Subscribe to Updates
Get the latest creative news from FooBar about art, design and business.
Author: kannadanewsnow09
ಹಾಸನ: ಜಿಲ್ಲೆಯಲ್ಲಿ ಹೃದಯಾಘಾತದ ಪ್ರಕರಣಗಳು ಮುಂದುವರೆದಿವೆ. ಜಿಲ್ಲೆಯಲ್ಲಿಂದು ಹೃದಯಾಘಾತದಿಂದ ಕುಳಿತಲ್ಲೇ 63 ವರ್ಷದ ವೃದ್ಧರೊಬ್ಬರು ಪ್ರಾಣಬಿಟ್ಟಿದ್ದಾರೆ. ಹಾಸನದಲ್ಲಿ ಹೃದಯಾಘಾತಕ್ಕೆ ಬಲಿಯಾಗುತ್ತಿರುವವರ ಸಂಖ್ಯೆ ಮುಂದುವರೆದಿದೆ. ಹಾಸನದ ಹಗರೆ ಗ್ರಾಮದಲ್ಲಿ ಕುಳಿತಲ್ಲೇ ವೃದ್ಧರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಹಾಸನ ಜಿಲ್ಲೆಯ ಬೇಲೂರು ತಾಲ್ಲೂಕಿನ ಹಗರೆ ಗ್ರಾಮದ ನಿರ್ವಾಣಿಗೌಡ(63) ಎಂಬ ವೃದ್ಧರೊಬ್ಬರು ಕುಳಿತಲ್ಲೇ ಹೃದಯಾಘಾತದಿಂದ ಮೃತಪಟ್ಟಿದ್ದಾರೆ. ಹೃದಯಾಘಾತದಿಂದ ಅಡವಿಬಂಟೇನಹಳ್ಳಿಯ ನಿರ್ವಾಣಿಗೌಡ ಸಾವನ್ನಪ್ಪಿದ್ದಾರೆ. ಅಂದಹಾಗೇ ದಿನಸಿ ತರೋದಕ್ಕೆ ಹಾಸನ ಜಿಲ್ಲೆಯ ಹಗರೆ ಗ್ರಾಮಕ್ಕೆ ವೃದ್ಧ ನಿರ್ವಾಹಣಿಗೌಡ ತೆರಳಿದ್ದರು. ಈ ವೇಳೆ ನ್ಯಾಯಬೆಲೆ ಅಂಗಡಿ ಬಳಿ ಕುಳಿತಿದ್ದಾಗ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. https://kannadanewsnow.com/kannada/why-is-there-no-action-against-cm-siddaramaiah-opposition-leader-r-ashoks-question/ https://kannadanewsnow.com/kannada/negligence-during-internal-reservation-survey-in-bengaluru-four-officials-suspended-on-a-single-day-today/
ಬೆಂಗಳೂರು: ರಾಜ್ಯ ಸರ್ಕಾರವು ಪರಿಶಿಷ್ಟ ಜಾತಿಯ ಒಳಮೀಸಲಾತಿ ಸಮೀಕ್ಷೆಗೆ ಆದೇಶಿಸಿತ್ತು. ಈ ಸಮೀಕ್ಷೆ ನಡೆಸಬೇಕಿದ್ದಂತ ಅಧಿಕಾರಿ, ಸಿಬ್ಬಂದಿಗಳು ಮಾತ್ರ ಅದನ್ನು ಮಾಡದೇ ಕೇವಲ ಸಮೀಕ್ಷೆ ನಡೆಸಿದ್ದಾಗಿ ಸ್ಟಿಕ್ಕರ್ ಅಂಟಿಸಿ ಬಂದಿದ್ದರು. ಈ ಹಿನ್ನಲೆಯಲ್ಲಿ ಇಂದು ಒಂದೇ ದಿನ ನಾಲ್ವರನ್ನು ಅಮಾನತುಗೊಳಿಸಿ ಬಿಬಿಎಂಪಿ ಆದೇಶಿಸಿದೆ. ಬಿಬಿಎಂಪಿಯ ಪಶ್ಚಿಮ ವಲಯದ ಮತ್ತಿಕೆರೆ ಉಪ ವಿಭಾಗದ, ಕೆಂಗೇರಿ ಉಪ ವಿಭಾಗದ ಇಬ್ಬರು ಸಸ್ಪೆಂಡ್ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಇಬ್ಬರನ್ನು ಅಮಾನತ್ತುಗೊಳಿಸಲಾಗಿದೆ. ಪಶ್ಚಿಮ ವಲಯದ ಮತ್ತಿಕೆರೆ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ಯಮಾಪಕರಾದ ರಾಮಾಂಜನೇಯಲು, ಆರ್. ಆರ್ ನಗರ ವಲಯ ಕೆಂಗೇರಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ಯಮಾಪಕರಾದ ಪ್ರವೀಣ್ ಕುಮಾರ್ ಸಿ.ಎನ್ ರವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಬಿಬಿಎಂಪಿ ಪಶ್ಚಿಮ ವಲಯದ ಗೋವಿಂದರಾಜನಗರ ಉಪ ವಿಭಾಗದಲ್ಲಿ ಒಬ್ಬರು ಸಸ್ಪೆಂಡ್ ಪರಿಶಿಷ್ಟ ಜಾತಿಗಳ ಸಮಗ್ರ…
ಬೆಂಗಳೂರು: ಸಿಎಂ ಸಿದ್ದರಾಮಯ್ಯ ಹಲವಾರು ಬಾರಿ ಅಧಿಕಾರಿಗಳ ವಿರುದ್ಧ ಅವಹೇಳನಕಾರಿಯಾಗಿ ಮಾತಾಡಿದ್ದಾರೆ. ಅವರ ವಿರುದ್ಧ ಏಕೆ ಕ್ರಮ ಕೈಗೊಂಡಿಲ್ಲ? ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಪ್ರಶ್ನಿಸಿದರು. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ವಿಧಾನಪರಿಷತ್ ಸದಸ್ಯರಾದ ಎನ್.ರವಿಕುಮಾರ್ ಅವಹೇಳನಕಾರಿ ಹೇಳಿಕೆ ನೀಡಿದ್ದಾರೆಂದು ಕಾಂಗ್ರೆಸ್ ನಾಯಕರು ಆರೋಪಿಸಿದ್ದಾರೆ. ಐಎಎಸ್ ಅಧಿಕಾರಿಯಾದ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಅಧಿಕಾರಿ ವಿರುದ್ಧ ಸಿಎಂ ಸಿದ್ದರಾಮಯ್ಯ ಅವಹೇಳನಕಾರಿಯಾಗಿ ಮಾತನಾಡಿದ್ದರು. ಆದರೂ ಕ್ರಮ ಕೈಗೊಳ್ಳಲಿಲ್ಲ. ರಾಜ್ಯದಲ್ಲಿ ಎಲ್ಲೂ ಅಭಿವೃದ್ಧಿ ಕಾರ್ಯ ನಡೆಯದೆ, ಶಾಸಕರು ದಂಗೆ ಏಳುತ್ತಿದ್ದಾರೆ. ವಾಲ್ಮೀಕಿ ಅಭಿವೃದ್ಧಿ ನಿಗಮದ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಲು ಹೈಕೋರ್ಟ್ ಸೂಚಿಸಿದೆ. ಈ ಸಮಸ್ಯೆಗಳನ್ನು ಮರೆಮಾಚಲು ರವಿಕುಮಾರ್ ಹೇಳಿಕೆಯನ್ನು ವಿವಾದ ಮಾಡಲಾಗಿದೆ ಎಂದರು. ಬಿಜೆಪಿಯವರು ಮಾಡಿದರೆ ಎಫ್ಐಆರ್ ದಾಖಲಿಸುತ್ತಾರೆ. ಕಾಂಗ್ರೆಸ್ನವರು ಮಾಡಿದರೆ ಯಾವುದೇ ದೂರು ದಾಖಲಾಗುವುದಿಲ್ಲ. ಸಿಎಂ ಸಿದ್ದರಾಮಯ್ಯ ಎಲ್ಲರನ್ನೂ ಏಕವಚನದಲ್ಲೇ ಕರೆಯುತ್ತಾರೆ. ರಾಷ್ಟ್ರಪತಿಗಳಿಗೆ ಗೌರವ ಕೊಡದೆ ಏಕವಚನದಲ್ಲೇ ಮಾತಾಡುತ್ತಾರೆ. ಅಂದರೆ ಕಾಂಗ್ರೆಸ್ಗೆ ಬೇರೆಯೇ ರೀತಿಯ ಕಾನೂನು ಇದೆ ಎಂದಾಯಿತು. ರವಿಕುಮಾರ್ ಯಾವ ರೀತಿಯ ಅಶ್ಲೀಲ ಹೇಳಿಕೆ…
ಬೆಳಗಾವಿ: ಜಿಲ್ಲೆಯಲ್ಲಿ ಜಾತ್ರೆಯೊಂದರಲ್ಲಿ ಪಾಲ್ಗೊಂಡಿದ್ದಂತ ರಮೇಶ್ ಜಾರಕಿಹೊಳಿ ಪುತ್ರ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದನು. ಈ ಘಟನೆ ಸಂಬಂಧ ಇದೀಗ ರಮೇಶ್ ಜಾರಕಿಹೊಳಿ ಪುತ್ರನ ವಿರುದ್ಧ ಪೊಲೀಸರು ಎಫ್ಐಆರ್ ದಾಖಲಿಸಿದ್ದಾರೆ. ಬೆಳಗಾವಿ ಜಿಲ್ಲೆಯ ಗೋಕಾಕ್ ತಾಲ್ಲೂಕಿನ ಜಾತ್ರೆಯೊಂದರಲ್ಲಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ಅವರು ಗಾಳಿಯಲ್ಲಿ ಗುಂಡು ಹಾರಿಸಿ ಪುಂಡಾಟ ಮೆರೆದಿದ್ದರು. ಈ ಘಟನೆಯ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಘಟನೆ ಸಂಬಂಧ ಗೋಕಾಕ್ ನ ಶಹರ ಪೊಲೀಸ್ ಠಾಣೆಯಲ್ಲಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿರುದ್ಧ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಎಸ್ ಪಿ ಭೀಮಾಶಂಕರ್ ಗುಳೇದ್ ಮಾಹಿತಿ ನೀಡಿದ್ದಾರೆ. https://kannadanewsnow.com/kannada/a-person-died-of-a-heart-attack-after-collapsing-while-washing-his-face-in-mysore/ https://kannadanewsnow.com/kannada/sticker-placed-without-conducting-a-survey-in-bangalore-two-more-officials-suspended-by-bbmp/
ಮೈಸೂರು: ಮುಖ ತೊಳೆಯುತ್ತಿದ್ದಂತ ಸಂದರ್ಭದಲ್ಲಿಯೇ ವ್ಯಕ್ತಿಯೊಬ್ಬ ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವಂತ ಘಟನೆ ಮೈಸೂರಲ್ಲಿ ನಡೆದಿದೆ. ಮೈಸೂರು ಜಿಲ್ಲೆಯ ಟಿ ನರಸೀಪುರ ತಾಲ್ಲೂಕಿನ ಕೂಡ್ಲೂರು ಗ್ರಾಮದಲ್ಲಿ ಮುಖ ತೊಳೆಯುತ್ತಿದ್ದಾಗಲೇ ಪುರುಷೋತ್ತಮ್ (35) ಎಂಬಾತ ಕುಸಿದು ಬಿದ್ದಿದ್ದಾನೆ. ಎದೆ ನೋವು ಕಾಣಿಸಿಕೊಂಡಿದ್ದಂತ ಆತನನ್ನು ಆಸ್ಪತ್ರೆಗೆ ಕರೆದೊಯ್ಯುವ ವೇಳೆಗೆ ಸಾವನ್ನಪ್ಪಿದ್ದಾನೆ. ಪುರುಷೋತ್ತಮ್ ಪರೀಕ್ಷಿಸಿದಂತ ವೈದ್ಯರು ಹೃದಯಾಘಾತದಿಂದ ಸಾವನ್ನಪ್ಪಿರುವುದಾಗಿ ತಿಳಿಸಿದ್ದಾರೆ. ಈ ಮೂಲಕ ರಾಜ್ಯದಲ್ಲಿ ದಿನೇ ದಿನೇ ಹೃದಯಾಘಾತ ಪ್ರಕರಣಗಳ ಸಂಖ್ಯೆ ಹೆಚ್ಚಾದಂತೆ ಆಗಿದೆ. ರಾಜ್ಯದಲ್ಲಿ ಹೃದಯಾಘಾತದಿಂದ ಸಾವು ಪ್ರಕರಣ: ಆರೋಗ್ಯ ಇಲಾಖೆಗೆ ವರದಿ ಸಲ್ಲಿಸಿದ ಟೆಕ್ನಿಕಲ್ ಕಮಿಟಿ ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ದಿನೇ ದಿನೇ ಸಾವು ಪ್ರಕರಣಗಳ ಹೆಚ್ಚಳದ ಬಗ್ಗೆ ಆರೋಗ್ಯ ಇಲಾಖೆಗೆ ಟೆಕ್ನಿಕಲ್ ಕಮಿಟಿಯಿಂದ ವರದಿಯನ್ನು ಸಲ್ಲಿಸಲಾಗಿದೆ. ರಾಜ್ಯದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಟೆಕ್ನಿಕಲ್ ಕಮಿಟಿಯ ವರದಿಯ ಅಂಶಗಳನ್ನು ಚರ್ಚಿಸಲಾಗಿದೆ. ಹೃದಯಾಘಾತ ಅಧ್ಯಯನ ಕುರಿತ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಅಲ್ಲದೇ ಸರ್ಕಾರಕ್ಕೆ ನೀಡಬೇಕಾದ ಸಲಹೆ ಬಗ್ಗೆಯೂ…
ಬೆಂಗಳೂರು: ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆ-2025ರ ಸಂಬಂಧ ಮನೆ ಮನೆಗೆ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪ ಎಸಗಿರುವ ಇಬ್ಬರನ್ನು ಅಮಾನತ್ತುಗೊಳಿಸಲಾಗಿದೆ. ಪಶ್ಚಿಮ ವಲಯದ ಮತ್ತಿಕೆರೆ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ಯಮಾಪಕರಾದ ರಾಮಾಂಜನೇಯಲು, ಆರ್. ಆರ್ ನಗರ ವಲಯ ಕೆಂಗೇರಿ ಉಪ ವಿಭಾಗದಲ್ಲಿ ಕಾರ್ಯನಿರ್ವಹಿಸುತ್ತಿರುವ ಮೌಲ್ಯಮಾಪಕರಾದ ಪ್ರವೀಣ್ ಕುಮಾರ್ ಸಿ.ಎನ್ ರವರನ್ನು ಪರಿಶಿಷ್ಟ ಜಾತಿ ಸಮೀಕ್ಷಾ ಕಾರ್ಯದ ಭಾಗವಾದ ಸ್ಟಿಕ್ಕರ್ ಅಂಟಿಸುವ ಕಾರ್ಯದಲ್ಲಿ ಕರ್ತವ್ಯಲೋಪದ ಮೇರೆಗೆ ಸೇವೆಯಿಂದ ಅಮಾನತ್ತುಗೊಳಿಸಲಾಗಿದೆ. ಆದೇಶದಲ್ಲಿ ಏನಿದೆ.? ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಪಶ್ಚಿಮ ವಲಯದಲ್ಲಿ ನ್ಯಾಯಮೂರ್ತಿ ಡಾ.ಹೆಚ್.ಎನ್.ನಾಗಮೋಹನ್ ದಾಸ್ ಏಕ ಸದಸ್ಯ ಆಯೋಗ ಇವರ ಸೂಚನೆಯಂತೆ ಪರಿಶಿಷ್ಟ ಜಾತಿಗೆ ಸೇರಿದವರ ಪ್ರಾತಿನಿದ್ಯತೆ ಕುರಿತು ಪರಿಶಿಷ್ಟ ಜಾತಿಗಳ ಒಳ ಮೀಸಲಾತಿ ಜಾತಿ ಸಮೀಕ್ಷೆ-2025ರ ಹಿನ್ನೆಲೆಯಲ್ಲಿ ಮನೆ ಮನೆಗೆ ತೆರಳಿ ಮನೆಯ ಗೋಡೆಗೆ ಅಥವಾ ಬಾಗಿಲಿಗೆ ಬಿತ್ತಿ ಪತ್ರವನ್ನು ಅಂಟಿಸಿ, BBMP SC Survey House Visit App ನಲ್ಲಿ ವರದಿ ಮಾಡಲು ಮಾನ್ಯ ವಿಶೇಷ ಆಯುಕ್ತರು (ಕಂದಾಯ) ರವರು ಮಾನ್ಯ…
ಬೆಂಗಳೂರು: ರಾಜ್ಯದಲ್ಲಿ ಹೃದಯಾಘಾತದಿಂದ ದಿನೇ ದಿನೇ ಸಾವು ಪ್ರಕರಣಗಳ ಹೆಚ್ಚಳದ ಬಗ್ಗೆ ಆರೋಗ್ಯ ಇಲಾಖೆಗೆ ಟೆಕ್ನಿಕಲ್ ಕಮಿಟಿಯಿಂದ ವರದಿಯನ್ನು ಸಲ್ಲಿಸಲಾಗಿದೆ. ರಾಜ್ಯದ ಆರೋಗ್ಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ನೇತೃತ್ವದ ಸಭೆಯಲ್ಲಿ ಈ ಟೆಕ್ನಿಕಲ್ ಕಮಿಟಿಯ ವರದಿಯ ಅಂಶಗಳನ್ನು ಚರ್ಚಿಸಲಾಗಿದೆ. ಹೃದಯಾಘಾತ ಅಧ್ಯಯನ ಕುರಿತ ಸಂಪೂರ್ಣ ಮಾಹಿತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ಅಲ್ಲದೇ ಸರ್ಕಾರಕ್ಕೆ ನೀಡಬೇಕಾದ ಸಲಹೆ ಬಗ್ಗೆಯೂ ವರದಿಯಲ್ಲಿ ಉಲ್ಲೇಖಿಸಲಾಗಿದೆ. ಬೆಂಗಳೂರಿನ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ರವೀಂದ್ರ ನಾಥ್ ತಂಡದಿಂದ ತಾಂತ್ರಿಕ ಸಲಹಾ ಸಮಿತಿಯು ವರದಿಯನ್ನು ನೀಡಲಾಗಿದ್ದು, ವರದಿಯಲ್ಲಿ ಪ್ರಮುಖ ಅಂಶಗಳನ್ನು ಉಲ್ಲೇಖಿಸಲಾಗಿದೆ. ರಾಜ್ಯ ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಸಲ್ಲಿಸಿದಂತ ವರದಿಯಲ್ಲಿ ಒಟ್ಟು 251 ಮಂದಿಗೆ ಆರೋಗ್ಯ ತಪಾಸಣೆ ಮಾಡಲಾಗಿದೆ. 251 ರೋಗಿಗಳಲ್ಲಿ 87 ಮಂದಿಗೆ ಶುಗರ್ ಕಾಯಿಲೆ ಇರೋದಾಗಿ ತಿಳಿದು ಬಂದಿದೆ. 102 ರೋಗಿಗಳಿಗೆ ಬಿಪಿ, 35 ಮಂದಿಗೆ ಕೊಲೆಸ್ಟ್ರಾಲ್ ಇದೆ. 40 ಮಂದಿಗೆ ಹೃದಯ ಸಂಬಂಧಿ ಕಾಯಿಲೆ ಇರೋದನ್ನು ಪತ್ತೆ ಹಚ್ಚಿದೆ. 251 ಮಂದಿಯಲ್ಲಿ 111 ಜನರು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನಾಲ್ವರನ್ನು ನಾಮನಿರ್ದೇಶನ ಮಾಡಿ ಆದೇಶಿಸಿದೆ. ಕಾಂಗ್ರೆಸ್ ನಿಷ್ಟಾವಂತ ಕಾರ್ಯಕರ್ತೆ ಮಂಜುಳಾ ನಾಯ್ಡು ಸೇರಿದಂತೆ ನಾಲ್ವರನ್ನು ರಾಜ್ಯ ಸರ್ಕಾರ ಬಿಡಿಎ ನಾಮನಿರ್ದೇಶಿತ ಸದಸ್ಯರನ್ನಾಗಿ ನೇಮಿಸಿದೆ. ಈ ಸಂಬಂಧ ನಗರಾಭಿವೃದ್ಧಿ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಕಾಯ್ದೆ 1976ರ ಕಲಂ 3(3)(ಇ), 3(3)(ಹೆಚ್) ಮತ್ತು 3(3)(ಜಿಜಿ)ರಡಿಯಲ್ಲಿ ಪ್ರದತ್ತವಾದಂತ ಅಧಿಕಾರವನ್ನು ಚಲಾಯಿಸಿ, ಈ ಕೆಳಕಂಡವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೂ ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಸದಸ್ಯರನ್ನಾಗಿ ನಾಮನಿರ್ದೇಶನ ಮಾಡಿರುವುದಾಗಿ ತಿಳಿಸಿದ್ದಾರೆ. ಅಂದಹಾಗೇ ಬೆಂಗಳೂರು ದಕ್ಷಿಣದ ಕನಕಪುರ ತಾಲ್ಲೂಕಿನ ವಾಸ್ತು ಶಿಲ್ಪಿ ವಿ ಆರ್ ಸುಜಯ್, ಸಾಮಾನ್ಯ ಕೆಟಗರಿ ಅಡಿಯಲ್ಲಿ ಬಿಎನ್ ಅಮರನಾಥ್, ಪರಿಶಿಷ್ಟ ಜಾತಿ ಅಡಿಯಲ್ಲಿ ಪಿ ಗಾಂಧಿ ಹಾಗೂ ಮಹಿಳೆ ಕೋಟಾದಡಿ ಸಂಪಿಗೆ ರಾಮನಗರದ ಮಂಜುಳ ನಾಯ್ಡು ಅವರನ್ನು ನೇಮಕ ಮಾಡಲಾಗಿದೆ. https://kannadanewsnow.com/kannada/ramesh-jarakiholis-son-shot-bullets-in-the-air-at-the-festival/ https://kannadanewsnow.com/kannada/the-state-government-is-wasting-time-talking-idly-about-the-mekedatu-project-h-d-kumaraswamy/
ಬೆಳಗಾವಿ: ಜಿಲ್ಲೆಯ ಜಾತ್ರೆಯೊಂದರಲ್ಲಿ ರಮೇಶ್ ಜಾರಕಿಹೊಳಿ ಅವರ ಪುತ್ರ ಗಾಳಿಯಲ್ಲಿ ಗುಂಡು ಹಾರಿಸಿ ವಿಕೃತಿ ಮೆರೆದಿರುವಂತ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಗೋಕಾಕ್ ನ ಜಾತ್ರೆಯಲ್ಲಿ ಗಾಳಿಯಲ್ಲಿ ಗುಂಡು ಹಾರಿಸಲಾಗಿದೆ. ಗಾಳಿಯಲ್ಲಿ ಗುಂಡು ಹಾರಿಸಿ ರಮೇಶ್ ಜಾರಕಿಹೊಳಿ ಪುತ್ರ ಸಂತೋಷ್ ಜಾರಕಿಹೊಳಿ ವಿಕೃತಿ ಮೆರೆದಿದ್ದಾನೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/hdk-criticizes-minister-priyank-kharge-for-criticizing-rss/ https://kannadanewsnow.com/kannada/the-state-government-is-wasting-time-talking-idly-about-the-mekedatu-project-h-d-kumaraswamy/
ಮೈಸೂರು: ರಾಷ್ಟ್ರೀಯ ಸ್ವಯಂ ಸೇವಕ ಸಂಘ (ಆರ್ ಎಸ್ ಎಸ್) ಬಗ್ಗೆ ಸಚಿವ ಪ್ರಿಯಾಂಕ್ ಖರ್ಗೆ ಟೀಕೆ ಕುರಿತು ಕಟುವಾಗಿ ಪ್ರತಿಕ್ರಿಯಿಸಿದ ಕೇಂದ್ರ ಸಚಿವ ಕುಮಾರಸ್ವಾಮಿ ಅವರು; ಸಂಘದ ಬಗ್ಗೆ ಮಾತನಾಡಿ ಬಾಯಿ ಚಪಲ ತೀರಿಸಿಕೊಳ್ಳುವ ಬದಲು 40 ವರ್ಷದಿಂದ ಕಲ್ಯಾಣ ಕರ್ನಾಟಕಕ್ಕೆ ಮಾಡಿದ್ದೇವೆ ಎಂಬುದನ್ನು ಮೊದಲು ಹೇಳಲಿ ಎಂದು ಕೇಂದ್ರ ಸಚಿವ ಹೆಚ್.ಡಿ ಕುಮಾರಸ್ವಾಮಿ ಚಾಟಿ ಬೀಸಿದರು. ಮೈಸೂರಿನಲ್ಲಿ ಶನಿವಾರ ದಿಶಾ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವ ಮುನ್ನ ಮಾಧ್ಯಮಗಳ ಜತೆ ಸಚಿವರು ಮಾತನಾಡಿದರು. ಆರ್ ಎಸ್ ಎಸ್ ಅನ್ನು ಬಂದ್ ಮಾಡುವುದಿರಲಿ, ಈಗ ಕಾಂಗ್ರೆಸ್ ಪಕ್ಷವೇ ಎಲ್ಲಾ ಕಡೆ ಬಂದ್ ಆಗುತ್ತಿದೆ. ಜನರೇ ಬಹುತೇಕ ಕಡೆ ಕಾಂಗ್ರೆಸ್ ಪಕ್ಷವನ್ನು ಬ್ಯಾನ್ ಮಾಡುತ್ತಿದ್ದಾರೆ. ಮೊದಲು ನಿಮ್ಮ ಪಕ್ಷದ ಅಸ್ತಿತ್ವ ಉಳಿಸಿಕೊಳ್ಳಿ. ಪ್ರಿಯಾಂಕ್ ಖರ್ಗೆ ಅವರು ಬಾಯಿ ಚಪಲಕ್ಕೆ ಮೂಲ ವಿಚಾರಗಳನ್ನ ಮರೆ ಮಾಚಲು ಈ ರೀತಿ ಹೇಳಿಕೆ ಕೊಡ್ತಿದ್ದಾರೆ ಅಷ್ಟೇ ಎಂದು ಕೇಂದ್ರ ಸಚಿವರುಕ್ ವಾಗ್ದಾಳಿ ನಡೆಸಿದರು. https://kannadanewsnow.com/kannada/not-just-kunigal-necessary-measures-to-provide-water-to-all-taluks-of-tumkur-dkshi/ https://kannadanewsnow.com/kannada/the-state-government-is-wasting-time-talking-idly-about-the-mekedatu-project-h-d-kumaraswamy/











