Author: kannadanewsnow09

ಬೆಂಗಳೂರು: ರಾಜ್ಯದಿಂದ ಅಯೋಧ್ಯೆಗೆ 25 ರೈಲುಗಳು ಹೋಗಲಿವೆ; ಆಸಕ್ತರು ಹೆಸರು ಕೊಡಬೇಕು ಎಂಬ ಮಾಹಿತಿ ಇರುವ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಕಳೆದ ವರ್ಷದ ವಿಡಿಯೋವನ್ನು ಸಾಮಾಜಿಕ ಜಾಲತಾಣಗಳಲ್ಲಿ ಮರು ಪೋಸ್ಟ್ ಮಾಡುತ್ತಿದ್ದಾರೆ ಎಂದು ಅಯೋಧ್ಯೆ ಶ್ರೀ ರಾಮ ಮಂದಿರ ದರ್ಶನ ಅಭಿಯಾನ ರಾಜ್ಯ ಸಹ ಸಂಚಾಲಕ ಜಗದೀಶ್ ಹಿರೇಮನಿ ಅವರು ತಿಳಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಈ ವರ್ಷ ಬಿಜೆಪಿ ವತಿಯಿಂದ ಅಯೋಧ್ಯೆ ಶ್ರೀರಾಮ ಮಂದಿರಕ್ಕೆ ಕರೆದುಕೊಂಡು ಹೋಗುವ ಕಾರ್ಯಕ್ರಮ ಸದ್ಯಕ್ಕೆ ಇಲ್ಲ ಎಂದು ಸ್ಪಷ್ಟಪಡಿಸಿದರು. ಪಕ್ಷದ ಹಿತೈಷಿಗಳು, ಕಾರ್ಯಕರ್ತರು ಮತ್ತು ಸಾರ್ವಜನಿಕರು ಇದರ ಮಾಹಿತಿಯನ್ನು ತಿಳಿದುಕೊಳ್ಳಬೇಕು ಎಂದು ಮನವಿ ಮಾಡಿದರು. ಈ ವರ್ಷ ಜನವರಿ- ಫೆಬ್ರವರಿಯಲ್ಲಿ ಬಿಜೆಪಿಯಿಂದ ಅಯೋಧ್ಯೆಗೆ ಕರೆದುಕೊಂಡು ಹೋಗುವ ಯೋಜನೆ ಇಲ್ಲ ಎಂದು ವಿವರ ನೀಡಿದರು. 2024 ಜನವರಿ 22ರಂದು ಅಯೋಧ್ಯೆಯಲ್ಲಿ ಶ್ರೀರಾಮನ ಪ್ರಾಣ ಪ್ರತಿಷ್ಠಾಪನೆ ಆಗಿತ್ತು. ಪ್ರಧಾನಿ ನರೇಂದ್ರ ಮೋದಿಯವರು ಪ್ರತಿಷ್ಠಾಪನೆ ಮಾಡಿದ್ದ ಅಯೋಧ್ಯೆಗೆ…

Read More

ಬೆಂಗಳೂರು: ಬಾಣಂತಿಯರ ಸಾವನ್ನು ತಡೆಯಲು ವಿಫಲರಾದ ಸಚಿವರಾದ ದಿನೇಶ್ ಗುಂಡೂರಾವ್, ಲಕ್ಷ್ಮಿ ಹೆಬ್ಬಾಳ್ಕರ್ ಅವರು ರಾಜೀನಾಮೆ ಕೊಡಬೇಕೆಂದು ಬಿಜೆಪಿ ರಾಜ್ಯ ಮಹಿಳಾ ಮೋರ್ಚಾ ಅಧ್ಯಕ್ಷೆ ಕು.ಮಂಜುಳಾ ಅವರು ಆಗ್ರಹಿಸಿದ್ದಾರೆ. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮದವರ ಜೊತೆ ಮಾತನಾಡಿದ ಅವರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್ ಅವರು ಬಾಣಂತಿಯರ ಸಾವನ್ನು ತಡೆಯುವುದರಲ್ಲಿ ಸಂಪೂರ್ಣ ವಿಫಲವಾಗಿದ್ದಾರೆ. ಅವರು ರಾಜೀನಾಮೆ ಕೊಟ್ಟು ಮನೆಗೆ ವಾಪಸ್ ಹೋಗಬೇಕು ಎಂದು ಆಗ್ರಹಿಸಿದರು. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಅವರು ಇಲ್ಲಿವರೆಗೆ ಬಾಣಂತಿ ಸಾವಿನ ಸಂಬಂಧ ಒಬ್ಬರನ್ನೂ ಭೇಟಿ ಮಾಡಿ ಸಾಂತ್ವನ ಹೇಳಿಲ್ಲ; ಅವರು ಕೂಡ ರಾಜೀನಾಮೆ ಕೊಟ್ಟು ಮನೆಗೆ ವಾಪಸ್ ಹೋಗಬೇಕು ಎಂದು ಒತ್ತಾಯಿಸಿದರು. ಬಾಣಂತಿಯರ ಸಾವನ್ನು ಸರಕಾರ ನಿಲ್ಲಿಸದೆ ಇರುವುದನ್ನು ಖಂಡಿಸಿ ಇಡೀ ರಾಜ್ಯದಲ್ಲಿ, ಪ್ರತಿದಿನ 5 ಜಿಲ್ಲೆಗಳಲ್ಲಿ ರಾಜ್ಯ ಮಹಿಳಾ ಮೋರ್ಚಾ ಜಿಲ್ಲಾ ಘಟಕಗಳು ನಾಳೆಯಿಂದ ಪ್ರತಿಭಟನೆ ನಡೆಸಲಿವೆ ಎಂದ…

Read More

2024 ತಂತ್ರಜ್ಞಾನ ಮತ್ತು ವೈದ್ಯಕೀಯ ಎರಡರಲ್ಲೂ ನಂಬಲಾಗದ ಪ್ರಗತಿಯ ವರ್ಷವಾಗಿದೆ. ಕೃತಕ ಬುದ್ಧಿಮತ್ತೆ ತಂತ್ರಜ್ಞಾನಕ್ಕೆ ಬದಲಾಯಿಸುವ ಕೈಗಾರಿಕೆಗಳಿಂದ ಹಿಡಿದು ಪರಮಾಣು ಶಕ್ತಿ, ಬಾಹ್ಯಾಕಾಶ ಪರಿಶೋಧನೆ ಮತ್ತು ಕ್ವಾಂಟಮ್ ಕಂಪ್ಯೂಟಿಂಗ್‌ನಲ್ಲಿ ಪ್ರಮುಖ ಪ್ರಗತಿಗಳವರೆಗೆ, ಇದು ನೆನಪಿಡುವ ಒಂದು ವರ್ಷವಾಗಿದೆ. ಆದರೆ ಕಥೆಯು ಹೆಚ್ಚು ಹಿಂದಕ್ಕೆ ಹೋಗುತ್ತದೆ – ಇದು ಒಂದು ದಶಕದ ಕಠಿಣ ಪರಿಶ್ರಮದ ಫಲಿತಾಂಶವಾಗಿದೆ. ಭಾರತವು 5-ಜಿ ಜಾಲಗಳನ್ನು ಹೊರತರುವುದರಿಂದ ಹಿಡಿದು 4 ಮೇಡ್-ಇನ್-ಇಂಡಿಯಾ ಕೋವಿಡ್ ಲಸಿಕೆಗಳನ್ನು ಅಭಿವೃದ್ಧಿಪಡಿಸುವ ತನಕ ಎಲ್ಲಾ ಅಡೆತಡೆಗಳನ್ನು ದಾಟಿದೆ, ಅದು ತನಗಾಗಿ ಮಾತ್ರವಲ್ಲದೆ ಇಡೀ ಜಗತ್ತಿಗಾಗಿ.  ಇಂದು ಜಗತ್ತು ಭಾರತದ ನಾವೀನ್ಯತೆಯ ಮನೋಭಾವವನ್ನು ಗಮನಿಸುತ್ತಿದೆ. 3ನೇ ಅತಿದೊಡ್ಡ ಸ್ಟಾರ್ಟಪ್ ಪರಿಸರ ವ್ಯವಸ್ಥೆ ಮತ್ತು ದಾಖಲೆಯ 64,480 ಪೇಟೆಂಟ್ ಅರ್ಜಿಗಳನ್ನು 2023ರಲ್ಲಿ ಸಲ್ಲಿಸಲಾಗಿದೆ, ಭಾರತವು ಪೇಟೆಂಟ್ ಫೈಲಿಂಗ್‌ನಲ್ಲಿ ಜಾಗತಿಕವಾಗಿ 6​​ನೇ ಅತಿದೊಡ್ಡ ಸ್ಥಾನವನ್ನು ಸದೃಢವಾಗಿ ಪಡೆದುಕೊಂಡಿದೆ. ಈ ದಾಖಲೆಯು 2024ರಲ್ಲಿ ವಿವಿಧ ಕ್ಷೇತ್ರಗಳಲ್ಲಿ ಕೈಗೊಂಡ ಮಹತ್ವದ ಪ್ರಗತಿಗಳು ಮತ್ತು ನವೀನ ಯೋಜನೆಗಳನ್ನು ಎತ್ತಿ ತೋರಿಸುತ್ತದೆ.  ವೈದ್ಯಕೀಯ ಮತ್ತು…

Read More

2024ರ ಚುನಾವಣೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ಐತಿಹಾಸಿಕ ಮೂರನೇ ಗೆಲುವು ಅವರ ವೈಯಕ್ತಿಕ ಸಾಧನೆಯ ಪರಂಪರೆಯನ್ನು ದೃಢಪಡಿಸುತ್ತದೆ. ಜೊತೆಗೆ,  ಭಾರತೀಯ ರಾಜಕೀಯದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ಪ್ರಾಬಲ್ಯವನ್ನು ಪ್ರತಿಬಿಂಬಿಸುತ್ತದೆ. ಇಂದು ಪ್ರಧಾನಮಂತ್ರಿ ಮೋದಿ ಭಾರತದ ಸ್ಥಿರತೆಯ ಸಂಕೇತವಾಗಿದ್ದಾರೆ ಮತ್ತು ಬಿಜೆಪಿ ಉತ್ತಮ ಆಡಳಿತದ ಸಮಾನಾರ್ಥಕ ಪಕ್ಷವಾಗಿ ಹೊರಹೊಮ್ಮಿದೆ ಎಂಬುದನ್ನು ಈ ಚುನಾಔಣೆಯ ಜಯದು ತೋರಿಸಿಕೊಡುತ್ತದೆ. 2024ರಲ್ಲಿ, ಜಾಗತಿಕವಾಗಿ ಆಡಳಿತ ವಿರೋಧಿ ಅಲೆಯು ಪ್ರಮುಖ ಪ್ರಜಾಪ್ರಭುತ್ವಗಳ ನೆಲೆಯನ್ನು ಅಲುಗಾಡಿಸಿತು. ಅನೇಕ ಹಿರಿಯ ಪದಾಧಿಕಾರಿಗಳು ಗಮನಾರ್ಹ ಸೋಲುಗಳನ್ನು ಎದುರಿಸುತ್ತಿದ್ದಾರೆ. ಯುನೈಟೆಡ್ ಸ್ಟೇಟ್ಸ್‌ ನಲ್ಲಿ, ಡೆಮೋಕ್ರಾಟ್‌ಗಳು ಕಾಂಗ್ರೆಸ್‌ನ ಎರಡೂ ಸದನಗಳ ಅಧ್ಯಕ್ಷ ಸ್ಥಾನ ಮತ್ತು ನಿಯಂತ್ರಣವನ್ನು ಕಳೆದುಕೊಂಡರು. ಯು.ಕೆ. ಕನ್ಸರ್ವೇಟಿವ್ ಪಕ್ಷವನ್ನು (ಟೋರಿಗಳು) ನಿರ್ಣಾಯಕವಾಗಿ ಅಧಿಕಾರದಿಂದ ಹೊರಹಾಕಲಾಯಿತು. ಅದೇ ರೀತಿ ಫ್ರಾನ್ಸ್, ದಕ್ಷಿಣ ಕೊರಿಯಾ ಮತ್ತು ಪೋಲೆಂಡ್‌ ನಲ್ಲಿ ಆಡಳಿತ ಪಕ್ಷಗಳು ಅತಂತ್ರವಾಗಿ ಹೋದವು. ಈ ಜಾಗತಿಕ ಪ್ರವೃತ್ತಿಗೆ ವ್ಯತಿರಿಕ್ತವಾಗಿ, ಭಾರತದಲ್ಲಿ ನರೇಂದ್ರ ಮೋದಿ ಅವರು ಅಧಿಕಾರವನ್ನು ಉಳಿಸಿಕೊಂಡರು ಮಾತ್ರವಲ್ಲದೆ ಐತಿಹಾಸಿಕ ಮೂರನೇ ಅವಧಿಯೊಂದಿಗೆ…

Read More

ಪ್ರಧಾನಮಂತ್ರಿ ನರೇಂದ್ರ ಮೋದಿ ಸರ್ಕಾರದ ಆಡಳಿತದ ಹತ್ತು ವರ್ಷಗಳಲ್ಲಿ, ಭಾರತವು ಗಮನಾರ್ಹವಾದ ಸಾಂಸ್ಕೃತಿಕ ಪುನರುಜ್ಜೀವನವನ್ನು ಕಂಡಿದೆ, ಅದರ ಶ್ರೀಮಂತ ಪರಂಪರೆಯ ಬಗ್ಗೆ ಹೆಮ್ಮೆಯನ್ನು ಹೆಚ್ಚಿಸಿದೆ. ಜಮ್ಮು-ಕಾಶ್ಮೀರದಲ್ಲಿನ ಪುರಾತನ ದೇವಾಲಯಗಳನ್ನು ಪುನಃಸ್ಥಾಪಿಸುವುದರಿಂದ ಹಿಡಿದು ಭವ್ಯವಾದ ಕಾಶಿ ವಿಶ್ವನಾಥ ಧಾಮದಂತಹ ಆಧ್ಯಾತ್ಮಿಕ ಕಾರಿಡಾರ್‌ಗಳನ್ನು ನವೀಕರಿಸುವುದು ಮತ್ತು ದೇಶಾದ್ಯಂತ ದೇವಾಲಯಗಳನ್ನು ಪುನರ್ನಿರ್ಮಿಸುವವರೆಗೆ, ಈ ಪ್ರಯತ್ನಗಳು ನಮ್ಮ ಬೇರುಗಳೊಂದಿಗೆ ನಮ್ಮನ್ನು ಮರುಸಂಪರ್ಕಿಸಿವೆ. ಮೀರಾ ಬಾಯಿಯಂತಹ ಸಂತರು ಮತ್ತು ಭಗವಾನ್ ಬಿರ್ಸಾ ಮುಂಡಾ ಅವರಂತಹ ಬುಡಕಟ್ಟು ವೀರರನ್ನು ಗೌರವಿಸಲಾಗಿದೆ, ಮಹಾಕುಂಭದಂತಹ ಸಂಪ್ರದಾಯಗಳನ್ನು ಜಾಗತಿಕವಾಗಿ ಪ್ರಚಾರ ಮಾಡಲಾಗಿದೆ, ಇದು ಭಾರತದ ಆಧ್ಯಾತ್ಮಿಕ ಭವ್ಯತೆಯನ್ನು ಪ್ರದರ್ಶಿಸುತ್ತದೆ. ಅಯೋಧ್ಯೆಯಲ್ಲಿ ದೀಪಾವಳಿಯಂತಹ ದಾಖಲೆಯ ಆಚರಣೆಗಳು ಮತ್ತು ಸಂಸತ್ತಿನಲ್ಲಿ ಪವಿತ್ರ ಸೆಂಗೋಲ್ ಅನ್ನು ಇರಿಸುವುದು ನಮ್ಮ ನಾಗರಿಕತೆಯ ಮೌಲ್ಯಗಳಿಗೆ ಆಳವಾದ ಗೌರವವನ್ನು ಪ್ರತಿಬಿಂಬಿಸುತ್ತದೆ. ಈ ವರ್ಷವು ಭಾರತದ ಪರಂಪರೆಯು ಭವಿಷ್ಯದ ಪೀಳಿಗೆಗೆ ಅದರ ಕಾಲಾತೀತವಾದ ಚೈತನ್ಯವನ್ನು ಪಾಲಿಸಲು ಮತ್ತು ಎತ್ತಿಹಿಡಿಯಲು ಪ್ರೇರೇಪಿಸುತ್ತದೆ ಎಂದು ಖಚಿತಪಡಿಸಿಕೊಳ್ಳುವ ಪ್ರಯತ್ನಗಳು ದಶಕದುದ್ದದ ಪ್ರಯಾಣವನ್ನು ಮುಂದುವರೆಸಿದೆ. ಈ ವರ್ಷವು ಅಯೋಧ್ಯೆಯಲ್ಲಿ ಶ್ರೀ…

Read More

ಮೈಸೂರು: ನಾಳೆಯಿಂದ ಹೊಸ ವರ್ಷ ಶುರುವಾಗಲಿದ್ದು, 2025 ನೇ ಹೊಸ ವರ್ಷ ಸ್ವಾಗತಕ್ಕೆ ಎಲ್ಲರೂ ಸಿದ್ಧತೆ ನಡೆಸಿದ್ದು, ಈ ನಡುವೆ ಪೊಲೀಸರು ಸಾರ್ವಜನಿಕರಿಗೆ ಮಹತ್ವದ ಮಾಹಿತಿಯೊಂದನ್ನು ಹಂಚಿಕೊಂಡಿದ್ದಾರೆ. ದಯವಿಟ್ಟು ಶುಭಾಷಯಗಳ ಪಠ್ಯ ಸಂದೇಶವನ್ನು ಮಾತ್ರ ಹಂಚಿಕೊಳ್ಳಿ. ತೆರೆಯಲು ಮತ್ತು ಪರಿಶೀಲಿಸಲು ಕೇಳುವ ಚಿತ್ರಗಳು, ಲಿಂಕ್ ಗಳನ್ನು ಹಂಚಿಕೊಳ್ಳಬೇಡಿ ಮತ್ತು ತೆರೆಯಬೇಡಿ, ಇತ್ತೀಚಿನ ಸೈಬರ್ ಕ್ರೈಂ ಗಳು ಆತಂಕಕಾರಿಯಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ. ಹೊಸ ವರ್ಷವನ್ನು ಆನಂದದಿಂದ ಆಚರಿಸಿ ಎಂದು ಸೈಬರ್ ವಂಚಕರು ಸಾಮಾಜಿಕ ಜಾಲತಾಣಗಳಾದ ವಾಟ್ಸ್ ಅಪ್, ಫೇಸ್ ಬುಕ್, ಟೆಲಿಗ್ರಾಮ್ ಇನ್ನೀತರ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಲಿಂಕ್ಗಳು ಗ್ರೀಟಿಂಗ್ಸ್ ಗಳನ್ನು ಕಳುಹಿಸಿ ಸೈಬರ್ ವಂಚನೆಗೆ ಒಳಗಾಗುವಂತೆ ಮಾಡುತ್ತಾರೆ.ಅಪರಿಚಿತ ಅನುಮಾನಾಸ್ಪದ ಅಂಕ್ ಗಳ ಮೇಲೆ ಕ್ಲಿಕ್ ಮಾಡಬೇಡಿ ಎಂದು ಪೊಲೀಸರು ಮನವಿ ಮಾಡಿದ್ದಾರೆ. ಸಾರ್ವಜನಿಕರು ನಿಮ್ಮ ಮೊಬೈಲ್ ಗಳಿಗೆ ಬರುವ ಯಾವುದೇ ಅಂಕ್ ಅಥವಾ ಚಿತ್ರವನ್ನು ಲಿಂಕ್ ಗಳೊಂದಿಗೆ ತೆರೆಯುವಾಗ ಜಾಗರೂಕರಾಗಿರಿ. ಯಾರದರೂ ನಿಮಗೆ ಕಳುಹಿಸಿದ ಶುಭಾಷಯಗಳನ್ನು ಅಥವಾ ಅಂಕ್ ಗಳನ್ನು…

Read More

ಬೆಂಗಳೂರು: ವಿಶ್ವ ಬ್ರೈಲ್ ದಿನಾಚರಣೆಯಂದು ದೃಷ್ಟಿದೋಷವುಳ್ಳ ವಿಕಲಚೇತನರ ಸರ್ಕಾರಿ ನೌಕರರಿಗೆ ದಿನಾಂಕ 04-01-2025ರಂದು ವಿಶೇಷ ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಿ ಆದೇಶಿಸಿದೆ. ಈ ಕುರಿತಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಹಾಗೂ ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ ನಿರ್ದೇಶಕರು, ವಿಕಲಚೇತನರ ಮತ್ತು ಹಿರಿಯ ನಾಗರಿಕರ ಸಬಲೀಕರಣ ಇಲಾಖೆರವರ ಪುಸ್ತಾವನೆಯಲ್ಲಿ ಪ್ರತಿ ವರ್ಷ ದಿವಂಗತ ಲೂಯಿ ಬೈಲ್ ರವರ ಜನ್ಮ ದಿನದ ಅಂಗವಾಗಿ ಜನವರಿ 04ರಂದು ನಡೆಯುವ ವಿಶ್ವ ಬ್ರೆಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ದೃಷ್ಟಿದೋಷವುಳ್ಳ ವಿಕಲಚೇತನ ಸರ್ಕಾರಿ ನೌಕರರಿಗೆ ವಿಶೇಷ ಸಾಂದರ್ಭಿಕ ರಜೆ ಸೌಲಭ್ಯವನ್ನು ಒದಗಿಸುವಂತೆ ಪ್ರಧಾನ ಕಾರ್ಯದರ್ಶಿಗಳು, ನ್ಯಾಷನಲ್ ಫೆಡರೇಷನ್ ಆಫ್ ದಿ ಬ್ರೌಂಡ್, ಬೆಂಗಳೂರು ಇವರು ಕೋರಿದ್ದು, ಅದರಂತೆ ದಿನಾಂಕ: 04.01.2025 ರಂದು ದಿವಂಗತ ಲೂಯಿ ಬೈಲ್ ಅವರ ಜನ್ಮ ದಿನದ ಅಂಗವಾಗಿ ನಡೆಯುವ ವಿಶ್ವ ಬೈಲ್ ದಿನಾಚರಣೆಯಲ್ಲಿ ಪಾಲ್ಗೊಳ್ಳುವ ಅಂಧ ಸರ್ಕಾರಿ ನೌಕರರಿಗೆ ಒಂದು ದಿನ ವಿಶೇಷ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ನಾಲ್ಕು ಸಾರಿಗೆ ಸಂಸ್ಥೆಗಳಿಗೆ ಭವಿಷ್ಯ ನಿಧಿ ಬಾಕಿ ಹಾಗೂ ಇಂಧನ ಬಾಕಿ ಹೊಣೆಗಾರಿಕೆಯನ್ನು ಪಾವತಿಸಲು ಸರ್ಕಾರದ ಖಾತರಿ, ಗ್ಯಾರಂಟಿಯೊಂದಿಗೆ ಹಣಕಾಸು ಸಂಸ್ಥೆಗಳಿಂದ 2000 ಕೋಟಿ ಸಾಲವನ್ನು ಪಡೆಯಲು ಅನುಮೋದನೆ ನೀಡಿದೆ. ಇಂದು ಸಾರಿಗೆ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ನಾಲ್ಕು ಸಾರಿಗೆ ಸಂಸ್ಥೆಗಳ ಕ್ರೋಢೀಕೃತ ಪತ್ರದಲ್ಲಿ ಹಾಗೂ ಮೇಲೆ ಓದಲಾದ ಕ್ರಮ ಸಂಖ್ಯೆ (2)ರಿಂದ (4)ರ ಪತ್ರಗಳಲ್ಲಿ ವ್ಯವಸ್ಥಾಪಕ ನಿರ್ದೇಶಕರು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ವಾಯುವ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಮತ್ತು ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಇವರು ನಾಲ್ಕು ಸಾರಿಗೆ ನಿಗಮಗಳು ರಾಜ್ಯದ ಜನತೆಗೆ ಉತ್ತಮ ಗುಣಮಟ್ಟದ, ವ್ಯವಸ್ಥಿತ, ಸುರಕ್ಷಿತ ಹಾಗೂ ಮಿತವ್ಯಯದಲ್ಲಿ ಸಾರಿಗೆ ಸೇವೆಯನ್ನು ನೀಡುವಲ್ಲಿ ಸತತ ಪರಿಶ್ರಮವನ್ನು ವಹಿಸುತ್ತಿದ್ದು, ಸಂಸ್ಥೆಗಳ ಕಾರ್ಯಚರಣೆಯ ಸಮರ್ಪಕ ನಿರ್ವಹಣೆ ಹಾಗೂ ಶಕ್ತಿ ಯೋಜನೆಯ ಅನುಷ್ಠಾನದಿಂದಾಗಿ ಸಂಸ್ಥೆಗಳ ಆದಾಯ ಗಳಿಕೆಯಲ್ಲಿ ಹೆಚ್ಚಳ ಉಂಟಾಗಿದ್ದರೂ ಸಹ,…

Read More

ಬೆಂಗಳೂರು: ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ವಿವಿಧ ಯೋಜನೆಗಳಡಿ ಬಡವರಿಗೆ ನಿರ್ಮಿಸುವ ಮನೆಗಳಿಗೆ ಶೇಕಡಾ 18 ರಷ್ಟು ಜಿ ಎಸ್ ಟಿ ತೆರಿಗೆ ವಿಧಿಸುತ್ತಿರುವುದನ್ನು ರದ್ದುಗೊಳಿಸುವಂತೆ ಕೋರಲು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರನ್ನು ಶೀಘ್ರವೇ ಭೇಟಿ ಮಾಡಲಾಗುವುದು ಎಂದು ಕರ್ನಾಟಕ ಸರ್ಕಾರದ ದೆಹಲಿ ವಿಶೇಷ ಪ್ರತಿನಿಧಿ ಟಿ.ಬಿ ಜಯಚಂದ್ರ ಮಂಗಳವಾರ ಹೇಳಿದರು. ವಿವಿಧ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಬಾಕಿ ಇರುವ ಪ್ರಸ್ತಾವನೆಗಳ ಕುರಿತು ವಿಧಾನಸೌಧದಲ್ಲಿ ನಡೆದ ಪರಿಶೀಲನಾ ಸಭೆಯಲ್ಲಿ ವಸತಿ , ವಕ್ಪ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆಯ ಸಚಿವರಾದ ಬಿ.ಝಡ್. ಜಮೀರ್ ಅಹ್ಮದ್ ಖಾನ್ ಅವರು ಮಾಡಿದ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿ ಹೀಗೆ ಹೇಳಿದರು. ಶೇಕಡಾ 18ರಷ್ಟು ಜಿ.ಎಸ್.ಟಿ.ಯಿಂದಾಗಿ ಮನೆ ನಿರ್ಮಾಣಕ್ಕೆ ಫಲಾನುಭವಿಗಳು ತಲಾ ಒಂದೂವರೆ ಲಕ್ಷ ರೂಪಾಯಿ ಪಾವತಿಸಬೇಕಾಗುತ್ತಿದೆ. ಇದು ಆರ್ಥಿಕವಾಗಿ ದುರ್ಬಲರಾಗಿರುವವರಿಗೆ ಹೊರೆಯಾಗಿ ಪರಿಣಾಮಿಸಿದ್ದು, ಅಧಿಕ ಹಣ ಪಾವತಿ ಸಾಧ್ಯವಾಗುತ್ತಿಲ್ಲ ಹೀಗಾಗಿ ಬಡವರ ಮನೆ ನಿರ್ಮಾಣಕ್ಕೆ ವಿಧಿಸುತ್ತಿರುವ ಜಿ.ಎಸ್.ಟಿ. ತೆರಿಗೆ ರದ್ದುಗೊಳಿಸಬೇಕಾದ ತುರ್ತು ಅಗತ್ಯವಿರುವುದನ್ನು ಕೇಂದ್ರ ಸರ್ಕಾರದ…

Read More

ಸುರತ್ಕಲ್: ಕೌಟುಂಬಿಕ ಕಲಹದ ಕಾರಣದಿಂದಾಗಿ ತಂದೆಯೊಬ್ಬ ತನ್ನ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ಕೊಂದಿದ್ದನು. ಈ ಪ್ರಕರಣದಲ್ಲಿ ಪಾಪಿ ತಂದೆಗೆ 10 ವರ್ಷ ಜೈಲು ಶಿಕ್ಷೆಯನ್ನು ವಿಧಿಸಿ ಕೋರ್ಟ್ ಆದೇಶಿಸಿದೆ. ಜೂನ್.22, 2022ರಂದು ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯ ಎನ್ ಕೋಡಿ ಬಳಿಯಲ್ಲಿ ತಂದೆ ವಿಜೇಶ್ ಶೆಟ್ಟಿಗಾರ್ ಹಾಗೂ ಪತ್ನಿ ನಡುವೆ ಜಗಳ ಉಂಟಾಗಿತ್ತು. ಕೌಟುಂಬಿಕ ಕಲಹ ತೀವ್ರಗೊಂಡ ಸಂದರ್ಭದಲ್ಲಿ ತನ್ನ ಮಕ್ಕಳಾದಂತ ರಶ್ಮಿತಾ (14), ಉದಯ್ (11) ಹಾಗೂ ದಕ್ಷಿತ್ (4) ಎಂಬುವರನ್ನು ಬಾವಿಗೆ ತಳ್ಳಿ ಕೊಂದಿದ್ದನು. ಈ ಬಳಿಕ ಆರೋಪಿ ಪತ್ನಿಯನ್ನು ಎಳೆದುಕೊಂಡು ಹೋಗಿ ಆಕೆಯನ್ನು ಬಾವಿಗೆ ತಳ್ಳಿ, ತಾನು ಹಾರಿ ಆತ್ಮಹತ್ಯೆಗೆ ಯತ್ನಿಸಿದ್ದನು. ಆದರೇ ಪತಿ, ಪತ್ನಿಯನ್ನು ಸ್ಥಳೀಯರು ರಕ್ಷಿಸಿದ್ದರು. ಆದರೇ ಮೂವರು ಮಕ್ಕಳನ್ನು ಅದಾಗಲೇ ಸಾವನ್ನಪ್ಪಿದ ಕಾರಣ ಮೃತದೇಹವನ್ನು ಬಾವಿಯಿಂದ ಹೊರ ತೆಗೆಯಲಾಗಿತ್ತು. ಈ ಘಟನೆ ಕುರಿತಂತೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. 3ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ಆರೋಪಿಯ ಕುರಿತಂತೆ…

Read More