಿನ ಪ್ರತಿಯನ್ನು ನ್ಯಾಯಾಲಯಕ್ಕೆ…
ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಸೆಪ್ಟೆಂಬರ್ 30 ರಿಂದ, ವಿಶ್ವದಾದ್ಯಂತ ಎಂಟು ಗಣ್ಯ ತಂಡಗಳು 2025 ರ ಐಸಿಸಿ ಮಹಿಳಾ ಏಕದಿನ ವಿಶ್ವಕಪ್ನ 13 ನೇ ಆವೃತ್ತಿಗಾಗಿ ಭಾರತ ಮತ್ತು ಶ್ರೀಲಂಕಾದಲ್ಲಿ ಸ್ಪರ್ಧಿಸಲಿವೆ. ಮುಂದಿನ ಚಾಂಪಿಯನ್ ಅನ್ನು ನಿರ್ಧರಿಸಲು ಒಟ್ಟು 31 ಪಂದ್ಯಗಳು ನಡೆಯಲಿವೆ. ಆಸ್ಟ್ರೇಲಿಯಾ ಹಾಲಿ ಚಾಂಪಿಯನ್ ಆಗಿದ್ದು, ಆತಿಥೇಯ ಭಾರತದಿಂದ ತಮ್ಮ ಕಿರೀಟವನ್ನು ಉಳಿಸಿಕೊಳ್ಳಲು ಕಠಿಣ ಸವಾಲನ್ನು ಎದುರಿಸಲಿದೆ, ಏಕೆಂದರೆ ಅವರು ತಮ್ಮ ತವರು ಪರಿಸ್ಥಿತಿಯಲ್ಲಿ ಬಲಿಷ್ಠರಾಗಿರುತ್ತಾರೆ. ನಾವು ಪಂದ್ಯಾವಳಿಗೆ ಹತ್ತಿರವಾಗುತ್ತಿದ್ದಂತೆ, ಎಲ್ಲಾ ಎಂಟು ತಂಡಗಳು ಮತ್ತು ಅವರ ತಂಡಗಳ ಸಂಪೂರ್ಣ ಪಟ್ಟಿ ಇಲ್ಲಿದೆ. ಆಸ್ಟ್ರೇಲಿಯಾ ಪೂರ್ಣ ತಂಡ ಅಲಿಸಾ ಹೀಲಿ (ನಾಯಕಿ), ಡಾರ್ಸಿ ಬ್ರೌನ್, ಆಶ್ ಗಾರ್ಡ್ನರ್, ಕಿಮ್ ಗಾರ್ತ್, ಗ್ರೇಸ್ ಹ್ಯಾರಿಸ್, ಅಲಾನಾ ಕಿಂಗ್, ಫೋಬೆ ಲಿಚ್ಫೀಲ್ಡ್, ತಹ್ಲಿಯಾ ಮೆಕ್ಗ್ರಾತ್, ಸೋಫಿ ಮೊಲಿನೆಕ್ಸ್, ಬೆತ್ ಮೂನಿ, ಎಲಿಸ್ ಪೆರ್ರಿ, ಮೇಗನ್ ಶುಟ್, ಅನ್ನಾಬೆಲ್ ಸದರ್ಲ್ಯಾಂಡ್, ಜಾರ್ಜಿಯಾ ವೋಲ್, ಜಾರ್ಜಿಯಾ ವೇರ್ಹ್ಯಾಮ್ ಬಾಂಗ್ಲಾದೇಶದ ಪೂರ್ಣ ತಂಡ ನಿಗರ್ ಸುಲ್ತಾನಾ…
ಹಾವೇರಿ: ರಾಜ್ಯದಲ್ಲಿ ಉಂಟಾಗಿರುವ ಅತಿವೃಷ್ಟಿಗೆ ರಾಜ್ಯ ಸರ್ಕಾರ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ಮಾಡಿ, ಮಧ್ಯಂತರ ಪರಿಹಾರ ಕೊಡಬೇಕು. ಕೇಂದಕ್ಕೆ ಬೆಳೆ ನಷ್ಟದ ವರದಿ ಕಳುಹಿಸಿ ಎನ್ಡಿಆರ್ಎಫ್ ಹಾಗೂ ಎಸ್ಡಿಆರ್ಎಫ್ ನಿಯಮಗಳ ಪ್ರಕಾರ ಪರಿಹಾರ ನೀಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಆಗಹಿಸಿದ್ದಾರೆ. ಹಾವೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಈ ವರ್ಷ ವಾಡಿಕೆಗಿಂತ ಅತಿ ಹೆಚ್ಚು ಮಳೆಯಾಗಿದೆ. ಎರಡು ವರ್ಷವೂ ಕೂಡ ರೈತರ ಬೆಳೆ ನಷ್ಟವಾಗಿದೆ. ಬಡವರ ಮನೆ ಬಿದ್ದಿವೆ. ಎಷ್ಟೊ ಮನೆಗಳಲ್ಲಿ ನೀರು ಒಳಗಡೆ ಹೋಗಿ ತೊಂದರೆ ಕೊಟ್ಟಿದೆ. ಇಷ್ಟೆಲ್ಲ ಆದರೂ ಸರ್ಕಾರ ಕಣ್ಣು ಮುಚ್ಚಿ ಕುಳಿತಿದೆ. ರೈತರು ಮತ್ತು ರೈತ ಸಂಘಟನೆಗಳು ಕೂಗು ಹಾಕಿದ ಮೇಲೆ ಸಿಎಂ ಕಾಟಾಚಾರದ ಮೀಟಿಂಗ್ ಮಾಡಿದ್ದಾರೆ. ಇದುವರೆಗೂ ಪರಿಹಾರ ಸಿಕ್ಕಿಲ್ಲ. ರಾಜ್ಯ ಸಕಾರದ ಸೂಚನೆ ಇದೆಯೊ ಗೊತ್ತಿಲ್ಲ. ಬೆಳೆ ನಷ್ಟದ ಕ್ಷೇತವನ್ನು ಪ್ರಾಥಮಿಕ ಸಮೀಕ್ಷೆ ಮಾಡಬೇಕು ಪ್ರತಿ ಗ್ರಾಮ ಪಂಚಾಯತಿ ಮಟ್ಟದಲ್ಲಿ ಎಷ್ಟು ಬೆಳೆ ನಷ್ಟವಾಗಿದೆ…
ಕಠ್ಮಂಡು: ಮಂಗಳವಾರ ಪ್ರಧಾನಿ ಕೆ.ಪಿ. ಶರ್ಮಾ ಓಲಿ ಮತ್ತು ಅವರ ಸರ್ಕಾರವನ್ನು ಪದಚ್ಯುತಗೊಳಿಸಿ ನೇಪಾಳದಲ್ಲಿ ಜನರಲ್-ಝಡ್ ಪ್ರತಿಭಟನಾಕಾರರ ನೇತೃತ್ವದಲ್ಲಿ ನಡೆಯುತ್ತಿರುವ ಹಿಂಸಾತ್ಮಕ ಪ್ರತಿಭಟನೆಗಳ ಮಧ್ಯೆ, ಹಿಮಾಲಯನ್ ರಾಷ್ಟ್ರದಲ್ಲಿ ಮಧ್ಯಂತರ ಸರ್ಕಾರದ ನೇತೃತ್ವವನ್ನು ದೇಶದ ಮಾಜಿ ಮುಖ್ಯ ನ್ಯಾಯಮೂರ್ತಿ ವಹಿಸಿಕೊಂಡಿದ್ದಾರೆ ಎಂದು ವರದಿಯಾಗಿದೆ. ನೇಪಾಳ ಸೇನೆಯು ದೇಶದ ನಿಯಂತ್ರಣವನ್ನು ವಹಿಸಿಕೊಂಡಿದೆ ಮತ್ತು ಮಧ್ಯಂತರ ಸರ್ಕಾರವನ್ನು ರಚಿಸಲು ಮತ್ತು ಸುವ್ಯವಸ್ಥೆಯನ್ನು ಪುನಃಸ್ಥಾಪಿಸಲು ಮುಂದಿನ ಮಾರ್ಗವನ್ನು ಕಂಡುಹಿಡಿಯಲು ಪಾಲುದಾರರೊಂದಿಗೆ ಚರ್ಚೆ ನಡೆಸಲು ಪ್ರತಿನಿಧಿಗಳನ್ನು ಆಯ್ಕೆ ಮಾಡಲು ಬುಧವಾರ ಪ್ರತಿಭಟನಾಕಾರರ ನಡುವೆ ಮಾತುಕತೆ ನಡೆಯಿತು. 4,000 ಕ್ಕೂ ಹೆಚ್ಚು ಯುವಕರು ಆನ್ಲೈನ್ ವರ್ಚುವಲ್ ಸಭೆಯಲ್ಲಿ ಭಾಗವಹಿಸಿದ್ದರು ಎಂದು ವರದಿಗಳು ಹೇಳುತ್ತವೆ, ಈ ಸಂದರ್ಭದಲ್ಲಿ ಕರ್ಕಿ ಅವರ ಹೆಸರನ್ನು ಸೇನೆಯೊಂದಿಗೆ ಮಾತುಕತೆ ನಡೆಸಲು ಮತ್ತು ಮಧ್ಯಂತರ ಆಡಳಿತದ ಮುಖ್ಯಸ್ಥರನ್ನಾಗಿ ಮಾಡಲು ಭಾಗವಹಿಸುವವರು ಚರ್ಚಿಸಿದರು ಮತ್ತು ವ್ಯಾಪಕವಾಗಿ ಒಪ್ಪಿಕೊಂಡರು. https://kannadanewsnow.com/kannada/dr-dinesh-has-been-appointed-as-the-new-director-of-jayadeva-heart-hospital-in-bengaluru/ https://kannadanewsnow.com/kannada/women-should-be-careful-now-if-they-sleep-wearing-a-bra-at-night/
ತ್ರಿಷ್ಟಿಯನ್ನು ಆಚರಿಸಲು ಸಾಮಾನ್ಯವಾಗಿ ಬಾಗಿಲಲ್ಲಿ ನಿಂಬೆಹಣ್ಣನ್ನು ಎರಡು ಭಾಗಗಳಾಗಿ ಕತ್ತರಿಸಲಾಗುತ್ತದೆ. ಇದನ್ನು ಮಾಡುವವರು ಗಮನಿಸಬೇಕಾದ ಒಂದು ಪ್ರಮುಖ ಅಂಶವಿದೆ. ನೆರೆಹೊರೆಯಲ್ಲಿ ಕಾಣದಂತೆ ಅನೇಕ ಜನರು ಅನೇಕ ಕೆಲಸಗಳನ್ನು ಮಾಡುತ್ತಿದ್ದಾರೆ. ಆ ಸಾಲಿನಲ್ಲಿ ನಿಂಬೆಹಣ್ಣಿನಿಂದ ನೀವು ಏನು ಮಾಡಬಹುದು? ಅದನ್ನೇ ನಾವು ಈ ಆಧ್ಯಾತ್ಮಿಕ ದಾಖಲೆಯ ಮೂಲಕ ತಿಳಿದುಕೊಳ್ಳಲು ಹೊರಟಿದ್ದೇವೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ ವಿಶೇಷ ಪರಿಹಾರ ತಿಳಿಸುತ್ತಾರೆ 9686268564 ಕಣ್ಣಿನ…
ಮಂಡ್ಯ: ಇಂದು ಮದ್ಧೂರಲ್ಲಿ 20ಕ್ಕೂ ಹೆಚ್ಚು ಗಣಪತಿ ಮೂರ್ತಿಗಳನ್ನು ಸಾಮೂಹಿಕವಾಗಿ ಮೆರವಣಿಗೆ ಮೂಲಕ ಕೊಂಡೊಯ್ದು, ವಿಸರ್ಜನೆ ಮಾಡಲಾಗಿದೆ. ಅಂದು ಕಲ್ಲು ತೂರಿ ಅವಮಾನ ಮಾಡಿದ್ರು. ಇಂದು ಅತ್ಯಂತ ಅಭಿಮಾನದಿಂದ ಸಾಮೂಹಿಕ ಗಣೇಶ ಮೆರವಣಿಗೆ ಮಾಡಿ, ವಿಸರ್ಜನೆ ಮಾಡಲಾಯಿತು ಎಂಬುದಾಗಿ ಬಿಜೆಪಿ ಮುಖಂಡ ಎಸ್ ಪಿ ಸ್ವಾಮಿ ತಿಳಿಸಿದ್ದಾರೆ. ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಅಂದು ಕಲ್ಲು ತೂರಿ ಗಣಪತಿಗೆ ಅಪಮಾನ ಮಾಡಿದ್ರು. ಇಂದು ಅತ್ಯಂತ ಅಭಿಮಾನದಿಂದ ಸಾಮೂಹಿಕ ಗಣೇಶ ಮೆರವಣಿಗೆ, ವಿಸರ್ಜನೆ ಆಗಿದೆ. ಇಂದಿನ ಕಾರ್ಯಕ್ರಮ 50 ಸಾವಿರ ಜನರ ನಿರೀಕ್ಷೆ ಇತ್ತು. ಅಷ್ಟೆ ಪ್ರಮಾಣದ ಜನರು ಇವತ್ತು ಸೇರಿದ್ದರು ಎಂದರು. 28 ಗಣಪತಿ ಬರಬೇಕಿತ್ತು. 20ಕ್ಕೂ ಹೆಚ್ಚು ಗಣಪತಿಗಳ ಸಾಮೂಹಿಕ ಮೆರವಣಿಗೆ, ವಿಸರ್ಜನೆ ಮಾಡಲಾಗಿದೆ. ಅಂದು ಪೆಟ್ಟು ತಿಂದ ಕಾರಣಕ್ಕೆ ಇಂದು ಹಿಂದೂ ಸಮಾಜ ಒಂದಾಗಿದೆ. ಹೀಗಾಗಿ ಪೆಟ್ಟು ತಿಂದವರಿಗೂ ಅಭಿನಂದನೆ ಸಲ್ಲಿಸುತ್ತೇನೆ. ಇಂದಿನ ಕಾರ್ಯಕ್ರಮದ ಯಶಸ್ವಿಗೆ ಕಾರಣಕರ್ತರಾದ ಎಲ್ಲರಿಗೂ ಅಭಿನಂದನೆಗಳು, ಧನ್ಯವಾದಗಳನ್ನು ತಿಳಿಸಿದರು. ವರದಿ: ಗಿರೀಶ್ ರಾಜ್,…
ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಅದ್ಧೂರಿಯಾಗಿ ಸಾಮೂಹಿಕವಾಗಿ ಗಣಪತಿ ವಿಸರ್ಜನೆ ಮಾಡಲಾಯಿತು. ಈ ಮೂಲಕ ಬೃಹತ್ ಮೆರವಣಿಗೆ ಮೂಲಕ ಹಿಂದೂಗಳ ಶಕ್ತಿ ಪ್ರದರ್ಶನದ ಮೂಲಕ ಗಣಪತಿ ವಿಸರ್ಜನೆ ಮೆರವಣಿಗೆಗೆ ತೆರೆ ಬಿದ್ದಿದೆ. ಮಂಡ್ಯದ ಮದ್ದೂರಲ್ಲಿ ಗಣಪತಿ ಮೆರವಣಿಗೆ ಸಂದರ್ಭದಲ್ಲಿ ಗಲಾಟೆ ಕಲ್ಲು ತೂರಾಟ ನಡೆದಿತ್ತು. ಈ ಬಳಿಕ ಇಂದು ಮದ್ದೂರಲ್ಲಿ 14 ಗಣಪತಿಗಳನ್ನು ಸಾಮೂಹಿಕವಾಗಿ ವಿಸರ್ಜನೆ ಮಾಡಲು ನಿರ್ಧರಿಸಲಾಗಿತ್ತು. ಅದರಂತೆ ಬೃಹತ್ ಮೆರವಣಿಗೆ ಮೂಲಕ ಇಂದು ಮದ್ದೂರಲ್ಲಿ ಸಾಮೂಹಿಕವಾಗಿ ಗಣಪತಿಯನ್ನು ವಿಸರ್ಜನೆ ಮಾಡಲಾಯಿತು. ಐತಿಹಾಸಿಕ ಮೆರವಣಿಗೆಯಲ್ಲಿ ಸಾವಿರಾರು ಮಂದಿ ಭಾಗಿಯಾಗಿದ್ದರು. ಗಣಪತಿ ಮೆರವಣಿಗೆಗೆ ಕಲ್ಲು ಹೊಡೆದದ್ದು ಖಂಡಿಸಿ ನಡೆದ ಮೆರವಣಿಗೆ ಇದಾಗಿತ್ತು. ಸುಮಾರು 3.5 ಕಿಲೋ ಮೀಟರ್ ಬೃಹತ್ ಮೆರವಣಿಗೆ ನಡೆಯಿತು. ಸತತ ಐದು ಗಂಟೆಗಳ ಕಾಲ ಮೆರವಣಿಗೆ ಸಾಗಿತು. ಡಿಜೆ ಸದ್ದಿಗೆ ಸಾವಿರಾರು ಜನರು ಕುಣಿದು ಕುಪ್ಪಳಿಸಿದರು. ಶಿಂಷಾ ನದಿಯ ತಟದವರೆಗೆ ಸಾಗಿದಂತ ಮೆರವಣಿಗೆಯು, 14 ಗಣಪತಿಗಳನ್ನು ಸಾಮೂಹಿಕವಾಗಿ ಶಿಂಷಾ ನದಿಯಲ್ಲಿ ವಿಸರ್ಜನೆ ಮಾಡಲಾಯಿತು. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/protesters-attempting-to-lay-siege-to-the-vidhana-soudha-were-taken-into-custody-by-the-police/…
ಬೆಂಗಳೂರು: ನಾಲ್ಕು ಸಮುದಾಯಗಳಿಗೆ ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಪ್ರತಿಭಟನೆ ತೀವ್ರ ಸ್ವರೂಪಕ್ಕೆ ಪಡೆದು, ವಿಧಾನಸೌಧಕ್ಕೆ ಮುತ್ತಿಗೆ ಹಾಕೋದಕ್ಕೆ ಯತ್ನಿಸಿದಂತ ಪ್ರತಿಭಟನಾಕಾರರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಾನ್ಯ ಸಿದ್ದರಾಮಯ್ಯನವರೇ, ರಾಜ್ಯದಲ್ಲಿ ಎಷ್ಟು ದಿನ ಮುಖ್ಯಮಂತ್ರಿಗಳಾಗಿ (ಸಿಎಂ) ಸಿ.ಎಂ. ಕುರ್ಚಿಯಲ್ಲಿ ಕೂತಿದ್ದೀರಿ ಎಂಬುದು ಮುಖ್ಯವಲ್ಲ; ಆ ಕುರ್ಚಿಯಲ್ಲಿ ಕೂತಾಗ ಎಲ್ಲ ಸಮುದಾಯಗಳಿಗೆ ನ್ಯಾಯ ಕೊಟ್ಟಿದ್ದೀರಾ ಎಂಬುದು ಅತ್ಯಂತ ಮುಖ್ಯವಾದುದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ಪರಿಶಿಷ್ಟ ಜಾತಿಗಳ ಮೀಸಲಾತಿಯನ್ನು ಅವೈಜ್ಞಾನಿಕವಾಗಿ ವರ್ಗೀಕರಣ ಮಾಡಿ ಬಂಜಾರ, ಭೋವಿ, ಕೊರಚ, ಕೊರವ ಸಮುದಾಯಗಳಿಗೆ ಅನ್ಯಾಯವೆಸಗಿರುವ ಕಾಂಗ್ರೆಸ್ ಸರ್ಕಾರದ ವಿರುದ್ಧ ಇಂದು ಬೆಳಿಗ್ಗೆ ಫ್ರೀಡಂ ಪಾರ್ಕ್ ನಲ್ಲಿ “ಬೆಂಗಳೂರು ಚಲೋ” ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ಪ್ರತಿಭಟನಾಕಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಈ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಭಾಗವಹಿಸಬೇಕಾಗಿತ್ತು ಎಂದು ನುಡಿದರು. ಮುಖ್ಯಮಂತ್ರಿಗಳೇ, ಮನೆ ಮುರಿಯುವ ಕೆಲಸ ಮಾಡುವುದು ಸುಲಭ.…













