Author: kannadanewsnow09

ಶಿವಮೊಗ್ಗ: ಜಿಲ್ಲೆಯ ಸಾಗರ ತಾಲ್ಲೂಕಿನ ಶರಾವತಿ ನದಿ ಹಿನ್ನೀರಿನಲ್ಲಿ ನಿರ್ಮಿಸಿರುವ ಭಾರತದ 2ನೇ ಅತಿ ಉದ್ದದ ಕೇಬಲ್ ಬ್ರಿಡ್ಜ್ ಅಂಬಾರಗೋಡ್ಲು-ಕಳಸವಳ್ಳಿ-ಸಿಗಂದೂರು ಸೇತುವೆಗೆ ʼಮಾತಾ ಶ್ರೀ ಚೌಡೇಶ್ವರಿ ಸೇತುವೆʼಯಾಗಿ ಹೆಸರಿಡುವಂತೆ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಮನವಿ ಮಾಡಿದರು. ಸಾಗರ ತಾಲೂಕಿನ ಶ್ರೀಕ್ಷೇತ್ರ ಸಿಗಂದೂರಿನಲ್ಲಿ ಇಂದು ನೂತನ ಸೇತುವೆ ಲೋಕಾರ್ಪಣೆ ಸಮಾರಂಭ ಉದ್ದೇಶಿಸಿ ಮಾತನಾಡಿ, ಈ ಹೊಸ ಸೇತುವೆಗೆ ತಾಯಿ ಶ್ರೀ ಚೌಡೇಶ್ವರಿ ದೇವಿ ಹೆಸರನ್ನೇ ನಾಮಕರಣ ಮಾಡುವಂತೆ ಕೇಂದ್ರ ಹೆದ್ದಾರಿ ಸಚಿವ ನಿತಿನ್‌ ಗಡ್ಕರಿ ಅವರಲ್ಲಿ ಮನವಿ ಮಾಡಿದರು. ಸಂಸದ ಬಿ.ವೈ.ರಾಘವೇಂದ್ರ ಅವರ ಒತ್ತಾಸೆಯೂ ಇದೇ ಆಗಿದೆ. ಹಾಗಾಗಿ ಅವರ ಅಭಿಲಾಷೆಯಂತೆ ಸಿಗಂದೂರು ಸೇತುವೆಗೆ ಮಾತಾ ಚೌಡೇಶ್ವರಿ ಹೆಸರನ್ನು ವೇದಿಕೆಯಲ್ಲಿ ಘೋಷಿಸಬೇಕೆಂದು ಗಡ್ಕರಿ ಅವರನ್ನು ಒತ್ತಾಯಿಸಿದರು. ದೇಶದಲ್ಲಿ ಇಂದು ಸಚಿವ ನಿತಿನ್‌ ಗಡ್ಕರಿ ಅವರು ಸಂಚಾರ ಕ್ರಾಂತಿಯನ್ನೇ ಮಾಡುತ್ತಿದ್ದಾರೆ. 1998-99ರ ದಶಕದಲ್ಲಿ ಹಲವು ಪ್ರಥಮಗಳ ರೂವಾರಿ ಆಗಿದ್ದವರು, ಅಟಲ್‌ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಶುರು ಮಾಡಿದ ಪ್ರಧಾನಮಂತ್ರಿ ಗ್ರಾಮ ಸಡಕ್‌ ಯೋಜನೆಗೆ…

Read More

ಬೆಂಗಳೂರು : ದೇಶದಲ್ಲೇ ಮೊದಲ ಬಾರಿಗೆ ಶುಶ್ರೂಷಕರ ನೊಂದಣಿಗಾಗಿ, ಕರ್ನಾಟಕ ರಾಜ್ಯ ಶುಶ್ರೂಷ ಪರಿಷತ್‌ ಅಭಿವೃದ್ಧಿಪಡಿಸಿರುವ ವಿಶೇಷ ಡಿಜಿ ಲಾಕರ್‌ ತಂತ್ರಜ್ಞಾನ ಜಾರಿಗೆ ಬಂದಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಜೀವನೋಪಾಯ ಮತ್ತು ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಶರಣಪ್ರಕಾಶ್ ಆರ್. ಪಾಟೀಲ್‌ ತಿಳಿಸಿದರು. ಈ ಕುರಿತು ಮಾಧ್ಯಮ ಪ್ರಕಟಣೆ ಹೊರಡಿಸಿರುವ ಸಚಿವರು, ಆಧಾರ್‌, ಡಿಜಿ ಲಾಕರ್‌ ಇ-ಕೆವೈಸಿ ಮೂಲಕ ನೋಂದಣಿ ಪ್ರಮಾಣ ಪತ್ರಗಳನ್ನು ವಿತರಿಸುವ ತಂತ್ರಜ್ಞಾನದ ಲೋಕಾರ್ಪಣೆ ಜುಲೈ 15 ಮಂಗಳವಾರ ನಡೆಯಲಿದೆ ಎಂದರು. ಯುಐಡಿಎಐ (UIDAI), ಸಿ-ಇಜಿ (C-eG), ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾನಿಲಯ ಹಾಗೂ ಕರ್ನಾಟಕ ರಾಜ್ಯ ಶುಶ್ರೂಷ ಪರೀಕ್ಷಾ ಮಂಡಳಿ ಸಹಯೋಗದೊಂದಿಗೆ ಈ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಲಾಗಿದೆ ಎಂದು ಸಚಿವರು ತಿಳಿಸಿದರು. ಈ ತಂತ್ರಜ್ಞಾನದ ನೆರವಿನಿಂದ ಆಧಾರ್‌ ಇ-ಕೆವೈಸಿ (E-Kyc)ಯಿಂದ ಶುಶ್ರೂಷಕರ ವೈಯಕ್ತಿಕ ಡಾಟಾ, ವಿಳಾಸ, ಫೋಟೋ, ಹಾಗೂ ಇತರೆ ಮಾಹಿತಿಗಳನ್ನು ಆಧಾರ್‌ ಸರ್ವರ್‌ ನಿಂದ ನೇರವಾಗಿ ಕರ್ನಾಟಕ ಶುಶ್ರೂಷ ಪರಿಷತ್‌ ಪಡೆದುಕೊಳ್ಳಬಹುದಾಗಿದೆ. ಈ…

Read More

ಬೆಂಗಳೂರು: ಈ ಸೇತುವೆ ಮತ್ತು ರಸ್ತೆಯನ್ನು ಸಿಗಂಧೂರು ಚೌಡೇಶ್ವರಿ ಮಾತೆಗೆ ಸಮರ್ಪಿಸುವುದಾಗಿ ಕೇಂದ್ರ ಭೂ ಸಾರಿಗೆ ಮಂತ್ರಾಲಯದ ಸಚಿವ ನಿತಿನ್ ಗಡ್ಕರಿ ಅವರು ತಿಳಿಸಿದರು. ಅಂಬಲಗೋಡು- ಕಳಸವಳ್ಳಿ- ಸಿಗಂಧೂರು ಸೇತುವೆಯನ್ನು ಇಂದು ಉದ್ಘಾಟಿಸಿ ಅವರು ಮಾತನಾಡಿದರು. ಇದೇವೇಳೆ 2 ಸಾವಿರ ಕೋಟಿಗೂ ಹೆಚ್ಚು ಮೂಲಸೌಕರ್ಯ ಯೋಜನೆಗಳ ಲೋಕಾರ್ಪಣೆ ಮತ್ತು ಶಂಕುಸ್ಥಾಪನೆಯನ್ನು ಅವರು ನೆರವೇರಿಸಿದರು. ಇದೊಂದು ಐತಿಹಾಸಿಕ ಸೇತುವೆ. ಮಾತೆ ಸಿಗಂಧೂರು ಚೌಡೇಶ್ವರಿ ದೇವಿ ಸೇತುವೆ ಎಂದು ಇದರ ಹೆಸರನ್ನು ಪ್ರಕಟಿಸಿದರು. ಕರ್ನಾಟಕದ ವಿಕಾಸಕ್ಕೆ ಮುಂದಿನ 5 ವರ್ಷಗಳಲ್ಲಿ 5 ಲಕ್ಷ ಕೋಟಿಯ ಕೆಲಸಗಳನ್ನು ಮಾಡಲಾಗುವುದು ಎಂದು ಅವರು ಪ್ರಕಟಿಸಿದರು. 10 ಸಾವಿರ ಕೋಟಿ ಮೊತ್ತದ ಬೆಳಗಾವಿ- ಹುನಗುಂದ- ರಾಯಚೂರು ಚತುಷ್ಪಥ ಕಾಮಗಾರಿ ತ್ವರಿತಗೊಳಿಸಲಾಗುವುದು ಎಂದು ತಿಳಿಸಿದರು. ದೇಶದ ವಿವಿಧೆಡೆ ಆಗಿರುವ ರಸ್ತೆ ಅಭಿವೃದ್ಧಿ ಕಾಮಗಾರಿಗಳ ಕುರಿತು ಅವರು ಮಾಹಿತಿ ಕೊಟ್ಟರು. ದೆಹಲಿ- ಬೆಂಗಳೂರು ನಡುವಿನ ಅಂತರ ಕಡಿಮೆ ಮಾಡುವ ರಸ್ತೆ ಕುರಿತು ಅವರು ವಿವರ ನೀಡಿದರು. ಬೆಂಗಳೂರು -ಮೈಸೂರು ಎಕ್ಸ್‍ಪ್ರೆಸ್ ಹೈವೇ…

Read More

ನಾವು ನಮ್ಮ ಮಕ್ಕಳನ್ನು ಒಳ್ಳೆಯ ಶಾಲೆಗಳಲ್ಲಿ ಓದುವಂತೆ ಮಾಡುತ್ತೇವೆ, ಇದರಿಂದ ನಾವು ಕಷ್ಟಪಟ್ಟರೂ ಅವರು ಓದಬಹುದು ಮತ್ತು ಉತ್ತಮ ಅಂಕಗಳನ್ನು ಪಡೆಯುತ್ತಾರೆ. ಪ್ರಸ್ತುತ ಸನ್ನಿವೇಶದಲ್ಲಿ ಎಲ್ಲಾ ಮಕ್ಕಳು ಒಳ್ಳೆಯ ಮತ್ತು ಬುದ್ಧಿವಂತ ಮಕ್ಕಳು ಮತ್ತು ಓದುವ ಮಕ್ಕಳು. ಆದರೆ ಕೆಲವು ಮಕ್ಕಳು ಪರೀಕ್ಷೆಯ ಸಮಯದಲ್ಲಿ ಓದುವುದೆಲ್ಲವನ್ನೂ ಮರೆತುಬಿಡುತ್ತಾರೆ. ಕೆಲವು ಮಕ್ಕಳು ಯಾವಾಗಲೂ ಸ್ವಲ್ಪ ಜಡವಾಗಿರುತ್ತಾರೆ. ಇದು ಬದಲಾಗಬೇಕಾದರೆ ಸರಸ್ವತಿ ದೇವಿಯ ಕೃಪೆಗೆ ಪಾತ್ರರಾಗಬೇಕು. ಆ ಕೃಪೆಯನ್ನು ಪರಿಪೂರ್ಣವಾಗಿ ಪಡೆಯಲು ಈ ಒಂದು ಸಾಲಿನ ಮಂತ್ರ ಸಾಕು ಎನ್ನುತ್ತದೆ ಆಧ್ಯಾತ್ಮಿಕತೆ . ಈ ಪೋಸ್ಟ್‌ನಲ್ಲಿ, ಮಂತ್ರ ಯಾವುದು ಮತ್ತು ಅದನ್ನು ಹೇಗೆ ಹೇಳಬೇಕೆಂದು ನೀವು ವಿವರವಾಗಿ ನೋಡಬಹುದು. ತಮ್ಮ ಮಕ್ಕಳು ಚೆನ್ನಾಗಿ ಓದಿ ಉತ್ತಮ ಸ್ಥಾನದಲ್ಲಿರಬೇಕು ಎಂಬುದು ಪೋಷಕರ ದೊಡ್ಡ ಕನಸು. ಇಂದು ಪ್ರತಿಯೊಬ್ಬ ಪೋಷಕರು ತಮ್ಮ ಮಕ್ಕಳಿಗೆ ಉತ್ತಮ ಭವಿಷ್ಯವನ್ನು ಹೊಂದಲು ಬೆಳಿಗ್ಗೆಯಿಂದ ಸಂಜೆಯವರೆಗೆ ದಣಿವರಿಯಿಲ್ಲದೆ ಶ್ರಮಿಸುತ್ತಾರೆ. ಅದಕ್ಕೆ ಆಧಾರವೆಂದರೆ ಅವರು ಉತ್ತಮ ಶಿಕ್ಷಣ ಪಡೆಯಬೇಕು. ಈ ಶಿಕ್ಷಣ ಪಡೆಯಲು ನಮ್ಮ ದೊಡ್ಡ ಶಾಲೆಗಳಿಗೆ…

Read More

ಪೂರ್ವಜರ ಆರಾಧನೆಯನ್ನು ಅತ್ಯಂತ ವಿಶೇಷವಾದ ಆರಾಧನೆ ಎಂದು ಪರಿಗಣಿಸಲಾಗಿದೆ. ಕುಲದೇವತೆಯ ಕೃಪೆಯಿಂದಲೇ ನಮ್ಮ ಜೀವನದಲ್ಲಿ ಪ್ರತಿಯೊಂದು ಶುಭ ಕಾರ್ಯಗಳು ನಡೆಯುತ್ತವೆ ಎಂಬುದು ಹಲವರ ಅನುಭವಕ್ಕೆ ಬಂದಿರುವ ಸತ್ಯ. ಆದುದರಿಂದಲೇ ಇಂದಿನ ಕಾಲದಲ್ಲಿ ಕುಲದೇವತಾ ಆರಾಧನೆಯು ಬಹಳ ವಿಶೇಷವಾಗಿದೆ. ಅಂತಹ ಕುಲದೇವತೆಗೆ ನಾವು ಮಾಡುವ ಪ್ರತಿಯೊಂದು ರೀತಿಯ ಪೂಜೆಯು ವಿಭಿನ್ನ ಪ್ರಯೋಜನಗಳನ್ನು ಹೊಂದಿದೆ. ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ, ಯಶಸ್ಸನ್ನು ಸಾಧಿಸಲು ಮತ್ತು ಅಡೆತಡೆಗಳನ್ನು ಕಡಿಮೆ ಮಾಡಲು ಕುಲದೈವವನ್ನು ಯೋಚಿಸಿ ಬೆಳಗಬೇಕಾದ ದೀಪದ ಬಗ್ಗೆ ನಾವು ನೋಡಲಿದ್ದೇವೆ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ಅಡೆತಡೆಗಳನ್ನು ನಾಶಮಾಡುವ…

Read More

ಬೆಂಗಳೂರು: ಸುಮಾರು 27 ಸಾವಿರ ರೂಪಾಯಿ ಮೌಲ್ಯದ ಕಾಫ್ ಸಿರಪ್ ದೊರಕಿದ ಹಿನ್ನೆಲೆಯಲ್ಲಿ ಕಲಬುರಗಿ ದಕ್ಷಿಣ ಮತ ಕ್ಷೇತ್ರದ ಬ್ಲಾಕ್ ಕಾಂಗ್ರೆಸ್ ಪದಾಧಿಕಾರಿಯ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಟ್ವಿಟ್ ಮಾಡಿರುವಂತ ಅವರು ಈ ಪ್ರಕರಣದಲ್ಲಿ ನಿಷ್ಪಕ್ಷಪಾತವಾಗಿ ತನಿಖೆ ನಡೆಸಲು ಪೊಲೀಸರು ಸ್ವತಂತ್ರರಿದ್ದಾರೆ, ಪ್ರಕರಣ ದಾಖಲಾಗುತ್ತಿದ್ದಂತೆಯೇ ಕಾಂಗ್ರೆಸ್ ಪಕ್ಷದಿಂದ ಅವರನ್ನು ಉಚ್ಚಾಟಿಸಲಾಗಿದೆ ಎಂದಿದ್ದಾರೆ. ಕಾಂಗ್ರೆಸ್ ಪಕ್ಷವಾಗಲಿ, ಸರ್ಕಾರವಾಗಲಿ ಇದನ್ನು ಸಮರ್ಥಿಸುವುದಿಲ್ಲ. ಆದರೆ, 27 ಸಾವಿರ ಮೌಲ್ಯದ ಕಾಫ್ ಸಿರಪ್ ವಿಷಯದಲ್ಲಿ ಕೆಮ್ಮುತ್ತಿರುವ ಬಿಜೆಪಿಯವರು ಅದಕ್ಕಿಂತ ಗಂಭೀರ ಪ್ರಕರಣಗಳನ್ನು ಎದುರಿಸುತ್ತಿರುವ ತಮ್ಮ ಪಕ್ಷದವರ ಬಗ್ಗೆ ಕ್ರಮ ಕೈಗೊಳ್ಳುವ ನೈತಿಕತೆ ತೋರುವುದು ಯಾವಾಗ? ಎಂದು ಪ್ರಶ್ನಿಸಿದ್ದಾರೆ. ಪೋಕ್ಸೋ ಪ್ರಕರಣದ ಆರೋಪಿಯನ್ನು ಬಿಜೆಪಿ ಪಕ್ಷವು ಉಚ್ಚಾಟನೆ ಮಾಡುವುದು ಯಾವಾಗ? ಪುತ್ತೂರಿನಲ್ಲಿ ಬಿಜೆಪಿ ನಾಯಕನ ಪುತ್ರನೊಬ್ಬ ಯುವತಿಯೊಬ್ಬರಿಗೆ ವಂಚಿಸಿ ಅತ್ಯಾಚಾರವೆಸಗಿದ್ದರ ಬಗ್ಗೆ ಕ್ರಮ ಕೈಗೊಳ್ಳದಿರುವುದು ಯಾವಾಗ? ಎಂದು ಪ್ರಶ್ನಿಸಿದ್ದಾರೆ. ವಿಧಾನಸೌಧದ ಆವರಣದಲ್ಲೇ ಮಹಿಳೆಯರ ಮೇಲೆ…

Read More

ವಿಜಯಪುರ: ನಮ್ಮದು ಅಭಿವೃದ್ಧಿ ಪರವಾದ ಸರ್ಕಾರ ಎನ್ನುವುದಕ್ಕೆ, ಒಂದೇ ದಿನ ಇಂಡಿಯಲ್ಲಿ 4559 ಕೋಟಿ ರೂಪಾಯಿಗಳ ಶಂಕುಸ್ಥಾಪನೆ, ಉದ್ಘಾಟನೆಯನ್ನು ನಾನು ನೆರವೇರಿಸಿದ ಈ ಕ್ಷಣವೇ ಸಾಕ್ಷಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. ಇಂದು ವಿಜಯಪುರ ಜಿಲ್ಲೆಯ ಇಂಡಿ ತಾಲ್ಲೂಕಿನಲ್ಲಿ ಆಯೋಜಿಸಿದ್ದ ಸಮಾರಂಭದಲ್ಲಿ ಶಕ್ತಿ ಯೋಜನೆಯಡಿ 500 ಕೋಟಿ ಬಾರಿ ಮಹಿಳೆಯರು ಉಚಿತ ಪ್ರಯಾಣ ನಡೆಸಿದ ಹಿನ್ನೆಲೆಯಲ್ಲಿ ಕೆ.ಕೆ.ಆರ್.ಟಿ.ಸಿ ಬಸ್‌ಗೆ ಪೂಜೆ ನೆರವೇರಿಸಿ, ಮಹಿಳಾ ಪ್ರಯಾಣಿಕರಿಗೆ ಉಚಿತ ಟಿಕೆಟ್ ವಿತರಿಸಿ, ನಂತರ ವಿವಿಧ ಅಭಿವೃದ್ಧಿ ಕಾರ್ಯಗಳಿಗೆ ಶಂಕುಸ್ಥಾಪನೆ ಹಾಗೂ ಉದ್ಘಾಟನೆಯನ್ನು ನೆರವೇರಿಸಿ, ಲಿಂಬೆ ಅಭಿವೃದ್ಧಿ ಮಂಡಳಿಯ ಲಾಂಛನವನ್ನು ಬಿಡುಗಡೆಗೊಳಿಸಿ ಮಾತನಾಡಿದರು. 4157 ಕೋಟಿ ರೂಪಾಯಿ ಮೊತ್ತದ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿ, 401 ಕೋಟಿ ಮೊತ್ತದ ಕಾಮಗಾರಿ ಉದ್ಘಾಟನೆ ಮಾಡಿದ್ದೇನೆ. ಬಿಜೆಪಿಯವರು ಬಹಿರಂಗ ಚರ್ಚೆಗೆ ಬರಲಿ. ಅಭಿವೃದ್ಧಿಯಲ್ಲಿ ನಮ್ಮ ಸರ್ಕಾರದ ಸಾಧನೆ ಮತ್ತು ಬಿಜೆಪಿ ಸರ್ಕಾರದ ಸಾಧನೆ ಬಗ್ಗೆ ಸಾರ್ವಜನಿಕ‌ವಾಗಿ ದಾಖಲೆ ಸಮೇತ ಚರ್ಚೆ ನಡೆಸೋಣ. ಜನರೇ ತೀರ್ಮಾನಿಸಲಿ ಎಂದು ನುಡಿದರು. ಬಿಜಾಪುರ…

Read More

ಬೆಂಗಳೂರು: ಸಿಗಂದೂರು ಸೇತುವೆ ಲೋಕಾರ್ಪಣೆ ಕಾರ್ಯಕ್ರಮದ ಆಹ್ವಾನ ಪತ್ರಿಕೆಗೆ ನನ್ನ ಹೆಸರು ಹಾಕಿ, ಬಹಿರಂಗ ಪಡಿಸುವ ಮುನ್ನ ನನ್ನ ಆಗಲೀ, ನನ್ನ ಕಚೇರಿಯನ್ನು ಆಗಲೀ ಸಂಪರ್ಕಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇವಲ ಸಚಿವ ನಿತಿನ್ ಗಡ್ಕರಿ ಅವರಿಗೆ ತಿರುಗೇಟು ನೀಡಿದ್ದಾರೆ.  ಈ ಕುರಿತು ಎಕ್ಸ್ ಮಾಡಿರುವಂತ ಅವರು ಶಿವಮೊಗ್ಗ ಕಾರ್ಯಕ್ರಮದ ಕುರಿತು ನಿಮ್ಮ ಪ್ರತಿಕ್ರಿಯೆಯನ್ನು ಗಮನಿಸಲಾಗಿದೆ. ಆದಾಗ್ಯೂ, ನಿಮ್ಮ ಸಚಿವಾಲಯವು ಕಾರ್ಯಕ್ರಮವನ್ನು ಅಂತಿಮಗೊಳಿಸುವ ಮೊದಲು ಮತ್ತು ನನ್ನ ಹೆಸರನ್ನು ಮುದ್ರಿಸಿದ ಆಹ್ವಾನ ಪತ್ರಿಕೆಯನ್ನು ಸಾರ್ವಜನಿಕವಾಗಿ ಪ್ರಸಾರ ಮಾಡುವ ಮೊದಲು ನನ್ನನ್ನಾಗಲಿ ಅಥವಾ ನನ್ನ ಕಚೇರಿಯನ್ನಾಗಲಿ ಸಂಪರ್ಕಿಸಲಾಗಿಲ್ಲ ಎಂಬುದನ್ನು ನಾನು ಇಲ್ಲಿ ದಾಖಲಿಸಲು ಬಯಸುತ್ತೇನೆ ಎಂದಿದ್ದಾರೆ. ವಾಸ್ತವವಾಗಿ, ಅಧಿಕೃತ ಆಹ್ವಾನ ಪತ್ರಿಕೆಯನ್ನು ಜುಲೈ 11, 2025 ರಂದು ಮಾತ್ರ ಸ್ವೀಕರಿಸಲಾಯಿತು. ಈ ಕಾರ್ಯಕ್ರಮಕ್ಕೆ ಕೇವಲ ಮೂರು ದಿನಗಳ ಮೊದಲು. ಅದೇ ದಿನ, ನನ್ನ ಕಚೇರಿಯು ವಿಜಯಪುರದ ಇಂಡಿಯಲ್ಲಿ ನೀರಾವರಿ ಮತ್ತು ಅಭಿವೃದ್ಧಿ ಯೋಜನೆಗಳ ರಾಜ್ಯ ಮಟ್ಟದ ಉದ್ಘಾಟನೆಗೆ ನನ್ನ ಪೂರ್ವ ಬದ್ಧತೆಯ…

Read More

ಬೆಂಗಳೂರು : “500 ಕೋಟಿ ಟ್ರಿಪ್ ಗಳನ್ನು ಕಂಡಿರುವ ಶಕ್ತಿ ಯೋಜನೆ ಇಡೀ ದೇಶಕ್ಕೆ ಮಾದರಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಬಣ್ಣಿಸಿದರು. “ಶಕ್ತಿ” ಯೋಜನೆಯಡಿ ಮಹಿಳೆಯರ ಉಚಿತ ಪ್ರಯಾಣ 500 ಕೋಟಿ ಟ್ರಿಪ್ ಮುಟ್ಟಿರುವ ಹಿನ್ನೆಲೆಯಲ್ಲಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರಿನ ವಿಂಡ್ಸರ್ ವೃತ್ತದಲ್ಲಿ ಬಿಎಂಟಿಸಿ ಬಸ್ ನಲ್ಲಿ 500 ನೇ ಕೋಟಿಯ ಟಿಕೆಟ್ ಅನ್ನು ಮಹಿಳಾ ಪ್ರಯಾಣಿಕರಿಗೆ ಸೋಮವಾರ ವಿತರಿಸಿದರು. ನಂತರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು. “ಯಾವುದೇ ಕಾರಣಕ್ಕೂ ನಮ್ಮ ಸರ್ಕಾರ ಗ್ಯಾರಂಟಿ ಯೋಜನೆಗಳನ್ನು ನಿಲ್ಲಿಸುವುದಿಲ್ಲ. ಎಲ್ಲಿಯವರೆಗೆ ದೇವರು ಶಕ್ತಿ ಹಾಗೂ ಜನ ಅಧಿಕಾರ ನೀಡುತ್ತಾರೋ ಅಲ್ಲಿಯತನಕ ಯೋಜನೆಗಳು ಮುಂದುವರೆಯುತ್ತವೆ” ಎಂದರು. “ಕಾಂಗ್ರೆಸ್ ಪಕ್ಷ ಈ ದೇಶದ ಜನರಿಗೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ನೀಡಿದೆ. ಹಲಾವಾರು ಪಿಂಚಣಿ ಯೋಜನೆಗಳು, ನರೇಗಾ, ಬ್ಯಾಂಕ್ ರಾಷ್ಟ್ರೀಕರಣ ಸೇರಿದಂತೆ ನಮ್ಮ ಯೋಜನೆಗಳನ್ನು ಬಿಜೆಪಿ ಸೇರಿದಂತೆ ಯಾರೂ ಸಹ ನಿಲ್ಲಿಸಲು ಸಾಧ್ಯವಿಲ್ಲ. ಇವು ಜನರ ಹೃದಯ ಹಾಗೂ…

Read More

ಬೆಂಗಳೂರು: ಇಂದು ಸಿಗಂದೂರು ಸೇತುವೆಯನ್ನು ಕೇಂದ್ರ ಸಚಿವ ನಿತಿನ್ ಗಡ್ಕರಿ ಉದ್ಘಾಟಿಸಿದ್ದಾರೆ. ಈ ಸೇತುವೆ ಲೋಕಾರ್ಪಣೆ ಕಾರ್ಯಕ್ರಮಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಮುಂಚಿತವಾಗಿಯೇ ಆಹ್ವಾನಿಸಬೇಕಿತ್ತು. ಅಲ್ಲದೇ ಸಿಎಂಗೆ ತಿಳಿಸಬೇಕಾಗಿತ್ತು ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಹೇಳಿದ್ದಾರೆ. ಇಂದು ಸದಾಶಿವನಗರದ ನಿವಾಸದ ಬಳಿ ಮಾಧ್ಯಮಗಳ ಪ್ರಶ್ನೆಗಳಿಗೆ ಪ್ರತಿಕ್ರಿಯಿಸಿದಂತ ಅವರು ಸಿಗಂದೂರು ನೂತನ ತೂಗುಸೇತುವೆ ಉದ್ಘಾಟನೆ ಸಂಬಂಧ ಮುಖ್ಯಮಂತ್ರಿಗಳ ಆಹ್ವಾನ ವಿವಾದದ ಬಗ್ಗೆ ಕೇಳಿದಾಗ, “ರಾಜ್ಯದ ಮುಖ್ಯಮಂತ್ರಿಗಳಿಗೆ ಮುಂಚಿತವಾಗಿ ತಿಳಿಸಬೇಕಾಗಿತ್ತು. ಇಂತಹ ಸಂದರ್ಭದಲ್ಲಿ ರಾಜ್ಯ ಸರ್ಕಾರವನ್ನು ವಿಶ್ವಾಸಕ್ಕೆ ತೆಗೆದುಕೊಳ್ಳಬೇಕಾಗಿತ್ತು. ಈ ಬಗ್ಗೆ ಮುಖ್ಯಮಂತ್ರಿ ಅವರು ಪತ್ರ ಬರೆದು ತಿಳಿಸಿದ್ದಾರೆ. ಇಂದು ಇಂಡಿ ತಾಲ್ಲೂಕಿನಲ್ಲಿ ನಡೆಯುತ್ತಿದ್ದ ಕಾರ್ಯಕ್ರಮವೂ ಅತ್ಯಂತ ಪ್ರಮುಖವಾದುದು. 2 ಸಾವಿರ ಕೋಟಿಗೂ ಹೆಚ್ಚಿನ ಹಣವನ್ನು ನೀರಾವರಿ ಇಲಾಖೆಯಿಂದ ನೀಡಲಾಗುತ್ತಿದೆ” ಎಂದರು. ಉದ್ದೇಶಪೂರ್ವಕವಾಗಿ ಹೀಗೆ ಮಾಡಲಾಗಿದೆಯೇ ಎಂದು ಕೇಳಿದಾಗ, “ಈ ರಾಜಕಾರಣವನ್ನು ಆನಂತರ ಮಾತನಾಡೋಣ” ಎಂದರು. https://kannadanewsnow.com/kannada/permanent-liberation-for-six-decades-of-relentless-struggle-of-sharavathi-flood-victims-mp-b-y-raghavendra/ https://kannadanewsnow.com/kannada/sigandur-bridge-to-be-inaugurated-today-by-union-minister-under-pressure-from-local-bjp-leaders-cm-siddaramaiah/

Read More