Subscribe to Updates
Get the latest creative news from FooBar about art, design and business.
Author: kannadanewsnow09
ಕೋಲಾರ: ಬಿಪಿಎಲ್ ಕಾರ್ಡ್ ದಾರರು ಪಡಿತರ ಪಡೆಯೋದಕ್ಕೆ ಕುಟುಂಬದ ಎಲ್ಲರ ವೇತನ ಪ್ರಮಾಣ ಪತ್ರ ನೀಡುವುದು ಕಡ್ಡಾಯವೆಂದೇ ಹೇಳಲಾಗುತ್ತಿತ್ತು. ಆದರೇ ಎಲ್ಲರ ವೇತನ ಪ್ರಮಾಣಪತ್ರ ಕಡ್ಡಾಯವಲ್ಲ ಎಂಬುದಾಗಿ ಆಹಾರ ಇಲಾಖೆ ಸಚಿವ ಕೆ.ಹೆಚ್ ಮುನಿಯಪ್ಪ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಬಿಪಿಎಲ್ ಕಾರ್ಡ್ ದಾರರಿಗೆ ಬಿಗ್ ರಿಲೀಫ್ ನೀಡಿದ್ದಾರೆ. ಕೋಲಾರದಲ್ಲಿ ಮಾತನಾಡಿದಂತ ಅವರು ಅರ್ಹರಲ್ಲದವರು ಬಿಪಿಎಲ್ ಕಾರ್ಡ್ ಪಡೆದಿರುವ ಬಗ್ಗೆ ಇಲಾಖೆಯಿಂದ ಪರಿಶೀಲನೆ ನಡೆಸಲಾಗುತ್ತಿದೆ. ಸರ್ಕಾರಿ ನೌಕರರು ಕಾರ್ಡ್ ಪಡೆದಿದ್ದರೇ ಅಂತವರ ರೇಷನ್ ಕಾರ್ಡ್ ರದ್ದುಗೊಳಿಸಲಾಗುವುದಾಗಿ ತಿಳಿಸಿದರು. ಅಕ್ರಮ ಪಡಿತರ ಚೀಟಿ ಪರಿಶೀಲನೆಯಿಂದಾಗಿ ರೇಷನ್ ವಿತರಣೆ ಸೇರಿದಂತೆ ವಿವಿಧ ಕೆಲಸಗಳಲ್ಲಿ ಸ್ವಲ್ಪ ಏರುಪೇರಾಗಿತ್ತು. ಈಗ ಒಂದು ಹಂತಕ್ಕೆ ಬಂದಿದೆ. ಇನ್ಮುಂದೆ ಯಾವುದೇ ಸಮಸ್ಯೆ ಆಗುವುದಿಲ್ಲ ಎಂಬುದಾಗಿ ಹೇಳಿದರು. ಬಿಪಿಎಲ್ ಕಾರ್ಡ್ ಹೊಂದಿರೋರು ಸರ್ಕಾರಿ ನೌಕರರು ಆಗಿರಬಾರದು. ವಾರ್ಷಿಕ ಆದಾಯ ಮಿತಿ 1.20 ಲಕ್ಷ ಮೀರಬಾರದು. ಇಂತವರ ಯಾವುದೇ ರೇಷನ್ ಕಾರ್ಡ್ ರದ್ದುಗೊಳಿಸುವುದಿಲ್ಲ ಎಂಬುದಾಗಿ ತಿಳಿಸಿದರು.
ಬೆಂಗಳೂರು: ಬಾಬಾಸಾಹೇಬ ಡಾ.ಬಿ.ಆರ್.ಅಂಬೇಡ್ಕರ್ ಅವರು ಕೇಂದ್ರದ ಸಚಿವರಾಗಿದ್ದರು. ನೀವು ಕೊಟ್ಟ ಯಾವ ತೊಂದರೆಯಿಂದ ಬಾಬಾಸಾಹೇಬರಿಗೆ ನೋವಾಯಿತು? ಯಾವ ಕಾರಣಕ್ಕೆ ಅವರು ನೆಹರೂ ಅವರನ್ನು ವಿರೋಧಿಸಿ ರಾಜೀನಾಮೆ ಕೊಟ್ಟು ಹೊರಕ್ಕೆ ಬಂದರು ಎಂಬ ವಿಷಯದ ಕುರಿತು ಕಾಂಗ್ರೆಸ್ಸಿಗರು ಉತ್ತರ ಕೊಡಬೇಕು. ಯಾತ್ರೆ ಮಾಡಿ ಜನರಿಗೆ ಉತ್ತರಿಸಿ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಬಾಬಾಸಾಹೇಬರ ಜೊತೆ ಪಿಎ ಆಗಿ ಸೇವೆ ಮಾಡಿಕೊಂಡಿದ್ದ ಕಾರಜೋಳಕರ್ ಎಂಬವರನ್ನು ಅವರಿಂದ ಕಸಿದುಕೊಂಡು ಹೋಗಿ ಅವರ ವಿರುದ್ಧವೇ ಎತ್ತಿ ಕಟ್ಟಿ ಚುನಾವಣೆಗೆ ನಿಲ್ಲಿಸಿ ಗೆಲ್ಲಿಸಿದಿರಲ್ಲವೇ? ಜನಪ್ರಿಯತೆ ಬಾಬಾಸಾಹೇಬರಿಗೆ ಇತ್ತೇ ಅಥವಾ ಕಾರಜೋಳಕರ್ ಅವರಿಗಿತ್ತೇ? ಅಂದಮೇಲೆ ಮನೆ ಒಡೆಯುವ ಕೆಲಸವನ್ನು ನೀವು ಬಹಳ ಚೆನ್ನಾಗಿ ಮಾಡುತ್ತೀರಿ ಎಂದು ಆಕ್ಷೇಪಿಸಿದರು. ಇದು ಅಂಬೇಡ್ಕರರಿಗೆ ಮಾಡಿದ ದ್ರೋಹ; ಇದನ್ನೂ ಜನರಿಗೆ ತಿಳಿಸಿ ಎಂದು ಒತ್ತಾಯಿಸಿದರು. ನೆಹರೂ, ಇಂದಿರಾಜೀ, ರಾಜೀವ್ ಗಾಂಧಿಯವರಿಗೆ ಕಾಂಗ್ರೆಸ್ಸಿಗರು ಭಾರತರತ್ನ…
ಭೋಪಾಲ್: ಮೃತ ವ್ಯಕ್ತಿಯೊಂದಿಗಿನ ಲೈಂಗಿಕ ಸಂಭೋಗವನ್ನು ಕಾನೂನಿನ ಅಡಿಯಲ್ಲಿ ಅತ್ಯಾಚಾರ ಎಂದು ಪರಿಗಣಿಸಲಾಗುವುದಿಲ್ಲ ಎಂದು ಛತ್ತೀಸ್ ಗಢ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಈ ಪ್ರಕರಣದ ತೀರ್ಪು ನೀಡಿದ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ರಮೇಶ್ ಸಿನ್ಹಾ ಮತ್ತು ನ್ಯಾಯಮೂರ್ತಿ ಬಿಭು ದತ್ತಾ ಗುರು ಅವರನ್ನೊಳಗೊಂಡ ವಿಭಾಗೀಯ ಪೀಠವು, ಸಂತ್ರಸ್ತೆ ಜೀವಂತವಾಗಿದ್ದಾಗ ಮಾತ್ರ ಭಾರತೀಯ ದಂಡ ಸಂಹಿತೆ (ಐಪಿಸಿ) ಸೆಕ್ಷನ್ 376 ಮತ್ತು ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯ್ದೆ ಜಾರಿಗೆ ಬರುತ್ತದೆ ಮತ್ತು ಆದ್ದರಿಂದ ಮೃತ ವ್ಯಕ್ತಿಯೊಂದಿಗಿನ ಲೈಂಗಿಕ ಸಂಭೋಗವನ್ನು ಕಾನೂನಿನ ಅಡಿಯಲ್ಲಿ ಅತ್ಯಾಚಾರವೆಂದು ಪರಿಗಣಿಸಲಾಗುವುದಿಲ್ಲ ಎಂದು ಅಭಿಪ್ರಾಯಪಟ್ಟಿದೆ. ಆದಾಗ್ಯೂ, ಆರೋಪಿಯು ಮಾಡಿದ ಮೃತ ದೇಹದ ಮೇಲೆ ಅತ್ಯಾಚಾರ ಎಸಗಿದ ಅಪರಾಧ (ನೆಕ್ರೋಫಿಲಿಯಾ) ಒಬ್ಬರು ಯೋಚಿಸಬಹುದಾದ ಅತ್ಯಂತ ಭಯಾನಕ ಅಪರಾಧಗಳಲ್ಲಿ ಒಂದಾಗಿದೆ ಎಂಬುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ನ್ಯಾಯಾಲಯ ಹೇಳಿದೆ. ಆದರೆ ವಾಸ್ತವ ಸಂಗತಿಯೆಂದರೆ, ಅತ್ಯಾಚಾರದ ಅಪರಾಧವನ್ನು ಮೃತ ದೇಹದೊಂದಿಗೆ ಮಾಡಿರುವುದರಿಂದ ಈ ಆರೋಪಿಯನ್ನು ಶಿಕ್ಷೆಗೆ ಗುರಿಪಡಿಸಲಾಗುವುದಿಲ್ಲ ಎಂದು ಅವರು…
ಚಿತ್ರದುರ್ಗ: 2024-25ನೇ ಸಾಲಿಗೆ ಮೆಟ್ರಿಕ್ ಪೂರ್ವ ಹಾಗೂ ನಂತರದ ವಿದ್ಯಾರ್ಥಿವೇತನ ಅಭಿಯಾನ ಕೈಗೊಳ್ಳಲಾಗಿದ್ದು, ಜಿಲ್ಲೆಯ ಎಲ್ಲಾ ಅರ್ಹ ಪರಿಶಿಷ್ಟ ಜಾತಿ ವಿದ್ಯಾರ್ಥಿಗಳು ಇಲಾಖೆಯ ವೆಬ್ಸೈಟ್ ರಾಜ್ಯ ವಿದ್ಯಾರ್ಥಿವೇತನ ಪೋರ್ಟಲ್ನಲ್ಲಿ ಅರ್ಜಿ ಸಲ್ಲಿಸಬಹುದು. 2024-25ನೇ ಸಾಲಿನಿಂದ ಕೇಂದ್ರ ಪುರಸ್ಕøತ ವಿದ್ಯಾರ್ಥಿವೇತನ ಕಾರ್ಯಕ್ರಮಗಳಿಗೆ ಆಧಾರ್ ಆಧಾರಿತ ಬಯೋಮೆಟ್ರಿಕ್ ಅಥೆಂಟಿಕೇಷನ್ ಅಂಡ್ ಇ-ಕೆವೈಸಿ ಕಡ್ಡಾಯವಾಗಿದೆ. ಈ ಸಂಬಂಧ ರಾಜ್ಯಾದ್ಯಂತ ಕಾರ್ಯನಿರ್ವಹಿಸುತ್ತಿರುವ ಗ್ರಾಮ ಒನ್, ಬೆಂಗಳೂರು ಒನ್ ಹಾಗೂ ಕರ್ನಾಟಕ ಒನ್ ಕೇಂದ್ರಗಳಲ್ಲಿ ಈ ಪ್ರಕ್ರಿಯೆಯನ್ನು ಉಚಿತವಾಗಿ ಕೈಗೊಳ್ಳಲಾಗಿದ್ದು, ಎಲ್ಲಾ ಅರ್ಹ ಫಲಾನುಭವಿಗಳು ಗ್ರಾಮ ಒನ್, ಕರ್ನಾಟಕ ಒನ್, ಬೆಂಗಳೂರು ಒನ್ ಹಾಗೂ ಸಂಬಂಧಿಸಿದ ಸಮಾಜ ಕಲ್ಯಾಣ ಇಲಾಖೆಗೆ ಭೇಟಿ ನೀಡಿ ಎಲ್ಲಾ ಅರ್ಹ ಫಲಾನುಭವಿಗಳು ಸಕಾಲದಲ್ಲಿ ಇ-ಕೆವೈಸಿ ನೊಂದಣಿ ಮಾಡಿಸಲು ಕೋರಿದೆ. ಚಿತ್ರದುರ್ಗ ಜಿಲ್ಲೆಯ ಸಮಾಜ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲೆಯ ಎಲ್ಲಾ ಸಹಾಯಕ ನಿರ್ದೇಶಕರ ಕಚೇರಿಗಳಲ್ಲಿ ವಿದ್ಯಾರ್ಥಿಗಳಿಂದ ಅರ್ಜಿ ಪಡೆಯಲು ಹಾಗೂ ಇ-ಕೆವೈಸಿ ಮಾಡಲು ಫೆಸಿಲಿಟೇಷನ್ ಕೇಂದ್ರಗಳನ್ನು ಆರಂಭಿಸಲಾಗಿದೆ ಎಂದು ಸಮಾಜ ಕಲ್ಯಾಣ ಇಲಾಖೆ…
ಬೆಂಗಳೂರು: “ಬಿಜೆಪಿಯ ಅನೇಕ ನಾಯಕರು ಮಹಿಳೆಯರ ಬಗ್ಗೆ ನಡೆದುಕೊಳ್ಳುತ್ತಿರುವ ರೀತಿ ನೋಡಿದರೆ, ಅವರ ಕುಟುಂಬದಲ್ಲಿನ ಹೆಣ್ಣು ಮಕ್ಕಳಿಗೆ ತಾಯಿಗೆ, ಮಡದಿಗೂ ಗೌರವ ನೀಡುವುದಿಲ್ಲ ಎನಿಸುತ್ತದೆ” ಎಂದು ಮಾಜಿ ಸಂಸದ ಡಿ.ಕೆ. ಸುರೇಶ್ ತಿಳಿಸಿದರು. ಸದಾಶಿವನಗರ ನಿವಾಸದಲ್ಲಿ ಸುರೇಶ್ ಅವರು ಭಾನುವಾರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ಈ ವೇಳೆ ಸಿ.ಟಿ. ರವಿ ಅವರ ಬಂಧನ ಹಾಗೂ ಅವರ ಆರೋಪಗಳ ಬಗ್ಗೆ ಕೇಳಿದಾಗ, ಅವರು ಹೇಳಿದ್ದಿಷ್ಟು; “ಬಿಜೆಪಿಯವರು ಸಿಬಿಐ ಸಂಸ್ಥೆಯನ್ನು ತಮ್ಮ ಮನೆ ಸರಕಿನಂತೆ ಭಾವಿಸಿದ್ದಾರೆ. ಮನೆಗೆಲಸದವರನ್ನು ಬಳಸಿಕೊಂಡಂತೆ ಸಿಬಿಐ ಬಳಸಿಕೊಳ್ಳುವ ಪ್ರವೃತ್ತಿ ಎದ್ದು ಕಾಣುತ್ತಿದೆ. ಸಿ.ಟಿ. ರವಿ ಆಡಿರುವ ಮಾತು, ನಡೆದುಕೊಂಡಿರುವ ರೀತಿ, ಪದೇ ಪದೆ ಹೆಣ್ಣು ಮಕ್ಕಳ ಬಗ್ಗೆ ಆಡಿರುವ ಮಾತು ಬಿಜೆಪಿಗೆ ಶೋಭೆ ತರುತ್ತದೆಯೇ?” ಎಂದು ಪ್ರಶ್ನಿಸಿದರು. “ಸಂಸ್ಕೃತಿ ಬಗ್ಗೆ ಮಾತನಾಡುತ್ತಾ ಜನರ ಮುಂದೆ ಬರುವ ಬಿಜೆಪಿಗರಿಗೆ ಆ ಸಂಸ್ಕೃತಿ ಎಲ್ಲಿ ಹೋಯ್ತು? ಆರ್ ಎಸ್ ಎಸ್ ಹೇಳಿಕೊಡುವ ಸಂಸ್ಕೃತಿ ಇದೇನಾ? ಬಿಜೆಪಿ ನಾಯಕರು ನಿರಂತರವಾಗಿ ಮಹಿಳೆಯರ ಜತೆ ನಡೆದುಕೊಳ್ಳುವ ರೀತಿ…
ಮಂಡ್ಯ: ಭದ್ರಾವತಿಯ ಸರ್ ಎಂ.ವಿಶ್ವೇಶ್ವರಯ್ಯ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆಯನ್ನು ಸುಮಾರು ₹15,000 ಕೋಟಿ ವೆಚ್ಚದಲ್ಲಿ ಪುನಚ್ಚೇತನಗೊಳಿಸಲು ನಿರ್ಧರಿಸಲಾಗಿದೆ ಎಂದು ಕೇಂದ್ರದ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದರು. ಇಲ್ಲಿ ಸಮರೋಪವಾದ 87ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದಲ್ಲಿ ಭಾಷಣ ಮಾಡಿದ ಕೇಂದ್ರ ಸಚಿವರು; ರಾಜ್ಯದಲ್ಲಿ ನಿರುದ್ಯೋಗ ನಿವಾರಣೆ ಮಾಡುವ ನಿಟ್ಟಿನಲ್ಲಿ ಕೇಂದ್ರದ ನರೇಂದ್ರ ಮೋದಿ ಅವರ ಸರ್ಕಾರ ಅನೇಕ ಉಪಕ್ರಮಗಳನ್ನು ಕೈಗೊಂಡಿದೆ. ಕೈಗಾರಿಕಾಭಿವೃದ್ಧಿಗೆ ಹೆಚ್ಚು ಒತ್ತು ಕೊಡಲಾಗುತ್ತಿದೆ. ಆ ನಿಟ್ಟಿನಲ್ಲಿಯೇ ಭದ್ರಾವತಿ ಕಾರ್ಖಾನೆಗೆ ಮರುಜೀವ ಕೊಡಲು ತೀರ್ಮಾನ ಮಾಡಲಾಗಿದೆ ಎಂದರು. ಮೈಸೂರು ಮಹಾ ಸಂಸ್ಥಾನದ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್ ಹಾಗೂ ಭಾರತ ರತ್ನ ಸರ್ ಎಂ ವಿಶ್ವೇಶ್ವರಯ್ಯ ಅವರ ದೂರದೃಷ್ಟಿಯ ಫಲವಾಗಿ ಭದ್ರಾವತಿ ಕಬ್ಬಿಣ ಮತ್ತು ಉಕ್ಕು ಕಾರ್ಖಾನೆ ಸ್ಥಾಪನೆ ಆಗಿತ್ತು. ಸಾವಿರಾರು ಜನರಿಗೆ ಅಲ್ಲಿ ಉದ್ಯೋಗ ಅವಕಾಶ ಸಿಕ್ಕಿತ್ತು. ಲಕ್ಷಾಂತರ ಜನರು ಪರೋಕ್ಷವಾಗಿ ಬದುಕು ಕಟ್ಟಿಕೊಂಡಿದ್ದರು. ಅಂತಹ ವೈಭವದ ದಿನಗಳು…
ಶಿವಮೊಗ್ಗ: ಹಾಜರಾತಿ ಕೊರತೆಯ ಕಾರಣ ಪರೀಕ್ಷೆ ನೀಡದಿದ್ದಕ್ಕೆ ಉಪನ್ಯಾಸಕರ ಮೇಲೆ ವಿದ್ಯಾರ್ಥಿ ಹಾಗೂ ಪೋಷಕರು ಹಲ್ಲೆ ನಡೆಸಿದ್ದಂತ ಘಟನೆ ಸಾಗರದ ಸರ್ಕಾರಿ ಪ್ರಥಮದ ದರ್ಜೆ ಕಾಲೇಜಿನಲ್ಲಿ ನಡೆದಿತ್ತು. ಈ ಘಟನೆಯನ್ನು ಖಂಡಿಸಿ, ಉಪನ್ಯಾಸಕರಿಗೆ ಬೆಂಬಲ ಸೂಚಿಸಿ ನಾಳೆ ವಿದ್ಯಾರ್ಥಿ ಒಕ್ಕೂಟದಿಂದ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಈ ಸಂಬಂಧ ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಒಕ್ಕೂಟದಿಂದ ಪೊಲೀಸರಿಗೆ ನಾಳೆ ಪ್ರತಿಭಟನೆಗೆ ಅವಕಾಶ ನೀಡುವಂತೆ ನಗರ ಪೊಲೀಸ್ ಠಾಣೆಗೆ ಮನವಿ ಪತ್ರವನ್ನು ಸಲ್ಲಿಸಿದೆ. ಸಾಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಒಕ್ಕೂಟ ಸಲ್ಲಿಸಿರುವಂತ ಮನವಿಯಲ್ಲಿ ದಿನಾಂಕ 21-12-2024ರಂದು ಕಾಲೇಜಿನ ಅವಧಿಯಲ್ಲಿ ವಿದ್ಯಾರ್ಥಿಗಳ ಬಗ್ಗೆ ಕಾಳಜಿ ಹೊಂದಿರುವ, ಕಾಲೇಜಿನಲ್ಲಿ ಒಳ್ಳೆಯ ಹೆಸರಿರುವಂತ ಇತಿಹಾಸ ಉಪನ್ಯಾಸಕ ರಾಜು ಮೇಲೆ ಹಲ್ಲೆಯಾಗಿದೆ. ಇತಿಹಾಸ ವಿಭಾಗದ ಮುಖ್ಯಸ್ಥರಾದಂತ ರಾಜು ಮೇಲೆ ಕಾಲೇಜಿನ ವಿದ್ಯಾರ್ಥಿ ಹಾಗೂ ಆತನ ತಂದೆ ಸೇರಿ ಹಲ್ಲೆ ಮಾಡಿರುವುದು ಖಂಡನೀಯ ಎಂದಿದ್ದಾರೆ. ಈ ಘಟನೆಯ ಬಳಿಕ ಹಲ್ಲೆ ಮಾಡಿದಂತ ವಿದ್ಯಾರ್ಥಿ, ಪೋಷಕರು ಕಾಲೇಜು ಮತ್ತು…
ಧಾರವಾಡ : 110 ಕೆವಿ. ಯು.ಎ.ಎಸ್ ವಿದ್ಯುತ್ ವಿತರಣಾ ಕೇಂದ್ರದಲ್ಲಿ ದಿನಾಂಕ: 23/12/2024 ರಂದು ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ ಇವರು 3ನೇ ತ್ರೈಮಾಸಿಕ ತುರ್ತುಪಾಲನಾ ಕಾಮಗಾರಿಯನ್ನು ಕೈಗೊಳ್ಳುವುದರಿಂದ ಸದರಿ ವಿದ್ಯುತ್ ವಿತರಣಾ ಕೇಂದ್ರದಿಂದ ಸರಬರಾಜು ಆಗುವ ಎಲ್ಲಾ 11ಕೆವಿ ಮಾರ್ಗಗಳಲ್ಲಿ ದಿನಾಂಕ: 23/12/2024 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ನಾಳೆ ಜಿಲ್ಲೆಯ ಈ ಪ್ರದೇಶಗಳಲ್ಲಿ ಪವರ್ ಕಟ್ ಎತ್ತಿನಗುಡ್ಡ, ಅಗ್ರಿ ಯುನಿವರಸಿಟಿ ಕ್ಯಾಂಪಸ್, ಕುಮಾರೇಶ್ವರ ನಗರ, ಸೈದಾಪೂರ, ಬೆಳಗಾವಿ ಮೇನ್ ರೋಡ್, ನಾರಾಯಣಪುರ, ಸಿ.ಐ.ಟಿ.ಬಿ, ಕೆ.ಹೆಚ್.ಬಿ ಕಾಲೋನಿ, ಸಂಪಿಗೆ ನಗರ, ತಾವರಗೇರಿ ಹಾಸ್ಪಿಟಲ್, ಸನ್ಮತಿ ನಗರ, ಜಿ.ಟಿ.ಸಿ ಕ್ಯಾಂಪಸ್, ಮೆಹಬೂಬ ನಗರ, ಹಶ್ಮಿ ನಗರ, ಮಾಳಾಪುರ, ಏರಟೆಕ್, ಜಯಲಕ್ಷ್ಮೀ ಇಂಡಸ್ಟ್ರಿಸ್, ಬಸವ ಕಾಲೋನಿ, ಪವರ್ ಗ್ರಿಡ್, ಪೆಪ್ಸಿ, ಕಿಲ್ಲಾ, ಸಾಧುನವರ ಎಸ್ಟೆಟ್, ನರೇಂದ್ರ, ಮಮ್ಮಿಗಟ್ಟಿ, ಚಿಕ್ಕಮಲ್ಲಿಗವಾಡ, ಹಿರೇಮಲ್ಲಿಗವಾಡ, ಶಿರಡಿನಗರ, ತಾಜನಗರ, ಬಿ.ಎಸ್.ಕೆ ಲೇಔಟ, ಮಾಳಾಪುರ ಲಾಸ್ಟ್…
ದಾವಣಗೆರೆ : ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದ ದೇವದಾಸಿ ಪುನರ್ ವಸತಿ ಯೋಜನೆಯಡಿ ನಿವೇಶನ ಹೊಂದಿದ ಅರ್ಹ ಮಾಜಿ ದೇವದಾಸಿ ಮಹಿಳೆಯರಿಂದ ಅರ್ಜಿ ಆಹ್ವಾನಿಸಲಾಗಿದೆ. ಪರಿಶಿಷ್ಟ ಜಾತಿ ಉಪಯೋಜನೆಯಡಿ ಬಳಕೆಯಾಗದ ಅನುದಾನದಡಿ ಜಿಲ್ಲೆಗೆ ಭೌತಿಕ 19, ಆರ್ಥಿಕ ರೂ.34 ಲಕ್ಷಗಳ ಗುರಿ ಸೇರಿದಂತೆ ಒಟ್ಟು 67 ಭೌತಿಕ ಗುರಿ ನಿಗದಿಪಡಿಸಿದ್ದು, ಗ್ರಾಮೀಣ ಪ್ರದೇಶದ ಘಟಕ ವೆಚ್ಚ ರೂ.1.75 ಲಕ್ಷ ಹಾಗೂ ನಗರ ಪ್ರದೇಶದ ರೂ.2 ಲಕ್ಷಗಳ ಘಟಕ ವೆಚ್ಚದಲ್ಲಿ ರಾಜೀವಗಾಂಧಿ ವಸತಿ ನಿಗಮದಿಂದ ವಸತಿ ಸೌಲಭ್ಯವನ್ನು ಒದಗಿಸಲಾಗುವುದು. ಅರ್ಹರು ಉಪನಿರ್ದೇಶಕರ ಕಚೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ, 14ನೇ ಮುಖ್ಯ ರಸ್ತೆ, ಕುವೆಂಪು ನಗರ, ದಾವಣಗೆರೆ ಇಲ್ಲಿ ಅರ್ಜಿಗಳನ್ನು ಪಡೆದು ಅಗತ್ಯ ದಾಖಲೆಗಳೊಂದಿಗೆ 1 ಜನವರಿ 2025 ರೊಳಗೆ ಕಚೇರಿಗೆ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-222117 ಗೆ ಸಂಪರ್ಕಿಸಲು ಉಪನಿರ್ದೇಶಕರಾದ ರಾಜಾನಾಯ್ಕ ತಿಳಿಸಿದ್ದಾರೆ. ಪ್ರಾದೇಶಿಕ ಸಾರಿಗೆ ಶಿಬಿರ 2025ನೇ ವರ್ಷದಲ್ಲಿ ದಾವಣಗೆರೆ ಪ್ರಾದೇಶಿಕ ಸಾರಿಗೆ ಅಧಿಕಾರಿಗಳ ಕಚೇರಿ ವತಿಯಿಂದ…
ಬಳ್ಳಾರಿ : ಕಂಪ್ಲಿ ಜೆಸ್ಕಾಂ ವ್ಯಾಪ್ತಿಯ 110/11ಕೆವಿ ಕಂಪ್ಲಿ ಉಪಕೇಂದ್ರ ಹಾಗೂ ಇಟ್ಟಿಗಿ 110/11ಕೆವಿ ಉಪಕೇಂದ್ರದ ನಿರ್ವಹಣೆ ಕಾರ್ಯ ಕೈಗೊಳ್ಳುತ್ತಿರುವುದರಿಂದ ಡಿ.23 ರಂದು ಬೆಳಿಗ್ಗೆ 09 ಗಂಟೆಯಿಂದ ಸಂಜೆ 05 ಗಂಟೆಯವರೆಗೆ ಕಂಪ್ಲಿ ನಗರ, ನಂ-10 ಮುದ್ದಾಪುರ, ಕಣಿವೆ ತಿಮ್ಮಾಪುರ, ರಾಮಸಾಗರ, ದೇವಸಮುದ್ರ, ಹಂಪಾದೇವನಳ್ಳಿ, ಜಾಯಿಗನೂರು, ಕುಂಬಾರ್ ಕ್ಯಾಂಪ್, ಕೃಷನಗರ ಕ್ಯಾಂಪ್, ಬೆಳಗೋಡುಹಾಳು, ಸಣಾಪುರ, ಇಟ್ಟಿಗಿ, ನಂ-2 ಮುದ್ದಾಪುರ, ಸಣಾಪುರ, ಅರಳಹಳ್ಳಿ, ಬಸವೇಶ್ವರ ಕ್ಯಾಂಪ್, ಮಾರೆಮ್ಮ ಕ್ಯಾಂಪ್ ಮತ್ತು ಎಫ್-7 ಸಣಾಪುರ ಮಾರ್ಗದಲ್ಲಿಯೂ ಸಹ ವಿದ್ಯುತ್ ವ್ಯತ್ಯಯವಾಗಲಿದೆ ಹಾಗೂ ಐಪಿ ಸೆಟ್ ಮಾರ್ಗಗಳಲ್ಲಿ ಬೆಳಿಗ್ಗೆ 4 ಗಂಟೆಯಿಂದ ವಿದ್ಯುತ್ ಸರಬರಾಜು ಮಾಡಲಾಗುವುದು ಎಂದು ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ; ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಪ್ರಸ್ತಕ ಸಾಲಿಗೆ ಡ್ರೋನ್ ಆಧಾರಿತ ಫೋಟೋಗ್ರಫಿ ಮತ್ತು ವಿಡಿಯೋಗ್ರಫಿ ಮೂಲಕ ಸಾಮಾಜಿಕ ಜಾಲತಾಣಗಳಲ್ಲಿ ಉದ್ಯೋಗ ಪಡೆಯಲು ಇಚ್ಚಿಸುವ ಪರಿಶಿಷ್ಟ ಪಂಗಡದ ಯುವಕ…