Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಳಗಾವಿ: ಜಿಲ್ಲೆಯಲ್ಲಿ ರಾಜಕೀಯ ಜಿದ್ದಾಜಿದ್ದಿನ ಕಣವಾಗಿದ್ದಂತ ಬೆಳಗಾವಿ ಡಿಸಿಸಿ ಬ್ಯಾಂಕ್ ಚುನಾವಣೆಯಲ್ಲಿ ಭಾರೀ ಮತಗಳ ಅಂತರದಿಂದ ಲಕ್ಷ್ಮಣ್ ಸವದಿ ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಳಗಾವಿಯ ಡಿಸಿಸಿ ಬ್ಯಾಂಕ್ ಗದ್ದುಗೆಗಾಗಿ ನಡೆದಂತ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಈ ಚುನಾವಣೆಯಲ್ಲಿ ಜಾರಕಿಹೊಳಿ ಬ್ರದರ್ಸ್ ಹಾಗೂ ಸವದಿ, ಕತ್ತಿ ಟೀಂ ಜೊತೆಗೆ ತೀವ್ರ ಹಣಾಹಣಿಯೇ ನಡೆಯಿತು. ಜಾರಕಿಹೊಳಿ ಬ್ರದರ್ಸ್ ಒಂದು ಬಣವಾದರೇ, ಸಂಸದ ರಮೇಶ್ ಕತ್ತಿ ಹಾಗೂ ಶಾಸಕ ಲಕ್ಷ್ಮಣ್ ಸವದಿ ಮತ್ತೊಂದು ಕಡೆಯಾಗಿತ್ತು. ಬೆಳಗಾವಿಯ ಡಿಸಿಸಿ ಬ್ಯಾಂಕಿನ 7 ಕ್ಷೇತ್ರಗಳಲ್ಲಿ 2 ಕ್ಷೇತ್ರಗಳಲ್ಲಿ ಸವದಿ ಬಣ ಗೆಲುವು ಸಾಧಿಸಿದರೇ, 1 ಕ್ಷೇತ್ರದಲ್ಲಿ ಜಾರಕಿಹೊಳಿ ಬಣವು ಗೆಲುವು ಸಾಧಿಸಿ ಸಂಭ್ರಮಿಸಿತು. ಹೀಗಿದೆ ರಾಮದುರ್ಗ ತಾಲೂಕಿನ ಫಲಿತಾಂಶ ಮಲಣ್ಣಾ ಯಾದವಾಡ – 19 ಮತಗಳು ಶ್ರೀಕಾಂತ್ ಧವನ – 16 ಮತಗಳು ಮಲ್ಲಣ್ಣಾ ಯಾದವಾಡ 3 ಮತಗಳಿಂದ ಗೆಲುವು ಹೀಗಿದೆ ಅಥಣಿ ತಾಲೂಕಿನ ಫಲಿತಾಂಶ ಲಕ್ಷ್ಮಣ ಸವದಿ- 122 ಮತಗಳು ಮಹೇಶ್ ಕುಮಟಳ್ಳಿ – 3 ಮತಗಳು…
ಬೆಂಗಳೂರು: ಕಾಂಗ್ರೆಸ್ ಸರ್ಕಾರ ಪಾಕಿಸ್ತಾನಕ್ಕೆ ಜೈ ಹಾಕುವವರನ್ನು ಬೆಂಬಲಿಸುತ್ತದೆ. ಭಾರತ್ ಮಾತಾ ಕೀ ಜೈ ಎನ್ನುವವರನ್ನು ವಿರೋಧಿಸುತ್ತದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ಹೊರಹಾಕಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರಕ್ಕೆ ಬಿಜೆಪಿ ವಿರುದ್ಧ ಸಿಟ್ಟಿದ್ದರೆ, ಆ ಸಿಟ್ಟನ್ನು ಬಿಜೆಪಿಯ ಮೇಲೆಯೇ ತೀರಿಸಿಕೊಳ್ಳಲಿ. ಆದರೆ ರಾಷ್ಟ್ರಭಕ್ತಿಯಿಂದ ಕೆಲಸ ಮಾಡುತ್ತಿರುವ ಆರ್ಎಸ್ಎಸ್ ವಿರುದ್ಧ ಕ್ರಮ ಕೈಗೊಳ್ಳಬೇಕಿಲ್ಲ. ಪಾಕಿಸ್ತಾನಕ್ಕೆ ಜೈ ಎನ್ನುವವರಿಗೆ ಸರ್ಕಾರ ಬೆಂಬಲ ನೀಡುತ್ತಿದೆಯೇ ಹೊರತು ಭಾರತ್ ಮಾತಾ ಕೀ ಜೈ ಎನ್ನುವವರಿಗೆ ಬೆಂಬಲ ನೀಡಲ್ಲ. ವಿಧಾನಸೌಧದಲ್ಲಿ ಪಾಕಿಸ್ತಾನಕ್ಕೆ ಜೈಕಾರ ಹಾಕಿದ್ದು ಸಾಬೀತಾಗಿದೆ. ಆಗ ಅವರು ಹಾಗೆ ಹೇಳಿಯೇ ಇಲ್ಲ ಎಂದು ಸಚಿವರು ಹೇಳಿದ್ದರು. ಕುಕ್ಕರ್ ಬಾಂಬ್ ಬ್ಲಾಸ್ಟ್ ಮಾಡುವವರನ್ನು ಬ್ರದರ್ ಎಂದಿದ್ದರು. ಎಲ್ಲವೂ ಸಾಬೀತಾದರೂ ಅವರನ್ನೇ ಕಾಂಗ್ರೆಸ್ ನಾಯಕರು ಬೆಂಬಲಿಸುತ್ತಾರೆ ಎಂದರು. ಬೆಂಗಳೂರಿನ ಮಾರುಕಟ್ಟೆಯಲ್ಲಿ ಪ್ರತಿ ಶುಕ್ರವಾರ ನಮಾಜ್ ಮಾಡಿ ರಸ್ತೆ ಬಂದ್ ಮಾಡುತ್ತಾರೆ. ಬಿಜೆಪಿ ಸರ್ಕಾರವಿದ್ದಾಗ ಅದನ್ನು ಎಂದೂ ನಿಷೇಧಿಸಿರಲಿಲ್ಲ. ಆದರೆ ಆರ್ಎಸ್ಎಸ್ ಪಥ ಸಂಚಲನ ಮಾಡಲು ಹೊರಟರೆ ಅದಕ್ಕೆ…
ಬೆಂಗಳೂರು: ಗುಂಡಿಗಳನ್ನು ಮುಚ್ಚಿ ರಸ್ತೆಗಳನ್ನು ದುರಸ್ಥಿ ಮಾಡುವ ಬದಲು ಉದ್ಯಮಿ ಕಿರಣ್ ಮುಜುಂದಾರ್ ಶಾ ಅವರನ್ನು ಟೀಕೆ ಮಾಡುವುದರಿಂದ ಯಾವುದೇ ಪ್ರಯೋಜನ ಇಲ್ಲ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವ ಹೆಚ್ ಡಿ ಕುಮಾರಸ್ವಾಮಿ ಅವರು ರಾಜ್ಯ ಸರ್ಕಾರದ ಮೇಲೆ ಚಾಟಿ ಬೀಸಿದರು. ಬೆಂಗಳೂರಿನ ಯಲಹಂಕದಲ್ಲಿರುವ ರಾಷ್ಟ್ರೀಯ ಕೃಷಿ ಕೀಟ ಸಂಪನ್ಮೂಲ ಬ್ಯೂರೋ (ICAR) 33ನೇ ಸಂಸ್ಥಾಪನಾ ದಿನಾಚರಣೆ ಹಾಗೂ 3ನೇ ಕೃಷಿ ಕೀಟ ಜೈವಿಕ ನಿಯಂತ್ರಣ ಪ್ರದರ್ಶನ ಕಾರ್ಯಕ್ರಮದಲ್ಲಿ ಪಾಲ್ಗೊಂಡ ನಂತರ ಅವರು ಮಾಧ್ಯಮಗಳ ಜತೆ ಮಾತನಾಡಿದರು. ಶಾ ಅವರು ಹೇಳಿದ್ದು ಒಂದೆಡೆ ಇರಲಿ, ದಿನನಿತ್ಯವೂ ಮಾಧ್ಯಮಗಳು ತೋರಿಸುತ್ತಿರುವುದು ಸುಳ್ಳೇ? ವಾಸ್ತವಾಂಶವನ್ನು ಮಾಧ್ಯಮಗಳೇ ತೋರಿಸುತ್ತಿವೆ. ಗುಂಡಿಗಳನ್ನು ಮುಚ್ಚಿ ಸಮಸ್ಯೆ ಬಗೆಹರಿಸುವುದು ಬಿಟ್ಟು ಶಾ ಅವರನ್ನು ಟೀಕಿಸುವುದರಲ್ಲಿ ಈ ಸರ್ಕಾರ ಮತ್ತು ಕಾಂಗ್ರೆಸ್ ನಾಯಕರು ಮಗ್ನರಾಗಿರುವುದು ಸರಿಯಲ್ಲ ಎಂದು ಕುಮಾರಸ್ವಾಮಿ ಅವರು ಕಟುವಾಟಿ ಟೀಕಿಸಿದರು. ರಾಜ್ಯ ಕಾಂಗ್ರೆಸ್ ಸರ್ಕಾರವು ಜನರ ಕೆಲಸ ಮಾಡುವುದು ಬಿಟ್ಟು ಕ್ಷುಲ್ಲಕ ವಿಚಾರಗಳ…
ಮಂಡ್ಯ: ಜಿಲ್ಲೆಯಲ್ಲಿ ಕೆ ಎಸ್ ಆರ್ ಟಿ ಸಿ ಬಸ್ಸುಗಳ ನಡುವೆ ಭೀಕರ ಅಪಘಾತ ಸಂಭವಿಸಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಬಾಚನಹಳ್ಳಿ ಬಳಿಯಲ್ಲಿ ಮೂರು KSRTC ಬಸ್ ಗಳ ನಡುವೆ ಡಿಕ್ಕಿಯಾಗಿದೆ. ಈ ಅಪಘಾತದಲ್ಲಿ 30ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯವಾಗಿದೆ. ಮೊದಲು ಎರಡು ಬಸ್ಸುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿದೆ. ಆ ನಂತ್ರ ಡಿಕ್ಕಿಯಾಗಿ ನಿಂತಿದ್ದಂತ ಬಸ್ಸಿಗೆ ಮತ್ತೊಂದು ಬಸ್ ಡಿಕ್ಕಿಯಾಗಿ ಈ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಗಾಯಗೊಂಡಿರುವಂತ ಗಾಯಾಳುಗಳನ್ನು ಮಳವಳ್ಳಿ, ಮೈಸೂರಿನ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಸ್ಥಳಕ್ಕೆ ಮಳವಳ್ಳಿ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ, ಪರಿಶೀಲಿಸಿದರು. ಈ ಸಂಬಂಧ ಮಳವಳ್ಳಿ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವರದಿ: ಗಿರೀಶ್ ರಾಜ್, ಮಂಡ್ಯ https://kannadanewsnow.com/kannada/good-news-for-the-states-gram-panchayat-staff-the-government-has-issued-strict-orders-for-salary-payment-every-month/ https://kannadanewsnow.com/kannada/when-bursting-crackers-be-sure-to-follow-this-advice-and-caution/
ಬೆಂಗಳೂರು: ರಾಜ್ಯದ ಗ್ರಾಮ ಪಂಚಾಯ್ತಿಗಳಿಗೆ ಪ್ರತಿ ತಿಂಗಳು ವೇತನ ಪಾವತಿಯಲ್ಲಿ ಕೆಲವು ಕಡೆ ವಿಳಂಬವಾಗುತ್ತಿತ್ತು. ಈ ಸಂಬಂಧ ಸರ್ಕಾರಕ್ಕೆ ದೂರುಗಳು ಸಹ ಸಲ್ಲಿಕೆಯಾಗಿದ್ದವು. ಈ ಹಿನ್ನಲೆಯಲ್ಲಿ ಇನ್ಮುಂದೆ ಪ್ರತಿ ತಿಂಗಳು ವೇತನವನ್ನು ಸಕಾಲದಲ್ಲಿ ಪಾವತಿಸುವಂತೆ ರಾಜ್ಯ ಸರ್ಕಾರ ಖಡಕ್ ಆದೇಶ ಹೊರಡಿಸಿದೆ. ಈ ಕುರಿತಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಆಯುಕ್ತರು ರಾಜ್ಯದ ಎಲ್ಲಾ ಜಿಲ್ಲಾ ಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಆದೇಶ ಹೊರಡಿಸಿದ್ದಾರೆ. ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದಿಂದ ಹೊರಡಿಸಿರುವಂತ ಆದೇಶದಲ್ಲಿ ಗ್ರಾಮ ಪಂಚಾಯಿತಿಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳ ವೇತನವನ್ನು ನಿಯಮಿತವಾಗಿ ಪಾವತಿಸುವುದು ಆದ್ಯತೆಯ ವಿಷಯವಾಗಿರುತ್ತದೆ. ಪ್ರಸ್ತುತ ರಾಜ್ಯದ ಗ್ರಾಮ ಪಂಚಾಯಿತಿಗಳಲ್ಲಿ ಸಿಬ್ಬಂದಿ ವರ್ಗದ ಮಾದರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸಿಬ್ಬಂದಿಗಳಿಗೆ ದಿನಾಂಕ:01.03.2018ರಿಂದ ಜಾರಿಗೆ ಬರುವಂತೆ ಸರ್ಕಾರದ ನಿಧಿಯಿಂದಲೇ ವೇತನ ಪಾವತಿಸಲು ಕ್ರಮವಹಿಸಲಾಗುತ್ತಿದ್ದು, ಅಗತ್ಯವಿರುವ ಅನುದಾನವನ್ನು ಸಂಬಂಧಿಸಿದ ಗ್ರಾಮ ಪಂಚಾಯಿತಿಗಳ ಇ.ಎಫ್.ಎಂ.ಎಸ್ ಖಾತೆಗಳಿಗೆ ಸರ್ಕಾರದಿಂದಲೇ ಬಿಡುಗಡೆ ಗೊಳಿಸಲಾಗುತ್ತಿದೆ ಎಂದಿದೆ. ಆದಾಗ್ಯೂ ಗ್ರಾಮ ಪಂಚಾಯಿತಿ ನೌಕರರಿಗೆ ವೇತನ ಪಾವತಿಸಲು ವಿಳಂಬ ಮಾಡುತ್ತಿರುವ…
ಬೆಂಗಳೂರು: ನಗರದಲ್ಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಅಕ್ಟೋಬರ್.23ರವರೆಗೆ ಜಾತಿಗಣತಿ ಸಮೀಕ್ಷೆಗೆ ಸರ್ಕಾರ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ. ಈ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಕೃಷ್ಣಾದಲ್ಲಿ ಸಾಮಾಜಿಕ-ಶೈಕ್ಷಣಿಕ ಸಮೀಕ್ಷೆಯ ಪ್ರಗತಿ ಪರಿಶೀಲನೆ ನಡೆಸಿದರು. ಹಿಂದುಳಿದ ವರ್ಗಗಳ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಮೀಕ್ಷೆಗೆ ಅಕ್ಟೋಬರ್.23ರವರೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕುವಂತ ನಿರ್ಧಾರವನ್ನು ಕೈಗೊಂಡರು. ಅಕ್ಟೋಬರ್ 23ರಿಂದ 31ರವರೆಗೆ ದೀಪಾವಳಿ ಹಬ್ಬದ ಬಳಿಕ ಬೆಂಗಳೂರಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ಈ ವೇಳೆ ಸಚಿವರಾದ ಕೆ.ಜೆ.ಜಾರ್ಜ್, ಶಿವರಾಜ ತಂಗಡಗಿ, ರಾಮಲಿಂಗಾ ರೆಡ್ಡಿ, ಭೈರತಿ ಸುರೇಶ್, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮಧುಸೂಧನ್ ಆರ್. ನಾಯಕ್, ಮುಖ್ಯಮಂತ್ರಿ ಅವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹ್ಮದ್, ಆರ್ಥಿಕ ಸಲಹೆಗಾರ ಬಸವರಾಜ ರಾಯರೆಡ್ಡಿ ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಅಪರ ಮುಖ್ಯ ಕಾರ್ಯದರ್ಶಿ ಅಂಜುಂ ಪರ್ವೇಜ್…
ಬೆಂಗಳೂರು: ನಗರದಲ್ಲಿ ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಅಕ್ಟೋಬರ್.23ರವರೆಗೆ ಜಾತಿಗಣತಿ ಸಮೀಕ್ಷೆಗೆ ಸರ್ಕಾರ ತಾತ್ಕಾಲಿಕವಾಗಿ ಬ್ರೇಕ್ ಹಾಕಿದೆ. ಈ ಕುರಿತಂತೆ ಸಿಎಂ ಸಿದ್ಧರಾಮಯ್ಯ ಅವರು ಸಮೀಕ್ಷೆ ಪ್ರಗತಿ ಕುರಿತು ಗೃಹ ಕಚೇರಿ ಕೃಷ್ಣಾದಲ್ಲಿ ಮಹತ್ವದ ಸಭೆಯನ್ನು ನಡೆಸಿದರು. ಹಿಂದುಳಿದ ವರ್ಗಗಳ ಇಲಾಖೆಯ ಹಿರಿಯ ಅಧಿಕಾರಿಗಳ ಜೊತೆಗೆ ಸಭೆ ನಡೆಸಿ, ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಮೀಕ್ಷೆಗೆ ಅಕ್ಟೋಬರ್.23ರವರೆಗೆ ತಾತ್ಕಾಲಿಕವಾಗಿ ಬ್ರೇಕ್ ಹಾಕುವಂತ ನಿರ್ಧಾರವನ್ನು ಕೈಗೊಂಡರು. ಅಕ್ಟೋಬರ್ 23ರಿಂದ 31ರವರೆಗೆ ದೀಪಾವಳಿ ಹಬ್ಬದ ಬಳಿಕ ಬೆಂಗಳೂರಲ್ಲಿ ಮತ್ತೆ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ನಡೆಸಲು ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ.
ಬೆಂಗಳೂರು: ದೀಪಾವಳಿ ಹಬ್ಬ ಬಂತೆಂದರೇ ಸಾಕು ಪಟಾಕಿ ಹೊಡೆಯೋದು ಸಹಜ. ಇದರ ಜೊತೆ ಜೊತೆಗೆ ಮಕ್ಕಳು ಕಣ್ಣು, ಕೈಗಳಿಗೆ ಗಾಯಗಳನ್ನು ಮಾಡಿಕೊಳ್ಳುತ್ತಾರೆ. ಕೆಲವರಂತೂ ಕಣ್ಣನ್ನೇ ಕಳೆದುಕೊಂಡು ಬಿಡುತ್ತಾರೆ. ಸೋ ನೀವು ದಿಪಾವಳಿ ಸಂದರ್ಭದಲ್ಲಿ ಪಟಾಕಿ ಅವಘಡವನ್ನು ತಪ್ಪಿಸಲು ಈ ಕೆಳಗಿನ ಕೆಲ ಸಲಹೆ, ಎಚ್ಚರಿಕೆಗಳನ್ನು ತಪ್ಪದೇ ಪಾಲಿಸಿ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪಟಾಕಿ ಅವಘಡಗಳು ಸಂಭವಿಸದಲ್ಲಿ ಕಣ್ಣಿಗೆ ಹಾನಿಯಾಗುವುದನ್ನು ತಪ್ಪಿಸಲು ಈಗಾಗಲೇ ಬೆಂಗಳೂರಿನ ಮಿಂಟೋ ಆಸ್ಪತ್ರೆ ಸೇರಿದಂತೆ ವಿವಿಧ ಆಸ್ಪತ್ರೆಗಳು ಸಜ್ಜುಗೊಂಡಿವೆ. ಪಟಾಕಿ ಅವಘಡದಿಂದ ಉಂಟಾಗುವ ಸುಟ್ಟ ಗಾಯಗಳಿಗೆ ತುರ್ತು ಚಿಕಿತ್ಸೆ ನೀಡಲು ವಿಕ್ಟೋರಿಯಾ ಆಸ್ಪತ್ರೆಯಲ್ಲೂ ವ್ಯವಸ್ಥೆ ಮಾಡಲಾಗಿದೆ. ಪಟಾಕಿ ಸಿಡಿತದಿಂದ ಗಾಯಗೊಂಡಾಗ ಈ ತುರ್ತು ಕಾಳಜಿ ಅಗತ್ಯ ಪಟಾಕಿ ಅವಘಡ ಸಂಭವಿಸಿದಲ್ಲಿ ಗಾಬರಿಯಾಗದೇ ಶಾಂತಿ, ಸಮಾಧಾನದಿಂದ ವರ್ತಿಸುವುದು ಒಳಿತು. ಜೊತೆಗೆ ಮಕ್ಕಳನ್ನು ಗದರದೇ ಸಮಾಧಾನದಿಂದ ಸಂತೈಸಿ. ಗಾಯವಾದ ಕಣ್ಣನ್ನು ಮುಚ್ಚಬೇಡಿ. ಕಣ್ಣೊಳಗೆ ಸೇರಿದ ವಸ್ತುಗಳನ್ನು ತೆಗೆಯದೇ, ಹಗುರಾದ ಪೇಪರ್ ಕಪ್ ಅಥವಾ ಪರಿಶುದ್ಧ ಬಟ್ಟೆಯಿಂದ ನಿಧಾನವಾಗಿ ಮುಚ್ಚಬೇಕು ಅಥವಾ ಹೊದಿಸಿ.…
ಬೆಂಗಳೂರು: ಸಂಚಾರ ನಿಯಮ ಉಲ್ಲಂಘಿಸಿದಂತ ಆಟೋ ಚಾಲಕನೊಬ್ಬನನ್ನು ಸಾರ್ವಜನಿಕವಾಗಿ ನಿಂದಿಸಿದ್ದಲ್ಲದೇ, ಆತನ ಮೇಲೆ ಸಂಚಾರ ಪೊಲೀಸರು ಹಲ್ಲೆ ಕೂಡ ಮಾಡಿದ್ದರು. ಈ ವೀಡಿಯೋ ವೈರಲ್ ಆಗಿತ್ತು. ಈ ಹಿನ್ನಲೆಯಲ್ಲಿ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ, ಸಿಬ್ಬಂದಿಯನ್ನು ಅಮಾನತುಗೊಳಿಸಲಾಗಿದೆ. ಈ ಕುರಿತು ಸಿಎಂ ಸಿದ್ಧರಾಮಯ್ಯ ಅವರ ಕಚೇರಿಯಿಂದ ಮಾಹಿತಿ ಬಿಡುಗಡೆ ಮಾಡಿದ್ದು,ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ತಾಲ್ಲೂಕಿನ ಕುರಿಯ ಗ್ರಾಮದಲ್ಲಿ ಆಟೋ ಚಾಲಕರೊಬ್ಬರು ಸಮವಸ್ತ್ರ ಧರಿಸದೆ ಆಟೋ ಚಾಲನೆ ಮಾಡಿದ ಕಾರಣ ಸಂಚಾರಿ ಪೊಲೀಸರು ಮೋಟಾರ್ ವಾಹನ ಕಾಯ್ದೆ ಉಲ್ಲಂಘನೆ ಮಾಡಿ ಆಟೋ ಚಾಲಕನನ್ನು ನಿಂದಿಸಿ, ಹಲ್ಲೆ ನಡೆಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿತ್ತು. ಈ ವಿಚಾರ ಮುಖ್ಯಮಂತ್ರಿಯವರ ಕಚೇರಿಯ ಕುಂದುಕೊರತೆ ವಿಭಾಗದ ಗಮನಕ್ಕೆ ಬಂದಿದ್ದು, ವಿಶೇಷ ಕರ್ತವ್ಯಾಧಿಕಾರಿಗಳು ತಕ್ಷಣವೇ ಕ್ರಮ ಕೈಗೊಳ್ಳುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದ್ದರು. ಜನಸ್ನೇಹಿ ಆಡಳಿತ ನೀಡುವುದು ಸರ್ಕಾರದ ಆದ್ಯತೆಯಾಗಿದ್ದು, ಅದರಂತೆ ಹಲ್ಲೆ ಮಾಡಿದ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಯನ್ನು ಕರ್ತವ್ಯದಿಂದ ಅಮಾನತುಗೊಳಿಸಲು ದಕ್ಷಿಣ ಕನ್ನಡ ಜಿಲ್ಲಾಡಳಿತ ಹಾಗೂ…
ನವದೆಹಲಿ: ಪರಿಣಿತಿ ಚೋಪ್ರಾ ಮತ್ತು ರಾಘವ್ ಚಡ್ಡಾ ಮೊದಲ ಬಾರಿಗೆ ಪೋಷಕರಾಗಿದ್ದಾರೆ. ದಂಪತಿಗಳು ಭಾನುವಾರ ಗಂಡು ಮಗುವನ್ನು ಸ್ವಾಗತಿಸಿದರು. ಅವರು ಸಾಮಾಜಿಕ ಮಾಧ್ಯಮದಲ್ಲಿ ಮುದ್ದಾದ ಪೋಸ್ಟ್ ಮೂಲಕ ಸಂತೋಷದ ಸುದ್ದಿಯನ್ನು ಘೋಷಿಸಿದರು. ಜಂಟಿ ಇನ್ಸ್ಟಾಗ್ರಾಮ್ ಪೋಸ್ಟ್ನಲ್ಲಿ, ದಂಪತಿಗಳು ತಮ್ಮ ಅಭಿಮಾನಿಗಳು ಮತ್ತು ಹಿತೈಷಿಗಳೊಂದಿಗೆ ಶುಭ ಸುದ್ದಿಯನ್ನು ಹಂಚಿಕೊಂಡರು, ಅವರು ಪೋಷಕರಾಗುತ್ತಿದ್ದಂತೆ ಕೃತಜ್ಞತೆ ಮತ್ತು ಉತ್ಸಾಹವನ್ನು ವ್ಯಕ್ತಪಡಿಸಿದರು. ಪೋಸ್ಟ್ನಲ್ಲಿ, “ಅವನು ಅಂತಿಮವಾಗಿ ನಮ್ಮ ಮಗುವಾಗಿದ್ದಾನೆ. ಮತ್ತು ನಾವು ಅಕ್ಷರಶಃ ಹಿಂದಿನ ಜೀವನವನ್ನು ನೆನಪಿಸಿಕೊಳ್ಳಲು ಸಾಧ್ಯವಿಲ್ಲ. ತೋಳುಗಳು ತುಂಬಿವೆ, ನಮ್ಮ ಹೃದಯಗಳು ತುಂಬಿವೆ. ಮೊದಲು ನಾವು ಒಬ್ಬರನ್ನೊಬ್ಬರು ಹೊಂದಿದ್ದೇವೆ, ಈಗ ನಮಗೆ ಎಲ್ಲವೂ ಇದೆ… ಕೃತಜ್ಞತೆಯಿಂದ ಪರಿಣಿತಿ ಮತ್ತು ರಾಘವ್ ಎಂದಿದ್ದಾರೆ. https://kannadanewsnow.com/kannada/those-who-have-grown-up-using-the-facilities-of-bangalore-are-criticizing-and-tweeting-dks/ https://kannadanewsnow.com/kannada/these-are-the-main-causes-of-99-of-heart-attacks-and-strokes-study/














