Author: kannadanewsnow09

ಬೆಂಗಳೂರು: ಕೆಯುಡಬ್ಲೂಜೆ ಹೊರನಾಡಿನ ಘಟಕವಾಗಿರುವ ಕಾಸರಗೋಡು ಪತ್ರಕರ್ತರ ಸಂಘದ ಕ್ಷೇಮಾಭಿವೃದ್ಧಿ ನಿಧಿಗೆ 25 ಲಕ್ಷ ರೂ ಮಂಜೂರು ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಸಿಎಂ ಗೃಹ ಕಚೇರಿ ಕಾವೇರಿಯಲ್ಲಿ ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮತ್ತು ಕಾಸರಗೋಡು ಘಟಕದ ಅಧ್ಯಕ್ಷ ಎ.ಆರ್.ಸುಬ್ಬಯ್ಯಕಟ್ಟೆ ಅವರ ನೇತೃತ್ವದಲ್ಲಿ ಅಭಿನಂದನೆ ಸಲ್ಲಿಸಲಾಯಿತು. ಕೇರಳ ರಾಜ್ಯದ ಕಾಸರಗೋಡು ಭಾಗದಲ್ಲಿ ಕನ್ನಡ ಪತ್ರಿಕೆಗಳು ಈಗಲೂ ಹೆಚ್ಚಿನ ಪ್ರಸಾರ ಹೊಂದಿದ್ದು, ಕನ್ನಡ ಪತ್ರಕರ್ತರು ಹೆಚ್ಚಿನ ಸಂಖ್ಯೆಯಲ್ಲಿರುವುದರಿಂದ ಅವರ ಹಿತ ರಕ್ಷಣೆ ಮಾಡುವುದು ಸರ್ಕಾರದ ಕರ್ತವ್ಯವಾಗಿದೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಪತ್ರಕರ್ತರ ಸಂಘಕ್ಕೆ ಆರ್ಥಿಕ ನೆರವು ನೀಡಬೇಕು ಎಂದು ಕರ್ನಾಟಕ ಕಾರ್ಯ ನಿರತ ಪತ್ರಕರ್ತರ ಸಂಘ ಮತ್ತು ಕಾಸರಗೋಡು ಘಕದ ಮಾಡಿದ ಮನವಿಯನ್ನು ಪರಿಗಣಿಸಿರುವ ಮುಖ್ಯಮಂತ್ರಿಗಳು 25 ಲಕ್ಷ ರೂ ಮಂಜೂರು ಮಾಡಿರುವುದನ್ನು ಈ ಸಂದರ್ಭದಲ್ಲಿ ಶ್ಲಾಸಲಾಯಿತು. ಇದೇ ಸಂದರ್ಭದಲ್ಲಿ ಸಿಎಂ ಸಿದ್ದರಾಮಯ್ಯ ಅವರು ನಿಮಗೆಲ್ಲ ಒಳ್ಳೆಯದಾಗಲಿ ಎಂದು ಶುಭ ಹಾರೈಸಿದರು. ಪ್ರಭಾಕರ್‌ಗೂ ಸನ್ಮಾನ: ಕ್ಷೇಮಾಭಿವೃದ್ಧಿ…

Read More

ಜಪಾನ್: ಜಪಾನಿನ ಖ್ಯಾತ ಆನಿಮೇಟರ್ ಮತ್ತು ನಿರ್ದೇಶಕ ಶಿಗೆಕಿ ಅವೈ ಅವರು 71 ನೇ ವಯಸ್ಸಿನಲ್ಲಿ ನಿಧನರಾದರು. ಅನಿಮೇಷನ್ ಜಗತ್ತಿಗೆ ಅವರ ಕೊಡುಗೆಗಳು ತುಂಬಾ ದುಃಖಕರವಾಗಿರುತ್ತದೆ. ಅವರನ್ನು ಶಿಗೆನೋರಿ ಅವೈ ಎಂದೂ ಕರೆಯಲಾಗುತ್ತಿತ್ತು. ಅನುಭವಿ ಆನಿಮೇಟರ್ ಮತ್ತು ನಿರ್ದೇಶಕಿ ಶಿಗೆಕಿ ಅವೈ ಅವರ ನಷ್ಟಕ್ಕೆ ಅನಿಮೆ ಸಮುದಾಯವು ಶೋಕಿಸುತ್ತಿದೆ. ವಿಶ್ವಾಸಾರ್ಹ ಮೂಲಗಳು ಅವರ ನಿಧನದ ಸುದ್ದಿಯನ್ನು ಹಂಚಿಕೊಂಡ ನಂತರ ಶ್ರದ್ಧಾಂಜಲಿಗಳು ಹರಿದು ಬರುತ್ತಿವೆ. ಅನಿಮೆ ನ್ಯೂಸ್ ಸೆಂಟರ್ ಪ್ರಕಾರ, 1980 ರ ದಶಕದಿಂದಲೂ ಅವೈ ಉದ್ಯಮದಲ್ಲಿ ಪ್ರಮುಖ ವ್ಯಕ್ತಿಯಾಗಿದ್ದು, ಮರೆಯಲಾಗದ ಪರಂಪರೆಯನ್ನು ಬಿಟ್ಟು ಹೋಗಿದ್ದಾರೆ. ಅನಿಮೆ ಉದ್ಯಮದಲ್ಲಿ ಶಿಗೆಕಿ ಅವೈ ಅವರ ಪರಂಪರೆ ಗಮನಾರ್ಹವಾದುದು. ದಶಕಗಳಲ್ಲಿ, ಅವರು 200 ಕ್ಕೂ ಹೆಚ್ಚು ಸಂಚಿಕೆಗಳನ್ನು ನಿರ್ದೇಶಿಸಿದರು ಮತ್ತು ಸುಮಾರು 500 ಕ್ಕೂ ಹೆಚ್ಚು ಸಂಚಿಕೆಗಳಿಗೆ ಪ್ರಮುಖ ಅನಿಮೇಷನ್ ಅನ್ನು ಕೊಡುಗೆ ನೀಡಿದರು. ಅವರ ಕೆಲಸವು ಮೈ ಹೀರೋ ಅಕಾಡೆಮಿಯಾ, ಬ್ಲ್ಯಾಕ್ ಕ್ಲೋವರ್, ಒನ್ ಪಂಚ್ ಮ್ಯಾನ್, ಅಟ್ಯಾಕ್ ಆನ್ ಟೈಟಾನ್, ಬಂಗೋ ಸ್ಟ್ರೇ ಡಾಗ್ಸ್,…

Read More

ನವದೆಹಲಿ: “ರಾಹುಲ್ ಗಾಂಧಿ ಅವರನ್ನು ಹಾಗೂ ಪಕ್ಷದ ಪ್ರಧಾ‌ನ ಕಾರ್ಯದರ್ಶಿಗಳನ್ನು ಭೇಟಿ ಮಾಡಿ ನೂತನ ಕಾಂಗ್ರೆಸ್ ಭವನದ ಭೂಮಿ ಪೂಜೆಗೆ ಸಮಯ ನೀಡಿ ಎಂದು ಹೇಳಿದ್ದೇನೆ. 100 ಕಾಂಗ್ರೆಸ್ ಕಚೇರಿಗಳನ್ನು ಕಟ್ಟಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಅವರು ಸಮಯ ನೀಡಿದಾಗ ಭೂಮಿಪೂಜೆ ನಡೆಸಲಾಗುವುದು” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಹೇಳಿದರು. ದೆಹಲಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ರಾಜ್ಯದಲ್ಲಿ ಪಕ್ಷದ ಬೆಳವಣಿಗೆ ವಿಚಾರವಾಗಿ ಹೈಕಮಾಂಡ್ ಬಳಿ ಚರ್ಚೆ ನಡೆಸಿದ್ದೀರಾ ಎಂದು ಕೇಳಿದಾಗ, “ಜಿಲ್ಲಾ ಉಸ್ತುವಾರಿ ಸಚಿವರ ನೇತೃತ್ವದಲ್ಲಿ ಕಾರ್ಯಕರ್ತರ ಸಭೆ ನಡೆಸಬೇಕು ಎಂದು ಸೂಚನೆ ನೀಡಲಾಗಿದ್ದು, ವಿಧಾನಸಭೆ ಅಧಿವೇಶನ ಮುಗಿದ ನಂತರ ಎಲ್ಲಾ ಕ್ಷೇತ್ರಗಳಲ್ಲಿ ಸಭೆ ನಡೆಸಲಾಗುವುದು” ಎಂದರು. “ರಾಜ್ಯದ ಎಲ್ಲಾ ಬೆಳವಣಿಗೆಗಳು ಹೈಕಮಾಂಡಿನ ಗಮನದಲ್ಲಿವೆ. ಕಾರ್ಯಕರ್ತರ ಸಭೆ ವಿಚಾರವನ್ನು ತಿಳಿಸಲಾಗಿದೆ. ಸಭೆಯ ವರದಿಯನ್ನು ನೀಡಬೇಕು ಎಂದು ಸೂಚನೆ ನೀಡಿದ್ದಾರೆ” ಎಂದರು. ಅಧಿಕಾರ ಹಸ್ತಾಂತರ ವಿಚಾರವಾಗಿ ಚರ್ಚೆ ನಡೆಸಲಾಯಿತೇ ಎಂದು ಕೇಳಿದಾಗ, “ಈ ರೀತಿಯ ಯಾವ ಸುದ್ದಿಯೂ ಇಲ್ಲ,‌ ಏನೂ ಇಲ್ಲ. ನಾವು…

Read More

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರ ಬೇಡಿಕೆಗಳನ್ನು ಈಡೇರಿಸಲು ರಾಜ್ಯ ಸರ್ಕಾರ ಬದ್ದವಾಗಿದೆ‌‌. ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಹಿತದೃಷ್ಟಿಯಿಂದ ಕ್ರಮ ಕೈಗೊಳ್ಳಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ಗೌರವಧನ ಹೆಚ್ಚಳ ಹಾಗೂ ನಿವೃತ್ತಿಯಾದ ಎಲ್ಲರಿಗೂ ಗ್ರಾಚ್ಯುಟಿ ಸೌಲಭ್ಯ ಜಾರಿಗೆ ಒತ್ತಾಯಿಸಿ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರ ಸಂಘಟನೆಗಳು ನಡೆಸಿದ ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿ ಮನವಿ ಸ್ವೀಕರಿಸಿ ಸಚಿವರು ಮಾತನಾಡಿದರು.‌ ಮಹಿಳೆಯರ ಸಬಲೀಕರಣಕ್ಕಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವದ ನಮ್ಮ ಸರ್ಕಾರ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೆ ತಂದಿದೆ. ಇದರ ನಡುವೆಯೂ ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಸಹಾಯಕಿಯರಿಗೆ ಈ ಬಜೆಟ್‌ನಲ್ಲಿ ಗೌರವ ಧನ ಹೆಚ್ಚಿಸಲಾಗಿದೆ ಎಂದರು. ನಾಳೆ ಸಂಘಟನೆಗಳೊಂದಿಗೆ ಸಭೆ ಅಂಗನವಾಡಿ ಕಾರ್ಯಕರ್ತೆಯರ ಹಾಗೂ ಸಹಾಯಕಿಯರ ಎಲ್ಲಾ ಸಂಘಟನೆಗಳೊಂದಿಗೆ ವಿಧಾನಸೌಧದಲ್ಲಿ ಗುರುವಾರ ಸಭೆ ನಡೆಸುವುದಾಗಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ತಿಳಿಸಿದರು. ಈ ವೇಳೆ ಸಚಿವರ ವಿಶೇಷ ಕರ್ತವ್ಯಾಧಿಕಾರಿ…

Read More

ಬೆಂಗಳೂರು: ನಿಮ್ಮ ಕಾಲೇಜಿನಲ್ಲಿ ಓದುವ ಹುಡುಗಿ ಅಥವಾ ಹುಡುಗನ ಮೇಲೆ ನಿಮಗೆ ಮನಸ್ಸಾಗಿದ್ದರೆ, ಅವರೊಂದಿಗೆ ಸಂಪರ್ಕ ಸಾಧಿಸುವುದು ಇದೀಗ ಸುಲಭ!. ಟಿಂಡರ್‌ ಯು ಡೇಟಿಂಗ್‌ ಆಪ್‌ ನಿಮ್ಮ ಬಯಕೆ ಈಡೇರಿಸಲು ವಿಶ್ವವಿದ್ಯಾಲಯ ಹಾಗೂ ಕಾಲೇಜು ವಿದ್ಯಾರ್ಥಿಗಳಿಗಾಗಿಯೇ ಪ್ರತ್ಯೇಕ ಆಯ್ಕೆಯನ್ನು ತನ್ನ ಡೇಟಿಂಗ್‌ ಆಪ್‌ನಲ್ಲಿ ವಿನ್ಯಾಸಗೊಳಿಸಿದೆ!. ಈ ಕುರಿತು ಮಾತನಾಡಿದ ಟಿಂಡರ್‌ ಕಮ್ಯುನಿಕೇಷನ್‌ ಲೀಡ್‌ ಅದಿತಿ ಶೋರ್ವಾಲ್, ಟಿಂಡರ್‌ ಡೇಟಿಂಗ್‌ ಆಪ್‌ನಲ್ಲಿ ನಿಮ್ಮ ಮಾನ್ಯ ಕಾಲೇಜು ಇಮೇಲ್ ವಿಳಾಸವನ್ನು ಹಾಕುವ ಮೂಲಕ ರಿಜಿಸ್ಟರ್‌ ಆಗಿದ್ದರೆ, ನೀವು ನಿಮ್ಮದೇ ಕಾಲೇಜಿನ ಕ್ರಶ್‌ನೊಂದಿಗೆ ಡೇಟಿಂಗ್‌ ಮಾಡಬಹುದು, ಅದೂ ಸುರಕ್ಷಿತವಾಗಿ. ಹೌದು, ಇತ್ತೀಚೆಗೆ ಯುವ ಸಮೂಹ ಡೇಟಿಂಗ್‌ನಲ್ಲಿ ಹೆಚ್ಚು ಆಸಕ್ತಿ ಹೊಂದುತ್ತಿದ್ದಾರೆ. ಅವರಿಗಾಗಿ ಟಿಂಡರ್‌ ಯು ಈಗಾಗಲೇ ನಿಮ್ಮ ಸಹಚರವಾಗಿದೆ. ಈ ಆಪ್‌ನಲ್ಲಿ ಯಾರೋ ಅನಾಮಿಕ ವ್ಯಕ್ತಿಯನ್ನು ಹುಡುಕುವ ಬದಲು ನಿಮ್ಮ ಸುತ್ತಮುತ್ತಲೇ ಇರುವ ನಿಮ್ಮದೇ ಕಾಲೇಜಿನ ಕ್ರಶ್‌ನನ್ನು ಇದೇ ಆಪ್‌ನಲ್ಲಿ ಸುಲಭವಾಗಿ ಹುಡುಕಬಹುದು. ಒನ್‌ಪೋಲ್ ಸಮೀಕ್ಷೆಯ ಪ್ರಕಾರ ಶೇ.57ರಷ್ಟು ಭಾರತೀಯ ವಯಸ್ಕರು (18-25) ಡೇಟಿಂಗ್ ಅಪ್ಲಿಕೇಶನ್‌ಗಳ…

Read More

ಶಿವಮೊಗ್ಗ : ಕಾನೂನಿನ ಅಜ್ಞಾನಕ್ಕೆ ಕ್ಷಮೆಯಿಲ್ಲ. ಆದ್ದರಿಂದ ತಮಗೆ ಅನ್ವಯಿಸುವ ಕಾನೂನುಗಳನ್ನು ಎಲ್ಲ ಸರ್ಕಾರಿ ಅಧಿಕಾರಿ/ನೌಕರರು ತಿಳಿದುಕೊಂಡಿರಬೇಕು. ಕಠಿಣವಾದ ಕಾಯ್ದೆಯಡಿ ರಕ್ಷಣಾತ್ಮಕ ಕಾನೂನುಗಳೂ ಇದ್ದು ಅವುಗಳನ್ನು ತಿಳಿದುಕೊಳ್ಳಬೇಕೆಂದು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್. ಫಣೀಂದ್ರ ಅವರು ತಿಳಿಸಿದರು. ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ ಮತ್ತು ಜಿಲ್ಲಾ ನ್ಯಾಯಾಂಗ ಘಟಕ, ಜಿಲ್ಲಾಡಳಿತ ಶಿವಮೊಗ್ಗ ಇವರ ಸಂಯುಕ್ತ ಆಶ್ರಯದಲ್ಲಿ ಬುಧವಾರ ಕುವೆಂಪು ರಂಗಮAದಿರದಲ್ಲಿ ಶಿಕ್ಷಣ ಇಲಾಖೆ, ರೇಷ್ಮೆ ಇಲಾಖೆ, ಕೃಷಿ ಮತ್ತು ತೋಟಗಾರಿಕೆ ಇಲಾಖೆ, ನ್ಯಾಯಾಂಗ ನೌಕರರು, ಜಿಲ್ಲಾ ಮತ್ತು ತಾಲ್ಲೂಕು ಹಾಗೂ ಇತರೆ ಇಲಾಖೆ ಅಧಿಕಾರಿಗಳೊಂದಿಗೆ ಏರ್ಪಡಿಸಲಾಗಿದ್ದ ‘ಲೋಕಾಯುಕ್ತ ಕಾಯ್ದೆಯ ಕಾನೂನು ಅರಿವು ಕಾರ್ಯಕ್ರಮವನ್ನು’ ಉದ್ಘಾಟಿಸಿ ಅವರು ಮಾತನಾಡಿದರು. ಕರ್ನಾಟಕ ಲೋಕಾಯುಕ್ತ ಕಾಯ್ದೆಯಲ್ಲಿ ಸಾರ್ವಜನಿಕರ ಹಕ್ಕುಗಳು, ಬಾಧ್ಯತೆಗಳು ಜೊತೆಗೆ ಅಧಿಕಾರಿಗಳಿಗೆ ಯಾವ ಯಾವ ರಕ್ಷಣೆ ಇದೆ ಎಂಬುದನ್ನೂ ತಿಳಿಸಲಾಗಿದೆ. ಎಲ್ಲ ಸಾಧಕ ಬಾಧಕಗಳನ್ನು ನೋಡಿಯೇ ಕಾನೂನು ರೂಪುಗೊಂಡಿರುತ್ತದೆ. ತನಗೆ ಕಾನೂನು ಗೊತ್ತಿಲ್ಲ ಎಂದು ಹೇಳಲು ಬರುವುದಿಲ್ಲ. ಗೊತ್ತಿದೆ ಎನ್ನುವ ಪೂರ್ವ…

Read More

ಶಿವಮೊಗ್ಗ : ಬುಧವಾರ ನಗರದ ಕುವೆಂಪು ರಂಗಮಂದಿರದಲ್ಲಿ ಜನರು ಸರ್ಕಾರಿ ಅಧಿಕಾರಿಗಳ ವಿರುದ್ದ, ಸರ್ಕಾರಿ ಕೆಲಸ ಪಡೆಯುವಲ್ಲಿ ಆಗುತ್ತಿರುವ ವಿಳಂಬ ಇತರೆ ಕುರಿತು ಮಾನ್ಯ ನ್ಯಾಯಮೂರ್ತಿಗಳು ಹಾಗೂ ಉಪ ಲೋಕಾಯುಕ್ತರಾದ ಕೆ.ಎನ್.ಫಣೀಂದ್ರ ಇವರಿಗೆ ನೇರವಾಗಿ ದೂರು ಸಲ್ಲಿಸಿದರು. “ಸಾರ್ವಜನಿಕರಿಂದ ಕುಂದುಕೊರತೆಗಳ ಬಗ್ಗೆ ದೂರು ಸ್ವೀಕಾರ, ವಿಚಾರಣೆ ಹಾಗೂ ವಿಲೇವಾರಿ ಸಭಾ ಕಾರ್ಯಕ್ರಮದಲ್ಲಿ ಬುಧವಾರ ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ರವೆಗೆ ವಿವಿಧ ಸರ್ಕಾರಿ ಇಲಾಖೆಗಳು, ಸಂಸ್ಥೆಗಳಿಗೆ ಸಂಬಂಧಿಸಿದಂತೆ ಸುಮಾರು 160 ದೂರುಗಳು ಸ್ವೀಕೃತಗೊಂಡಿದ್ದು, 35 ದೂರು ಅರ್ಜಿಗಳನ್ನು ಉಪ ಲೋಕಾಯುಕ್ತರು ವಿಚಾರಣೆ ಕೈಗೊಂಡರು. ಮಹಾನಗರಪಾಲಿಕೆ, ಕಂದಾಯ ಇಲಾಖೆ, ಗ್ರಾ.ಪಂ ಗಳು, ಕುವೆಂಪು ವಿಶ್ವವಿದ್ಯಾಲಯ, ಅರಣ್ಯ ಇಲಾಖೆ, ಪಿಡಬ್ಲ್ಯೂಡಿ, ಸಹಕಾರ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳ ವಿರುದ್ದ ಅರ್ಜಿದಾರರು ದೂರನ್ನು ಸಲ್ಲಿಸಿದರು. ಉಪ ಲೋಕಾಯುಕ್ತರು ಸದರಿ ದೂರುಗಳ ವಿಚಾರಣೆ ನಡೆಸಿ, ಮಧ್ಯಾಹ್ನದ ಹೊತ್ತಿಗೆ ಸ್ಥಳದಲ್ಲೇ 35 ಅರ್ಜಿಗಳನ್ನು ವಿಲೇವಾರಿ ಮಾಡಿದರು. ತಮ್ಮ ವ್ಯಾಪ್ತಿಗೆ ಒಳಪಡದ ಪ್ರಕರಣಗಳಿಗೆ ಎಲ್ಲಿ ಹೋಗಬೇಕೆಂದು ಮಾರ್ಗದರ್ಶನ ಮಾಡಿದರು.…

Read More

ನವದೆಹಲಿ: ಎಡೆಲ್ವೀಸ್ ಆಸ್ತಿ ಪುನರ್ನಿರ್ಮಾಣ ಕಂಪನಿ (EARC) ಮೈಥಿಲಿ ಬಾಲಸುಬ್ರಮಣಿಯನ್ ಅವರನ್ನು ಮಧ್ಯಂತರ ವ್ಯವಸ್ಥಾಪಕ ನಿರ್ದೇಶಕಿ ಮತ್ತು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯಾಗಿ ನೇಮಕ ಮಾಡಿದೆ. ಇದು ಸೆಪ್ಟೆಂಬರ್ 30 ರವರೆಗೆ ತಕ್ಷಣದಿಂದ ಜಾರಿಗೆ ಬರುತ್ತದೆ. ಮೈಥಿಲಿ ಬಾಲಸುಬ್ರಮಣಿಯನ್ ಸುಮಾರು 5 ವರ್ಷಗಳ ಕಾಲ EARC ಯ ಭಾಗವಾಗಿದ್ದಾರೆ ಮತ್ತು ಬ್ಯಾಂಕಿಂಗ್, NPA ಪರಿಹಾರ ಮತ್ತು ದಿವಾಳಿತನ ಮತ್ತು ದಿವಾಳಿತನ ಸಂಹಿತೆ (IBC) ಪ್ರಕ್ರಿಯೆಗಳಲ್ಲಿ ನಾಲ್ಕು ದಶಕಗಳಿಗೂ ಹೆಚ್ಚು ಅನುಭವ ಹೊಂದಿದ್ದಾರೆ. ಮುಂದಿನ MD ಮತ್ತು CEO ಗಾಗಿ ಗುರುತಿಸುವಿಕೆ ಮತ್ತು ಆಯ್ಕೆ ಪ್ರಕ್ರಿಯೆಯನ್ನು ಮೇಲ್ವಿಚಾರಣೆ ಮಾಡಲು ನಿರ್ದೇಶಕರ ಮಂಡಳಿಯು ಹುಡುಕಾಟ ಸಮಿತಿಯನ್ನು ರಚಿಸಿದೆ ಎಂದು ಕಂಪನಿಯು ಹೇಳಿಕೆಯಲ್ಲಿ ತಿಳಿಸಿದೆ. ಶೋಧನಾ ಸಮಿತಿಯು ಜಾಗತಿಕವಾಗಿ ಪ್ರಸಿದ್ಧವಾದ ಕಾರ್ಯನಿರ್ವಾಹಕ ಹುಡುಕಾಟ ಸಂಸ್ಥೆಯಾದ ಕಾರ್ನ್ ಫೆರ್ರಿ ಅವರನ್ನು ಅದರ ಹುಡುಕಾಟ ಪಾಲುದಾರರಾಗಿ ನೇಮಿಸಿದೆ. ಇದು ಸಮಗ್ರ ಮತ್ತು ಉನ್ನತ-ಕ್ಯಾಲಿಬರ್ ಆಯ್ಕೆ ಪ್ರಕ್ರಿಯೆಯನ್ನು ಖಚಿತಪಡಿಸುತ್ತದೆ. ಕಂಪನಿಯು ರಚನಾತ್ಮಕ ಮತ್ತು ಪಾರದರ್ಶಕ ಆಯ್ಕೆ ಪ್ರಕ್ರಿಯೆಯನ್ನು ನಡೆಸಲು ಬದ್ಧವಾಗಿದೆ ಮತ್ತು…

Read More

ಚಿತ್ರದುರ್ಗ : ಪ್ರಸಕ್ತ ಶೈಕ್ಷಣಿಕ ಸಾಲಿನ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಮಾರ್ಚ್ 21 ರಿಂದ ಪ್ರಾರಂಭಗೊಂಡು, ಏಪ್ರಿಲ್ 04 ರವರೆಗೆ ಜರುಗಲಿವೆ. ಜಿಲ್ಲೆಯ 24,416 ವಿದ್ಯಾರ್ಥಿಗಳು ಎಸ್‍ಎಸ್‍ಎಲ್‍ಸಿ ಪರೀಕ್ಷೆ ಬರೆಯಲಿದ್ದು, ಇದಕ್ಕಾಗಿ 82 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ ಎಂದು ಜಿಲ್ಲಾಧಿಕಾರಿ ಟಿ. ವೆಂಕಟೇಶ್ ತಿಳಿಸಿದ್ದಾರೆ. ಮಾ. 21 ರಿಂದ ಎಸ್‍ಎಸ್‍ಎಲ್‍ಸಿ ಪರೀಕ್ಷೆಗಳು ಪ್ರಾರಂಭವಾಗಲಿದ್ದು, ಪರೀಕ್ಷೆಯನ್ನು ಸುಗಮವಾಗಿ ಜರುಗಿಸಲು ಅನುಕೂಲವಾಗುವಂತೆ 82 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಒಟ್ಟು 24,416 ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದು, ಪರೀಕ್ಷಾ ದಿನಗಳಂದು ಪ್ರಶ್ನೆಪತ್ರಿಕೆಗಳನ್ನು ಕೇಂದ್ರಗಳಿಗೆ ಸಾಗಿಸುವ ಸಲುವಾಗಿ ಈಗಾಗಲೆ ಮಾರ್ಗಾಧಿಕಾರಿಗಳನ್ನು ನೇಮಿಸಲಾಗಿದೆ. ಚಳ್ಳಕೆರೆ ತಾಲ್ಲೂಕಿನಲ್ಲಿ 20 ಪರೀಕ್ಷಾ ಕೇಂದ್ರಗಳನ್ನು ಸ್ಥಾಪಿಸಿದ್ದು, 5472 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ. ಚಿತ್ರದುರ್ಗ ತಾಲ್ಲೂಕಿನಲ್ಲಿ 22 ಪರೀಕ್ಷಾ ಕೇಂದ್ರಗಳಿದ್ದು, 6,635 ವಿದ್ಯಾರ್ಥಿಗಳು. ಹಿರಿಯೂರು ತಾಲ್ಲೂಕಿನಲ್ಲಿ 13 ಪರೀಕ್ಷಾ ಕೇಂದ್ರಗಳಿದ್ದು, 3,677 ವಿದ್ಯಾರ್ಥಿಗಳು. ಹೊಳಲ್ಕೆರೆ ತಾಲ್ಲೂಕಿನಲ್ಲಿ 08 ಪರೀಕ್ಷಾ ಕೇಂದ್ರಗಳಿದ್ದು, 2,854 ವಿದ್ಯಾರ್ಥಿಗಳು. ಹೊಸದುರ್ಗ ತಾಲ್ಲೂಕಿನಲ್ಲಿ 11 ಪರೀಕ್ಷಾ ಕೇಂದ್ರಗಳಿದ್ದು, 3,195 ವಿದ್ಯಾರ್ಥಿಗಳು ಹಾಗೂ…

Read More

ಗಾಝಾ: ದೇರ್ ಅಲ್-ಬಾಲಾಹ್ನಲ್ಲಿರುವ ವಿಶ್ವಸಂಸ್ಥೆಯ ಪ್ರಧಾನ ಕಚೇರಿ ಮೇಲೆ ಇಸ್ರೇಲ್ ವೈಮಾನಿಕ ದಾಳಿ: ಓರ್ವ ವಿದೇಶಿ ಪ್ರಜೆ ಸಾವು, ನಾಲ್ವರಿಗೆ ಗಾಯವಾಗಿರುವುದಾಗಿ ತಿಳಿದು ಬಂದಿದೆ. ಗಾಝಾ ನಗರದ ವಿಶ್ವಸಂಸ್ಥೆಯ ಪ್ರಧಾನ ಕಚೇರಿಯ ಮೇಲೆ ಬುಧವಾರ ಇಸ್ರೇಲ್ ನಡೆಸಿದ ವೈಮಾನಿಕ ದಾಳಿಯಲ್ಲಿ ವಿದೇಶಿ ಪ್ರಜೆಯೊಬ್ಬರು ಸಾವನ್ನಪ್ಪಿದ್ದಾರೆ ಮತ್ತು ಇತರ ನಾಲ್ವರು ಗಾಯಗೊಂಡಿದ್ದಾರೆ ಎಂದು ಗಾಝಾದ ಆರೋಗ್ಯ ಸಚಿವಾಲಯ ತಿಳಿಸಿದೆ. ದೇರ್ ಅಲ್-ಬಾಲಾಹ್ನಲ್ಲಿರುವ ವಿಶ್ವಸಂಸ್ಥೆಯ ಕಾಂಪೌಂಡ್ ಮೇಲೆ ದಾಳಿ ನಡೆಸುವುದನ್ನು ಇಸ್ರೇಲ್ ಮಿಲಿಟರಿ ನಿರಾಕರಿಸಿದ್ದು, ಉತ್ತರ ಗಾಝಾದಲ್ಲಿನ ಹಮಾಸ್ ತಾಣವನ್ನು ಗುರಿಯಾಗಿಸಿಕೊಂಡಿದೆ ಎಂದು ಹೇಳಿದೆ. https://kannadanewsnow.com/kannada/udupi-woman-tied-to-tree-and-assaulted-shocked-to-see-video-says-cm-siddaramaiah/ https://kannadanewsnow.com/kannada/steps-will-be-taken-to-curb-the-menace-of-fake-pesticides-minister-ss-mallikarjun/

Read More