Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯ ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ತುರ್ತು ನಿರ್ವಹಣೆ ಕೆಲಸದ ಪ್ರಯುಕ್ತ 12 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಮುಂದುವರಿದು, ಸುಮ್ಮನಹಳ್ಳಿ ವಿದ್ಯುತ್ ಚಿತಾಗಾರದಲ್ಲಿ ಜುಲೈ 16 ರಿಂದ 27ನೇ ಜುಲೈ 2025 ರವರೆಗೆ 12 ದಿನಗಳ ಕಾಲ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗುತ್ತಿದೆ. ಈ ಚಿತಾಗಾರಕ್ಕೆ ಮೃತ ದೇಹಗಳನ್ನು ದಹನ ಕ್ರಿಯೆಗಾಗಿ ತರುವ ಸಾರ್ವಜನಿಕರು ಸಮೀಪದಲ್ಲಿರುವ ಪೀಣ್ಯ, ಮೇಡಿ ಅಗ್ರಹಾರ ಅಥವಾ ಕೆಂಗೇರಿ ವಿದ್ಯುತ್ ಚಿತಾಗಾರವನ್ನು ಉಪಯೋಗಿಸಿಕೊಳ್ಳಬಹುದಾಗಿರುತ್ತದೆ ಎಂದು ಕಾರ್ಯಪಾಲಕ ಅಭಿಯಂತರರು ತಿಳಿಸಿರುತ್ತಾರೆ. https://kannadanewsnow.com/kannada/sda-suspended-under-the-allegation-of-assault-on-a-female-student/ https://kannadanewsnow.com/kannada/before-accepting-money-on-google-pay-or-phone-pay-shop-and-grocery-store-owners-should-read-this-news/
ಚಿಕ್ಕಬಳ್ಳಾಪುರ: ವಿದ್ಯಾರ್ಥಿನಿ ಮೇಲೆ ಕಾಲೇಜಿನ ಕ್ಲರ್ಕ್ ನಿಂದಲೇ ಅತ್ಯಾಚಾರ ಆರೋಪ ಕೇಳಿ ಬಂದಿತ್ತು. ಈ ಆರೋಪದಡಿ ಬಂಧನಕ್ಕೆ ಒಳಗಾಗಿ ನ್ಯಾಯಾಂಗ ಬಂಧನದಲ್ಲಿರುವಂತ ಕ್ಲರ್ಕ್ ನನ್ನು ಅಮಾನತುಗೊಳಿಸಿ ಕಾಲೇಜು ಶಿಕ್ಷಣ ಇಲಾಖೆ ಆದೇಶಿಸಿದೆ. ಚಿಕ್ಕಬಳ್ಳಾಪುರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಸ್ ಡಿ ಎ ಬಿ ಭೀಮರಾಜ್ ಎಂಬುವರೇ ಅಮಾನತುಗೊಂಡಿರುವಂತ ಅಧಿಕಾರಿಯಾಗಿದ್ದಾರೆ. ಇವರನ್ನು ಅಮಾನತುಗೊಳಿಸಿ ಶಿಕ್ಷಣ ಇಲಾಖೆಯ ಆಯುಕ್ತರು ಆದೇಶಿಸಿದ್ದಾರೆ. ಚಿಕ್ಕಬಳ್ಳಾಪುರ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಎಸ್ ಡಿ ಎ ಬಿ.ಭೀಮನರಾಜ್ ವಿರುದ್ಧ ವಿದ್ಯಾರ್ಥಿನಿಯೊಬ್ಬರು ಅತ್ಯಾಚಾರ ಆರೋಪದಡಿ ದೂರು ದಾಖಲಿಸಿದ್ದರು. ಈ ದೂರು ಆಧರಿಸಿ ಅವರನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದರು. ಇದೀಗ ನ್ಯಾಯಾಂಗ ಬಂಧನದಲ್ಲಿರುವಂತ ಅವರನ್ನು ಶಿಕ್ಷಣ ಇಲಾಖೆ ಅಮಾನತುಗೊಳಿಸಿ ಆದೇಶಿಸಿದೆ. https://kannadanewsnow.com/kannada/why-is-the-golden-hour-important-in-cases-of-severe-heart-attacks-here-is-the-information/ https://kannadanewsnow.com/kannada/before-accepting-money-on-google-pay-or-phone-pay-shop-and-grocery-store-owners-should-read-this-news/
ಬೆಂಗಳೂರು: ರಾಜ್ಯದಲ್ಲಿ ದಿನೇ ದಿನೇ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾಗುತ್ತಿವೆ. ಇದೇ ಹೊತ್ತಿನಲ್ಲಿ ತೀವ್ರ ಹೃದಯಾಘಾತದ ಸಂದರ್ಭದಲ್ಲಿ ಗೋಲ್ಡನ್ ಅವರ್ ಮುಖ್ಯ ಎಂಬುದು ಹೃದ್ರೋಗ ತಜ್ಞರ ಮಾತು. ಹಾಗಾದ್ರೇ ಗೋಲ್ಡನ್ ಅವರ್ ಏಕೆ ಮುಖ್ಯ ಎನ್ನುವ ಬಗ್ಗೆ ಮುಂದೆ ಮಾಹಿತಿ ಓದಿ. ಹೃದಯಾಘಾತದ ಲಕ್ಷಣಗಳು ಪ್ರಾರಂಭವಾದ ನಂತರದ ಮೊದಲ 60 ನಿಮಿಷಗಳನ್ನು ಗೋಲ್ಡನ್ ಅವರ್ ಎಂದು ಕರೆಯಲಾಗುತ್ತದೆ. ಈ ಸಮಯದಲ್ಲಿನ ಸಕಾಲಿಕ ಆರೈಕೆಯು ಪ್ರಾಣಾಪಾಯವನ್ನು ತಡೆಗಟ್ಟಬಹುದು. ಸಾರ್ವಜನಿಕರು STEMI ಉಪಕ್ರಮವನ್ನು ಅನುಸರಿಸಿದರೇ ಹೃದಯಾಘಾತದ ಸಂದರ್ಭದಲ್ಲಿ ಪ್ರಾಣಾಪಾಯವನ್ನು ಶೇ.80ರಷ್ಟು ತಡೆಯಬಹುದಾಗಿದೆ. ಇನ್ನೂ ಹೃದಯಾಘಾತವಾದ ಕೂಡಲೇ ತಕ್ಷಣವೇ ಇಸಿಜಿ ಮತ್ತು ಟೆನೆಕ್ಟಪ್ಲೇಸ್ ಚುಚ್ಚುಮದ್ದು (ರಕ್ತ ಹೆಪ್ಪುಗಟ್ಟುವಿಕೆ ಕರಗಿಸಲು) ನೀಡಿದರೇ ಜೀವ ಉಳಿಸಬಹುದು. ಸೋ ಗೋಲ್ಡನ್ ಅವರ್ ಆರೈಕೆಯ ಬಗ್ಗೆ ಸದಾ ನೆನಪಿಟ್ಟುಕೊಳ್ಳಿ. ಹೃದಯಾಘಾತದ ಲಕ್ಷಣ ಪ್ರಾರಂಭವಾದ ಮೊದಲ 60 ನಿಮಿಷ ತಡಮಾಡದೇ ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿ. ಆಗ ಅಮೂಲ್ಯ ಜೀವವನ್ನು ಉಳಿಸಲು ಸಾಧ್ಯವಿದೆ. https://twitter.com/KarnatakaVarthe/status/1943237013056163924 https://kannadanewsnow.com/kannada/only-20-people-died-of-heart-attacks-in-hassan-report-submitted-to-the-state-government-by-experts/ https://kannadanewsnow.com/kannada/the-student-committed-suicide-due-to-being-admitted-to-a-residential-school/
ಕಲಬುರ್ಗಿ: ವಸತಿ ಶಾಲೆಗೆ ಸೇರಿಸಿದ್ದ ಕಾರಣಕ್ಕೆ ವಿದ್ಯಾರ್ಥಿಯೊಬ್ಬ ಮನನೊಂದು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ಜಿಲ್ಲೆಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಮುಧೋಳ ವಸತಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿಯನ್ನು 7ನೇ ತರಗತಿಯ ನಾರಾಯಣ ರಾಠೋಡ್(13) ಎಂಬುದಾಗಿ ತಿಳಿದು ಬಂದಿದೆ. ಕಲಬುರ್ಗಿಯ ಮುಧೋಳದ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ನಾರಾಯಣ ನೇಣಿಗೆ ಶರಣಾಗಿದ್ದಾನೆ. ಕಲಬುರ್ಗಿ ತಾಲೂಕಿನ ಪಾಣೆಗಾಂವ್ ನ ನಾರಾಯಣ ನೇಣಿಗೆ ಶರಣಾಗಿದ್ದಾನೆ. 15 ದಿನಗಳ ಹಿಂದೆಯೂ ಬಾಲಕ ನಾರಾಯಣ ಆತ್ಮಹತ್ಯೆಗೆ ಯತ್ನಿಸಿದ್ದನು. ವಸತಿ ಶಾಲೆಗೆ ಸೇರಿಸಿದ್ರೆ ಆತ್ಮಹತ್ಯೆ ಮಾಡಿಕೊಳ್ಳುತ್ತೇನೆ ಎಂಬುದಾಗಿಯೂ ಪೋಷಕರಿಗೆ ಹೇಳಿದ್ದನಂತೆ. ಆದರೇ ಪೋಷಕರು ಬಾಲಕನನ್ನು ಮನವೊಲಿಸಿ ವಸತಿ ಶಾಲೆಗೆ ಬಿಟ್ಟು ಬಂದಿದ್ದರು. ತಾಯಿಯನ್ನು ಬಿಟ್ಟಿರಲಾರದೇ ಇಂದು ವಸತಿ ಶಾಲೆಯಲ್ಲಿ ವಿದ್ಯಾರ್ಥಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. https://kannadanewsnow.com/kannada/only-20-people-died-of-heart-attacks-in-hassan-report-submitted-to-the-state-government-by-experts/ https://kannadanewsnow.com/kannada/good-news-for-timmappas-devotees-weekly-express-train-service-starts-between-chikkamagaluru-and-tirupati/
ಬೆಂಗಳೂರು: ಹಾಸನ ಜಿಲ್ಲೆಯಲ್ಲಿ ನಿರಂತರವಾಗಿ ಸರಣಿ ಹೃದಯಾಘಾತ ಪ್ರಕರಣಗಳು ಸಂಭವಿಸಿದ್ದವು. ಈ ಪ್ರಕರಣಗಳ ಬಗ್ಗೆ ತನಿಖೆ ನಡೆಸಲು ತಜ್ಞರ ಸಮಿತಿ ರಚಿಸಲಾಗಿತ್ತು. ಆ ಸಮಿತಿಯು ಇಂದು ಸರ್ಕಾರಕ್ಕೆ ತನ್ನ ವರದಿಯನ್ನು ಸಲ್ಲಿಸಿದೆ. ಸರ್ಕಾರಕ್ಕೆ ಸಲ್ಲಿಸಿದಂತ ವರದಿಯಲ್ಲಿ ಒಟ್ಟು 24 ಸಾವುಗಳಲ್ಲಿ 20 ಜನರು ಮಾತ್ರವೇ ಹೃದಯಾಘಾತದಿಂದ ಸಾವನ್ನಪ್ಪಿರುವುದನ್ನು ತಜ್ಞರ ವರದಿಯು ಖಚಿತ ಪಡಿಸಿದೆ. ಹಾಸನ ಹೃದಯಾಘಾತದ ಸರಣಿ ಸಾವಿನ ಸಂಬಂಧ ಸರ್ಕಾರ ರಚಿಸಿದ್ದಂತ ತಜ್ಞರ ಸಮಿತಿಯು, ಇಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರನ್ನು ಭೇಟಿಯಾಗಿ ತಮ್ಮ ವರದಿಯನ್ನು ಸಲ್ಲಿಸಿದೆ. ತಜ್ಞರು ಸಲ್ಲಿಸಿದಂತ ವರದಿಯನ್ನು ಅವರು ಸ್ವೀಕರಿಸಿದರು. ಹಾಸನ ಜಿಲ್ಲೆಯಲ್ಲಿ ಮೇ-ಜೂನ್ ನಲ್ಲಿ ಒಟ್ಟು 24 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದರು. ಹೀಗೆ ಸಾವನ್ನಪ್ಪಿದ 24 ಮಂದಿಯ ಪೈಕಿ 20 ಜನರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ನಾಲ್ವರಿಗೆ ಹೃದಯಾಘಾತವೇ ಆಗಿಲ್ಲ. ನಾಲ್ವರಲ್ಲಿ ಒಬ್ಬನಿಗೆ ಕಿಡ್ನಿ ಸಮಸ್ಯೆ, ಮತ್ತೊಬ್ಬನಿಗೆ ಆಕ್ಸಿಡೆಂಟ್ ಆಗಿ ಸಾವನ್ನಪ್ಪಿದ್ದರೇ, ಇನ್ನೊಬ್ಬ ಸೀವಿಯರ್ ಗ್ಯಾಸ್ಟ್ರೋ ಸಮಸ್ಯೆಯ ಕಾರಣ ಬಿಪಿ ಹೆಚ್ಚಾಗಿ ಸಾವನ್ನಪ್ಪಿದ್ದಾರೆ. 20…
ಬೆಂಗಳೂರು: ಆಂಧ್ರಪ್ರದೇಶ ಮತ್ತು ಕರ್ನಾಟಕದ ಮಲೆನಾಡು ಪ್ರದೇಶದ ನಡುವೆ ರೈಲು ಸಂಪರ್ಕವನ್ನು ವಿಸ್ತರಿಸುವ ಉದ್ದೇಶದಿಂದ, ರೈಲ್ವೆ ಮಂಡಳಿ ತಿರುಪತಿ ಮತ್ತು ಚಿಕ್ಕಮಗಳೂರು ನಡುವಿನ ಹೊಸ ಸಾಪ್ತಾಹಿಕ ಎಕ್ಸ್ಪ್ರೆಸ್ ರೈಲು ಸೇವೆ ಪ್ರಾರಂಭಕ್ಕೆ ಅನುಮೋದನೆ ನೀಡಿದೆ. ಉದ್ಘಾಟನಾ ವಿಶೇಷ ರೈಲು: ಈ ಸೇವೆಯ ಪ್ರಾರಂಭವನ್ನು ಸೂಚಿಸುವಂತೆ, ದಕ್ಷಿಣ ಮಧ್ಯ ರೈಲ್ವೆ ಒಂದು ಬಾರಿ ನಡೆಯುವ ಉದ್ಘಾಟನಾ ವಿಶೇಷ ಎಕ್ಸ್ಪ್ರೆಸ್ ರೈಲನ್ನು ನಡೆಸಲಿದೆ. ರೈಲು ಸಂಖ್ಯೆ 07424 ಚಿಕ್ಕಮಗಳೂರು – ತಿರುಪತಿ ಉದ್ಘಾಟನಾ ವಿಶೇಷ ಎಕ್ಸ್ಪ್ರೆಸ್ ಜುಲೈ 11, 2025 (ಶುಕ್ರವಾರ) ರಂದು ಚಲಿಸಲಿದ್ದು, ಮಧ್ಯಾಹ್ನ 12:00 ಕ್ಕೆ ಚಿಕ್ಕಮಗಳೂರಿನಿಂದ ಹೊರಟು, ಮರುದಿನ ಬೆಳಿಗ್ಗೆ 02:30 ಕ್ಕೆ ತಿರುಪತಿಗೆ ತಲುಪಲಿದೆ. ಈ ರೈಲಿಗೆ ಒಟ್ಟು 18 ಎಲ್ ಹೆಚ್ ಬಿ ಕೋಚ್ಗಳು ಇರುತ್ತವೆ. ನಿಯಮಿತ ರೈಲು ಸೇವೆಗಳು: 1. ರೈಲು ಸಂಖ್ಯೆ 17423 ತಿರುಪತಿ – ಚಿಕ್ಕಮಗಳೂರು ಸಾಪ್ತಾಹಿಕ ಎಕ್ಸ್ಪ್ರೆಸ್ 2025 ಜುಲೈ 17 (ಗುರುವಾರ)ರಿಂದ ನಿಯಮಿತ ಸೇವೆ ಪ್ರಾರಂಭವಾಗಲಿದೆ. 2. ರೈಲು ಸಂಖ್ಯೆ 17424…
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ, ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯವನ್ನು ಮುಜರಾಯಿ ಇಲಾಖೆಯ ಸುಪರ್ದಿಗೆ ವಹಿಸಿ ರಾಜ್ಯ ಸರ್ಕಾರ ಆದೇಶಿದೆ. ಈ ಸಂಬಂಧ ನಡವಳಿಯನ್ನು ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಇವರ ಕಡತದಲ್ಲಿನ ಪ್ರಸ್ತಾವನೆಯಲ್ಲಿ ಬೆಂಗಳೂರು ನಗರ ಜಿಲ್ಲೆ, ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಂಡಿ ಸರ್ಕಾವಣೆ ಸಂದರ್ಭದಲ್ಲಿ ಸಿ.ಸಿ.ಟಿ.ವಿ.ಯಲ್ಲಿ ಸೆರೆಯಾಗಿರುವ ದೇವಾಲಯದ ಸಿಬ್ಬಂದಿಗಳಿಂದಲೇ ಕಳ್ಳತನವಾಗಿರುವ ದೃಶ್ಯದ ತುಣುಕಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು, ಸದರಿ ದೇವಾಲಯದಲ್ಲಿ ಆಡಳಿತ ನಿರ್ವಹಣೆಯನ್ನು ಅವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸಲಾಗುತ್ತಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿರುವ ಕಾರಣ ಸದರಿ ದೇವಾಲಯವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್ 42 ಮತ್ತು 43ರ ಅನ್ವಯ ಸರ್ಕಾರದ ವಶಕ್ಕೆ ಪಡೆಯುವ ಸಂಬಂಧ ಸ್ಪಷ್ಟ ಅಭಿಪ್ರಾಯದ ವರದಿಯನ್ನು ಸಲ್ಲಿಸುವಂತೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಇವರು ದಿನಾಂಕ:01.10.2024ರಂದು ಜಿಲ್ಲಾಧಿಕಾರಿಯವರನ್ನು ಕೋರಲಾಗಿರುತ್ತದೆ ಎಂದಿದೆ. ಅದರಂತೆ, ಅಪರ…
ಬೆಂಗಳೂರು: ನಾಡಿನ ಮಹಿಳೆಯರ ಜೊತೆ ನಮ್ಮ ಸರ್ಕಾರ ದೃಢವಾಗಿ ನಿಂತಿದೆ, ನಿಮ್ಮ ಸುರಕ್ಷೆ ಮತ್ತು ಘನತೆ ನಮ್ಮ ಸರ್ಕಾರದ ಆಧ್ಯತೆಯಾಗಿದೆ. ನಿಮ್ಮ ಮೇಲಿನ ದೌರ್ಜನ್ಯಗಳ ವಿರುದ್ಧ ತೀಕ್ಷ್ಣ ಪ್ರತಿಕ್ರಿಯೆಗೆ ನಾವು ಬದ್ಧರಿದ್ದೇವೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಗುಪ್ತವಾಗಿ ಮಹಿಳೆಯರ ವಿಡಿಯೋ ಚಿತ್ರೀಕರಣ ಮಾಡುವುದು ಹಾಗೂ ಅವರಿಗೆ ಕಿರುಕುಳ ನೀಡುವುದು, ವೀಡಿಯೋಗಳನ್ನು ಜಾಲತಾಣಗಳಲ್ಲಿ ಶೇರ್ ಮಾಡಿ ಅವರ ಮಾನಹಾನಿ ಮಾಡುವುದು ಮಹಿಳೆಯರ ಗೌರವಕ್ಕೆ ಧಕ್ಕೆಯುಂಟು ಮಾಡುತ್ತದೆ. ಇದು ನಮ್ಮ ಕರ್ನಾಟಕದ ಪರಂಪರೆಯಲ್ಲ ಎಂಬುದಾಗಿ ತಿಳಿಸಿದ್ದಾರೆ. ಕಳೆದ ಕೆಲವು ದಿನಗಳಲ್ಲಿ ಇಂತಹ ಸಾಕಷ್ಟು ಘಟನೆಗಳು ಬೆಳಕಿಗೆ ಬಂದಿದ್ದು, ತಕ್ಷಣವೇ ಕೃತ್ಯ ಎಸಗಿದವರನ್ನು ಬಂಧಿಸುವುದು ಸೇರಿದಂತೆ ಎಲ್ಲಾ ಅಗತ್ಯ ಕಾನೂನು ಕ್ರಮಗಳನ್ನು ಸರ್ಕಾರ ಜರುಗಿಸಿದೆ. ಇದರ ಜೊತೆಗೆ ನಾವು ಇಂತಹ ಕೃತ್ಯಗಳ ಮೇಲೆ ತೀವ್ರ ನಿಗಾ ವಹಿಸಿದ್ದೇವೆ. ಮಹಿಳೆಯರು ಕೀಳುದೃಷ್ಟಿಯ ಅಥವಾ ಯಾವುದೇ ತರನಾದ ಕಿರುಕುಳಗಳ ಭಯವಿಲ್ಲದೆ ಧೈರ್ಯವಾಗಿ ನಡೆಯಲಾರದ ಸ್ಥಿತಿಗೆ…
ಬೆಂಗಳೂರು: ನಗರದಲ್ಲಿ ಬೈಕ್ ನಲ್ಲಿ ತೆರಳುತ್ತಿದ್ದಂತ ವೇಳೆಯಲ್ಲಿ ಉಂಟಾದ ಅಪಘಾತದಲ್ಲಿ ಲಾರಿ ಹರಿದು ಸ್ಥಳದಲ್ಲೇ ಮಹಿಳೆ ಸಾವನ್ನಪ್ಪಿದ್ದಾರೆ. ಆದರೇ ಕೂದಲೆಳೆಯ ಅಂತರದಲ್ಲಿ ಒಂದು ವರ್ಷದ ಮಗು, ಸವಾರ ಪಾರಾಗಿದ್ದಾರೆ. ಬೆಂಗಳೂರಿನ ಪೀಣ್ಯ 8ನೇ ಮೈಲಿ ಬಳಿಯಲ್ಲಿ ಈ ದುರ್ಘಟನೆ ನಡೆದಿದೆ. ಬೈಕ್ ಹಿಂಬದಿ ಕುಳಿತಿದ್ದ ಲಕ್ಷ್ಮೀ(30) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಸ್ಥಳಕ್ಕೆ ಪೀಣ್ಯ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ. https://kannadanewsnow.com/kannada/order-to-extend-the-contract-period-for-nhm-employees-kshcoea-organization-appeals-to-the-state-government/ https://kannadanewsnow.com/kannada/important-order-from-the-education-department-to-increase-the-marks-of-sslc-students/
ಬೆಂಗಳೂರು: ಬೆಂಗಳೂರು ನಗರ ಜಿಲ್ಲೆ, ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯ ಘೋಷಿತ ಸಂಸ್ಥೆಯನ್ನಾಗಿ ರಾಜ್ಯ ಸರ್ಕಾರ ಘೋಷಿಸಿದೆ. ಈ ಸಂಬಂಧ ನಡವಳಿಯನ್ನು ಹೊರಡಿಸಿರುವಂತ ರಾಜ್ಯ ಸರ್ಕಾರವು, ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಇವರ ಕಡತದಲ್ಲಿನ ಪ್ರಸ್ತಾವನೆಯಲ್ಲಿ ಬೆಂಗಳೂರು ನಗರ ಜಿಲ್ಲೆ, ಮೈಸೂರು ರಸ್ತೆ ಬ್ಯಾಟರಾಯನಪುರದಲ್ಲಿರುವ ಶ್ರೀ ಗಾಳಿ ಆಂಜನೇಯಸ್ವಾಮಿ ದೇವಾಲಯದಲ್ಲಿ ಹುಂಡಿ ಸರ್ಕಾವಣೆ ಸಂದರ್ಭದಲ್ಲಿ ಸಿ.ಸಿ.ಟಿ.ವಿ.ಯಲ್ಲಿ ಸೆರೆಯಾಗಿರುವ ದೇವಾಲಯದ ಸಿಬ್ಬಂದಿಗಳಿಂದಲೇ ಕಳ್ಳತನವಾಗಿರುವ ದೃಶ್ಯದ ತುಣುಕಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವುದು, ಸದರಿ ದೇವಾಲಯದಲ್ಲಿ ಆಡಳಿತ ನಿರ್ವಹಣೆಯನ್ನು ಅವ್ಯವಸ್ಥಿತ ರೀತಿಯಲ್ಲಿ ನಿರ್ವಹಿಸಲಾಗುತ್ತಿದೆ ಎಂಬುದು ಮೇಲ್ನೋಟಕ್ಕೆ ಕಂಡುಬಂದಿರುವ ಕಾರಣ ಸದರಿ ದೇವಾಲಯವನ್ನು ಕರ್ನಾಟಕ ಹಿಂದೂ ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ ಅಧಿನಿಯಮ 1997ರ ಸೆಕ್ಷನ್ 42 ಮತ್ತು 43ರ ಅನ್ವಯ ಸರ್ಕಾರದ ವಶಕ್ಕೆ ಪಡೆಯುವ ಸಂಬಂಧ ಸ್ಪಷ್ಟ ಅಭಿಪ್ರಾಯದ ವರದಿಯನ್ನು ಸಲ್ಲಿಸುವಂತೆ ಆಯುಕ್ತರು, ಧಾರ್ಮಿಕ ದತ್ತಿ ಇಲಾಖೆ ಇವರು ದಿನಾಂಕ:01.10.2024ರಂದು ಜಿಲ್ಲಾಧಿಕಾರಿಯವರನ್ನು ಕೋರಲಾಗಿರುತ್ತದೆ ಎಂದಿದೆ. ಅದರಂತೆ, ಅಪರ ಜಿಲ್ಲಾಧಿಕಾರಿಗಳು ಮತ್ತು…














