Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದಾದ್ಯಂತ ಗ್ರಾಮ ಪಂಚಾಯತಿಗಳ ವ್ಯಾಪ್ತಿಯಲ್ಲಿ ಇ-ಸ್ವತ್ತು ಜಾರಿಗೆ ತರಲು ಪೂರ್ವಭಾವಿಯಾಗಿ ನಿಯಮಾವಳಿಗಳನ್ನು ರೂಪಿಸಲಾಗುತ್ತಿದ್ದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಹಾಗೂ ಮಾಹಿತಿ ಮತ್ತು ಜೈವಿಕ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ಇಂದು ವಿಕಾಸಸೌಧದ ತಮ್ಮ ಕಚೇರಿಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಕರಡು ನಿಯಮಾವಳಿಗಳನ್ನು ಪರಿಶೀಲಿಸಿ ಕೆಲವು ಬದಲಾವಣೆಗಳನ್ನು ಸೂಚಿಸಿದರಲ್ಲದೆ, ಒಂದು ವಾರದ ಅವಧಿಯಲ್ಲಿ ಕರಡು ನಿಯಮಾವಳಿಗಳನ್ನು ಪ್ರಕಟಿಸಲು ಸೂಚಿಸಿದರು. ತೆರಿಗೆ ದರ ಮತ್ತು ಫೀಜುಗಳನ್ನು ವಿಧಿಸುವ ಪ್ರಕ್ರಿಯೆ, ಕಟ್ಟಡಗಳು ಮತ್ತು ಭೂಮಿಯ ಮೇಲೆ ತೆರಿಗೆ ವಿಧಿಸುವುದು, ನಮೂನೆ 11 ಎ ನಿರ್ವಹಣೆ, ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ಅಧಿನಿಯಮ, 2025ರ ನಂತರ ನಮೂನೆ 11-ಎ ರಿಜಿಸ್ಟರ್ಗೆ ಹೊಸ ಆಸ್ತಿಗಳ ಸೇರ್ಪಡೆ, ಮೇಲ್ಮನವಿ, ದಂಡನೆಗಳು, ನೀರು ಸರಬರಾಜು ದರ ಮತ್ತು ಇತರ ದರಗಳ ನಿರ್ಧರಣೆ, ದಂಡ ನಿರ್ಧಾರ, ಸ್ಥಿರಸ್ವತ್ತಿನ ಪರಿಶೀಲನೆ, ಸ್ಥಿರ ಸ್ವತ್ತಿನ ಪರಿಶೀಲನೆ, ಮೇಲ್ಮನವಿ, ತಗಾದೆ ನೋಟೀಸ್, ಜಫ್ತಿ ಮತ್ತು ಮಾರಾಟ ಮುಂತಾದ ವಿಷಯಗಳನ್ನು ಸಚಿವ…
ಬೆಂಗಳೂರು: ವೈದ್ಯಕೀಯ, ದಂತ ವೈದ್ಯಕೀಯ ಕೋರ್ಸ್ಗಳ ಎರಡನೇ ಮುಂದುವರಿದ ಸುತ್ತು ಹಾಗೂ ಯುಜಿಸಿಇಟಿ ಕೋರ್ಸ್ಗಳ 3ನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳಿಗೆ ಇಚ್ಛೆ/ಆಯ್ಕೆಗಳನ್ನು ಅದಲು-ಬದಲು ಹಾಗೂ ಹೊಸದಾಗಿ ಸೇರಿಸುವುದಕ್ಕೆ ಸೆ.9ರಂದು ಬೆಳಿಗ್ಗೆ 8ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಎಲ್ಲ ವರ್ಗದ ಅರ್ಹ ಅಭ್ಯರ್ಥಿಗಳು 10 ಸಾವಿರ ರೂಪಾಯಿ ಕಾಷನ್ ಡೆಪಾಸಿಟ್ ಪಾವತಿಸುವುದಕ್ಕೂ ನಾಳೆ ಬೆಳಿಗ್ಗೆ 8 ಗಂಟೆವರೆಗೆ ಸಮಯ ನೀಡಲಾಗಿದೆ. ಅಭ್ಯರ್ಥಿಗಳ ಕೋರಿಕೆ ಮೇರೆಗೆ ಸಮಯ ವಿಸ್ತರಣೆ ಮಾಡಿದ್ದು, ಈ ಅವಧಿಯೊಳಗೆ ಅಭ್ಯರ್ಥಿಗಳು ಕಾಷನ್ ಡೆಪಾಸಿಟ್ ಕಟ್ಟಿ, ಇಚ್ಛೆ/ ಆಯ್ಕೆ ದಾಖಲಿಸಿಕೊಳ್ಳಬೇಕು. ಇದು ಕೊನೆಯ ಅವಕಾಶ. ಪುನಃ ಸಮಯ ವಿಸ್ತರಣೆ ಮಾಡುವುದಿಲ್ಲ ಎಂದು ಸ್ಪಷ್ಟವಾಗಿ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ, ಅದೇ ರೀತಿ ಜೀವನದಲ್ಲೂ ಏರುಪೇರು ಆಗುತ್ತಲೇ ಇರುತ್ತದೆ. ಒಂದು ವೇಳೆ ತಂತ್ರ ಶಕ್ತಿಯಿಂದ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ,ಶತ್ರುಗಳಿಂದ ನಿಮಗೆ ತೊಂದರೆಯಾಗುತ್ತಿದ್ದರೆ ,ಗಂಡ-ಹೆಂಡತಿ ನಡುವೆ ಯಾವುದಾದರೂ ವಿಚಾರಕ್ಕೆ ಯಾವಾಗಲೂ ಕಲಹ ಆಗುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಜೀವನವಿಡಿ ಸುಖ ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ,…
ಕಾರವಾರ: ಅಂಗನವಾಡಿ ಬಳಿಯಲ್ಲಿದ್ದಂತ ಬೃಹತ್ ಗಾತ್ರದ ಆಲದಮರವೊಂದು ಮುರಿದು ಬಿದ್ದ ಪರಿಣಾಮ, ಗರ್ಭಿಣಿಯೊಬ್ಬರು ಸ್ಥಳದಲ್ಲೇ ಸಾವನ್ನಪ್ಪಿರುವಂತ ಧಾರುಣ ಘಟನೆ ಯಲ್ಲಾಪುರದ ಬಳಿಯಲ್ಲಿ ನಡೆದಿದೆ. ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲ್ಲೂಕಿನ ಕಿರವತ್ತಿ ಬಳಿಯಲ್ಲಿ ಅಂಗನವಾಡಿಯಿಂದ ಮನೆಗೆ ಮರಳುತ್ತಿದ್ದಂತ ವೇಳೆಯಲ್ಲಿ ದಾರಿಯಲ್ಲಿದ್ದಂತ ಆಲದ ಮರವು ದಿಢೀರ್ ಮುರಿದು ಬಿದ್ದಿದೆ. ಈ ಪರಿಣಾಮ 5 ತಿಂಗಳ ಗರ್ಭಿಣಿಯಾಗಿದ್ದಂತ ಬಾಬು ಖರಾತ್(28) ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಇನ್ನೂ ಇದೇ ಘಟನೆಯಲ್ಲಿ ಸ್ವಾತಿ ಬಾಬು ಖರಾತ್(17), ಘಾಟು ಲಕ್ಕು ಕೊಕರೆ(5), ಶ್ರಾವಣಿ ಬಾಬು ಖರಾತ್(2), ಶಾಂಭವಿ ಬಾಬು ಖರಾತ್ (4) ಗಂಭೀರವಾಗಿ ಗಾಯಗೊಂಡಿದ್ದಾರೆ. ಇವರಲ್ಲಗೇ ಸಾನ್ವಿ ಬಾಬು ಕೊಕರೆ (5), ವಿನಯ ಲಕ್ಕು ಕೊಕರೆ(5) ಮತ್ತು ಅನುಶ್ರೀ ಮಾಂಬು ಕೊಕರೆ(5) ಎಂಬ ಪುಟಾಣಿಗಳಿಗೆ ಸಣ್ಣಪುಟ್ಟ ಗಾಯವಾಗಿದೆ. https://kannadanewsnow.com/kannada/bjp-delegation-visits-maddur-on-the-10th-state-president-by-vijayendra/ https://kannadanewsnow.com/kannada/no-need-to-go-to-the-state-office-no-need-to-see-va-ri-just-do-this-to-get-these-certificates/
ನವದೆಹಲಿ: ಬಿಜೆಪಿ ನಿಯೋಗವು ಇದೇ 10ರಂದು ಮದ್ದೂರಿಗೆ ಭೇಟಿ ಕೊಡಲಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. ನಾನು, ನಮ್ಮ ವಿಪಕ್ಷ ನಾಯಕರಾದ ಆರ್.ಅಶೋಕ್, ಛಲವಾದಿ ನಾರಾಯಣಸ್ವಾಮಿ, ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್, ಪಕ್ಷದ ಮುಖಂಡರು ಈ ನಿಯೋಗದಲ್ಲಿ ಇರುವರು ಎಂದು ಅವರು ಪರಿಷ್ಕøತ ಪ್ರವಾಸದ ಕುರಿತು ಮಾಹಿತಿ ನೀಡಿದ್ದಾರೆ. ಮದ್ದೂರಿನ ಗಲಭೆಕೋರರನ್ನು ಕೂಡಲೇ ಬಂಧಿಸುವಂತೆ ಅವರು ಒತ್ತಾಯಿಸಿದ್ದಾರೆ. ಹಲವರಿಗೆ ಗಂಭೀರ ಗಾಯಗಳಾಗಿವೆ. ಹೆಣ್ಮಕ್ಕಳ ಮೇಲೆ ಲಾಠಿಚಾರ್ಜ್ ಮಾಡಿದ್ದಾರೆ. ಅವರನ್ನು ಮತ್ತು ಕುಟುಂಬಸ್ಥರನ್ನು ಭೇಟಿ ಮಾಡಿ ಧೈರ್ಯ ತುಂಬಲಿದ್ದೇವೆ ಎಂದು ನುಡಿದರು. ಮದ್ದೂರಿಗೆ ತೆರಳಿ ಹಿಂದೂ ಸಮಾಜಕ್ಕೆ ಧೈರ್ಯ ತುಂಬುವ ಕೆಲಸ ಮಾಡುತ್ತೇವೆ ಎಂದು ತಿಳಿಸಿದ್ದಾರೆ. ಕಾಂಗ್ರೆಸ್ ಸರಕಾರದ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಗೃಹ ಸಚಿವರ ಹೇಳಿಕೆ ಗಮನಿಸಿದರೆ ಮೈ ಉರಿಯುತ್ತದೆ. ಹೆಣ್ಮಕ್ಕಳ ಮೇಲೆ ಲಾಠಿಚಾರ್ಜ್ ಸಣ್ಣಪುಟ್ಟ ಘಟನೆ ಎಂದು ಗೃಹ ಸಚಿವರು ಹೇಳಿಕೆ ನೀಡುತ್ತಾರೆ ಎಂದು ಅವರು ಖಂಡಿಸಿದ್ದಾರೆ. https://kannadanewsnow.com/kannada/india-register-first-ever-win-against-oman-at-cafa-nations-cup-2025/ https://kannadanewsnow.com/kannada/no-need-to-go-to-the-state-office-no-need-to-see-va-ri-just-do-this-to-get-these-certificates/
ನವದೆಹಲಿ: ಹಿಸೋರ್ ಸೆಂಟ್ರಲ್ ಕ್ರೀಡಾಂಗಣದಲ್ಲಿ ನಡೆದ CAFA ನೇಷನ್ಸ್ ಕಪ್ 2025 ರ ಮೂರನೇ ಸ್ಥಾನಕ್ಕಾಗಿ ನಡೆದ ಪ್ಲೇಆಫ್ ಪಂದ್ಯದಲ್ಲಿ ಭಾರತ ತಂಡವು ಪೆನಾಲ್ಟಿಗಳಲ್ಲಿ ಅದ್ಭುತ ಪ್ರದರ್ಶನ ನೀಡಿ ಓಮನ್ ತಂಡವನ್ನು ಅಚ್ಚರಿಗೊಳಿಸಿತು. ಈ ಪಂದ್ಯದಲ್ಲಿ ಭಾರತ ತಂಡವು 1-1 (3-2) ಅಂತರದ ರೋಮಾಂಚಕಾರಿ ಗೆಲುವಿನೊಂದಿಗೆ ಓಮನ್ ತಂಡವನ್ನು ಸೋಲಿಸಿದ್ದು ಇದೇ ಮೊದಲು. ಭಾರತ ತಂಡವು ಅದ್ಭುತ ಆಟವನ್ನು ಪ್ರದರ್ಶಿಸಿತು ಮತ್ತು ಓಮನ್ ತಂಡವು ಉದ್ದಕ್ಕೂ ತನ್ನ ಕಾಲ್ಬೆರಳುಗಳನ್ನು ಕಾಯ್ದುಕೊಂಡಿತು. ಬ್ಲೂ ಟೈಗರ್ಸ್ ಪೆನಾಲ್ಟಿಗಳಲ್ಲಿ ಹೆಚ್ಚು ಉನ್ನತ ಸ್ಥಾನದಲ್ಲಿರುವ ಓಮನ್ ತಂಡವನ್ನು ಸೋಲಿಸಿತು. ಲಲಿಯನ್ಜುವಾಲಾ ಚಾಂಗ್ಟೆ ಮೊದಲ ಪೆನಾಲ್ಟಿ ಪಡೆಯಲು ಬಂದರು ಮತ್ತು ಮೇಲಿನ ಎಡ ಮೂಲೆಯಲ್ಲಿ ತಮ್ಮ ಎಡಗಾಲಿನಿಂದ ಗೋಲು ಗಳಿಸಿದರು. ಕೆಳಗಿನ ಬಲಭಾಗದಲ್ಲಿ ಓಮನ್ ತಮ್ಮ ಮೊದಲ ಪ್ರಯತ್ನದಲ್ಲಿ ವೈಡ್ ಆಗಿ ಹೋಯಿತು. ರಾಹುಲ್ ಭೇಕೆ ಎರಡನೇ ಸ್ಪಾಟ್-ಕಿಕ್ಗಾಗಿ ಬಂದರು ಮತ್ತು ಓಮನ್ ಮತ್ತೊಂದು ಅವಕಾಶವನ್ನು ತಪ್ಪಿಸಿಕೊಂಡ ನಂತರ ಎರಡನೇಾರ್ಧದಲ್ಲಿ ಡೆಡ್ಲಾಕ್ ಅನ್ನು ಮುರಿದರು. ಅಲ್ ಯಹ್ಮಾಡಿ ಬಾಕ್ಸ್ನ…
ಮಂಡ್ಯ: ಜಿಲ್ಲೆಯ ಮದ್ದೂರಲ್ಲಿ ಗಣೇಶ ಮೆರವಣಿಗೆ ಮೇಲೆ ಕಲ್ಲು ತೂರಾಟ ಪ್ರಕರಣ ನಡೆದಿತ್ತು. ಈ ಬಗ್ಗೆ ಮದ್ದೂರು ಶಾಸಕ ಕದಲೂರು ಉದಯ್ ಹೇಳಿದ್ದೇನು ಅಂತ ಮುಂದೆ ಓದಿ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಶಾಸಕ ಕದಲೂರು ಉದಯ್ ಅವರು, ನಿನ್ನೆ ನಡೆದ ಅಹಿತಕರ ಘಟನೆಯಿಂದ ಮನಸ್ಸಿಗೆ ತುಂಬಾ ನೋವಾಗಿದೆ. ಈ ಘಟನೆಯನ್ನ ನಾನು ಖಂಡಿಸುತ್ತೇನೆ. ಈ ಘಟನೆ ಹಿಂದೆ ಯಾರೇ ಇದ್ದರೂ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳುತ್ತೇವೆ. ಯಾರು ಆತಂಕಕ್ಕೆ ಒಳಗಾಗುವುದು ಬೇಡ. ಯಾರು ಉದ್ವೇಗಕ್ಕೆ ಒಳಗಾಗಬೇಡಿ ಎಂದರು. ನಮ್ಮ ಮದ್ದೂರು ತಾಲೂಕಿನ ಜನತೆ ಶಾಂತಿ ಪ್ರಿಯರು. ಆಗಿರುವ ಘಟನೆಯನ್ನ ಸರಿಪಡಿಸಿಕೊಳ್ಳೋಣ. ತಪ್ಪಿತಸ್ಥರನ್ನ ಸೆದೆಬಡಿದು ನ್ಯಾಯ ಕೊಡಿಸುವ ಕೆಲಸ ಮಾಡ್ತೇವೆ. ನಿಮ್ಮ ಜೊತೆ ನಾವು ಯಾವಾಗಲೂ ಇರುತ್ತೇವೆ. ಎಲ್ಲರೂ ಶಾಂತಿಯನ್ನ ಕಾಪಾಡುವಂತೆ ಕೈ ಮುಗಿದು ಶಾಸಕ ಉದಯ್ ಮನವಿ ಮಾಡಿದ್ದಾರೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/a-person-died-after-falling-down-while-working-at-a-mall-in-mysore/ https://kannadanewsnow.com/kannada/maddur-stone-pelting-incident-we-will-not-do-politics-in-the-name-of-religion-minister-chaluvarayaswamy/ https://kannadanewsnow.com/kannada/no-need-to-go-to-the-state-office-no-need-to-see-va-ri-just-do-this-to-get-these-certificates/
ಮೈಸೂರು: ನಗರದಲ್ಲಿ ಮಾಲ್ ಒಂದರಲ್ಲಿ ಕೆಲಸ ಮಾಡುತ್ತಿದ್ದಂತ ಸಂದರ್ಭದಲ್ಲಿ ಆಯತಪ್ಪಿ ಬಿದ್ದು ವ್ಯಕ್ತಿಯೊಬ್ಬ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಮೈಸೂರಿನ ಡಿ ಆರ್ ಡಿ ಮಾಲ್ ನಲ್ಲಿ ಈ ದುರ್ಘಟನೆ ನಡೆದಿದೆ. ಮಾಲ್ ನ 4ನೇ ಅಂತಸ್ತಿನಿಂದ ಬಿದ್ದು ಸುನಿ(27) ಸಾವನ್ನಪ್ಪಿದ್ದಾರೆ. ಮೈಸೂರಿನ ಡಿ ಆರ್ ಡಿ ಮಾಲ್ ನಲ್ಲಿ ಎಲೆಕ್ಟ್ರಿಷಿಯನ್ ಕೆಲಸವನ್ನು ಸುನಿ ಮಾಡುತ್ತಿದ್ದರು. ಇಂದು ಮಾಲ್ ನಲ್ಲಿ ಎಲೆಕ್ಟ್ರೀಷಿಯನ್ ಕೆಲಸ ಮಾಡುತ್ತಿದ್ದಾಗ ಆಯತಪ್ಪಿ ಕೆಳಗೆ ಬಿದ್ದು ಸಾವನ್ನಪ್ಪಿದ್ದಾರೆ. ಇದೇ ದುರಂತದಲ್ಲಿ ಮತ್ತೊಬ್ಬ ಗಂಭೀರವಾಗಿ ಗಾಯವಾಗಿದ್ದು, ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/e-swatthu-in-the-states-gram-panchayat-area-minister-priyank-kharge-has-instructed-to-publish-the-regulations-within-a-week/ https://kannadanewsnow.com/kannada/no-need-to-go-to-the-state-office-no-need-to-see-va-ri-just-do-this-to-get-these-certificates/
ಮಂಡ್ಯ: ಮದ್ದೂರಲ್ಲಿ ಇಂದು ಜನ ಸೇರಲು ಬಿಜೆಪಿ ಜೆಡಿಎಸ್ ಕಾರಣ. ನಾಳೆಯ ಬಂದ್ಗೆ ಪ್ರೇರಣೆ ಕೊಟ್ಟಿರೋದು ಬಿಜೆಪಿ ಜೆಡಿಎಸ್. ಧಾರ್ಮಿಕವಾಗಿ ಇರುವ ಹುಡುಗರು ಇದಕ್ಕೆ ಕಾರಣ ಅಲ್ಲ. ರಾಜಕೀಯವಾಗಿ ಅವರನ್ನು ಬಳಸಿಕೊಂಡು ಹೀಗೆ ಮಾಡ್ತಾರೆ. ನಾವು ಧರ್ಮದ ಹೆಸರಿನಲ್ಲಿ ರಾಜಕೀಯ ಮಾಡಲ್ಲ ಎಂಬುದಾಗಿ ಮಂಡ್ಯ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ಮದ್ದೂರು ಗಣೇಶ ಮೂರ್ತಿ ವಿಸರ್ಜನಾ ಮೆರವಣಿಗೆಯ ವೇಳೆಯಲ್ಲಿ ಲೈಟ್ ಆಫ್ ಮಾಡಿದ್ದು, ಸನ್ನಿವೇಶದ ಬಗ್ಗೆ ಮಾಹಿತಿ ಪಡೆದಿದ್ದೇನೆ. ಎಲ್ಲಾ ಅಧಿಕಾರಿಗಳು ಸೂಕ್ಷ್ಮವಾಗಿ ಈ ಘಟನೆ ಬಗ್ಗೆ ಕ್ರಮ ತೆಗೆದುಕೊಂಡಿದ್ದಾರೆ. ಏನು ಹಿನ್ನೆಲೆ ಇದೆ, ರಾಜಕೀಯ ಪ್ರೇರಿತ ಇದಿಯೋ, ಇಲ್ಲವೋ, ಯಾವ ವ್ಯಕ್ತಿ ಇದ್ದರೋ ಎಲ್ಲಾ ತನಿಖೆ ನಡೆಯಲಾಗುತ್ತಿದೆ. ಇದನ್ನು ಗಮನಿಸಿದ್ರೆ ಪ್ಲಾನ್ಡ್ ಆಗಿ ಮಾಡಲಾಗಿದೆ ಎಂಬುದು ಗೊತ್ತಾಗುತ್ತೆ ಎಂದರು. ಧಾರ್ಮಿಕ ಭಾವನೆಗಳನ್ನ ಇಟ್ಟುಕೊಂಡು ಪೂಜೆ ಮಾಡುವವವರಿಗೆ ಹೇಳುತ್ತೇನೆ. ಇದರಲ್ಲಿ ನಾವು ರಾಜಕೀಯ ಮಾಡುವುದಿಲ್ಲ. ಒಲೈಕೆ ಪರ ನಿಲ್ಲುವ ಕೆಲಸ ಮಾಡಲ್ಲ. ಮಾಡಿದ್ರೆ ನಾಲ್ಕೈದು ಜನರನ್ನು…
ಬೆಂಗಳೂರು: ಸುಮಾರು ₹600 ಕೋಟಿ ಬಂಡವಾಳ ಹೂಡಿಕೆಯ ಎಲೆಕ್ಟ್ರಿಕ್ ದ್ವಿಚಕ್ರ ವಾಹನ ತಯಾರಿಕಾ ಘಟಕವು ಶೀಘ್ರದಲ್ಲಿಯೇ ಕೋಲಾರದ ನರಸಾಪುರ ಕೈಗಾರಿಕಾ ಪ್ರದೇಶದಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಜಪಾನಿನ ಹೋಂಡಾ ಕಂಪನಿಯು, ಕೈಗಾರಿಕಾ ಸಚಿವ ಎಂ. ಬಿ. ಪಾಟೀಲ ಅವರ ನೇತೃತ್ವದಲ್ಲಿನ ರಾಜ್ಯದ ಉನ್ನತ ಮಟ್ಟದ ನಿಯೋಗಕ್ಕೆ ತಿಳಿಸಿದೆ. ಭಾರತದಲ್ಲಿನ ತನ್ನ ಮೊದಲ ವಿದ್ಯುತ್ ಚಾಲಿತ ದ್ವಿಚಕ್ರ ವಾಹನ ತಯಾರಿಕಾ ಘಟಕವು ಬೆಂಗಳೂರಿನ ಸಮೀಪದ ನರಸಾಪುರದಲ್ಲಿ ಕಾರ್ಯಾರಂಭ ಮಾಡಲಿದೆ. ಫೆಬ್ರುವರಿಯಲ್ಲಿ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಾಡಿಕೊಂಡಿರುವ ಈ ಒಪ್ಪಂದಕ್ಕೆ ಸದ್ಯದಲ್ಲೇ ಚಾಲನೆ ದೊರೆಯಲಿದೆ ಎಂದು ಕಂಪನಿಯು ರಾಜ್ಯದ ನಿಯೋಗಕ್ಕೆ ಮಾಹಿತಿ ನೀಡಿದೆ. ʼಹೋಂಡಾದ ಕಾರ್ಯನಿರ್ವಾಹಕ ಉಪಾಧ್ಯಕ್ಷ ನೋರಿಯಾ ಕೈಹರಾ ಅವರ ಜೊತೆಗಿನ ಭೇಟಿಯಲ್ಲಿ ಈ ವಿಷಯ ಪ್ರಸ್ತಾಪಿಸಲಾಗಿದೆ. ಇದರಿಂದ ರಾಜ್ಯದಲ್ಲಿ ವಾಹನ ತಯಾರಿಕಾ ವಲಯದಲ್ಲಿ ಉದ್ಯೋಗ ಅವಕಾಶಗಳು ಹೆಚ್ಚಲಿವೆʼ ಎಂದು ಸಚಿವ ಎಂ. ಬಿ. ಪಾಟೀಲ ಅವರು ತಿಳಿಸಿದ್ದಾರೆ. ಸಚಿವರ ನೇತೃತ್ವದಲ್ಲಿ ಜಪಾನ್ಗೆ ಭೇಟಿ ನೀಡಿರುವ ರಾಜ್ಯದ ಉನ್ನತ ಮಟ್ಟದ ನಿಯೋಗವು,…














